ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ಕೆರೆಗಳಿಗೆ ನೀರು ಹರಿದು ಬರಲು ತೂಬುಗಳನ್ನು ಸರಿಪಡಿಸುವಂತೆ ಒತ್ತಾಯಿಸಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಾಂಜಿನಪ್ಪ ಅವರಿಗೆ ಬುಧವಾರ ಮನವಿಯನ್ನು ಸಲ್ಲಿಸಿದರು.
ಹಲವು ವರ್ಷಗಳಿಂದ ಸರಿಯಾಗಿ ಮಳೆ ಬೀಳದೇ ಕೆರೆಯಲ್ಲಿ ನೀರು ನಿಲ್ಲದೇ ತೂಬುಗಳು ಹಾಳಾಗಿವೆ. ಈಚೆಗೆ ಬೀಳುತ್ತಿರುವ ಮಳೆ ನೀರು ಕೆರೆಗೆ ಸೇರದೆ ವ್ಯರ್ಥವಾಗುತ್ತಿದೆ. ಶೀಘ್ರವಾಗಿ ತೂಬುಗಳನ್ನು ಸರಿಪಡಿಸಿದಲ್ಲಿ ಕೆರೆಗೆ ನೀರು ತುಂಬಿ ಅಂತರ್ಜಲ ಹೆಚ್ಚುತ್ತದೆ. ಇದರಿಂದ ಕೊಳವೆ ಬಾವಿ ಕೊರೆಸುವ, ಟ್ಯಾಂಕರ್ ನೀರು ಸರಬರಾಜು ಮಾಡುವ ಹಣ ಉಳಿತಾಯವಾಗುತ್ತದೆ. ಸಂಬಂಧ ಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ತಕ್ಷಣ ತೂಬು ಸರಿಪಡಿಸುವಂತೆ ಒತ್ತಾಯಿಸಿದರು.
ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಮುನಿನಂಜಪ್ಪ, ಟಿ.ಕೃಷ್ಣಪ್ಪ, ತಮ್ಮಣ್ಣ, ಪಾಪಣ್ಣ, ದೇವರಾಜ್, ಸಂತೋಷ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -