16.6 C
Sidlaghatta
Thursday, January 8, 2026
Home Blog

ಆನೂರು ಗ್ರಾ.ಪಂ ಅಧ್ಯಕ್ಷೆಯಾಗಿ ಉಷಾರಾಣಿ ಅವಿರೋಧ ಆಯ್ಕೆ: ಒಂದು ತಿಂಗಳ ‘ಅಧಿಕಾರ’ ಭಾಗ್ಯ!

0
Sidlaghatta Anur Grama Panchayat President Election

Anur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷೆಯಾಗಿ ಉಷಾರಾಣಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷ ಜಪ್ತಿಹೊಸಹಳ್ಳಿ ಪ್ರಕಾಶ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಉಷಾರಾಣಿ ಅವರು ಮಾತ್ರ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಈ ಆಯ್ಕೆ ನಡೆದಿದೆ.

ಹೆಸರಿಗಷ್ಟೇ ಅಧ್ಯಕ್ಷ ಪಟ್ಟ? ಈ ಆಯ್ಕೆಯಲ್ಲಿ ಒಂದು ಕುತೂಹಲಕಾರಿ ಸಂಗತಿಯಿದೆ. ಪ್ರಸ್ತುತ ಗ್ರಾಮ ಪಂಚಾಯಿತಿಯ ಐದು ವರ್ಷಗಳ ಆಡಳಿತ ಅವಧಿಯು ಮುಂದಿನ ಫೆಬ್ರವರಿ ತಿಂಗಳಿಗೆ ಮುಕ್ತಾಯಗೊಳ್ಳಲಿದೆ. ಅಂದರೆ, ನೂತನ ಅಧ್ಯಕ್ಷೆ ಉಷಾರಾಣಿ ಅವರಿಗೆ ಸಿಕ್ಕಿರುವುದು ಕೇವಲ ಒಂದು ತಿಂಗಳ ಅಧಿಕಾರಾವಧಿ ಮಾತ್ರ! ಈ ಅಲ್ಪ ಅವಧಿಯಲ್ಲಿ ಯಾವುದೇ ದೊಡ್ಡ ಮಟ್ಟದ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಿಲ್ಲದಿದ್ದರೂ, ಪಂಚಾಯಿತಿಯ ನಾಮಫಲಕದಲ್ಲಿ “ಅಧ್ಯಕ್ಷರು” ಎಂಬ ಹೆಸರು ಶಾಶ್ವತವಾಗಿ ಉಳಿಯಲಿದೆ ಎಂಬುದು ವಿಶೇಷ.

ಅಧಿಕಾರ ಹಂಚಿಕೆಯ ‘ಆನೂರು ಮಾದರಿ’: ಆನೂರು ಪಂಚಾಯಿತಿಯಲ್ಲಿ ಅಧಿಕಾರ ಹಂಚಿಕೆಯ ವಿಶಿಷ್ಟ ಸಂಪ್ರದಾಯ ಕಂಡುಬಂದಿದೆ. ಐದು ವರ್ಷಗಳ (60 ತಿಂಗಳು) ಅವಧಿಯಲ್ಲಿ:

  • ಮೊದಲ 30 ತಿಂಗಳು: ಕೇವಲ ಒಬ್ಬರೇ ಅಧ್ಯಕ್ಷರಾಗಿ ಅಧಿಕಾರ ನಡೆಸಿದ್ದರು.
  • ನಂತರದ 30 ತಿಂಗಳು: ಆಂತರಿಕ ಒಪ್ಪಂದದಂತೆ ಈಗಾಗಲೇ ಮೂವರು ಅಧ್ಯಕ್ಷ ಗಾದಿ ಅಲಂಕರಿಸಿದ್ದಾರೆ!

ಮೀಸಲಾತಿಗೆ ಅನುಗುಣವಾಗಿ ಎಲ್ಲಾ ಸದಸ್ಯರಿಗೂ ಒಮ್ಮೆಯಾದರೂ ಅಧ್ಯಕ್ಷರಾಗುವ ಅವಕಾಶ ಸಿಗಲಿ ಎಂಬ ಉದ್ದೇಶದಿಂದ ಸದಸ್ಯರು ಮಾಡಿಕೊಂಡ ಆಂತರಿಕ ಒಪ್ಪಂದದ ಫಲವಾಗಿ ಈ ಬದಲಾವಣೆಗಳು ನಡೆದಿವೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-08/01/2026

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 08/01/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 226
Qty: 11906 Kg
Mx : 771
Mn: 599
Avg: 711

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 08
Qty: 358 Kg
Mx : ₹ 902
Mn: ₹ 622
Avg: ₹ 782


For Daily Updates WhatsApp ‘HI’ to 7406303366

ಮೊಬೈಲ್ ಆಪ್ ಮೂಲಕ ಏಳನೇ ಸಣ್ಣ ನೀರಾವರಿ ಗಣತಿ; ಕೆರೆ-ಕುಂಟೆಗಳ ರಕ್ಷಣೆಗೆ ತಹಶೀಲ್ದಾರ್ ಗಗನಸಿಂಧು ಕರೆ

0
Sidlaghatta Tahsildar N. Gaganashindhu launching the 7th MI Census at Chikkadasarahalli pond

Sidlaghatta : ಕೇಂದ್ರ ಸರ್ಕಾರದ ಜಲಸಂಪನ್ಮೂಲ ಇಲಾಖೆಯ ನಿರ್ದೇಶನದಂತೆ ಏಳನೇ ಸಣ್ಣ ನೀರಾವರಿ ಗಣತಿಯನ್ನು ತಾಲ್ಲೂಕಿನಲ್ಲಿ ಮೊಬೈಲ್ ಆಪ್ ಮೂಲಕ ಹಮ್ಮಿಕೊಳ್ಳಲಾಗಿದ್ದು, ಅಧಿಕಾರಿಗಳು ನಿಖರವಾದ ಅಂಕಿ-ಅಂಶಗಳನ್ನು ಸಂಗ್ರಹಿಸಬೇಕು,” ಎಂದು ತಹಶೀಲ್ದಾರ್ ಎನ್.ಗಗನಸಿಂಧು ತಿಳಿಸಿದರು.

ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಕುಂಟೆಯ ಬಳಿ ಏಳನೇ ಸಣ್ಣ ನೀರಾವರಿ ಗಣತಿ ಕಾರ್ಯಕ್ಕೆ ಅಧಿಕೃತವಾಗಿ ಚಾಲನೆ ನೀಡಿ ಅವರು ಮಾತನಾಡಿದರು. ಈ ಗಣತಿಯು ಜಲಮೂಲಗಳ ಸಂರಕ್ಷಣೆ ಮತ್ತು ಭವಿಷ್ಯದ ನೀರಾವರಿ ಯೋಜನೆಗಳ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದೆ.

ಗಣತಿಯ ಉದ್ದೇಶ ಮತ್ತು ಪ್ರಯೋಜನಗಳು: ತಹಶೀಲ್ದಾರ್ ಅವರು ಗಣತಿಯ ಮಹತ್ವದ ಬಗ್ಗೆ ವಿವರಿಸುತ್ತಾ, “ನೀರಿನಾಸರೆಗಳ ಸಮಗ್ರ ಅಂಕಿ-ಅಂಶ ಸಂಗ್ರಹಣೆಯಿಂದ ನೀರಿನ ಸದ್ಬಳಕೆ, ಅಂತರ್ಜಲ ಪ್ರಮಾಣದ ಅಂದಾಜು ಮತ್ತು ಹೊಸ ನೀತಿ ನಿರೂಪಣೆ ಮಾಡಲು ಸಾಧ್ಯವಾಗುತ್ತದೆ. ಮುಖ್ಯವಾಗಿ ಒತ್ತುವರಿಯಾಗಿರುವ ಕೆರೆ-ಕುಂಟೆಗಳನ್ನು ಗುರುತಿಸಿ, ಅವುಗಳನ್ನು ತೆರವುಗೊಳಿಸಲು ಈ ಗಣತಿ ಸಹಕಾರಿಯಾಗಲಿದೆ, ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ,” ಎಂದರು.

Sidlaghatta Tahsildar N. Gaganashindhu launching the 7th MI Census at Chikkadasarahalli pond

ಡಿಜಿಟಲ್ ಗಣತಿ: ಈ ಬಾರಿ ಗಣತಿ ಕಾರ್ಯವು ಸಂಪೂರ್ಣ ಡಿಜಿಟಲ್ ಆಗಿದ್ದು, ಕಂದಾಯ ಇಲಾಖೆಯ ಗ್ರಾಮ ಲೆಕ್ಕಾಧಿಕಾರಿಗಳು ಮತ್ತು ಕಂದಾಯ ನಿರೀಕ್ಷಕರು ಸ್ಥಳದಲ್ಲೇ ಮೊಬೈಲ್ ಆಪ್ ಮೂಲಕ ಮಾಹಿತಿ ಅಪ್‌ಲೋಡ್ ಮಾಡಲಿದ್ದಾರೆ. ಇದಕ್ಕಾಗಿ ಸಿಬ್ಬಂದಿಗೆ ಈಗಾಗಲೇ ಸೂಕ್ತ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ರಾಜಸ್ವ ನಿರೀಕ್ಷಕರಾದ ಶಶಿಕುಮಾರ್, ವೇಣುಗೋಪಾಲ್, ಗ್ರಾಮ ಲೆಕ್ಕಿಗರಾದ ರೇವಣ್ಣಸಿದ್ದಪ್ಪ, ನಗದಾರ್, ತ್ರಿಮೂರ್ತಿ, ದೇವರಾಜ್ ಸೇರಿದಂತೆ ಹಲವು ಕಂದಾಯ ಅಧಿಕಾರಿಗಳು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

CHIMUL ಚುನಾವಣೆ: ಶಿಡ್ಲಘಟ್ಟ ಕ್ಷೇತ್ರಕ್ಕೆ ಇಬ್ಬರು ನಿರ್ದೇಶಕರು, ಆಕಾಂಕ್ಷಿಗಳಲ್ಲಿ ಹೆಚ್ಚಿದ ಸಂಚಲನ

0
CHIMUL Director Election

Sidlaghatta : ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಒಕ್ಕೂಟದಿಂದ ಬೇರ್ಪಟ್ಟು ‘ಚಿಮುಲ್’ ಅಸ್ತಿತ್ವಕ್ಕೆ ಬಂದ ನಂತರ ನಡೆಯುತ್ತಿರುವ ಮೊದಲ ಮಹತ್ವದ ಚುನಾವಣೆಗೆ ಕೌಂಟ್ ಡೌನ್ ಆರಂಭವಾಗಿದೆ. ಫೆಬ್ರವರಿ 1ರಂದು ನಡೆಯಲಿರುವ ಈ ಚುನಾವಣೆಯಲ್ಲಿ ಶಿಡ್ಲಘಟ್ಟ ಕ್ಷೇತ್ರಕ್ಕೆ ಇಬ್ಬರು ನಿರ್ದೇಶಕರನ್ನು ಆಯ್ಕೆ ಮಾಡುವ ಐತಿಹಾಸಿಕ ಅವಕಾಶ ಲಭಿಸಿದೆ.

ಕ್ಷೇತ್ರ ಪುನರ್ ವಿಂಗಡಣೆ: ಆಕಾಂಕ್ಷಿಗಳಿಗೆ ಆಘಾತ ಈ ಹಿಂದೆ ಶಿಡ್ಲಘಟ್ಟ ಒಂದೇ ಕ್ಷೇತ್ರವಾಗಿದ್ದು, ಮಹಿಳಾ ಡೇರಿಗಳನ್ನು ಹೊರತುಪಡಿಸಿ ಉಳಿದೆಲ್ಲಾ ಸಂಘಗಳು ಇದರ ವ್ಯಾಪ್ತಿಯಲ್ಲಿದ್ದವು. ಆದರೆ ಈಗ ಕ್ಷೇತ್ರ ಪುನರ್ ವಿಂಗಡಣೆಯಿಂದಾಗಿ ಲೆಕ್ಕಾಚಾರ ಉಲ್ಟಾ ಆಗಿದೆ:

  • ಗುಡಿಬಂಡೆ ಸೇರ್ಪಡೆ: ದಿಬ್ಬೂರಹಳ್ಳಿ, ಸಾದಲಿ ಹಾಗೂ ಎಸ್.ದೇವಗಾನಹಳ್ಳಿ ವ್ಯಾಪ್ತಿಯ 20 ಡೇರಿಗಳು ಗುಡಿಬಂಡೆ ಕ್ಷೇತ್ರಕ್ಕೆ ಸೇರಿವೆ.
  • ಬಾಗೇಪಲ್ಲಿ ಸೇರ್ಪಡೆ: ತಲಕಾಯಲಬೆಟ್ಟ ಹಾಗೂ ಈ.ತಿಮ್ಮಸಂದ್ರ ವ್ಯಾಪ್ತಿಯ 13 ಡೇರಿಗಳು ಬಾಗೇಪಲ್ಲಿ ಪಾಲಾಗಿವೆ. ಈ ಬದಲಾವಣೆಯಿಂದಾಗಿ ಹಲವು ಪ್ರಭಾವಿ ಆಕಾಂಕ್ಷಿಗಳ ಸ್ಪರ್ಧೆಯ ಆಸೆಗೆ ತಣ್ಣೀರು ಬಿದ್ದಂತಾಗಿದೆ.
CHIMUL Director Election

ದಳದಲ್ಲಿ ಶಾಸಕರೇ ‘ಬಾಸ್’, ಕಾಂಗ್ರೆಸ್‌ನಲ್ಲಿ ಬಣಗಳ ಕಾದು ನೋಡುವ ತಂತ್ರ ಚುನಾವಣಾ ಕಣದಲ್ಲಿ ಪ್ರಮುಖವಾಗಿ ಎರಡು ಪಕ್ಷಗಳ ನಡುವೆ ಹಣಾಹಣಿ ಏರ್ಪಡುವ ಲಕ್ಷಣಗಳಿವೆ:

  1. ಜೆಡಿಎಸ್ ವಲಯ: ಇಲ್ಲಿ ಶಾಸಕ ಬಿ.ಎ.ರವಿಕುಮಾರ್ ಅವರ ತೀರ್ಮಾನವೇ ಅಂತಿಮ. ಶಿಡ್ಲಘಟ್ಟದಿಂದ ಹಿರಿಯ ಸಹಕಾರಿ ಬಂಕ್ ಮುನಿಯಪ್ಪ ಹಾಗೂ ರಘುನಾಥರೆಡ್ಡಿ ಹೆಸರು ಚಾಲ್ತಿಯಲ್ಲಿದ್ದರೆ, ಜಂಗಮಕೋಟೆ ಕ್ಷೇತ್ರದಿಂದ ಹುಜಗೂರು ರಾಮಯ್ಯ ಮುಂಚೂಣಿಯಲ್ಲಿದ್ದಾರೆ.
  2. ಕಾಂಗ್ರೆಸ್ ವಲಯ: ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಹಾಗೂ ನಾಯಕರ ಅನುಪಸ್ಥಿತಿ ಆಯ್ಕೆಯನ್ನು ವಿಳಂಬಗೊಳಿಸಿದೆ. ಮಾಜಿ ನಿರ್ದೇಶಕ ಆರ್.ಶ್ರೀನಿವಾಸ್ ಮರು ಆಯ್ಕೆಯ ಹಂಬಲದಲ್ಲಿದ್ದರೆ, ಕೆ.ಗುಡಿಯಪ್ಪ ಅವರ ಹೆಸರೂ ಕೇಳಿಬರುತ್ತಿದೆ. ಆದರೆ, ಮಾಜಿ ಸಚಿವ ವಿ.ಮುನಿಯಪ್ಪ ಅವರ ಪುತ್ರ ಶಶಿಧರ್ ಮುನಿಯಪ್ಪ ವಿದೇಶದಿಂದ ಬಂದ ನಂತರವಷ್ಟೇ ಕೈ ಪಾಳಯದಲ್ಲಿ ಸಭೆಗಳು ಕಳೆಗಟ್ಟಲಿವೆ.

ಸದ್ಯಕ್ಕೆ ಪ್ರಚಾರ ಬಹಿರಂಗವಾಗಿ ಕಾಣದಿದ್ದರೂ, ಡೇರಿಗಳ ಡೆಲಿಗೇಟ್ಸ್‌ಗಳ ಮನೆಗೆ ತೆರಳಿ ಮೌಖಿಕ ಬೆಂಬಲ ಕೋರುವ ಕಾರ್ಯ ತೆರೆಮರೆಯಲ್ಲಿ ಭರ್ಜರಿಯಾಗಿ ಸಾಗಿದೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-07/01/2026

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 07/01/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 265
Qty: 13453 Kg
Mx : 773
Mn: 533
Avg: 704

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 22
Qty: 1265 Kg
Mx : ₹ 889
Mn: ₹ 677
Avg: ₹ 804


For Daily Updates WhatsApp ‘HI’ to 7406303366

ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದಲ್ಲಿ ಈ ಬಾರಿ ತೆಪ್ಪೋತ್ಸವದ ಸಂಭ್ರಮ

0
sidlaghatta byatarayaswamy temple

Chikkadasarahalli, Sidlaghatta : “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರಿಂದ ಚುನಾಯಿತರಾದ ಜನಪ್ರತಿನಿಧಿಗಳ ನಡುವೆ ಅಭಿವೃದ್ಧಿ ವಿಚಾರವಾಗಿ ಆರೋಗ್ಯಕರ ಪೈಪೋಟಿ ನಡೆಯಬೇಕೇ ಹೊರತು, ಜಾತಿ, ಪಕ್ಷ ಅಥವಾ ವೈಯಕ್ತಿಕ ನಿಂದನೆಗಳಿಗಾಗಿ ಅಲ್ಲ,” ಎಂದು ಶಾಸಕ ಬಿ.ಎನ್.ರವಿಕುಮಾರ್ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಚಿಕ್ಕದಾಸರಹಳ್ಳಿ ಗುಡ್ಡದ ಮೇಲಿರುವ ಸಾವಿರ ವರ್ಷಗಳ ಇತಿಹಾಸವಿರುವ ಶ್ರೀ ಬ್ಯಾಟರಾಯಸ್ವಾಮಿ ದೇವಾಲಯದ ಬಳಕೆಗೆಂದು ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಯ ಜೆಡಿಎಸ್ ಬೆಂಬಲಿತ ಸದಸ್ಯರು ತಮ್ಮ ಸ್ವಂತ ಹಣದಿಂದ ಕೊಳವೆಬಾವಿ ಕೊರೆಸಿದ್ದರು. ಈ ಕೊಳವೆಬಾವಿ ಹಾಗೂ ಮೋಟಾರು ಪಂಪ್ ಸೆಟ್ ಅನ್ನು ದೇವಾಲಯದ ಅಭಿವೃದ್ಧಿ ಸಮಿತಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪಂಚಾಯಿತಿ ಸದಸ್ಯರಿಂದ ಹಿಡಿದು ಸಂಸದರವರೆಗೆ ಎಲ್ಲರೂ ಜಾತಿ ಮತ್ತು ಪಕ್ಷದ ಹೆಸರಿನಲ್ಲಿ ಗುಂಪುಗಾರಿಕೆ ಮಾಡುತ್ತಿರುವುದು ಅಭಿವೃದ್ಧಿಗೆ ಮಾರಕವಾಗಿದೆ. ಆರೋಪ-ಪ್ರತ್ಯಾರೋಪಗಳಿಂದ ಸಮಾಜದಲ್ಲಿ ವೈಷಮ್ಯ ಬೆಳೆಯುತ್ತದೆಯೇ ವಿನಃ ಜನಸಾಮಾನ್ಯರ ಹಿತ ಕಾಯಲು ಸಾಧ್ಯವಿಲ್ಲ ಎಂದು ಶಾಸಕರು ಕಳವಳ ವ್ಯಕ್ತಪಡಿಸಿದರು.

sidlaghatta byatarayaswamy temple

ಪ್ರತಿ ವರ್ಷ ಫೆಬ್ರವರಿಯ ಕದಿರಿ ಹುಣ್ಣಿಮೆಯಂದು ನಡೆಯುವ ಬ್ರಹ್ಮ ರಥೋತ್ಸವದ ವೇಳೆ ದೇವಾಲಯದ ಕಲ್ಯಾಣಿಯಲ್ಲಿ ನೀರಿಲ್ಲದೆ ತೆಪ್ಪೋತ್ಸವ ನಡೆಸಲು ಸಾಧ್ಯವಾಗುತ್ತಿರಲಿಲ್ಲ. ಇದನ್ನು ಮನಗಂಡ ಮಳಮಾಚನಹಳ್ಳಿ ಗ್ರಾ.ಪಂ ಸದಸ್ಯರು ಒಗ್ಗೂಡಿ ತಮ್ಮ ಕೈಯಿಂದ ಹಣ ಹಾಕಿ ಕೊಳವೆಬಾವಿ ಕೊರೆಸಿದ್ದಾರೆ. “ಈಗ ನೀರು ಸಿಕ್ಕಿದ್ದು, ಕಲ್ಯಾಣಿ ತುಂಬುತ್ತಿದೆ. ಈ ಬಾರಿ ವೈಭವದ ತೆಪ್ಪೋತ್ಸವ ನಡೆಯಲಿದೆ,” ಎಂದು ಶಾಸಕರು ಹರ್ಷ ವ್ಯಕ್ತಪಡಿಸಿದರು.

ದೇವಾಲಯದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬ್ಯಾಟರಾಯಶೆಟ್ಟಿ ಮಾತನಾಡಿ, ಕಳೆದ 48 ವರ್ಷಗಳಿಂದ ಸಮಿತಿಯಲ್ಲಿದ್ದು ದೇವಾಲಯದ ಸೇವೆ ಮಾಡುತ್ತಿದ್ದೇನೆ. ಕಲ್ಯಾಣಿಗೆ ನೀರು ಹರಿಸಿದ ಸದಸ್ಯರ ಕಾರ್ಯ ಅತ್ಯಂತ ಪುಣ್ಯದ್ದು ಎಂದರು. ಕಾರ್ಯಕ್ರಮದಲ್ಲಿ ಪಿಡಿಒ ಶೈಲಜಾ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಲಕ್ಷ್ಮಿ ಮುನಿರಾಜು ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-06/01/2026

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 06/01/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 248
Qty: 13584 Kg
Mx : 771
Mn: 533
Avg: 702

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 17
Qty: 1256 Kg
Mx : ₹ 906
Mn: ₹ 789
Avg: ₹ 826


For Daily Updates WhatsApp ‘HI’ to 7406303366

Sidlaghatta Silk Cocoon Market-05/01/2026

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 05/01/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 284
Qty: 15845 Kg
Mx : 762
Mn: 510
Avg: 699

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 20
Qty: 1478 Kg
Mx : ₹ 900
Mn: ₹ 655
Avg: ₹ 795


For Daily Updates WhatsApp ‘HI’ to 7406303366

ಸಾದಲಿ-ಚಿಕ್ಕಬಳ್ಳಾಪುರ ರಸ್ತೆ ಅಭಿವೃದ್ಧಿಗೆ ₹7.5 ಕೋಟಿ – ಶಾಸಕ ಬಿ.ಎನ್.ರವಿಕುಮಾರ್

0
MLA B.N. Ravikumar inspecting the road widening work at Sadali Cross

Sadali, Sidlaghatta : “ಗ್ರಾಮೀಣ ಮತ್ತು ನಗರ ಪ್ರದೇಶಗಳ ಆರ್ಥಿಕ ಪ್ರಗತಿಗೆ ಸುಸಜ್ಜಿತ ರಸ್ತೆ ಸಂಪರ್ಕವೇ ಅಡಿಪಾಯ. ಸಾರ್ವಜನಿಕರ ದಶಕಗಳ ಬೇಡಿಕೆಯಂತೆ ಸಾದಲಿ ಭಾಗದ ರಸ್ತೆಯನ್ನು ₹7.5 ಕೋಟಿ ವೆಚ್ಚದಲ್ಲಿ ಮಾದರಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ,” ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ತಾಲ್ಲೂಕಿನ ಸಾದಲಿ ಕ್ರಾಸ್‌ನಿಂದ ಚಿಕ್ಕಬಳ್ಳಾಪುರ ತಾಲ್ಲೂಕಿನ ಗಡಿಯವರೆಗಿನ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಡಾಂಬರೀಕರಣ ಕಾಮಗಾರಿಯನ್ನು ಸ್ಥಳೀಯರೊಂದಿಗೆ ವೀಕ್ಷಿಸಿ ಅವರು ಮಾತನಾಡಿದರು. ಈ ರಸ್ತೆಯು ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ಕೊಂಡಿಯಾಗಿದ್ದು, ವ್ಯಾಪಾರ ಮತ್ತು ದೈನಂದಿನ ವ್ಯವಹಾರಗಳಿಗೆ ಈ ಭಾಗದ ರೈತರು ಹಾಗೂ ಸಾರ್ವಜನಿಕರಿಗೆ ಬಹಳ ಅನುಕೂಲವಾಗಲಿದೆ.

MLA B.N. Ravikumar inspecting the road widening work at Sadali Cross

ತೆರಿಗೆ ಹಣದ ಸದುಪಯೋಗವಾಗಲಿ: “ರಸ್ತೆ ನಿರ್ಮಾಣಕ್ಕೆ ಬಳಕೆಯಾಗುತ್ತಿರುವುದು ಜನರ ತೆರಿಗೆ ಹಣ. ಹೀಗಾಗಿ ಕಾಮಗಾರಿ ನಡೆಯುವಾಗ ಗುಣಮಟ್ಟದ ಬಗ್ಗೆ ಸ್ಥಳೀಯರು ನಿಗಾ ವಹಿಸಬೇಕು. ಕೇವಲ ಅಧಿಕಾರಿಗಳ ಮೇಲೆ ಅವಲಂಬಿತವಾಗದೆ, ಕಾಮಗಾರಿ ಸರಿಯಾಗಿ ನಡೆಯುತ್ತಿದೆಯೇ ಎಂಬುದನ್ನು ಸಾರ್ವಜನಿಕರೇ ಪರಿಶೀಲಿಸಿದಾಗ ಮಾತ್ರ ಸುದೀರ್ಘ ಕಾಲ ಬಾಳಿಕೆ ಬರುವ ಗುಣಮಟ್ಟದ ರಸ್ತೆ ನಿರ್ಮಾಣ ಸಾಧ್ಯ,” ಎಂದು ಶಾಸಕರು ಕರೆ ನೀಡಿದರು.

ಸಾದಲಿ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಗ್ರಾಮಸ್ಥರು ವ್ಯವಹಾರಿಕವಾಗಿ ಚಿಕ್ಕಬಳ್ಳಾಪುರದ ಮೇಲೆ ಹೆಚ್ಚು ಅವಲಂಬಿತರಾಗಿದ್ದಾರೆ. ರಸ್ತೆ ಸರಿಯಿಲ್ಲದ ಕಾರಣ ಅನುಭವಿಸುತ್ತಿದ್ದ ಸಂಕಷ್ಟಕ್ಕೆ ಈಗ ಮುಕ್ತಿ ಸಿಗಲಿದೆ. ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಲಾಗುವುದು ಎಂದು ಶಾಸಕರು ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ತಮ್ಮ ಭಾಗದ ಇತರೆ ಮೂಲಭೂತ ಸೌಕರ್ಯಗಳ ಬಗ್ಗೆ ಶಾಸಕರೊಂದಿಗೆ ಚರ್ಚಿಸಿ, ರಸ್ತೆ ಕಾಮಗಾರಿ ಆರಂಭಿಸಿದ್ದಕ್ಕೆ ಅಭಿನಂದನೆ ಸಲ್ಲಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶ್ರೀ ಲಕ್ಷ್ಮಿ ವಿದ್ಯಾನಿಕೇತನ ಶಾಲಾ ವಾರ್ಷಿಕೋತ್ಸವ

0
sri lakshmi vidyanikethan School Annual Day

Sidlaghatta : “ವಿದ್ಯಾರ್ಥಿ ಜೀವನದ ಪ್ರತಿ ಕ್ಷಣವೂ ಅಮೂಲ್ಯವಾದುದು. ವಿದ್ಯಾರ್ಥಿಗಳು ಕೇವಲ ಪುಸ್ತಕದ ಓದಿಗೆ ಸೀಮಿತವಾಗದೆ, ಹೆತ್ತವರ ಕೆಲಸ ಕಾರ್ಯಗಳಲ್ಲಿ ಸಹಕರಿಸುವ ಮೂಲಕ ಬದುಕಿನ ಪಾಠಗಳನ್ನು ಕಲಿಯಬೇಕು,” ಎಂದು ಕೆಎಂಎಫ್‌ ಮಾಜಿ ನಿರ್ದೇಶಕ ಆರ್.ಶ್ರೀನಿವಾಸ್‌ ತಿಳಿಸಿದರು.

ತಾಲ್ಲೂಕಿನ ಚಿಕ್ಕದಾಸರಹಳ್ಳಿಯಲ್ಲಿರುವ ಶ್ರೀ ಲಕ್ಷ್ಮಿ ವಿದ್ಯಾನಿಕೇತನ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು. ಬದುಕನ್ನು ರೂಪಿಸಿಕೊಳ್ಳಲು ಶಿಕ್ಷಣದ ಜೊತೆಗೆ ಪೂರಕ ಚಟುವಟಿಕೆಗಳು ಹಾಗೂ ಪ್ರಾಯೋಗಿಕ ಜ್ಞಾನ ಅತ್ಯಗತ್ಯ. ಹೆತ್ತವರ ವ್ಯಾಪಾರ ಅಥವಾ ಉದ್ಯೋಗಗಳಲ್ಲಿ ಮಕ್ಕಳು ಭಾಗಿಯಾದಾಗ ಅವರಿಗೆ ಶ್ರಮದ ಬೆಲೆ ತಿಳಿಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

sri lakshmi vidyanikethan School Annual Day

ಸಾಂಸ್ಕೃತಿಕ ವೈಭವ – ‘ಕಾಂತಾರ’ ನೃತ್ಯದ ಮೆರುಗು: ಶಾಲಾ ವಿದ್ಯಾರ್ಥಿಗಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನ ಗೆದ್ದವು. ವಿಶೇಷವಾಗಿ ‘ಕಾಂತಾರ’ ಚಿತ್ರದ ಹಾಡಿಗೆ ವಿದ್ಯಾರ್ಥಿಗಳು ಪ್ರದರ್ಶಿಸಿದ ನೃತ್ಯವು ಕಾರ್ಯಕ್ರಮದ ಹೈಲೈಟ್ ಆಗಿತ್ತು. ಈ ಸಂದರ್ಭದಲ್ಲಿ ಚಿತ್ರ ನಟ ಅವಿನಾಶ್ ಮತ್ತು ನಟಿ ನಿಸರ್ಗ ನಾಗಪ್ಪ ಅವರು ವಿದ್ಯಾರ್ಥಿಗಳ ಜೊತೆಗೂಡಿ ಹೆಜ್ಜೆ ಹಾಕಿದ್ದು ಸಭಿಕರಲ್ಲಿ ಸಂಭ್ರಮ ಮೂಡಿಸಿತು. ನೆಚ್ಚಿನ ನಟ-ನಟಿಯರ ಜೊತೆಗೆ ಸೆಲ್ಫಿ ತೆಗೆದುಕೊಳ್ಳಲು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರು ಮುಗಿಬಿದ್ದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಲಕ್ಷ್ಮಿನಾರಾಯಣರೆಡ್ಡಿ, ಬ್ಯಾಟರಾಯಸ್ವಾಮಿ ದೇವಾಲಯ ಅಭಿವೃದ್ಧಿ ಸಮಿತಿ ಅಧ್ಯಕ್ಷ ಬ್ಯಾಟರಾಯಶೆಟ್ಟಿ, ತಾ.ಪಂ. ಮಾಜಿ ಸದಸ್ಯ ಅರಿಕೆರೆ ಮುನಿರಾಜು ಸೇರಿದಂತೆ ಶಾಲೆಯ ಅಧ್ಯಕ್ಷ ದೇವರಾಜ್, ಮುಖ್ಯಸ್ಥೆ ಭಾಗ್ಯಮ್ಮ ಮತ್ತು ಮುಖ್ಯ ಶಿಕ್ಷಕಿ ವನಜಾಕ್ಷಿ ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

error: Content is protected !!