21.1 C
Sidlaghatta
Saturday, July 27, 2024
Home Blog

ಸ್ತ್ರೀಶಕ್ತಿ ಭವನ, ಅಂಗನವಾಡಿ ಕಟ್ಟಡ ನಿರ್ಮಾಣ, ಶಾಲೆಗಳಿಗೆ ಸಿಸಿ ಕ್ಯಾಮೆರಾ – ಕೆ.ಡಿ.ಪಿ ಸಭೆ ತೀರ್ಮಾನ

0
Sidlaghatta J venkatapura KDP Meeting

J Venkatapura, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜೆ.ವೆಂಕಟಾಪುರ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷ ನಾಗೇಶ್ ಅವರ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.

ಪಂಚಾಯಿತಿ ವ್ಯಾಪ್ತಿಯ ಸುಗಟೂರು, ಜೆ.ವೆಂಕಟಾಪುರ, ಬೈರಸಂದ್ರ, ಬಳುವನಹಳ್ಳಿ, ಮಿತ್ತನಹಳ್ಳಿ ಗ್ರಾಮಗಳಲ್ಲಿ ಕುಡಿಯುವ ನೀರು, ನೈರ್ಮಲ್ಯ ಮತ್ತು ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಲಾಗಿದೆ. ಜಲಜೀವನ್ ಮಿಶನ್ ಯೋಜನೆಯಡಿ ಕೊಳವೆಬಾವಿ ಕೊರೆಯುವ, ಪೈಪ್‌ಲೈನ್ ಕಾರ್ಯ ಪ್ರಗತಿಯಲ್ಲಿದ್ದು ಶೀಘ್ರವೇ ಮನೆಮನೆಗಳಿಗೆ ನೀರು ಒದಗಿಸಲಾಗುವುದು. ತಲಾ ಮನೆಗೆ ಒಂದೇ ಸಂಪರ್ಕ ಪಡೆಯಲು ನಾಗರಿಕರು ಸಹಕರಿಸಬೇಕು. ಹಳೆ ಮಾದರಿ ಕಬ್ಬಿಣದ ಮತ್ತು ಶಿಥಿಲವಾಗಿರುವ ವಿದ್ಯುತ್ ಕಂಬಗಳನ್ನು ಬದಲಾಯಿಸಲು ಕ್ರಮಕೈಗೊಳ್ಳಲಾಗುವುದು ಎಂದು ಪಂಚಾಯಿತಿ ಅಧ್ಯಕ್ಷ ನಾಗೇಶ್ ತಿಳಿಸಿದರು.

ಶಿಕ್ಷಣ ಇಲಾಖೆ: ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ನಾಲ್ಕು ಹಿರಿಯ ಪ್ರಾಥಮಿಕ ಮತ್ತು ಒಂದು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಸಿಸಿ ಕ್ಯಾಮೆರಾ, ಸೋಲಾರ್ ಶಕ್ತಿ ಪ್ಯಾನೆಲ್‌ ಗಳನ್ನು ಅಳವಡಿಸಲಾಗುವುದು. ಸುಗಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಭೌತಿಕ ಮತ್ತು ಕಲಿಕಾಪರಿಸರ ಬಹು ಸುಂದರವಾಗಿದ್ದು ಸ್ಮಾರ್ಟ್ ಕ್ಲಾಸ್, ಇಂಗ್ಲೀಷ್ ಮಾಧ್ಯಮ, ಅಲ್ಲಿನ ಅಂಗನವಾಡಿ ಕೇಂದ್ರದಲ್ಲಿ ಎಲ್‌.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳನ್ನು ಆರಂಭಿಸುವುದಲ್ಲದೇ ಮತ್ತಷ್ಟು ಅಭಿವೃದ್ಧಿಪಡಿಸಲಾಗುವುದು ಎಂದರು.

ಜೆ.ವೆಂಕಟಾಪುರ ಗ್ರಾಮದ ಶಾಲೆಯಲ್ಲಿಯೂ ಇಂಗ್ಲೀಷ್ ಮಾಧ್ಯಮ ಆರಂಭಿಸಿದ್ದು ಜೆ.ವೆಂಕಟಾಪುರ, ಬೈರಸಂದ್ರ ಶಾಲೆಗಳಲ್ಲಿಯೂ ಸ್ಮಾರ್ಟ್ ಕ್ಲಾಸ್‌ಗೆ ಬೇಕಾದ ಸವಲತ್ತುಗಳನ್ನು ಒದಗಿಸಲಾಗುವುದು ಎಂದರು.

ಬೈರಸಂದ್ರ ಸರ್ಕಾರಿ ಶಾಲೆಗೆ ಸಂಪು ನಿರ್ಮಾಣ, ಅಡುಗೆ ಕೋಣೆ, ಶೌಚಾಲಯಗಳ ನಿರ್ಮಾಣ, ಬೈರಸಂದ್ರ ಶಾಲೆಗೆ ನಿವೇಶನ ಒದಗಿಸಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲೆಗಳಿಗೆ ಬಿಸಿಯೂಟಕ್ಕೆ ಒದಗಿಸಲಾಗುತ್ತಿರುವ ಗ್ಯಾಸ್ ಸಾಕಾಗುತ್ತಿಲ್ಲ ಮತ್ತು ಸರಿಯಾದ ವೇಳೆಗೆ ಅಡುಗೆ ಸಿಲಿಂಡರ್‌ ಗಳನ್ನು ಸರಬರಾಜು ಮಾಡಲಾಗುತ್ತಿಲ್ಲವೆಂಬ ದೂರು ಇದ್ದು ಸರಿಪಡಿಸಲು ಕೋರಲಾಗುವುದು. ಮಕ್ಕಳ ಗ್ರಾಮಸಭೆ ನಡೆಸಿ ಮಕ್ಕಳ ಅವಶ್ಯಕತೆಗಳನ್ನು ಆಲಿಸಿ ಬೇಕಾದ ಸೌಲಭ್ಯಗಳನ್ನು ಒದಗಿಸಲು ಬದ್ಧವಾಗಿರುವುದಾಗಿ ತಿಳಿಸಿದರು.

ಅಂಗನವಾಡಿ ಕೇಂದ್ರಗಳಲ್ಲಿ ಬಿಸ್ಕೆಟ್ ವಿತರಣೆ, ರೈತರು ಬೆಳೆದ ತರಕಾರಿ ಮತ್ತಿತರ ವಸ್ತುಗಳನ್ನು ಅಂಗನವಾಡಿ ಕೇಮದ್ರಗಳಲ್ಲಿ ಇಡಲಾಗಿರುವ ಅಕ್ಷಯಪಾತ್ರೆಯಲ್ಲಿ ಹಾಕುವ ಬಗ್ಗೆ ಜಾಗೃತಿ ಮೂಡಿಸಲಾಗುವುದು. ಅಂಬೇಡ್ಕರ್ ಭವನಗಳನ್ನು ಸದ್ಬಳಕೆ ಮಾಡಿಕೊಳ್ಳಲಾಗುವುದು, ಜೆ.ವೆಂಕಟಾಪುರ ಗ್ರಾಮದಲ್ಲಿ ಅಂಗನವಾಡಿ ಕೇಮದ್ರಗಳಿಗೆ ಕಟ್ಟಡ ನಿರ್ಮಾಣ ಕಾರ್ಯವನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು. ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು 74 ಸ್ತ್ರೀಶಕ್ತಿ ಗುಂಪುಗಳಿದ್ದು ಅವರಿಗೆ ಸುಗಟೂರು, ಜೆ.ವೆಂಕಪಟಾಪುರದಲ್ಲಿ ಅಗತ್ಯ ಸ್ತ್ರೀಶಕ್ತಿ ಭವನ ನಿರ್ಮಾಣ, ಮಳಿಗೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲಾಗುವುದು, ವಿವಿಧ ವಸತಿ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಿ, ಗುಡಿಸಲು ಮುಕ್ತವಾಗಿಸಿ, ಅಗತ್ಯವುಳ್ಳವರಿಗೆ ಮನೆ ನಿರ್ಮಾಣ ಮಾಡಲು ಎಲ್ಲಾ ಕ್ರಮಕೈಗೊಳ್ಳಲಾಗುವುದು ಎಂದರು.

ಗ್ರಂಥಾಲಯದಲ್ಲಿ ಸದಸ್ಯತ್ವವನ್ನು ವೃದ್ಧಿಸಿ ಅಗತ್ಯ ಮ್ಯಾಗಜೀನ್, ವೃತ್ತಪತ್ರಿಕೆಗಳನ್ನು ಒದಗಿಸಲಾಗುವುದು. ಶಾಲಾಮಕ್ಕಳಲ್ಲಿ ಓದುವ ಹವ್ಯಾಸವನ್ನು ವೃದ್ಧಿಸಲು ಕನಿಷ್ಟ ವಾರದಲ್ಲೊಮ್ಮೆಯಾದರೂ ಗ್ರಂಥಾಲಯಕ್ಕೆ ಕರೆದುತಂದು ಓದಲು ಅವಕಾಶಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸಿ.ಆರ್‌.ಪಿ ರಮೇಶ್‌ಕುಮಾರ್ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯಲ್ಲಿನ ಶಾಲೆಗಳಲ್ಲಿ ದಾಖಲಾತಿ ಹೆಚ್ಚಿಸಿಕೊಂಡು ಹಾಜರಾತಿ ಕಾಯ್ದುಕೊಳ್ಳುವುದು. ಶೈಕ್ಷಣಿಕ ಗುಣಮಟ್ಟ ಉತ್ತಮಗೊಳಿಸಿ ಕಲಿಕೆಯಲ್ಲಿ ವಿಶೇಷ ನಾವೀನ್ಯಯುತ ಚಟುವಟಿಕೆಗಳನ್ನು ಅಳವಡಿಸಿಕೊಳ್ಳುವುದು, ಪೌಷ್ಟಿಕಾಂಶ ಕೊರತೆ ಕಾಡದಂತೆ ಕಾಯ್ದುಕೊಳ್ಳುವುದು, ಆಗಿಂದಾಗ್ಗೆ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆಸಿ ಹೆಚ್ಚಿನ ಚಿಕಿತ್ಸೆ ಬೇಕಾದವರಿಗೆ ಸಹಾಯಮಾಡುವುದು, ಮೂಲಭೂತಸೌಕರ್ಯಗಳನ್ನು ಸಾಕಷ್ಟು ಒದಗಿಸುವುದು, ಉಚಿತವಾಗಿ ದೊರೆಯುವ ಸಮವಸ್ತ್ರ, ಪಠ್ಯಪುಸ್ತಕ ದಾನಿಗಳಿಂದ ನೋಟ್‌ಪುಸ್ತಕ ಮತ್ತಿತರ ಸವಲತ್ತುಗಳನ್ನು ವಿತರಿಸುವುದು, ವಿದ್ಯಾರ್ಥಿವೇತನಕ್ಕೆ ಪ್ರತಿಶತ ಎಲ್ಲರೂ ಅರ್ಜಿಸಲ್ಲಿಸುವಂತೆ ತಿಳಿಸುವುದು, ಶೌಚಾಲಯಗಳ ಸಮರ್ಪಕ ಬಳಕೆ ಮತ್ತು ಆರೋಗ್ಯ, ನೈರ್ಮಲ್ಯ ಕುರಿತು ಮಕ್ಕಳಲ್ಲಿ ಅರಿವು ಮೂಡಿಸುವುದು, ಎಸ್‌ಡಿಎಂಸಿ ರಚನೆ, ಅಡುಗೆ ಸಿಬ್ಬಂದಿಯವರ ಬೇಡಿಕೆಗಳ ಈಡೇರಿಕೆ, ರಾಷ್ಟ್ರೀಯ ಹಬ್ಬಗಳು ಮತ್ತು ಸಹಪಠ್ಯ ಚಟುವಟಿಕೆಗಳ ಆಚರಣೆ ಮತ್ತಿತರ ವಿಷಯಗಳನ್ನು ಚರ್ಚಿಸಿದರು.

ಆರೋಗ್ಯ ಇಲಾಖೆಯ ಆಶಾ ಮಾತನಾಡಿ, ಡೆಂಗ್ಯು ಜ್ವರ ಬಾಧಿತರ ಸಂಖ್ಯೆ ಹೆಚ್ಚುತ್ತಿದ್ದು ಗ್ರಾಮಗಳಲ್ಲಿ ಡೆಂಗ್ಯು ತಡೆಗೆ ಗ್ರಾಮಪಡೆಗಳನ್ನು ರಚಿಸಿ ಜಾಗೃತಿ ಮೂಡಿಸುವುದು, ನೈರ್ಮಲ್ಯ ಕ್ರಮಕೈಗೊಳ್ಳಲು ತಿಳಿಸಿದರು.

ರೇಷ್ಮೆ ಇಲಾಖೆಯ ನಿರೀಕ್ಷಕ ಮಂಜುನಾಥ್, ತೋಟಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿ ಜಿ.ಕೆ.ರವಿ ಅವರು ರೈತರಿಗೆ ಸಿಗಬಹುದಾದ ಸವಲತ್ತುಗಳ ಬಗ್ಗೆ ಇಲ್ಲಿನವರೆಗಿನ ಟಾರ್ಗೆಟ್ ಕುರಿತು ಅಂಕಿಅಂಶಗಳನ್ನು ಹಂಚಿಕೊಂಡರು. ಗ್ರಾಮೀಣ ಮತ್ತು ಕುಡಿಯುವ ನೀರು ಇಲಾಖೆಯ ಸಹಾಯಕ ಅಭಿಯಂತರ ಶ್ರೇಯಸ್ ಮಾತನಾಡಿದರು.

ಗ್ರಾಮಪಂಚಾಯಿತಿ ಕಾರ್ಯದರ್ಶಿ ವೆಂಕಟರೆಡ್ಡಿ, ಗ್ರಾಮಪಂಚಾಯಿತಿ ಸದಸ್ಯ ಸತೀಶ್‌ಕುಮಾರ್, ಬಳುವನಹಳ್ಳಿ ನಾರಾಯಣಸ್ವಾಮಿ, ತಿರುಪಳಪ್ಪ, ನಯನಾ ಹರೀಶ್, ಸುರೇಶ್, ಶಿವರಾಮಕೃಷ್ಣೇಗೌಡ, ಶಶಿಕಲಾ, ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಎಚ್.ಎಸ್.ರುದ್ರೇಶಮೂರ್ತಿ, ಜೆ.ವೆಂಕಟಾಪುರ ಶಾಲೆಯ ಗೀತಾ, ಬೈರಸಂದ್ರ ಶಾಲೆಯ ನಾರಾಯಣಸ್ವಾಮಿ, ಬಳುವನಹಳ್ಳಿಯ ಶಾಲೆಯ ವೇದಾವತಿ, ಸುಗಟೂರು ದೇವರಾಜು, ಬೆಸ್ಕಾಂ, ಆರೋಗ್ಯ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಶಿಕ್ಷಕಿಯರು, ಸ್ತ್ರೀಶಕ್ತಿಗುಂಪುಗಳ ಮುಖ್ಯಸ್ಥರು, ಜೆಜೆಎಂ ಗುತ್ತಿಗೆದಾರರು, ಹಾಜರಿದ್ದರು.

For Daily Updates WhatsApp ‘HI’ to 7406303366

Sidlaghatta Silk Cocoon Market-26/07/2024

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 26/07/2024

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 532
Qty: 29914 Kg
Mx : ₹ 490
Mn: ₹ 250
Avg: ₹ 411

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 07
Qty: 383 Kg
Mx : ₹ 482
Mn: ₹ 382
Avg: ₹ 444

For Daily Updates WhatsApp ‘HI’ to 7406303366

ಬಯಲು ಸೀಮೆಯ ಭಾಗಕ್ಕೆ ಕೃಷ್ಣಾ ನದಿ ನೀರನ್ನು ಹರಿಸಲು ಮನವಿ

0
Sidlaghatta MLA B N Ravikumar Request for Krishna River water to Bayaluseeme

Sidlaghatta : ಬಯಲು ಸೀಮೆಯ ಭಾಗಕ್ಕೆ ಕೃಷ್ಣಾ ನದಿ ನೀರನ್ನು ಹರಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಕೃಷಿಗಾಗಿ ಈ ಭಾಗಕ್ಕೆ ಕೃಷ್ಣಾ ನದಿ ನೀರನ್ನು ಹರಿಸಬೇಕು ಎಂದು ಶಿಡ್ಲಘಟ್ಟ ಕ್ಷೇತ್ರದ ಶಾಸಕ ಬಿ.ಎನ್.ರವಿಕುಮಾರ್ ಅವರು ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಕೇಂದ್ರದ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ದೆಹಲಿಯ ಅವರ ಕಚೇರಿಯಲ್ಲಿ ಭೇಟಿ ಮಾಡಿ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಬಯಲು ಸೀಮೆ ಪ್ರದೇಶಕ್ಕೆ ಕೃಷ್ಣಾ ನದಿ ನೀರನ್ನು ಹರಿಸಲು ಕ್ರಮವಹಿಸುವಂತೆ ಮನವಿ ಮಾಡಿದರು.

ಈ ಭಾಗದಲ್ಲಿ ಅಂತರ್ಜಲ ಮಟ್ಟ 1500 ಅಡಿಗಳಷ್ಟು ಆಳಕ್ಕೆ ಕುಸಿದಿದೆ. ಅಷ್ಟು ಆಳಕ್ಕೆ ಕೊಳವೆಬಾವಿ ಕೊರೆಸಿದರೂ ಅದರಲ್ಲಿ ನೀರು ಸಿಗುವ ಪ್ರಮಾಣ ಕೇವಲ ಶೇ 30 ರಷ್ಟು ಇದೆ. ಸಿಗುವ ನೀರಿನಲ್ಲೂ ಫ್ಲೊರೈಡ್ ಸೇರಿದಂತೆ ಅನೇಕ ರೀತಿಯ ಹಾನಿಕಾರಕ ಅಂಶಗಳು ಇವೆ.

ಈ ನೀರು ಕೃಷಿಗೂ ಹಾಗೂ ಕುಡಿಯಲು ಹಾನಿಕಾರಕವಾಗಿದೆ. ಪ್ರಯೋಗಾಲಯಗಳಲ್ಲಿ ಈ ಅಂಶ ಈಗಾಗಲೆ ಬಯಲಾಗಿದ್ದು ವಿಧಿಯಿಲ್ಲದೆ ವಿಷಪೂರಿತ ನೀರನ್ನು ಬಳಸುವ ಅನಿವಾರ್ಯತೆ ನಮ್ಮ ಈ ಭಾಗದ ಜನರದ್ದಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇತ್ತೀಚಿನ ವರ್ಷಗಳಲ್ಲಿ ಈ ಐದೂ ಜಿಲ್ಲೆಗಳಲ್ಲಿ ಹೂವು ಹಣ್ಣು ಮುಂತಾದ ತೋಟಗಾರಿಕೆ ಬೆಳೆಗಳು ಹೆಚ್ಚೆಚ್ಚು ಬೆಳೆದು ರಾಷ್ಟ್ರ ಅಂತರಾಷ್ಟ್ರೀಯ ಮಾರುಕಟ್ಟೆಗಳಿಗೆ ರಫ್ತು ಮಾಡಲಾಗುತ್ತಿತ್ತು. ಆದರೆ ಕೆಲ ವರ್ಷಗಳಿಂದಲೂ ಅಂತರ್ಜಲ ಮಟ್ಟ ಕುಸಿದ ಕಾರಣ ನೀರು ಸಾಲದಾಗಿದೆ.

ಇದರಿಂದ ಬೆಳೆಗಳನ್ನು ಬೆಳೆಯಲಾಗುತ್ತಿಲ್ಲ. ಬೆಳೆಗಳನ್ನು ಬೆಳೆದು ಬದುಕನ್ನು ಕಟ್ಟಿಕೊಂಡಿದ್ದ ಲಕ್ಷಾಂತರ ಕುಟುಂಬಗಳು ಇದರಿಂದ ಕಂಗಾಲಾಗಿದ್ದಾರೆ. ತಮ್ಮ ಸಂಪಾದನೆಯ ಸಾಕಷ್ಟು ಪ್ರಮಾಣದ ಹಣವನ್ನು ಕೊಳವೆಬಾವಿ ಕೊರೆಸಲು ವೆಚ್ಚ ಮಾಡುವಂತಾಗಿದ್ದು ಸಾಲಕ್ಕೆ ಸಿಕ್ಕಿ ಹಾಕಿಕೊಂಡಿದ್ದಾರೆ ಎಂದರು.

ಕೋಲಾರ ಕ್ಷೇತ್ರದ ಸಂಸದ ಮಲ್ಲೇಶ್‌ಬಾಬು ಸಹ ಬಯಲು ಸೀಮೆಯ ಭಾಗದಲ್ಲಿ ಕೃಷಿಕರು ಕೃಷಿ ನೀರಿಗಾಗಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸಚಿವ ವಿ.ಸೋಮಣ್ಣ ಅವರಿಗೆ ಮನವರಿಕೆ ಮಾಡಿಕೊಟ್ಟು ಕೃಷ್ಣಾ ನದಿ ನೀರನ್ನು ಹರಿಸಲು ಒತ್ತಾಯಿಸಿದರು.

ಮನವಿಯನ್ನು ಸ್ವೀಕರಿಸಿದ ಕೇಂದ್ರದ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ಅವರು, ನಾನು ಸಹ ಆ ಭಾಗದಿಂದಲೆ ಬಂದವನು. ಅಲ್ಲಿ ಕೃಷಿ ಕ್ಷೇತ್ರ ಮತ್ತು ಕೃಷಿಕರು ಎದುರಿಸುತ್ತಿರುವ ಸಮಸ್ಯೆಗಳ ಸಂಪೂರ್ಣ ಅರಿವು ನನಗಿದೆ ಎಂದರು.

ಸಮಸ್ಯೆ ಬಗ್ಗೆ ಕೇಂದ್ರದ ಸಚಿವರು ಸೇರಿದಂತೆ ಸಂಬಂಧಿಸಿದ ಎಲ್ಲರ ಜತೆ ಮಾತುಕತೆ ನಡೆಸಿ ಕೃಷ್ಣಾ ನದಿ ನೀರನ್ನು ಹರಿಸುವಂತ ಪ್ರಾಮಾಣಿಕ ಪ್ರಯತ್ನ ಮಾಡುವ ಭರವಸೆ ನೀಡಿದರು.

ಕೋಲಾರ ಕ್ಷೇತ್ರದ ಸಂಸದ ಮಲ್ಲೇಶ್‌ಬಾಬು, ಶಿಡ್ಲಘಟ್ಟ ಶಾಸಕ ಮೇಲೂರು ರವಿಕುಮಾರ್, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಅಪ್ಪೇಗೌಡನಹಳ್ಳಿ ಕೆ.ಲಕ್ಷ್ಮಿನಾರಾಯಣರೆಡ್ಡಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಕ್ ಮುನಿಯಪ್ಪ, ತಾದೂರು ರಘು ಹಾಜರಿದ್ದರು.

For Daily Updates WhatsApp ‘HI’ to 7406303366

ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನ ಖಂಡಿಸಿ ರೈತರ ಬೆಂಗಳೂರು ಚಲೋ

0
Sidlaghatta Farmers Industrial Land Protest

Sidlaghatta : ಜಂಗಮಕೋಟೆ ಹೋಬಳಿಯ ಕೆಲವು ಹಳ್ಳಿಗಳನ್ನು ಕೈಗಾರಿಕಾ ಪ್ರದೇಶಕ್ಕೆ ಭೂಸ್ವಾಧೀನವನ್ನು ಕೈಗೊಂಡಿರುವ ಸರ್ಕಾರದ ನಿಲುವನ್ನು ಖಂಡಿಸಿ ರೈತ ಸಂಘದ ಸದಸ್ಯರು ತಾಲ್ಲೂಕಿನ ರೈತರೊಂದಿಗೆ ಬೆಂಗಳೂರಿನ ಫ್ರೀಡಂ ಪಾರ್ಕಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ಗುರುವಾರ ಹೊರಟರು.

ಈ ಸಂದರ್ಭದಲ್ಲಿ ಮಾತನಾಡಿದ ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಜಂಗಮಕೋಟೆ ಹೋಬಳಿ ಕೇಂದ್ರದ ಸುತ್ತಲಿನ 13 ಗ್ರಾಮಗಳ ವ್ಯಾಪ್ತಿಗೆ ಬರುವ ಸರ್ಕಾರಿ ಗೋಮಾಳ, ಕೃಷಿ ಭೂಮಿ ಸೇರಿದಂತೆ ಒಟ್ಟು 1823 ಎಕರೆಯಷ್ಟು ಜಮೀನನ್ನು ಕೈಗಾರಿಕೆಗಳ ಸ್ಥಾಪನೆಗಾಗಿ ಸ್ವಾನಪಡಿಸಿಕೊಳ್ಳಲು ಕೆ.ಐ.ಎ.ಡಿ.ಬಿ ಅಧಿಸೂಚನೆ ಹೊರಡಿಸಿದೆ.

ನೋಟಿಫಿಕೇಶನ್ ಮಾಡಿರುವ ಬಹುಪಾಲು ಭೂಮಿಯು ಫಲವತ್ತಾದ ಕೃಷಿ ಭೂಮಿಯಾಗಿದ್ದು, ಇದರಲ್ಲಿ ಪ್ರಮುಖ ವಾಣಿಜ್ಯ ಬೆಳೆಗಳಾದ ರೇಷ್ಮೆ, ದ್ರಾಕ್ಷಿ ಮಾವು, ಸೇರಿದಂತೆ ಸುಮಾರು ತೋಟಗಾರಿಕಾ ಬೆಳೆಗಳೂ ದಿನನಿತ್ಯದ ಆಹಾರ ಧಾನ್ಯಗಳಾದ ರಾಗಿ, ಅವರೆ, ಅಲಸಂದೆ, ತೊಗರಿ ಮುಂತಾದ ಬೆಳೆಗಳನ್ನು ಬೆಳೆಯುತ್ತಿದ್ದು ಇದು ಇಲ್ಲಿನ ಹಳ್ಳಿಗರ ಜೀವನೋಪಾಯವಾಗಿದೆ.

ಹಳ್ಳಿಗಳು ಬೆಳೆದಂತೆ ಗ್ರಾಮಠಾಣಾ ವ್ಯಾಪ್ತಿಯಲ್ಲಿ ಜಾಗವಿಲ್ಲದೆ, ಊರುಗಳ ಹತ್ತಿರದಲ್ಲೇ ಇರುವ ಕೃಷಿಭೂಮಿಯಲ್ಲಿ ಕಟ್ಟಿಕೊಂಡಿರುವ ವಾಸದ ಮನೆಗಳು, ಕೃಷಿ ಪೂರಕ ಆದಾಯದ ಮೂಲಕ್ಕಾಗಿ ಕಟ್ಟಿಕೊಂಡ, ರೇಷ್ಮೆ ಹುಳು ಸಾಕಾಣೆ ಮನೆಗಳು, ಕೋಳಿಫಾರಂ ಮುಂತಾದವು ಇವೆ. ಜೊತೆಗೆ, ಹಸುಗಳು, ಎಮ್ಮೆ ಮತ್ತು ಕುರಿ ಮೇಕೆ ಮುಂತಾದವುಗಳನ್ನು ಒಳಗೊಂಡ ಪಶುಪಾಲನೆ ಕೂಡ ಇಲ್ಲಿನ ಅದಾಯದ ಮೂಲವಾಗಿದೆ. ಈ ಪಶುಪಾಲನೆಯ ಮೇವಿನ ಮೂಲ ಇದೇ ಕೃಷಿ ಜಮೀನುಗಳಾಗಿವೆ. ಇವುಗಳನ್ನೆಲ್ಲ ಒಳಗೊಂಡ 13 ಗ್ರಾಮಗಳ ಕೃಷಿ ಭೂಮಿ ಸ್ವಾಧೀನ ಪ್ರಕ್ರಿಯೆಯಲ್ಲಿ ಸೇರಿದೆ. ಇದೇ ಕೃಷಿ ಭೂಮಿಗಳನ್ನು ನಂಬಿಕೊಂಡ 13 ಹಳ್ಳಿಗಳಲ್ಲಿ ಸರಿಸುಮಾರು 1300 ಕುಟುಂಬಗಳು ವಾಸಿಸುತ್ತಿದ್ದು ಅದರಲ್ಲಿಯ 5000 ಕ್ಕೂ ಹೆಚ್ಚು ಜನರ ಮೂಲ ಕಸುಬು ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗಳಾಗಿವೆ. ಇದೇ ಇಲ್ಲಿನ ಜನರ ಆಹಾರ ಮತ್ತು ಆದಾಯದ ಮೂಲ ಕೂಡ ಆಗಿವೆ.

ಜೊತೆಗೆ, ಕೃಷಿ ಮಾತ್ರ ಗೊತ್ತಿರುವ ನಮಲ್ಲಿನ ನೂರಾರು ರೈತ ಕುಟುಂಬಗಳು ಅವರ ಪೂರ್ತಿ ಭೂಮಿ ಕಳೆದುಕೊಂಡು ಬೀದಿಗೆ ಬೀಳುತ್ತವೆ. ಇದೇ ಊರುಗಳ ಕೂಲಿ ಕಾರ್ಮಿಕರು, ಪಶುಪಾಲನೆ ನಂಬಿ ಬದುಕುತ್ತಿರುವರು, ಹಳ್ಳಿಗಳಲ್ಲಿ ಕೃಷಿ ಪೂರಕ ಇತರೆ ಕೆಲಸ ಮಾಡುತ್ತಿರುವರಿಗೂ ಇದರಿಂದ ನೇರ ಪರಿಣಾಮಕ್ಕೆ ಒಳಗಾಗುತ್ತಾರೆ.

ಈ ಎಲ್ಲಾ ಕಾರಣಗಳಿಂದ, ರೈತರ ಉಳಿವಿಗಾಗಿ ಹೋರಾಟ ಮಾಡಿಯಾದರೂ ಇರುವ ಭೂಮಿ ಮತ್ತು ಬದುಕುವ ಅವಕಾಶವನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡುವುದು ಸ್ಥಳೀಯರಿಗೆ ಅನಿವಾರ್ಯವಾಗಿದೆ ಎಂದು ಹೇಳಿದರು.

ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಮುನಿನಂಜಪ್ಪ, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಗುಡಿಹಳ್ಳಿ ಕೆಂಪಣ್ಣ, ನಾರಾಯಣದಾಸರಹಳ್ಳಿ ಕೃಷ್ಣಪ್ಪ, ಮಳಮಾಚನಹಳ್ಳಿ ರಮೇಶ್, ಸುಂಡ್ರಹಳ್ಳಿ ಬೀರಪ್ಪ, ನಗರ ಘಟಕದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಪಿ.ವಿ.ದೇವರಾಜ್, ಎ.ಜಿ.ನಾರಾಯಣಸ್ವಾಮಿ ಹಾಜರಿದ್ದರು.

For Daily Updates WhatsApp ‘HI’ to 7406303366

Sidlaghatta Silk Cocoon Market-25/07/2024

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 25/07/2024

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 580
Qty: 32013 Kg
Mx : ₹ 485
Mn: ₹ 300
Avg: ₹ 416

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 08
Qty: 355 Kg
Mx : ₹ 493
Mn: ₹ 399
Avg: ₹ 471

For Daily Updates WhatsApp ‘HI’ to 7406303366

Sidlaghatta Silk Cocoon Market-24/07/2024

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 24/07/2024

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 435
Qty: 24185 Kg
Mx : ₹ 500
Mn: ₹ 270
Avg: ₹ 416

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 07
Qty: 385 Kg
Mx : ₹ 471
Mn: ₹ 370
Avg: ₹ 434

For Daily Updates WhatsApp ‘HI’ to 7406303366

Sidlaghatta Silk Cocoon Market-23/07/2024

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 23/07/2024

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 598
Qty: 33275 Kg
Mx : ₹ 480
Mn: ₹ 260
Avg: ₹ 398

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 32
Qty: 1723 Kg
Mx : ₹ 495
Mn: ₹ 193
Avg: ₹ 396

For Daily Updates WhatsApp ‘HI’ to 7406303366

ರೈತ ಹುತಾತ್ಮ ದಿನಾಚರಣೆ

0
Sidlaghatta Cheemangala Government School Event

Cheemangala, Sidlaghatta : ಕರ್ನಾಟಕ ರಾಜ್ಯ ರೈತ ಸಂಘದ ಹಾಗೂ ಹಸಿರು ಸೇನೆ ವತಿಯಿಂದ 44ನೇ ವರ್ಷದ ರೈತ ಹುತಾತ್ಮ ದಿನಾಚರಣೆಯನ್ನು ತಾಲ್ಲೂಕಿನ ಚೀಮಂಗಲ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿತ್ತು.

ಸಾಮೂಹಿಕ ನಾಯಕತ್ವದ ರೈತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ಮಾತನಾಡಿ, ಶಾಲೆಯ ವಿದ್ಯಾರ್ಥಿಗಳಿಗೆ 44 ನೆಯ ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸುತ್ತಿರುವುದರ ಕಾರಣ ವಿವರಿಸಿ, ಈ ವೇಳೆ ರೈತ ಮುಖಂಡರು ಮಹದಾಯಿ ಜಾರಿಗೆ ಒತ್ತಾಯಿಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ ದಿನ ಎಂದು ಹೇಳಿ, ಆದರೆ ಇಂದಿಗೂ ನಮ್ಮ ಈ ಭಾಗದ ರೈತರ ಭೂಮಿಗಳಿಗೆ ಇನ್ನೂ ನೀರು ಬಂದಿಲ್ಲ. ಮಹದಾಯಿ ಹೆಸರಿನ ಮೇಲೆ ಜನಪ್ರತಿನಿಧಿಗಳು ರಾಜಕೀಯ ಮಾಡುತ್ತಿರುವುದು ದುರಂತವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಬಿ. ಎನ್. ಸ್ವಾಮಿ, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಹಾಗೂ ಸರ್ಕಲ್ ಇನ್ಸ್ ಪೆಕ್ಟರ್ ಎಂ. ಶ್ರೀನಿವಾಸ್ ರವರು ಶಾಲಾ ಮಕ್ಕಳಿಗೆ ಪೋಕ್ಸೋ ಕಾಯ್ದೆ, ಸಂಚಾರಿ ನಿಯಮಗಳು, ದುಶ್ಚಟಗಳ ಬಗ್ಗೆ ಅರಿವು ಮೂಡಿಸಿದರು.

ಹೆಚ್ಚಿನ ಅಂಕ ಪಡೆದ ಶಾಲಾ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಪುರಸ್ಕರಿಸಲಾಯಿತು.

ಸಾಮೂಹಿಕ ನಾಯಕತ್ವದ ರೈತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ತಾಲ್ಲೂಕು ಅಧ್ಯಕ್ಷ ಎ. ಎನ್. ಮುನೇಗೌಡ, ಕಾರ್ಯದರ್ಶಿ ನವೀನಾಚಾರಿ, ಚಿಂತಾಮಣಿ ತಾಲ್ಲೂಕು ಅಧ್ಯಕ್ಷ ಕದಿರೇಗೌಡ, ಕಾರ್ಯದರ್ಶಿ ಆಂಜಿನಪ್ಪ, ಬೈರಗಾನಹಳ್ಳಿ ಬಿ.ವಿ.ಮಂಜುನಾಥ್, ಬಳುವನಹಳ್ಳಿ ಪ್ರಕಾಶ್, ಯಣ್ಣೂರು ದೇವಪ್ಪ, ಸುಂಡ್ರಹಳ್ಳಿ ಪಾಪಣ್ಣ, ಅರಕೆರೆ ಮುನಿರಾಜ್ ಹಾಜರಿದ್ದರು.

For Daily Updates WhatsApp ‘HI’ to 7406303366

ದಲಿತ ಸಂಘರ್ಷ ಸಮಿತಿಯಿಂದ ಬೃಹತ್ ಪ್ರತಿಭಟನೆ

0
Sidlaghatta DSS Protest

Sidlaghatta : ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಶಾಖೆ ವತಿಯಿಂದ ದಲಿತರ ಮೂಲಭೂತ ಹಕ್ಕುಗಳ ಈಡೇರಿಕೆಗಾಗಿ ಒತ್ತಾಯಿಸಿ ಸೋಮವಾರ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಶಿಡ್ಲಘಟ್ಟ ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನವನ್ನು ಹತ್ತು ಕೋಟಿ ರೂ ವೆಚ್ಚದಲ್ಲಿ ಶೀಘ್ರವಾಗಿ ನಿರ್ಮಿಸಬೇಕು. ಬಗರ್ ಹುಕುಮ್ ಸಮಿತಿಯನ್ನು ರಚಿಸಿ ತಾಲ್ಲೂಕಿನಾದ್ಯಂತ ನಮೂನೆ – 50, 53, 57 ರಲ್ಲಿ ಬಾಕಿ ಇರುವ ಅರ್ಜಿಗಳನ್ನು ಕೂಡಲೇ ವಿಲೇವಾರಿ ಮಾಡಬೇಕು. ತಾಲ್ಲೂಕಿನಾದ್ಯಂತ ರೈತರಿಗೆ ಅರಣ್ಯ ಇಲಾಖೆಯಿಂದ ನಡೆಯುತ್ತಿರುವ ಕಿರುಕುಳವನ್ನು ತಡೆಗಟ್ಟಿ ರೈತರನ್ನು ವಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು. ನಿವೇಶನ ರಹಿತ ಫಲಾನುಭವಿಗಳನ್ನು ಗುರುತಿಸಿ ಸರ್ಕಾರಿ ಜಮೀನಿನಲ್ಲಿ ನಿವೇಶನಗಳನ್ನು ನಿರ್ಮಿಸಿ ಹಂಚಿಕೆ ಮಾಡಿ ಹಕ್ಕು ಪತ್ರ ನೀಡಬೇಕು. ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಇರುವ ಅವ್ಯವಸ್ಥೆಗಳನ್ನು ಸರಿಪಡಿಸಬೇಕು.

ಸಾದಲಿ ಮುಖ್ಯರಸ್ತೆಯ ಒತ್ತುವರಿಯನ್ನು ತೆರವುಗೊಳಿಸಿ ರಸ್ತೆ ಅಗಲೀಕರಣ ಮಾಡಬೇಕು. ತಾಲ್ಲೂಕಿನಾದ್ಯಂತ ದಲಿತರಿಗೆ ಸ್ಮಶಾನಗಳನ್ನು ಮಂಜೂರು ಮಾಡಬೇಕು ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ, ಅರಣ್ಯ ಇಲಾಖೆಗಳಲ್ಲಿ ದಲಿತರಿಗೆ ಸಿಗಬೇಕಾದ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಈ ಬಗ್ಗೆ ಕ್ರಮ ಜರುಗಿಸಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಪ್ರತಿಭಟಿಸಿ, ತಹಶಿಲ್ದಾರ್ ಬಿ.ಎನ್.ಸ್ವಾಮಿ ಅವರಿಗೆ ಮನವಿಯನ್ನು ಸಲ್ಲಿಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಎನ್.ವೆಂಕಟೇಶ್, ಕೆ.ಸಿ.ರಾಜಾಕಾಂತ್, ಜಿಲ್ಲಾ ಸಂಚಾಲಕ ಸಿ.ಜಿ.ಗಂಗಪ್ಪ, ಸಂಘಟನಾ ಸಂಚಾಲಕರಾದ ಬಿ.ವಿ.ವೆಂಕಟರಮಣ, ಎನ್.ಎ.ವೆಂಕಟೇಶ್, ಆನಂದ್, ನರಸಿಂಹಮೂರ್ತಿ, ಎಂ.ದೇವರಾಜ್, ತಾಲ್ಲೂಕು ಸಂಚಾಲಕ ಟಿ.ಎ.ಚಲಪತಿ, ಸಂಘಟನಾ ಸಂಚಾಲಕರಾದ ಹುಜಗೂರು ವೆಂಕಟೇಶ್, ಗಂಗಾಧರ್, ಲಕ್ಕೇನಹಳ್ಳಿ ವೆಂಕಟೇಶ್, ದೊಡ್ಡತಿರುಮಳಯ್ಯ, ಸಿ.ಎಂ.ಮುನಿಕೃಷ್ಣಪ್ಪ, ಪರಮೇಶ್, ಶಶಿಕಲಾ, ರಾಜು, ವೆಂಕಟೇಶ್, ಮುನಿಕದಿರಪ್ಪ ಹಾಜರಿದ್ದರು.

For Daily Updates WhatsApp ‘HI’ to 7406303366

Sidlaghatta Silk Cocoon Market-22/07/2024

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 22/07/2024

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 491
Qty: 26808 Kg
Mx : ₹ 500
Mn: ₹ 212
Avg: ₹ 406

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 14
Qty: 655 Kg
Mx : ₹ 512
Mn: ₹ 266
Avg: ₹ 427

For Daily Updates WhatsApp ‘HI’ to 7406303366

error: Content is protected !!