Home Blog

ವಾಸವಿ ರಸ್ತೆಗೆ ಶಾಸಕ ಭೇಟಿ; ಕಾಮಗಾರಿ ತ್ವರಿತಗೊಳಿಸಲು ಸೂಚನೆ

0
Sidlaghatta MLA Vasavi Road Development Inspection

Sidlaghatta : ನಗರದ ವಾಸವಿ ರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಬಿ.ಎನ್.ರವಿಕುಮಾರ್ ಸೋಮವಾರ ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ದೂರದೃಷ್ಟಿಯ ಯೋಜನೆಯಡಿ ವಾಸವಿ ರಸ್ತೆಯ ಅಭಿವೃದ್ಧಿ ಏಳು ಹಂತಗಳಲ್ಲಿ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಒಳಚರಂಡಿ ಕಾಮಗಾರಿ, ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಅಮೃತ್ 2 ಯೋಜನೆಯ ಪೈಪ್‌ಲೈನ್ ಕಾಮಗಾರಿ, ಮಳೆನೀರು ಸರಾಗವಾಗಿ ಹರಿಯಲು ಹ್ಯೂಮ್ ಪೈಪ್ ಹಾಗೂ ಚೇಂಬರ್‌ಗಳ ನಿರ್ಮಾಣ, ನಗರಸಭೆಯ ನೀರು ಸರಬರಾಜು ಪೈಪ್‌ಲೈನ್ ಕಾಮಗಾರಿ, ವಿದ್ಯುತ್ ಕಂಬಗಳ ಸ್ಥಳಾಂತರ, ರಸ್ತೆಗೆ ಹೊಂದಿಕೊಂಡ ಏಳು ಕಿರುರಸ್ತೆಗಳ ಆರಂಭದಲ್ಲಿ ಡ್ರೈನ್ ನಿರ್ಮಾಣ ಹಾಗೂ ಎಲ್ಲ ಕಾಮಗಾರಿ ಮುಗಿದ ಬಳಿಕ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ಈ ಹಂತಗಳಲ್ಲಿ ಸೇರಿವೆ.

“ಬಹುತೇಕ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೂ, ಸಾರ್ವಜನಿಕರಿಗೆ ತೊಂದರೆಯಾಗದಿರಲೆಂದು ಕಾಮಗಾರಿಯನ್ನು ತ್ವರಿತವಾಗಿ ಮಾಡಿಸಲಾಗುತ್ತಿದೆ. ಈಗಾಗಲೇ 60ರಷ್ಟು ಕಾಮಗಾರಿ ಮುಗಿದಿದೆ. ಇನ್ನು ಎರಡು ವಾರಗಳಲ್ಲಿ ರಸ್ತೆ ಕೆಲಸ ಆರಂಭವಾಗಲಿದ್ದು, ಇದು ಇನ್ನು 50 ವರ್ಷ ಶಾಶ್ವತವಾಗಿ ಉಳಿಯುವ ಕಾಮಗಾರಿ. ಸಾರ್ವಜನಿಕರು ಸಹಕರಿಸಬೇಕು” ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ನಗರಸಭೆ ಪೌರಾಯುಕ್ತೆ ಅಮೃತ, ಸ್ಥಳೀಯರಾದ ಬಿ.ಆರ್.ಅನಂತಕೃಷ್ಣ, ಎಸ್.ಎಸ್.ನಾಗರಾಜ್, ರಾಜೇಶ್, ರಮೇಶ್, ನಂದಕಿಶನ್, ವೈಶಾಕ್, ಜೆ.ವಿ.ಸುರೇಶ್, ಲಕ್ಷ್ಮೀನಾರಾಯಣ್, ಆರ್.ಎ.ಉಮೇಶ್, ಬೆಸ್ಕಾಂ ಎಂಜಿನಿಯರುಗಳು ಹಾಜರಿದ್ದರು.

In English: Sidlaghatta MLA B.N. Ravikumar inspected ongoing Vasavi Road development works, directing officials to speed up completion. The seven-phase project covers underground drainage, Amrit 2.0 drinking water pipelines, storm-water drains, power line relocation, and a final cement-concrete road. About 60% of work is complete, with the road-laying phase to begin in two weeks; the MLA said the road is built to last 50 years and appealed for public cooperation.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-13/07/2026

0
Sidlaghatta Silk Cocoon Market Rate 13 July 2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 13/07/2026

VarietyLotsQty (Kg)MaxMinAvg
Cross-Breed – ಮಿಶ್ರತಳಿ ರೇಷ್ಮೆ ಗೂಡು46125331742400664
Bi-Voltine – ದ್ವಿತಳಿ ರೇಷ್ಮೆ ಗೂಡು251382₹842₹555₹719

Summary: Sidlaghatta Government Cocoon Market rates for 13/07/2026 — Cross-Breed cocoon averaged ₹664/kg across 461 lots (25,331 kg total, price range ₹400–₹742); Bi-Voltine cocoon averaged ₹719/kg across 25 lots (1,382 kg total, price range ₹555–₹842).

ಹಿಂದಿನ ದಿನದ ದರಕ್ಕಾಗಿ 12/07/2026ರ ಮಾರುಕಟ್ಟೆ ದರ ವೀಕ್ಷಿಸಿ. ಎಲ್ಲಾ ದಿನಗಳ ದರಕ್ಕಾಗಿ ರೇಷ್ಮೆ ಗೂಡು ಮಾರುಕಟ್ಟೆ ವಿಭಾಗ ನೋಡಿ.


For Daily Updates WhatsApp ‘HI’ to 7406303366

ಗಣತಿ ಅರ್ಜಿಗಳ ಡಿಜಿಟಲೀಕರಣ ಚುರುಕುಗೊಳಿಸಲು ಅಪರ ಜಿಲ್ಲಾಧಿಕಾರಿ ಭಾಸ್ಕರ್ ಸೂಚನೆ

0
Sidlaghatta SIR Enumeration Form Digitization

Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ (ಎಸ್.ಐ.ಆರ್) ಅಂಗವಾಗಿ ಬಿ.ಎಲ್‌.ಒಗಳು ಮನೆಮನೆಗೆ ತೆರಳಿ ಗಣತಿ ಅರ್ಜಿಗಳನ್ನು ಹಂಚಿಕೆ ಮಾಡುವ ಕಾರ್ಯವನ್ನು ಯಶಸ್ವಿಯಾಗಿ ನಡೆಸಿದ್ದು, ಈಗ ಮತದಾರರಿಂದ ಭರ್ತಿಯಾದ ಅರ್ಜಿಗಳನ್ನು ಸ್ವೀಕರಿಸಿ ಡಿಜಿಟಲೀಕರಣಗೊಳಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಭಾಸ್ಕರ್ ತಿಳಿಸಿದರು.

ನಗರದ ಊಲ್ಲೂರು ಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಎಸ್.ಐ.ಆರ್ ಡಿಜಿಟಲೀಕರಣ ಕಾರ್ಯವನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ಕಡಿಮೆ ಡಿಜಿಟಲೀಕರಣ ಕೇಂದ್ರಗಳಿಗೆ ಭೇಟಿ :

ಕ್ಷೇತ್ರದಲ್ಲಿ ಗಣತಿ ಅರ್ಜಿ ಹಂಚಿಕೆ ಕಾರ್ಯ ಯಶಸ್ವಿಯಾಗಿ ನಡೆದಿದ್ದು, ಜಿಲ್ಲಾ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಅರ್ಜಿಗಳ ಡಿಜಿಟಲೀಕರಣ ಕಾರ್ಯ ಶೇ 10ರಿಂದ 15ರಷ್ಟು ಮಾತ್ರ ಆಗಿರುವ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲು ಶಿಡ್ಲಘಟ್ಟ ನಗರಕ್ಕೆ ಆಗಮಿಸಿದ್ದಾಗಿ ಅಪರ ಜಿಲ್ಲಾಧಿಕಾರಿ ಹೇಳಿದರು.

ನಗರದ ಮತಗಟ್ಟೆಗಳಲ್ಲಿ ಡಿಜಿಟಲೀಕರಣ ಕಾರ್ಯ ಶೇ 10ರಿಂದ 15ರಷ್ಟು ಮಾತ್ರ ಪೂರ್ಣಗೊಂಡಿದ್ದು, ಇದನ್ನು ನಾಳೆಯೊಳಗೆ ಶೇ 50ಕ್ಕಿಂತ ಹೆಚ್ಚಿನ ಪ್ರಮಾಣಕ್ಕೆ ಹೆಚ್ಚಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ಕಾರ್ಯದಲ್ಲಿ ಜಿಲ್ಲಾ ನೋಂದಣಾಧಿಕಾರಿ, ತಹಶೀಲ್ದಾರ್ ಹಾಗೂ ನಗರಸಭೆ ಪೌರಾಯುಕ್ತರು ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಭಾಸ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನೋಂದಣಾಧಿಕಾರಿ ಎಸ್.ಎಸ್.ಅಬೀದ್, ತಹಶೀಲ್ದಾರ್ ಗಗನ ಸಿಂಧು, ನಗರಸಭೆ ಪೌರಾಯುಕ್ತೆ ಅಮೃತ ಹಾಜರಿದ್ದರು.

In English: Additional Deputy Commissioner Bhaskar directed officials in Sidlaghatta to speed up digitization of filled voter enumeration forms collected during the SIR (Special Intensive Revision) exercise. He visited an Anganwadi center where digitization was only 10-15% complete and ordered it raised above 50% by the next day.

SIR ಗಣತಿ ಕಾರ್ಯದ ಇತ್ತೀಚಿನ ಪ್ರಗತಿ ಕುರಿತು ಇಲ್ಲಿ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

“ಚಿಗುರು” ಸಾಂಸ್ಕೃತಿಕ ಕಾರ್ಯಕ್ರಮ: ಸಂಸ್ಕೃತಿ ಉಳಿಸಿ ಬೆಳೆಸಲು ಕರೆ

0
Sidlaghatta Chiguru Cultural Program

Sidlaghatta : ಶಿಡ್ಲಘಟ್ಟ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರ ಹೊರ ಹೊರವಲಯದ ಶ್ರೀ ಬಾಲಾಜಿ ಕನ್ವೆನ್ಷನ್ ಹಾಲ್‌ನಲ್ಲಿ “ಚಿಗುರು”’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, “ಮೊನ್ನೆಗಳನ್ನು ಮರೆತವರು, ನಿನ್ನೆಗಳನ್ನು ನೆನೆಯದವರು, ಇಂದಿನ ಜೊತೆ ಇಲ್ಲದವರು ನಾಳೆಗಳನ್ನು ನೋಡಲಾರರು” ಎಂದು ಹೇಳುವ ಮೂಲಕ ಸಮಾಜದಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕಾದ ಅಗತ್ಯವನ್ನು ಒತ್ತಿ ಹೇಳಿದರು.

ಪ್ರತಿಯೊಬ್ಬರೂ ಸಮಾಜಕ್ಕೆ ತಾವೇನು ಕೊಡಬೇಕು ಎಂಬುದನ್ನು ಆಲೋಚಿಸಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದ ಅವರು, ಚಿತ್ರರಂಗದ ನಟ-ನಟಿಯರು ಆದರ್ಶವಾಗಬಾರದು; ಬದಲಿಗೆ ನಮ್ಮ ತಾತ, ಮುತ್ತಾತ, ತಂದೆ-ತಾಯಿ ಹಾಗೂ ನೆಲ, ಜಲ, ಪ್ರಕೃತಿಯೇ ಆದರ್ಶವಾಗಬೇಕು ಎಂದು ಪ್ರತಿಪಾದಿಸಿದರು. ಬಸವಣ್ಣ, ವೇಮನ, ಕನಕದಾಸ, ಅಂಬೇಡ್ಕರ್ ಹಾಗೂ ಕುವೆಂಪು ಅವರಂತಹ ಮಹನೀಯರ ಹಾದಿಯನ್ನು ಎಲ್ಲರೂ ಅನುಸರಿಸಬೇಕು ಎಂದು ಸಲಹೆ ನೀಡಿದರು.

ಸಾಂಸ್ಕೃತಿಕ ವೈವಿಧ್ಯದ ರಸದೌತಣ :

ಕಾರ್ಯಕ್ರಮದಲ್ಲಿ ಸಪ್ತಸ್ವರ ಸಂಗೀತ ಶಾಲೆಯ ಧಾತ್ರಿರಾಮ್ ಮತ್ತು ತಂಡದವರಿಂದ ಶಾಸ್ತ್ರೀಯ ಸಂಗೀತ, ಆಶಾಕಿರಣ ಅಂಧ ಮಕ್ಕಳ ವಸತಿಯುತ ಶಾಲೆಯ ವಿದ್ಯಾರ್ಥಿಗಳಿಂದ ಸುಗಮ ಸಂಗೀತ, ವರದನಾಯಕನಹಳ್ಳಿಯ ಜವನಿ ವಿ.ಟಿ ಮತ್ತು ತಂಡದವರಿಂದ ಜನಪದ ಗೀತೆಗಳ ಗಾಯನ ಪ್ರಸ್ತುತಗೊಂಡಿತು.

ನಿರ್ಮಲ್ ತೇಜ್ ಮತ್ತು ತಂಡದವರು ಜಾನಪದ ನೃತ್ಯ ಪ್ರದರ್ಶಿಸಿದರೆ, ಶ್ರೀ ಶಾರದಾ ವಿದ್ಯಾ ಸಂಸ್ಥೆಯ ಮಹಾಲಕ್ಷ್ಮೀ ಮತ್ತು ತಂಡದವರು ಭರತನಾಟ್ಯ ಪ್ರದರ್ಶಿಸಿ ಗಮನ ಸೆಳೆದರು. ವಿಶ್ವತ್ ಮತ್ತು ವಿಶ್ವಜ ಮತ್ತು ತಂಡದವರು ಏಕಪಾತ್ರಾಭಿನಯ ನೀಡಿದರು. ಸಕಲ ರಂಗಹೆಜ್ಜೆ ಟ್ರಸ್ಟ್ ತಂಡದವರು ಚಂದ್ರಶೇಖರ ಕಂಬಾರ ಅವರ ರಚನೆಯ ‘ಕಲ್ಯಾಣದ ಕೂಗು’ ನಾಟಕ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಸದಸ್ಯ ಡಿ.ಆರ್.ರಾಜಪ್ಪ, ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಶ್ರೀ ಶಾರದಾ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಶ್ರೀಕಾಂತ್, ಎಆರ್‌ಎಂ ಪಿಯು ಕಾಲೇಜು ಪ್ರಾಂಶುಪಾಲ ಮೂರ್ತಿ ಸಾಮ್ರಾಟ್, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಮುನಿನಾರಾಯಣಪ್ಪ, ಕಲಾವಿದ ಸೋ.ಸೊ.ನಾಗೇಂದ್ರ, ‘ಈ ನೆಲ ಈ ಜನ’ ಸಂಸ್ಥೆಯ ವೆಂಕಟಾಚಲಪತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ‘ಚಕೋರ’ ಜಿಲ್ಲಾ ಸಂಚಾಲಕ ಈ ಧರೆ ಪ್ರಕಾಶ್ ಹಾಗೂ ಇಲಾಖೆಯ ಸಿಬ್ಬಂದಿ ಅರುಣಮ್ಮ ಭಾಗವಹಿಸಿದ್ದರು.

In English: The Kannada and Culture Department organized the ‘Chiguru’ cultural program in Sidlaghatta on Sunday, featuring classical and folk music, dance, and a drama performance. Karnataka Janapada Academy chief Gollahalli Shivaprasad urged people to preserve local culture rather than emulate film personalities.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶ್ರೀ ವೀರಾಂಜನೇಯಸ್ವಾಮಿ 15ನೇ ವಾರ್ಷಿಕೋತ್ಸವ ಸಂಭ್ರಮ

0
Sidlaghatta Veeranjaneya Swamy 15th Anniversary Celebration

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ವಾರ್ಷಿಕೋತ್ಸವ ಮಹೋತ್ಸವವನ್ನು ಭಾನುವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಗುರು ಹಾಗೂ ಗಣಪತಿ ಸಭಾ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಗಂಗಾ ಪೂಜೆ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹವಾಚನ, ದೇವನಾಂದಿ, ಪಂಚಗವ್ಯ, ಶುತ್ಕೆ ವರ್ಣ, ಕಲಶ ಸ್ಥಾಪನೆ ಹಾಗೂ ಕಲಶಾರಾಧನೆ, ಫಲ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪುಷ್ಪಾಲಂಕಾರ ಸೇವೆಗಳು ಸಾಂಗವಾಗಿ ನೆರವೇರಿದವು.

ಇದರ ಜೊತೆಗೆ ಗಣಪತಿ ಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ಶ್ರೀ ರುದ್ರ ಹೋಮ, ತತ್ವನ್ಯಾಸ-ಕಲಾನ್ಯಾಸ ಹೋಮ ಹಾಗೂ ಪೂರ್ಣಾಹುತಿ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದವು. ಕುಂಭಾಭಿಷೇಕ, ಮಂಗಳ ನೀರಾಜನ, ಅಷ್ಟಾವಧಾನ ಸೇವೆ ಹಾಗೂ ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳೂ ಜರುಗಿದವು. ವಿಶೇಷ ನಾದಸ್ವರ ಸೇವೆ ಇಡೀ ದೇವಾಲಯ ಆವರಣಕ್ಕೆ ಪೂಜಾ ವಾತಾವರಣ ಮೂಡಿಸಿತು.

ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಕುಟುಂಬ ಸಮೇತರಾಗಿ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸ್ವಾಮಿಯ ಸೇವೆ ಸಲ್ಲಿಸಿದರು.

ಶ್ರೀ ವೀರಾಂಜನೇಯ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

In English: The Sri Veeranjaneya Swamy temple in Saddahalli village celebrated its trust’s 15th annual festival on Sunday with a full slate of religious rituals including Ganga puja, homas, and kumbhabhishekam. Devotees from surrounding villages attended with their families to take part in the celebrations.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶ್ರೀರಾಘವೇಂದ್ರ ಸ್ವಾಮಿ ಮಠ ನೂತನ ಕಟ್ಟಡ ಉದ್ಘಾಟನೆ, ಸ್ಮರಣ ಗ್ರಂಥ ಬಿಡುಗಡೆ

0
Sidlaghatta Raghavendra Swamy Mutt New Building Inauguration

Sidlaghatta : ಶಿಡ್ಲಘಟ್ಟ ನಗರದ ಮುತ್ತೂರು ಬೀದಿಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿ ಮಠದ ನೂತನ ಕಟ್ಟಡ ಉದ್ಘಾಟನೆ ಹಾಗೂ “ಶ್ರೀಕ್ಷೇತ್ರ ಕಿರು ಮಂತ್ರಾಲಯ” ಸ್ಮರಣ ಗ್ರಂಥದ ಬಿಡುಗಡೆ ಕಾರ್ಯಕ್ರಮವನ್ನು ಶ್ರೀರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಶಾಸಕ ಬಿ.ಎನ್.ರವಿಕುಮಾರ್ ನೂತನ ಕಟ್ಟಡವನ್ನು ಉದ್ಘಾಟಿಸಿ, ಮಠದ ಸೇವಾ ಕಾರ್ಯಗಳನ್ನು ಶ್ಲಾಘಿಸಿ, ಇಂತಹ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯೊಂದಿಗೆ ಸಾಮಾಜಿಕ ಸೌಹಾರ್ದತೆಯನ್ನೂ ಬೆಳೆಸುವ ಕಾರ್ಯದಲ್ಲಿ ಮಠಗಳ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯಪಟ್ಟರು.

ಮಂಡ್ಯದ ಶ್ರೀ ವರಾಹ ಹರಿ ವಿಠಲದಾಸರು “ಶ್ರೀಕ್ಷೇತ್ರ ಕಿರು ಮಂತ್ರಾಲಯ” ಸ್ಮರಣ ಗ್ರಂಥವನ್ನು ಬಿಡುಗಡೆಗೊಳಿಸಿ ಮಾತನಾಡಿ, ಮಠದ ಇತಿಹಾಸ ಹಾಗೂ ದಾನಿಗಳ ಸೇವೆಯನ್ನು ದಾಖಲಿಸುವ ಈ ಗ್ರಂಥ ಮುಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಲಿದೆ. ಶ್ರೀರಾಘವೇಂದ್ರಸ್ವಾಮಿಗಳ ಆಶಯದಂತೆ ಪರೋಪಕಾರ ಮತ್ತು ಭಕ್ತಿಮಾರ್ಗದಲ್ಲಿ ನಡೆಯುವುದೇ ಈ ಮಠದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

ಶ್ರೀ ವೆಂಕಟೇಶ್ವರ ಚಿತ್ರಮಂದಿರದ ಮಾಲೀಕ ಎಸ್.ಪ್ರಕಾಶ್ ಮಾತನಾಡಿ, ಮಂತ್ರಾಲಯಕ್ಕೆ ತೆರಳಲು ಸಾಧ್ಯವಾಗದ ಭಕ್ತರಿಗೆ ರಾಯರ ಸಾನ್ನಿಧ್ಯವನ್ನು ತಲುಪಿಸುವ ಉದ್ದೇಶದಿಂದ ದೇಶದ ವಿವಿಧೆಡೆ ಮೃತ್ತಿಕಾ ಬೃಂದಾವನಗಳು ಸ್ಥಾಪನೆಯಾಗಿದ್ದು, ಶಿಡ್ಲಘಟ್ಟದ ಶ್ರೀಕ್ಷೇತ್ರ ಕಿರು ಮಂತ್ರಾಲಯ–ಶ್ರೀ ರಾಘವೇಂದ್ರ ಸ್ವಾಮಿ ಮಠ ಅವುಗಳಲ್ಲಿ ಪ್ರಮುಖವಾಗಿದೆ ಎಂದರು.

ಸೇವೆ, ಸಮರ್ಪಣೆ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ಈ ಮಠ ನಾಲ್ಕು ದಶಕಗಳಿಂದ ಭಕ್ತರ ಬದುಕಿನಲ್ಲಿ ನಂಬಿಕೆಯ ದೀಪ ಬೆಳಗುತ್ತಿದೆ ಎಂದು ಹೇಳಿದರು.

ಶ್ರೀರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ವಿ.ನಾಗರಾಜರಾವ್, ಕಾರ್ಯದರ್ಶಿ ಎನ್.ಶ್ರೀಕಾಂತ್, ಆರ್.ಮಧುಸೂದನ್, ವಾಸುದೇವರಾವ್, ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಎ.ಎಸ್.ರವಿ, ವಿ.ನವೀನ್, ಎಸ್.ಎನ್.ವಾಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

In English: The Sri Raghavendra Swamy Mutt in Sidlaghatta inaugurated its new building and released a commemorative volume, “Shri Kshetra Kiru Mantralaya,” on Sunday. MLA B.N. Ravikumar inaugurated the building and praised the mutt’s service activities, and devotees and trust officials attended the event.

ಈ ಮಠ ಹಿಂದೆ ಆಚರಿಸಿದ್ದ ಆರಾಧನಾ ಮಹೋತ್ಸವ ಕಾರ್ಯಕ್ರಮದ ಕುರಿತು ಇಲ್ಲಿ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-12/07/2026

0
Sidlaghatta Silk Cocoon Market Rate 12 July 2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 12/07/2026

VarietyLotsQty (Kg)MaxMinAvg
Cross-Breed – ಮಿಶ್ರತಳಿ ರೇಷ್ಮೆ ಗೂಡು45224772732355659
Bi-Voltine – ದ್ವಿತಳಿ ರೇಷ್ಮೆ ಗೂಡು241327₹865₹677₹768

ಹಿಂದಿನ ದಿನದ ದರಕ್ಕಾಗಿ 11/07/2026ರ ಮಾರುಕಟ್ಟೆ ದರ ವೀಕ್ಷಿಸಿ. ಎಲ್ಲಾ ದಿನಗಳ ದರಕ್ಕಾಗಿ ರೇಷ್ಮೆ ಗೂಡು ಮಾರುಕಟ್ಟೆ ವಿಭಾಗ ನೋಡಿ.

Summary: Sidlaghatta Government Cocoon Market rates for 12/07/2026 — Cross-Breed cocoon averaged ₹659/kg across 452 lots (24,772 kg total, price range ₹355–₹732); Bi-Voltine cocoon averaged ₹768/kg across 24 lots (1,327 kg total, price range ₹677–₹865).


For Daily Updates WhatsApp ‘HI’ to 7406303366

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 1432 ಪ್ರಕರಣಗಳು ಇತ್ಯರ್ಥ

0
Sidlaghatta National Lok Adalat 1432 Cases Settled

Sidlaghatta : ಶಿಡ್ಲಘಟ್ಟದ ನ್ಯಾಯಾಲಯದಲ್ಲಿ ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 1432 ಪ್ರಕರಣಗಳು ಇತ್ಯರ್ಥಗೊಂಡು 81ಲಕ್ಷ 26 ಸಾವಿರ 630 ರೂ ಪಾವತಿಸಲಾಗಿದೆ.

ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ.ಸಿ.ಎಸ್ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಭಾವನಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ವಿವಿಧ ರೀತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು

ಸಂಧಾನಕಾರರಾಗಿ ವಕೀಲರಾದ ಗಗನ್ ಕುಮಾರ್, ಆಂಜನೇಯರೆಡ್ಡಿ ಮತ್ತು ಸುನೀತಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್ ಹಾಜರಿದ್ದರು.

ಜುಲೈ 11ರ ಈ ರಾಷ್ಟ್ರೀಯ ಲೋಕ್ ಅದಾಲತ್ ಬಗ್ಗೆ ಮೊದಲೇ ಪ್ರಕಟವಾಗಿದ್ದ ಪ್ರಕಟಣೆಯ ಸುದ್ದಿಯನ್ನೂ ಇಲ್ಲಿ ವೀಕ್ಷಿಸಿ.

In English: The National Lok Adalat held at Sidlaghatta court on Saturday, organized by the Taluk Legal Services Committee under Karnataka State Legal Services Authority directives, settled 1,432 cases through compromise, with a total of ₹81,26,630 paid in settlements.

Sidlaghatta WhatsApp Channel Group

For Daily Updates WhatsApp ‘HI’ to 7406303366

ಎನ್‌.ಪಿ.ಎಸ್ ರದ್ದು, ಓ.ಪಿ.ಎಸ್ ಜಾರಿಗೆ ಒತ್ತಾಯ: ಸರ್ಕಾರಿ ನೌಕರರ ಬೆಂಗಳೂರು ಚಲೊ

0
Sidlaghatta Government Employees Bengaluru Chalo NPS OPS Pension Protest

Sidlaghatta : ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌.ಪಿ.ಎಸ್) ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ (ಓ.ಪಿ.ಎಸ್) ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಸರ್ಕಾರಿ ನೌಕರರು ಬೆಂಗಳೂರಿಗೆ ತೆರಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ಶಿಡ್ಲಘಟ್ಟ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ಅವರ ನೇತೃತ್ವದಲ್ಲಿ ನೌಕರರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ನಗರದ ಕೋಟೆ ವೃತ್ತದಲ್ಲಿ ಬಸ್‌ ಗಳಿಗೆ ಚಾಲನೆ ನೀಡಿ ಮಾತನಾಡಿದ ಕೆ.ಎನ್. ಸುಬ್ಬಾರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಹಲವು ವರ್ಷಗಳ ಬೇಡಿಕೆಗಳನ್ನು ಸರ್ಕಾರ ಶೀಘ್ರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ವ್ಯವಸ್ಥೆ ಜಾರಿಗೊಳಿಸಬೇಕು. ಎನ್‌.ಪಿ.ಎಸ್ ರದ್ದುಪಡಿಸಿ ಓ.ಪಿ.ಎಸ್ ಜಾರಿಗೆ ತರಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸುವ ವಿಶ್ವಾಸವಿದೆ. ಇದೇ ಉದ್ದೇಶದಿಂದ ರಾಜ್ಯಮಟ್ಟದ ಹಕ್ಕೊತ್ತಾಯ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವೂ ವಿತರಿಸಲಾಗುವುದು ಎಂದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ವಸಂತ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಂದರಾಚಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ತನ್ವೀರ್ ಅಹ್ಮದ್, ಮಧುಸೂದನ್, ರಾಜ್ಯ ಪರಿಷತ್ ಸದಸ್ಯ ಟಿ.ಟಿ. ನರಸಿಂಹಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ. ವೆಂಕಟರೆಡ್ಡಿ, ಎನ್‌.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಕಾರ್ಯದರ್ಶಿ ನರಸಿಂಹರಾಜು ಹಾಜರಿದ್ದರು.

In English: Government employees from Sidlaghatta taluk travelled to Bengaluru to join a state-level protest by the Karnataka State Government Employees Association, demanding scrapping of the New Pension Scheme (NPS) and restoration of the Old Pension Scheme (OPS), along with pay parity with central government employees.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಾಲೆಯಿಂದ ಹೊರಗುಳಿದ ಮಕ್ಕಳಿಗೆ ಶಿಕ್ಷಣದ ಆಸರೆ

0
Sidlaghatta Sugatur Government School Out of School Children Education Rudreshamurthy

Sidlaghatta : ತಾಲ್ಲೂಕಿನ ಸುಗಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎಸ್. ರುದ್ರೇಶಮೂರ್ತಿ ಅವರು ಶಾಲೆಯಿಂದ ಹೊರಗುಳಿಯುವ ಅಪಾಯದಲ್ಲಿರುವ ಬಡ ಹಾಗೂ ವಲಸೆ ಕಾರ್ಮಿಕರ ಮಕ್ಕಳನ್ನು ಶಿಕ್ಷಣದ ಮುಖ್ಯವಾಹಿನಿಗೆ ತರುವ ಕಾರ್ಯದಲ್ಲಿ ತೊಡಗಿದ್ದಾರೆ.

ಈ ಶೈಕ್ಷಣಿಕ ವರ್ಷದಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹನುಮಂತ ಹರಿಜನ ಹಾಗೂ ಹರೀಶ್ ಹರಿಜನ ಅವರನ್ನು ಜಂಗಮಕೋಟೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ದಾಖಲಿಸಿ, ಸುಗಟೂರು ಸರ್ಕಾರಿ ಶಾಲೆಯ 4 ಮತ್ತು 5ನೇ ತರಗತಿಗಳಿಗೆ ದಾಖಲಾತಿ ಮಾಡಿಸಿದ್ದಾರೆ. ವಿದ್ಯಾರ್ಥಿನಿಲಯದಿಂದ ಶಾಲೆಗೆ ಮಕ್ಕಳನ್ನು ಕರೆತರುವುದು ಹಾಗೂ ವಾಪಸ್ ಕರೆದೊಯ್ಯುವುದು ಸೇರಿದಂತೆ ಅವರ ಕಲಿಕೆ, ಹಾಜರಾತಿ ಮತ್ತು ಆರೋಗ್ಯದ ಬಗ್ಗೆ ನಿಗಾ ವಹಿಸುತ್ತಿದ್ದಾರೆ. ಮಕ್ಕಳ ಕುಟುಂಬದವರೊಂದಿಗೂ ನಿರಂತರ ಸಂಪರ್ಕದಲ್ಲಿದ್ದು ಶಿಕ್ಷಣ ಮುಂದುವರಿಸುವ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ಕಳೆದ ಹಲವು ವರ್ಷಗಳಿಂದ ಶಾಲೆ ಬಿಟ್ಟ ಮಕ್ಕಳು, ಬಡತನದಿಂದ ಶಿಕ್ಷಣದಿಂದ ದೂರವಾಗುವ ಪರಿಸ್ಥಿತಿಯಲ್ಲಿದ್ದ ವಿದ್ಯಾರ್ಥಿಗಳನ್ನು ಗುರುತಿಸಿ ಶಾಲೆಗೆ ದಾಖಲಿಸುವ ಕಾರ್ಯದಲ್ಲೂ ಅವರು ತೊಡಗಿದ್ದಾರೆ. ಅಗತ್ಯವಿದ್ದಲ್ಲಿ ವಸತಿ, ಶಾಲಾ ಬ್ಯಾಗ್‌, ನೋಟ್‌ ಪುಸ್ತಕ ಸೇರಿದಂತೆ ಕಲಿಕಾ ಸಾಮಗ್ರಿಗಳನ್ನು ದಾನಿಗಳ ನೆರವಿನಿಂದ ಒದಗಿಸುತ್ತಿದ್ದಾರೆ. ಇದರಿಂದ ಶಾಲೆಯ ದಾಖಲಾತಿ ಹೆಚ್ಚಳಕ್ಕೂ ನೆರವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ರುದ್ರೇಶಮೂರ್ತಿ, “ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಭಾಗಗಳಿಂದ ಮಕ್ಕಳ ಶಿಕ್ಷಣಕ್ಕಾಗಿ ಪೋಷಕರು ಸಂಪರ್ಕಿಸುತ್ತಾರೆ. ಅಂತಹ ಮಕ್ಕಳಿಗೆ ವಸತಿ ಹಾಗೂ ಶಿಕ್ಷಣದ ವ್ಯವಸ್ಥೆ ಕಲ್ಪಿಸಿ, ಅವರು ವಿದ್ಯಾಭ್ಯಾಸ ಮುಂದುವರಿಸುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ವಿದ್ಯಾರ್ಥಿನಿಲಯದ ಸಿಬ್ಬಂದಿಯ ಸಹಕಾರವೂ ಇದಕ್ಕೆ ನೆರವಾಗಿದೆ” ಎಂದು ಹೇಳಿದರು.

In English: Teacher H.S. Rudreshamurthy of Sugatur Government Higher Primary School in Sidlaghatta taluk has been bringing poor and migrant labourers’ children back into mainstream education. This year he enrolled two children from Savanur taluk, Haveri district into a pre-matric hostel and Sugatur school, arranging transport, learning materials and hostel support through donors.

Sidlaghatta WhatsApp Channel Group

For Daily Updates WhatsApp ‘HI’ to 7406303366