23.9 C
Sidlaghatta
Wednesday, June 18, 2025
Home Blog

ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಹೊಸ ಸಮಿತಿ ಆಯ್ಕೆ

0
Sidlaghatta New Karnataka Vokkaliga Samiti

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಒಕ್ಕಲಿಗ ಸಮುದಾಯದ ಪ್ರಮುಖರು ಶಿಡ್ಲಘಟ್ಟ ಪ್ರವಾಸಿ ಮಂದಿರದಲ್ಲಿ ಬುಧವಾರ ಸಭೆ ಸೇರಿ ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಶಿಡ್ಲಘಟ್ಟ ತಾಲ್ಲೂಕು ಹೊಸ ಸಮಿತಿಯನ್ನು ಆಯ್ಕೆ ಮಾಡಿದ್ದಾರೆ. ಮೂರು ವರ್ಷಗಳ ಹಿಂದೆ ಸ್ಥಾಪನೆಯಾದ ಈ ಸಂಘಟನೆ ನಿರೀಕ್ಷೆಯಂತೆ ಕಾರ್ಯನಿರ್ವಹಿಸದ ಹಿನ್ನೆಲೆಯಲ್ಲಿ ಹಳೆಯ ಸಮಿತಿಯನ್ನು ರದ್ದುಗೊಳಿಸಿ, ಹೊಸ ತಂಡವನ್ನು ನೇಮಕ ಮಾಡಲಾಯಿತು.

ಸಭೆಯಲ್ಲಿ ಒಕ್ಕೂಟದ ರಾಜ್ಯಾಧ್ಯಕ್ಷ ನೆಲಮಂಗಲ ಮಧುಸೂದನ್, ಕಾರ್ಯಾಧ್ಯಕ್ಷ ಮಧುಸೂದನ್, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಆರ್. ಲಕ್ಷ್ಮಣ್, ಖಜಾಂಚಿ ಮಡಿಕೇರಿ ಪೊನ್ನಪ್ಪ ಹಾಗೂ ಸಹ ಕಾರ್ಯದರ್ಶಿ ವೆಂಕಟೇಶ್. ಎಚ್.ವಿ. ಸೇರಿದಂತೆ ಹಲವರು ಉಪಸ್ಥಿತರಿದ್ದು, ಇವರ ನೇತೃತ್ವದಲ್ಲಿ ತಾಲ್ಲೂಕು ಮಟ್ಟದ ಹೊಸ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಶಿಡ್ಲಘಟ್ಟ ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟದ ಶೆಟ್ಟಹಳ್ಳಿ ದೇವಕೃಷ್ಣಪ್ಪ ಅವರು ತಾಲ್ಲೂಕು ಅಧ್ಯಕ್ಷರಾಗಿ, ಭಕ್ತರಹಳ್ಳಿ ಕೋಟೆ ಚೆನ್ನೇಗೌಡ ಗೌರವಾಧ್ಯಕ್ಷರಾಗಿ, ದೊಣ್ಣಹಳ್ಳಿ ರಮೇಶ್ ಉಪಾಧ್ಯಕ್ಷರಾಗಿ, ಎಸ್.ಎಂ. ರವಿಪ್ರಕಾಶ್ ಪ್ರಧಾನ ಕಾರ್ಯದರ್ಶಿಯಾಗಿ, ದೇವೇನಹಳ್ಳಿ ನಂಜೇಗೌಡ ಕಾರ್ಯದರ್ಶಿಯಾಗಿ, ದೊಣ್ಣಹಳ್ಳಿ ಕಿಶೋರ್ ಕುಮಾರ್ ಖಜಾಂಚಿಯಾಗಿ, ಜಯಂತಿ ಗ್ರಾಮ ಬೈರೇಗೌಡ, ಚೌಡಸಂದ್ರ ಶ್ರೀನಿವಾಸ್ ಮತ್ತು ಲೋಕೇಶ್ ಸಹ ಕಾರ್ಯದರ್ಶಿಗಳಾಗಿ ಆಯ್ಕೆಯಾದರು. ನಿರ್ದೇಶಕರಾಗಿ ಬಿ.ಕೆ. ಮುನಿ ಕೆಂಪಣ್ಣ, ಚೌಡಸಂದ್ರ ಶ್ರೀಧರ್, ಶೆಟ್ಟಹಳ್ಳಿ ಮುನಿರಾಜು ಹಾಗೂ ನಾಗರಾಜ್ ನೇಮಕಗೊಂಡರು.

ರಾಜ್ಯಾಧ್ಯಕ್ಷ ಮಧುಸೂದನ್ ಮಾತನಾಡಿ, ಒಕ್ಕಲಿಗ ಸಮುದಾಯ ಇಂದು ಸಂಘಟಿತರಾಗಿ ಹೋರಾಟ ಮಾಡುವ ಅಗತ್ಯವಿದೆ. ಹೊಸ ಕಮಿಟಿ ಸದೃಢವಾಗಿ ಕಾರ್ಯ ನಿರ್ವಹಿಸಿ ಸಮುದಾಯದ ಹಕ್ಕು, ಕಲ್ಯಾಣ ಹಾಗೂ ಒಗ್ಗಟ್ಟು ಕಾಪಾಡಬೇಕು ಎಂದು ಹೇಳಿದ ಅವರು ಹಿನ್ನೆಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಹೊಸ ಸಮಿತಿಯನ್ನು ರಚಿಸಲಾಗಿದೆ ಎಂದರು.

ನೂತನ ತಾಲ್ಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಶೆಟ್ಟಹಳ್ಳಿ ದೇವಕೃಷ್ಣಪ್ಪ ಅವರು ಮಾತನಾಡಿ, “ತಾಲ್ಲೂಕಿನ ಎಲ್ಲಾ ಹಳ್ಳಿಗಳಲ್ಲೂ ಸಮಿತಿಯನ್ನು ಬಲಪಡಿಸಲಾಗುವುದು. ಹೆಚ್ಚಿನ ಸದಸ್ಯರನ್ನು ಸೇರಿಸಿ ಸಮುದಾಯದ ಸಮಸ್ಯೆಗಳಿಗೆ ಪರಿಹಾರ ಕಂಡುಹಿಡಿಯುವಲ್ಲಿ ಸಂಘಟನೆ ಮುಂಚೂಣಿಯಲ್ಲಿರಲಿದೆ. ಪಕ್ಷಾತೀತವಾಗಿ ಕೆಲಸ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಸ್.ಎಂ. ರವಿಪ್ರಕಾಶ್ ಮಾತನಾಡಿ, ನೂತನ ತಂಡ ಗ್ರಾಮಮಟ್ಟದ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವತ್ತ ಗಮನ ಹರಿಸುತ್ತದೆ. ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಉದ್ಯೋಗಾವಕಾಶ, ಹಕ್ಕುಗಳ ರಕ್ಷಣೆ ಮೊದಲಾದ ವಿಷಯಗಳಿಗೆ ವಿಶೇಷ ಒತ್ತು ನೀಡಲಾಗುವುದು ಎಂದರು.

ಸಭೆಯಲ್ಲಿ ಎಲ್ಲ ಹೊಸ ಪದಾಧಿಕಾರಿಗಳು ಸಂಘಟನೆಯ ಯಶಸ್ಸಿಗೆ ಸಂಪೂರ್ಣ ಬದ್ಧರಾಗಿರುವುದಾಗಿ ಘೋಷಿಸಿದರು.

For Daily Updates WhatsApp ‘HI’ to 7406303366

ಶಿಡ್ಲಘಟ್ಟದಲ್ಲಿ ಸಂಚಾರಿ ಆರೋಗ್ಯ ಫಟಕ ಸೇವೆ ಪ್ರಾರಂಭ

0
Sidlaghatta Mobile Medical Van Inauguration

Sidlaghatta : ಗ್ರಾಮೀಣ ಹಾಗೂ ನಗರ ಭಾಗದ ಕಾರ್ಮಿಕರು ಹಾಗೂ ಜನಸಾಮಾನ್ಯರಿಗೆ ಸುಲಭ ಮತ್ತು ಉಚಿತ ವೈದ್ಯಕೀಯ ತಪಾಸಣೆ ಹಾಗೂ ಔಷಧೋಪಚಾರವನ್ನು ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆ ಹಾಗೂ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಂಚಾರಿ ಆರೋಗ್ಯ ಫಟಕ ಸೇವೆಯನ್ನು ಶಿಡ್ಲಘಟ್ಟದಲ್ಲಿ ಆರಂಭಿಸಿದೆ.

ನಗರದ ಪ್ಯಾರಾಗಾನ್ ಶಾಲೆಯ ಬಳಿ ಇರುವ ರಸ್ತೆಯಲ್ಲಿ ಈ ತಾತ್ಕಾಲಿಕ ಆರೋಗ್ಯ ಘಟಕವನ್ನು ಸ್ಥಾಪಿಸಲಾಗಿದ್ದು, ಶಿಡ್ಲಘಟ್ಟ ಸೇರಿದಂತೆ ಹತ್ತಿರದ ಹಳ್ಳಿಗಳ ಜನತೆ ಇದರಿಂದ ಬಹಳಷ್ಟು ಲಾಭ ಪಡೆಯುತ್ತಿದ್ದಾರೆ. ಕಾರ್ಮಿಕರ ಕಾರ್ಡ್ ಹಾಗೂ ಇ ಶ್ರಮ ಕಾರ್ಡ್ ಹೊಂದಿರುವವರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ತಾಲ್ಲೂಕಿನಲ್ಲಿ ವಾರಕ್ಕೆ ಒಮ್ಮೆ ಈ ಸಂಚಾರಿ ಘಟಕವನ್ನು ನಗರ ಮತ್ತು ಹಳ್ಳಿಗಳಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಲಾಗುತ್ತಿದ್ದು, ಗ್ರಾಮೀಣ ಆಸ್ಪತ್ರೆಗಳ ಕೊರತೆಯನ್ನು ಭರಿಸಲು ಇದು ಸಹಕಾರಿಯಾಗಿದೆ. ರಕ್ತದೊತ್ತಡ, ಸಕ್ಕರೆ ಖಾಯಿಲೆ ತಪಾಸಣೆ, ತುರ್ತು ಚಿಕಿತ್ಸೆ, ಮಕ್ಕಳ ಹಾಗೂ ಮಹಿಳಾ ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ವೈದ್ಯಕೀಯ ಸೇವೆಗಳು ತಜ್ಞ ವೈದ್ಯರು ಹಾಗೂ ಪೆರಾಮೆಡಿಕಲ್ ಸಿಬ್ಬಂದಿಯಿಂದ ನೀಡಲಾಗುತ್ತಿದೆ.

ಶಿಡ್ಲಘಟ್ಟ ತಾಲ್ಲೂಕು ಮರಗೆಲಸ ಕಾರ್ಮಿಕ ಸಂಘದ ಅಧ್ಯಕ್ಷ ಪ್ರದೀಪ್ ದೀಪು ಮಾತನಾಡಿ, ಗ್ರಾಮೀಣ ಮತ್ತು ನಗರ ಭಾಗದ ಕಾರ್ಮಿಕರಿಗೆ ಉತ್ತಮ ಆರೋಗ್ಯ ಸೇವೆ ಒದಗಿಸಲು ಸರ್ಕಾರ ಕಟಿಬದ್ಧವಾಗಿದೆ. ಈ ಯೋಜನೆಯ ಮೂಲಕ ಆರೋಗ್ಯ ವ್ಯವಸ್ಥೆಯ ಸುಧಾರಣೆಯೇ ಮೂಲ ಉದ್ದೇಶ ಎಂದು ಹೇಳಿದರು.

ಸ್ಥಳೀಯರು ಆರೋಗ್ಯ ಇಲಾಖೆಯ ಈ ನೂತನ ಪ್ರಯತ್ನಕ್ಕೆ ಹರ್ಷ ವ್ಯಕ್ತಪಡಿಸುತ್ತಿದ್ದು, ಸೇವೆಯನ್ನು ವ್ಯಾಪಕವಾಗಿ ಸ್ವಾಗತಿಸಿದ್ದಾರೆ.

For Daily Updates WhatsApp ‘HI’ to 7406303366

Sidlaghatta Silk Cocoon Market-18/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 18/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 541
Qty: 31146 Kg
Mx : ₹ 562
Mn: ₹ 268
Avg: ₹ 466

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 04
Qty: 176 Kg
Mx : ₹ 561
Mn: ₹ 456
Avg: ₹ 517


For Daily Updates WhatsApp ‘HI’ to 7406303366

ಮಾವಿನ ಹಣ್ಣಿನ ಬೆಲೆ ಕುಸಿದರೂ ನಷ್ಟ ಹೊಂದದ ರೈತ

0
Sidlaghatta Mango Farming Profit

Kambadahalli, sidlaghatta : ಈ ವರ್ಷ ಮಾವಿನ ಹಣ್ಣಿನ ಬೆಲೆಗಳು ತೀವ್ರವಾಗಿ ಕುಸಿದಿದ್ದು, ಬೆಳೆಗಾರರಿಗೆ ಆರ್ಥಿಕ ನಷ್ಟ ಉಂಟಾಗಿದೆ. ಜಿಲ್ಲೆಯ ಪ್ರಮುಖ ತೋಟಗಾರಿಕೆ ಬೆಳೆ “ಹಣ್ಣುಗಳ ರಾಜ ಮಾವು” ಕೊಯ್ಲಿಗೆ ಬಂದಿದೆ. ಒಂದೆಡೆ ಮಾರುಕಟ್ಟೆಯಲ್ಲಿ ಮಾವಿನ ಬೆಲೆ ಕುಸಿತದಿಂದ ಬೆಳೆಗಾರರು ಕಂಗಾಲಾಗಿದ್ದು, ಬೆಂಬಲ ಬೆಲೆ ಘೋಷಣೆ ಮಾಡಬೇಕೆಂಬ ಒತ್ತಾಯ ಬಲವಾಗುತ್ತಿದೆ. ಮತ್ತೊಂದೆಡೆ ಗುಣಮಟ್ಟದ ಬೆಳೆ ಬೆಳೆದು, ಸ್ವಯಂ ಮಾರಾಟ ಮಾಡುವ ಮೂಲಕ ಕೆಲ ರೈತರು ನಷ್ಟ ಹೊಂದದೆ ಲಾಭವನ್ನು ಗಳಿಸುವ ಮೂಲಕ ಮಾದರಿಯಾಗಿದ್ದಾರೆ.

ತಾಲ್ಲೂಕಿನ ಕಂಬದಹಳ್ಳಿಯ ರೈತ ಸುರೇಂದ್ರಗೌಡ, ತಮ್ಮ ಎಂಟು ಎಕರೆ ಮಾವಿನ ತೋಟದಲ್ಲಿ ಒಂದು ಸಾವಿರ ಮಾವಿನ ಮರಗಳನ್ನು ಹೊಂದಿದ್ದಾರೆ. ಅವುಗಳಲ್ಲಿ 300 ಇಮಾಮ್ ಪಸಂದ್ ಮಾವಿನ ಮರಗಳನ್ನು ಬೆಳೆಸಿದ್ದಾರೆ. ಪ್ರತಿ ದಿನ 500 ಕೆಜಿ ಹಣ್ಣನ್ನು ಬೆಂಗಳೂರಿನ ಅಪಾರ್ಟ್ ಮೆಂಟ್ ಗಳಲ್ಲಿ ಸ್ವಯಂ ಮಾರಾಟ ಮಾಡುತ್ತಿದ್ದಾರೆ.

ಇದುವರೆಗೂ ಎರಡು ಟನ್ ಮಾವಿನ ಹಣ್ಣನ್ನು ಒಂದು ಕೇಜಿಗೆ 200 ರೂಗಳಂತೆ ಮಾರಾಟ ಮಾಡಿದ್ದು, ಒಟ್ಟಾರೆ ಎಂಟು ಟನ್ ಇಮಾಮ್ ಪಸಂದ್ ಹಣ್ಣು ಸಿಗುತ್ತದೆ ಎಂದು ಅವರು ಹೇಳುತ್ತಾರೆ. ಒಂದೊಂದು ಹಣ್ಣೂ ಅರ್ಧ ಕೇ.ಜಿ ಯಿಂದ ಒಂದೂ ಕಾಲು ಕೇಜಿ ವರೆಗೂ ತೂಗುತ್ತದೆ.

ಇದಲ್ಲದೆ ಮಲ್ಲಿಕಾ ತಳಿಯ ಮಾವಿನ ಹಣ್ಣನ್ನು ಒಂದು ಕೇಜಿಗೆ 100 ರೂಗಳಿಗೆ ಮಾರುತ್ತಿದ್ದೇನೆ. ಬೈಗಾನಪಲ್ಲಿ ತಳಿಯ ಮಾವಿನಹಣ್ಣನ್ನು ಹಾಪ್ ಕಾಮ್ಸ್ ಗೆ ಕೊಡುತ್ತಿದ್ದೇನೆ. ಅವರು ಅದಕ್ಕೆ ಒಂದು ಕೇಜಿಗೆ 40 ರೂ ಕೊಡುತ್ತಿದ್ದಾರೆ. ಬಾದಾಮಿ ತಳಿಯ ಮಾವಿನಹಣ್ಣು ಎರಡೂವರೆ ಟನ್ ಸಿಕ್ಕಿತ್ತು. ಅದನ್ನು ಒಂದು ಕೇಜಿಗೆ 60 ರೂಗಳಂತೆ ಹಾಪ್ ಕಾಮ್ಸ್ ಗೆ ಕೊಟ್ಟಿದ್ದೇನೆ.

ಇದರೊಂದಿಗೆ ದಶೇರಿ ತಳಿಯ ಮಾವಿನಹಣ್ಣಿನ ಸುಮಾರು ಹತ್ತು ಮರಗಳಿವೆ. ಒಂದೊಂದು ಮರದಲ್ಲೂ ಒಂದು ನೂರು ಕೇ.ಜಿ ಯಷ್ಟು ಹಣ್ಣು ಸಿಗುತ್ತದೆ. ಅದನ್ನು ಒಂದು ಕೇ.ಜಿ. ಗೆ 150 ರೂಗಳಂತೆ ಮಾರಾಟ ಮಾಡಿದ್ದೇನೆ ಎಂದು ಅವರು ವಿವರಿಸಿದರು.

ಇಮಾಮ್ ಪಸಂದ್ ಮಾವಿನ ಹಣ್ಣನ್ನು ಮರದಿಂದ ಕಿತ್ತ ನಂತರ ಅದನ್ನು ಮೂರು ದಿನಗಳ ಕಾಲ ಒಣಹುಲ್ಲು ಮತ್ತು ಹತ್ತಿಯ ಟಾರ್ಪಾಲ್ ಹೊದಿಸಿ ಸಹಜವಾಗಿ ಹಣ್ಣು ಮಾಡುತ್ತೇನೆ. ರಾಸಾಯನಿಕವನ್ನು ಬಳಸದಿರುವುದರಿಂದ ಹಣ್ಣಿನ ರುಚಿ ಹೆಚ್ಚಿರುತ್ತದೆ. ಗ್ರಾಹಕರು ಇದನ್ನು ಬಹಳವಾಗಿ ಮೆಚ್ಚುತ್ತಾರೆ. ಒಮ್ಮೆ ತಿಂದವರು ದೂರವಣಿ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿ ಪುನಃ ಬೇಡಿಕೆ ಇಡುತ್ತಿದ್ದಾರೆ ಎಂದು ಹೆಮ್ಮೆಯಿಂದ ಅವರು ಹೇಳುತ್ತಾರೆ.

ಇಮಾಮ್ ಪಸಂದ್ ಮಾವಿನ ಹಣ್ಣು ಮರದಲ್ಲಿ ಸುಮಾರು 200 ಗ್ರಾಂ ತೂಗುವಾಗ, ಒಂದೊಂದು ಹಣ್ಣಿಗೂ ಬ್ಯಾಗ್ ಕಟ್ಟುತ್ತೇವೆ. ಇದರಿಂದ ಹೂಜಿ ನೊಣಗಳಿಂದ ಸಂರಕ್ಷಣೆ, ಆಲಿಕಲ್ಲು ಮಳೆಯಿಂದ ರಕ್ಷಣೆ ಸಿಗುತ್ತದೆ. ಪೂರ್ತಿ ಬೆಳೆದ ಹಣ್ಣಿನ ಬ್ಯಾಗ್ ತೆಗೆದಾಗ ಹಣ್ಣು ಯಾವುದೇ ಕಲೆಯಿಲ್ಲದೆ, ಹೊಳಪಿನಿಂದ ಕೂಡಿರುತ್ತದೆ.

ಇದರೊಂದಿಗೆ ತೋಟಗಾರಿಕೆ ಇಲಾಖೆ ನೀಡುವ ಹೂಜಿ ಮಾತ್ರೆಗಳನ್ನೂ ಬಳಕೆ ಮಾಡುತ್ತಿದ್ದೇನೆ. ಉತ್ತರಪ್ರದೇಶ, ಗುಜರಾತ್ ರಾಜ್ಯಗಳಲ್ಲದೆ, ವಿದೇಶಕ್ಕೆ ಸಾವಿರಾರು ಟನ್ ಮಾವಿನಹಣ್ಣು ರಫ್ತಾಗುತ್ತಿತ್ತು. ಆದರೆ ಈ ಬಾರಿ ನಾನಾ ಕಾರಣಗಳಿಂದ ಈ ರಫ್ತು ಆಗದೆ ಬೆಲೆ ಕುಸಿತ ಕಂಡಿದೆ. ನಾನು ಗುಣಮಟ್ಟ ಕಾಯ್ದುಕೊಂಡು ಬೆಂಗಳೂರಿನ ವಿವಿಧ ಅಪಾರ್ಟ್ ಮೆಂಟ್ ಗಳಲ್ಲಿ ನೇರ ಮಾರಾಟ ಮಾಡುತ್ತಿರುವುದರಿಂದ ನನಗೆ ಉತ್ತಮ ಆದಾಯ ಬರುತ್ತಿದೆ.

ತೋಟಗಾರಿಕೆ ಇಲಾಖೆಯವರು ಹಾಪ್ ಕಾಮ್ಸ್ ಮೂಲಕ ಬೆಂಗಳೂರಿನ ಲಾಲ್ ಬಾಗ್ ನಲ್ಲಿ ಇಮಾಮ್ ಪಸಂದ್ ಮಾವಿನ ಹಣ್ಣನ್ನು ಒಂದು ಕೇ.ಜಿ ಗೆ 250 ರೂಗಳಿಗೆ ಮಾರುತ್ತಿದ್ದಾರೆ. ಆದರೆ ನಾನು ಗ್ರಾಹಕರಿಗೆ ನೇರವಾಗಿ 200 ರೂಗಳಿಗೆ ಮಾರುತ್ತಿದ್ದೇನೆ. ವೈಜ್ಞಾನಿಕವಾಗಿ ನಿರ್ವಣೆ ಹಾಗೂ ವ್ಯವಸ್ಥಿತವಾಗಿ ಮಾರಾಟ ಮಾಡಿದಾಗ ಹೆಚ್ಚಿನ ಆದಾಯ ಸಿಗುತ್ತದೆ ಎನ್ನುತ್ತಾರೆ ರೈತ ಸುರೇಂದ್ರಗೌಡ.

ಉತ್ತಮವಾಗಿ ಮಾವನ್ನು ಬೆಳೆದ ರೈತರು ಮಧ್ಯವರ್ತಿಗಳಿಗೆ ನೀಡಿ ತಮ್ಮ ಶ್ರಮದ ಫಲವನ್ನು ಅವರು ತಿನ್ನುವಂತೆ ಮಾಡುತ್ತಾರೆ. ಅದು ತಪ್ಪು. ಸ್ವಯಂ ಮಾರಾಟ ಮಾಡಬೇಕು. ರೈತರೇ ಗುಣಮಟ್ಟಕ್ಕೆ ತಕ್ಕಂತೆ ಬೇರ್ಪಡಿಸಿ, ಡಬ್ಬದಲ್ಲಿ ಹಾಕಿ, ತಮ್ಮದೇ ಹೆಸರಿನ ಬ್ರಾಂಡ್ ಮಾಡಿ ಮಾರಾಟ ಮಾಡಿ, ಹೆಚ್ಚು ಹಣವನ್ನು ಪಡೆಯಬೇಕು. ಸ್ವಯಂ ಮಾರಾಟ ಮಾಡಿ ಹಲವು ಪಟ್ಟು ಲಭ ಪಡೆಯಬೇಕು

– ತೋಟಗಾರಿಕೆ ಇಲಾಖೆ ನಿವೃತ್ತ ಅಪರ ನಿರ್ದೇಶಕ ಡಾ.ಹಿತ್ತಲಮನಿ

ಮಾಹಿತಿ: ರೈತ ಸುರೇಂದ್ರಗೌಡ (M) +91 97412 34876

-ಡಿ.ಜಿ.ಮಲ್ಲಿಕಾರ್ಜುನ

For Daily Updates WhatsApp ‘HI’ to 7406303366

ದೇವಾಲಯ ಪುನರ್ ಪ್ರತಿಷ್ಠಾಪನೆ ಅಂಗವಾಗಿ 48 ದಿನಗಳ ಮಂಡಲಪೂಜೆ

0
Sidlaghatta Melur Temple Mandala Pooja

Melur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಗ್ರಾಮದ ಶ್ರೀ ಉಮಾ ಮಹೇಶ್ವರಸ್ವಾಮಿ, ಭದ್ರಕಾಳಿ ಸಮೇತ ಶ್ರೀ ವೀರಭದ್ರಸ್ವಾಮಿ ದೇವಾಲಯದ ಪುನರ್ ಪ್ರತಿಷ್ಠಾಪನೆ ಮತ್ತು ಶ್ರೀ ಗಣಪತಿ, ಶ್ರೀ ಸುಬ್ರಮಣ್ಯಸ್ವಾಮಿ, ಶ್ರಿ ಕಾಲಭೈರವೇಶ್ವರ, ದಕ್ಷಿಣಾಮೂರ್ತಿ ಹಾಗೂ ದಂಪತಿ ಸಮೇತ ನವಗ್ರಹಗಳು, ನಾಗರಕಲ್ಲುಗಳು ಹಾಗೂ ನೂತನ ನಂದಿ ವಿಗ್ರಹಗಳು ಮತ್ತು ಧ್ವಜಸ್ತಂಭ ಪ್ರತಿಷ್ಠಪನೆಯ 48 ದಿನಗಳ ಮಂಡಲಪೂಜೆ ಕಾರ್ಯಕ್ರಮ ಮಂಗಳವಾರ ಶ್ರದ್ಧಾ ಭಕ್ತಿಯಿಂದ ನಡೆಯಿತು.

ಮೇಲೂರು ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಸಾವಿರಾರು ಭಕ್ತಾದಿಗಳು ಬಂದು ವಿಶೇಷ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಿ ದೇವರ ಕೃಪೆಗೆ ಪಾತ್ರರಾದರು.

ದೇವಾಲಯದ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾಪನ ಮಹೋತ್ಸವದ 48 ದಿನಗಳ ಮಂಡಲ ಪೂಜೆ ಅಂಗವಾಗಿ ಸೋಮವಾರದಿಂದಲೇ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಿತು. ಮಂಗಳವಾರ ಪ್ರಾತಃಕಾಲ ಮಹಾಸಂಕಲ್ಪ, ಗಣಪತಿ ದೇವರ ಪ್ರಾರ್ಥನೆ, ಪ್ರದಾನ ದೇವತೆಗಳಿಗೆ ಹಾಗು ಪರಿವಾರ ದೇವತೆಗಳಿಗೆ ಮಹಾರುದ್ರಾಭಿಷೇಕ, ಸಂಕ್ಷಿಪ್ತ ಕಳಸ ಪೂಜೆ ನಂತರ ಗಣಪತಿ ಹೋಮ, ಮಹಾರುದ್ರ ಹೋಮ, ನವಗ್ರಹ ಹೋಮ, ಶ್ರಿಸೂಕ್ತ ಹೋಮ, ಶಾಮತಿ ಹೋಮ, ಪ್ರಾಯಶ್ಚಿತ್ತ ಹೋಮ, ಜಯಾದಿ ಹೋಮ ನಂತರ ಪೂರ್ಣಾಹುತಿ ನಂತರ ಜಗದ್ಗುರು ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಮಹಾಸ್ವಾಮಿಗಳಿಂದ ಮಂಡಲಾಭಿಷೇಕ ನೆರವೇರಿತು.

ತೀರ್ಥ ಪ್ರಸಾದ ವಿನಿಯೋಗ ನೆರವೇರಿಸಲಾಯಿತು. ಭಕ್ತಾದಿಗಳಿಗಾಗಿ ಅನ್ನ ಸಂತರ್ಪಣೆ ಸೇವೆ ಆಯೋಜಿಸಲಾಗಿತ್ತು.

ಗ್ರಾ.ಪಂ ಸದಸ್ಯ ಆರ್.ಎ.ಉಮೇಶ್, ಮುಖಂಡರಾದ ರಾಮಕೃಷ್ಣಪ್ಪ, ಮಂಜುನಾಥ್, ಅಶ್ವತ್ಥಪ್ಪ ರಮೇಶ್, ನಾಗರಾಜ್, ಬಿ.ಕೆ.ಶ್ರೀನಿವಾಸ್, ಎಚ್.ಟಿ.ಸುದರ್ಶನ್, ಎಸ್.ಆರ್.ಶ್ರೀನಿವಾಸಮೂರ್ತಿ, ಪ್ರಭಾಕರ್ ಸೇರಿದಂತೆ ಮೇಲೂರು ಸುತ್ತಮುತ್ತಲಿನ ಭಕ್ತಾದಿಗಳು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

ಕೈಗಾರಿಕೆ ಸ್ಥಾಪಿಸಿ ಪರಿಹಾರ ಹಣ ನೀಡಿ ಉದ್ಯೋವನ್ನೂ ಕೊಡಬೇಕು

0
Sidlaghatta Jangamakote Land KIADB

Jangamakote, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆ ಹೋಬಳಿಯಲ್ಲಿ ಕೈಗಾರಿಕೆ ಪ್ರದೇಶವನ್ನು ಅಭಿವೃದ್ದಿಪಡಿಸಿ ಕೈಗಾರಿಕೆಗಾಗಿ ಭೂಮಿ ಬಿಟ್ಟುಕೊಡುವ ಎಲ್ಲ ರೈತರಿಗೂ ನ್ಯಾಯಯುತವಾಗಿ ಪರಿಹಾರದ ಹಣವನ್ನು ಸಕಾಲಕ್ಕೆ ನೀಡಬೇಕು ಮತ್ತು ಪ್ರತಿ ಕುಟುಂಬಕ್ಕೂ ಒಂದು ಉದ್ಯೋಗ ನೀಡಬೇಕೆಂದು ರೈತ ಸಂಘದ ಸಮೂಹಿಕ ನಾಯಕತ್ವದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರತೀಶ್ ಆಗ್ರಹಿಸಿದರು.

ಜಿಲ್ಲೆಯ ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಯುತ್ತಿರುವ ಹಿನ್ನಲೆಯಲ್ಲಿ ತಾಲ್ಲೂಕಿನ ನಡಿಪಿನಾಯಕನಹಳ್ಳಿ ಗ್ರಾಮದಲ್ಲಿ ಸಂಘದ ರೈತರ ಸಭೆ ನಡೆಸಿ ಸರ್ಕಾರಕ್ಕೆ ತಮ್ಮ ಹಕ್ಕೊತ್ತಾಯ ಮಂಡಿಸಿ ಮಾತನಾಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪೂರ್ಣ ಸಚಿವ ಸಂಪುಟ ಜೂನ್ 19 ರಂದು ಜಿಲ್ಲೆಯ ವಿಶ್ವ ಪ್ರಸಿದ್ಧ ನಂದಿಗಿರಿಧಾಮದಲ್ಲಿ ನಡೆಸುತ್ತಿರುವುದು ನಮ್ಮೆಲ್ಲರಿಗೂ ಖುಷಿಯ ವಿಚಾರ. ಈ ಜಿಲ್ಲೆಯ ಅಭಿವೃದ್ದಿಗೆ ಮತ್ತು ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗುವ ಆಶಯ ವ್ಯಕ್ತಪಡಿಸಿದರು.

ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗೆ ಕೃಷ್ಣಾ ನದಿಯಿಂದ ಕನಿಷ್ಟ 24 ಟಿಎಂಸಿ ನೀರನ್ನು ತಂದು ಕೆರೆಗಳಿಗೆ ತುಂಬಿಸಿ ಕುಡಿಯಲು ಮತ್ತು ಕೃಷಿಗೆ ಬಳಸಿ ರೈತರ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು. ಕೆಸಿ ವ್ಯಾಲಿ ಮತ್ತು ಎಚ್‌.ಎನ್ ವ್ಯಾಲಿ ಯೋಜನೆಯ ನೀರಿನಲ್ಲಿ ಫ್ಲೋರೈಡ್ ಹಾನಿಕರ ಅಂಶಗಳು ಕಂಡುಬಂದಿರುವುದರಿಂದ ವಿಜ್ಞಾನಿಗಳ ಶಿಫಾರಸ್ಸಿನಂತೆ ಮೂರನೇ ಹಂತದ ಶುದ್ಧೀಕರಣ ಘಟಕವನ್ನು ಕೂಡಲೇ ಸ್ಥಾಪಿಸಲು ಒತ್ತಾಯಿಸಿದರು.

ಆರು ತಿಂಗಳಿನಿಂದ ಬಾಕಿ ಉಳಿದಿರುವ ಹಾಲಿನ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುಗಡೆ ಮಾಡಿ, ಪ್ರತಿ ಲೀಟರ್ ಹಾಲಿಗೆ ಕನಿಷ್ಟ 50 ರೂ. ಬೆಂಬಲ ಬೆಲೆ ನಿಗದಿ ಮಾಡಬೇಕು ಎಂದು ಅವರು ಮನವಿ ಮಾಡಿದರು.

ಡಿಸಿಸಿ ಬ್ಯಾಂಕ್ ಮೂಲಕ ನೀಡುತ್ತಿದ್ದ ಮಹಿಳಾ ಸ್ತ್ರೀ ಶಕ್ತಿ ಸಂಘಗಳ ಸಾಲ ಮರುಪ್ರಾರಂಭಿಸಿ ಮಹಿಳಾ ಸಬಲೀಕರಣಕ್ಕೆ ನೆರವಾಗಬೇಕು, ಮಾವು ಬೆಳೆಯುಲು ನಿರ್ಬಂಧದಿಂದ ನಷ್ಟ ಅನುಭವಿಸುತ್ತಿರುವ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯ ರೈತರಿಗೆ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿದರು.

ಜಂಗಮಕೋಟೆ ಹೋಬಳಿ ಕೈಗಾರಿಕಾ ಪ್ರದೇಶದ ಜಮೀನುಗಳ ರೈತ ಹೋರಾಟ ಸಮಿತಿ ಹಾಗೂ ರೈತ ಸಂಘದ ಪ್ರಮುಖ ಮುಖಂಡರು ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

Sidlaghatta Silk Cocoon Market-17/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 17/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 539
Qty: 31075 Kg
Mx : ₹ 542
Mn: ₹ 255
Avg: ₹ 449

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 12
Qty: 707 Kg
Mx : ₹ 556
Mn: ₹ 333
Avg: ₹ 487


For Daily Updates WhatsApp ‘HI’ to 7406303366

ನಾಡಪ್ರಭು ಕೆಂಪೇಗೌಡ ಹಾಗೂ ಡಾ.ಫ.ಗು.ಹಳಕಟ್ಟಿ ಜಯಂತಿಗಳ ಪೂರ್ವಭಾವಿ ಸಭೆ

0
Sidlaghatta Kempegowda Jayanti Preparatory Meeting

Sidlaghatta : ರಾಷ್ಟ್ರೀಯ ಮತ್ತು ನಾಡ ಹಬ್ಬಗಳ ಆಚರಣಾ ಸಮಿತಿಯಿಂದ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ನಾಡಪ್ರಭು ಕೆಂಪೇಗೌಡ ಹಾಗೂ ಡಾ.ಫ.ಗು.ಹಳಕಟ್ಟಿ ಅವರ ಜಯಂತಿಯನ್ನು ತಾಲ್ಲೂಕು ಆಡಳಿತದಿಂದ ಆಚರಿಸುವ ಬಗ್ಗೆ ಪೂರ್ವಭಾವಿ ಸಭೆ ನಡೆಯಿತು.

ತಹಶೀಲ್ದಾರ್ ಬಿ.ಎನ್.ಸ್ವಾಮಿ ಮಾತನಾಡಿ, ನಮ್ಮ ಈ ನಾಡಿನ ಮಹಾನ್ ನಾಯಕರು ಯಾರೇ ಆಗಲಿ ಅವರನ್ನು ಒಂದು ಜಾತಿ, ಒಂದು ವರ್ಗ, ಒಂದು ಧರ್ಮಕ್ಕೆ ಸೀಮಿತಗೊಳಿಸಬಾರದು, ಅದರಿಂದ ಅವರ ಮಹತ್ವ, ಶಕ್ತಿಯನ್ನು ನಾವೇ ಕುಂದಿಸಿದಂತಾಗುತ್ತದೆ ಎಂದರು.

ನಾಡಪ್ರಭು ಕೆಂಪೇಗೌಡ ಹಾಗೂ ಡಾ.ಫ.ಗು.ಹಳಕಟ್ಟಿ ಅವರು ಈ ಸಮಾಜಕ್ಕೆ ತನ್ನದೇ ಆದ ಮಹತ್ವ ಕೊಡುಗೆಯನ್ನು ನೀಡಿದ್ದಾರೆ. ಅವರು ಜಾತಿ ಧರ್ಮವನ್ನು ಮೀರಿ ಈ ಸಮಾಜದ ಒಳಿತಿಗಾಗಿ ತಮ್ಮ ಬದುಕನ್ನು ಮುಡುಪಾಗಿಟ್ಟ ಮಹನೀಯರು ಎಂದರು.

ಅವರ ತತ್ವ ಆದರ್ಶ ಬದುಕಿನ ಬಗ್ಗೆ ನಾವು ತಿಳಿದುಕೊಳ್ಳಬೇಕು, ನಮ್ಮ ಮುಂದಿನ ಪೀಳಿಗೆಗೂ ತಿಳಿಸಿಕೊಡುವ ಕೆಲಸ ಆಗಬೇಕಿದೆ. ಅದಕ್ಕಾಗಿ ಈ ಜಯಂತಿಯು ಪೂರಕವಾಗಿ ಅರ್ಥಪೂರ್ಣವಾಗಿ ನಡೆಸಬೇಕೆಂದು ಮನವಿ ಮಾಡಿದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಕಾರಿ ಹೇಮಾವತಿ, ನಗರಸಭೆ ಪೌರಾಯುಕ್ತ ಮೋಹನ್, ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಕೆ.ಎನ್.ಸುಬ್ಬಾರೆಡ್ಡಿ, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಶ್ರೀನಿವಾಸ್, ಗ್ರಾಮಾಂತರ ಠಾಣೆಯ ಎಸ್‌.ಐ ನಾಗರಾಜ್, ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಒಕ್ಕಲಿಗರ ಯುವ ವೇದಿಕೆಯ ಅಧ್ಯಕ್ಷ ಜೆ.ಎಸ್.ವೆಂಕಟಸ್ವಾಮಿ ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

ಲಾರಿ ಡಿಕ್ಕಿ ಹೊಡೆದು ಉರುಳಿ ಬಿದ್ದ ಹೈ ಮಾಸ್ಟ್ ದೀಪದ ಕಂಬ

0
Sidlaghatta High Mast Lamp Post hit by lorry

Sidlaghatta : ಶಿಡ್ಲಘಟ್ಟ ನಗರದ ದಿಬ್ಬೂರಹಳ್ಳಿ ಬೈಪಾಸ್ ರಸ್ತೆಯ ಪೂಜಮ್ಮ ದೇವಾಲಯ ವೃತ್ತದಲ್ಲಿ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸೋಮವಾರ ಮುಂಜಾನೆ ಹೈ ಮಾಸ್ಟ್ ದೀಪದ ಕಂಬ ಉರುಳಿ ಬಿದ್ದಿದೆ. ಘಟನೆಯು ಮುಂಜಾನೆ ನಡೆದಿದ್ದು ಈ ಸಮಯದಲ್ಲಿ ಅಲ್ಲಿ ಅಷ್ಟೇನೂ ಸಂಚಾರ ಇರುವುದಿಲ್ಲವಾದ್ದರಿಂದ ಸಂಭವನೀಯ ಅಪಾಯ ತಪ್ಪಿದೆ.

ಸೋಮವಾರ ಮುಂಜಾನೆ ಸುಮಾರು 4 ಗಂಟೆಗೆ ಲಾರಿಯೊಂದು ಅತಿ ವೇಗವಾಗಿ ಬಂದು ಹೈ ಮಾಸ್ಟ್ ವಿದ್ಯುತ್ ದೀಪಗಳ ಕಂಬಕ್ಕೆ ಡಿಕ್ಕಿ ಹೊಡೆದಿದ್ದು ಹೈ ಮಾಸ್ಟ್ ವಿದ್ಯುತ್ ದೀಪಗಳ ಕಂಬವು ಉರುಳಿ ಬಿದ್ದಿರುವ ದೃಶ್ಯವು ಅಲ್ಲಿನ ಸಿಸಿ ಕ್ಯಾಮರಾಗಳಲ್ಲಿ ಸೆರೆಯಾಗಿದೆ.

ಸಫಾಯಿ ಕರ್ಮಚಾರಿ ಕಾಲೋನಿ ಸಮಗ್ರ ಅಭಿವೃದ್ದಿ ಯೋಜನೆಯಡಿ ಈ ಹೈ ಮಾಸ್ಟ್ ವಿದ್ಯುತ್ ದೀಪದ ಕಂಬವನ್ನು ಕಳೆದ ವರ್ಷವಷ್ಟೆ ಅಳವಡಿಸಲಾಗಿತ್ತು.

ಸ್ಥಳಕ್ಕೆ ನಗರಸಭೆ ಅಧ್ಯಕ್ಷ ಎಂ.ವೆಂಕಟಸ್ವಾಮಿ ಭೇಟಿ ನೀಡಿ ಪರಿಶೀಲಿಸಿದ್ದು ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು. ಸಿಸಿ ಕ್ಯಾಮರಾದಲ್ಲಿ ಸೆರೆಯಾದ ದೃಶ್ಯಗಳನ್ನು ಪರಿಶೀಲಿಸಿದರು. ಕೂಡಲೆ ನಗರಸಭೆ ಸಿಬ್ಬಂದಿಯಿಂದ ವಿದ್ಯುತ್ ಕಂಬವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುಕೂಲ ಮಾಡಿಕೊಟ್ಟರು.

ಲಾರಿ ಮತ್ತು ಚಾಲಕನ ವಿಳಾಸ ಪತ್ತೆ ಮಾಡಿ ದೂರು ನೀಡುವಂತೆ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದ ಅವರು, ಸಧ್ಯಕ್ಕೆ ಘಟನೆ ನಡೆದ ಸಮಯದಲ್ಲಿ ಸಂಚಾರ ಇಲ್ಲವಾದ್ದರಿಂದ ಏನೂ ಅನಾಹುತ ನಡೆದಿಲ್ಲ ಎಂದು ಸಮಾಧಾನಪಟ್ಟರು.

ಸಾರ್ವಜನಿಕರ ಹಾಗೂ ಉತ್ತಮ ಸಂಚಾರದ ದೃಷ್ಟಿಯಿಂದ ಈ ಹೈ ಮಾಸ್ಟ್ ವಿದ್ಯುತ್ ದೀಪವನ್ನು ಮತ್ತೆ ಅಳವಡಿಸಲಾಗುವುದು ಎಂದು ಹೇಳಿದರು.

ಈ ವೇಳೆ ಸ್ಥಳೀಯ ನಿವಾಸಿಗಳು ಬೈಪಾಸ್ ರಸ್ತೆಯಲ್ಲಿ ವಾಹನಗಳ ವೇಗವನ್ನು ನಿಯಂತ್ರಿಸಲು ಹಾಗೂ ಇಂತಹ ಸಂಭವನೀಯ ಅಪಘಾತ ಮತ್ತು ಅಪಾಯಗಳನ್ನು ತಪ್ಪಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ನಗರಸಭೆ ಅಧಿಕಾರಿ, ಪೊಲೀಸರಲ್ಲಿ ಮನವಿ ಮಾಡಿದರು.

For Daily Updates WhatsApp ‘HI’ to 7406303366

Sidlaghatta Silk Cocoon Market-16/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 16/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 536
Qty: 30172 Kg
Mx : ₹ 565
Mn: ₹ 240
Avg: ₹ 447

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 07
Qty: 445 Kg
Mx : ₹ 558
Mn: ₹ 436
Avg: ₹ 514


For Daily Updates WhatsApp ‘HI’ to 7406303366

error: Content is protected !!