Home Blog Page 1044

ಗಂಜಿಗುಂಟೆ ಗ್ರಾಮದಲ್ಲಿ ಜನ–ಜಲ ಜಾಗೃತಿ ಕಾರ್ಯಕ್ರಮ

0

ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆ ಗ್ರಾಮದಲ್ಲಿ ಸೋಮವಾರ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು ಸಾರ್ವಜನರನ್ನುದ್ದೇಶಿಸಿ ಮಾತನಾಡಿ ಜನ–ಜಲ ಜಾಗೃತಿ ಮೂಡಿಸಿದರು.

ಶ್ವಾಸಕೋಶ ತೊಂದರೆಗೆ ಉಚಿತ ತಪಾಸಣಾ ಶಿಬಿರ

0

ದಿ ರಿಚ್‌ಮಂಡ್‌ ಫೆಲೋಷಿಪ್‌ ಸೊಸೈಟಿ ಪ್ರಗತಿ ಗ್ರಾಮೀಣ ಶಾಖೆ ಮತ್ತು ಅಸೋಸಿಯೇಷನ್‌ ಆಫ್‌ ಆಕ್ಯುಪೇಷನಲ್‌ ಹೆಲ್ತ್‌ ಸಹಯೋಗದಲ್ಲಿ ಭಾನುವಾರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶ್ವಾಸಕೋಶ ತೊಂದರೆಗೆ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ಸುಮಾರು 90 ಮಂದಿ ಉಚಿತ ಚಿಕಿತ್ಸೆ ಮತ್ತು ಔಷಧಿಗಳನ್ನು ಪಡೆದರು. ಈ ಸಂದರ್ಭದಲ್ಲಿ ದಿ ರಿಚ್‌ಮಂಡ್‌ ಫೆಲೋಷಿಪ್‌ ಸೊಸೈಟಿ ಪ್ರಗತಿ ಗ್ರಾಮೀಣ ಶಾಖೆ ವತಿಯಿಂದ 215 ಮಂದಿ ಮೂರ್ಚೆ ಮತ್ತು ಮಾನಸಿಕ ರೋಗಿಗಳಿಗೆ ಔಷಧಿಗಳನ್ನು ವಿತರಿಸಲಾಯಿತು.
ಶ್ವಾಸಕೋಶ ತಜ್ಞೆ ಡಾ.ಶಶಿಕಲಾ, ಪ್ರೇಮ್‌ಕುಮಾರ್‌, ಶರಣ್‌, ಡಾ.ಜಿ.ಎಸ್‌.ಪಾಲಾಕ್ಷ, ಡಾ.ಮಲ್ಲಿಕಾರ್ಜುನಯ್ಯ, ದಿ ರಿಚ್‌ಮಂಡ್‌ ಫೆಲೋಷಿಪ್‌ ಸೊಸೈಟಿ ಪ್ರಗತಿ ಗ್ರಾಮೀಣ ಶಾಖೆ ಅಧ್ಯಕ್ಷ ಎಸ್‌.ಎಂ.ನಾರಾಯಣಸ್ವಾಮಿ, ಉಪಾಧ್ಯಕ್ಷ ಲಕ್ಷ್ಮಣಾಚಾರ್‌, ಪದ್ಮನಾಭ, ಎಸ್‌.ಸೋಮಶೇಖರ್‌, ಗುಂಡೂರಾವ್‌, ದೇವರಾಜ್‌, ರಮೇಶ್‌, ನಾಗರಾಜ್‌, ಪಿ.ಗೋಪಿನಾಥ್‌, ಬೈರಾರೆಡ್ಡಿ, ನಾನಾಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ದಿಬ್ಬೂರಹಳ್ಳಿ ಗ್ರಾಮದಲ್ಲಿ ಜನ–ಜಲಜಾಗೃತಿ ಜಾಥಾ

0

ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಗ್ರಾಮದಲ್ಲಿ ಶನಿವಾರ ಶಾಶ್ವತ ನೀರಾವರಿ ಹೋರಾಟ ಸಮಿತಿ ಸದಸ್ಯರು ಪಾದಯಾತ್ರೆ ನಡೆಸಿ ಜನ–ಜಲಜಾಗೃತಿ ಜಾಥಾ ನಡೆಸಿದರು.

ಶಿಡ್ಲಘಟ್ಟದಲ್ಲಿ ಚಳಿಗಾಲದ ಪ್ರಾರಂಭ

0

ಶಿಡ್ಲಘಟ್ಟದಲ್ಲಿ ಗುರುವಾರ ಮುಂಜಾನೆ ಚಳಿಗಾಲದ ಪ್ರಾರಂಭದ ಮುನ್ಸೂಚನೆಯಂತೆ ಮಂಜಿನ ಹೊದಿಕೆಯನ್ನು ಹೊದ್ದುಕೊಂಡು ಗಿರಿಧಾಮಮದ ಅನುಭವವನ್ನು ನೀಡಿತ್ತು.

ರೇಷ್ಮೆ ಕೃಷಿ ಪರಿಶೀಲಿಸಲು ಸಿ.ಇ.ಒ ಭೇಟಿ

0

ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕಾವೇರಿ ಅವರು ಗುರುವಾರ ರೇಷ್ಮೆ ಇಲಾಖೆಯ ಅಧಿಕಾರಿಗಳೊಂದಿಗೆ ರೇಷ್ಮೆ ಕೃಷಿ ಮತ್ತು ರೇಷ್ಮೆ ಗೂಡಿನ ವಿವಿಧ ಹಂತಗಳ ಬೆಳೆಗಳನ್ನು ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಪರಿಶೀಲಿಸಿದರು.
ತಾಲ್ಲೂಕಿನ ಬೆಳ್ಳೂಟಿ ವೆಂಕಟೇಶ್‌ ಅವರ ಚಾಕಿ ಸಾಕಾಣಿಕಾ ಕೇಂದ್ರ, ಬೆಳ್ಳೂಟಿ ಗ್ರಾಮದ ವಿವಿಧ ರೈತರ ಹುಳು ಸಾಕಾಣಿಕಾ ಮನೆಗಳು, ಹಿತ್ತಲಹಳ್ಳಿಯ ಎಚ್‌.ಕೆ.ಸುರೇಶ್‌ ಮತ್ತು ಎಚ್‌.ಜಿ.ಗೋಪಾಲಗೌಡ ಅವರ ಹಿಪ್ಪುನೇರಳೆ ತೋಟಗಳು, ರೇಷ್ಮೆ ಗೂಡಿನ ಮಾರುಕಟ್ಟೆಗೆ ಭೇಟಿ ನೀಡಿ ರೇಷ್ಮೆ ಕೃಷಿಯ ಬಗ್ಗೆ ಮಾಹಿತಿ ಪಡೆದರು.
ಈ ಸಂದರ್ಭದಲ್ಲಿ ರೈತರು ಇಲಾಖೆಯಿಂದ ಔಷಧಿಗಳನ್ನು ವಿತರಿಸುವಂತೆ ಕೋರಿದರು.
ಜಿಲ್ಲಾ ಪಂಚಾಯತಿ ರೇಷ್ಮೆ ಉಪನಿರ್ದೇಶಕ ಬಿ.ಆರ್‌.ನಾಗಭೂಷಣ್‌, ಗ್ರೇನೇಜ್‌ ವಿಭಾಗದ ಉಪನಿರ್ದೇಶಕ ಮಹಾಲಿಂಗಪ್ಪ, ಸಹಾಯಕ ನಿರ್ದೇಶಕ ಚಂದ್ರಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಪಟಾಕಿಗಳಿಗೆ ಸುರಿಯುವ ಹಣವನ್ನು ಬಡವರ ಏಳಿಗೆಗೆ ಉಪಯೋಗಿಸಿ

0

‘ಪಟಾಕಿಗಳಿಗೆ ಸುರಿಯುವ ಹಣವನ್ನು ಬಡವರ ಏಳಿಗೆಗೆ ಉಪಯೋಗಿಸಿ’, ‘ದೀಪಾವಳಿ ಅಜ್ಞಾನವನ್ನು ತೊಲಗಿಸಲಿ, ಪಟಾಕಿಗಳು ನಿಮ್ಮ ಬಾಳಿಗೆ ಅಂಧಕಾರವಾಗದಿರಲಿ’, ‘ದುಡ್ಡು ನಿಮ್ಮದೇ, ಪಟಾಕಿ ನಿಮ್ಮದೇ, ಆರದಿರಲಿ ಬೆಳಕು’, ‘ಎಚ್ಚರವಿರಲಿ, ಜನಸಂಚಾರವಿರುವಲ್ಲಿ ಪಟಾಕಿ ಸಿಡಿಸಬಾರದು’, ‘ಶಬ್ಧಮಾಲಿನ್ಯ ಮಾಡದಿರಿ’ ಮುಂತಾದ ಘೋಷಣೆಗಳ ಫಲಕಗಳನ್ನು ಹಿಡಿದುಕೊಂಡು ಘೋಷಣೆಗಳನ್ನು ಕೂಗುತ್ತಾ ಡಾಲ್ಫಿನ್‌ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಾಥಾ ನಡೆಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶಾಲಾ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ನಡೆಸಿದ ಶಾಲಾ ವಿದ್ಯಾರ್ಥಿಗಳು ಪಟಾಕಿ ಸಿಡಿಸುವುದರಿಂದಾಗುವ ಅನಾಹುತಗಳು, ಹೊಗೆ, ಶಬ್ಧ ಮಾಲಿನ್ಯ, ಹಣ ಪೋಲಾಗುವುದನ್ನು ತಡೆಯುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪಟಾಕಿಯಿಂದ ಅನೇಕರು ಕಣ್ಣು ಕಳೆದುಕೊಂಡ ನಿದರ್ಶನಗಳಿವೆ. ಹಣತೆಯನ್ನು ಹಚ್ಚುವ ಮೂಲಕ ಶಾಂತಿಯುತವಾಗಿ ಬೆಳಕಿನ ಹಬ್ಬವನ್ನು ಆಚರಿಸೋಣ ಎಂದು ಅರಿವು ಮೂಡಿಸುವ ಪ್ರಯತ್ನ ಮಾಡಿದರು.
‘ನಮ್ಮ ಶಾಲೆಯ ವಿದ್ಯಾರ್ಥಿಗಳು ಈ ಬಾರಿ ಪಟಾಕಿ ಸಿಡಿಸುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದಾರೆ. ಈ ಮೂಲಕ ಶಬ್ಧ ಹಾಗೂ ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ದಿಕ್ಕಿನಲ್ಲಿ ಸಮಾಜಕ್ಕೆ ಅಳಿಲು ಸೇವೆಯನ್ನು ಸಲ್ಲಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದೇವೆ. ಈ ಸಂದೇಶವನ್ನು ಸಮಾಜಕ್ಕೂ ಬಿತ್ತರಿಸುವ ನಿಟ್ಟಿನಲ್ಲಿ ಈ ದಿನ ಜಾಥಾ ಹಮ್ಮಿಕೊಂಡಿದ್ದೇವೆ. ಆರೋಗ್ಯ ಹಾಳು ಮಾಡಿಕೊಳ್ಳುವುದು ಮತ್ತು ಪಟಾಕಿ ಸಿಡಿತದಿಂದಾಗುವ ಅವಘಡಗಳನ್ನು ತಡೆಯಿರಿ. ಪಟಾಕಿಗೆ ಖರ್ಚು ಮಾಡುವ ಹಣದಿಂದ ಪುಸ್ತಕ ಕೊಳ್ಳಿ, ಬಡವರಿಗೆ ಸಹಾಯ ಮಾಡಿ ಎಂದು ನಾವೂ ಪಾಲಿಸುತ್ತಾ ಎಲ್ಲರಿಗೂ ತಿಳಿಸುತ್ತಿದ್ದೇವೆ’ ಎಂದು ಡಾಲ್ಫಿನ್‌ ವಿದ್ಯಾಸಂಸ್ಥೆಯ ಶಿಕ್ಷಕಿ ಸುನೀತಾ ತಿಳಿಸಿದರು.

ದಿಬ್ಬೂರಹಳ್ಳಿಯ ಗಂಗಪ್ಪ ಕುರಿಯ ಚರ್ಮದಿಂದ ತಾನೇ ತಯಾರಿಸಿದ ವಿಶಿಷ್ಠವಾದ ವಾದ್ಯ

0

ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿಯ ಗಂಗಪ್ಪ ಕುರಿಯ ಚರ್ಮದಿಂದ ತಾನೇ ತಯಾರಿಸಿದ ವಿಶಿಷ್ಠವಾದ ವಾದ್ಯದೊಂದಿಗೆ ಪಟ್ಟಣದಲ್ಲಿ ಸೋಮವಾರ ತಿರುಗಾಡುತ್ತಾ ಎಲ್ಲರ ಆಕರ್ಷಣೆಯ ಕೇಂದ್ರವಾಗಿದ್ದರು.

ಶಿಡ್ಲಘಟ್ಟ ತಾಲ್ಲೂಕಿನ ಶಿಕ್ಷಕ ವೆಂಕಟರೆಡ್ಡಿರವರಿಗೆ ಸನ್ಮಾನ

0

ಶಿಡ್ಲಘಟ್ಟ ತಾಲ್ಲೂಕಿನ ಶಿಕ್ಷಕ ವೆಂಕಟರೆಡ್ಡಿ ಈಚೆಗೆ ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ವಿದ್ಯಾರ್ಥಿಗಳ ಪಂಚಮುಖಿ ವ್ಯಕ್ತಿತ್ವ ವಿಕಸನ ಶಿಬಿರದಲ್ಲಿ ಪಾಲ್ಗೊಂಡು ಯೋಗ ಮತ್ತು ಆರೋಗ್ಯ ಶಿಕ್ಷಣವನ್ನು ನೀಡಿದ್ದಕ್ಕೆ ಸನ್ಮಾನಿಸಲಾಯಿತು.

ನೀರಿನ ಬಿಕ್ಕಟ್ಟು ಗಂಭೀರ ಸ್ವರೂಪ ಪಡೆಯಲಿದೆ

0

ನವೆಂಬರ್‌ ತಿಂಗಳಿನಿಂದ ನೀರಿನ ಬಿಕ್ಕಟ್ಟು ಗಂಭೀರ ಸ್ವರೂಪ ಪಡೆಯಲಿದ್ದು, ಅಧಿಕಾರಿಗಳು ಈ ಬಗ್ಗೆ ಮುಂದಾಲೋಚನಾ ಕ್ರಮಗಳನ್ನು ಕೈಗೊಂಡು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಸಂಸದ ಕೆ.ಎಚ್‌.ಮುನಿಯಪ್ಪ ಸೂಚಿಸಿದರು.
ಪಟ್ಟಣದ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ತಾಲ್ಲೂಕು ಮಟ್ಟದ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.
ತಾಲ್ಲೂಕಿನಾದ್ಯಂತ ಕೊರೆಸಿರುವ 72 ಕೊಳವೆಬಾವಿಗಳಲ್ಲಿ ನೀರು ಸಿಕ್ಕಿದ್ದು, ಸುಮಾರು ಒಂದು ವರ್ಷದಿಂದ ಮೋಟಾರ್‌ ಪಂಪು, ಪೈಪ್‌ಲೈನ್‌ ಹಾಗೂ ವಿದ್ಯುತ್‌ ಸಂಪರ್ಕ ಒದಗಿಸಿಲ್ಲ ಎಂದು ಶಾಸಕ ಎಂ.ರಾಜಣ್ಣ ದೂರಿದ ಹಿನ್ನೆಲೆಯಲ್ಲಿ, ಸಂಸದ ಕೆ.ಎಚ್‌.ಮುನಿಯಪ್ಪ ಅಧಿಕಾರಿಗಳಿಗೆ ಕ್ಷಿಪ್ರ ಗತಿಯಲ್ಲಿ ತೊಂದರೆಗಳನ್ನು ಸರಿಪಡಿಸಿಕೊಂಡು ನೀರಿನ ಅಭಾವವನ್ನು ಪರಿಹರಿಸಲು ಸೂಚಿಸಿದರು.
ತಾಲ್ಲೂಕು ಪಂಚಾಯತಿ ಸದಸ್ಯ ನಾರಾಯಣಸ್ವಾಮಿ ಮಾತನಾಡಿ, ತಾಲ್ಲೂಕಿನ ಉತ್ತರ ಭಾಗದಲ್ಲಿ ಫ್ಲೋರೈಡ್‌ ಅಂಶ ಮಿತಿಮೀರಿದೆ. ಪ್ರತಿಯೊಂದು ಕೊಳವೆ ಬಾವಿಯ ನೀರನ್ನೂ ಶುದ್ಧೀಕರಿಸಲು ಘಟಕಗಳನ್ನು ನಿರ್ಮಿಸುವ ಅಗತ್ಯವನ್ನು ಪ್ರಸ್ತಾಪಿಸಿದಾಗ, ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಮಾತನಾಡಿ, ಅಧಿಕಾರಿಗಳು ಕುಡಿಯಲು ಬಳಸುವ 600 ಅಡಿಗೂ ಆಳದಿಂದ ನೀರೆತ್ತುವ ಎಲ್ಲಾ ಕೊಳವೆ ಬಾವಿಗೂ ಶುದ್ಧೀಕರಣ ಘಟಕ ಅಳವಡಿಸಬೇಕು ಎಂದರು.
ಖಾಸಗಿ ಕೊಳವೆ ಬಾವಿಗಳಿಗೆ ಒಂದು ಸಾವಿರ ಗ್ಯಾಲನ್‌ ನೀರಿಗೆ 10 ಸಾವಿರ ರೂಗಳನ್ನು ಸರ್ಕಾರ ನಿಗದಿಪಡಿಸಿರುವುದು ಸಾಲದು ಕನಿಷ್ಠ 2 ಲಕ್ಷ ರೂಗಳಾದರೂ ನೀಡಬೇಕು ಹಾಗೂ ಒತ್ತಾಯಪೂರ್ವಕವಾಗಿ ಅವರಿಂದ ನೀರು ಪಡೆಯುವುದನ್ನು ನಿಲ್ಲಿಸಬೇಕೆಂದು ಜಿಲ್ಲಾ ಪಂಚಾಯತಿ ಸದಸ್ಯೆಸ್‌.ಎಂ.ನಾರಾಯಣಸ್ವಾಮಿ ಮತ್ತು ತಾಲ್ಲೂಕು ಪಂಚಾಯತಿ ಉಪಾಧ್ಯಕ್ಷ ಡಿ.ಎಸ್‌.ಎನ್‌.ರಾಜು ಒತ್ತಾಯಿಸಿದಾಗ, ಸರ್ಕಾರಕ್ಕೆ ಈ ಬಗ್ಗೆ ವರದಿ ಸಲ್ಲಿಸುವುದಾಗಿ ಸಂಸದ ಕೆ.ಎಚ್‌.ಮುನಿಯಪ್ಪ ಸಭೆಗೆ ತಿಳಿಸಿದರು.
ಜಿಲ್ಲಾಧಿಕಾರಿ ಡಾ.ವೆಂಕಟೇಶ್‌ ಮಾತನಾಡಿ, ಬಯಲು ಸೀಮೆ ಪ್ರದೇಶದಲ್ಲಿ ನೀರಿನ ಅಭಾವ ಹೆಚ್ಚಾಗಿದ್ದು, ಕೆರೆ ಒತ್ತುವರಿ, ಮರಳು ದಂಧೆ, ನೀಲಗಿರಿಗೆ ಅಧಿಕಾರಿಗಳು ಅವಕಾಶ ನೀಡಬಾರದು. ಕೆರೆಗಳಲ್ಲಿರುವ ಜಾಲಿಮರ ಹಾಗೂ ಬಿದಿರು ತೆಗೆಯಬೇಕು ಎಂದು ಸೂಚಿಸಿದರು.
ಸಾರ್ವಜನಿಕ ಆಸ್ಪತ್ರೆಯ ನೀರಿನ ಸಮಸ್ಯೆಯ ಬಗ್ಗೆ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅನಿಲ್‌ ಕುಮಾರ್‌ ಪ್ರಸ್ತಾಪಿಸಿದಾಗ, ಶಾಸಕ ಎಂ.ರಾಜಣ್ಣ ಕೊಳವೆ ಬಾವಿಯನ್ನು ಕೊರೆಸಲು ಜಿಲ್ಲಾ ಪಂಚಾಯತಿ ಎಂಜಿನಿಯರ್‌ಗೆ ಸೂಚಿಸಿದರು.
‘ಅಕ್ರಮವಾಗಿ ರಾತ್ರಿ ವೇಳೆ ಟ್ರಾಕ್ಟರ್‌ ಮತ್ತು ಲಾರಿಗಳಲ್ಲಿ ಮರಳು ಸಾಗಾಣಿಕೆ ತಾಲ್ಲೂಕಿನಲ್ಲಿ ನಡೆದಿದ್ದರೂ ಪೊಲೀಸ್‌, ಗಣಿ ಮತ್ತು ಭೂವಿಜ್ಞಾನ ಹಾಗೂ ಕಂದಾಯ ಇಲಾಖೆ ಜಾಣ ಕುರುಡನ್ನು ಪ್ರದರ್ಶಿಸುತ್ತಿದೆ. ಇಲಾಖೆಯ ಅಧಿಕಾರಿಗಳು ಈ ದಂಧೆಯಲ್ಲಿ ಶಾಮೀಲಾಗಿರುವುದು ಸ್ಪಷ್ಟವಾಗಿದೆ. ರೈತರು ಕಟ್ಟುವ ಮನೆಗಳಿಗೆ ಹಾಗೂ ಸರ್ಕಾರದಿಂದ ಅನುದಾನ ಪಡೆದ ಫಲಾನುಭವಿಗಳು ಕಟ್ಟುವ ಮನೆಗಳಿಗೆ ಮರಳು ಸಿಗುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು’ ಎಂದು ಜಿಲ್ಲಾ ಪಂಚಾಯತಿ ಸದಸ್ಯರಾದ ಎಸ್‌.ಎಂ.ನಾರಾಯಣಸ್ವಾಮಿ ಮತ್ತು ನಂದನಂ ಶ್ರೀರಾಮರೆಡ್ಡಿ ಒತ್ತಾಯಿಸಿದರು. ಸಭೆಯಲ್ಲಿ ಹಾಜರಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳು ತಮ್ಮ ಇಲಾಖೆಗಳ ಪ್ರಗತಿಯ ಬಗ್ಗೆ ಮಾಹಿತಿ ನೀಡಿದರು.
ಸಂಸದ ಕೆ.ಎಚ್‌.ಮುನಿಯಪ್ಪ, ಶಾಸಕ ಎಂ.ರಾಜಣ್ಣ, ಜಿಲ್ಲಾಧಿಕಾರಿ ಡಾ.ವೆಂಕಟೇಶ್‌, ಪೊಲೀಸ್‌ ಎಸ್‌.ಪಿ ದಿವ್ಯಾ ಗೋಪಿನಾಥ್‌, ಜಿಲ್ಲಾ ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಕಾವೇರಿ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.

ದಿಬ್ಬೂರಹಳ್ಳಿ ಪೋಲೀಸ್‌ಠಾಣೆಗೆ ಮುತ್ತಿಗೆ

0

ಯಾವುದೇ ಜಾತಿ ನಿಂದನೆ(ಅಟ್ರಾಸಿಟಿ) ದೂರುಗಳನ್ನು ಪೋಲೀಸರು ಸೂಕ್ತ ತನಿಖೆ ನಡೆಸಿದ ನಂತರವೆ ಪ್ರಕರಣಗಳನ್ನು ದಾಖಲು ಮಾಡುವಂತೆ ಒತ್ತಾಯಿಸಿ ಸವರ್ಣಿಯರು, ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ಯುವಸೇನೆ ನೇತೃತ್ವದಲ್ಲಿ ದಿಬ್ಬೂರಹಳ್ಳಿ ಪೋಲೀಸ್ ಠಾಣೆಗೆ ಮುತ್ತಿಗೆ ಹಾಕಿ ಭಾನುವಾರ ಪ್ರತಿಭಟಿಸಿದರು.

ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಪೋಲೀಸ್‌ಠಾಣೆಗೆ ಭಾನುವಾರ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ಯುವಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟಿಸಿದ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಅದ್ಯಕ್ಷ ನಾರಾಯಣಸ್ವಾಮಿ ಮಾತನಾಡಿದರು
ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಪೋಲೀಸ್‌ಠಾಣೆಗೆ ಭಾನುವಾರ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ಯುವಸೇನೆ ನೇತೃತ್ವದಲ್ಲಿ ಮುತ್ತಿಗೆ ಹಾಕಿ ಪ್ರತಿಭಟಿಸಿದ ಸಂದರ್ಭದಲ್ಲಿ ತಾಲ್ಲೂಕು ಒಕ್ಕಲಿಗರ ಸಂಘದ ಅದ್ಯಕ್ಷ ನಾರಾಯಣಸ್ವಾಮಿ ಮಾತನಾಡಿದರು
ಇತ್ತೀಚೆಗೆ ದ್ಯಾವರಹಳ್ಳಿ ಗ್ರಾಮದ ದಲಿತ ಕೋಮಿಗೆ ಸೇರಿದ ಸುರೇಶ್ ಎಂಬುವರು ಅದೇ ಗ್ರಾಮದ ೯ ಜನ ಸವರ್ಣಿಯರ ಮೇಲೆ ಜಾತಿ ನಿಂದನೆ(ಅಟ್ರಾಸಿಟಿ) ಪ್ರಕರಣವನ್ನು ದಿಬ್ಬೂರಹಳ್ಳಿ ಪೋಲೀಸ್ ಠಾಣೆಯಲ್ಲಿ ದಾಖಲಿಸಿದ ಹಿನ್ನೆಲೆಯಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ ಹಾಗೂ ಯುವಸೇನೆ ನೇತೃತ್ವದಲ್ಲಿ ನೂರಾರು ಸವರ್ಣಿಯರು ಮುತ್ತಿಗೆ ಹಾಕಿ ಪ್ರತಿಭಟಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಒಕ್ಕಲಿಗ ಯುವ ಸೇನೆ ತಾಲ್ಲೂಕು ಅಧ್ಯಕ್ಷ ವೆಂಕಟಸ್ವಾಮಿ ಮಾತನಾಡಿ, ವಕ್ಕಲುತನ ಮಾಡಿ ಬದಕುತ್ತಿರುವ ನಿರಪರಾಧಿ ಒಕ್ಕಲಿಗರ ಮೇಲೆ ಕೆಲವರ ಕುಮ್ಮಕ್ಕು ಹಾಗೂ ಒತ್ತಾಯದಿಂದ ಪ್ರಕರಣಗಳನ್ನು ದಾಖಲು ಮಾಡುವುದನ್ನು ಬಿಟ್ಟು ಯಾರೇ ಪ್ರಕರಣ ನೀಡಿದರೂ ಸಹ ಸತ್ಯಸತ್ಯತೆಗಳನ್ನು ಪರಿಶೀಲಿಸಿ ತಪ್ಪಿಸ್ತರ ವಿರುದ್ದ ಮಾತ್ರ ಪ್ರಕರಣ ದಾಖಲಿಸಿ. ತನಿಖೆ ನಡೆಸದೆ ನಿರಾಪರಾಧಿಗಳ ಮೇಲೆ ಪ್ರಕರಣಗಳನ್ನು ನಡೆಸಿದ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಉಘ್ರ ಪ್ರತಿಭಟನೆ ನಡೆಸಲಾಗುವುದೆಂದರು.
ತಾಲ್ಲೂಕು ಒಕ್ಕಲಿಗರ ಸಂಘದ ಅದ್ಯಕ್ಷ ಬಿ.ನಾರಾಯಣಸ್ವಾಮಿ ಮಾತನಾಡಿ ಸವರ್ಣಿಯರ ಮೇಲೆ ವಿನಾಕಾರಣ ಜಾತಿ ನಿಂದನೆ(ಅಟ್ರಾಸಿಟಿ) ಪ್ರಕರಣವನ್ನು ಪೋಲೀಸರು ನೊಂದಾವಣೆ ಮಾಡುತ್ತಿದ್ದಾರೆ. ಗಲಭೆ ಸಂದರ್ಭದಲ್ಲಿ ಹಾಜರಿಲ್ಲದವರ ಮೇಲೆ ಯಾವುದೇ ರಾಜಕೀಯ ಉದ್ದೇಶ ಹಾಗೂ ದ್ವೇಷದಿಂದ ನೀಡುವ ದೂರಿಗೆ ಪೋಲೀಸರು ಬೆಲೆ ನೀಡಿ ಪ್ರಕರಣಗಳನ್ನು ದಾಖಲು ಮಾಡಬಾರದು ಎಧರು.
ಸರ್ಕಲ್‌ ಇನ್ಸ್‌ಪೆಕ್ಟರ್‌ ಶ್ರೀನಿವಾಸಮೂರ್ತಿ ಮಾತನಾಡಿ ಬೇರೆ ಇಲಾಖೆಯಲ್ಲಿ ದೂರು ಬಂದ ನಂತರ ತನಿಖೆ ಮಾಡಿ ನಂತರ ಪ್ರಕರಣ ದಾಖಲಿಸಿಕೊಳ್ಳುತ್ತಾರೆ. ಆದರೆ ನಮ್ಮ ಇಲಾಖೆಯಲ್ಲಿ ದೂರು ಬಂದ ತಕ್ಷಣ ಪ್ರಕರಣ ದಾಖಲಿಸಿಕೊಂಡು ನಂತರ ತನಿಖೆ ಮಾಡುತ್ತೇವೆ. ತನಿಖೆಯಲ್ಲಿ ದೃಢಪಡದ ಪಕ್ಷದಲ್ಲಿ ಸುಳ್ಳು ಪ್ರಕರಣ ಎಂದು ಕೈಬಿಡಲಾಗುತ್ತದೆ. ಅದೇ ರೀತಿ ದೂರು ಬಂದ ನಂತರ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಯಾವುದೇ ಕಾರಣಕ್ಕೂ ತನಿಖೆ ಮಾಡುವರೆಗೂ ಯಾರನ್ನೂ ಬಂಧಿಸುವುದಿಲ್ಲ ಎಂದು ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ಒಕ್ಕಲಿಗರ ಯುವ ಸೇನೆ ಉಪಾಧ್ಯಕ್ಷ ಪ್ರಭಾಕರ್, ತಾಲ್ಲೂಕು ಕಾರ್ಯಾಧ್ಯಕ್ಷ ಪ್ರಸನ್ನ, ನಗರಾಧ್ಯಕ್ಷ ಪುರುಷೋತ್ತಮ್, ನಗರ ಘಟಕ ಕಾರ್ಯದರ್ಶಿ ಮಂಜುನಾಥ್, ಪ್ರತಾಪ್, ಪ್ರಕಾಶ್, ಹರೀಶ್, ಗಂಗಾಧರ, ದೇವರಾಜ್, ಮುನಿರಾಜು, ಸೀನಪ್ಪ, ಕೇಶವಮೂರ್ತಿ, ಜಯರಾಂ, ರಘು, ಬಾಲಿ, ಮನೋಹರ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.