26.1 C
Sidlaghatta
Thursday, December 25, 2025
Home Blog Page 14

Sidlaghatta Silk Cocoon Market-09/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 09/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 296
Qty: 15745 Kg
Mx : 710
Mn: 410
Avg: 620

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 06
Qty: 307 Kg
Mx : ₹ 779
Mn: ₹ 633
Avg: ₹ 744


For Daily Updates WhatsApp ‘HI’ to 7406303366

ಕಾಂಗ್ರೆಸ್ ದೇಶಕ್ಕೆ ಕಂಟಕ: ಡಾ. ಕೆ. ಸುಧಾಕರ್

0
Sidlghatta BJP Meeting

Sidlaghatta, Chikkaballapur : ಶಿಡ್ಲಘಟ್ಟ ನಗರದಲ್ಲಿನ ಬಿಜೆಪಿ ಸೇವಾ ಸೌಧದಲ್ಲಿ ಶನಿವಾರ ನಡೆದ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಚುನಾವಣಾ ಸಂಚಾಲಕರ ಸಭೆಯಲ್ಲಿ ಮಾತನಾಡಿದ ಸಂಸದ ಡಾ. ಕೆ. ಸುಧಾಕರ್ ಅವರು, ಕಾಂಗ್ರೆಸ್ ಪಕ್ಷದ ನಿಲುವುಗಳು ರಾಷ್ಟ್ರದ ಏಕತೆಯ ವಿರುದ್ಧವಾಗಿವೆ ಎಂದು ಕಟು ಟೀಕೆ ಮಾಡಿದ್ದಾರೆ.

“ಕಾಂಗ್ರೆಸ್ ಪಕ್ಷವು ರಾಷ್ಟ್ರಗೀತೆಯನ್ನೇ ವಿರೋಧಿಸಿ, ದೇಶ ವಿಭಜನೆಗೆ ಕಾರಣವಾದ ಇತಿಹಾಸ ಹೊಂದಿದೆ. ಇಂದಿಗೂ ಅವರು ಅಧಿಕಾರದ ಆಸೆಯಿಂದ ಜನರ ನಂಬಿಕೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸುತ್ತಿದ್ದಾರೆ,” ಎಂದು ಅವರು ಆರೋಪಿಸಿದರು.

ಬಿಜೆಪಿ ಪಕ್ಷವು ಮತದಾರರ ಪಟ್ಟಿಗಳನ್ನು ಶುದ್ಧೀಕರಿಸಲು ರಾಜ್ಯದಾದ್ಯಂತ ಕಾರ್ಯತಂತ್ರ ರೂಪಿಸಿದ್ದು, ಪ್ರತಿ ಜಿಲ್ಲೆಗೂ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಬೂತ್ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷದ ಬಲವರ್ಧನೆಗೆ ಒತ್ತು ನೀಡುತ್ತಿವೆ ಎಂದು ಅವರು ವಿವರಿಸಿದರು. “ಮಹಿಳೆಯರು ಚುನಾವಣಾ ಸಿದ್ಧತೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವುದು ಪಕ್ಷದ ಬಲವನ್ನು ಹೆಚ್ಚಿಸುತ್ತಿದೆ,” ಎಂದರು.

ಇಲೆಕ್ಟ್ರಾನಿಕ್ ಮತಯಂತ್ರ (EVM) ಕುರಿತು ಮಾತನಾಡಿದ ಅವರು, “ಇ.ವಿ.ಎಂ ಯಂತ್ರಗಳನ್ನು ಕಾಂಗ್ರೆಸ್ ಪಕ್ಷವೇ ತರಿಸಿದರೂ, ಇಂದಿಗೆ ಅದರ ವಿರುದ್ಧ ಮಾತನಾಡುತ್ತಿದ್ದಾರೆ. ಗೆದ್ದರೆ ಸರಿಯೇ, ಸೋತರೆ ತಪ್ಪೇ ಎಂಬ ಅವರ ನಿಲುವು ಜನರ ವಿಶ್ವಾಸಕ್ಕೆ ಧಕ್ಕೆ ತರುತ್ತಿದೆ. ಅಧಿಕಾರಕ್ಕಾಗಿ ಇವರು ದೇಶವನ್ನು ವಿಭಜಿಸುವ ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ,” ಎಂದು ಹೇಳಿದರು.

ಡಾ. ಸುಧಾಕರ್ ಅವರು ಮುಂದುವರಿದು, “ಇಡೀ ವಿಶ್ವ ಇಂದು ಭಾರತದ ಪ್ರಗತಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವದತ್ತ ಗೌರವದಿಂದ ನೋಡುತ್ತಿದೆ. ಆದರೆ ರಾಹುಲ್ ಗಾಂಧಿಯವರು ವಿದೇಶಗಳಿಗೆ ತೆರಳಿ ಭಾರತವನ್ನು ಕೆಡವಿ ಮಾತನಾಡುತ್ತಾರೆ. ಸೋಲನ್ನು ಒಪ್ಪಿಕೊಳ್ಳುವ ಧೈರ್ಯವಿಲ್ಲದೆ, ಮತದಾರರ ಮನಸ್ಸಿನಲ್ಲಿ ವಿಷಬೀಜ ಬಿತ್ತುವ ಕೆಲಸ ಕಾಂಗ್ರೆಸ್ ಮಾಡುತ್ತಿದೆ,” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಮಚಂದ್ರಗೌಡ, ರಾಜ್ಯ ಸಂಚಾಲಕ ಜಗದೀಶ್ ಹಿರೇಮನಿ, ಜಿಲ್ಲಾ ಸಂಚಾಲಕಿ ನಿಶ್ಚಿತಾ, ಮಾಜಿ ಶಾಸಕ ಎಂ. ರಾಜಣ್ಣ, ಕಾರ್ಯದರ್ಶಿಗಳು ಮುರುಳಿ ಹಾಗೂ ಮಧು, ತಾಲ್ಲೂಕು ಬಿಜೆಪಿ ಅಧ್ಯಕ್ಷ ಸೀಕಲ್ ಆನಂದ ಗೌಡ ಮತ್ತು ಪಕ್ಷದ ಮುಖಂಡರು ಸುರೇಂದ್ರಗೌಡ, ನರೇಶ್, ರಾಜಣ್ಣ ಹಾಗೂ ಚಿಂತಾಮಣಿ ಬಿಜೆಪಿ ಅಧ್ಯಕ್ಷರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ವಿಜ್ಞಾನ ಮನೋಭಾವ ಬೆಳೆಸಲು ವಿಜ್ಞಾನ ವಸ್ತುಪ್ರದರ್ಶನ ಕಾರ್ಯಕ್ರಮಗಳು ಸಹಕಾರಿ

0
Mallur vivekananda School Science Exhibition

Mallur, Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರಿನ ಸ್ವಾಮಿ ವಿವೇಕಾನಂದ ವಿದ್ಯಾಸಂಸ್ಥೆ ಪ್ರೌಢಶಾಲಾ ವಿಭಾಗದಲ್ಲಿ ಆಯೋಜಿಸಲಾದ ವಿಜ್ಞಾನ ವಸ್ತುಪ್ರದರ್ಶನದಲ್ಲಿ ವಿದ್ಯಾರ್ಥಿಗಳ ಪ್ರತಿಭೆ ಮಿನುಗಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲೆಯ ಅಧ್ಯಕ್ಷ ರಾಮಾಂಜಿನಪ್ಪ ಅವರು, “ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅನ್ವೇಷಣೆ ಮತ್ತು ವಿಶ್ಲೇಷಣಾತ್ಮಕ ಮನೋಭಾವನೆ ಮೂಡಿಸಲು ಇಂತಹ ವಸ್ತುಪ್ರದರ್ಶನಗಳು ಅತ್ಯಂತ ಸಹಾಯಕವಾಗುತ್ತವೆ,” ಎಂದರು.

“ಮೇಡಂ ಕ್ಯೂರಿ, ಎಡಿಸನ್, ಸಿ.ವಿ. ರಾಮನ್, ಸಿ.ಎನ್.ಆರ್. ರಾವ್‌ಗಳಂತಹ ವಿಜ್ಞಾನಿಗಳು ಸಮಾಜದ ಒಳಿತಿಗಾಗಿ ದುಡಿದವರು. ವಿದ್ಯಾರ್ಥಿಗಳು ಅವರ ಜೀವನದಿಂದ ಪ್ರೇರಣೆ ಪಡೆಯಬೇಕು. ವಿಜ್ಞಾನದಲ್ಲಿ ಆಸಕ್ತಿ ಬೆಳೆಸಿದರೆ ಭವಿಷ್ಯ ಖಂಡಿತವಾಗಿಯೂ ಉಜ್ವಲವಾಗುತ್ತದೆ,” ಎಂದು ಅವರು ಹೇಳಿದರು.

ಮುಖ್ಯಶಿಕ್ಷಕ ನವೀನ್ ಮಾತನಾಡಿ, “ಪ್ರಾಥಮಿಕ ಮತ್ತು ಪ್ರೌಢಶಾಲೆ ಹಂತದಲ್ಲಿಯೇ ವಿಜ್ಞಾನ ಕಲಿಕೆಯ ಆಸಕ್ತಿ ಮೂಡಿಸುವುದು ಅಗತ್ಯ. ವಿದ್ಯಾರ್ಥಿಗಳು ಈ ರೀತಿಯ ಪ್ರದರ್ಶನಗಳ ಮೂಲಕ ನೈಜ ಜೀವನಕ್ಕೆ ಸಂಬಂಧಿಸಿದ ಕಲ್ಪನೆಗಳನ್ನು ಅರಿಯಬಹುದು,” ಎಂದರು.

ವಿದ್ಯಾರ್ಥಿಗಳು ತಂತ್ರಜ್ಞಾನ, ಕೃಷಿ, ಪರಿಸರ ಸಂರಕ್ಷಣೆ, ಆರೋಗ್ಯ, ನವೀನ ಇಂಧನ, ಕೈಗಾರಿಕೆ, ಸ್ಮಾರ್ಟ್ ಸಿಟಿ ಕಲ್ಪನೆ ಮುಂತಾದ ವಿಷಯಗಳ ಆಧಾರದ ಮೇಲೆ ಪ್ರಾಯೋಗಿಕ ಮಾದರಿಗಳನ್ನು ಸಿದ್ಧಪಡಿಸಿದ್ದರು. ಸುಮಾರು ಒಂದು ತಿಂಗಳ ಕಾಲ ಮಾಡಿದ ಪರಿಶ್ರಮದ ಫಲವಾಗಿ ಪ್ರದರ್ಶನದಲ್ಲಿ ಅನೇಕ ನವೀನ ಮಾದರಿಗಳು ಗಮನ ಸೆಳೆದವು.

ಪೋಷಕರು, ಸ್ಥಳೀಯ ನಾಗರಿಕರು ಹಾಗೂ ಗ್ರಾಮಸ್ಥರು ಪ್ರದರ್ಶನ ವೀಕ್ಷಣೆಗೆ ಆಗಮಿಸಿ ವಿದ್ಯಾರ್ಥಿಗಳ ಪ್ರಯತ್ನವನ್ನು ಮೆಚ್ಚಿದರು. ಶಾಲೆಯ ಆಡಳಿತ ಮಂಡಳಿ ಸದಸ್ಯರು, ಶಿಕ್ಷಕರು ಹಾಗೂ ಸಿಬ್ಬಂದಿ ಕಾರ್ಯಕ್ರಮದಲ್ಲಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕನಕ ಭವನ ನಿರ್ಮಾಣ: ಶಾಸಕ ಬಿ.ಎನ್. ರವಿಕುಮಾರ್

0
Sidlaghatta Kanakadasa Jayanti Celebration

Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಕನಕ ಭವನ ನಿರ್ಮಾಣಕ್ಕಾಗಿ ಸೂಕ್ತವಾದ ಜಾಗವನ್ನು ಗುರುತಿಸಲು ತಹಶೀಲ್ದಾರರಿಗೆ ಸೂಚನೆ ನೀಡಲಾಗಿದ್ದು, ಈ ಕುರಿತು ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದ್ದಾರೆ.

ನಗರದ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಶನಿವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾದ ದಾಸಶ್ರೇಷ್ಠ ಶ್ರೀ ಕನಕದಾಸರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ದಾಸಶ್ರೇಷ್ಠ ಕನಕದಾಸರು ಕೇವಲ ಕುರುಬ ಸಮುದಾಯದವರೆಂದಲ್ಲ, ಬದಲಿಗೆ ಸಮಾಜದ ಎಲ್ಲ ವರ್ಗಗಳಿಗೂ ಮಾರ್ಗದರ್ಶಕರಾದ ವ್ಯಕ್ತಿತ್ವ. 15-16ನೇ ಶತಮಾನದಲ್ಲಿಯೇ ಜಾತಿ ವ್ಯತ್ಯಾಸಕ್ಕೆ ವಿರೋಧವಾಗಿ ಸಮಾನತೆಯ ಸಂದೇಶ ಸಾರಿದ ಮಹಾನ್ ಭಕ್ತ,” ಎಂದು ಶಾಸಕರು ಹೇಳಿದರು.

ಈ ಸಂದರ್ಭದಲ್ಲಿ ಕುರುಬ ಸಮುದಾಯದ SSLC ಮತ್ತು PUC ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಯಿತು. ಹಿರಿಯ ಸದಸ್ಯರಿಗೆ ಸನ್ಮಾನ ನಡೆಯಿತು. ಜಯಪ್ರಕಾಶ್ ನಾರಾಯಣ್ ಹಾಗೂ ಎಚ್.ಡಿ. ದೇವೇಗೌಡ ಸೇವಾಭಿವೃದ್ಧಿ ಟ್ರಸ್ಟ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತಲಾ ₹5,000 ಪ್ರೋತ್ಸಾಹ ಧನ ನೀಡಲಾಯಿತು.

ನಗರದ ಬೀದಿಗಳಲ್ಲಿ ಪಲ್ಲಕ್ಕಿ ಉತ್ಸವ, ಡೊಳ್ಳು ಕುಣಿತ, ಗಾರುಡಿಗೊಂಬೆ, ಕೀಲುಕುದುರೆ ಮುಂತಾದ ಜನಪದ ಕಲಾ ತಂಡಗಳ ಮೆರವಣಿಗೆ ನಡೆಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಗಗನಸಿಂಧು, ತಾಲ್ಲೂಕು ಪಂಚಾಯಿತಿ ಇಒ ಹೇಮಾವತಿ, ಕುರುಬರ ಸಂಘದ ಜಿಲ್ಲಾಧ್ಯಕ್ಷ ಎ. ನಾಗರಾಜ್, ತಾಲ್ಲೂಕು ಅಧ್ಯಕ್ಷ ಕೆ. ಮಂಜುನಾಥ್, ಕಾರ್ಯದರ್ಶಿ ಎಂ. ರಾಮಾಂಜಿ, ಗೌರವಾಧ್ಯಕ್ಷ ಎಂ. ಗಣೇಶಪ್ಪ, ಮೇಲೂರು ಮಂಜುನಾಥ್, ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ನಗರಸಭೆ ಆಯುಕ್ತೆ ಅಮೃತ ಮತ್ತು ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-08/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 08/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 353
Qty: 19343 Kg
Mx : 738
Mn: 492
Avg: 638

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 02
Qty: 80 Kg
Mx : ₹ 793
Mn: ₹ 758
Avg: ₹ 776


For Daily Updates WhatsApp ‘HI’ to 7406303366

Sidlaghatta Silk Cocoon Market-07/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 07/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 421
Qty: 22694 Kg
Mx : 742
Mn: 440
Avg: 638

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 06
Qty: 357 Kg
Mx : ₹758
Mn: ₹ 741
Avg: ₹ 747


For Daily Updates WhatsApp ‘HI’ to 7406303366

ಗ್ರಾಮೀಣ ಆರೋಗ್ಯ ಸೇವೆಗೆ ಹೊಸ ಹೆಜ್ಜೆ – ಮೊಬೈಲ್ ವೈದ್ಯಕೀಯ ಘಟಕಕ್ಕೆ ಚಾಲನೆ

0
Sidlaghatta Mobile Medical Unit Inauguration

Hemarlahalli, Sidlaghatta, Chikkaballapur : ಗ್ರಾಮೀಣ ಹಾಗೂ ಆರ್ಥಿಕವಾಗಿ ಹಿಂದುಳಿದ ಪ್ರದೇಶಗಳಿಗೂ ಆರೋಗ್ಯ ಸೇವೆಯನ್ನು ವಿಸ್ತರಿಸುವ ಉದ್ದೇಶದಿಂದ ಹೇಮರ್ಲಹಳ್ಳಿಯಲ್ಲಿ ಮೊಬೈಲ್ ವೈದ್ಯಕೀಯ ಘಟಕ (Mobile Medical Unit) ಗೆ ಚಾಲನೆ ನೀಡಲಾಯಿತು. ತಾಲ್ಲೂಕಿನ ಹೇಮರ್ಲಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ನಡೆದ ಈ ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಮಹೇಶ್ ಕುಮಾರ್ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಜನರ ಮನೆ ಬಾಗಿಲಿಗೇ ವೈದ್ಯಕೀಯ ಸೇವೆ ತಲುಪಿಸುವ ಈ ಯೋಜನೆ ಜನಪರ ಕಾರ್ಯಕ್ರಮವಾಗಿದೆ. ಸರ್ಕಾರದ ಜೊತೆಗೂಡಿ ಖಾಸಗಿ ಸಂಸ್ಥೆಗಳು ಆರೋಗ್ಯ ರಕ್ಷಣೆಯಲ್ಲಿ ಸಹಕರಿಸುತ್ತಿರುವುದು ಶ್ಲಾಘನೀಯ. ವಿಶೇಷವಾಗಿ ಲ್ಯಾಂಡ್ ಮಾರ್ಕ್ ಕೇರ್ಸ್ ಮತ್ತು ಸೇವಂ ಬಿ ಸಂಸ್ಥೆಗಳ ಸಹಯೋಗದ ಈ ಪ್ರಯತ್ನ ಗ್ರಾಮೀಣ ಜನತೆಗೆ ಉಪಯುಕ್ತ,” ಎಂದು ಹೇಳಿದರು.

ಲ್ಯಾಂಡ್ ಮಾರ್ಕ್ ಗ್ರೂಪ್‌ನ ಸಿ.ಎಸ್.ಆರ್ ವ್ಯವಸ್ಥಾಪಕ ಅಗ್ನಿಶ್ವರ್ ದಾಸ್ ಮಾತನಾಡಿ, “ಮೊಬೈಲ್ ಮೆಡಿಕಲ್ ಘಟಕವನ್ನು ಹೇಮರ್ಲಹಳ್ಳಿ ಪಿಎಚ್‌ಸಿಯಲ್ಲಿ ಯಶಸ್ವಿಯಾಗಿ ಪ್ರಾರಂಭಿಸಲಾಗಿದೆ. ಇದರಡಿ ಪಿಎಚ್‌ಸಿ ವ್ಯಾಪ್ತಿಯ 18 ಹಳ್ಳಿಗಳ ಜನರಿಗೆ ವೈದ್ಯಕೀಯ ತಪಾಸಣೆ ಮತ್ತು ಪ್ರಾಥಮಿಕ ಆರೋಗ್ಯ ಸೇವೆಗಳನ್ನು ಒದಗಿಸುವ ಗುರಿ ಹೊಂದಿದ್ದೇವೆ,” ಎಂದರು.

ಡಾ. ಮಹೇಶ್ ಕುಮಾರ್ ಮುಂದುವರಿದು, “ಆರೋಗ್ಯ ತಪಾಸಣೆಯನ್ನು ಸಮಯಕ್ಕೆ ಮಾಡಿಕೊಂಡರೆ ಯಾವುದೇ ರೋಗವನ್ನು ತಡೆಗಟ್ಟಬಹುದು. ರಕ್ತದೊತ್ತಡ, ಮಧುಮೇಹ ಮುಂತಾದ ಕಾಯಿಲೆಗಳನ್ನು ನಿರ್ಲಕ್ಷಿಸಬಾರದು. ಆರೋಗ್ಯವೇ ನಮ್ಮ ಕುಟುಂಬದ ಬಲ,” ಎಂದು ಹೇಳಿದರು.

ಈ ಸಂದರ್ಭದಲ್ಲಿ ಡಾ. ಸಂತೋಷ್ (ಆರ್.ಸಿ.ಎಚ್., ಚಿಕ್ಕಬಳ್ಳಾಪುರ), ಸೇವಾಮೊಬ್ ಉಪಾಧ್ಯಕ್ಷ ಡಾ. ಬಿ.ಸಿ. ಪ್ರವೀಣ್ ಕುಮಾರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಎಸ್. ದೇವರಾಜ್, ಗ್ರಾಮಸ್ಥ ನಾಗರಾಜ್ ಹಾಗೂ ಆಶಾ ಕಾರ್ಯಕರ್ತೆಯರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟ ನಗರದಲ್ಲಿ 13 ಹೊಸ ಕೊಳವೆ ಬಾವಿಗಳ ತೋಡುವ ಕಾರ್ಯ ಆರಂಭ

0
Sidlaghatta Municipality Water Borewell Drilling

Sidlaghatta : ಶಿಡ್ಲಘಟ್ಟ ನಗರದಲ್ಲಿ ಬೇಸಿಗೆ ಕಾಲದಲ್ಲಿ ಎದುರಾಗುವ ನೀರಿನ ತೊಂದರೆಯನ್ನು ತಡೆಗಟ್ಟುವ ಉದ್ದೇಶದಿಂದ 2024–25ನೇ ಸಾಲಿನ 15ನೇ ಹಣಕಾಸು ಯೋಜನೆಯಡಿ ₹60 ಲಕ್ಷ ಹಾಗೂ SFC ಯೋಜನೆಯಡಿ ₹9 ಲಕ್ಷ ರೂಗಳನ್ನು ಒಟ್ಟುಗೂಡಿಸಿ ಒಟ್ಟು 13 ಕೊಳವೆ ಬಾವಿಗಳನ್ನು ತೋಡುವ ಕಾರ್ಯ ಪ್ರಾರಂಭಗೊಂಡಿದೆ ಎಂದು ನಗರಸಭಾ ಸದಸ್ಯೆ ಚಿತ್ರಾ ಮನೋಹರ್ ತಿಳಿಸಿದರು.

ನಗರದ 3ನೇ ವಾರ್ಡಿನಲ್ಲಿ ಗುರುವಾರ ಹೊಸ ಕೊಳವೆ ಬಾವಿ ತೋಡುವ ಕಾರ್ಯಕ್ಕೆ ಮುನ್ನ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು. “ನಗರದ ವಿವಿಧೆಡೆ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಬೇಸಿಗೆಯೊಳಗೆ ನಾಗರಿಕರಿಗೆ ನಿರಂತರ ನೀರು ಪೂರೈಕೆ ಮಾಡಲು ಈ ಬಾವಿಗಳು ನೆರವಾಗಲಿವೆ,” ಎಂದು ಹೇಳಿದರು.

ನಗರಸಭಾ ಸದಸ್ಯ ಎಲ್. ಅನಿಲ್ ಕುಮಾರ್ ಮಾತನಾಡಿ, “ಮುಂದಿನ ಬೇಸಿಗೆಯಲ್ಲಿ ನಗರದಲ್ಲಿ ನೀರಿನ ಕೊರತೆ ಉಂಟಾಗದಂತೆ ಮತ್ತು ಯಾವುದಾದರೂ ಬಾವಿಯ ಮೋಟಾರ್ ದೋಷಗೊಂಡರೂ ಪರ್ಯಾಯ ವ್ಯವಸ್ಥೆ ಇರಲೆಂದು ಈ ಯೋಜನೆ ಜಾರಿಗೊಳಿಸಲಾಗಿದೆ,” ಎಂದು ವಿವರಿಸಿದರು.

ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಶಿವಲೀಲಾ ರಾಜಣ್ಣ ಅವರು ಮಾತನಾಡಿ, “ನಗರದ ನಾಗರಿಕರು ನಗರಸಭೆಯಿಂದ ಬಯಸುವುದು ಮೂಲ ಸೌಕರ್ಯ – ನೀರು, ಸ್ವಚ್ಛತೆ ಹಾಗೂ ಬೀದಿ ದೀಪಗಳು. ಈ ಮೂಲಭೂತ ಅಗತ್ಯಗಳನ್ನು ಒದಗಿಸಿದರೆ ನಾಗರಿಕರಿಂದ ಯಾವ ಆಕ್ಷೇಪಣೆಗಳೂ ಬರುವುದಿಲ್ಲ,” ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಎಂ. ವೆಂಕಟಸ್ವಾಮಿ, ಸ್ಥಳೀಯ ಮುಖಂಡರು ಮನೋಹರ್, ನವೀನ್, ನಾಗರಾಜ್ ಹಾಗೂ ವಾರ್ಡಿನ ನಾಗರಿಕರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-06/11/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 06/11/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 284
Qty: 15259 Kg
Mx : 739
Mn: 422
Avg: 657

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 12
Qty: 648 Kg
Mx : ₹787
Mn: ₹ 564
Avg: ₹ 695


For Daily Updates WhatsApp ‘HI’ to 7406303366

ರಾಮಸಮುದ್ರ ಕೆರೆ ಕೋಡಿ, ಸ್ಥಳೀಯರ ಸಮಸ್ಯೆ ಆಲಿಸಿದ ಶಾಸಕ ಬಿ.ಎನ್. ರವಿಕುಮಾರ್

0
Ramasamudra Lake Full MLA BN Ravikumar visit

Sadali, Sidlaghatta, chikkaballapur : ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಬಳಿಯ ರಾಮಸಮುದ್ರ ಕೆರೆ ತುಂಬಿ ಕೋಡಿ ಹರಿಯುತ್ತಿರುವುದರಿಂದ, ಕೋಡಿ ಹರಿವ ಭಾಗದಲ್ಲಿ ಸ್ಥಳೀಯರ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಶಾಸಕ ಬಿ.ಎನ್. ರವಿಕುಮಾರ್ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಜನರ ಅಹವಾಲುಗಳನ್ನು ಆಲಿಸಿ ಪರಿಹಾರ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.

ಕೆರೆ ತುಂಬಿದ ಪರಿಣಾಮವಾಗಿ ರಸ್ತೆಗಳಲ್ಲಿ ನೀರು ತುಂಬಿ, ಸುತ್ತಮುತ್ತಲಿನ ಹೊಲಗದ್ದೆ, ತೋಟ ಪ್ರದೇಶಗಳಿಗೆ ಹೋಗುವ ದಾರಿಗಳು ಮುಚ್ಚಿಹೋಗಿವೆ. ಇದರ ಪರಿಣಾಮವಾಗಿ ಕೃಷಿ ಮತ್ತು ಹೈನುಗಾರಿಕೆ ಚಟುವಟಿಕೆಗಳು ಅಸ್ತವ್ಯಸ್ತಗೊಂಡಿವೆ ಎಂದು ಸ್ಥಳೀಯರು ಶಾಸಕರಿಗೆ ಮನವಿ ಮಾಡಿದರು.

ಹರಿಯುತ್ತಿರುವ ನೀರು ಆಂಧ್ರಪ್ರದೇಶದ ಕಡೆ ವ್ಯರ್ಥವಾಗಿ ಹರಿಯುತ್ತಿದೆ ಎಂಬ ಮಾಹಿತಿ ನೀಡಿ, ನೀರನ್ನು ತಡೆದು ಸ್ಥಳೀಯರ ಉಪಯೋಗಕ್ಕೆ ಬಳಸುವಂತೆ ಮನವಿ ಮಾಡಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ರವಿಕುಮಾರ್ ಅವರು, “ಸ್ಥಳೀಯರ ಸಂಚಾರಕ್ಕೆ ಅಡ್ಡಿಯಾಗದಂತೆ ನೀರಿನ ಕಾಲುವೆ ಭಾಗದಲ್ಲಿ ಮೋರಿ ಅಥವಾ ಸೇತುವೆ ನಿರ್ಮಿಸಲು ಸಾಧ್ಯತೆ ಪರಿಶೀಲಿಸಿ ಕ್ರಮ ಕೈಗೊಳ್ಳಿ” ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದೇ ವೇಳೆ ಸಾದಲಿ ಕ್ರಾಸ್‌ನಿಂದ ಎಸ್.ದೇವಗಾನಹಳ್ಳಿವರೆಗಿನ ರಸ್ತೆ ಕಾಮಗಾರಿ ಪ್ರಗತಿಯಲ್ಲಿದ್ದು, ಧೂಳು ಸಮಸ್ಯೆಯಿಂದ ಹೊಲಗಳಲ್ಲಿ ಬೆಳೆ ಹಾನಿಯಾಗುತ್ತಿದೆ ಮತ್ತು ಪ್ರಯಾಣಿಕರಿಗೂ ತೊಂದರೆ ಆಗುತ್ತಿದೆ ಎಂದು ಸಾರ್ವಜನಿಕರು ದೂರಿದರು. ಶಾಸಕರಾದ ರವಿಕುಮಾರ್ ಅವರು ಲೊಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಗುತ್ತಿಗೆದಾರರಿಗೆ ಎಚ್ಚರಿಕೆ ನೀಡುವಂತೆ ಸೂಚಿಸಿದರು.

ಹಕ್ಕಿ ಪಿಕ್ಕಿ ಕಾಲೋನಿ ಮತ್ತು ಸರ್ಕಾರದಿಂದ ನೀಡಲಾದ ನಿವೇಶನಗಳ ಪ್ರದೇಶಗಳಲ್ಲಿ ವಿದ್ಯುತ್ ಸಂಪರ್ಕದ ಸಮಸ್ಯೆ ಉಂಟಾಗಿದೆ ಎಂದು ಸ್ಥಳೀಯರು ತಿಳಿಸಿದರು. ಶಾಸಕರು ಈ ವಿಷಯವನ್ನು ಕೂಡ ಅಧಿಕಾರಿಗಳ ಗಮನಕ್ಕೆ ತಂದರು.

ಈ ಸಂದರ್ಭದಲ್ಲಿ ತಾದೂರು ರಘು, ತ್ಯಾಗರಾಜ್, ಆವುಲರೆಡ್ಡಿ, ಗಂಗಾಧರ್, ಆಂಜಿನಪ್ಪ, ಲೊಕೋಪಯೋಗಿ, ಸಣ್ಣ ನೀರಾವರಿ, ಬೆಸ್ಕಾಂ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಮತ್ತು ಸ್ಥಳೀಯರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

error: Content is protected !!