Home Blog Page 2

ಶ್ರದ್ಧಾಭಕ್ತಿಯ ಬ್ಯಾಟರಾಯಸ್ವಾಮಿ ರಥೋತ್ಸವ: ರಥಕ್ಕೆ ಗರುಡ ಪಕ್ಷಿ ಪ್ರದಕ್ಷಿಣೆ

0
Chikkadasarahalli Byatarayaswamy Brahmarathotsava

Chikkadasarahalli, Sidlaghatta : ಸಾವಿರಾರು ಭಕ್ತರ ಸಮ್ಮುಖದಲ್ಲಿ ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಸಮೀಪದ ಬ್ಯಾಟರಾಯಸ್ವಾಮಿ ಬ್ರಹ್ಮರಥೋತ್ಸವ ಮಂಗಳವಾರ ಶ್ರದ್ಧಾಭಕ್ತಿಯಿಂದ ನಡೆಸಲಾಯಿತು. ಸುತ್ತಮುತ್ತಲ ಗ್ರಾಮಗಳಿಂದ ಹಾಗೂ ನಗರದಿಂದ ಆಗಮಿಸಿದ್ದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ಭಕ್ತಿಭಾವ ಮೆರೆದರು.

ಬ್ರಹ್ಮರಥೋತ್ಸವದ ಅಂಗವಾಗಿ ಹೂವುಗಳಿಂದ ಅಲಂಕರಿಸಿದ್ದ ರಥದಲ್ಲಿ ದೇವರನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. ವಿವಿಧ ಕಲಾ ತಂಡಗಳು ಮತ್ತು ವಿವಿಧ ಅಂಗಡಿಗಳ ಸಾಲು ಎಲ್ಲರ ಆಕರ್ಷಣೆಯಾಗಿತ್ತು. ವಿಶೇಷ ಹೂವಿನ ಅಲಂಕಾರ ಮಾಡಿದ್ದ ಬ್ರಹ್ಮರಥೋತ್ಸವದ ತೇರನ್ನು ದೇವಸ್ಥಾನದ ಸುತ್ತಲೂ ಎಳೆದ ಭಕ್ತರು ಬಾಳೆಹಣ್ಣು, ದವನವನ್ನು ತೇರಿನ ಕಳಶಕ್ಕೆ ಎಸೆದು ತಮ್ಮ ಇಷ್ಟಾರ್ಥಗಳನ್ನು ಈಡೇರಿಸುವಂತೆ ಭಗವಂತನನ್ನು ಕೋರಿಕೊಂಡರು.

ರಥೋತ್ಸವಕ್ಕೆ ಶಾಸಕ ಬಿ.ಎನ್.ರವಿಕುಮಾರ್ ಹಾಗು ತಹಶೀಲ್ದಾರ್ ಗಗನಸಿಂಧು ಚಾಲನೆ ನೀಡಿದರು. ರಥೋತ್ಸವ ಅಂಗವಾಗಿ ದೇಗುಲದಲ್ಲಿ ವಿವಿಧ ಪೂಜಾ ಕಾರ್ಯಕ್ರಮಗಳು ನಡೆದವು. ಬತ್ತಾಸು, ಸಿಹಿ ಖಾರದ ತಿಂಡಿಗಳು, ವಿವಿಧ ಹಣ್ಣುಗಳು, ತಂಪು ಪಾನೀಯ, ಕರಿದ ತಿಂಡಿ ತಿನಿಸು, ಮಕ್ಕಳಿಗೆ ಆಟಿಕೆ, ಅಚ್ಚೆ ಹಾಕುವವರು, ಬಳೆಗಾರರು ಉತ್ಸವಕ್ಕೆ ರಂಗು ತುಂಬಿದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಭಕ್ತರಿಗೆ ಪಾನಕ, ಮಜ್ಜಿಗೆ ಹಾಗೂ ಹೆಸರು ಬೇಳೆ ವಿತರಿಸಲಾಯಿತು. ವಿವಿಧ ಗ್ರಾಮಸ್ಥರು ಹೆಸರುಬೇಳೆ ಪಾನಕ ವಿತರಿಸಿದರು.

ಸುತ್ತಮುತ್ತಲಿನ ಗ್ರಾಮಗಳು ಹಾಗೂ ತಾಲ್ಲೂಕಿನ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಆಗಮಿಸಿ ದೇವರ ಪೂಜೆಯಲ್ಲಿ ಪಾಲ್ಗೊಂಡರು. ಬ್ರಹ್ಮರಥೋತ್ಸವ ಸಮಯಕ್ಕೆ ಸರಿಯಾಗಿ ಗರುಡ ಪಕ್ಷಿ ಕಾಣಿಸಿಕೊಂಡು, ರಥದ ಸುತ್ತಲೂ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಮರೆಯಾಯಿತು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಸಾಮೂಹಿಕ ಸಹಸ್ರ ಬಿಲ್ವಾರ್ಚನೆ ಪೂಜೆ

0
sidlaghatta Sri Sainatha Gnanamandira sahasra bilvarchane

Mallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರು ಸಮೀಪದ ಶ್ರೀ ಸಾಯಿನಾಥ ಜ್ಞಾನಮಂದಿರದಲ್ಲಿ ಇಂದು ಆಧ್ಯಾತ್ಮಿಕ ಸೌರಭ ಪಸರಿಸಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಗಣಪತಿ ಪೂಜೆ ಹಾಗೂ ಸಾಮೂಹಿಕ ಸಹಸ್ರ ಬಿಲ್ವಾರ್ಚನೆ ಪೂಜಾ ಕಾರ್ಯಕ್ರಮವು ಅತ್ಯಂತ ಭಕ್ತಿಭಾವದಿಂದ ಜರುಗಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಧಾರ್ಮಿಕ ಉಪನ್ಯಾಸ ನೀಡಿದ ಶರಣ ಚಿಂತಕ ಚಂದ್ರಶೇಖರ ಹಡಪದ್ ಅವರು, ಇಂದಿನ ಧಾವಂತದ ಬದುಕಿನಲ್ಲಿ ಮನುಷ್ಯನಿಗೆ ಆಧ್ಯಾತ್ಮಿಕತೆ ಎಷ್ಟು ಅಗತ್ಯ ಎಂಬುದನ್ನು ವಿವರಿಸಿದರು. “ಧರ್ಮ ಎಂದರೆ ಕೇವಲ ಒಂದು ಸಮುದಾಯಕ್ಕೆ ಸೀಮಿತವಾದುದಲ್ಲ, ಅದು ಸಕಲ ಜೀವರಾಶಿಗಳ ಒಳಿತನ್ನು ಬಯಸುವ ಮಾರ್ಗ. ಧಾರ್ಮಿಕ ಚಿಂತನೆಗಳು ನಮಗೆ ಸಂಸ್ಕೃತಿ ಮತ್ತು ಸಂಸ್ಕಾರವನ್ನು ಕಲಿಸುತ್ತವೆ, ಇದು ಸುಂದರ ಕುಟುಂಬ ನಿರ್ವಹಣೆಗೆ ಸಹಕಾರಿ,” ಎಂದು ಅವರು ತಿಳಿಸಿದರು.

ಮನುಷ್ಯ ಮೌಲ್ಯಗಳನ್ನು ಉಳಿಸಿಕೊಳ್ಳಲು ಆಧ್ಯಾತ್ಮಿಕ ಮಾರ್ಗದರ್ಶನ ಮುಖ್ಯ. ವಿವಿಧ ಧರ್ಮಗಳ ನಡುವೆ ಸಂವಾದ ಮತ್ತು ಸಾಮರಸ್ಯ ಉಂಟಾದಾಗ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಅವರು ನುಡಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ವೈಭವ ಕಳೆದುಕೊಂಡ H Cross ರೇಷ್ಮೆ ಗೂಡು ಮಾರುಕಟ್ಟೆ

0
H Cross Silk Cocoon Market

H Cross, Sidlaghatta : ಒಂದು ಕಾಲದಲ್ಲಿ ನೂರಾರು ರೈತರು ಮತ್ತು ವ್ಯಾಪಾರಿಗಳಿಂದ ಗಿಜಿಗುಡುತ್ತಿದ್ದ ಎಚ್. ಕ್ರಾಸ್ ರೇಷ್ಮೆಗೂಡು ಮಾರುಕಟ್ಟೆ ಇಂದು ಮೌನಕ್ಕೆ ಶರಣಾಗಿದೆ. ಒಂದೆಡೆ ಸರ್ಕಾರ 200 ಕೋಟಿ ರೂ. ವೆಚ್ಚದಲ್ಲಿ ಹೈಟೆಕ್ ಮಾರುಕಟ್ಟೆ ನಿರ್ಮಿಸುತ್ತಿದ್ದರೆ, ಮತ್ತೊಂದೆಡೆ 1983ರಲ್ಲಿ ಸ್ಥಾಪನೆಯಾದ ಈ ಐತಿಹಾಸಿಕ ಮಾರುಕಟ್ಟೆ ಮುಚ್ಚುವ ಹಂತ ತಲುಪಿದೆ.

ಇತಿಹಾಸದ ಹಾದಿ:

ವಿಶ್ವ ಬ್ಯಾಂಕ್ ನೆರವಿನಿಂದ ಐದು ಎಕರೆ ಪ್ರದೇಶದಲ್ಲಿ ಆರಂಭವಾದ ಈ ಮಾರುಕಟ್ಟೆ ಜಂಗಮಕೋಟೆ, ಕೈವಾರ, ವೇಮಗಲ್ ಭಾಗದ ರೈತರಿಗೆ ಆಸರೆಯಾಗಿತ್ತು. ಐಎಎಸ್ ಅಧಿಕಾರಿ ಎಸ್.ಕೆ. ಮಿಶ್ರಾ ಅವರಿಂದ ಉದ್ಘಾಟನೆಗೊಂಡ ಈ ಮಾರುಕಟ್ಟೆಯಲ್ಲಿ ಹಗಲಿಡೀ ಹರಾಜು ಪ್ರಕ್ರಿಯೆ ನಡೆಯುತ್ತಿತ್ತು. ಆದರೆ ಇಂದು ಇಲ್ಲಿನ ತೂಕದ ಯಂತ್ರಗಳು ಧೂಳು ಹಿಡಿದಿವೆ, ಹರಾಜು ವೇದಿಕೆಗಳು ಖಾಲಿ ಬಿದ್ದಿವೆ.

ಸುಧಾರಣೆ ಇದ್ದರೂ ಸುಧಾರಿಸದ ಸ್ಥಿತಿ:

ಇತ್ತೀಚೆಗೆ ಅಧಿಕಾರಿಗಳು ಮಾರುಕಟ್ಟೆಗೆ ಸುಣ್ಣ-ಬಣ್ಣ ಹಚ್ಚಿ, ಹಳೆಯ ಶೀಟ್‌ಗಳನ್ನು ಬದಲಿಸಿ ಫೈಬರ್ ಶೀಟ್‌ಗಳನ್ನು ಅಳವಡಿಸಿದ್ದಾರೆ. ಇ-ಬಿಡ್ ಮತ್ತು ಇ-ಪೇಮೆಂಟ್ ಸೌಲಭ್ಯವನ್ನೂ ಕಲ್ಪಿಸಲಾಗಿದೆ. ಆದರೆ, ರೈತರು ಮಾತ್ರ ಇತ್ತ ಸುಳಿಯುತ್ತಿಲ್ಲ. ಬಹುತೇಕ ರೈತರು ಶಿಡ್ಲಘಟ್ಟದ ಮುಖ್ಯ ಮಾರುಕಟ್ಟೆಗೆ ಅಥವಾ ಖಾಸಗಿ ಖರೀದಿದಾರರಿಗೆ ಗೂಡು ಮಾರಾಟ ಮಾಡುತ್ತಿರುವುದು ಮಾರುಕಟ್ಟೆಯ ಸೊರಗುವಿಕೆಗೆ ಕಾರಣವಾಗಿದೆ.

ಅಧಿಕಾರಿಗಳ ಪ್ರಯತ್ನ:

ಪ್ರಸ್ತುತ ಮಾರುಕಟ್ಟೆಯ ಉಸ್ತುವಾರಿ ವಹಿಸಿಕೊಂಡಿರುವ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ರೈತರಲ್ಲಿ ಮನವಿ ಮಾಡುತ್ತಿದ್ದಾರೆ. ಆದರೆ ನಿರೀಕ್ಷಿತ ಮಟ್ಟದಲ್ಲಿ ರೇಷ್ಮೆಗೂಡು ಮಾರುಕಟ್ಟೆಗೆ ಬರುತ್ತಿಲ್ಲ. ಕೋಟ್ಯಂತರ ರೂಪಾಯಿ ಮೌಲ್ಯದ ಈ ಆಸ್ತಿ ಸರಿಯಾದ ಬಳಕೆಯಿಲ್ಲದೆ ಇತಿಹಾಸದ ಪಳೆಯುಳಿಕೆಯಾಗುವ ಭೀತಿ ಎದುರಾಗಿದೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-02/03/2026

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 02/03/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 365
Qty: 19321 Kg
Mx : 769
Mn: 533
Avg: 706

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 14
Qty: 761 Kg
Mx : ₹ 877
Mn: ₹ 600
Avg: ₹ 805


For Daily Updates WhatsApp ‘HI’ to 7406303366

BJP ಪ್ರಶಿಕ್ಷಣ ಮಹಾಭಿಯಾನ 2026

0
Sidlaghatta BJP Prashikshan Abhiyan Press Meet

Sidlaghatta : ಶಿಡ್ಲಘಟ್ಟ ನಗರದ BJP ಸೇವಾಸೌಧದಲ್ಲಿ ಭಾನುವಾರ ಪಂ.ದೀನದಯಾಳ್ ಉಪಾಧ್ಯಾಯ ಪ್ರಶಿಕ್ಷಣ ಮಹಾಭಿಯಾನ 2026 ಜಿಲ್ಲಾಮಟ್ಟದ ಯೋಜನಾ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು.

ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಸಭೆಯನ್ನು ಉದ್ಘಾಟಿಸಿ ಮಾತನಾಡಿ, “ಭಾರತೀಯ ಜನತಾ ಪಾರ್ಟಿ ತನ್ನ ಕಾರ್ಯಕರ್ತರಿಗೆ ಹಮ್ಮಿಕೊಂಡಿರುವ ತರಬೇತಿ ಅಭಿಯಾನವಿದು. ಪಕ್ಷದ ಕಾರ್ಯಕರ್ತರಲ್ಲಿ ಸೈದ್ಧಾಂತಿಕ ಸ್ಪಷ್ಟತೆ ಮೂಡಿಸುವುದು, ಸಾಂಘಿಕ ಶಕ್ತಿಯನ್ನು ವೃದ್ಧಿಸುವುದು ಮತ್ತು ಶಿಸ್ತುಬದ್ಧ ರಾಷ್ಟ್ರ ನಿರ್ಮಾಣಕ್ಕೆ ಸಜ್ಜುಗೊಳಿಸುವುದು ಇದರ ಮುಖ್ಯ ಗುರಿಯಾಗಿದೆ. ಈ ತರಬೇತಿಯನ್ನು ಜಿಲ್ಲಾ ಮಟ್ಟದಿಂದ ಆರಂಭಿಸಿ ಮಂಡಲ ಮತ್ತು ಬೂತ್ ಮಟ್ಟದವರೆಗೆ ತಲುಪಿಸುವ ಯೋಜನೆಯಿದೆ. ಈ ಅಭಿಯಾನವು “ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣ” ಎಂಬ ದೀನದಯಾಳ್ ಉಪಾಧ್ಯಾಯರ ಚಿಂತನೆಗಳಿಂದ ಪ್ರೇರಿತವಾಗಿದೆ” ಎಂದು ಹೇಳಿದರು.

ಪ್ರಧಾನಿ ಮೋದಿ ಅವರ ಆಡಳಿತದಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ಪ್ರಗತಿ ಸಾಧಿಸುತ್ತಿದೆ. “ವಿಕಸಿತ ಭಾರತ 2047” ಎಂಬುದು ಮೋದೀಜಿಯವರ ಬಹುದೊಡ್ಡ ಕನಸು ಮತ್ತು ಯೋಜನೆ. ಭಾರತವು ಸ್ವಾತಂತ್ರ್ಯದ ನೂರನೇ ವರ್ಷವನ್ನು ಆಚರಿಸುವ ವೇಳೆಗೆ (2047) ದೇಶವನ್ನು ಸಂಪೂರ್ಣವಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ದೃಷ್ಟಿಕೋನವಾಗಿದೆ.ಬ್ಈ ಅಭಿಯಾನವು ಮುಖ್ಯವಾಗಿ ಯುವಶಕ್ತಿ, ನಾರೀಶಕ್ತಿ, ಬಡತನ ನಿರ್ಮೂಲನೆ ಮತ್ತು ಎಲ್ಲರಿಗೂ ಮೂಲಭೂತ ಸೌಕರ್ಯಗಳ ಲಭ್ಯತೆ ಹಾಗೂ ಕೃಷಿ ಆಧುನೀಕರಣ ಮತ್ತು ರೈತರ ಆದಾಯ ಹೆಚ್ಚಳ ಎಂಬ ನಾಲ್ಕು ವರ್ಗಗಳ ಸಬಲೀಕರಣದ ಮೇಲೆ ಕೇಂದ್ರೀಕರಿಸಿದೆ ಎಂದರು.

ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬೀನ್ (45) ಅವರ ಆಯ್ಕೆಯು ಭಾರತೀಯ ರಾಜಕೀಯದಲ್ಲಿ ಒಂದು ಪ್ರಮುಖ “ಯುವಶಕ್ತಿ”ಯ ಸಂಕೇತವಾಗಿ ಹೊರಹೊಮ್ಮಿದೆ. ಇದು ಪಕ್ಷದಲ್ಲಿನ “ಪೀಳಿಗೆಯ ಬದಲಾವಣೆ”ಯನ್ನು ಸೂಚಿಸುತ್ತದೆ. ಮೋದಿಯವರ “ಸ್ಟಾರ್ಟ್ ಅಪ್ ಇಂಡಿಯಾ” ಮತ್ತು “ಮೇಕ್ ಇನ್ ಇಂಡಿಯಾ” ಯೋಜನೆಗಳು ಯುವಶಕ್ತಿಯನ್ನು ವಿಕಸಿತ ಭಾರತದತ್ತ ಮುನ್ನಡೆಸುತ್ತಿವೆ ಎಂದು ಹೇಳಿದರು.

ರಂಜಾನ್ ಮತ್ತು ಯುಗಾದಿಗೆ ಆಹಾರದ ಕಿಟ್ ವಿತರಣೆ :

ರಂಜಾನ್ ಮತ್ತು ಯುಗಾದಿ ಹಬ್ಬದ ಪ್ರಯುಕ್ತ ಮುಸಲ್ಮಾನ್ ಮತ್ತು ಹಿಂದೂ ಬಾಂಧವರಿಗೆ ಪ್ರತಿಯೊಂದು ವಾರ್ಡ್ ಗಳಲ್ಲಿಯೂ ಬಡವರಿಗೆ ಬಿಜೆಪಿ ಪಕ್ಷದಿಂದ ಆಹಾರದ ಕಿಟ್ ವಿತರಣೆ ಮಾಡುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ಇರಾನಿನ ಅಮಾಯಕ ಮಹಿಳೆಯರು ಮತ್ತು ಮಕ್ಕಳ ಹತ್ಯೆ ಖಂಡನೀಯ : ಟ್ರಂಪ್ ವಿಶ್ವನಾಯಕನಂತೆ ಭಾರತವನ್ನೂ ಸೇರಿದಂತೆ ಹಲವಾರು ದೇಶಗಳನ್ನು ಬೆದರಿಸುವ ಹಾಗೂ ಹಿಡಿತ ಸಾಧಿಸುವ ಪ್ರಯತ್ನ ನಡೆಸಿದ್ದಾರೆ. ವಿಶ್ವದೆಲ್ಲೆಡೆ ಅದರಲ್ಲೂ ಅರಬ್ ರಾಷ್ಟ್ರಗಳಲ್ಲಿ ರಂಜಾನ್ ಮಾಸಾಚರಣೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಟ್ರಂಪ್ ಇಸ್ರೇಲ್ ದೇಶದೊಂದಿಗೆ ಸೇರಿಕೊಂಡು ಇರಾನಿನ ಸಾಕಷ್ಟು ಅಮಾಯಕರನ್ನು, ಮಹಿಳೆಯರನ್ನು, ಶಾಲೆಗಳಲ್ಲಿರುವ ಮಕ್ಕಳ ಮೇಲೆ ಬಾಂಬ್ ಹಾಕಿ ಹತ್ಯೆ ಮಾಡಿರುವುದು ಖಂಡನೀಯ. ಟ್ರಂಪ್ ಮನಸ್ಥಿತಿಯಿಂದ ಜಗತ್ತೇ ಅಲ್ಲೋಲ ಕಲ್ಲೋಲವಾಗುತ್ತಿದೆ. ಮುಂದಿನ ದಿನಗಳಲ್ಲಿ ಮೋದಿಯವರಂತಹ ನಾಯಕ ಇಡೀ ವಿಶ್ವಕ್ಕೇ ಬೇಕಾಗಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಮಚಂದ್ರಗೌಡ ಹೇಳೀದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಮಳ್ಳೂರಿನ ಗೌರಮ್ಮ ಮಲ್ಲಶೆಟ್ಟಿ ಆರೋಗ್ಯ ಕೇಂದ್ರದಲ್ಲಿ ಉಚಿತ ಅರೋಗ್ಯ ತಪಾಸಣಾ ಶಿಬಿರ

0
Sidlaghatta Mallur Free Health Camp

Mallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರಿನ ಗೌರಮ್ಮ ಮಲ್ಲಶೆಟ್ಟಿ ಆರೋಗ್ಯ ಕೇಂದ್ರದಲ್ಲಿ ಭಾನುವಾರ ಬೆಂಗಳೂರಿನ ರಾಮಯ್ಯ ಆಸ್ಪತ್ರೆ ಸಹಯೋಗದಲ್ಲಿ ಗೌರಮ್ಮ ಅವರ 8ನೇ ವರ್ಷದ ಪುಣ್ಯ ಸ್ಮರಣೆಯ ಪ್ರಯುಕ್ತ ಕಿಡ್ನಿ ಮತ್ತು ಮೂತ್ರಕೋಶದ ಉಚಿತ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.

ರಾಮಯ್ಯ ಆಸ್ಪತ್ರೆಯ ಕಿಡ್ನಿ ಮತ್ತು ಮೂತ್ರಕೋಶ ವಿಭಾಗದ ತಜ್ಞ ವೈದ್ಯ ಡಾ.ಪುವ್ವಾಡ ಸಂದೀಪ್ ಮಾತನಾಡಿ, “ಈ ದಿನ ಹೆಣ್ಣುಮಕ್ಕಳಿಗೇ ಕಿಡ್ನಿ ಮತ್ತು ಮೂತ್ರಕೋಶದ ಚಿಕಿತ್ಸೆ ನೀಡುವ ರಾಜ್ಯದ ಏಕೈಕ ತಜ್ಞ ವೈದ್ಯೆ ಕೂಡ ಆಗಮಿಸಿದ್ದಾರೆ. ಕ್ಯಾನ್ಸರ್ ತಪಾಸಣೆಗಾಗಿ ಸೀರಮ್ ಪಿಇಸಿ ಎಂಬ ಪರೀಕ್ಷೆ, ಉರಿಮೂತ್ರ ರೋಗ, ಹೊಟ್ಟೆಯಲ್ಲಿ ಗೆಡ್ಡೆ ಇದ್ದರೆ ಅಥವಾ ಸಂಶಯವಿದ್ದರೆ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ವ್ಯವಸ್ಥೆ ಕೂಡ ಉಚಿತವಾಗಿ ಮಾಡಿದ್ದೇವೆ. 300 ಮಂದಿ ಹೊರರೋಗಿಗಳು ಬಂದು ತಪಾಸಣೆ ಮಾಡಿಸಿಕೊಂಡಿದ್ದಾರೆ. ನಾವು ಮಾಡಿಸಿರುವ ರಕ್ತ ಪರೀಕ್ಷೆಯ ವರದಿ ಮುಂದಿನವಾರ ಬರಲಿದೆ. ಸ್ಕ್ಯಾನಿಂಗ್ ಮತ್ತು ಮೂತ್ರಕ್ಕೆ ಸಂಬಂಧಿಸಿದ ವರದಿ ಇಲ್ಲೇ ನೀಡಿ ಸೂಕ್ತ ಔಷಧಿ ನೀಡಲಾಗಿದೆ. ಸುಮಾರು 9 ಜನರಿಗೆ ಕ್ಯಾನ್ಸರ್ ಸೂಚನೆಗಳಿದ್ದು ಅವರ ರಕ್ತದ ಮಾದರಿಯನ್ನು ತೆಗೆದುಕೊಳ್ಳಲಾಗಿದೆ. ಕ್ಯಾನ್ಸರ್ ಇದ್ದರೆ ಸೂಕ್ತ ಚಿಕಿತ್ಸೆ, ರೇಷನ್ ಕಾರ್ಡ್ ಇದ್ದರೆ ಉಚಿತವಾಗಿ ಶಸ್ತ್ರಚಿಕಿತ್ಸೆ ಸಹ ಮಾಡುತ್ತೇವೆ” ಎಂದು ಹೇಳಿದರು.

“ಶಿಡ್ಲಘಟ್ಟ ತಾಲ್ಲೂಕಿನಲ್ಲಿನ ವಾತಾವರಣ, ತಿನ್ನುವ ಆಹಾರ ಮತ್ತು ಶುದ್ಧೀಕರಿಸದೆ ಕುಡಿಯುವ ನೀರಿನ ಪರಿಣಾಮದಿಂದ ಮೂತ್ರಕೋಶದಲ್ಲಿ ಕಲ್ಲು ತುಂಬಾ ಜನರಲ್ಲಿ ಕಂಡುಬರುತ್ತಿದೆ. ಗೌರಮ್ಮ ಮಲ್ಲಶೆಟ್ಟಿ ಆರೋಗ್ಯ ಕೇಂದ್ರದಲ್ಲಿ ಮೂತ್ರಕೋಶದಲ್ಲಿ ಕಲ್ಲು ಇದ್ದವರಿಗೆ ಉಚಿತ ಶಸ್ತ್ರಚಿಕಿತ್ಸೆ ಮಾಡಿ, ಔಷಧಿಗಳನ್ನು ಸಹ ಉಚಿತವಾಗಿ ನೀಡಿ, ಮುಂದೆ ಈ ತೊಂದರೆ ಮರುಕಳಿಸದ ಹಾಗೆ ಆಹಾರ ಹಾಗೂ ಜೀವನಶೈಲಿಯ ಬಗ್ಗೆ ತಿಳಿವಳಿಕೆ ನೀಡುತ್ತಿದ್ದೇವೆ” ಎಂದರು.

“ನಮ್ಮ ಕೇಂದ್ರಕ್ಕೆ ಬರುವವರಲ್ಲಿ ಥೈರಾಯ್ಡ್, ಮಧುಮೇಹ ಮತ್ತು ರಕ್ತದ ಒತ್ತಡ ಹೆಚ್ಚಿನವರಿಗೆ ಇದೆ. ರೋಗಿಗಳನ್ನು ಕರೆತರುವವರನ್ನೂ ನಮ್ಮ ಕೇಂದ್ರದಲ್ಲಿ ಪರೀಕ್ಷೆ ಮಾಡಿದಾಗ ಬಹಳಷ್ಟು ಜನರಿಗೆ ರಕ್ತದ ಒತ್ತಡ ಇರುವುದು ಕಂಡು ಬಂದಿದೆ. ಕೆಲವರಂತೂ ರಕ್ತದ ಒತ್ತಡ ಇದ್ದರೂ ಉದಾಸೀನ ಮಾಡಿ ಅದರಿಂದ ಕಿಡ್ನಿಗೆ ತೊಂದರೆಯಾಗಿ ಡಯಾಲಿಸಿಸ್ ಗೆ ಒಳಪಟ್ಟಿದ್ದಾರೆ. ಮೂರು ತಿಂಗಳಿಗೊಮ್ಮೆ ರಕ್ತದ ಒತ್ತಡದ ಪರೀಕ್ಷೆ ಮಾಡಿಸಿಕೊಳ್ಳುವುದರಿಂದ ಮತ್ತು ಸೂಕ್ತ ಚಿಕಿತ್ಸೆ ಪಡೆಯುವುದರಿಂದ ಹಲವು ತೊಂದರೆಗಳಿಂದ ತಪ್ಪಿಸಿಕೊಳ್ಳಬಹುದಾಗಿದೆ” ಎಂದು ಹೇಳಿದರು.

ವೈದ್ಯರಾದ ಡಾ.ಪುವ್ವಾಡ ಸಂದೀಪ್, ಡಾ.ಡಿ.ರಮೇಶ್, ಡಾ.ಪ್ರಸಾದ್ ಮೈಲಾರಪ್ಪ, ಡಾ.ತರುಣ್, ಡಾ.ಮಾನಸ, ಡಾ.ಅಭಿಷೇಕ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-01/03/2026

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 01/03/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 383
Qty: 19852 Kg
Mx : 776
Mn: 550
Avg: 709

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 11
Qty: 722 Kg
Mx : ₹ 900
Mn: ₹ 758
Avg: ₹ 824

Sidlaghatta WhatsApp Channel Group

For Daily Updates WhatsApp ‘HI’ to 7406303366

ಶ್ರೀ ಶಾರದಾ ವಿದ್ಯಾಸಂಸ್ಥೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವ ಸಮಾರಂಭ

0
Sidlaghatta Sri Sharada Vidya Samsthe Annual Day

Sidlaghatta : ಶಿಡ್ಲಘಟ್ಟ ನಗರದ ಶ್ರೀ ಶಾರದಾ ವಿದ್ಯಾಸಂಸ್ಥೆಯಲ್ಲಿ ಶನಿವಾರ ಶಾಲಾ ವಾರ್ಷಿಕೋತ್ಸವ ಸಮಾರಂಭವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯೋಪಾಧ್ಯಾಯ ಈಶ್ವರಸಿಂಗ್, ಪಂಚದಲ್ಲಿ ಯಾರೊಬ್ಬರೂ ಕದಿಯಲಾರದ ಆಸ್ತಿ ಎಂದರೆ ಅದು ಶಿಕ್ಷಣ ಮಾತ್ರ, ಹಾಗಾಗಿ ಮಕ್ಕಳಿಗೆ ಬೇರೆ ಆಸ್ತಿಯನ್ನು ಮಾಡುವುದು ಬೇಡ, ಬದಲಿಗೆ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ತಿಳಿಸಿದರು

ಪ್ರತಿಯೊಂದು ಮಗುವಿನಲ್ಲಿಯೂ ತನ್ನದೇ ಆದ ಪ್ರತಿಭೆಯಿರುತ್ತದೆ, ಮಗುವಿನಲ್ಲಿರುವ ಪ್ರತಿಭೆಯನ್ನು ಉತ್ತಮ ಹಾಗೂ ಸನ್ಮಾರ್ಗದ ದಾರಿ ತೋರಿದಾಗ ಮಾತ್ರ ಆ ಮಗುವು ದೇಶದ ಉತ್ತಮ ಪ್ರಜೆಯಾಗಿ ರೂಪುಗೊಳ್ಳಲು ಸಾಧ್ಯವಾಗುತ್ತದೆ. ಮಗುವಿನ ಶಿಕ್ಷಣ ಮನೆಯಿಂದಲೇ ಆರಂಭವಾಗುತ್ತದೆ. ಹಾಗಾಗಿ ಮನೆಯಲ್ಲಿ ಪೋಷಕರು ಮಕ್ಕಳಿಗೆ ಶೈಕ್ಷಣಿಕ ಬೆಳವಣಿಗೆಗೆ ಪೂರಕ ವಾತಾವರಣ ನಿರ್ಮಿಸಿಕೊಡಬೇಕು ಎಂದರು.

ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರ ಹಾಗೂ ಪೋಷಕರ ಪಾತ್ರ ಬಹಳಷ್ಟು ಮಹತ್ತರವಾದದ್ದು ಹಾಗಾಗಿ ಮಕ್ಕಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿರುವ ಸಹಕಾರವನ್ನು ಪೋಷಕರು ಶಿಕ್ಷಕರಿಗೆ ನೀಡಬೇಕು ಎಂದರು.

ಶ್ರೀ ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ಆರ್.ಮುನಿರತ್ನಂ ಮಾತನಾಡಿ, ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡುವಂತಹ ಗುರಿ ಸೇರಿದಂತೆ ದೇಶದ ಯಾವುದೇ ಮೂಲೆಯಲ್ಲಿಯಾದರೂ ಮಕ್ಕಳು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸುವಂತಹ ಸಾಮರ್ಥ್ಯವುಳ್ಳವರನ್ನಾಗಿ ಮಾಡುವ ಧ್ಯೇಯವನ್ನು ವಿದ್ಯಾ ಸಂಸ್ಥೆ ಹೊಂದಿದೆ. ಪ್ರತಿಯೊಬ್ಬ ಮಗುವೂ ಹೆತ್ತ ತಾಯಿ ತಂದೆಯರನ್ನು ಗೌರವಿಸುವುದನ್ನು ರೂಡಿಸಿಕೊಳ್ಳಬೇಕು ಎಂದರು.

ವಾರ್ಷಿಕೋತ್ಸವ ಮಕ್ಕಳು ಮಾಡಿದ ನೃತ್ಯ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೆಳೆಯುವಂತಿತ್ತು.

ಶಾರದಾ ವಿದ್ಯಾಸಂಸ್ಥೆಯ ಅಧ್ಯಕ್ಷ ಎ.ಆರ್.ಮುನಿರತ್ನಂ, ಕಾರ್ಯದರ್ಶಿ ಶ್ರೀಕಾಂತ್, ವ್ಯವಸ್ಥಾಪಕ ನಿರ್ದೇಶಕಿ ವಂದನಾ, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಶಿಕುಮಾರ್.ಎ, ಎ.ಆರ್.ಎಂ ಪಿಯು ಕಾಲೇಜಿನ ಪ್ರಾಂಶುಪಾಲ ಮೂರ್ತಿ ಸಾಮ್ರಾಟ್, ಮುಖ್ಯಶಿಕ್ಷಕರಾದ ರಾಜೇಶ್, ಸಿದ್ಧರಾಜು, ಎಂ.ಆರ್.ರಾಘವೇಂದ್ರ ಸಿಬ್ಬಂದಿ ಮತ್ತು ಮಕ್ಕಳು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ದ್ವಿತೀಯ PUC ಪರೀಕ್ಷೆ ಆರಂಭ

0
Sidlaghatta PUC Exam 2026 begins

Sidlaghatta : ರಾಜ್ಯದಾದ್ಯಂತ ಶನಿವಾರ ದ್ವಿತೀಯ PUC ಪರೀಕ್ಷೆಗಳು ಆರಂಭವಾಗಿವೆ. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 509 ವಿದ್ಯಾರ್ಥಿಗಳಲ್ಲಿ 507 ವಿದ್ಯಾರ್ಥಿಗಳು “ಕನ್ನಡ” ವಿಷಯದ ಪರೀಕ್ಷೆಗೆ ಹಾಜರಾದರು. ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು 17 ಕೋಣೆಗಳನ್ನು ವ್ಯವಸ್ಥೆ ಮಾಡಲಾಗಿತ್ತು. ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಪರೀಕ್ಷೆ ನಡೆಯಿತು.

ಪರೀಕ್ಷಾ ಕೇಂದ್ರದಲ್ಲಿ ಪೊಲೀಸ್ ಭದ್ರತೆಯನ್ನು ನಿರ್ವಹಿಸಲಾಗಿತ್ತು. ಪರೀಕ್ಷಾ ಕೇಂದ್ರಗಳ ಒಳಗೆ ಮೊಬೈಲ್ ಫೋನ್‌ ಗಳು, ಸ್ಮಾರ್ಟ್ ವಾಚ್‌ಗಳು, ಇಯರ್‌ ಫೋನ್‌ ಗಳು ಸೇರಿದಂತೆ ಎಲ್ಲಾ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ನಿಷೇಧಿಸಲಾಗಿತ್ತು. ವಿದ್ಯಾರ್ಥಿಗಳಿಗೆ ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಕಲ್ಪಿಸಲಾಗಿತ್ತು.

ಕೆಲವು ದಿನಗಳ ಹಿಂದೆ ಪೂರ್ವಸಿದ್ಧತಾ ಪರೀಕ್ಷೆಯ ಸಮಯದಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ದುಷ್ಕರ್ಮಿಗಳು ಪ್ರಶ್ನೆಪತ್ರಿಕೆಗಳನ್ನು ಸೋರಿಕೆ ಮಾಡುವ ಘಟನೆಗಳಿಂದ ಎಚ್ಚರಿಸಲ್ಪಟ್ಟ ಕೆ.ಎಸ್.ಇ.ಎ.ಬಿ ಈ ವರ್ಷ ಪರೀಕ್ಷೆಯನ್ನು ವ್ಯಾಪಕ ಭದ್ರತಾ ವ್ಯವಸ್ಥೆಗಳೊಂದಿಗೆ ನಡೆಸಲು ಕ್ರಮಗಳನ್ನು ತೆಗೆದುಕೊಂಡಿದೆ. ಕೇಂದ್ರಗಳಲ್ಲಿ ಭದ್ರತಾ ಕೆಲಸ ಮತ್ತು ಪರೀಕ್ಷಾ ಕರ್ತವ್ಯದಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸಹ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸಲಾಗಿತ್ತು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-28/02/2026

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 28/02/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 339
Qty: 17270 Kg
Mx : 805
Mn: 625
Avg: 728

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 19
Qty: 1027 Kg
Mx : ₹ 916
Mn: ₹ 666
Avg: ₹ 858


For Daily Updates WhatsApp ‘HI’ to 7406303366