19.1 C
Sidlaghatta
Wednesday, December 24, 2025
Home Blog Page 2

ನಿಧಿಯ ಆಸೆಗೆ ಬಲಿಯಾದ ಇತಿಹಾಸ; ಗೋಪಮ್ಮನಬೆಟ್ಟದ ಬೃಹತ್ ಗರುಡಗಂಭ ಧ್ವಂಸ

0
Sidlaghatta Taluk Historical Gopemmana Betta Destruction

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ದಿಬ್ಬೂರಹಳ್ಳಿ ಸಮೀಪದ ಬಚ್ಚನಹಳ್ಳಿಯ ಗೋಪಮ್ಮನಬೆಟ್ಟದ ಮೇಲಿದ್ದ ಐತಿಹಾಸಿಕ ಹಾಗೂ ಕಲಾತ್ಮಕ ಬೃಹತ್ ಗರುಡಗಂಭವು ನಿಧಿಯ ಆಸೆಗೆ ಬಲಿಯಾಗಿದೆ. ದುಷ್ಕರ್ಮಿಗಳು ನಿಧಿ ಹುಡುಕುವ ಭರದಲ್ಲಿ ಈ ಬೃಹತ್ ಕಂಬವನ್ನು ಬೆಟ್ಟದ ಮೇಲಿನಿಂದ ಸುಮಾರು 30 ಅಡಿ ಕೆಳಕ್ಕೆ ಉರುಳಿಸಿದ್ದು, ಶತಮಾನಗಳ ಇತಿಹಾಸವಿರುವ ಸ್ಮಾರಕವು ಈಗ ಭಗ್ನಗೊಂಡಿದೆ.

ತಾಲ್ಲೂಕಿನಾದ್ಯಂತ ಇತ್ತೀಚಿನ ದಿನಗಳಲ್ಲಿ ಶಾಸನಗಳು, ವೀರಗಲ್ಲುಗಳು ಮತ್ತು ಐತಿಹಾಸಿಕ ಸ್ಮಾರಕಗಳನ್ನು ನಿಧಿಯ ಆಸೆಗೆ ಬಗೆಯುವ ಕೃತ್ಯಗಳು ಹೆಚ್ಚುತ್ತಿವೆ. ಈ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಶಾಸನತಜ್ಞ ಕೆ.ಧನಪಾಲ್, “ಶಾಸನಗಳು ಮತ್ತು ವೀರಗಲ್ಲುಗಳು ಇತಿಹಾಸದ ದಾಖಲೆಗಳೇ ಹೊರತು ಅವುಗಳ ಕೆಳಗೆ ಯಾರೂ ನಿಧಿಯನ್ನು ಹೂತಿಡುತ್ತಿರಲಿಲ್ಲ. ಇತಿಹಾಸದ ಈ ದಾಖಲೆಗಳೇ ನಮಗೆ ಅನರ್ಘ್ಯ ನಿಧಿಗಳು. ಇವುಗಳನ್ನು ನಾಶಪಡಿಸುವುದು ನಮ್ಮ ಪರಂಪರೆಯನ್ನೇ ಅಳಿಸಿದಂತೆ,” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಗೋಪಮ್ಮನಬೆಟ್ಟದ ಮೇಲಿದ್ದ ಈ ಗರುಡಗಂಭವು ಏಕಶಿಲೆಯಲ್ಲಿ ಕೆತ್ತಲ್ಪಟ್ಟ ಅದ್ಭುತ ಕಲಾಕೃತಿಯಾಗಿತ್ತು. ಶಾಸನತಜ್ಞ ಎ.ಎಂ.ತ್ಯಾಗರಾಜ್ ಮಾತನಾಡಿ, “ಆ ಕಾಲದಲ್ಲಿ ನಮ್ಮ ಹಿರಿಯರು ಇಷ್ಟು ದೊಡ್ಡ ಕಂಬವನ್ನು ಬೆಟ್ಟದ ಮೇಲೆ ಸಾಗಿಸಿ ಕೆತ್ತನೆ ಮಾಡಲು ಪಟ್ಟ ಶ್ರಮ ಅಪಾರ. ಅಂತಹ ಕಲಾಕೃತಿಯನ್ನು ಇಂದು ಮರುಸೃಷ್ಟಿಸಲು ಸಾಧ್ಯವಿಲ್ಲ. ಕನಿಷ್ಠ ಇರುವ ಸ್ಮಾರಕಗಳನ್ನಾದರೂ ಉಳಿಸಿಕೊಳ್ಳುವ ಪ್ರಜ್ಞೆ ನಮಗಿರಲಿ,” ಎಂದು ಮನವಿ ಮಾಡಿದ್ದಾರೆ.

ಜಿಲ್ಲಾ ಪಂಚಾಯಿತಿಗೆ ಮನವಿ: ಶಿಡ್ಲಘಟ್ಟ ತಾಲ್ಲೂಕಿನ ಗೆಜ್ಜಿಗಾನಹಳ್ಳಿ, ಕೊತ್ತನೂರು, ನಾಗಮಂಗಲ, ಮುತ್ತೂರು ಸೇರಿದಂತೆ ವಿವಿಧ ಗ್ರಾಮಗಳಲ್ಲಿರುವ ಶಾಸನಗಳನ್ನು ಸಂರಕ್ಷಿಸಬೇಕು ಎಂದು ಧನಪಾಲ್ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವರದಿಯನ್ನು ಸಲ್ಲಿಸಿದ್ದಾರೆ. ಪುರಾತತ್ವ ಇಲಾಖೆಯ ವತಿಯಿಂದ ತುರ್ತು ಸರ್ವೆ ನಡೆಸಿ ಈ ಐತಿಹಾಸಿಕ ಆಸ್ತಿಗಳನ್ನು ಕಾಪಾಡಬೇಕೆಂದು ಒತ್ತಾಯಿಸಲಾಗಿದೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟ ತಾಲ್ಲೂಕು ಪತ್ರಕರ್ತರ ಸಂಘದ ಚುನಾವಣೆ: ಎ.ಶಶಿಕುಮಾರ್ ನೂತನ ಅಧ್ಯಕ್ಷರಾಗಿ ಆಯ್ಕೆ

0
Sidlaghatta Journalists Union Election

Sidlaghatta : ಶಿಡ್ಲಘಟ್ಟ: ನಗರದ ಪತ್ರಕರ್ತರ ಭವನದಲ್ಲಿ ಭಾನುವಾರ ನಡೆದ ಶಿಡ್ಲಘಟ್ಟ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಯಲ್ಲಿ ಎ.ಶಶಿಕುಮಾರ್ ಅವರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಜಿದ್ದಾಜಿದ್ದಿನಿಂದ ಕೂಡಿದ್ದ ಈ ಚುನಾವಣೆಯಲ್ಲಿ ಶಶಿಕುಮಾರ್ ಅವರು ತಮ್ಮ ಪ್ರತಿಸ್ಪರ್ಧಿಗಿಂತ ಹೆಚ್ಚಿನ ಮತಗಳನ್ನು ಪಡೆದು ವಿಜಯ ಸಾಧಿಸಿದರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ ಸೊ.ಸು.ನಾಗೇಂದ್ರ, ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯರಾದ ನವಮೋಹನ್ ಮತ್ತು ದೇವರಾಜ್ ಅವರ ನೇತೃತ್ವದಲ್ಲಿ ಚುನಾವಣೆ ಪ್ರಕ್ರಿಯೆ ಜರುಗಿತು. ಅಧ್ಯಕ್ಷ ಸ್ಥಾನಕ್ಕಾಗಿ ನಡೆದ ಮತದಾನದಲ್ಲಿ ಎ.ಶಶಿಕುಮಾರ್ 10 ಮತಗಳನ್ನು ಪಡೆದರೆ, ಎನ್.ಇ.ಜಗದೀಶ್ ಬಾಬು 7 ಮತಗಳನ್ನು ಪಡೆದರು. ಕೇವಲ ಮೂರು ಮತಗಳ ಅಂತರದಿಂದ ಶಶಿಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾದರು.

ನೂತನ ಪದಾಧಿಕಾರಿಗಳ ಪಟ್ಟಿ: ಅಧ್ಯಕ್ಷರ ಆಯ್ಕೆಯ ನಂತರ ಉಳಿದ ಸ್ಥಾನಗಳಿಗೆ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

  • ಉಪಾಧ್ಯಕ್ಷರು: ಎನ್.ಇ.ಜಗದೀಶ್ ಬಾಬು
  • ಪ್ರಧಾನ ಕಾರ್ಯದರ್ಶಿ: ಎಸ್.ಮಂಜುನಾಥ್
  • ಕಾರ್ಯದರ್ಶಿ: ಬಿ.ವಿ.ಲೋಕೇಶ್
  • ಖಜಾಂಚಿ: ವೆಂಕಟೇಶ್

ಕಾರ್ಯಕಾರಿ ಸಮಿತಿ ಸದಸ್ಯರು: ಸಿ.ಇ.ಕರಗಪ್ಪ, ಇ.ನರಸಿಂಹಗೌಡ, ಎನ್.ನಾರಾಯಣಸ್ವಾಮಿ, ಎನ್.ಮಹೇಶ್, ಎನ್.ವಿ.ಶಿವಕುಮಾರ್ ಹಾಗೂ ಆರ್.ರಾಜೇಶ್ ಅವರು ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಕಾಗತಿ ನಾಗರಾಜಪ್ಪ, ಉಪಾಧ್ಯಕ್ಷ ಮುಬಶಿರ್ ಅಹಮ್ಮದ್, ಜಿಲ್ಲಾ ಕಾರ್ಯದರ್ಶಿ ಡಿ.ಜಿ.ಮಲ್ಲಿಕಾರ್ಜುನ, ಕಾರ್ಯಕಾರಿ ಸಮಿತಿ ಸದಸ್ಯ ಕೆ.ವಿ.ಮುನೇಗೌಡ, ಛಾಯಾ ರಮೇಶ್, ಮಿಥುನ್ ಕುಮಾರ್ ಹಾಗೂ ತಮೀಮ್ ಪಾಷ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-21/12/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 21/12/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 256
Qty: 13461 Kg
Mx : 786
Mn: 505
Avg: 706

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 10
Qty: 801 Kg
Mx : ₹ 906
Mn: ₹ 818
Avg: ₹ 871


For Daily Updates WhatsApp ‘HI’ to 7406303366

ವಾಸವಿ ಶಾಲೆಯಲ್ಲಿ ‘ಸಮುದಾಯ ಸಹಾಯಕರ ದಿನ’ ಆಚರಣೆ

0
Sidlaghatta Vasavi School Community Helpers Day Celebration

Sidlaghatta : ಶಿಡ್ಲಘಟ್ಟ ನಗರದ ವಾಸವಿ ವಿದ್ಯಾಸಂಸ್ಥೆಯಲ್ಲಿ ಶನಿವಾರ ಸಮುದಾಯ ಸಹಾಯಕರ ದಿನವನ್ನು (Community Helpers Day) ಅತ್ಯಂತ ವಿಭಿನ್ನವಾಗಿ ಆಚರಿಸಲಾಯಿತು. ಶಾಲೆಯ ಪುಟ್ಟ ಮಕ್ಕಳು ತಾವು ಭವಿಷ್ಯದಲ್ಲಿ ಆಗಬಯಸುವ ವೈದ್ಯರು, ಪೋಲಿಸ್, ಪೈಲಟ್, ಶಿಕ್ಷಕರು ಹಾಗೂ ವಕೀಲರಂತಹ ವಿವಿಧ ವೃತ್ತಿಪರರ ವೇಷಭೂಷಣಗಳನ್ನು ಧರಿಸಿ ಆಗಮಿಸಿ, ಆಯಾ ವೃತ್ತಿಯ ಮೂಲಕ ಸಮಾಜಕ್ಕೆ ಹೇಗೆ ನೆರವಾಗುತ್ತೇವೆಂಬುದನ್ನು ವಿವರಿಸಿದ್ದು ಎಲ್ಲರ ಗಮನ ಸೆಳೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತ ಮಾತನಾಡಿ, “ಮಕ್ಕಳೇ ಭವಿಷ್ಯದ ಭಾರತದ ರೂವಾರಿಗಳು. ಇಂತಹ ಕಾರ್ಯಕ್ರಮಗಳು ಮಕ್ಕಳಿಗೆ ಸಮಾಜದ ವಿವಿಧ ವೃತ್ತಿಗಳ ಬಗ್ಗೆ ಅರಿವು ಮೂಡಿಸುವುದಲ್ಲದೆ, ಅವರ ಇಚ್ಛೆಗೆ ಅನುಗುಣವಾಗಿ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾಗಿವೆ. ಸಮಾಜದ ಯಾವುದೇ ವೃತ್ತಿ ಕೀಳಲ್ಲ ಅಥವಾ ಮೇಲಲ್ಲ. ಮಕ್ಕಳು ಇಷ್ಟಪಟ್ಟು ಓದಿದಾಗ ಮಾತ್ರ ಜ್ಞಾನ ಸಂಪಾದನೆ ಸಾಧ್ಯ,” ಎಂದು ತಿಳಿಸಿದರು. ಅಲ್ಲದೆ, ಮುಂಬರುವ ದಿನಗಳಲ್ಲಿ ತಾವೇ ಸ್ವತಃ ಶಾಲೆಗೆ ಬಂದು ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಕುರಿತು ಉಪನ್ಯಾಸ ನೀಡುವುದಾಗಿ ಅವರು ಭರವಸೆ ನೀಡಿದರು.

Sidlaghatta Vasavi School Community Helpers Day Celebration

ಬಿಜೆಪಿ ತಾಲ್ಲೂಕು ಗ್ರಾಮಾಂತರ ಮಂಡಲ್ ಅಧ್ಯಕ್ಷ ಸೀಕಲ್ ಆನಂದ ಗೌಡ ಮಾತನಾಡಿ, ಇಂದಿನ ವೈಜ್ಞಾನಿಕ ಯುಗದಲ್ಲಿ ಮಕ್ಕಳ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವುದು ಪೋಷಕರು ಮತ್ತು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯಾಗಿದೆ. ಪೋಷಕರು ಮಕ್ಕಳ ಮೇಲೆ ಅನಗತ್ಯ ಒತ್ತಡ ಹಾಕಬಾರದು ಎಂದು ಕಿವಿಮಾತು ಹೇಳಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಸುಬ್ಬಾರೆಡ್ಡಿ ಅವರು ಸಮುದಾಯ ಪ್ರಜ್ಞೆ ಮೂಡಿಸುವ ಇಂತಹ ಕಾರ್ಯಕ್ರಮಗಳನ್ನು ಶ್ಲಾಘಿಸಿದರು. ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಮಹೇಶ್ ಬಾಬು, ಆಡಳಿತಾಧಿಕಾರಿ ರೂಪಸಿ ರಮೇಶ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಈ ಸಂಭ್ರಮಕ್ಕೆ ಸಾಕ್ಷಿಯಾದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-20/12/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 20/12/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 260
Qty: 13361 Kg
Mx : 788
Mn: 387
Avg: 721

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 07
Qty: 394 Kg
Mx : ₹ 891
Mn: ₹ 712
Avg: ₹ 852

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟ ತಾಲ್ಲೂಕು ಮಟ್ಟದ ‘ಪ್ರತಿಭಾ ಕಾರಂಜಿ’

0
Sidlaghatta Taluk Level Pratibha Karanji

Sidlaghatta : ಮಕ್ಕಳಲ್ಲಿ ಹುಟ್ಟಿನಿಂದಲೇ ಇರುವ ಅರಿವನ್ನು ಜಾಗೃತಗೊಳಿಸುವ ಮತ್ತು ಅವರಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಶಾಲಾ ಹಂತದಿಂದಲೇ ಆಗಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ (EO) ಆರ್. ಹೇಮಾವತಿ ತಿಳಿಸಿದರು.

ನಗರದ ಹೊರವಲಯದ ವರದನಾಯಕನಹಳ್ಳಿ ಗೇಟ್ ಬಳಿಯಿರುವ ಯೂನಿವರ್ಸಲ್ ಶಾಲಾ ಆವರಣದಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳ ‘ಪ್ರತಿಭಾ ಕಾರಂಜಿ’ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. “ಕೇವಲ ಬಹುಮಾನಗಳಿಗಾಗಿ ಸ್ಪರ್ಧೆಗಳಲ್ಲಿ ಭಾಗವಹಿಸುವುದಕ್ಕಿಂತ, ಬದುಕಿನ ಶಿಕ್ಷಣ ಮತ್ತು ಉಜ್ವಲ ಭವಿಷ್ಯಕ್ಕಾಗಿ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ನಿರಂತರ ಶ್ರಮ ಹಾಕಬೇಕು,” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ತಹಶೀಲ್ದಾರ್ ಗಗನಸಿಂಧು ಮಾತನಾಡಿ, “ಬಿಡುವಿನ ಸಮಯವನ್ನು ಸೃಜನಶೀಲ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಮೂಲಕ ಕೌಶಲಗಳನ್ನು ವೃದ್ಧಿಸಿಕೊಳ್ಳಬೇಕು. ಇದು ಉತ್ತಮ ವ್ಯಕ್ತಿತ್ವ ರೂಪಿಸಲು ಸಹಕಾರಿ. ಜಿಲ್ಲಾಮಟ್ಟದಲ್ಲಿ ತಾಲ್ಲೂಕನ್ನು ಪ್ರತಿನಿಧಿಸಿ ವಿಜೇತರಾಗುವ ಮಕ್ಕಳನ್ನು ತಾಲ್ಲೂಕು ಆಡಳಿತದ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಗುವುದು,” ಎಂದು ಘೋಷಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎ. ನರೇಂದ್ರಕುಮಾರ್ ಮಾತನಾಡಿ, ಪ್ರತಿಭಾ ಕಾರಂಜಿಯು ಮಕ್ಕಳಲ್ಲಿ ನಾಯಕತ್ವ ಗುಣ ಮತ್ತು ಸ್ಪರ್ಧಾ ಮನೋಭಾವವನ್ನು ಬೆಳೆಸುತ್ತದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಕೆ.ಎನ್. ಸುಬ್ಬಾರೆಡ್ಡಿ, ಹಂಡಿಗನಾಳ ಗ್ರಾ.ಪಂ ಅಧ್ಯಕ್ಷೆ ವೆಂಕಟಲಕ್ಷ್ಮಮ್ಮ ಸೇರಿದಂತೆ ಶಿಕ್ಷಣ ಇಲಾಖೆಯ ವಿವಿಧ ಅಧಿಕಾರಿಗಳು ಮತ್ತು ಶಿಕ್ಷಕ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಸ್ಪರ್ಧೆಗಳಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು ಮತ್ತು ವಿದ್ಯಾರ್ಥಿಗಳು ನಡೆಸಿಕೊಟ್ಟ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.

Sidlaghatta WhatsApp Channel Group

For Daily Updates WhatsApp ‘HI’ to 7406303366

ರೇಣುಕಾ ಯಲ್ಲಮ್ಮ ದೇಗುಲದಲ್ಲಿ 13ನೇ ವರ್ಷದ ಅನ್ನದಾನದ ವಾರ್ಷಿಕೋತ್ಸವ

0
Sidlaghatta Yellamma Devi Temple anniversary

Sidlaghatta : ಶಿಡ್ಲಘಟ್ಟ ನಗರದ ಶ್ರೀ ರೇಣುಕಾ ಯಲ್ಲಮ್ಮದೇವಿ ದೇವಾಲಯದಲ್ಲಿ ಶುಕ್ರವಾರ ಶ್ರೀ ರೇಣುಕಾ ಯಲ್ಲಮ್ಮ ಅನ್ನಪೂರ್ಣೇಶ್ವರಿದೇವಿ 13ನೇ ವರ್ಷದ ಅನ್ನದಾನದ ವಾರ್ಷಿಕೋತ್ಸವವನ್ನು ಅತ್ಯಂತ ಭಕ್ತಿ ಸೌರಭದಿಂದ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಶಿವನಾಪುರ ವಹ್ನಿಕುಲ ಕ್ಷತ್ರಿಯ ಗುರುಪೀಠದ ಶ್ರೀ ಪ್ರಣವಾನಂದ ಮಹಾಸ್ವಾಮೀಜಿ ಅವರು ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು.

“ಧರ್ಮ ಎನ್ನುವುದು ಕೇವಲ ಆಚರಣೆಯಲ್ಲ, ಅದು ಮನುಷ್ಯನ ಬದುಕಿನ ದಾರಿ. ದಯೆ, ಸಹನೆ ಮತ್ತು ಎಲ್ಲರನ್ನೂ ಒಳಗೊಳ್ಳುವ ಗುಣವೇ ನಿಜವಾದ ಧರ್ಮವನ್ನು ಪ್ರತಿನಿಧಿಸುತ್ತದೆ. ‘ದಯವೇ ಧರ್ಮದ ಮೂಲ’ ಎಂಬಂತೆ ಸಕಲ ಜೀವರಾಶಿಗಳ ಮೇಲೆ ಕರುಣೆ ತೋರುವುದು ಅಗತ್ಯ. ಆಚಾರ ಮತ್ತು ವಿಚಾರಗಳು ಮನುಷ್ಯನನ್ನು ಸಂಸ್ಕಾರವಂತನನ್ನಾಗಿ ಮಾಡುತ್ತವೆ,” ಎಂದು ಸ್ವಾಮೀಜಿ ತಿಳಿಸಿದರು. ಆಧುನಿಕ ಕಾಲದಲ್ಲಿ ಭೌತಿಕ ಪ್ರಗತಿಯಿಂದ ಕಳೆದುಹೋಗುತ್ತಿರುವ ಮಾನಸಿಕ ನೆಮ್ಮದಿಯನ್ನು ಮರಳಿ ಪಡೆಯಲು ಮಹಾಪುರುಷರ ಆದರ್ಶಗಳು ಯುವಜನತೆಗೆ ದಾರಿದೀಪವಾಗಬೇಕು ಎಂದು ಅವರು ಕಿವಿಮಾತು ಹೇಳಿದರು.

ವಾರ್ಷಿಕೋತ್ಸವದ ಅಂಗವಾಗಿ ದೇವಿಗೆ ವಿಶೇಷ ಹೂವಿನ ಮತ್ತು ಹಣ್ಣಿನ ಅಲಂಕಾರಗಳನ್ನು ಮಾಡಲಾಗಿತ್ತು. ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಜರುಗಿದವು. ಮಹಾಮಂಗಳಾರತಿಯ ನಂತರ ಭಕ್ತಾದಿಗಳಿಗೆ ಬೃಹತ್ ಅನ್ನಸಂತರ್ಪಣೆ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಮಾದವಪ್ಪ ಸ್ವಾಮಿ, ಕರಗದ ಪೂಜಾರಿಗಳಾದ ಮುನಿಕೃಷ್ಣ, ರಮೇಶ್ ಹಾಗೂ ಶ್ರೀ ಧರ್ಮರಾಯಸ್ವಾಮಿ ವಹ್ನಿಕುಲ ಕ್ಷತ್ರಿಯ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಪ್ರದೀಪ್ ದೀಪು ಸೇರಿದಂತೆ ಹಲವಾರು ಮುಖಂಡರು ಮತ್ತು ಭಕ್ತಾದಿಗಳು ಪಾಲ್ಗೊಂಡಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-19/12/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 19/12/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 226
Qty: 11220 Kg
Mx : 790
Mn: 627
Avg: 718

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 08
Qty: 452 Kg
Mx : ₹ 871
Mn: ₹ 813
Avg: ₹ 827

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಿಡ್ಲಘಟ್ಟದಲ್ಲಿ ಅಕ್ರಮ ಗ್ಯಾಸ್ ರೀಫಿಲಿಂಗ್ ದಂಧೆ ಪತ್ತೆ: 24 ಸಿಲಿಂಡರ್ ವಶ

0
sidlaghatta illegal gas refilling raid accused arrested

Sidlaghatta : ಶಿಡ್ಲಘಟ್ಟ ನಗರದ ಅಂಜನಿ ಬಡಾವಣೆಯಲ್ಲಿ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ನಡೆಯುತ್ತಿದ್ದ ಗ್ಯಾಸ್ ರೀಫಿಲಿಂಗ್ (Illegal Gas Refilling) ಅಡ್ಡದ ಮೇಲೆ ಶಿಡ್ಲಘಟ್ಟ ನಗರ ಪೊಲೀಸರು ದಾಳಿ ನಡೆಸಿ, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವೇಣುಗೋಪಾಲ್ ಎಂ ಮತ್ತು ತಂಡವು ಈ ಕಾರ್ಯಾಚರಣೆ ನಡೆಸಿದೆ.

ಗುರುವಾರ ಮಧ್ಯಾಹ್ನ ನಗರದ ಅಂಜನಿ ಬಡಾವಣೆಯ ವಾರ್ಡ್ ನಂ. 1 ರಲ್ಲಿರುವ ಮಂಜುನಾಥ ಎಂಬುವರ ಸ್ವತ್ತಿನಲ್ಲಿದ್ದ ಆಟೋ ಮೊಬೈಲ್ ಅಂಗಡಿಯೊಂದರಲ್ಲಿ ಅಕ್ರಮವಾಗಿ ಗ್ಯಾಸ್ ತುಂಬಿಸುವ ಕೆಲಸ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭ್ಯವಾಗಿತ್ತು. ಈ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು, ಲಕ್ಕಹಳ್ಳಿ ಗ್ರಾಮದ ನಿವಾಸಿ ಗೋಪಾಲ್ (43) ಎಂಬುವವರನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಯ ವೇಳೆ 24 ಗ್ಯಾಸ್ ಸಿಲಿಂಡರ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳಲ್ಲಿ ಇಂಡೇನ್ ಕಂಪನಿಯ 16 ತುಂಬಿದ ಮತ್ತು 4 ಖಾಲಿ ಸಿಲಿಂಡರ್‌ಗಳು, ಭಾರತ್ ಕಂಪನಿಯ 4 ತುಂಬಿದ ಸಿಲಿಂಡರ್‌ಗಳು ಹಾಗೂ 2 ಸಣ್ಣ ಖಾಲಿ ಸಿಲಿಂಡರ್‌ಗಳು ಸೇರಿವೆ. ಇದಲ್ಲದೆ, ಗ್ಯಾಸ್ ರೀಫಿಲಿಂಗ್‌ಗೆ ಬಳಸುತ್ತಿದ್ದ ತೂಕದ ಯಂತ್ರ, ರೀಫಿಲಿಂಗ್ ಮೋಟಾರ್, ಗ್ಯಾಸ್ ಕನೆಕ್ಟಿಂಗ್ ಪೈಪ್‌ಗಳು ಮತ್ತು ಒಂದು ಬಜಾಜ್ ಆಟೋವನ್ನು ಪೊಲೀಸರು ಅಮಾನತ್ತುಪಡಿಸಿಕೊಂಡಿದ್ದಾರೆ. ಆರೋಪಿ ಗೋಪಾಲ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಳ್ಳಲಾಗಿದೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶಾರ್ಟ್ ಸರ್ಕ್ಯೂಟ್‌ನಿಂದ ರೇಷ್ಮೆ ಶೆಡ್‌ಗೆ ಬೆಂಕಿ; 250 ಚಂದ್ರಂಕಿಗಳು ಭಸ್ಮ

0
Accidental Fire due to Short Circuit

Doddadasarahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ದೊಡ್ಡದಾಸರಹಳ್ಳಿ ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ (Short Circuit) ರೇಷ್ಮೆ ಚಂದ್ರಂಕಿಯ ಶೆಡ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ, ಸುಮಾರು 250ಕ್ಕೂ ಹೆಚ್ಚು ರೇಷ್ಮೆ ಚಂದ್ರಂಕಿಗಳು ಸುಟ್ಟು ಕರಕಲಾಗಿರುವ ಘಟನೆ ಬುಧವಾರ ರಾತ್ರಿ ಸಂಭವಿಸಿದೆ. ಗ್ರಾಮದ ರೈತ ವೆಂಕಟಸ್ವಾಮಿ ಅವರಿಗೆ ಸೇರಿದ ಶೆಡ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕರು, BESCOM ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಕಸಬಾ ರಾಜಸ್ವ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಾನಿಯ ಬಗ್ಗೆ ಸರ್ಕಾರಕ್ಕೆ ಸಮಗ್ರ ವರದಿ ಸಲ್ಲಿಸಿ, ವಿಪತ್ತು ನಿರ್ವಹಣಾ ಅಧಿನಿಯಮದಡಿ (Disaster Management Act) ಸಂತ್ರಸ್ತ ರೈತನಿಗೆ ಶೀಘ್ರವಾಗಿ ಪರಿಹಾರ ಕೊಡಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿ ರೈತನಿಗೆ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್ ಮಾತನಾಡಿ, “ಕಷ್ಟಪಟ್ಟು ಬೆಳೆದ ಬೆಳೆ ಕೈಗೆ ಬರುವ ಸಮಯದಲ್ಲಿ ರೈತನಿಗೆ ಇಂತಹ ಆಪತ್ತು ಬಂದಿರುವುದು ದುರದೃಷ್ಟಕರ. ಸರ್ಕಾರವು ಕೂಡಲೇ ರೈತ ವೆಂಕಟಸ್ವಾಮಿ ಅವರಿಗೆ 2 ಲಕ್ಷ ರೂಪಾಯಿಗಳ ವಿಶೇಷ ಪರಿಹಾರ ನೀಡಬೇಕು. ಪ್ರಸ್ತುತ ಜಾರಿಯಲ್ಲಿರುವ ಆಪತ್ತು ನಿರ್ವಹಣಾ ಪರಿಹಾರಧನ ತೀರಾ ಕಡಿಮೆಯಿದ್ದು, ಅದನ್ನು ಹೆಚ್ಚಿಸಬೇಕು ಹಾಗೂ ನಷ್ಟ ಸಂಭವಿಸಿದ 7 ದಿನಗಳ ಒಳಗಾಗಿ ಪರಿಹಾರ ವಿತರಿಸಬೇಕು” ಎಂದು ಒತ್ತಾಯಿಸಿದರು. ಈ ವೇಳೆ ಗ್ರಾಮದ ಮುಖಂಡರಾದ ದೇವರಾಜ್, ಮಂಜುನಾಥ್ ಹಾಗೂ ನೊಂದ ರೈತ ವೆಂಕಟಸ್ವಾಮಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

error: Content is protected !!