25.6 C
Sidlaghatta
Tuesday, July 1, 2025
Home Blog Page 2

ಜೂ.30 ರಂದು ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ

0
Sidlaghatta june 30 farmers protest

Sidlaghatta : ಜಂಗಮಕೋಟೆ ಹೋಬಳಿಯಲ್ಲಿ ಕೆಐಎಡಿಬಿಯು ಜಮೀನುಗಳನ್ನು ಸ್ವಾನಪಡಿಸಿಕೊಂಡು ಕೈಗಾರಿಕೆಗಳನ್ನು ಆರಂಭಿಸುವಂತೆ ಒತ್ತಾಯಿಸಿ ಜಂಗಮಕೋಟೆ ಕೆಐಎಡಿಬಿ ರೈತ ಪರ ಹೋರಾಟ ಸಮಿತಿಯು ಜೂ.30 ರಂದು ಸೋಮವಾರ ತಾಲ್ಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದೆ.

ಕೆಐಎಡಿಬಿ ರೈತಪರ ಹೋರಾಟ ಸಮಿತಿಯು ಹಮ್ಮಿಕೊಂಡಿರುವ ಮೆರವಣಿಗೆ ಮತ್ತು ಪ್ರತಿಭಟನೆಗೆ ದಲಿತ ಸಂಘಟನೆಗಳ ಒಕ್ಕೂಟ, ರೈತ ಸಂಘಟನೆಗಳ ಒಕ್ಕೂಟ, ಕನ್ನಡಪರ ಸಂಘಟನೆಗಳ ಒಕ್ಕೂಟ, ಮಹಿಳಾ ಸಂಘಟನೆಗಳ ಒಕ್ಕೂಟ ಬೆಂಬಲ ವ್ಯಕ್ತಪಡಿಸಿದೆ.

ತಾಲ್ಲೂಕಿನ ಚಿಕ್ಕದಾಸರಹಳ್ಳಿಯ ಶ್ರೀಬ್ಯಾಟರಾಯಸ್ವಾಮಿ ದೇವಾಲಯ ಆವರಣದಲ್ಲಿ ಕೆಐಎಡಿಬಿ ರೈತ ಪರ ಹೋರಾಟ ಸಮಿತಿಯ ಸಭೆ ನಡೆಸಿ ಸಭೆಯಲ್ಲಿ ಜೂ.30 ರಂದು ನಡೆಯುವ ಮೆರವಣಿಗೆ, ಪ್ರತಿಭಟನೆ ಕುರಿತು ಚರ್ಚಿಸಿ ತೀರ್ಮಾನಿಸಲಾಯಿತು.

ಈ ಕುರಿತು ಜಂಗಮಕೋಟೆ ಕೆಐಎಡಿಬಿ ರೈತ ಪರ ಹೋರಾಟ ಸಮಿತಿಯ ಪ್ರತೀಶ್ ಸುದ್ದಿಗಾರರೊಂದಿಗೆ ಮಾತನಾಡಿ, ಅದಷ್ಟು ಬೇಗ ಕೆಐಎಡಿಬಿಯು ಜಮೀನಿನ ಸ್ವಾಧೀನ ಪ್ರಕ್ರಿಯೆ ನಡೆಸಿ ಕೈಗಾರಿಕೆಗಳನ್ನು ಆರಂಭಿಸಬೇಕು. ತಾಲ್ಲೂಕಿನ ಪ್ರತಿ ಮನೆಗೂ ಒಂದು ಉದ್ಯೋಗ ಕೊಡಬೇಕೆಂದು ಆಗ್ರಹಿಸಿದರು.

ನಡಿಪಿನಾಯಕನಹಳ್ಳಿ ಗ್ರಾಮದ ರೈತ ಚನ್ನಕೃಷ್ಣಪ್ಪನ ಮೇಲೆ ದೌರ್ಜನ್ಯ ನಡೆಸುತ್ತಿರುವವರ ವಿರುದ್ದ ಪ್ರಕರಣ ದಾಖಲಿಸಬೇಕು ಮತ್ತು ಚನ್ನಕೃಷ್ಣಪ್ಪನ ಮೇಲೆ ದಾಖಲಾಗಿರುವ ಸುಳ್ಳು ಕೇಸನ್ನು ರದ್ದುಪಡಿಸಬೇಕು. ಅನೇಕ ಮಂದಿ ರೈತರಿಗೆ ಆಸೆ ಆಮಿಷಗಳನ್ನು ಒಡ್ಡಿ ಪಿಎಸಿಎಲ್ ಕಂಪನಿಗೆ ಜಮೀನುಗಳನ್ನು ಜಿಪಿಎ ಮಾಡಿದ್ದು ಪಿಎಸಿಎಲ್ ಕಂಪನಿ ವಿರುದ್ದ ಕ್ರಮ ತೆಗೆದುಕೊಳ್ಳಬೇಕು. ಪಿಎಸಿಎಲ್ ಕಂಪನಿಯು ಜಿಪಿಎ ಮಾಡಿಕೊಂಡ ಜಮೀನಿನ ಮೂಲ ಮಾಲೀಕರಿಗೆ ಕೆಐಎಡಿಬಿಯು ಹಣ ಪಾವತಿಸಬೇಕು ಎಂದು ಆಗ್ರಹಿಸಿದರು.

ಈ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಜೂನ್ 30 ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಶಿಡ್ಲಘಟ್ಟ ನಗರದ ಸಾರಿಗೆ ಬಸ್ ನಿಲ್ದಾಣದ ಇಂದಿರಾ ಕ್ಯಾಂಟೀನ್‌ ನಿಂದ ತಾಲ್ಲೂಕು ಕಚೇರಿಯವರೆಗೂ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ತಾತಹಳ್ಳಿ ಚಲಪತಿ, ಕಸ್ತೂರಿ ಕನ್ನಡ ಜನಪರ ವೇದಿಕೆ ಜಿಲ್ಲಾಧ್ಯಕ್ಷ ರಾಮಾಂಜನೇಯ, ಮಳಮಾಚನಹಳ್ಳಿ ರಾಮಾಂಜಿ, ಪ್ರದೀಪ್, ಜಿಲ್ಲಾ ಕಾರ್ಯಾಧ್ಯಕ್ಷ ಎಚ್.ಎನ್.ಕದಿರೇಗೌಡ, ಭಕ್ತರಹಳ್ಳಿ ವಿಶ್ವನಾಥ್, ಸ್ವಾಭಿಮಾನಿ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕಿ ನಾಗವೇಣಿ, ಮಾದಿಗ ದಂಡೋರ ಕೃಷ್ಣಪ್ಪ, ದಲಿತ ಮುಖಂಡರಾದ ಜೆ.ಎನ್.ಪ್ರಕಾಶ್, ರಾಮದಾಸ್, ರೈತ ಸಂಘದ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಸುಬ್ರಮಣಿ, ತಾಲ್ಲೂಕು ಅಧ್ಯಕ್ಷ ಮುನೇಗೌಡ, ಪ್ರದೀಪ್, ಈರಪ್ಪ, ಮಧು, ರಾಜೇಶ್, ಗಂಗಧರ್, ಮೂರ್ತಿ ಸಭೆಯಲ್ಲಿ ಭಾಗವಹಿಸಿದ್ದರು.

For Daily Updates WhatsApp ‘HI’ to 7406303366

ಕುಂಬಿಗಾನಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಬಿ.ತಿಮ್ಮಸಂದ್ರ ರಾಮಕೃಷ್ಣಪ್ಪ ಆಯ್ಕೆ

0
Sidlaghatta Kumbiganahalli Gram Panchayat

Kumbiganahalli, sidlaghatta : ಶಿಡ್ಲಘಟ್ಟ ತಾಲ್ಲೂಕಿನ ಕುಂಬಿಗಾನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಿ.ತಿಮ್ಮಸಂದ್ರ ಗ್ರಾಮದ ರಾಮಕೃಷ್ಣಪ್ಪ 11 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರೆ, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ 9 ಮತಗಳನ್ನು ಪಡೆದ ಸೋಲು ಅನುಭವಿಸಿದ್ದಾರೆ.

ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಬಿ.ತಿಮ್ಮಸಂದ್ರ ರಾಮಕೃಷ್ಣಪ್ಪ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಹಾರಡಿ ಬೈರೇಗೌಡ ಅವರ ಎರಡು ನಾಮಪತ್ರ ಸಲ್ಲಿಕೆಯಾಗಿತ್ತು.

ನೂತನ ಅಧ್ಯಕ್ಷ ಬಿ.ತಿಮ್ಮಸಂದ್ರ ರಾಮಕೃಷ್ಣಪ್ಪ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಗ್ರಾಮ ಪಂಚಾಯಿತಿ ಮೂಲಕ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಮಾಡುತ್ತೇನೆ. ಅಭಿವೃದ್ಧಿಗೆ ಎಲ್ಲಾ ಸದಸ್ಯರ ಜೊತೆಗೂಡಿ ಶ್ರಮಿಸುತ್ತೇನೆ. ಗ್ರಾಮಗಳ ಅಭಿವೃದ್ಧಿಗೂ ಒತ್ತು ನೀಡಲಾಗುವುದು” ಎಂದು ಹೇಳಿದರು.

ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಗೆ ಚುನಾವಣಾ ಅಧಿಕಾರಿಯಾಗಿ ಕೃಷಿ ಇಲಾಖೆ ಅಧಿಕಾರಿ ರವಿ ರವರು ಕಾರ್ಯ ನಿರ್ವಹಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್‌.ಪಿ ನಾಗರಾಜ್, ವಿ. ಲೋಕೇಶ್, ಸಿದ್ಧಲಿಂಗಪ್ಪ, ಮುನಿರಾಜು, ರಾಮ್ ದಾಸ್, ನಾಗಮಣಿ ಕೇಶವಮೂರ್ತಿ, ರಾಜಣ್ಣ, ಮಂಜುನಾಥ್, ಅಶ್ವಿನಿ, ನಾಗಲಕ್ಷ್ಮಿ, ನಾಗರತ್ನಮ್ಮ, ಮುಖಂಡರಾದ ಎಚ್‌.ಪಿ.ಆಂಜಿನಪ್ಪ, ದೇವಣ್ಣ, ಹೇಮರ್ಲಹಳ್ಳಿ ಕೇಶವ ಮೂರ್ತಿ, ಶಾಂತಕುಮಾರ, ರಾಮಣ್ಣ, ವೆಂಕಟರೆಡ್ಡಿ, ರಾಘು, ದೇವರಾಜ್, ಮಂಜುನಾಥ್, ಆಂಜಿನಪ್ಪ ಹಾಜರಿದ್ದರು.

For Daily Updates WhatsApp ‘HI’ to 7406303366

Sidlaghatta Silk Cocoon Market-28/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 28/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 495
Qty: 28479 Kg
Mx : ₹ 596
Mn: ₹ 286
Avg: ₹ 516

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 12
Qty: 795 Kg
Mx : ₹ 590
Mn: ₹ 502
Avg: ₹ 563


For Daily Updates WhatsApp ‘HI’ to 7406303366

ಶಿಡ್ಲಘಟ್ಟದಲ್ಲಿ ಸಡಗರ ಸಂಭ್ರಮದಿಂದ ನಾಡಪ್ರಭು ಶ್ರೀ ಕೆಂಪೇಗೌಡರ ಜಯಂತ್ಯುತ್ಸವ ಆಚರಣೆ

0
Sidlaghatta Kempegowda Jayanti 2025 celebration

Sidlaghatta : ಕೆಂಪೇಗೌಡರು ಎಲ್ಲ ಮತಧರ್ಮಗಳನ್ನು ಸಮಭಾವದಿಂದ ಕಂಡವರು. ಅನೇಕ ಚಕ್ರವರ್ತಿಗಳು, ಸಾಮ್ರಾಟರು, ರಾಜ ಮನೆತನಗಳು ಕಟ್ಟಿದ ರಾಜಧಾನಿಗಳು, ಬೃಹತ್ ನಗರಗಳು ಇಂದು ಅಸ್ತಿತ್ವದಲ್ಲಿಲ್ಲ. ಆದರೆ ಕೆಂಪೇಗೌಡರು ಕಟ್ಟಿದ ಬೆಂಗಳೂರು ಈಗಲೂ ಉತ್ತರೋತ್ತರವಾಗಿ ಬೆಳೆಯುತ್ತಲೇ ಇದೆ. ನಾಡಿನ ಅಭಿವೃದ್ಧಿ ಚಿಂತಕರಿಗೆ ಅವರು ಮಾದರಿ ಎಂದು ಶಾಸಕ ಬಿ.ಎನ್.ರವಿಕುಮಾರ್ ತಿಳಿಸಿದರು.

ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಾಡ ಹಬ್ಬಗಳ ಆಚರಣಾ ಸಮಿತಿ ಹಾಗೂ ತಾಲ್ಲೂಕು ಕೆಂಪೇಗೌಡ ಆಚರಣಾ ಸಮಿತಿಯಿಂದ ಹಮ್ಮಿಕೊಂಡಿದ್ದ ನಾಡಪ್ರಭು ಕೆಂಪೇಗೌಡ ಅವರ 516 ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾಡಪ್ರಭುಗಳು ಬೆಂಗಳೂರಿನ ನಿರ್ಮಾತೃ, ಅಪ್ರತಿಮ ಆಡಳಿತಗಾರರಷ್ಟೇ ಆಗಿರಲಿಲ್ಲ, ಅವರೊಬ್ಬರು ಅನನ್ಯ ದಾರ್ಶನಿಕರು, ಶಾಂತಿಪ್ರಿಯರು, ಸರ್ವಜನರ ಶ್ರೇಯಸ್ಸಿಗಾಗಿ ದುಡಿದ ಮಹಾನ್ ಮಾನವತಾವಾದಿ. ಅಭಿವೃದ್ಧಿ, ಶಾಂತಿ, ಸೌಹಾರ್ದತೆ, ನಗರಾಭಿವೃದ್ಧಿ, ನೀರಾವರಿ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ನಾಡಪ್ರಭುಗಳು ಹಾಕಿಕೊಟ್ಟ ಹಾದಿ ನಮಗೆ ಮಾದರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಒಕ್ಕಲಿಗ ಸಮುದಾಯದ 108 ಮಂದಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನಡೆಸಿಕೊಡಲಾಯಿತು.

ನಂತರ ಚಿಂತಾಮಣಿ ಮಾರ್ಗದಲ್ಲಿನ ಶ್ರೀಕೆಂಪೇಗೌಡರ ಪುತ್ಥಳಿಗೆ ಶಾಸಕರು ಹಾಗೂ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ಮುಖಂಡರು ಮಾಲಾರ್ಪಣೆ ಮಾಡಿದರು.

ಸಾರಿಗೆ ಬಸ್ ನಿಲ್ದಾಣದ ಶ್ರೀಸಲ್ಲಾಪುರಮ್ಮ ದೇವಿ ದೇವಾಲಯದ ಆವರಣದಲ್ಲಿ ಮುತ್ತಿನ ಪಲ್ಲಕ್ಕಿಗಳ ಮೆರವಣಿಗೆಗೆ ಶಾಸಕ ಬಿ.ಎನ್.ರವಿಕುಮಾರ್ ಚಾಲನೆ ನೀಡಿದರು. ನಗರದ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕ್ಕಿಗಳ ಮೆರವಣಿಗೆ ಸಾಗಿತು. ವಿವಿಧ ಜನಪದ ಕಲಾ ತಂಡಗಳು ಮೆರವಣಿಗೆಗೆ ಕಳೆ ಕಟ್ಟಿದ್ದವು.

ಕೆಂಪೇಗೌಡರ ಬದುಕು ಸಾಧನೆ ಕುರಿತು ಹಾಡುಗಳು, ಘೋಷಣೆಗಳು ಮುಗಿಲು ಮುಟ್ಟಿದ್ದವು. ಕೋಟೆ ವೃತ್ತದಲ್ಲಿ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕಾರ್ಯಕ್ರಮಕ್ಕೆ ಸಹಕಾರ ನೀಡಿದ ಪ್ರಮುಖರನ್ನು ಸನ್ಮಾನಿಸಲಾಯಿತು. ಮೆರವಣಿಗೆಯಲ್ಲಿ ಭಾಗವಹಿಸಿದ್ದ ಮುತ್ತಿನ ಪಲ್ಲಕ್ಕಿಗಳ ವಾಹನಗಳಿಗೆ ನೆನಪಿನ ಕಾಣಿಕೆ ನೀಡಲಾಯಿತು.

ಶಾಸಕ ಬಿ.ಎನ್.ರವಿಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಕಾಂಗ್ರೆಸ್ ಮುಖಂಡ ರಾಜೀವ್‌ಗೌಡ, ಆಂಜಿನಪ್ಪ, ಸೀಕಲ್ ಆನಂದಗೌಡ, ಅಪ್ಪೇಗೌಡನಹಳ್ಳಿ ಕೆ.ಲಕ್ಷ್ಮೀನಾರಾಯಣರೆಡ್ಡಿ, ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ನಾರಾಯಣಸ್ವಾಮಿ, ಯುವ ಸೇನೆ ಅಧ್ಯಕ್ಷ ವೆಂಕಟಸ್ವಾಮಿ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ನಗರಸಭೆ ಅಧ್ಯಕ್ಷ ವೆಂಕಟಸ್ವಾಮಿ, ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಮೇಲೂರು ಮಂಜುನಾಥ್,ತಹಶೀಲ್ಧಾರ್ ಗಗನ ಸಿಂಧು, ಇಒ ಹೇಮಾವತಿ, ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಶ್ರೀನಿವಾಸ್, ನಗರಸಭೆ ಪೌರಾಯುಕ್ತ ಮೋಹನ್ ಕುಮಾರ್ ಸೇರಿದಂತೆ ಎಲ್ಲ ಇಲಾಖೆ ಅಧಿಕಾರಿಗಳು, ಸಿಬ್ಬಂದಿ, ಸಂಘ ಸಂಸ್ಥೆಗಳ ಮುಖಂಡರು, ಸಾರ್ವಜನಿಕರು ಕೆಂಪೇಗೌಡರ ಉತ್ಸವದಲ್ಲಿ ಪಾಲ್ಗೊಂಡಿದ್ದರು.

For Daily Updates WhatsApp ‘HI’ to 7406303366

SSLC ಕಡಿಮೆ ಫಲಿತಾಂಶ, ವೇತನ ಬಡ್ತಿ ತಡೆ; ಅನುದಾನಿತ ಶಾಲಾ ಶಿಕ್ಷಕರ ಮೇಲೆ ಇಲಾಖೆ ಪ್ರಹಾರ

0
government SSLC Aided School Teachers Salary Increment

Sidlaghatta : ವಿಷಯ ಶಿಕ್ಷಕರ ವೇತನಾನುದಾನವನ್ನು ತಡೆಯಿಡಿಯುವುದಾಗಿ ಶಿಕ್ಷಣ ಇಲಾಖೆಯು ಅನುದಾನಿತ ಶಿಕ್ಷಕರ ಮೇಲೆ ಪ್ರಹಾರ ಮಾಡಿದ್ದು, ಅದನ್ನು ತಕ್ಷಣವೇ ಕೈಬಿಡಬೇಕು ಎಂದು ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘವು ಆಗ್ರಹಿಸಿದೆ.

ನಗರದ ಸರಸ್ವತಿ ಕಾನ್ವೆಂಟ್ ಪ್ರೌಢಶಾಲೆಯಲ್ಲಿ ನಡೆದ ಪತ್ರಿಕಾ ಗೋಷ್ಟಿಯಲ್ಲಿ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ.ವೆಂಕಟರೆಡ್ಡಿ ಮಾತನಾಡಿ,

ಕಳೆದ ಏಪ್ರಿಲ್‌ ನಲ್ಲಿ ನಡೆದ ಎಸ್‌.ಎಸ್‌.ಎಲ್‌.ಸಿ ಪರೀಕ್ಷಾ ಫಲಿತಾಂಶಕ್ಕೆ ಸಂಬಂಧಿಸಿದಂತೆ ಅನುದಾನಕ್ಕೆ ಒಳಪಟ್ಟಿರುವ ಪ್ರೌಢಶಾಲೆಗಳ ಸಹ ಶಿಕ್ಷಕರ ವಿಷಯವಾರು ಫಲಿತಾಂಶವನ್ನು ಪರಿಗಣಿಸಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ಬಂದಿರುವ ವಿಷಯಗಳ ಬೋಧಕರನ್ನು ಗುರುತಿಸಿ ಅಂತವರ ವಾರ್ಷಿಕ ವೇತನ ಬಡ್ತಿಯನ್ನು ತಡೆಯಿಡಿಯುವುದು ಹಾಗೂ ಅನುದಾನ ಪಡೆಯುತ್ತಿರುವ ವಿಷಯ ಶಿಕ್ಷಕರು ನಿರಂತರ ಮೂರು ವರ್ಷಗಳಲ್ಲಿ ಶೇ 60 ಕ್ಕಿಂತ ಕಡಿಮೆ ಫಲಿತಾಂಶ ನೀಡಿದ್ದಲ್ಲಿ ಅಂತಹ ವಿಷಯ ಶಿಕ್ಷಕರ ವೇತನಾನುದಾನವನ್ನು ತಡೆಯಿಡಿಯುವುದಾಗಿ ಇಲಾಖೆಯು ಅನುದಾನಿತ ಶಿಕ್ಷಕರ ಮೇಲೆ ಪ್ರಹಾರ ಮಾಡಿದೆ. ಅದನ್ನು ತಕ್ಷಣವೇ ಕೈಬಿಡಬೇಕು ಎಂದು ಒತ್ತಾಯಿಸಿದರು.

ಎಸ್‌.ಎಸ್‌.ಎಲ್‌.ಸಿ ಫಲಿತಾಂಶ ಕಡಿಮೆ ಬರುವುದಕ್ಕೆ ಕೇವಲ ಪ್ರೌಢಶಾಲಾ ಶಿಕ್ಷಕರು ಮಾತ್ರ ಕಾರಣವಾಗದೇ ವಿದ್ಯಾರ್ಥಿಗಳು ತಾವು ಬೆಳೆದು ಬಂದಿರುವ ಪರಿಸರ. ಪ್ರಾಥಮಿಕ ಹಂತದಲ್ಲಿ ಕಲಿತಿರುವಂತಹ ಶಿಕ್ಷಣವೂ ಕಾರಣವಾಗುತ್ತದೆ. ಏಳನೇ ತರಗತಿಯವರೆಗೆ ಯಾವುದೇ ರೀತಿಯ ಗುಣಾತ್ಮಕ, ನಿರ್ಣಯಾತ್ಮಕ ಮಾನದಂಡಗಳ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಇಲ್ಲದೇ ಇರುವುದರಿಂದ ನೇರವಾಗಿ ಯಾವುದೇ ಅಡೆತಡೆಗಳಿಲ್ಲದೆ ಕನಿಷ್ಠ ಸಂಖ್ಯಾಜ್ಞಾನ, ಮೂಲಭೂತ ಸಾಕ್ಷರತೆ ಪಡೆಯದಿರುವ, ಮಕ್ಕಳು ಎಂಟನೇ ತರಗತಿಗೆ ಪ್ರವೇಶ ಪಡೆಯುತ್ತಿರುವುದೂ ಮತ್ತೊಂದು ಕಾರಣ. ಪೋಷಕರು ಹಾಗೂ ಕೆಲವು ಶಾಲಾ ಆಡಳಿತ ಮಂಡಳಿಯ ಅಸಹಕಾರ, ವಿದ್ಯಾರ್ಥಿಗಳ ನಿರಂತರ ಗೈರು ಹಾಜರಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಮುಖವಾಗಿ ಖಾಲಿ ಇರುವ ಶಿಕ್ಷಕರುಗಳ ಹುದ್ದೆಗಳನ್ನು ತುಂಬದೇ ಇರುವಂತಹ ಸಮಸ್ಯೆಗಳು ಕೂಡ ಕಾರಣವಾಗಬಹುದಾಗಿದೆ ಎಂದು ವಿವರಿಸಿದರು.

ಸರಸ್ವತಿ ಕಾನ್ವೆಂಟ್ ಪ್ರೌಢಶಾಲೆಯ ಮುಖ್ಯಶಿಕ್ಷಕ ಅಶ್ವತ್ಥರೆಡ್ಡಿ ಮಾತನಾಡಿ, ಬಹಳಷ್ಟು ಅನುದಾನಿತ ಪ್ರೌಢಶಾಲೆಗಳಲ್ಲಿ ಖಾಲಿ ಹುದ್ದೆಗಳನ್ನು ತುಂಬಿಕೊಳ್ಳಲಾಗದೇ ಕೇವಲ ಒಬ್ಬರು ಅಥವಾ ಇಬ್ಬರು ವಿಷಯ ಶಿಕ್ಷಕರು ಮಾತ್ರ ತರಗತಿಗಳಲ್ಲಿ ಪಾಠ ಬೋಧನೆ ಮಾಡುತ್ತಿದ್ದಾರೆ. ಪ್ರೌಢಶಾಲಾ ಸಹ ಶಿಕ್ಷಕರು ಬೆಳಿಗ್ಗೆ 9 ರಿಂದ 10 ರವರೆಗೆ ವಿಶೇಷ ತರಗತಿ, ಸಂಜೆ ದತ್ತು ಮಕ್ಕಳ ಯೋಜನೆ, ಗುಂಪು ಅಧ್ಯಯನ, ರಾತ್ರಿ ಅವಧಿಗಳಲ್ಲೂ ಹಾಗೂ ರಜಾ ಅವಧಿಗಳಲ್ಲೂ ಅಭ್ಯಾಸ ಮಾಡಿಸುವುದು ಮತ್ತು ಇಲಾಖೆಯು ಕಾಲಕಾಲಕ್ಕೆ ನೀಡುವ ಮಾರ್ಗದರ್ಶನಗಳನ್ನು ಚಾಚುತಪ್ಪದೆ ಪಾಲಿಸಿದರೂ ನಿರೀಕ್ಷಿತ ಫಲಿತಾಂಶವನ್ನು ಪಡೆಯಲಾಗುತ್ತಿಲ್ಲ. ಅನುದಾನಿತ ಸಂಸ್ಥೆಗಳ ಮಾನ್ಯತೆ ನವೀಕರಣ ಹಾಗೂ ಇತರೆ ತಾಂತ್ರಿಕ ತೊಂದರೆಗಳೂ ಫಲಿತಾಂಶದ ಮೇಲೆ ಪರಿಣಾಮ ಬೀರುತ್ತಿವೆ. ಇಲಾಖೆಯು ಈ ರೀತಿ ಶಿಕ್ಷಕರನ್ನೇ ಹೊಣೆಗಾರರನ್ನಾಗಿಸಿ ಹೊರಡಿಸುವ ಆದೇಶಗಳು ಶಿಕ್ಷಕರನ್ನು ಮಾನಸಿಕ ಒತ್ತಡಕ್ಕೆ ದೂಡುತ್ತಿವೆ ಎಂದರು.

ಶಿಕ್ಷಕ ಜಯಶಂಕರ್ ಮಾತನಾಡಿ, ಶಿಕ್ಷಕರ ವಾರ್ಷಿಕ ವೇತನ ಬಡ್ತಿ ಮತ್ತು ವೇತನಾನುದಾನ ತಡೆಯಿಡಿಯುವುದರಿಂದಾಗಿ ಶಿಕ್ಷಕರ ಕುಟುಂಬಗಳ ಜೀವನ ನಿರ್ವಹಣೆಯು ತುಂಬಾ ಕಷ್ಟಕರವಾಗುತ್ತದೆ. ಈ ಆದೇಶವನ್ನು ಹಿಂಪಡೆದು ಶಿಕ್ಷಕರು ಯಾವುದೇ ಗೊಂದಲವಿಲ್ಲದೇ ಬೋಧನೆ ಮಾಡಲು ಅನುವು ಮಾಡಿಕೊಡಬೇಕಿದೆ ಎಂದು ಹೇಳಿದರು.

ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಕಾರ್ಯದರ್ಶಿ ಎಚ್.ಎಸ್.ರುದ್ರೇಶಮೂರ್ತಿ, ನಿವೃತ್ತ ಮುಖ್ಯಶಿಕ್ಷಕ ಬೈರಾರೆಡ್ಡಿ, ಮನಗೂಳಿ, ಸಂಘದ ಪದಧಿಕಾರಿಗಳಾದ ಮೂರ್ತಿ, ಹರೀಶ್, ಎಂ.ಕೆ.ಸಿದ್ಧರಾಜು, ಶ್ರೀನಿವಾಸರೆಡ್ಡಿ, ಪ್ರಭಾಕರ್, ನಾಗರಾಜು, ಮಂಜುನಾಥ್, ಅನುದಾನಿತ ಶಾಲಾ ಶಿಕ್ಷಕರು ಹಾಜರಿದ್ದರು.

For Daily Updates WhatsApp ‘HI’ to 7406303366

Sidlaghatta Silk Cocoon Market-27/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 27/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 541
Qty: 31416 Kg
Mx : ₹ 593
Mn: ₹ 300
Avg: ₹ 511

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 06
Qty: 333 Kg
Mx : ₹ 578
Mn: ₹ 523
Avg: ₹ 553


For Daily Updates WhatsApp ‘HI’ to 7406303366

ರೈತ ನಾಯಕರ ಬಂಧನ ಖಂಡಿಸಿ ಪ್ರತಿಭಟನೆ

0
Sidlaghatta Farmers Protest Taluk Office

Sidlaghatta : ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸಂಯುಕ್ತ ಹೋರಾಟ ಸಮಿತಿಯ ನೇತೃತ್ವದಲ್ಲಿ ಗುರುವಾರ ಶಿಡ್ಲಘಟ್ಟ ತಾಲ್ಲೂಕು ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಂಯುಕ್ತ ಹೋರಾಟ ಸಮಿತಿಯ ಮುಖಂಡರು, ದೇವನಹಳ್ಳಿಯಲ್ಲಿ ಜೂನ್ 25 ರಂದು ರೈತರು ನಡೆಸಿದ ಬೃಹತ್ ಹೋರಾಟದ ವೇಳೆ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ ಸೇರಿದಂತೆ ಸುಮಾರು 300 ರಿಂದ 500 ಪ್ರತಿಭಟನಾಕಾರರನ್ನು ಬಂಧಿಸಿರುವುದು ಆಕ್ಷೇಪಾರ್ಹ ಎಂದರು. ಪ್ರತಿಭಟನಾಕಾರರ ಮೇಲೆ ಯಾವುದೇ ಕಾನೂನು ಪ್ರಕರಣಗಳನ್ನು ದಾಖಲಿಸಬಾರದು ಎಂದು ಅವರು ಒತ್ತಾಯಿಸಿದರು.

ರೈತರು ತಮ್ಮ ಭೂಮಿಯನ್ನು ನೀಡಬೇಕಾದರೆ, ಅವರ ಹೆಸರಲ್ಲಿ ಪಹಣಿ ದಾಖಲೆ ಇರಬೇಕು, ಗುತ್ತಿಗೆ ಆಧಾರದ ಮೇಲೆ ಬಾಡಿಗೆ ರೂಪದಲ್ಲಿ ಮಾತ್ರ ಭೂಮಿಯನ್ನು ಕೈಗಾರಿಕಾ ಉದ್ದೇಶಗಳಿಗೆ ಬಳಸಬೇಕು ಎಂಬುದು ಸಂವಿಧಾನಬದ್ಧ ಹಕ್ಕು ಎಂಬುದನ್ನು ಸಂಯುಕ್ತ ಹೋರಾಟ ಸಮಿತಿ ಸ್ಪಷ್ಟಪಡಿಸಿದೆ. ರೈತರ ಒಪ್ಪಿಗೆ ಇಲ್ಲದೆ ಭೂಮಿ ಪಡೆದುಕೊಳ್ಳುವುದು ಸರ್ಕಾರಕ್ಕೆ ಶಿಷ್ಟಾಚಾರವೂ ಅಲ್ಲ, ಕಾನೂನುಬದ್ಧವೂ ಅಲ್ಲ ಎಂದರು.

ರೈತರ ಭೂಮಿಯನ್ನು ಜಬರದಸ್ತಿಯಾಗಿ ತೆಗೆದುಕೊಳ್ಳುವುದು ಒಂದು ತೀವ್ರವಾದ ಅನ್ಯಾಯ. ಮುಂದಿನ ದಿನಗಳಲ್ಲಿ ಇದೇ ಪದ್ಧತಿ ಅನುಸರಿಸಿದರೆ ರಾಜ್ಯಾದ್ಯಂತ ಪ್ರಗತಿಪರ ಸಂಘಟನೆಗಳ ನೆರವಿನಿಂದ ಬೃಹತ್ ಹೋರಾಟ ಆರಂಭಿಸಲಾಗುವುದು ಎಂದು ಎಚ್ಚರಿಸಿದರು.

ರಾಜ್ಯಪಾಲರಿಗೆ ಶಿರಸ್ತೆದಾರ್ ರಾಜು ಎನ್.ಪಿ. ರವರ ಮೂಲಕ ಮನವಿ ಪತ್ರ ಸಲ್ಲಿಸಲಾಯಿತು. ಸರ್ಕಾರದ ಈ ಕ್ರಮದ ವಿರುದ್ಧ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಗೌರವಾಧ್ಯಕ್ಷ ಭಕ್ತರಹಳ್ಳಿ ಕೋಟೆ ಚನ್ನೇಗೌಡ, ಕಾರ್ಯಾಧ್ಯಕ್ಷ ಮಾರುತಿ, ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಉಪಾಧ್ಯಕ್ಷ ನಾಗರಾಜು, ಕಾರ್ಯದರ್ಶಿ ಸಿ.ಎನ್. ಶ್ರೀಧರ್, ಖಜಾಂಜಿ ಸಿ.ಬಿ. ಶ್ರೀನಿವಾಸ್, ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಗೋರ್ಲಪ್ಪ, ಯುವ ಘಟಕದ ಅಧ್ಯಕ್ಷ ಮನೋಜ್ ಕುಮಾರ್ ಸೇರಿದಂತೆ ಹಲವಾರು ಪದಾಧಿಕಾರಿಗಳು ಹಾಜರಿದ್ದರು.

For Daily Updates WhatsApp ‘HI’ to 7406303366

ಜಮೀನಿನ ಭಾಗದ ವಿಚಾರದಲ್ಲಿ ವೈಷಮ್ಯ : ಮಾವಿನ ಸಸಿಗಳಿಗೆ ಕೊಡಲಿ

0
Sidlaghatta Basavanaparti Mango Farm Land Litigation

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಬಸವನಪರ್ತಿ ಗ್ರಾಮದಲ್ಲಿ ಎರಡು ವರ್ಷದ ಹಿಂದೆ ನಾಟಿ ಮಾಡಿದ್ದ ಸುಮಾರು 180 ಕ್ಕೂ ಹೆಚ್ಚು ಮಾವಿನ ಸಸಿಗಳನ್ನು ಕೊಡಲಿಯಿಂದ ಕತ್ತರಿಸಿ ಹಾಕಲಾಗಿದೆ. ಶಂಕರ್‌ ಅವರಿಗೆ ಸೇರಿದ ಮಾವಿನ ತೋಟದಲ್ಲಿ ಈ ಘಟನೆ ನಡೆದಿದೆ.

ರೈತ ಶಂಕರ್ ಅವರು ಮೂರು ಎಕರೆ ಜಮೀನಿನಲ್ಲಿ 350 ಕ್ಕೂ ಹೆಚ್ಚು ಮಾವಿನ ಸಸಿಗಳನ್ನು ಎರಡು ವರ್ಷಗಳ ಹಿಂದೆ ನೆಟ್ಟು ಬೆಳೆಸಿದ್ದಾರೆ. ಒಂದೊಂದು ಸಸಿಯಲ್ಲಿ ಈ ವರ್ಷ ಮಾವಿನ ಕಾಯಿ ಕೂಡ ಕಾಣಿಸಿಕೊಂಡಿದೆ.

ಈ ಜಮೀನಿನಲ್ಲಿ ನನಗೂ ಭಾಗ ಬೇಕೆಂದು ನರಸಿಂಹಪ್ಪ ತಗಾದೆ ತೆಗೆದಿದ್ದು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ.

ಶಂಕರ್ ಮತ್ತು ನರಸಿಂಹಪ್ಪ ಅವರು ದಾಯಾದಿಗಳಾಗಿದ್ದು ಜಮೀನಿನ ಭಾಗದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ವೈಷಮ್ಯವಿದೆ. ಈ ಹಿನ್ನಲೆಯಲ್ಲಿ ನರಸಿಂಹಪ್ಪನೇ ಮಾವಿನ ಸಸಿಗಳನ್ನು ರಾತ್ರೋ ರಾತ್ರಿ ಕತ್ತರಿಸಿ ಹಾಕಿದ್ದಾನೆ ಎಂದು ಶಂಕರ್ ಅವರು ಗ್ರಾಮಾಂತರ ಠಾಣೆಗೆ ದೂರು ಸಲ್ಲಿಸಿದ್ದಾರೆ.

ಆದರೆ ಪೊಲೀಸರು ಈ ಜಮೀನಿನ ವಾರಸುದಾರರು ಮೃತಪಟ್ಟಿದ್ದು ದೂರು ದಾಖಲಿಸಿಕೊಳ್ಳಲು ಸಾಧ್ಯವಿಲ್ಲ ಎಂದು ದೂರು ತೆಗೆದುಕೊಳ್ಳದೆ ನನ್ನನ್ನು ವಾಪಸ್ ಕಳುಹಿಸಿದರು ಎಂದು ಶಂಕರ್ ಅಸಮಾಧಾನ ವ್ಯಕ್ತಪಡಿಸಿ ನ್ಯಾಯ ದೊರಕಿಸಿಕೊಡಲು ಆಗ್ರಹಿಸಿದ್ದಾರೆ.

For Daily Updates WhatsApp ‘HI’ to 7406303366

Sidlaghatta Silk Cocoon Market-26/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 26/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 377
Qty: 21898 Kg
Mx : ₹ 582
Mn: ₹ 398
Avg: ₹ 519


For Daily Updates WhatsApp ‘HI’ to 7406303366

ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷ, CEO ಗೆ ತರಬೇತಿ

0
Sidlaghatta KMF KOCHIMUL Training

Sidlaghatta : ಹಕಾರಿ ವ್ಯವಸ್ಥೆಯು ನೆನ್ನೆ ಮೊನ್ನೆ ಹುಟ್ಟಿದ್ದಲ್ಲ. ಈ ಭೂಮಿ ಮೇಲೆ ಮನುಷ್ಯ ಹುಟ್ಟಿದಾಗಿನಿಂದಲೂ ಸಹಕಾರಿ ವ್ಯವಸ್ಥೆಯು ಒಂದಲ್ಲ ಒಂದು ರೂಪದಲ್ಲಿ ಬಂದಿದೆ. ಕಳೆದ ಹಲವು ವರ್ಷಗಳಿಂದ ಒಂದು ವ್ಯವಸ್ಥೆಯ ರೂಪ ಪಡೆದಿದೆ ಎಂದು KMF ನಿರ್ದೇಶಕ ಆರ್.ಶ್ರೀನಿವಾಸ್ ತಿಳಿಸಿದರು.

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಜಿಲ್ಲಾ ಸಹಕಾರ ಒಕ್ಕೂಟ, ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ನಗರದ KOCHIMUL ಶಿಬಿರ ಕಚೇರಿ ಸಭಾಂಗಣದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷ, ಉಪಾಧ್ಯಕ್ಷ, ಸಿಇಒಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ವಿಶೇಷ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ದೇಶದಲ್ಲಿ ಸಹಕಾರಿ ವ್ಯವಸ್ಥೆಯು ಬಲಿಷ್ಠವಾಗಿ ಬೆಳೆದಿದ್ದು ಗ್ರಾಮೀಣ ಭಾಗದಲ್ಲಿ ರೈತರು, ಕೃಷಿಯ ಅಭಿವೃದ್ದಿಗೆ ಪೂರಕವಾಗಿದೆ. ಕೊರೊನಾದಂತ ಸಂಕಷ್ಟ ಕಾಲದಲ್ಲೂ ಸಹಕಾರಿ ವ್ಯವಸ್ಥೆಯ ಹೈನುಗಾರಿಕೆ ಕೆಲಸ ನಿಂತಿರಲಿಲ್ಲ. ಇದು ಸಹಕಾರಿ ವ್ಯವಸ್ಥೆಯ ಅನಿವಾರ್ಯ, ಪ್ರಭಾವವನ್ನು ಸೂಚಿಸುತ್ತದೆ ಎಂದರು.

ಡೇರಿಗಳು ಇಂದು ಆಯಾ ಗ್ರಾಮದಲ್ಲಿ ರೈತರು, ಹೈನುಗಾರರ ಅಭಿವೃದ್ದಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದೆ. ಹಾಗಾಗಿ ಡೇರಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸಿಇಒ ಅವರು ಪಕ್ಷಾತೀತಿ, ಜಾತ್ಯಾತೀತವಾಗಿ ಕೆಲಸ ಮಾಡಬೇಕು, ನೀತಿ ನಿಯಮಗಳನ್ನು ಪಾಲಿಸುವ ಮೂಲಕ ಸಹಕಾರಿ ವ್ಯವಸ್ಥೆಯನ್ನು ಇನ್ನಷ್ಟು ಬಲಿಷ್ಠಗೊಳಿಸಬೇಕೆಂದರು.

ಈ ನಿಟ್ಟಿನಲ್ಲಿ ನಡೆಯುತ್ತಿರುವ ತರಬೇತಿಯನ್ನು ಸದುಪಯೋಗಪಡಿಸಿಕೊಳ್ಳಿ, ತಮ್ಮ ಕಾರ್ಯದಲ್ಲಿ ಇನ್ನಷ್ಟು ಕಾರ್ಯಪರತೆಯನ್ನು ಹೆಚ್ಚಿಸಿಕೊಳ್ಳಿ ಎಂದು ಮನವಿ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ವಿ.ನಾಗರಾಜ್ ಮಾತನಾಡಿ, ಜಿಲ್ಲಾ ಯೂನಿಯನ್‌ನಿಂದ ಈ ವಾರ ಪರಿಸರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜಿಲ್ಲೆಯ ಎಲ್ಲ ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದರು.

ಸಹಕಾರ ಸಂಘಗಳ ಕಟ್ಟಡದ ಬಳಿ ಜಾಗ ಇಲ್ಲದಿದ್ದಲ್ಲಿ ಸರಕಾರಿ ಶಾಲಾ ಆವರಣದಲ್ಲಾಗಲಿ ಸಸಿಗಳನ್ನು ನೆಡುವ ಕಾರ್ಯವನ್ನು ನಡೆಸಲಿದ್ದೇವೆ ಎಂದು ಹೇಳಿದರು.

ತಾಲ್ಲೂಕಿನ ಕೆಲ ಡೇರಿಗಳಿಂದ ಸಹಕಾರ ಶಿಕ್ಷಣ ನಿಧಿಯ ಚೆಕ್‌ ನ್ನು ಸಹಕಾರ ಮಹಾ ಮಂಡಳ ಅಧ್ಯಕ್ಷರಿಗೆ ಹಸ್ತಾಂತರಿಸಲಾಯಿತು.

DCC ಬ್ಯಾಂಕ್ ನಿರ್ದೇಶಕ ಡಾಲ್ಫಿನ್ ಸ್ಕೂಲ್ ನಾಗರಾಜ್, ಜಿಲ್ಲಾ ಯೂನಿಯನ್ ನಿರ್ದೇಶಕ ಎಂ.ಮುರಳಿ, ತಿಪ್ಪೇನಹಳ್ಳಿ ಟಿ.ಎಲ್.ಅಂಬರೀಷ್, ಪಿ.ಎನ್.ವೇಣುಗೋಪಾಲ್, ಚನ್ನಬೈರೇಗೌಡ, ಸುರೇಂದ್ರರೆಡ್ಡಿ, ಚಿಮುಲ್‌ನ ಉಪ ವ್ಯವಸ್ಥಾಪಕ ಡಾ.ಬಿ.ಆರ್.ರವಿಕಿರಣ್, ಜಿಲ್ಲಾ ಯೂನಿಯನ್‌ನ ಸಿಇಒ ಅಮೃತ ಬಿಸನಾಳ, ಸಹಕಾರ ಶಿಕ್ಷಕ ಎನ್.ನಾಗಭೂಷಣ್, ವ್ಯವಸ್ಥಾಪಕ ಬಿ.ವಿ.ಪ್ರದೀಪ್, ವಿಸ್ತರಣಾಧಿಕಾರಿಗಳಾದ ಜಯಚಂದ್ರ, ವಿ.ಶ್ರೀನಿವಾಸ್, ಕೆ.ನಾರಾಯಣಸ್ವಾಮಿ, ಶಂಕರ್ ಕುಮಾರ್, ಶಶಿಕುಮಾರ್ ಹಾಜರಿದ್ದರು.

For Daily Updates WhatsApp ‘HI’ to 7406303366

error: Content is protected !!