Date: 15/12/2020
CB Lots: 227
Qty: 11564 Kgs
Max: 453
Min: 150
Avg: 359
BV Lots: 05
Qty: 249 Kgs
Max: 450
Min: 360
Avg: 391
CB Lots: 227
Qty: 11564 Kgs
Max: 453
Min: 150
Avg: 359
BV Lots: 05
Qty: 249 Kgs
Max: 450
Min: 360
Avg: 391
ಶಿಡ್ಲಘಟ್ಟ ತಾಲ್ಲೂಕಿನ ಹಂಡಿಗನಾಳ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ 1 ಲಕ್ಷ ರೂ ಮೊತ್ತದ ಡಿ.ಡಿ ಯನ್ನು ಜಿಲ್ಲಾ ನಿರ್ದೇಶಕರಾದ ವಸಂತ್ ಬಿ ವಿತರಿಸಿದರು.
ಕಾರ್ಯಕ್ರಮದಲ್ಲಿ ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್ˌ ಹಾಲು ಉತ್ಪಾದಕರ ಸಂಘದ ಅಧ್ಯಕ್ಷರಾದ ಸುಜಾತಮ್ಮ ಕಾರ್ಯದರ್ಶಿ ರೂಪಮ್ಮ ಸದಸ್ಯರಾದ ಅನಿತಾ ಮೇಲ್ವಿಚಾರಕರಾದ ಜ್ಯೋತಿ ಸೇವಾಪ್ರತಿನಿಧಿ ಮಾಲಾವತಿ ಹಾಗೂ ಊರಿನ ಗಣ್ಯರು ಉಪಸ್ಥಿತರಿದ್ದರು.
ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯ ವತಿಯಿಂದ ಆಯೋಜಿಸಿದ್ದ ತಾಲ್ಲೂಕು ಮಟ್ಟದ ರಾಷ್ಟ್ರೀಯ ಮತದಾರರ ದಿನಾಚರಣೆ 2021 ಸಂಬಂಧಿಸಿದಂತೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಚಟುವಟಿಕೆಗಳಿಗೆ ಚಾಲನೆ ನೀಡಿ ತಾಲ್ಲೂಕು ಪಂಚಾಯಿತಿ ಇಒ ಚಂದ್ರಕಾಂತ್ ಮಾತನಾಡಿದರು.
ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಾಯಿಸುವುದು, ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಆಯೀಜಿಸಲಾಗುತ್ತಿದೆ. ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಚುನಾವಣೆಯ ಬಗ್ಗೆ ತಿಳಿಸುತ್ತಾ ಭವಿಷ್ಯದಲ್ಲಿ ದೇಶವನ್ನು ಮುನ್ನಡೆಸುವ ಅವರನ್ನು ಮಾನಸಿಕವಾಗಿ ಸಿದ್ಧಗೊಳಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
ಪ್ರಜಾಪ್ರಭುತ್ವದ ಬುನಾದಿಯಾದ ಚುನಾವಣಾ ಪ್ರಕ್ರಿಯೆಯಲ್ಲಿ ನಾವೆಲ್ಲ ಪಾಲ್ಗೊಂಡಾಗ ಮಾತ್ರ ವ್ಯವಸ್ಥೆಯನ್ನು ಪ್ರಶ್ನಿಸುವಂತಹ ಹಕ್ಕು ನಮಗೆ ಲಭಿಸುತ್ತದೆ. ಆದ್ದರಿಂದ ವ್ಯವಸ್ಥೆಯನ್ನು ದೂರುವ ಬದಲು ನಮ್ಮಲ್ಲಿ ಮೊದಲು ಬದಲಾವಣೆ ತಂದುಕೊಂಡು ನಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ವಿದ್ಯಾರ್ಥಿಗಳಿಗೆ ಭಿತ್ತಿಪತ್ರ ಹಾಗೂ ಕೊಲಾಜ್ ತಯಾರಿಕೆ, ಪ್ರಬಂಧ ಸ್ಪರ್ಧೆ, ರಸಪ್ರಶ್ನೆ ಹೀಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸುವ ಮೂಲಕ ಚುನಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕಾದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಇಸಿಒ ಭಾಸ್ಕರ ಗೌಡ ಮಾತನಾಡಿ, ರಾಷ್ಟ್ರದ ಪ್ರಗತಿ ಯುವಪೀಳಿಗೆಯ ಕೈಯಲ್ಲಿದೆ. ಯಾವುದೇ ಆಸೆ, ಆಮಿಷಕ್ಕೆ ಒಳಗಾಗದೆ ತಪ್ಪದೇ ಮತಾದಾನ ಮಾಡಿ, ಒಳ್ಳೆಯ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು. ಭಾರತದ ಸಂವಿಧಾನದ ಪ್ರಕಾರ ಚುನಾವಣಾ ಆಯೋಗವು18ವರ್ಷ ಮೇಲ್ಪಟ್ಟವರಿಗೆ ಮತದಾನದ ಅವಕಾಶವನ್ನು ನೀಡಿದೆ. ವಿದ್ಯಾರ್ಥಿಗಳು ತಮ್ಮ ಕುಟುಂಬ, ನೆರೆಹೊರೆ, ಹಳ್ಳಿಗಳಲ್ಲಿ ಈ ಬಗ್ಗೆ ತಿಳಿಹೇಳಬೇಕು ಎಂದರು.
ಮುಖ್ಯಶಿಕ್ಷಕ ರವಿಂದ್ರ, ತರಬೇತುದಾರ ಶಂಕರಪ್ಪ, ಶಿಕ್ಷಕರಾದ ಪ್ರಭಾಕರ್, ಶಂಕರಪ್ಪ, ರವಿಂದ್ರ, ನಾಗೇಶ್ ಹಾಜರಿದ್ದರು.
ತಾಲ್ಲೂಕಿನಲ್ಲಿ 14/12/2020 ಗುರುವಾರ 3 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ
| ಉತ್ಪನ್ನಗಳು | ಆವಕ | ಕನಿಷ್ಠ | ಗರಿಷ್ಠ |
|---|---|---|---|
| ಧನಿಯಾ (ಸ್ಥಳೀಯ) | 30 | 5000 | 7500 |
| ರಾಗಿ (ಸ್ಥಳೀಯ) | 215 | 1650 | 1850 |
| ಅಕ್ಕಿ (ಹಂಸ) | 60 | 2050 | 2250 |
| ಅಕ್ಕಿ (ಸೋನ) | 280 | 3500 | 5100 |
| ಟೊಮ್ಯಾಟೊ | 2673 | 333 | 1666 |
CB Lots: 238
Qty: 11788 Kgs
Max: 440
Min: 155
Avg: 336
BV Lots: 02
Qty: 111 Kgs
Max: 400
Min: 388
Avg: 393
ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿಯ ತಾಲ್ಲೂಕು ಶಾಖೆಯ ಗೌರವಾಧ್ಯಕ್ಷರಾಗಿ ಉಪತಹಸೀಲ್ದಾರ್ ಕೆ.ಎನ್.ಎಂ.ಮಂಜುನಾಥ್ ಆಯ್ಕೆಯಾಗಿದ್ದಾರೆ.
ನಗರದ ಶ್ರೀ ಕಾಳಿಕಾಂಬ ದೇವಾಲಯದ ಸಭಾಂಗಣದಲ್ಲಿ ಶನಿವಾರ ನಡೆದ ತಾಲ್ಲೂಕಿನ ವಿವಿಧ ಇಲಾಖೆಗಳ ಸರ್ಕಾರಿ ನೌಕರರ ಸಭೆಯಲ್ಲಿ ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ತಾಲ್ಲೂಕು ಶಾಖೆ ರಚಿಸಲಾಯಿತು.
ಅಧ್ಯಕ್ಷರಾಗಿ ಅಬ್ಲೂಡಿನ ಸಿಆರ್ಪಿ ಸುರೇಶ್ಬಾಬು ಆಯ್ಕೆಯಾದರೆ, ಪ್ರಧಾನ ಕಾರ್ಯದರ್ಶಿಯಾಗಿ ಭಕ್ತರಹಳ್ಳಿಯ ಸಿಆರ್ಪಿ ಎಸ್.ಎ.ನರಸಿಂಹರಾಜು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಆನೂರು ಪಿಡಿಓ ಕುಮಾರಿ ಕಾತ್ಯಾಯಿನಿ, ಕೋಟಹಳ್ಳಿ ಶಿಕ್ಷಕ ನಾಗರಾಜ್, ದೊಡ್ಡತೇಕಹಳ್ಳಿ ಶಿಕ್ಷಕ ವೆಂಕಟಾಚಲಪತಿ, ಖಜಾಂಚಿಯಾಗಿ ಜಿ.ವೆಂಕಟೇಶ್, ಜಂಟಿ ಕಾರ್ಯದರ್ಶಿಗಳಾಗಿ ಎಂ.ವೆಂಕಟೇಶಪ್ಪ, ಶ್ರೀನಿವಾಸ್, ಅಶ್ವತ್ಥಪ್ಪ, ರಾಮಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿಗಳಾಗಿ ರವಿಕುಮಾರ್, ಟಿ.ಟಿ.ನರಸಿಂಹಪ್ಪ, ಜೈ ಶಂಕರ್, ಬಿ.ಎಂ.ಮಂಜುನಾಥ, ಎನ್.ರವಿ. ಎಂ.ತಿರುಮಳಪ್ಪ, ಕಾನೂನು ಸಲಹೆಗಾರರಾಗಿ ಆರ್.ವಿಕಾಸ್, ಆಂತರಿಕ ಲೆಕ್ಕ ಪರಿಶೋಧಕರಾಗಿ ಗೋವಿಂದ ಆಯ್ಕೆಯಾಗಿದ್ದಾರೆ.
ಮುಷ್ಕರದ ನಡುವೆಯೂ ಶಿಡ್ಲಘಟ್ಟದಲ್ಲಿ ಸೋಮವಾರ ಬಸ್ ಸಂಚಾರ ನಡೆಯಿತು. ನಗರ ಬಸ್ ನಿಲ್ದಾಣದಿಂದ ಬೆಳಗ್ಗೆ ಬಸ್ ಸಂಚಾರ ಆರಂಭಿಸಿದ್ದು, ವಿವಿದೆಡೆಗೆ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ.
ಪೊಲೀಸ್ ಎಸ್ಕಾರ್ಟ್ ಬೆಂಗಾವಲಿನಲ್ಲಿ ಬಸ್ ಗಳ ಸಂಚಾರ ಆರಂಭವಾಗಿದ್ದು, ಅಧಿಕಾರಿಗಳ ಸಮ್ಮುಖದಲ್ಲಿ ಸಂಚಾರ ಆರಂಭಿಸಲಾಗಿದೆ. ಪ್ರತಿ ಬಸ್ ಮುಂದೆ ಹಾಗೂ ಹಿಂದೆ ಪೊಲೀಸ್ ಸಿಬ್ಬಂದಿ ನೇಮಕಗೊಳಿಸಲಾಗಿದೆ.
ಕೆಲವು ಕಾಲೇಜ್ ವಿದ್ಯಾರ್ಥಿಗಳು ಮಾತನಾಡಿ ಆದಷ್ಟು ಬೇಗ ಸಾರಿಗೆ ನೌಕರರ ಮುಷ್ಕರ ಕೊನೆಗೊಳ್ಳಲಿ. ಈಗಾಗಲೇ ಕೊರೊನಾದಿಂದ ನಾವುಗಳು ಒಂದು ವರ್ಷ ಹಿಂದಕ್ಕೆ ಹೋಗಿದ್ದೇವೆ. ಬಸ್ ಸೌಲಭ್ಯವೂ ಇಲ್ಲದಿದ್ದರೆ ಕಷ್ಟವಾಗುತ್ತದೆ ಎಂದು ಹೇಳಿದರು.
CB lots: 227
Qty: 11145 Kgs
Max: 390
Min: 246
Avg: 321
BV Lots: 02
Qty: 74.0 Kgs
Max: 451
Min: 444
Avg: 447
CB Lots: 312
Qty: 15842 Kgs
Max: 398
Min: 150
Avg: 287
BV Lots: Nil
ನಂದಿ ರೈಡರ್ಸ್ ಸ್ಕೇಟಿಂಗ್ ಟ್ರೈನಿಂಗ್ ಸೆಂಟರ್ ಆಯೋಜಿಸಿದ್ದ ಮೊದಲನೇ ಆನ್ ಲೈನ್ ರಾಷ್ಟ್ರೀಯ ಮಟ್ಟದ ಸ್ಪೀಡ್ ಸ್ಕೇಟಿಂಗ್ ಚಾಂಪಿಯನ್ ಷಿಪ್ ನಲ್ಲಿ ಶಿಡ್ಲಘಟ್ಟದ ಸ್ಪೀಡ್ ಸ್ಕೇಟಿಂಗ್ ಅಸೋಸಿಯೇಷನ್ ವಿದ್ಯಾರ್ಥಿಗಳು ಹಲವು ಪದಕಗಳನ್ನು ಪಡೆದಿದ್ದಾರೆ ಎಂದು ಶಿಕ್ಷಕ ವಿ.ಅರುಣ್ ಕುಮಾರ್ ತಿಳಿಸಿದ್ದಾರೆ.
ನಿಶ್ಚಿತ್ (ಕ್ವಾಡ್) ಬೆಳ್ಳಿ ಪದಕ, ಮೋಹಿತ್ ಪ್ರಕಾಶ್ (ಕ್ವಾಡ್) ಚಿನ್ನದ ಪದಕ, ಕೆ.ಎಸ್.ವಿಶ್ವಕ್ಸೇನ್ (ಕ್ವಾಡ್) ಕಂಚಿನ ಪದಕ, ಆರ್.ಆರ್ಯರುಷೀಲ್ (ಕ್ವಾಡ್) ಕಂಚಿನ ಪದಕ, ಸಿ.ಗೀತಿಕಾ (ಬಿಗಿನರ್) ಚಿನ್ನದ ಪದಕ, ಆರ್.ಎಂ.ಧನುಷ್ (ಇನ್ ಲೈನ್) ಬೆಳ್ಳಿ ಪದಕ, ಆರ್.ಮೋಹಿತ್ (ಇನ್ ಲೈನ್) ಚಿನ್ನದ ಪದಕ ಪಡೆದಿದ್ದಾರೆ.
ತಾಲ್ಲೂಕಿನಲ್ಲಿ 11/12/2020 ಗುರುವಾರ 3 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
CB Lots: 390
Qty: 19480 Kgs
Max: 401
Min: 150
Avg: 276
BV Lots: 08
Qty: 433 Kgs
Max: 367
Min: 241
Avg: 352
ತಾಲ್ಲೂಕಿನಲ್ಲಿ 10/12/2020 ಗುರುವಾರ 3 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
CB Lots: 364
Qty: 18114 Kgs
Max: 390
Min: 200
Avg: 272
BV Lots: 03
Qty: 128 Kgs
Max: 378
Min: 205
Avg: 366
CB Lots: 334
Qty: 15492 Kgs
Max: 521
Min: 167
Avg: 270
BV Lots: 03
Qty: 154 Kgs
Max: 345
Min: 288
Avg: 295
CB Lots: 248
Qty: 11328 Kgs
Max: 360
Min: 201
Avg: 277
BV Lots: 16
Qty: 744 Kgs
Max: 425
Min: 305
Avg: 381
ರಾಜ್ಯ ಚುನಾವಣಾ ಆಯೋಗ ಗ್ರಾಮ ಪಂಚಾಯಿತಿ (Grama Panchayat Election) ಸಾರ್ವತ್ರಿಕ ಚುನಾವಣೆ – 2020 ಚುನಾವಣಾ ವೇಳಾ ಪಟ್ಟಿಯನ್ನು ಪ್ರಕಟಗೊಳಿಸಿದ್ದು, ಚುನಾವಣೆ ಸಂದರ್ಭದಲ್ಲಿ ಸಾರ್ವಜನಿಕರಿಂದ ಸ್ವೀಕೃತವಾಗುವ ದೂರುಗಳ ನಿರ್ವಹಣೆ ಸಲುವಾಗಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 24/7 ದೂರು ನಿರ್ವಾಹಣಾ ಕೇಂದ್ರವನ್ನು (Complaint monitoring cell) ಸ್ಥಾಪಿಸಲಾಗಿದೆ. ಚುನಾವಣೆಗೆ ಸಂಬಂದಿಸಿದ ಎಲ್ಲಾ ಮೂಲಗಳಿಂದ ಸ್ವೀಕೃತವಾಗುವ ದೂರುಗಳನ್ನು ಕಾಲಕಾಲಕ್ಕೆ ಇತ್ಯರ್ಥಪಡಿಸಲಾಗುತ್ತದೆ.
ಸಾರ್ವಜನಿಕರು ಚುನಾವಣಾ ಸಂಬಂಧ ದೂರು ಅರ್ಜಿಯನ್ನು ದಾಖಲಿಸಲು ಈ ಕೆಳಕಂಡ ದೂರು ನಿರ್ವಹಣಾ ಕೇಂದ್ರವನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿಗಳ ಕಛೇರಿ, ಚಿಕ್ಕಬಳ್ಳಾಪುರ ಜಿಲ್ಲೆ- 08156-277071,
ಚಿಕ್ಕಬಳ್ಳಾಪುರ ತಾಲ್ಲೂಕು – 08156-272564,
ಶಿಡ್ಲಘಟ್ಟ ತಾಲ್ಲೂಕು – 08158-256763,
ಗುಡಿಬಂಡೆ ತಾಲ್ಲೂಕು – 08156-261250,
ಬಾಗೇಪಲ್ಲಿ ತಾಲ್ಲೂಕು – 08150-282225,
ಚಿಂತಾಮಣಿ ತಾಲ್ಲೂಕು – 08154-252164,
ಗೌರಿಬಿದನೂರು ತಾಲ್ಲೂಕು – 8867575221
ಜನಪರ ಸೇವೆ ಮಾಡುವಂತಹ ಉತ್ತಮರನ್ನು ಗ್ರಾಮ ಪಂಚಾಯಿತಿ ಚುನಾವಣೆಯ ಅಭ್ಯರ್ಥಿಗಳನ್ನಾಗಿ ಆಯ್ಕೆ ಮಾಡುವ ಮೂಲಕ ಚುನಾವಣೆ ನಡೆಸಲು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಕಾರ್ಯ ಪ್ರವೃತ್ತರಾಗಬೇಕು ಎಂದು ಶಾಸಕ ವಿ.ಮುನಿಯಪ್ಪ ಹೇಳಿದರು.
ತಾಲ್ಲೂಕಿನ ಹಂಡಿಗನಾಳದ ತಮ್ಮ ಸ್ವಗೃಹದಲ್ಲಿ ಸೋಮವಾರ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ ಮಾತನಾಡಿದರು.
ಪಕ್ಷದ ಬೆಂಬಲದಿಂದ ಗೆದ್ದು ಪಕ್ಷಾಂತರ ಮಾಡುವಂತಹವರಿಗೆ ಬೆಂಬಲಿಸದೇ ಪಕ್ಷದ ತತ್ವ ಸಿದ್ದಾಂತಗಳನ್ನಿಟ್ಟುಕೊಂಡಿರುವಂತಹ ಪ್ರಾಮಾಣಿಕರಿಗೆ ಈ ಬಾರಿಯ ಚುನಾವಣೆಯಲ್ಲಿ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು. ಈ ಹಿಂದೆ ನಗರಸಭೆ ಸೇರಿದಂತೆ ಗ್ರಾಮ ಪಂಚಾಯಿತಿಗಳಲ್ಲಿ ನಮ್ಮ ಪಕ್ಷದಿಂದ ಗೆದ್ದಂತಹ ಸುಮಾರು ಜನ ಪಕ್ಷಾಂತರ ಮಾಡಿದ ನೋವಿದೆ. ಸಾಲದ್ದಕ್ಕೆ ಅನಾರೋಗ್ಯದ ನಡುವೆಯೂ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸುತ್ತಿದ್ದು, ಈಗಾಗಲೇ ಎಲ್ಲಾ ಗ್ರಾಮ ಪಂಚಾಯಿತಿ ಮುಖಂಡರೊಂದಿಗೆ ಚರ್ಚಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಶಿಡ್ಲಘಟ್ಟ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎಂ.ಮುನಿಯಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸುಬ್ರಮಣಿ, ಕೋಚಿಮುಲ್ ನಿರ್ದೇಶಕ ಆರ್.ಶ್ರೀನಿವಾಸ್ ಹಾಜರಿದ್ದರು.
ಕೃಷಿ ಕಾನೂನು ಹಿಂಪಡೆಯುವಂತೆ ಆಗ್ರಹಿಸಿ ರೈತರ ಪರ ಸಂಘಟನೆಗಳು ಕರೆ ನೀಡಿರುವ ರಾಷ್ಟ್ರವ್ಯಾಪಿ ಭಾರತ್ ಬಂದ್ ಗೆ ತಾಲ್ಲೂಕಿನ ಎಲ್ಲಾ ರೈತ ಸಂಘಟನೆಗಳು ಬೆಂಬಲಿಸಿವೆ.
ರೈತ ಸಂಘದ ಸದಸ್ಯರು ಪೂರ್ವಭಾವಿ ಸಭೆ ನಡೆಸಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಗೆ ಕರೆ ನೀಡಿದ್ದು ಎಲ್ಲಾ ರೈತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಲಿವೆ ಎಂದು ತಿಳಿಸಿದ್ದಾರೆ.
ರೈತರನ್ನು ದೆಹಲಿಯ ಗಡಿಭಾಗದಲ್ಲಿ ತಡೆಯುವ ಮೂಲಕ ಹೋರಾಟ ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿದೆ. ಇದನ್ನು ಖಂಡಿಸಿ ಭಾರತ್ ಬಂದ್ಗೆ ರೈತರು ಬೆಂಬಲ ನೀಡುವುದಾಗಿ ರೈತ ಮುಖಂಡರು ಹೇಳಿದ್ದಾರೆ. ಸಾಮಾನ್ಯ ಜನರ ಕಲ್ಯಾಣಕ್ಕೆ ಒತ್ತು ನೀಡುವ ಬದಲು ಸರ್ಕಾರ ಕಾರ್ಪೊರೇಟ್ಗಳ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿದೆ. ಪ್ರತಿಭಟನೆಯ ಹೊರತಾಗಿಯೂ, ಅವರು ರೈತರ ಬೇಡಿಕೆಗಳಿಗೆ ಮಣಿಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪ್ರತಿದಿನ ನೀವು ತಿನ್ನುವ ಆಹಾರವನ್ನು ಬೆಳೆಯುವವರ ಉದ್ದೇಶಕ್ಕಾಗಿ ಎಲ್ಲರೂ ಹೋರಾಡಬೇಕೆಂದು ನಾವು ವಿನಂತಿಸುತ್ತೇವೆ. ಹೊಸ ಕೃಷಿ ಕಾನೂನುಗಳನ್ನು ಜಾರಿಗೊಳಿಸುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಪ್ರತಿಭಟನೆಗೆ ಸಾರ್ವಜನಿಕರಿಂದ ಬೆಂಬಲ ದೊರೆಯಲಿದೆ. ಕಳೆದ ಹಲವು ದಿನಗಳಿಂದ ರೈತರು (ದೆಹಲಿ) ಪ್ರತಿಭಟನೆ ನಡೆಸುತ್ತಿದ್ದಾರೆ. ಇದಕ್ಕೆ ನಾವು ಕೂಡ ಬೆಂಬಲ ಸೂಚಿಸಿದ್ದೇವೆ ಎಂದು ಹೇಳಿದರು.
ಟಿಪ್ಪು ಸೆಕ್ಯುಲರ್ ಸಂಘ, ಕರ್ನಾಟಕ ಜನಪರ ವೇದಿಕೆ, ಕಟ್ಟಡ ಕೂಲಿ ಕಾರ್ಮಿಕರ ಸಂಘ, ಬಿಸಿಯೂಟ ನೌಕರರ ಸಂಘ ಮತ್ತಿತರ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿವೆ.