Home Blog Page 3

ಪ್ರಥಮ ಚಿಕಿತ್ಸೆ ಕುರಿತು ಅರಿವು ಮೂಡಿಸುವ ಶಿಬಿರ

0
First Aid workshop Gnana jyothi ITI College

Sidlaghatta : ಯಾವುದೇ ವ್ಯಕ್ತಿಗೆ ಆಕಸ್ಮಿಕವಾಗಿ ಅನಾಹುತ ಆದಾಗ ತಕ್ಷಣ ಪ್ರಥಮ ಚಿಕಿತ್ಸೆ ನೀಡಿದರೆ ಹೆಚ್ಚಿನ ಪ್ರಮಾಣದಲ್ಲಾಗುವ ತೊಂದರೆಯನ್ನು ‌ತಪ್ಪಿಸಬಹುದು ಎಂದು ಪರಿಸರವಾದಿ ಹಾಗೂ ಗೌರವ ವನ್ಯಪ್ರಾಣಿ ಪರಿಪಾಲಕರ ಸಂಘದ ಅಧ್ಯಕ್ಷ ನಂದಿದುರ್ಗ ಬಾಬುಗೌಡ ತಿಳಿಸಿದರು.

ನಗರದ ಬೈಪಾಸ್ ರಸ್ತೆಯಲ್ಲಿರುವ ಜ್ಞಾನಜ್ಯೋತಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಥಮ ಚಿಕಿತ್ಸೆ ಕುರಿತು ಅರಿವು ಮೂಡಿಸುವ ಶಿಬಿರದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರಥಮ ಚಿಕಿತ್ಸೆ ಮುಖ್ಯ ಉದ್ದೇಶ ಹೆಚ್ಚಿನ ತೊಂದರೆಯಿಂದ ಪಾರಾಗಿ, ಸುರಕ್ಷತೆಯತ್ತ ಪ್ರಥಮ ಚಿಕಿತ್ಸೆ ನೀಡುವುದು. ಚಿಕಿತ್ಸೆ ತರಬೇತಿ ಪಡೆದವರು ಮಾತ್ರ ಪ್ರಥಮ ಚಿಕಿತ್ಸೆ ನೀಡಬೇಕು. ಎಲ್ಲರೂ ಪ್ರಥಮ ಚಿಕಿತ್ಸೆಯ ಬಗ್ಗೆ ತಿಳಿದುಕೊಂಡಿರಬೇಕು. ಅದರಲ್ಲೂ ಪ್ರಥಮ ಚಿಕಿತ್ಸೆ ಬಗ್ಗೆ ಅರಿವು ವಿದ್ಯಾರ್ಥಿಗಳಲ್ಲಿ ಇರುವುದು ಬಹಳ ಅವಶ್ಯವಾಗಿದೆ ಎಂದರು.

ರಸ್ತೆ ಅಪಘಾತ, ಬೆಂಕಿ ಅನಾಹುತ ,ಅರಣ್ಯ ಬೆಂಕಿ, ಸಿವಿಲ್ ಡಿಫೆನ್ಸ್, ಹಾವು ಕಡಿತ, ವಿಷ ಸೇವೆನೆಗೆ ಪ್ರಥಮ ಚಿಕಿತ್ಸೆ, ವನ್ಯಜೀವಿಗಳ ಅಧ್ಯಯನ, ರಾಷ್ಟ್ರೀಯ ಉದ್ಯಾನ ವನಗಳ, ಆಂಬುಲೆನ್ಸ್ ಗಾಯಾಳುಗಳ ಸಾಗಾಣಿಕೆಯ ಬಗ್ಗೆ, ಮೂಳೆಮುರಿತ ಕ್ಕೆ ವಿವಿಧ ಬ್ಯಾಂಡೇಜ್ ಗಳು ಇತರೆ ಮಾಹಿತಿಗಳನ್ನು ಪ್ರಥಮ ಚಿಕಿತ್ಸೆಯ ವಿಧಾನಗಳನ್ನು ತಿಳಿಸಿಕೊಟ್ಟರು.

ಪ್ರತಿಯೊಬ್ಬರೂ ಪ್ರಥಮ ಚಿಕಿತ್ಸೆ ಕುರಿತು ಅರಿವು ಹಾಗೂ ತರಬೇತಿ ಪಡೆದು ಸಕಾಲದಲ್ಲಿ ತೊಂದರೆಗೊಳಗಾದವರಿಗೆ ನೆರವು ನೀಡಿದಾಗ ಅಮೂಲ್ಯವಾದ ಜೀವವನ್ನು ಉಳಿಸಲು ಸಹಕಾರಿಯಾಗುತ್ತದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಗೌರವ ವನ್ಯಪ್ರಾಣಿ ಪರಿಪಾಲಕರ ಸಂಘದ ನಿರ್ದೇಶಕರು ನಿಸರ್ಗ, ಪ್ರಾಂಶುಪಾಲರಾದ ಎಸ್. ವಿ. ಸುನೀತಾ, ಶಿಕ್ಷಕರಾದ ರವಿಕುಮಾರ್, ನಂದಿನಿ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಮಾರ್ಚ್ 18ರಿಂದ SSLC ಪರೀಕ್ಷೆ: ಮೊದಲ ಸ್ಥಾನ ಗುರಿ-ಶಾಸಕ ಬಿ.ಎನ್. ರವಿಕುಮಾರ್

0
SSLC Exam Higher Ranks Target MLA B N Ravikumar

Melur, sidlaghatta : ಮಾರ್ಚ್ 18ರಿಂದ ಆರಂಭವಾಗಲಿರುವ SSLC ಪರೀಕ್ಷೆಯ ಪೂರ್ವಭಾವಿ ಸಿದ್ಧತೆಗಳು ಪೂರ್ಣಗೊಂಡಿವೆ. ಜಿಲ್ಲೆಯಲ್ಲಿ ಶಿಡ್ಲಘಟ್ಟ ತಾಲ್ಲೂಕು ಪ್ರಥಮ ಸ್ಥಾನ ಪಡೆಯುವ ಗುರಿಯನ್ನು ಹೊಂದಿದ್ದೇವೆ ಎಂದು ಶಾಸಕ ಬಿ.ಎನ್. ರವಿಕುಮಾರ್ ತಿಳಿಸಿದರು.

ತಾಲ್ಲೂಕಿನ ಮೇಲೂರಿನ ಗೃಹಕಚೇರಿಯಲ್ಲಿ ಅವರು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್ ಹಾಗೂ ಜಿಲ್ಲೆಯ ಡಿಡಿಪಿಐ ರಮೇಶ್ ಅವರ ನೇತೃತ್ವದಲ್ಲಿ ಈಗಾಗಲೇ ಸಭೆ ನಡೆಸಲಾಗಿದೆ. ಸಭೆಯಲ್ಲಿ ಸರ್ಕಾರಿ ಶಾಲೆಗಳ ಮುಖ್ಯ ಶಿಕ್ಷಕರು ಸೇರಿದಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳನ್ನು ಕರೆಸಿ, 2025-26ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಇಡೀ ಜಿಲ್ಲೆಗೆ ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರ ಮೊದಲ ಸ್ಥಾನ ಪಡೆಯಬೇಕು ಎಂಬ ಗುರಿಯನ್ನು ನೀಡಲಾಗಿದೆ ಎಂದು ಹೇಳಿದರು.

ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಮೊದಲನೇ ತರಗತಿಯಿಂದ 10ನೇ ತರಗತಿವರೆಗೆ ಒಟ್ಟು 12,860 ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಈ ಬಾರಿ ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಗೆ 945 ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ. ಈ ವಿದ್ಯಾರ್ಥಿಗಳಲ್ಲಿ ಸರ್ಕಾರಿ ಶಾಲೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆಯುವ ವಿದ್ಯಾರ್ಥಿಗೆ ಶಾಸಕರ ನಿಧಿಯಿಂದ ₹1 ಲಕ್ಷ ಪ್ರೋತ್ಸಾಹಧನ ನೀಡಲಾಗುವುದು ಎಂದು ಈಗಾಗಲೇ ಘೋಷಣೆ ಮಾಡಿದ್ದೇನೆ ಎಂದರು.

ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಹುತೇಕ ವಿದ್ಯಾರ್ಥಿಗಳು ಬಡ ಕುಟುಂಬಗಳಿಗೆ ಸೇರಿದವರಾಗಿರುವುದರಿಂದ, ಅವರಿಗೆ ಉನ್ನತ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳು ಹಾಗೂ ಪೋಷಕರು ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂಬ ಉದ್ದೇಶದಿಂದ ಎಲ್ಲಾ ಶಾಲೆಗಳಲ್ಲಿ ಸಭೆಗಳನ್ನು ನಡೆಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

ಇದೇ ವೇಳೆ ಕಳೆದ ಎರಡು ವರ್ಷಗಳ ಫಲಿತಾಂಶಗಳ ಕುರಿತು ಉಲ್ಲೇಖಿಸಿದ ಅವರು, 2023-24ರಲ್ಲಿ ಕ್ಷೇತ್ರ ಮೂರನೇ ಸ್ಥಾನದಲ್ಲಿದ್ದರೆ, 2024-25ರಲ್ಲಿ ಎರಡನೇ ಸ್ಥಾನಕ್ಕೇರಿದೆ. ಈ ಬಾರಿ ಮೊದಲ ಸ್ಥಾನ ಗಳಿಸುವ ವಿಶ್ವಾಸ ವ್ಯಕ್ತಪಡಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಚೀಮಂಗಲ ಗ್ರಾಮದಲ್ಲಿ ವರಮಹಾಲಕ್ಷ್ಮಿ ಪೂಜೆ ಆಚರಣೆ

0
Cheemangala SKDRDP Varamahalakshmi Pooja

Cheemangala, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಆಯೋಜಿಸಲಾಗಿದ್ದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆ ಹಾಗೂ ಧಾರ್ಮಿಕ ಸಭೆ ಕಾರ್ಯಕ್ರಮದಲ್ಲಿ ವೀರ ಸಿಂಹಾಸನ ಸಂಸ್ಥಾನ ಬೆಳ್ಳವಿಯ ಪಟ್ಟದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿಗಳು ದಿವ್ಯ ಸಾನಿಧ್ಯ ವಹಿಸಿ ಭಕ್ತಾದಿಗಳಿಗೆ ಆಶೀರ್ವಚನ ನೀಡಿದರು.

ಸಭೆಯಲ್ಲಿ ಮಾತನಾಡಿದ ಶ್ರೀ ಮಹಾಂತ ಶಿವಾಚಾರ್ಯ ಸ್ವಾಮೀಜಿಗಳು, ಮಹಿಳೆಯರು ಮನೆಯ ಬೆಳಗುವ ದೀಪದಂತವರು. ಭಕ್ತಿ, ಸಂಸ್ಕಾರ ಮತ್ತು ಸತ್ಪ್ರವೃತ್ತಿಯ ಹಾದಿಯಲ್ಲಿ ಸಾಗಿದಾಗ ಮಾತ್ರ ಕುಟುಂಬ ಹಾಗೂ ಸಮಾಜ ಸುಭಿಕ್ಷವಾಗಿರಲು ಸಾಧ್ಯ. ಧರ್ಮಸ್ಥಳದ ಪೂಜ್ಯ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಇಂತಹ ಕಾರ್ಯಕ್ರಮಗಳು ಜನರಲ್ಲಿ ದೈವಭಕ್ತಿ, ನೈತಿಕತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಜಾಗೃತಗೊಳಿಸುತ್ತವೆ ಎಂದು ತಿಳಿಸಿದರು.

ಇಂದಿನ ತಲೆಮಾರಿನ ಮಕ್ಕಳಿಗೆ ಅತಿಯಾಗಿ ಮೊಬೈಲ್ ನೀಡುವುದು ಅವರ ಭವಿಷ್ಯಕ್ಕೆ ನಾವೇ ಕೊಳ್ಳಿ ಇಟ್ಟಂತೆ. ಮೊಬೈಲ್‌ಗೆ ದಾಸರಾದರೆ ಮಕ್ಕಳ ಬೌದ್ಧಿಕ ಬೆಳವಣಿಗೆ ಕುಂಠಿತಗೊಳ್ಳುತ್ತದೆ. ಪೋಷಕರು ಹಾಗೂ ಶಿಕ್ಷಕರು ಮಕ್ಕಳನ್ನು ಮೊಬೈಲ್ ವ್ಯಸನದಿಂದ ದೂರವಿಟ್ಟು, ಉತ್ತಮ ಸಂಸ್ಕಾರ ಮತ್ತು ನೈತಿಕ ಮೌಲ್ಯಗಳನ್ನು ಬೆಳೆಸಿಕೊಂಡು, ಜ್ಞಾನದ ದಾರಿಯಲ್ಲಿ ನಡೆಯಲು ಮಕ್ಕಳಿಗೆ ಪ್ರೇರಣೆ ನೀಡಬೇಕು ಎಂದು ಅವರು ಕರೆ ನೀಡಿದರು.

ಡಾ. ವೀರೇಂದ್ರ ಹೆಗ್ಗಡೆ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದರೂ ಆ ರೀತಿಯ ಸಂಕಲ್ಪವಿಲ್ಲ, ಸೇವೆಯೇ ಅವರ ಧ್ಯೇಯ ಎಂದು ಕಾರ್ಯನಿರ್ವಹಿಸುತ್ತಿದ್ದಾರೆ. ದೇಶವು ಅವರ ಸೇವೆಯನ್ನು ಗುರುತಿಸಿ ಅನೇಕ ಪ್ರಶಸ್ತಿಗಳ ಮೂಲಕ ಗೌರವಿಸಿದೆ ಎಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕರಾದ ಪ್ರಶಾಂತ್ ಸಿ.ಎಸ್, ರವರು ಮಾತನಾಡಿ ದೈನಂದಿನ ಕೆಲಸ ಕಾರ್ಯಗಳಲ್ಲಿ ಧಾರ್ಮಿಕತೆಯನ್ನು ಅಳವಡಿಸಿಕೊಳ್ಳುವುದೇ ನಿಜವಾದ ಧರ್ಮ ಎಂದರು. ಹಿರಿಯರನ್ನು ಗೌರವಿಸುವುದು, ಕಿರಿಯರಿಗೆ ಆಶೀರ್ವದಿಸುವುದು ಮತ್ತು ಸಾತ್ವಿಕ ಜೀವನ ನಡೆಸುವುದೇ ಧರ್ಮ ರಕ್ಷಣೆ. ಇತರ ಧರ್ಮಗಳನ್ನು ದೂಷಿಸದೆ ನಮ್ಮ ಧರ್ಮದ ಶ್ರೇಷ್ಠತೆಯನ್ನು ಕಾಪಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ಯೋಜನಾಧಿಕಾರಿ ಪ್ರಸಾದ್ ,ಗ್ರಾಮದ ಮುಖಂಡರಾದ ಎಂ. ಅಯ್ಯಣ್ಣ, ಒಕ್ಕೂಟದ ಅಧ್ಯಕ್ಷೆ  ರಾಜೇಶ್ವರಿ, ಹಾಲಿನ ಡೈರಿ ಕಾರ್ಯದರ್ಶಿ ಶಶಿಕುಮಾರ್, ಆನಂದ, ಚರಣ್ ಮತ್ತು ಹೈನುಗಾರಿಕಾ ಸಹಕಾರ ಸಂಘದ ಪ್ರಶಾಂತ್, ಅನ್ನದಾಸೋಹ ಸಮಿತಿಯ ರಮೇಶ್, ತಾಲೂಕು ಸಮನ್ವಯಾಧಿಕಾರಿ ಅರುಣಾ, ವಲಯ ಮೇಲ್ವಿಚಾರಕರಾದ ಪಲ್ಲವಿ ಆರ್. ಹಾಗೂ ತಂಡದವರು ಭಾಗವಹಿಸಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-27/02/2026

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 26/02/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 358
Qty: 19442 Kg
Mx : 804
Mn: 588
Avg: 731

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 14
Qty: 697 Kg
Mx : ₹ 903
Mn: ₹ 555
Avg: ₹ 811


For Daily Updates WhatsApp ‘HI’ to 7406303366

35 ಜನ ಅಂಧ ಮಕ್ಕಳಿಗೆ 4 ದಿನಗಳ ಪ್ರವಾಸ ಭಾಗ್ಯ

0
Mallur Gowramam Mallashetty Arogya Kendra organize Karnataka trip for blind

Mallur, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳ್ಳೂರಲ್ಲಿರುವ ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದ 5ನೇ ವಾರ್ಷಿಕೋತ್ಸವ ಅಂಗವಾಗಿ ಕರ್ನಾಟಕ ಅಂಧ ಮಕ್ಕಳ ಕ್ಷೇಮಾಭಿವೃದ್ದಿ ಸಂಸ್ಥೆಯ 35 ಅಂಧ ಮಕ್ಕಳಿಗೆ ಪ್ರವಾಸಕ್ಕೆ ವ್ಯವಸ್ಥೆ ಮಾಡಿ ಅವರಿಗೆ ಪ್ರವಾಸದ ಕಿಟ್ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರದ ಮುಖ್ಯಸ್ಥೆ ಎಂ.ಜಿ.ಕಲಾವತಿ, ನಾವು ನಮ್ಮ ನಾಡು, ದೇಶದ ಪ್ರೇಕ್ಷಣಿಯ, ಧಾರ್ಮಿಕ, ಐತಿಹಾಸಿಕ ಸ್ಥಳಗಳಿಗೆ ಭೇಟಿ ನೀಡಿ, ಆಯಾ ಸ್ಥಳದ ಮಹತ್ವವನ್ನು ತಿಳಿದುಕೊಳ್ಳುವುದರಿಂದ ನಮ್ಮ ನಾಡು ನುಡಿ ಇತಿಹಾಸದ ಬಗ್ಗೆ ಹೆಚ್ಚಿನ ಜ್ಞಾನ ಸಿಗಲಿದೆ ಎಂದು ತಿಳಿಸಿದರು.

ನಮ್ಮ ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದಲ್ಲಿ ಉಚಿತವಾಗಿ ಆರೋಗ್ಯ ತಪಾಸಣೆ, ಔಷಧಿ ವಿತರಣೆ ಕಾರ್ಯವನ್ನು ನಡೆಸಿಕೊಂಡು ಬರುತ್ತಿದ್ದು ಎಲ್ಲರ ಸಹಕಾರದಿಂದ ಐದು ವರ್ಷ ಪೂರೈಸಿದೆ. ಇದರ ಜ್ಞಾಪಕಾರ್ಥ 35 ಮಂದಿ ಅಂಧ ಮಕ್ಕಳಿಗೆ ಪ್ರವಾಸದ ಪೂರ್ಣ ವೆಚ್ಚವನ್ನ ಭರಿಸಿ ಪ್ರವಾಸಕ್ಕೆ ಕಳುಹಿಸುತ್ತಿದ್ದೇವೆ ಎಂದರು.

ಭದ್ರಾ ವೈಲ್ಡ್ ಲೈಫ್ ಸಫಾರಿ, ಮಲ್ಪೆ ಬೀಚ್, ಕೊಲ್ಲೂರು ಮೂಕಾಂಬಿಕೆ ದೇವಾಲಯ ಸೇರಿದಂತೆ ಹಲವು ಪ್ರೇಕ್ಷಣೀಯ, ಧಾರ್ಮಿಕ ಕ್ಷೇತ್ರಗಳಿಗೆ 4 ದಿನಗಳ ಕಾಲ ತಗಲುವ ಸಂಪೂರ್ಣ ವೆಚ್ಚವನ್ನು ಭರಿಸಿ ಕಳುಹಿಸುತ್ತಿದ್ದು ನಿಮ್ಮ ಪ್ರವಾಸ ಸುಖಕರವಾಗಿರಲಿ ಎಂದು ಹಾರೈಸಿದರು.

ಪ್ರವಾಸಕ್ಕೆ ತೆರಳಿದ ಎಲ್ಲರಿಗೂ ಪ್ರವಾಸಿ ಕಿಟ್ ವಿತರಿಸಿದರು. ಗೌರಮ್ಮ ಮಲ್ಲಿಶೆಟ್ಟಿ ಆರೋಗ್ಯ ಕೇಂದ್ರದ ಜಯಾಕ್, ವಿಶ್ವನಾಥ್, ಮನೋಜ್, ಅಂಧ ಮಕ್ಕಳ ಶಾಲೆಯ ಮಂಜುನಾಥ್ ಹಾಗೂ ಸಿಬ್ಬಂದಿ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

0
Malamachanahalli Gram Panchayat President Vice-President Election

Malamachanahalli, Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮ ಪಂಚಾಯಿತಿಯ ಅಧ್ಯಕ್ಷೆಯಾಗಿ ವಿಜಯಲಕ್ಷ್ಮಿ ಹಾಗೂ ಉಪಾಧ್ಯಕ್ಷೆಯಾಗಿ ಜಯಮ್ಮ ಅವರು ಅವಿರೋಧವಾಗಿ ಆಯ್ಕೆಯಾದರು.

ಈ ಹಿಂದಿನ ಅಧ್ಯಕ್ಷೆ ಜಯಲಕ್ಷ್ಮಿ, ಉಪಾಧ್ಯಕ್ಷೆ ನಾಗವೇಣಿ ಅವರು ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಗಳಿಗೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಚುನಾವಣೆಯಲ್ಲಿ ಅಧ್ಯಕ್ಷೆ ಸ್ಥಾನಕ್ಕೆ ವಿಜಯಲಕ್ಷ್ಮಿ, ಉಪಾಧ್ಯಕ್ಷೆ ಸ್ಥಾನಕ್ಕೆ ಜಯಮ್ಮ ಮಾತ್ರವೇ ನಾಮಪತ್ರ ಸಲ್ಲಿಸಿದ್ದು ಅವಿರೋಧ ಆಯ್ಕೆಯಾಗಿದ್ದಾರೆ.

ಚುನಾವಣಾಕಾರಿಯಾಗಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಜಗದೀಶ್ ಅವರು ಕಾರ್ಯನಿರ್ವಹಿಸಿದರು. ಪಿಡಿಒ ಶೈಲಜ, ಗ್ರಾಮ ಪಂಚಾಯಿತಿಯ ಎಲ್ಲ ಸದಸ್ಯರು ಹಾಜರಿದ್ದರು. ನೂತನ ಅಧ್ಯಕ್ಷೆ ಹಾಗೂ ಉಪಾಧ್ಯಕ್ಷೆ ಅವರನ್ನು ಅಭಿನಂದಿಸಿದರು. ಸಿಹಿ ಹಂಚಿ ಸಂಭ್ರಮಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಕನಿಷ್ಠ ಬೆಂಬಲ ಬೆಲೆಗೆ ನೋಂದಾಯಿತ ರೈತರು ಆದಷ್ಟು ಬೇಗ ಖರೀದಿ ಕೇಂದ್ರಕ್ಕೆ ತಂದು ರಾಗಿ ಮಾರಾಟ ಮಾಡಿ

0
Sidlaghatta farmers Ragi MSP Tehsildar Gagana sindhu

Sidlaghatta : ಕನಿಷ್ಠ ಬೆಂಬಲ ಬೆಲೆಗೆ ರಾಗಿ ನೀಡಲು ನೋಂದಾಯಿಸಿಕೊಂಡ ತಾಲ್ಲೂಕಿನ ಎಲ್ಲ ರೈತರು ಆದಷ್ಟು ಬೇಗ ರಾಗಿಯನ್ನು ಖರೀದಿ ಕೇಂದ್ರಕ್ಕೆ ತಂದು ಮಾರಾಟ ಮಾಡಬೇಕೆಂದು ತಹಶೀಲ್ದಾರ್ ಎನ್.ಗಗನ ಸಿಂಧು ಅವರು ರೈತರಲ್ಲಿ ಮನವಿ ಮಾಡಿದರು.

ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳ ಜತೆ ವರದಹಳ್ಳಿಯಲ್ಲಿನ ರಾಜ್ಯ ಉಗ್ರಾಣ ನಿಗಮದ ರಾಗಿ ಖರೀದಿ ಕೇಂದ್ರಕ್ಕೆ ಭೇಟಿ ನೀಡಿದ ಅವರು, ತಾಲ್ಲೂಕಿನ ರೈತರಿಂದ ರಾಗಿ ಖರೀದಿ ಪ್ರಕ್ರಿಯೆಯನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಇಡೀ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಪೈಕಿ ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಅತಿ ಹೆಚ್ಚು ರೈತರು (2055 ಮಂದಿ) ರಾಗಿ ಮಾರಾಟ ಮಾಡಲು ಈಗಾಗಲೆ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದಾರೆ. ಆದರೆ ಇದುವರೆಗೂ 130 ರೈತರಷ್ಟೆ ರಾಗಿಯನ್ನು ತಂದು ಮಾರಾಟ ಮಾಡಿದ್ದಾರೆ.

44474.50 ಕ್ವಿಂಟಾಲ್ ರಾಗಿ ಪೈಕಿ 2995.50 ಕ್ವಿಂಟಾಲ್‌ ನಷ್ಟು ರಾಗಿಯನ್ನು ಮಾತ್ರ ರಾಗಿ ಖರೀದಿ ಕೇಂದ್ರದಲ್ಲಿ ತಂದು ಮಾರಾಟ ಮಾಡಿದ್ದಾರೆ ಎಂದರು.

ಪ್ರತಿ ಕ್ವಿಂಟಾಲ್ ರಾಗಿಗೆ 4866 ರೂಗಳನ್ನು ನಿಗದಿಪಡಿಸಿರುವ ಸರ್ಕಾರದ ಬೆಂಬಲ ಬೆಲೆಗೆ ರಾಗಿ ಖರೀದಿ ಯೋಜನೆಗೆ ಮಾರ್ಚ್ 26ರ ಕಡೆಯ ದಿನವಾಗಿದ್ದು ಉಳಿದ ರೈತರು ಕೂಡಲೆ ಈಗಾಗಲೆ ನೋಂದಾಯಿಸಿಕೊಂಡ ಪ್ರಮಾಣದ ರಾಗಿಯನ್ನು ನಿಗಧಿಪಡಿಸಿದ ವೇ ಬ್ರಿಡ್ಜ್‌ ಗಳಲ್ಲಿ ತೂಕ ಮಾಡಿಸಿಕೊಂಡು ಬಂದು ರಾಗಿಯನ್ನು ಮಾರಾಟ ಮಾಡಬೇಕೆಂದು ರೈತರಲ್ಲಿ ಕೋರಿದರು.

ಆಹಾರ ಶಿರಸ್ತೇದಾರ್ ಮೋಹನ್ ಕುಮಾರ್ ಮಾತನಾಡಿ, ತಾಲ್ಲೂಕಿನ ಹನುಮಂತಪುರ ಗೇಟ್ ಬಳಿಯಿರುವ ಸುಮುಖ ವೇ ಬ್ರಿಡ್ಜ್ ಹಾಗೂ ನಗರದ ದಿಬ್ಬೂರಹಳ್ಳಿಯ ಬೈಪಾಸ್ ರಸ್ತೆಯ ಮಾರುತಿ ವೇ ಬ್ರಿಡ್ಜ್‌ಗಳನ್ನು ಗುರುತಿಸಲಾಗಿದ್ದು ರೈತರು ಇಲ್ಲಿ ರಾಗಿಯನ್ನು ತೂಕ ಮಾಡಿಸಿಕೊಂಡು ಸೂಕ್ತ ದಾಖಲೆ ತರಬೇಕು.

ಮಾರ್ಚ್ 26ರವರೆಗೆ ಮಾತ್ರ ರಾಗಿ ಖರೀದಿ ಕೇಂದ್ರ ಕಾರ್ಯನಿರ್ವಹಿಸಲಿದೆ. ನೋಂದಾಯಿಸಿರುವ ರೈತರ ಪೈಕಿ ಶೇ 10ಷ್ಟು ರೈತರು ಮಾತ್ರವೇ ರಾಗಿ ಮಾರಾಟ ಮಾಡಿದ್ದು ಇನ್ನುಳಿದ ರೈತರು ಆದಷ್ಟು ಬೇಗನೆ ರಾಗಿ ಮಾರಾಟ ಮಾಡಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಮನವಿ ಮಾಡಿದರು. ಆಹಾರ ನಿರೀಕ್ಷಕ ಪ್ರಕಾಶ್, ರಾಗಿ ಮಾರಾಟ ಮಾಡಲು ಬಂದಿದ್ದ ರೈತರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-26/02/2026

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 26/02/2026

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 354
Qty: 19253 Kg
Mx : 800
Mn: 577
Avg: 729

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 25
Qty: 1415 Kg
Mx : ₹ 900
Mn: ₹ 712
Avg: ₹ 794


For Daily Updates WhatsApp ‘HI’ to 7406303366

ಸೌಹಾರ್ಧತೆಯಿಂದ ಕರಗ ಮಹೋತ್ಸವವನ್ನು ಆಚರಿಸಿ – DySP ಪಿ.ಮುರಳಿಧರ್

0
Sidlaghatta Karaga Peace Meeting

Sidlaghatta : ಭಾರತೀಯ ಸಾಂಸ್ಕೃತಿಕ ಕಲೆಯಾದ ಕರಗ ಮಹೋತ್ಸವವು ಅತ್ಯಂತ ಹಳೆಯದಾದ ಜಾನಪದ ಹಬ್ಬವಾಗಿದೆ. ಕರಗ ಮಹೋತ್ಸವವನ್ನು ಶ್ರದ್ಧಾ ಭಕ್ತಿ ಭಾವದಿಂದ ಮತ್ತು ಸೌಹಾರ್ಧಯುತವಾಗಿ ಆಚರಿಸಬೇಕೆಂದು ಚಿಂತಾಮಣಿ ಉಪ ವಿಭಾಗದ ಡಿವೈಎಸ್ಪಿ ಪಿ.ಮುರಳಿಧರ್ ತಿಳಿಸಿದರು

ನಗರದ ಬೈಪಾಸ್ ರಸ್ತೆಯಲ್ಲಿರುವ ಶ್ರೀ ಪೂಜಮ್ಮ ದೇವಿ ದೇವಾಲಯದ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ ಹಾಗೂ ಪೋಲಿಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಶಾಂತಿ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ಕರಗ ಮಹೋತ್ಸವದ ನಾನಾ ಧಾರ್ಮಿಕ ಕಾರ್ಯಗಳು, ಹಸಿ ಕರಗ ಮತ್ತು ಹೂವಿನ ಕರಗ ಮಹೋತ್ಸವ, ಸಾರ್ವಜನಿಕವಾಗಿ ನಡೆಯುವ ರಸ ಸಂಜೆ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು. ಕರಗ ಮಹೋತ್ಸವವು ಭಾವೈಕ್ಯತೆಯ ಸಂಕೇತವಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಧರ್ಮದವರು ಮತ್ತು ಸಮುದಾಯದವರು ಒಂದಾಗಿ ಹಬ್ಬವನ್ನು ಆಚರಿಸಬೇಕು. ಹಬ್ಬದ ಸುಗಮ ನಿರ್ವಹಣೆಗೆ ಸಾರ್ವಜನಿಕರು ಮತ್ತು ಉತ್ಸವ ಸಮಿತಿಯವರು ಪೊಲೀಸರೊಂದಿಗೆ ಪೂರ್ಣವಾಗಿ ಸಹಕರಿಸಬೇಕು ಎಂದರು.

ತಹಶೀಲ್ದಾರ್ ಎನ್.ಗಗನ ಸಿಂಧು ಮಾತನಾಡಿ, ಕರಗ ಮಹೋತ್ಸವವನ್ನು ಶ್ರದ್ಧಾ, ಭಕ್ತಿ, ಭಾವೈಕ್ಯತೆಯಿಂದ ಆಚರಿಸುವಂತೆ ಹೇಳಿದರು

ಸರ್ಕಲ್ ಇನ್ಸ್ ಪೆಕ್ಟರ್ ಜೆ.ಎನ್‌.ಆನಂದ್ ಕುಮಾರ್ ಮಾತನಾಡಿ, ಧಾರ್ಮಿಕ ಮತ್ತು ಸಾಂಸ್ಕೃತಿಕ ಪೂಜೆ ಪುನಸ್ಕಾರಗಳು ಹಾಗೂ ಕರಗ ಮಹೋತ್ಸವದ ಅಂಗವಾಗಿ ಆಯೋಜಿಸುವ ವಾದ್ಯಗೋಷ್ಠಿ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಆಯೋಜಕರು ಸಂಬಂಧಪಟ್ಟ ಬೆಸ್ಕಾಂ , ನಗರಸಭೆ ಮತ್ತು ಪೋಲಿಸ್ ಇಲಾಖೆಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಿ ಕಡ್ಡಾಯವಾಗಿ ಅನುಮತಿ ಪಡೆಯಬೇಕು. ವಾದ್ಯಗೋಷ್ಠಿಗಳ ವೇದಿಕೆಗಳಿಂದ ಸಾರ್ವಜನಿಕರಿಗೆ ವಾಹನ ಸವಾರರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಆಯೋಜಿಸಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ನಗರ ಠಾಣೆ ಪಿ.ಎಸ್.ಐ ಎಂ.ವೇಣುಗೋಪಾಲ್, ನಗರಸಭೆ ಪೌರಾಯುಕ್ತೆ ಜಿ.ಅಮೃತಾ, ಬೆಸ್ಕಾಂ ಇಲಾಖೆ ಎ.ಇ ಅನಂತ್ , ಶ್ರೀಪೂಜಮ್ಮ ದೇವಿ ದೇವಾಲಯ ಸೇವಾಭಿವೃದ್ದಿ ಚಾರಿಟಬಲ್ ಟ್ರಸ್ಟ್ ನ ಅಧ್ಯಕ್ಷ ಚಿಕ್ಕಮುನಿಯಪ್ಪ, ಉಪಾಧ್ಯಕ್ಷ ಆರ್. ಗಣೇಶ್, ಎಂ.ನರಸಿಂಹ, ಕೆ.ಮಂಜುನಾಥ್, ಖಜಾಂಚಿ ಎಂ.ಚಿಕ್ಕಮುನಿಯಪ್ಪ, ಕಾರ್ಯದರ್ಶಿ ಯಾ.ಮಾ. ನಾರಾಯಣಸ್ವಾಮಿ, ಮುಖಂಡರಾದ ನಾಗನರಸಿಂಹ, ಕೆ.ನರಸಿಂಹಮೂರ್ತಿ, ಎಸ್.ಎಂ.ರಮೇಶ್, ಎಂ.ನಾಗರಾಜು, ಕೆ.ರವಿಶಂಕರ್, ಕೆ.ನಾರಾಯಣಸ್ವಾಮಿ, ಮುನಿಕೃಷ್ಣ, ಎನ್.ದ್ಯಾವಪ್ಪ, ಎ.ನರಸಿಂಹಮೂರ್ತಿ, ಎಂ.ಗುರುಮೂರ್ತಿ ಹಾಜರಿದ್ದರು

Sidlaghatta WhatsApp Channel Group

For Daily Updates WhatsApp ‘HI’ to 7406303366

ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಹಾಗೂ ಸಂಘದ 6 ನೇ ವರ್ಷದ ಸಂಭ್ರಮಾಚರಣೆ

0
Sidlaghatta Street Vendors Day Celebration

Sidlaghatta : ಬೀದಿ ಬದಿಯ ವ್ಯಾಪಾರಿಗಳಿಗೆ ಸರ್ಕಾರದಿಂದ ಸಿಗಬೇಕಾದ ಎಲ್ಲ ಸವಲತ್ತುಗಳು ಸಕಾಲದಲ್ಲಿ ಸಿಗಬೇಕಾದರೆ ವ್ಯಾಪಾರಿಗಳಲ್ಲಿ ಜಾಗೃತಿ ಮೂಡಬೇಕಿದೆ. ಬೀದಿ ಬದಿ ವ್ಯಾಪಾರಿಗಳು ಜಾಗೃತರಾದಾಗ ಮಾತ್ರ ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ದಿಯತ್ತ ಸಾಗಲು ಸಾಧ್ಯ ಎಂದು ಬೀದಿ ಬದಿಯ ವ್ಯಾಪಾರಿಗಳ ಸಂಘದ ರಾಜ್ಯಾಧ್ಯಕ್ಷ ಸಿ.ರಂಗಸ್ವಾಮಿ ತಿಳಿಸಿದರು.

ನಗರದ ಕೋಟೆ ವೃತ್ತದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಹಾಗೂ ಸಂಘದ 6 ನೇ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಬಹುತೇಕ ಬೀದಿ ಬದಿಯ ವ್ಯಾಪಾರಸ್ಥರು ಅನಕ್ಷರಸ್ಥರಾಗಿದ್ದು ಜಾಗೃತಿಯ ಕೊರತೆಯಿಂದ ಹಲವಾರು ಸವಲತ್ತುಗಳು ಸಕಾಲಕ್ಕೆ ಸಿಗುತ್ತಿಲ್ಲ ಎನ್ನುವ ಬೇಸರದ ನಡುವೆಯೂ ಬೀದಿ ಬದಿಯ ವ್ಯಾಪಾರಿಗಳ ತಾಲ್ಲೂಕು ಸಂಘ ರಚನೆಯಾದ ಮೇಲೆ ಸಮಸ್ಯೆಗಳು ಒಂದೊಂದಾಗಿ ನಿವಾರಣೆಯಾಗುತ್ತಿವೆ ಎಂದರು.

ಬೀದಿ ಬದಿ ವ್ಯಾಪಾರಿಗಳು ಯಾವುದೇ ಒಂದು ಜಾತಿ ಧರ್ಮಕ್ಕೆ ಸೀಮಿತವಾಗಿಲ್ಲ, ಎಲ್ಲ ವರ್ಗದವರೂ ಸೇರಿ ಬೀದಿ ಬದಿ ವ್ಯಾಪಾರಿ ಎಂಬ ಒಂದೇ ಗುರುತನ್ನು ಹೊಂದಿದ್ದೇವೆ. ಬೀದಿ ಬದಿ ವ್ಯಾಪಾರಿಗಳನ್ನು ಬಲವಂತವಾಗಿ ತೆರವುಗೊಳಿಸುವಂತಿಲ್ಲ ಎಂದು ಭಾರತದ ಸುಪ್ರೀಂ ಕೋರ್ಟ್ ಹಾಗೂ ಕರ್ನಾಟಕ ಹೈಕೋರ್ಟ್ ಸ್ಪಷ್ಟ ಆದೇಶ ನೀಡಿವೆ. ಮಹಾರಾಷ್ಟ್ರದ ಪ್ರಕರಣವೊಂದರಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 92ನೇ ಕಾಯ್ದೆಯಡಿ ಸುಪ್ರೀಂ ಕೋರ್ಟ್ ವ್ಯಾಪಾರಿಗಳ ಪರವಾಗಿ ತೀರ್ಪು ನೀಡಿದೆ. ಈ ಕಾಯ್ದೆಯ ಅಡಿಯಲ್ಲಿ ಪ್ರತಿಯೊಬ್ಬ ವ್ಯಾಪಾರಿಯೂ ಕಾನೂನುಬದ್ಧವಾಗಿ, ಭಯವಿಲ್ಲದೆ ವ್ಯಾಪಾರ ನಡೆಸಬಹುದು ಎಂದರು.

ದೇಶಾದ್ಯಂತ ಸುಮಾರು 1 ಕೋಟಿ ಬೀದಿ ಬದಿ ವ್ಯಾಪಾರಿಗಳು ನೋಂದಾಯಿತರಾಗಿದ್ದು, ರಾಜ್ಯದಲ್ಲಿ 4.80 ಲಕ್ಷ ಮಂದಿ ಇದ್ದಾರೆ. ಶಿಡ್ಲಘಟ್ಟದಲ್ಲಿ ಒಟ್ಟು 1,180 ಮಂದಿ ವ್ಯಾಪಾರಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬೀದಿ ಬದಿ ವ್ಯಾಪಾರಿಗಳಿಗಾಗಿ ಅನೇಕ ಕಲ್ಯಾಣ ಯೋಜನೆಗಳನ್ನು ಜಾರಿಗೆ ತಂದಿವೆ. ವಿಶೇಷವಾಗಿ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಅಡಿಯಲ್ಲಿ ಎಂಟು ವಿಭಿನ್ನ ಯೋಜನೆಗಳಿದ್ದು, ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆಯಬಹುದು. ಕೇವಲ 12 ರೂ. ಮತ್ತು 440 ರೂ. ಪ್ರೀಮಿಯಂನಲ್ಲಿ ಸರ್ಕಾರವೇ ವಿಮಾ ಸೌಲಭ್ಯ ಒದಗಿಸುತ್ತಿದೆ. ವ್ಯಾಪಾರಿಗಳು ಈ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದು ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದರು.

ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಕಾವ್ಯಶ್ರೀ, ಬೀದಿ ಬದಿ ವ್ಯಾಪಾರಿಗಳ ಸಂಘದ ತಾಲೂಕು ಅಧ್ಯಕ್ಷ ಶ್ರೀರಾಮ್, ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ಸೀಕಲ್ ಆನಂದಗೌಡ, ಮಾನವ ಹಕ್ಕುಗಳ ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಸಿ.ಎಂ.ಬೈರೇಗೌಡ, ನಗರಸಭೆ ಅಧಿಕಾರಿ ಸುಧಾ, ಮುಖಂಡರಾದ ಡಾ.ಸತ್ಯನಾರಾಯಣರಾವ್, ವಿಸ್ಡಂ ನಾಗರಾಜ್, ಮಧುಲತಾ, ರೈತ ಮುಖಂಡ ರವಿಪ್ರಕಾಶ್, ಪ್ರದೀಪ್, ಸೇರಿದಂತೆ ತಾಲ್ಲೂಕು ಸಮಿತಿಯ ಸದಸ್ಯರಾದ ಗೋಪಾಲ್, ಸುರೇಶ್, ತಿಮ್ಮರಾಯಪ್ಪ, ವೆಂಕಟರವಣಪ್ಪ, ಗೋವಿಂದಪ್ಪ, ಮಹೇಶ್, ಲಕ್ಷ್ಮಿದೇವಿ, ಮುನಿರತ್ನಮ್ಮ, ಪಾರ್ವತಮ್ಮ, ಪದ್ಮಮ್ಮ ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366