25.6 C
Sidlaghatta
Tuesday, July 1, 2025
Home Blog Page 3

ಶ್ರೀ ಗವಿಗುಟ್ಟ ಗಂಗಾಧರೇಶ್ವರಸ್ವಾಮಿ ದೇವಾಲಯ ಸಮುದಾಯ ಭವನ ಭೂಮಿ ಪೂಜೆ

0
Sri Gavigutta Gangadhareshwaraswamy Temple community centre

Sidlaghatta : ಗ್ರಾಮ ಪಂಚಾಯಿತಿ ಸದಸ್ಯನಿಂದ ಹಿಡಿದು ಯಾರೇ ಜನಪ್ರತಿನಿಧಿಗಳು ಸಾರ್ವಜನಿಕರ ಸಹಕಾರ ಇದ್ದಾಗ ಮಾತ್ರ ಉತ್ತಮ ಅಭಿವೃದ್ದಿ ಕಾರ್ಯಗಳನ್ನು ನಡೆಸಲು ಸಾಧ್ಯವಾಗಲಿದೆ. ಜನ ಸಾಮಾನ್ಯರ ನಾಡಿ ಮಿಡಿತ ಅರಿತವನು ಮಾತ್ರ ಉತ್ತಮ ನಾಯಕನಾಗಲು ಸಾಧ್ಯ ಎಂದು ಗ್ರಾಮ ಪಂಚಾಯಿತಿ ಸದಸ್ಯ ಡಿ.ವೆಂಕಟೇಶ್ ತಿಳಿಸಿದರು.

ತಾಲ್ಲೂಕಿನ ದೇವರಮಳ್ಳೂರು ಗ್ರಾಮ ಪಂಚಾಯಿತಿಯ ವೀರಾಪುರ ಗ್ರಾಮದ ಶ್ರೀಗವಿಗುಟ್ಟ ಗಂಗಾಧರೇಶ್ವರಸ್ವಾಮಿ ದೇವಾಲಯ ಆವರಣದಲ್ಲಿನ ಸಮುದಾಯ ಭವನದ ಆವರಣದಲ್ಲಿ ಕೈಗೊಳ್ಳುವ ಮೂಲ ಸೌಕರ್ಯ ಹಾಗೂ ಅಭಿವೃದ್ದಿ ಕಾರ್ಯಗಳಿಗೆ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಗ್ರಾಮಗಳಲ್ಲಿ ಸರ್ಕಾರಿ ಶಾಲೆ, ಅಂಗನವಾಡಿ, ಡೇರಿ, ಕುಂಟೆ, ಕಾಲುವೆ, ಸಮುದಾಯ ಭವನದಂತ ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸಿ, ಅಭಿವೃದ್ದಿಪಡಿಸುವ ಕಾರ್ಯಕ್ಕೆ ಎಲ್ಲರೂ ಕೂಡ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.

ಗವಿಗುಟ್ಟ ಗಂಗಾಧರೇಶ್ವರಸ್ವಾಮಿ ದೇವಾಲಯಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ಇಲ್ಲಿ ಈಗಾಗಲೆ ವಾಯು ವಿಹಾರಿಗಳಿಗೆ ಅನುಕೂಲ ಆಗುವಂತ ಪಾದಚಾರಿ ಮಾರ್ಗ ನಿರ್ಮಿಸಿದೆ. ಬದುಗಳಲ್ಲಿ ಸಸಿಗಳನ್ನು ನೆಡಲಾಗಿದೆ. ಗ್ರಾಮಸ್ಥರೆಲ್ಲರೂ ಸೇರಿ ಈ ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದು ಇನ್ನು ಮುಂದೆಯೂ ಎಲ್ಲರೂ ಪಕ್ಷಾತೀತವಾಗಿ ಗ್ರಾಮದ ಅಭಿವೃದ್ದಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಸದಸ್ಯರ ನಿಧಿಯ ಅನುದಾನದಿಂದ ಸಮುದಾಯ ಭವನ ಅಭಿವೃದ್ದಿ ಕಾರ್ಯ ಕೈಗೆತ್ತಿಕೊಳ್ಳುತ್ತಿದ್ದು ಎಲ್ಲರೂ ಕೈ ಜೋಡಿಸಬೇಕೆಂದು ಗ್ರಾಮಸ್ಥರಲ್ಲಿ ಕೋರಿದರು.

ಗ್ರಾಮದ ಹಿರಿಯರಾದ ಸುಬ್ಬರಾಯಪ್ಪ ಅವರು ಸಮುದಾಯ ಭವನದ ಆವರಣದಲ್ಲಿನ ಅಭಿವೃದ್ದಿ ಕಾಮಗಾರಿಗೆ ಭೂಮಿ ಪೂಜೆಯನ್ನು ನೆರವೇರಿಸಿದರು. ಪಿಡಿಒ ಸುಧಾಮಣಿ, ಮುಖಂಡರಾದ ಬಿ.ಮುನಿರೆಡ್ಡಿ, ರೈತ ಸಂಘದ ಮುನಿನಂಜಪ್ಪ, ವಿನಾಯಕಸ್ವಾಮಿ ಅಭಿವೃದ್ದಿ ಟ್ರಸ್ಟ್‌ ನ ಸಿ.ರಾಮು, ವಿ.ಆರ್.ಗಣೇಶ್, ಗುತ್ತಿಗೆದಾರ ಬಿ.ಎ.ಲಕ್ಷ್ಮೀಪತಿ, ಡೇರಿ ಮಾಜಿ ಅಧ್ಯಕ್ಷ ಇ.ಸುಬ್ರಮಣಿ, ಡೇರಿ ಸತ್ಯ, ದೇವಪ್ಪ, ಬೂದಾಳ ಶ್ರೀನಿವಾಸ್, ಮುನಿಶಾಮಿರೆಡ್ಡಿ, ಆರ್.ಶ್ರೀನಿವಾಸ್, ಕೈಯ್ಯಪ್ಪ, ಭೂಮಿಕೇಶವ, ಅರ್ಚಕ ಆದಿರೆಡ್ಡಿ ಹಾಜರಿದ್ದರು.

For Daily Updates WhatsApp ‘HI’ to 7406303366

ಆನೂರಿನ ವಿಜಯ್ ಗೌಡಗೆ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ

0
Sidlaghatta Anur Vinay Gowda Body Builder Competition win

Sidlaghatta: ಶಿಡ್ಲಘಟ್ಟ ನಗರದ MRS ಸರ್ಕಲ್ ನಲ್ಲಿರುವ ಜಶ್ವಿನ್ ಫಿಟ್ನೆಸ್ ಜಿಮ್ ನ ವಿದ್ಯಾರ್ಥಿ ವಿಜಯ್ ಗೌಡ ಅವರು ಬೆಂಗಳೂರಿನಲ್ಲಿ ನಡೆದ ಐಸಿಎನ್ ರಾಯಲ್ಸ್ ದೇಹದಾರ್ಢ್ಯ ಪ್ರದರ್ಶನದಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕವನ್ನು ಪಡೆದಿದ್ದಾರೆ.

ಪುರುಷರ ಫಿಟ್ನೆಸ್ ವಿಭಾಗದಲ್ಲಿ, ಯಾವುದೇ ರೀತಿಯಲ್ಲಿ ಸ್ಟೀರಾಯ್ಡ್ ಬಳಸದೇ ನೈಸರ್ಗಿಕವಾಗಿ ದೇಹದಾರ್ಢ್ಯ ಹೊಂದಿರುವವರನ್ನು ಪರಿಗಣಿಸಿದ್ದ ಸ್ಪರ್ಧೆಯಲ್ಲಿ ಶಿಡ್ಲಘಟ್ಟದ ಸ್ಪರ್ಧಿ ವಿಜಯ್ ಗೌಡ ಪ್ರಥಮ ಸ್ಥಾನ ಪಡೆದಿರುವುದು ನಮ್ಮ ತಾಲ್ಲೂಕಿಗೇ ಹೆಮ್ಮೆ. ಆನೂರು ಗ್ರಾಮದವರಾದ ವಿಜಯ್ ಗೌಡ ಅವರು ನಮ್ಮ ಜಿಮ್ ನಲ್ಲಿ ಎರಡು ವರ್ಷಗಳಿಂದ ತರಬೇತಿ ಪಡೆಯುತ್ತಿದ್ದು, ಒಳ್ಳೆಯ ಆಹಾರ, ನಿಯಮಿತ ವ್ಯಾಯಾಮ ಮತ್ತು ಸತತ ಪರಿಶ್ರಮದಿಂದ ಈ ಸಾಧನೆ ಮಾಡಿದ್ದಾರೆ ಎಂದು ತರಬೇತುದಾರರಾದ ವಿನಯ್ ಕುಮಾರ್ ಮತ್ತು ಕಾರ್ತಿಕ್ ತಿಳಿಸಿದ್ದಾರೆ.

ನ್ಯಾಚುರಲ್ ಬಾಡಿಬಿಲ್ಡಿಂಗ್‌ (ಸಹಜ ವ್ಯಾಯಾಮ, ಅಂಗಸೌಷ್ಠವ) ಪದ್ಧತಿಗೆ ನಮ್ಮಲ್ಲಿ ಒತ್ತು ನೀಡುತ್ತಿದ್ದೇವೆ. ಆರೋಗ್ಯಕ್ಕಾಗಿ ವ್ಯಾಯಾಮ ಮಾಡಬೇಕು. ಒಳ್ಳೆಯ ಆಹಾರ ಪದ್ಧತಿ ರೂಡಿಸಿಕೊಳ್ಳಬೇಕು. ಈ ರೀತಿಯಾಗಿ ದೇಹದಾರ್ಢ್ಯ ಹೊಂದಿರುವವರು ಮಾತ್ರ ಸ್ಪರ್ಧೆಗಳಿಗೆ ಅರ್ಹತೆ ಪಡೆಯುತ್ತಾರೆ ಎಂದು ಅವರು ಹೇಳಿದರು.

For Daily Updates WhatsApp ‘HI’ to 7406303366

ಶಿಡ್ಲಘಟ್ಟ ನೂತನ ತಹಸೀಲ್ದಾರ್ ಆಗಿ ಕು. ಗಗನ ಸಿಂಧು.ಎನ್ ಅಧಿಕಾರ ಸ್ವೀಕಾರ

0
Sidlaghatta New Tehsildar Gagana Sindhu

Sidlaghatta : ತಹಸೀಲ್ದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಬಿ.ಎನ್.ಸ್ವಾಮಿ ವರ್ಗಾವಣೆಯಾದ ಹಿನ್ನಲೆಯಲ್ಲಿ ಶಿಡ್ಲಘಟ್ಟ ನೂತನ ತಹಸೀಲ್ದಾರ್ ಆಗಿ ಕುಮಾರಿ ಎನ್.ಗಗನ ಸಿಂಧು. ಬುಧವಾರ ಅಧಿಕಾರ ವಹಿಸಿಕೊಂಡು ಕಾರ್ಯಾರಂಭ ಮಾಡಿದ್ದಾರೆ.

ಈ ಹಿಂದೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಕಚೇರಿಯ ಗ್ರೇಡ್ 2 ತಹಸೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಇವರು ಬುಧವಾರ ಶಿಡ್ಲಘಟ್ಟ ತಹಸೀಲ್ದಾರ್ ಆಗಿ ಅಧಿಕಾರ ವಹಿಸಿಕೊಂಡಿದ್ದಾರೆ.

ನೂತನ ತಹಸೀಲ್ದಾರ್ ಗಗನ ಸಿಂಧು.ಎನ್ ರಿಗೆ ನಿರ್ಗಮಿತ ತಹಸೀಲ್ದಾರ್ ಬಿ.ಎನ್.ಸ್ವಾಮಿ ಸ್ವಾಗತಿಸಿ ಅಧಿಕಾರ ಹಸ್ತಾಂತರ ಮಾಡಿದರು.

For Daily Updates WhatsApp ‘HI’ to 7406303366

Sidlaghatta Silk Cocoon Market-25/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 25/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 483
Qty: 28697 Kg
Mx : ₹ 598
Mn: ₹ 380
Avg: ₹ 497

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 06
Qty: 277 Kg
Mx : ₹ 580
Mn: ₹ 452
Avg: ₹ 530


For Daily Updates WhatsApp ‘HI’ to 7406303366

BJP ಸೇವಾ ಸೌಧ ಕಚೇರಿಯಲ್ಲಿ ಬಲಿದಾನ ದಿವಸ್ ಆಚರಣೆ

0
Sidlaghatta BJP Balidan Diwas

Sidlaghatta : ಭಾರತ ದೇಶದ ಮುಕುಟ ಮಣಿ ಜಮ್ಮು ಮತ್ತು ಕಾಶ್ಮೀರದಲ್ಲಿ 371 ವಿಶೇಷ ಕಾಯಿದೆಯ ಸ್ಥಾನಮಾನವನ್ನು ರದ್ದುಪಡಿಸಬೇಕೆಂದು ನಡೆದ ಹೋರಾಟದ ಮುಂಚೂಣಿಯಲ್ಲಿ ನಿಂತಿದ್ದವರು ಶ್ಯಾಂ ಪ್ರಸಾದ್ ಮುಖರ್ಜಿ. ಅವರದ್ದು ದೂರದೃಷ್ಟಿಯ ನಾಯಕತ್ವ, ಆಲೋಚನೆಯಾಗಿತ್ತು ಎಂದು BJP ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ತಿಳಿಸಿದರು.

ನಗರದ ಮಯೂರ ವೃತ್ತದ ಬಿಜೆಪಿ ಸೇವಾ ಸೌಧ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಶ್ಯಾಂ ಪ್ರಸಾದ್ ಮುಖರ್ಜಿ ಅವರ ಬಲಿದಾನ ದಿವಸ್ ಆಚರಣೆಯಲ್ಲಿ ಅವರು ಮಾತನಾಡಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ 371 ನೇ ಕಾಯಿದೆಯಿಂದ ದೇಶದ ಅಭಿವೃದ್ದಿಗೆ ಮಾರಕವಾಗುತ್ತಿದೆ. ಸೌಹಾರ್ಧತೆಗೆ ದಕ್ಕೆಯಾಗುತ್ತಿದೆ. ಮುಖ್ಯವಾಗಿ ಅಸಮಾನತೆಯ ಹೊಗೆ ಹೆಚ್ಚುತ್ತಿದೆ ಎಂದು 371 ನೇ ವಿಧಿಯನ್ನು ರದ್ದುಪಡಿಸಬೇಕೆಂದು ದೇಶದ ಉದ್ದಗಲಕ್ಕೂ ಹೋರಾಟ ಆರಂಭವಾಯಿತು.

ನೆಹರೂ ಅವರು ಪ್ರಧಾನಿ ಆಗಿದ್ದಾಗ ಆರಂಭವಾದ ಈ ಹೋರಾಟದ ಮುಂಚೂಣಿಯ ನಾಯಕರಲ್ಲಿ ಶ್ಯಾಂ ಪ್ರಸಾದ್ ಮುಖರ್ಜಿ ಪ್ರಮುಖರಾಗಿದ್ದು ಅವರನ್ನು ಬಂಧಿಸಲಾಯಿತು. ಆನಂತರ ಅವರು ಏನಾದರು ಎಂದು ಈ ಕ್ಷಣಕ್ಕೂ ಯಾರಿಗೂ ಗೊತ್ತಿಲ್ಲ. ನಿಗೂಢವಾಗಿಯೆ ಇದೆ ಎಂದರು.

ಈ ದಿನವನ್ನು ಬಲಿದಾನ್ ದಿವಸ್ ಆಗಿ ಆಚರಿಸಿ ಶ್ಯಾಂ ಪ್ರಸಾದ್ ಮುಖರ್ಜಿ ಅವರ ಬದಕು, ಜೀವನವನ್ನು ಸ್ಮರಿಸುವ ಕೆಲಸ ದೇಶದ ಉದ್ದಗಲಕ್ಕೂ ಆಗುತ್ತಿದೆ ಎಂದು ವಿವರಿಸಿದರು

ಮೋದಿ ಅವರು ಬಂದಾದ ನಂತರ ಜಮ್ಮು ಕಾಶ್ಮೀರಕ್ಕೆ ಮಾತ್ರ ನೀಡಿದ್ದ ವಿಶೇಷ ಕಾಯಿದೆಯನ್ನು ರದ್ದುಪಡಿಸಿ ಇಡೀ ದೇಶದ ಎಲ್ಲ ರಾಜ್ಯಗಳು, ಎಲ್ಲ ಜನರೂ ಒಂದೆ ಎಂದು ಸಂದೇಶವನ್ನು ನೀಡಿದರು. ಇದನ್ನು ಎಲ್ಲರೂ ಮನಗಾಣಬೇಕು. ಆ ಮೂಲಕ ಶ್ಯಾಂ ಪ್ರಸಾದ್ ಮುಖರ್ಜಿ ಅವರ ಆಸೆ ಈಡೇರಿದಂತಾಗಿದೆ ಎಂದು ಅಭಿಪ್ರಾಯಪಟ್ಟರು.

ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.

For Daily Updates WhatsApp ‘HI’ to 7406303366

ಬಾಲಕಾರ್ಮಿಕ ವಿರೋಧಿ ದಿನಾಚರಣೆ

0
Sidlaghatta World Day Against Child Labor Day

Sidlaghatta : 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಪ್ರಕಾರದ ಕೆಲಸಗಳಿಗೆ ಬಳಸುವುದು ಕಾನೂನಾತ್ಮಕ ಅಪರಾಧವೆಂದು ಶಿಡ್ಲಘಟ್ಟ ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ರವರು ಹೇಳಿದರು

ತಾಲ್ಲೂಕು ಕಾನೂನು ಸೇವಾ ಸಮಿತಿ ಶಿಡ್ಲಘಟ್ಟ, ವಕೀಲರ ಸಂಘ ಶಿಡ್ಲಘಟ್ಟ, ಕಂದಾಯ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ಇಂಟಿಗ್ರೇಟರ್ ವೆಲ್‌ ಫೇರ್ ಫೌಂಡೇಶನ್ ಶಿಡ್ಲಘಟ್ಟ ಇವರ ಸಂಯುಕ್ತಾಶ್ರಯದಲ್ಲಿ ಸಂತೋಷ್ ನಗರದಲ್ಲಿರುವ ಸರ್ಕಾರಿ ಉರ್ದು ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಪೋಷಕರು, ಸಂಬಂಧಿಕರು ಅಥವಾ ಪರಿಚಿತರು ಮಕ್ಕಳನ್ನು ಕಟ್ಟಡ ಕಾಮಗಾರಿ, ಮರದ ಕೆಲಸ, ಪೇಂಟಿಂಗ್, ಅಂಗಡಿ ಅಥವಾ ಮನೆಗಳಲ್ಲಿ ಕೂಲಿ ಕೆಲಸಗಳಿಗೆ ಬಳಸಬಾರದು. ಇದು ಕಳ್ಳತನ ಅಥವಾ ಅಪರಾಧ ಚಟುವಟಿಕೆಗೆ ಸಮಾನ ಎಂದು ಹೇಳಿದರು.

ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸಲು ಪೋಷಕರು ಶ್ರಮಿಸಬೇಕು. ಕಡ್ಡಾಯ ಶಿಕ್ಷಣಕ್ಕೆ ಮಕ್ಕಳನ್ನು ಸೇರಿಸಬೇಕು ಮತ್ತು ಮುಂದಿನ ಶಿಕ್ಷಣಕ್ಕೂ ಉತ್ತೇಜನೆ ನೀಡಬೇಕು ಎಂದು ತಿಳಿಸಿದರು. ಅಲ್ಲದೆ, 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೆಣ್ಣು ಮಕ್ಕಳ ವಿವಾಹ ಹಾಗೂ 22 ವರ್ಷ ಒಳಗಿನ ಗಂಡು ಮಕ್ಕಳ ವಿವಾಹ ಕೂಡ ಕಾನೂನಿನಂತೆ ನಿಷಿದ್ಧವಾಗಿದೆ. ತೀವ್ರ ಆರ್ಥಿಕ ಸಂಕಷ್ಟದಲ್ಲೂ ಮಕ್ಕಳನ್ನು ದುಡಿಯಲು ಬಿಡಬಾರದು, ಯಾವುದೇ ಸಮಸ್ಯೆ ಎದುರಾದರೆ 1098 ಹೆಲ್ಪ್‌ ಲೈನ್ ಅನ್ನು ಸಂಪರ್ಕಿಸಲು ಹೇಳಿದರು.

ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಮಾತನಾಡಿ, ಶಿಡ್ಲಘಟ್ಟದಲ್ಲಿ ಕೆಲವು ಸ್ಥಳಗಳಲ್ಲಿ ಇನ್ನೂ ಮಕ್ಕಳನ್ನು ಬಳಸಿ ರೇಷ್ಮೆ ನೂಲು ತೆಗೆಯುವಂತಹ ಕೆಲಸಗಳು ನಡೆಯುತ್ತಿರುವುದರ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಸಾಲ ತೀರಿಸಲು ಶಕ್ತಿಯಿಲ್ಲದ ಕುಟುಂಬಗಳು ಮಕ್ಕಳನ್ನೂ ಸೇರಿಸಿ ಕೆಲಸ ಮಾಡಿಸುತ್ತಿರುವುದರಿಂದ ಮಕ್ಕಳ ಆರೋಗ್ಯಕ್ಕೂ ಹಾನಿಯಾಗುತ್ತಿದೆ ಎಂದು ತಿಳಿಸಿದರು.

ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ರಂಜಿತಾ.ಎಸ್, ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ತಾಲ್ಲೂಕು ಕಾರ್ಮಿಕ ಇಲಾಖೆ ನಿರೀಕ್ಷಕಿ ವಿಜಯಲಕ್ಷ್ಮಿ, ನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ವೇಣುಗೋಪಾಲ್, ಮುಖ್ಯ ಶಿಕ್ಷಕಿ ಆಜಂ ಪಾಷ, ಶಿಕ್ಷಕರಾದ ಮುಕ್ಬುಲ್ ಪಾಷಾ, ನಫೀಸ್ ಫಾತೀಮಾ, ನಸೀನ್, ದಾವೂದ್ ಪಾಷಾ. ಎಸ್, ಹೀನಾ ಕೌಸರ್ ಹಾಜರಿದ್ದರು

For Daily Updates WhatsApp ‘HI’ to 7406303366

ಗ್ರಾಮಸ್ಥರು ಸಂರಕ್ಷಿಸಿರುವ ವೀರಗಲ್ಲುಗಳ ಕುರಿತು ವಿದ್ಯಾರ್ಥಿಗಳಿಗೆ ಪಾಠ

0
Sidlaghatta Cheemangala Veeragallu

Cheemangala, Sidlaghatta : ಯಾವುದೇ ಪ್ರದೇಶದ ಇತಿಹಾಸವನ್ನು ತಿಳಿಯಲು ಆ ಪ್ರದೇಶದ ಶಾಸನಗಳು ಮತ್ತು ವೀರಗಲ್ಲುಗಳ ದಾಖಲೆಗಳು ಮುಖ್ಯವಾಗುತ್ತವೆ. ಯುದ್ಧದಲ್ಲಿ ಮಡಿದ ಯೋಧನ ಶೌರ್ಯ ಮತ್ತು ತ್ಯಾಗವನ್ನು ನೆನಪಿಟ್ಟುಕೊಳ್ಳಲು ಸ್ಥಾಪಿಸಲಾಗುವ ವೀರಗಲ್ಲುಗಳು ಸ್ಥಳೀಯ ಸಂಸ್ಕೃತಿಯ ಪ್ರತಿಬಿಂಬಗಳು ಮತ್ತು ಮುಂದಿನ ಪೀಳಿಗೆ ಸ್ಫೂರ್ತಿಯ ಸೆಲೆಗಳು ಎಂದು ಇತಿಹಾಸ ಅಕಾಡೆಮಿಯ ಸದಸ್ಯ ಕೆ.ಧನಪಾಲ್ ತಿಳಿಸಿದರು.

ತಾಲ್ಲೂಕಿನ ಚೀಮಂಗಲ ಗ್ರಾಮದಲ್ಲಿ ಚೌಡೇಶ್ವರಮ್ಮ ದೇವಸ್ಥಾನದ ಆವರಣದಲ್ಲಿ ಗ್ರಾಮಸ್ಥರು ಸಂರಕ್ಷಿಸಿರುವ ವೀರಗಲ್ಲುಗಳ ಕುರಿತಾಗಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ವಿವರಿಸುತ್ತಾ ಅವರು “ಶಾಸನಗಳು, ವೀರಗಲ್ಲುಗಳ ಮೂಲಕ ಇತಿಹಾಸ ದರ್ಶನ” ಎಂಬ ವಿಚಾರವಾಗಿ ಮಾತನಾಡಿದರು.

ತಮ್ಮ ಗ್ರಾಮಕ್ಕೆ ಕೀರ್ತಿ ತಂದಿರುವ ಆ ವೀರರಂತೆ ಈಗಿನ ಮಕ್ಕಳು ಜಗಮೆಚ್ಚುವ ರೀತಿಯಲ್ಲಿ ಸಾಧಕರಾಗಬೇಕು. ನಿಮ್ಮದೇ ಗ್ರಾಮದ ವೀರ ಸೇನಾನಿ ಯುದ್ಧದಲ್ಲಿ ಹೋರಾಡಿ ವೀರಮರಣವನ್ನಪ್ಪಿದ್ದಾನೆ. ಆತನ ಬಗ್ಗೆ ಹೆಮ್ಮೆ, ಗೌರವ ಮತ್ತು ಕೃತಜ್ಞತೆಯನ್ನು ಹೊಂದಬೇಕು ಎಂದರು.

ಈ ವೀರಗಲ್ಲುಗಳು ಮತ್ತು ಶಾಸನಗಳ ಕೆಳಗೆ ನಿಧಿ ಇರುವುದಿಲ್ಲ. ಈ ಊರಿಗಾಗಿ ಹೋರಾಡಿದ ವೀರರು ಮತ್ತು ಅವರ ಕಾಲದ ದಾಖಲೆಯೇ ಅಪೂರ್ವ ನಿಧಿಯಿದ್ದಂತೆ. ಈ ಶಾಸನ ಮತ್ತು ವೀರಗಲ್ಲುಗಳನ್ನು ಕಾಪಾಡಿಕೊಳ್ಳಬೇಕು. ಈ ರೀತಿಯ ಶಾಸನದ ಬಗ್ಗೆ ಊರಿನ ಐತಿಹ್ಯದ ಬಗ್ಗೆ ತಿಳಿದುಕೊಂಡಲ್ಲಿ ನಮ್ಮ ಗ್ರಾಮ್ಯಪರಂಪರೆಯ ಬಗ್ಗೆ ಹೆಮ್ಮೆ, ಅಭಿಮಾನ ಮೂಡುತ್ತದೆ. ಹಸುಗಳನ್ನು ಕಾಪಾಡಿದ ವೀರರ ವೀರಗಲ್ಲಿಗೆ ತುರುಗೋಳ್ ಎನ್ನುತ್ತಾರೆ. ಶಾಸನದಲ್ಲಿನ ಅಕ್ಷರಗಳ ಬಗ್ಗೆ ಅವರು ವಿವರಿಸಿ ನಮ್ಮ ಕನ್ನಡ ಭಾಷೆಯ ಬೆಳವಣಿಗೆಯ ಬಗ್ಗೆಯೂ ಮಕ್ಕಳಿಗೆ ವಿವರಿಸಿ ಇವುಗಳನ್ನೆಲ್ಲಾ ಸಂರಕ್ಷಿಸುವುದು ನಿಮ್ಮೆಲ್ಲರ ಕರ್ತವ್ಯ ಎಂದು ಹೇಳಿದರು.

ಚೀಮಂಗಲ ಗ್ರಾಮದಲ್ಲಿ ಚೌಡೇಶ್ವರಮ್ಮ ದೇವಸ್ಥಾನದ ಆವರಣದಲ್ಲಿ ಗ್ರಾಮಸ್ಥರು ವೀರಗಲ್ಲುಗಳನ್ನು ಸಂರಕ್ಷಿಸಿದ್ದಾರೆ. ಈ ರೀತಿಯಾಗಿ ಇತರ ಗ್ರಾಮದವರೂ ತಮ್ಮ ಗ್ರಾಮಗಳಲ್ಲಿ ಅನಾಥವಾಗಿರುವ ಈ ರೀತಿಯ ವೀರಗಲ್ಲು ಅಥವಾ ಶಾಸನಗಳನ್ನು ಸುರಕ್ಷಿತ ಸ್ಥಳದಲ್ಲಿಟ್ಟು ಮುಂದಿನ ಪೀಳಿಗೆಗೆ ಉಳಿಸಬೇಕಿದೆ ಎಂದರು.

ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಎ.ಎಂ.ತ್ಯಾಗರಾಜ್, ಇತಿಹಾಸ ಸಂಶೋಧಕ ಶ್ರೀನಿವಾಸ್, ಚೀಮಂಗಲ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಎಸ್.ಶಿವಶಂಕರ್, ಶಿಕ್ಷಕರಾದ ನವೀನ್ ಕುಮಾರ್, ಶಿವಕುಮಾರ್, ಶ್ರೀನಿವಾಸ್, ಪಲ್ಲವಿ, ಬೀರಪ್ಪ, ಕಮಲ ಹಾಜರಿದ್ದರು.

For Daily Updates WhatsApp ‘HI’ to 7406303366

Sidlaghatta Silk Cocoon Market-24/06/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 24/06/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 557
Qty: 31992 Kg
Mx : ₹ 581
Mn: ₹ 200
Avg: ₹ 484

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 12
Qty: 639 Kg
Mx : ₹ 602
Mn: ₹ 431
Avg: ₹ 547


For Daily Updates WhatsApp ‘HI’ to 7406303366

ರೈತರ ತೋಟಕ್ಕೆ ಕೃಷಿ ಮಹಾವಿದ್ಯಾಲಯ ವಿದ್ಯಾರ್ಥಿಗಳ ಭೇಟಿ

0
Sidlaghatta Agriculture University Students Field Visit

Sidlaghatta : ಕೃಷಿ ಮಹಾವಿದ್ಯಾಲಯದ ಎರಡನೇ ವರ್ಷದ BSc ಪದವಿಯ 100 ಮಂದಿ ವಿದ್ಯಾರ್ಥಿಗಳು ಹೆಚ್ಚಿನ ತಿಳಿವಳಿಕೆಗಾಗಿ ಅಧ್ಯಯನ ಪ್ರವಾಸ ಕೈಗೊಂಡಿದ್ದು, ಸೋಮವಾರ ತಾಲ್ಲೂಕಿನ ಹಿತ್ತಲಹಳ್ಳಿಯ ಪ್ರಗತಿಪರ ರೈತ ಎಚ್.ಜಿ.ಗೋಪಾಲಗೌಡ ಅವರ ಹಿಪ್ಪುನೇರಳೆ ತೋಟ, ಹುಳು ಸಾಕಾಣಿಕೆ ಮನೆ ಹಾಗೂ ಸಮಗ್ರ ಕೃಷಿ ತೋಟಕ್ಕೆ ಭೇಟಿ ನೀಡಿ ರೈತರೊಂದಿಗೆ ಸಂವಾದಿಸಿ, ಮಾಹಿತಿ ಪಡೆದರು.

ಸಮಗ್ರ ಕೃಷಿಯ ಜೊತೆಯಲ್ಲಿ ಕುರಿ, ಕೋಳಿ, ಹಸು, ಎಮ್ಮೆ, ಜೇನು, ಮೀನು ಮುಂತಾದ ಸಾಕಾಣಿಕೆಗಳ ಬಗ್ಗೆ ತಿಳಿವಳಿಕೆ ಪಡೆದು, ರೈತರು ಇಷ್ಟೆಲ್ಲಾ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾ ಎಂದು ಅಚ್ಚರಿಗೊಂಡರು.

“ಕೆಲಸಕ್ಕೆ ಸೇರಿಕೊಂಡು ಬೇರೆಯವರ ಕೈಕೆಳಗೆ ಬದುಕಬೇಡಿ. ನಿಮ್ಮಲ್ಲಿ ಕನಿಷ್ಠ ಒಂದು ಹೆಕ್ಟೇರ್‍ ಜಮೀನಿದ್ದರೂ ಸಾಕು, ಸಮಗ್ರ ಕೃಷಿ ಮಾಡಿ. ಒಬ್ಬ ಸರ್ಕಾರಿ ಅಧಿಕಾರಿಗಿಂತ ಹೆಚ್ಚಿನ ಸಂಪಾದನೆ ಮಾಡಬಹುದು” ಎಂದು ರೈತ ಎಚ್.ಜಿ.ಗೋಪಾಲಗೌಡ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ರೈತರಾದ ಎಚ್.ಕೆ.ಸುರೇಶ್, ಪುಟ್ಟೇಗೌಡ, ಸಹಾಯಕ ಪ್ರಾಧ್ಯಾಪಕ ಡಾ.ವಿನೋದ ಹಾಜರಿದ್ದರು.

For Daily Updates WhatsApp ‘HI’ to 7406303366

ಜ್ಞಾನಾಂಕುರ-2025 ಅಕ್ಷರಭ್ಯಾಸ ಕಾರ್ಯಕ್ರಮ

0
Sidlaghatta BGS School Gnanankura Aksharabhyasa Programme

Sidlaghatta : ವಿದ್ಯಾವಂತ ಕೆಡಬಹುದು ಆದರೆ ಸಂಸ್ಕಾರವಂತ ಕೆಡುವುದಿಲ್ಲ. ಹಾಗಾಗಿ ಮಕ್ಕಳಿಗೆ ಮನೆಯಿಂದಲೇ ಸಂಸ್ಕಾರ ಕಲಿಸುವ ಕೆಲಸ ಪೋಷಕರಿಂದ ಆಗಬೇಕಿದೆ ಎಂದು ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳನಾಥ ಸ್ವಾಮೀಜಿ ಹೇಳಿದರು.

ನಗರದ ಹೊರವಲಯದ ಹಂಡಿಗನಾಳದ ಕೆ.ವಿ.ಭವನದಲ್ಲಿ ಸೋಮವಾರ ಆಯೋಜಿಸಲಾಗಿದ್ದ ಜ್ಞಾನಾಂಕುರ-2025 ಕಾರ್ಯಕ್ರಮದಲ್ಲಿ ಮಕ್ಕಳಿಗೆ ಅಕ್ಷರಭ್ಯಾಸ ಮಾಡಿಸಿ ಅವರು ಮಾತನಾಡಿದರು.

ಮಕ್ಕಳಿಗೆ ಶಾಲೆಯಲ್ಲಿ ಸಿಗುವ ಪಠ್ಯ ಶಿಕ್ಷಣದ ಜತೆಗೆ ಮನೆಯಲ್ಲಿ ಪಾಲಕರು ಕಲಿಸುವ ಸಂಸ್ಕಾರದ ಶಿಕ್ಷಣ ಅತಿ ಮುಖ್ಯ, ಮಕ್ಕಳು ದೇಶದ ಆಸ್ತಿಯಾಗಿದ್ದು ಅವರ ಭವಿಷ್ಯ ರೂಪಿಸುವ ಆಸೆ ಎಲ್ಲ ಪಾಲಕರಿಗಿರುತ್ತದೆ. ಅದಕ್ಕೆ ಪೂರಕವಾಗಿ ಆಧುನಿಕ ಜಗತ್ತಿನ ಪ್ರವೇಶಕ್ಕೆ ಮಕ್ಕಳನ್ನು ಪ್ರಾಥಮಿಕ ಹಂತದಲ್ಲಿಯೇ ಅಣಿಗೊಳಿಸುವುದು ಶ್ರೀಮಠದ ಉದ್ದೇಶವಾಗಿದೆ. ಹುಟ್ಟಿದ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸುವ ಮೂಲಕ ಸಮಾಜದ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕಿದೆ ಎಂದರು.

ಮಕ್ಕಳು ಶಾಲೆಯಲ್ಲಿ ಗುರುಗಳು ಹೇಳಿದ್ದನ್ನು ಕೇಳುವುದಕ್ಕಿಂತ ಹೆಚ್ಚಾಗಿ ಪೋಷಕರನ್ನು ಅನುಕರಣೆ ಮಾಡಿ ಕಲಿಯುವುದು ಹೆಚ್ಚು ಹಾಗಾಗಿ ಪ್ರತಿಯೊಬ್ಬ ಪೋಷಕರು ಮಕ್ಕಳ ಮುಂದೆ ಸಂಸ್ಕಾರಯುತವಾಗಿ ನಡೆದುಕೊಳ್ಳಬೇಕು ಎಂದರು.

ಬಿಜಿಎಸ್ ವಿದ್ಯಾಸಂಸ್ಥೆಗಳ ಆಡಳಿತಾಧಿಕಾರಿ ಡಾ.ಎನ್.ಶಿವರಾಮರೆಡ್ಡಿ ಮಾತನಾಡಿ, ಯಾವುದೇ ಕಾರಣಕ್ಕೂ. ಮನೆಯಲ್ಲಿರುವ ಮಕ್ಕಳಲ್ಲಿ ಗಂಡು ಹೆಣ್ಣು ಎಂಬ ತಾರತಮ್ಯ ಮಾಡದೇ ಎಲ್ಲಾ ಸಮಯದಲ್ಲಿ ಎಲ್ಲಾ ಕೆಲಸಗಳನ್ನು ಎಲ್ಲಾ ಮಕ್ಕಳ ಕೈಯ್ಯಲ್ಲಿ ಮಾಡಿಸಬೇಕು. ಮಕ್ಕಳನ್ನು ಅವರ ಸಮಸ್ಯೆಗಳಿಗೆ ಅವರೇ ಪರಿಹಾರ ಕಂಡುಕೊಳ್ಳುವ ರೀತಿ ಬೆಳೆಸಬೇಕು. ಒಂದು ಮಗು ಪದವಿ ಪಡೆಯಬೇಕಾದರೆ ಸುಮಾರು 19 ವರ್ಷ ಶಾಲಾ, ಕಾಲೇಜುಗಳಲ್ಲಿ ಕಲಿಯಬೇಕಿದೆ. ಹಾಗಾಗಿ ಪೋಷಕರು ತಿಂಗಳಿಗೊಮ್ಮೆಯಾದರೂ ಮಗು ಓದುತ್ತಿರುವ ಶಾಲೆಗೆ ಭೇಟಿ ನೀಡಿ ಶಿಕ್ಷಕರೊಂದಿಗೆ ಮಾತುಕತೆ ನಡೆಸುವುದನ್ನು ರೂಡಿಸಿಕೊಳ್ಳಬೇಕು ಎಂದರು.

ನಗರದ ಬಿಜಿಎಸ್ ಪಬ್ಲಿಕ್ ಶಾಲೆ ಹಾಗೂ ತಾಲ್ಲೂಕಿನ ದಿಬ್ಬೂರಹಳ್ಳಿಯ ಬಿಜಿಎಸ್ ಇಂಗ್ಲೀಷ್ ಮಾಧ್ಯಮ ಶಾಲೆಯ ಮಕ್ಕಳಿಗೆ ಶ್ರೀಗಳು ಅಕ್ಷರಭ್ಯಾಸ ಮಾಡಿಸಿದರು.

ಶ್ರೀಕೆಂಪಣ್ಣಸ್ವಾಮಿ ಶ್ರೀವೀರಣ್ಣಸ್ವಾಮಿ ದೇವಾಲಯ ಟ್ರಸ್ಟ್‌ ನ ಉಪಾಧ್ಯಕ್ಷ ಬಿಳಿಶಿವಾಲೆ ರವಿ, ಕಾರ್ಯದರ್ಶಿ ಅಶ್ವತ್ಥಯ್ಯ, ಚಿತ್ರ ನಿರ್ಮಾಪಕ ಶಂಕರೇಗೌಡ, ಬಿಜಿಎಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಆರ್.ಮಹದೇವ್, ಜೆ.ಎಸ್.ವೆಂಕಟಸ್ವಾಮಿ ಹಾಜರಿದ್ದರು.

For Daily Updates WhatsApp ‘HI’ to 7406303366

error: Content is protected !!