Home Blog Page 3

Sidlaghatta Silk Cocoon Market-17/07/2026

0

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 17/07/2026

VarietyLotsQty (Kg)MaxMinAvg
Cross-Breed – ಮಿಶ್ರತಳಿ ರೇಷ್ಮೆ ಗೂಡು53328714743468661
Bi-Voltine – ದ್ವಿತಳಿ ರೇಷ್ಮೆ ಗೂಡು251165₹822₹522₹700

Summary: Sidlaghatta Government Cocoon Market rates for 17/07/2026 — Cross-Breed cocoon averaged ₹661/kg across 533 lots (28,714 kg total, price range ₹468–₹743); Bi-Voltine cocoon averaged ₹700/kg across 25 lots (1,165 kg total, price range ₹522–₹822).

ಹಿಂದಿನ ದಿನದ ದರಕ್ಕಾಗಿ 16/07/2026ರ ಮಾರುಕಟ್ಟೆ ದರ ವೀಕ್ಷಿಸಿ. ಎಲ್ಲಾ ದಿನಗಳ ದರಕ್ಕಾಗಿ ರೇಷ್ಮೆ ಗೂಡು ಮಾರುಕಟ್ಟೆ ವಿಭಾಗ ನೋಡಿ.


For Daily Updates WhatsApp ‘HI’ to 7406303366

ಗ್ರಾಹಕ ಸಂವಾದ ಮತ್ತು ವಿದ್ಯುತ್ ಸುರಕ್ಷತಾ ಸಭೆ ಜುಲೈ 18ಕ್ಕೆ

0
bescom grievance meeting

Sidlaghatta : ವಿದ್ಯುತ್ ಸಮಸ್ಯೆಗಳ ಪರಿಹಾರ ಮತ್ತು ಸುರಕ್ಷತೆಯ ಬಗ್ಗೆ ಅರಿವು ಮೂಡಿಸಲು ಬೆಸ್ಕಾಂ ವತಿಯಿಂದ ಜುಲೈ 18ರಂದು ಸಂಜೆ 3:00 ರಿಂದ 5:00 ಗಂಟೆಯವರೆಗೆ ಶಿಡ್ಲಘಟ್ಟದ ಬೆಸ್ಕಾಂ ಕಚೇರಿಯಲ್ಲಿ “ಗ್ರಾಹಕ ಸಂವಾದ ಸಭೆ” ಹಾಗೂ “ವಿದ್ಯುತ್ ಸುರಕ್ಷತಾ ಸಭೆ”ಯನ್ನು ಆಯೋಜಿಸಲಾಗಿದೆ.

ಈ ಸಭೆಯಲ್ಲಿ ಶಿಡ್ಲಘಟ್ಟ ತಾಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ತಾಲೂಕು ಪಂಚಾಯಿತಿ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ನಗರಸಭೆಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ರೈತ ಸಂಘದ ಮುಖಂಡರು ಹಾಗೂ ಸಾರ್ವಜನಿಕ ಗ್ರಾಹಕರು ಭಾಗವಹಿಸಿ ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕು ಮತ್ತು ವಿದ್ಯುತ್ ಸುರಕ್ಷತೆಯ ಬಗ್ಗೆ ಮಾಹಿತಿ ಪಡೆಯಬೇಕೆಂದು ತಿಳಿಸಲಾಗಿದೆ.

In English: BESCOM will hold a Consumer Interaction Meeting and Electricity Safety Meeting at its Sidlaghatta office on July 18 from 3 PM to 5 PM, to resolve power-related grievances and raise awareness on electrical safety. Panchayat and municipal office-bearers, farmer union leaders, and the general public are invited to attend.

ಈ ಹಿಂದೆ ನಡೆದಿದ್ದ ಬೆಸ್ಕಾಂ ಗ್ರಾಹಕರ ಸಂವಾದ ಸಭೆ ಕುರಿತು ಇಲ್ಲಿ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಪೋಷಕರಿಂದ ಶಿಕ್ಷಕರಿಗೆ ಗುರುನಮನ

0
Sidlaghatta Gurunamana Teacher Felicitation Program

Sidlaghatta : ಮಕ್ಕಳ ಜೀವನದಲ್ಲಿ ಗುರುಗಳ ಸ್ಥಾನ ಅತ್ಯಂತ ಶ್ರೇಷ್ಠವಾಗಿದ್ದು, ಪೋಷಕರು ತಮ್ಮ ಮಕ್ಕಳಿಗೆ ಬಾಲ್ಯದಿಂದಲೇ ಗುರುಗಳನ್ನು ಗೌರವಿಸುವ ಸಂಸ್ಕಾರ ಬೆಳೆಸಬೇಕು ಎಂದು ಆದಿಚುಂಚನಗಿರಿ ಮಠದ ಚಿಕ್ಕಬಳ್ಳಾಪುರ ಶಾಖಾ ಮಠದ ಶ್ರೀ ಮಂಗಳಾನಂದ ಸ್ವಾಮೀಜಿ ಹೇಳಿದರು.

ನಗರದ ಹೊರವಲಯದ ಹನುಮಂತಪುರ ಗೇಟ್ ಬಳಿಯ ಬಿಜಿಎಸ್ ಶಾಲೆಯಲ್ಲಿ ಶುಕ್ರವಾರ ನಡೆದ “ಗುರುನಮನ-2026” ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಉತ್ತಮ ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರವೂ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸುತ್ತದೆ ಎಂದ ಸ್ವಾಮೀಜಿ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಗುರುಗಳನ್ನು ಗೌರವಿಸುವ ಸಂಸ್ಕಾರವನ್ನು ಮಕ್ಕಳು ಬೆಳೆಸಿಕೊಳ್ಳಬೇಕು ಎಂದರು. ಪ್ರತಿಯೊಬ್ಬ ಪೋಷಕರೂ ಶಿಕ್ಷಕರೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡಾಗ ಮಕ್ಕಳ ಉಜ್ವಲ ಭವಿಷ್ಯಕ್ಕೆ ಅದು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ ನ ಆಡಳಿತಾಧಿಕಾರಿ ಎನ್. ಶಿವರಾಮರೆಡ್ಡಿ ಮಾತನಾಡಿ, ಶಿಕ್ಷಕರು ತಮ್ಮ ಸ್ವಂತ ಕುಟುಂಬ ಮತ್ತು ಮಕ್ಕಳ ಭವಿಷ್ಯಕ್ಕಿಂತಲೂ ಸಮಾಜದ ಮಕ್ಕಳ ಭವಿಷ್ಯ ರೂಪಿಸುವ ಮಹತ್ತರ ಜವಾಬ್ದಾರಿ ಹೊತ್ತು ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಬಣ್ಣಿಸಿದರು. ಇಂತಹ ಮಹಾನ್ ವ್ಯಕ್ತಿಗಳಾದ ಗುರುಗಳನ್ನು ಗೌರವಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಎಸ್‌.ಎಸ್‌.ಎಲ್‌.ಸಿ ವಿದ್ಯಾರ್ಥಿಗಳ ಪೋಷಕರು ಶಿಕ್ಷಕರನ್ನು ಸನ್ಮಾನಿಸಿ ಗೌರವ ಸಲ್ಲಿಸಿದರು. ಪ್ರಾಂಶುಪಾಲ ಆರ್. ಮಹದೇವ್ ಸೇರಿದಂತೆ ಮಕ್ಕಳ ಪೋಷಕರು, ಶಿಕ್ಷಕರು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

In English: Parents of 2025-26 SSLC students felicitated their teachers at a “Gurunamana-2026” program held at BGS School, Sidlaghatta. Sri Mangalananda Swamiji of Adichunchanagiri Math’s Chikkaballapur branch said parents should instill respect for teachers in children from a young age, calling good values as important as good education.

ಇಂತಹುದೇ ಗುರುವಂದನಾ ಕಾರ್ಯಕ್ರಮ ಇತ್ತೀಚೆಗೆ ಬಿ.ಎಂ.ವಿ ಶಾಲೆಯಲ್ಲಿ ನಡೆದಿತ್ತು.

Sidlaghatta WhatsApp Channel Group

For Daily Updates WhatsApp ‘HI’ to 7406303366

ರೇಷ್ಮೆಗೂಡು ಮಾರುಕಟ್ಟೆಗೆ ಹಿರಿಯ ಸಿವಿಲ್ ನ್ಯಾಯಾಧೀಶರ ಅನಿರೀಕ್ಷಿತ ಭೇಟಿ

0
Sidlaghatta Senior Civil Judge Visits Silk Cocoon Market

Sidlaghatta : ನಗರದ ಸರ್ಕಾರಿ ರೇಷ್ಮೆಗೂಡು ಮಾರುಕಟ್ಟೆಗೆ ಜೆ.ಎಂ.ಎಫ್‌.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಅವರು ಗುರುವಾರ ಇದ್ದಕ್ಕಿದ್ದಂತೆ ಭೇಟಿ ನೀಡಿ, ಮಾರುಕಟ್ಟೆಯ ವಿವಿಧ ವಿಭಾಗಗಳನ್ನು ಪರಿಶೀಲಿಸಿದ ಘಟನೆ ವ್ಯಾಪಾರಿಗಳು ಮತ್ತು ಅಧಿಕಾರಿಗಳಲ್ಲಿ ಕುತೂಹಲ ಮೂಡಿಸಿತು.

ಮಾರುಕಟ್ಟೆಗೆ ಇದೇ ಮೊದಲ ಬಾರಿಗೆ ಭೇಟಿ ನೀಡಿದ ನ್ಯಾಯಾಧೀಶರು, ಹರಾಜು ಪ್ರಕ್ರಿಯೆ, ಗೂಡುಗಳ ಖರೀದಿ-ಮಾರಾಟ ವ್ಯವಸ್ಥೆ, ರೈತರಿಗೆ ಒದಗಿಸಲಾಗುತ್ತಿರುವ ಮೂಲಸೌಕರ್ಯ ಹಾಗೂ ಕಾರ್ಮಿಕರ ಕೆಲಸದ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದರು. ಪ್ರತಿನಿತ್ಯ ನಡೆಯುವ ವಹಿವಾಟಿನ ಸ್ವರೂಪದ ಬಗ್ಗೆಯೂ ಚರ್ಚಿಸಿದ ಅವರು, ದೂರದ ಗ್ರಾಮಗಳಿಂದ ಬರುವ ರೇಷ್ಮೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಹರಾಜು ನಡೆಸುವ ವಿಧಾನ, ಗೂಡುಗಳ ಗುಣಮಟ್ಟದ ಆಧಾರದ ಮೇಲೆ ಬೆಲೆ ನಿಗದಿಪಡಿಸುವ ಪ್ರಕ್ರಿಯೆ, ತೂಕದ ವ್ಯವಸ್ಥೆ ಹಾಗೂ ರೈತರಿಗೆ ಹಣ ಪಾವತಿಯಾಗುವ ಕ್ರಮಗಳ ಕುರಿತು ನ್ಯಾಯಾಧೀಶರು ಸೂಕ್ಷ್ಮವಾಗಿ ಪರಿಶೀಲನೆ ನಡೆಸಿದರು.

ಮಾರುಕಟ್ಟೆಯಲ್ಲಿ ದುಡಿಯುತ್ತಿರುವ ಕಾರ್ಮಿಕರೊಂದಿಗೂ ನೇರ ಸಂವಾದ ನಡೆಸಿದ ಅವರು, ಕಾರ್ಮಿಕರ ಕೆಲಸದ ಪರಿಸ್ಥಿತಿ, ವೇತನ, ಸುರಕ್ಷತಾ ಕ್ರಮಗಳು ಹಾಗೂ ಕಾನೂನುಬದ್ಧವಾಗಿ ದೊರೆಯಬೇಕಾದ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವುದು ಪ್ರತಿ ಉದ್ಯೋಗದಾತನ ಹೊಣೆಗಾರಿಕೆಯಾಗಿದ್ದು, ಕನಿಷ್ಠ ವೇತನ ಸೇರಿದಂತೆ ಸರ್ಕಾರದ ನಿಯಮಾನುಸಾರ ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಅವರು ಸ್ಪಷ್ಟಪಡಿಸಿದರು.

ಈ ವೇಳೆ ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ. ಭಾಸ್ಕರ್, ಕಾರ್ಮಿಕ ಇಲಾಖೆ ಅಧಿಕಾರಿ ಮಂಜುಳ, ರೇಷ್ಮೆ ಇಲಾಖೆ ಅಧಿಕಾರಿಗಳು, ಮಾರುಕಟ್ಟೆ ಸಿಬ್ಬಂದಿ, ವ್ಯಾಪಾರಿಗಳು ಹಾಗೂ ಕಾರ್ಮಿಕರು ಹಾಜರಿದ್ದರು.

In English: Senior Civil Judge Mohammed Roshan Shah made a surprise visit to Sidlaghatta’s government silk cocoon market, inspecting the auction process, weighing system, farmer payments, and working conditions of labourers. He directed officials to ensure adequate facilities for farmers from distant villages and stressed that employers must provide all statutory benefits, including minimum wages, to workers.

Sidlaghatta WhatsApp Channel Group

For Daily Updates WhatsApp ‘HI’ to 7406303366

ಕನಿಷ್ಠ ವೇತನಕ್ಕಿಂತ ಕಡಿಮೆ ಕೂಲಿ: ದೂರು ನೀಡಿ ಎಂದ ನ್ಯಾಯಾಧೀಶರು

0
Sidlaghatta Minimum Wage Legal Awareness Silk Reeling Workers

Sidlaghatta : ರೇಷ್ಮೆ ನೂಲು ಬಿಚ್ಚಣಿಕೆ ಕಾರ್ಮಿಕರು ಸೇರಿದಂತೆ ಯಾವುದೇ ಕೂಲಿ ಕೆಲಸಕ್ಕೆ ಸರ್ಕಾರ ನಿಗದಿಪಡಿಸಿರುವ ಎಂಟು ಗಂಟೆಗಳ ಕನಿಷ್ಠ ದಿನಗೂಲಿ ₹581.72 ಆಗಿದ್ದು, ಇದಕ್ಕಿಂತ ಕಡಿಮೆ ವೇತನ ನೀಡುವುದು ಕಾನೂನು ಉಲ್ಲಂಘನೆಯಾಗುತ್ತದೆ ಎಂದು ಜೆ.ಎಂ.ಎಫ್‌.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಹೇಳಿದರು. ನಿಗದಿತ ವೇತನ ದೊರೆಯದಿದ್ದರೆ ಕಾರ್ಮಿಕ ಇಲಾಖೆಗೆ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ನೀಡಿ ನ್ಯಾಯ ಪಡೆಯಬಹುದು ಎಂದು ಸಲಹೆ ನೀಡಿದರು.

ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಕಾರ್ಮಿಕ ಇಲಾಖೆ, ರೇಷ್ಮೆ ಇಲಾಖೆ ಹಾಗೂ ಆರೋಗ್ಯ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ರೇಷ್ಮೆಗೂಡು ಮಾರುಕಟ್ಟೆ ಸಭಾಂಗಣದಲ್ಲಿ ಗುರುವಾರ ರೇಷ್ಮೆ ನೂಲು ಬಿಚ್ಚಣಿಕೆ ಕಾರ್ಮಿಕರಿಗಾಗಿ ಆಯೋಜಿಸಿದ್ದ ಕಾನೂನು ಅರಿವು ಮತ್ತು ಉಚಿತ ಕಾನೂನು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇದೇ ದಿನ ನ್ಯಾಯಾಧೀಶರು ರೇಷ್ಮೆಗೂಡು ಮಾರುಕಟ್ಟೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಬಾಲಕಾರ್ಮಿಕರ ನೇಮಕ ಸಂಪೂರ್ಣ ಕಾನೂನುಬಾಹಿರವಾಗಿದ್ದು, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ನೇಮಿಸಿಕೊಳ್ಳುವುದು, 14ರಿಂದ 18 ವರ್ಷದೊಳಗಿನವರನ್ನು ರೇಷ್ಮೆ ನೂಲು ಬಿಚ್ಚಣಿಕೆಯಂತಹ ಅಪಾಯಕಾರಿ ಕೆಲಸಗಳಿಗೆ ನೇಮಿಸುವುದು ಅಪರಾಧ ಎಂದು ಅವರು ಎಚ್ಚರಿಸಿದರು. ಉಲ್ಲಂಘಿಸಿದರೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಬಹುದು ಎಂದು ತಿಳಿಸಿದ ಅವರು, ಆರ್ಥಿಕ ಸಂಕಷ್ಟದ ನೆಪದಲ್ಲಿ ಮಕ್ಕಳ ಶಿಕ್ಷಣ ಮೊಟಕುಗೊಳಿಸದೆ ಆದ್ಯತೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಮಿಕ ಇಲಾಖೆ ಅಧಿಕಾರಿ ಶಬಾನಾ ಅಜ್ಮಿ ಮಾತನಾಡಿ, ಸಮಾನ ಕೆಲಸಕ್ಕೆ ಸಮಾನ ವೇತನ ಹಾಗೂ ಮಹಿಳಾ ಕಾರ್ಮಿಕರಿಗೆ ಹೆರಿಗೆ ಸೌಲಭ್ಯ ಕಡ್ಡಾಯ ಎಂದು ತಿಳಿಸಿ, ರೇಷ್ಮೆ ನೂಲು ಬಿಚ್ಚಣಿಕೆ ಕಾರ್ಮಿಕರ ಸ್ಮಾರ್ಟ್ ಕಾರ್ಡ್ ಯೋಜನೆಯಡಿ ಶಿಡ್ಲಘಟ್ಟದಲ್ಲಿ ಈಗಾಗಲೇ 440 ಕಾರ್ಮಿಕರಿಗೆ ಕಾರ್ಡ್ ವಿತರಿಸಲಾಗಿದೆ ಎಂದರು. ನೋಂದಾಯಿತ ಕಾರ್ಮಿಕರಿಗೆ ಅಪಘಾತ ಮರಣ ಅಥವಾ ಶಾಶ್ವತ ಅಂಗವೈಕಲ್ಯಕ್ಕೆ ₹1 ಲಕ್ಷ ಹಾಗೂ ವೈದ್ಯಕೀಯ ನೆರವಿಗೆ ₹50,000ವರೆಗೆ ಸೌಲಭ್ಯ ದೊರೆಯುತ್ತದೆ ಎಂದು ಮಾಹಿತಿ ನೀಡಿದರು.

ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ ಮಾತನಾಡಿ, ಅಸಂಘಟಿತ ಕಾರ್ಮಿಕರು ಸಂಘಟಿತರಾಗಿ ಸರ್ಕಾರದ ಕಲ್ಯಾಣ ಯೋಜನೆಗಳ ಪ್ರಯೋಜನ ಪಡೆಯಲು ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು. ವಕೀಲರ ಸಂಘದ ಕಾರ್ಯದರ್ಶಿ ಸಿ.ಜಿ. ಭಾಸ್ಕರ್, ರೇಷ್ಮೆ ಇಲಾಖೆ ಉಪ ನಿರ್ದೇಶಕ ಉಮೇಶ್, ತಾಲ್ಲೂಕು ಆಸ್ಪತ್ರೆ ವೈದ್ಯಾಧಿಕಾರಿ ಮನೋಹರ್, ಕಾರ್ಮಿಕ ನಿರೀಕ್ಷಕಿ ಎಂ. ಮಂಜುಳಾ ಹಾಜರಿದ್ದರು.

In English: Senior Civil Judge Mohammed Roshan Shah told silk reeling workers in Sidlaghatta that the government-mandated minimum daily wage of ₹581.72 for eight hours of work is legally binding, and urged workers to report underpayment to the Labour Department or District Legal Services Authority. The awareness camp, held at the cocoon market hall, also distributed 440 smart cards to registered workers and warned that employing children under 18 in hazardous silk-reeling work is a criminal offence.

FAQ

ಶಿಡ್ಲಘಟ್ಟದಲ್ಲಿ ಕನಿಷ್ಠ ದಿನಗೂಲಿ ಎಷ್ಟು?
ಎಂಟು ಗಂಟೆಗಳ ಕೆಲಸಕ್ಕೆ ಸರ್ಕಾರ ನಿಗದಿಪಡಿಸಿರುವ ಕನಿಷ್ಠ ದಿನಗೂಲಿ ₹581.72.

ಕಡಿಮೆ ವೇತನ ದೊರೆತರೆ ಎಲ್ಲಿ ದೂರು ನೀಡಬಹುದು?
ಕಾರ್ಮಿಕ ಇಲಾಖೆಗೆ ಅಥವಾ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ದೂರು ನೀಡಬಹುದು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-16/07/2026

0
Sidlaghatta Silk Cocoon Market Rate 16 July 2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 16/07/2026

VarietyLotsQty (Kg)MaxMinAvg
Cross-Breed – ಮಿಶ್ರತಳಿ ರೇಷ್ಮೆ ಗೂಡು42622643741405664
Bi-Voltine – ದ್ವಿತಳಿ ರೇಷ್ಮೆ ಗೂಡು13762₹823₹406₹679

Summary: Sidlaghatta Government Cocoon Market rates for 16/07/2026 — Cross-Breed cocoon averaged ₹664/kg across 426 lots (22,643 kg total, price range ₹405–₹741); Bi-Voltine cocoon averaged ₹679/kg across 13 lots (762 kg total, price range ₹406–₹823).

ಹಿಂದಿನ ದಿನದ ದರಕ್ಕಾಗಿ 15/07/2026ರ ಮಾರುಕಟ್ಟೆ ದರ ವೀಕ್ಷಿಸಿ. ಎಲ್ಲಾ ದಿನಗಳ ದರಕ್ಕಾಗಿ ರೇಷ್ಮೆ ಗೂಡು ಮಾರುಕಟ್ಟೆ ವಿಭಾಗ ನೋಡಿ.


For Daily Updates WhatsApp ‘HI’ to 7406303366

ಜು.19 ರಂದು ವಿದ್ಯುತ್ ವ್ಯತ್ಯಯ

0
Sidlaghatta Chintamani Power Cut July 19

Sidlaghatta : ಶಿಡ್ಲಘಟ್ಟ ಹಾಗೂ ಚಿಂತಾಮಣಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಜುಲೈ 19ರ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ (ಒಟ್ಟು 8 ಗಂಟೆಗಳ ಕಾಲ) ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಚಿಂತಾಮಣಿಯ 220/66 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ (ಕೆಪಿಟಿಸಿಎಲ್) ವತಿಯಿಂದ ಅತ್ಯಗತ್ಯ ನಿರ್ವಹಣಾ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ಇಲ್ಲಿಂದ ವಿದ್ಯುತ್ ಪಡೆಯುವ ಹಲವು ಉಪ ಕೇಂದ್ರಗಳ ವ್ಯಾಪ್ತಿಯಲ್ಲಿ ಕರೆಂಟ್ ಕಟ್ ಆಗಲಿದೆ.

ಚಿಂತಾಮಣಿ ಹಾಗೂ ಶಿಡ್ಲಘಟ್ಟ ಪಟ್ಟಣಗಳು ಸೇರಿದಂತೆ ಈ ಎರಡು ತಾಲ್ಲೂಕುಗಳ ಎಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಪ್ರಮುಖವಾಗಿ ಈ ಕೆಳಗಿನ 66/11 ಕೆ.ವಿ ಉಪ ವಿದ್ಯುತ್ ಕೇಂದ್ರಗಳ ವ್ಯಾಪ್ತಿಯಲ್ಲಿ ಪವರ್ ಕಟ್ ಇರಲಿದೆ: ಚಿಂತಾಮಣಿ, ಶೆಟ್ಟಿಮಾಡಮಂಗಲ, ಮುಸ್ತೇನಹಳ್ಳಿ ಕೈಗಾರಿಕಾ ವಲಯ, ತಲಗವಾರ, ಚೀಮಂಗಲ, ವೈ-ಹುಣಸೇನಹಳ್ಳಿ, ಕೆ.ರಾಗುಟ್ಟಹಳ್ಳಿ, ಬೊಮ್ಮಪಲ್ಲಿ ಕ್ರಾಸ್, ಏನಿಗದಲೆ, ಶಿಡ್ಲಘಟ್ಟ, ಮೇಲೂರು, ನಂದಿಗಾನಹಳ್ಳಿ, ಜಿ.ಕೋಡಿಹಳ್ಳಿ, ಇರಗಂಪಲ್ಲಿ, ಎಮ್.ಗೊಲ್ಲಹಳ್ಳಿ, ಗಂಜಿಗುಂಟೆ, ಬುರುಡುಗುಂಟೆ, ಪಲ್ಲಿಚರ್ಲು, ದಿಬ್ಬರಹಳ್ಳಿ ಮತ್ತು ಜಂಗಮಕೋಟೆ.

ಬೆಳಗ್ಗೆಯಿಂದ ಸಂಜೆಯವರೆಗೆ ಸುದೀರ್ಘ ಅವಧಿಗೆ ವಿದ್ಯುತ್ ಇರುವುದಿಲ್ಲವಾದ್ದರಿಂದ ಸಾರ್ವಜನಿಕರು ಹಾಗೂ ಗ್ರಾಹಕರು ಬೆಸ್ಕಾಂ ಜೊತೆ ಸಹಕರಿಸಬೇಕು ಎಂದು ಚಿಂತಾಮಣಿ ಬೆಸ್ಕಾಂ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ (ವಿದ್ಯುತ್) ಆದ ಶ್ರೀನಾಥ್ ಕೆ. ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ನೀರಿನ ಸಮಸ್ಯೆ ಎದುರಾಗದಂತೆ ಮುಂಚಿತವಾಗಿಯೇ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಸಾರ್ವಜನಿಕರಿಗೆ ಸೂಚಿಸಲಾಗಿದೆ.

ಈ ಹಿಂದೆಯೂ ಇದೇ ರೀತಿಯ ವಿದ್ಯುತ್ ವ್ಯತ್ಯಯ ಸೂಚನೆ ಶಿಡ್ಲಘಟ್ಟ ವ್ಯಾಪ್ತಿಯಲ್ಲಿ ಹೊರಡಿಸಲಾಗಿತ್ತು.

In English: BESCOM/KPTCL will carry out essential maintenance at the Chintamani 220/66 KV power receiving station on Sunday, July 19, 2026, causing an 8-hour power outage (9 AM to 5 PM) across Chintamani and Sidlaghatta taluks, including both towns and surrounding villages. Residents are advised to store water in advance and cooperate with the shutdown.

Sidlaghatta WhatsApp Channel Group

For Daily Updates WhatsApp ‘HI’ to 7406303366

ಗೃಹಲಕ್ಷ್ಮಿ ಯೋಜನೆ: ಅನರ್ಹ ಫಲಾನುಭವಿಗಳ ಪತ್ತೆಗೆ ಅಧಿಕಾರಿಗಳಿಗೆ ಸೂಚನೆ

0
Sidlaghatta Grihalakshmi Scheme Review Meeting Taluk Panchayat

Sidlaghatta : ಶಿಡ್ಲಘಟ್ಟ ತಾಲ್ಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕು ಯೋಜನಾ ಸಮಿತಿ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಹೆಚ್.ಎಂ. ಮುನಿಯಪ್ಪ ವಹಿಸಿದ್ದರು.

ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಯಡಿ ಅನರ್ಹ ಫಲಾನುಭವಿಗಳನ್ನು ಗುರುತಿಸಿ, ಸರ್ಕಾರದ ಅನುದಾನ ದುರುಪಯೋಗವಾಗದಂತೆ ನೋಡಿಕೊಳ್ಳುವುದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಮುಖ ಜವಾಬ್ದಾರಿಯಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು. ಕೆಲವರು ಮೃತಪಟ್ಟಿದ್ದರೂ ಅವರ ಬ್ಯಾಂಕ್ ಖಾತೆಗಳಿಗೆ ಯೋಜನೆಯ ಹಣ ಜಮೆಯಾಗುತ್ತಿರುವ ಪ್ರಕರಣಗಳು ಕಂಡುಬರುತ್ತಿದ್ದು, ಇಂತಹ ಲೋಪಗಳು ಸರ್ಕಾರದ ಹಣದ ದುರುಪಯೋಗಕ್ಕೆ ಕಾರಣವಾಗುವ ಸಾಧ್ಯತೆ ಇರುವುದರಿಂದ, ಫಲಾನುಭವಿಗಳ ಮಾಹಿತಿಯನ್ನು ಕಾಲಕಾಲಕ್ಕೆ ಪರಿಶೀಲಿಸಿ, ಅನರ್ಹರನ್ನು ಪಟ್ಟಿಯಿಂದ ಕೈಬಿಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯಕ್ಕೆ ಅವಕಾಶ ನೀಡದೆ, ಫಲಾನುಭವಿಗಳ ಮಾಹಿತಿಯನ್ನು ನಿಯಮಿತವಾಗಿ ಪರಿಷ್ಕರಿಸುವುದು, ಇಲಾಖೆಗಳ ನಡುವೆ ಸಮನ್ವಯ ಸಾಧಿಸುವುದು ಹಾಗೂ ಸಾರ್ವಜನಿಕರ ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸುವಂತೆ ಅಧ್ಯಕ್ಷರು ಅಧಿಕಾರಿಗಳಿಗೆ ಸೂಚಿಸಿದರು. ಯೋಜನೆ ಅನುಷ್ಠಾನದಲ್ಲಿ ವಿಳಂಬ ಮಾಡುವ ಇಲಾಖೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ತಾಲ್ಲೂಕು ಯೋಜನಾಧಿಕಾರಿ ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಿಡಿಪಿಒ ವಿದ್ಯಾ ವಸ್ತ್ರದ್, ಬೆಸ್ಕಾಂ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕೆಎಸ್‌ಆರ್‌ಟಿಸಿ, ಉದ್ಯೋಗ ವಿನಿಮಯ ಕಚೇರಿ ಹಾಗೂ ತಾಲ್ಲೂಕು ಪಂಚಾಯಿತಿ ಸಿಬ್ಬಂದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

In English: Sidlaghatta Deputy Commissioner H.M. Muniyappa chaired a Grihalakshmi scheme review meeting at the Taluk Panchayat office on Wednesday. He directed officials to identify and remove ineligible beneficiaries, including deceased persons whose bank accounts continue receiving scheme funds, and warned of action against departments causing delays in guarantee scheme implementation.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-15/07/2026

0

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 15/07/2026

VarietyLotsQty (Kg)MaxMinAvg
Cross-Breed – ಮಿಶ್ರತಳಿ ರೇಷ್ಮೆ ಗೂಡು50026676742300667
Bi-Voltine – ದ್ವಿತಳಿ ರೇಷ್ಮೆ ಗೂಡು201233₹800₹666₹731

Summary: Sidlaghatta Government Cocoon Market rates for 15/07/2026 — Cross-Breed cocoon averaged ₹667/kg across 500 lots (26,676 kg total, price range ₹300–₹742); Bi-Voltine cocoon averaged ₹731/kg across 20 lots (1,233 kg total, price range ₹666–₹800).

ಹಿಂದಿನ ದಿನದ ದರಕ್ಕಾಗಿ 14/07/2026ರ ಮಾರುಕಟ್ಟೆ ದರ ವೀಕ್ಷಿಸಿ. ಎಲ್ಲಾ ದಿನಗಳ ದರಕ್ಕಾಗಿ ರೇಷ್ಮೆ ಗೂಡು ಮಾರುಕಟ್ಟೆ ವಿಭಾಗ ನೋಡಿ.


For Daily Updates WhatsApp ‘HI’ to 7406303366

ಶೇ 100ರಷ್ಟು SIR ಗಣತಿ ನಮೂನೆ ವಿತರಣೆ; ಶೇ 60ರಷ್ಟು ಗಣಕೀಕರಣ ಪೂರ್ಣ

0
Sidlaghatta SIR Enumeration Form 100 Percent Distribution

Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಡಿ ಮ್ಯಾಪಿಂಗ್ ಆಗಿರುವ 2,09,793 ಮತದಾರರ ಪೈಕಿ 2,09,752 ಮಂದಿಗೆ (ಶೇ 100ರಷ್ಟು) ಗಣತಿ ನಮೂನೆ ವಿತರಿಸಲಾಗಿದೆ ಎಂದು ಮತದಾರರ ನೋಂದಣಾಧಿಕಾರಿ ಎಸ್.ಎಸ್. ಅಬೀದ್ ತಿಳಿಸಿದ್ದಾರೆ.

ಪ್ರಜಾಸೌಧದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂನ್ 16ರ ಮಾಹಿತಿಯಂತೆ ಕ್ಷೇತ್ರದಲ್ಲಿ 2,09,793 ಮತದಾರರಿದ್ದು, ಈ ಪೈಕಿ ಬಹುತೇಕ ಎಲ್ಲರಿಗೂ ಎನ್ಯುಮರೇಷನ್ ಅರ್ಜಿ ತಲುಪಿಸಲಾಗಿದೆ ಎಂದರು.

ಮಂಗಳವಾರ ಸಂಜೆ 6 ಗಂಟೆಯ ವೇಳೆಗೆ 1,26,665 ನಮೂನೆಗಳ ಗಣಕೀಕರಣ ಪೂರ್ಣಗೊಂಡಿದ್ದು, ಇದು ಶೇ 60ರಷ್ಟು ಪ್ರಗತಿ ಎಂದು ಅವರು ವಿವರಿಸಿದರು.

ಕಳೆದ ವಾರ ಶೇ 98.67ರಷ್ಟು ಮತದಾರರಿಗೆ ಗಣತಿ ನಮೂನೆ ವಿತರಣೆಯಾಗಿ 1,151 ಮಂದಿ ಅನರ್ಹ ಮತದಾರರು ಗುರುತಿಸಲ್ಪಟ್ಟಿದ್ದರು; ಈಗ ಈ ಪ್ರಮಾಣ ಶೇ 100ಕ್ಕೆ ತಲುಪಿದೆ.

ಸ್ಥಳಾಂತರ, ಮರಣ, ನಮೂನೆ ಪಡೆಯದಿರುವಿಕೆ, ಬಹು ಮತಗಟ್ಟೆ ನೋಂದಣಿ ಸೇರಿ ವಿವಿಧ ಕಾರಣಗಳಿಂದ 2,583 ಮಂದಿಯನ್ನು ಅನರ್ಹ ಮತದಾರರೆಂದು ಗುರುತಿಸಲಾಗಿದ್ದು, SIR ಪ್ರಕ್ರಿಯೆ ಮುಗಿಯುವ ಮುನ್ನ ಇವರ ಸ್ಥಿತಿಯನ್ನು ಮರುಪರಿಶೀಲಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ತಹಶೀಲ್ದಾರ್ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಎನ್. ಗಗನಸಿಂಧು ಮಾತನಾಡಿ, 2002ಕ್ಕಿಂತ ಹಿಂದಿನ ಮತದಾರರ ಪಟ್ಟಿಯಲ್ಲಿ ತಮ್ಮ ಅಥವಾ ತಂದೆಯ ಹೆಸರು, ಕ್ರಮ ಸಂಖ್ಯೆ ಇತ್ಯಾದಿ ವಿವರ ಲಭ್ಯವಿಲ್ಲದವರು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಕುರಿತು ಮತಗಟ್ಟೆ ಅಧಿಕಾರಿಗೆ ಲಿಖಿತವಾಗಿ ತಿಳಿಸಿ, ಎನ್ಯುಮರೇಷನ್ ನಮೂನೆಯಲ್ಲಿ ಉಭಯರ ಸಹಿ ಪಡೆದರೆ ಹೆಸರು ಪಟ್ಟಿಗೆ ಸೇರ್ಪಡೆಯಾಗಲಿದೆ; ಇಲ್ಲದಿದ್ದರೆ ಸಾಧ್ಯವಾಗದು ಎಂದರು.

ಕೂಲಿ ಕೆಲಸ ಮತ್ತಿತರ ಕಾರಣಗಳಿಂದ ಮತದಾರರು ಮನೆಯಲ್ಲಿ ಇಲ್ಲದಿರುವುದು ನಮೂನೆ ವಿತರಣೆ ವಿಳಂಬಕ್ಕೆ ಕಾರಣವಾಗುತ್ತಿದೆ ಎಂದು ಅವರು ತಿಳಿಸಿದರು. ಈ ಸಮಸ್ಯೆ ಗ್ರಾಮೀಣ ಭಾಗಕ್ಕಿಂತ ನಗರ ಪ್ರದೇಶದಲ್ಲಿ ಹೆಚ್ಚಾಗಿ ಕಂಡುಬರುತ್ತಿದ್ದು, ತಾಲ್ಲೂಕು ಕಚೇರಿ ಹಾಗೂ ನಗರಸಭೆ ಕಚೇರಿಯಲ್ಲಿ ತೆರೆಯಲಾಗಿರುವ ಮತದಾರರ ಸಹಾಯ ಕೇಂದ್ರವನ್ನು ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.

ಎಲ್ಲ ರಾಜಕೀಯ ಪಕ್ಷಗಳ ಬಿ.ಎಲ್‌.ಎಗಳು, ಬಿ.ಎಲ್‌.ಒಗಳು, ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಶೇ 100ರಷ್ಟು SIR ಪ್ರಕ್ರಿಯೆ ಪೂರ್ಣಗೊಳಿಸಿ, ಅರ್ಹರೆಲ್ಲರ ಹೆಸರು ಪಟ್ಟಿಗೆ ಸೇರಿಸುವ ಮತ್ತು ಅನರ್ಹರನ್ನು ಕೈಬಿಡುವ ಕಾರ್ಯಕ್ಕೆ ಕೈಜೋಡಿಸುವಂತೆ ಅಧಿಕಾರಿಗಳು ಕೋರಿದರು.

In English: Sidlaghatta constituency’s Electoral Registration Officer S.S. Abeed announced 100% completion of Special Intensive Revision (SIR) enumeration form distribution — 2,09,752 of 2,09,793 mapped voters covered, with 60% (1,26,665 forms) already digitized as of July 14, 2026. 2,583 voters were flagged ineligible for reasons including relocation, death, and duplicate registration, pending final review before SIR concludes.

FAQ

SIR ಗಣತಿ ನಮೂನೆ ಸ್ವೀಕರಿಸದೇ ಇದ್ದಲ್ಲಿ ಏನು ಮಾಡಬೇಕು?
ತಾಲ್ಲೂಕು ಕಚೇರಿ ಅಥವಾ ನಗರಸಭೆ ಕಚೇರಿಯಲ್ಲಿ ತೆರೆಯಲಾಗಿರುವ ಮತದಾರರ ಸಹಾಯ ಕೇಂದ್ರವನ್ನು ಸಂಪರ್ಕಿಸಬಹುದು.

2002ಕ್ಕಿಂತ ಹಿಂದಿನ ಮತದಾರರ ಪಟ್ಟಿಯಲ್ಲಿ ವಿವರ ಇಲ್ಲದಿದ್ದರೆ ಏನಾಗುತ್ತದೆ?
ಮತಗಟ್ಟೆ ಅಧಿಕಾರಿಗೆ ಲಿಖಿತವಾಗಿ ತಿಳಿಸಿ ಎನ್ಯುಮರೇಷನ್ ನಮೂನೆಯಲ್ಲಿ ಸಹಿ ಪಡೆದರೆ ಹೆಸರು ಪಟ್ಟಿಗೆ ಸೇರ್ಪಡೆಯಾಗುತ್ತದೆ; ಇಲ್ಲದಿದ್ದರೆ ಸಾಧ್ಯವಾಗದು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-14/07/2026

0
Sidlaghatta Silk Cocoon Market Rate 14 July 2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 14/07/2026

VarietyLotsQty (Kg)MaxMinAvg
Cross-Breed – ಮಿಶ್ರತಳಿ ರೇಷ್ಮೆ ಗೂಡು63034174770385648
Bi-Voltine – ದ್ವಿತಳಿ ರೇಷ್ಮೆ ಗೂಡು191169₹813₹583₹746

Summary: Sidlaghatta Government Cocoon Market rates for 14/07/2026 — Cross-Breed cocoon averaged ₹648/kg across 630 lots (34,174 kg total, price range ₹385–₹770); Bi-Voltine cocoon averaged ₹746/kg across 19 lots (1,169 kg total, price range ₹583–₹813).

ಹಿಂದಿನ ದಿನದ ದರಕ್ಕಾಗಿ 13/07/2026ರ ಮಾರುಕಟ್ಟೆ ದರ ವೀಕ್ಷಿಸಿ. ಎಲ್ಲಾ ದಿನಗಳ ದರಕ್ಕಾಗಿ ರೇಷ್ಮೆ ಗೂಡು ಮಾರುಕಟ್ಟೆ ವಿಭಾಗ ನೋಡಿ.


For Daily Updates WhatsApp ‘HI’ to 7406303366

ವಾಸವಿ ರಸ್ತೆಗೆ ಶಾಸಕ ಭೇಟಿ; ಕಾಮಗಾರಿ ತ್ವರಿತಗೊಳಿಸಲು ಸೂಚನೆ

0
Sidlaghatta MLA Vasavi Road Development Inspection

Sidlaghatta : ನಗರದ ವಾಸವಿ ರಸ್ತೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಬಿ.ಎನ್.ರವಿಕುಮಾರ್ ಸೋಮವಾರ ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.

ದೂರದೃಷ್ಟಿಯ ಯೋಜನೆಯಡಿ ವಾಸವಿ ರಸ್ತೆಯ ಅಭಿವೃದ್ಧಿ ಏಳು ಹಂತಗಳಲ್ಲಿ ನಡೆಯಲಿದೆ ಎಂದು ಶಾಸಕರು ತಿಳಿಸಿದರು.

ಒಳಚರಂಡಿ ಕಾಮಗಾರಿ, ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸುವ ಅಮೃತ್ 2 ಯೋಜನೆಯ ಪೈಪ್‌ಲೈನ್ ಕಾಮಗಾರಿ, ಮಳೆನೀರು ಸರಾಗವಾಗಿ ಹರಿಯಲು ಹ್ಯೂಮ್ ಪೈಪ್ ಹಾಗೂ ಚೇಂಬರ್‌ಗಳ ನಿರ್ಮಾಣ, ನಗರಸಭೆಯ ನೀರು ಸರಬರಾಜು ಪೈಪ್‌ಲೈನ್ ಕಾಮಗಾರಿ, ವಿದ್ಯುತ್ ಕಂಬಗಳ ಸ್ಥಳಾಂತರ, ರಸ್ತೆಗೆ ಹೊಂದಿಕೊಂಡ ಏಳು ಕಿರುರಸ್ತೆಗಳ ಆರಂಭದಲ್ಲಿ ಡ್ರೈನ್ ನಿರ್ಮಾಣ ಹಾಗೂ ಎಲ್ಲ ಕಾಮಗಾರಿ ಮುಗಿದ ಬಳಿಕ ಸಿಮೆಂಟ್ ಕಾಂಕ್ರೀಟ್ ರಸ್ತೆ ನಿರ್ಮಾಣ ಈ ಹಂತಗಳಲ್ಲಿ ಸೇರಿವೆ.

“ಬಹುತೇಕ ಕಾಮಗಾರಿಗಳಿಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದಿದ್ದರೂ, ಸಾರ್ವಜನಿಕರಿಗೆ ತೊಂದರೆಯಾಗದಿರಲೆಂದು ಕಾಮಗಾರಿಯನ್ನು ತ್ವರಿತವಾಗಿ ಮಾಡಿಸಲಾಗುತ್ತಿದೆ. ಈಗಾಗಲೇ 60ರಷ್ಟು ಕಾಮಗಾರಿ ಮುಗಿದಿದೆ. ಇನ್ನು ಎರಡು ವಾರಗಳಲ್ಲಿ ರಸ್ತೆ ಕೆಲಸ ಆರಂಭವಾಗಲಿದ್ದು, ಇದು ಇನ್ನು 50 ವರ್ಷ ಶಾಶ್ವತವಾಗಿ ಉಳಿಯುವ ಕಾಮಗಾರಿ. ಸಾರ್ವಜನಿಕರು ಸಹಕರಿಸಬೇಕು” ಎಂದು ಶಾಸಕ ಬಿ.ಎನ್.ರವಿಕುಮಾರ್ ಹೇಳಿದರು.

ನಗರಸಭೆ ಪೌರಾಯುಕ್ತೆ ಅಮೃತ, ಸ್ಥಳೀಯರಾದ ಬಿ.ಆರ್.ಅನಂತಕೃಷ್ಣ, ಎಸ್.ಎಸ್.ನಾಗರಾಜ್, ರಾಜೇಶ್, ರಮೇಶ್, ನಂದಕಿಶನ್, ವೈಶಾಕ್, ಜೆ.ವಿ.ಸುರೇಶ್, ಲಕ್ಷ್ಮೀನಾರಾಯಣ್, ಆರ್.ಎ.ಉಮೇಶ್, ಬೆಸ್ಕಾಂ ಎಂಜಿನಿಯರುಗಳು ಹಾಜರಿದ್ದರು.

In English: Sidlaghatta MLA B.N. Ravikumar inspected ongoing Vasavi Road development works, directing officials to speed up completion. The seven-phase project covers underground drainage, Amrit 2.0 drinking water pipelines, storm-water drains, power line relocation, and a final cement-concrete road. About 60% of work is complete, with the road-laying phase to begin in two weeks; the MLA said the road is built to last 50 years and appealed for public cooperation.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-13/07/2026

0
Sidlaghatta Silk Cocoon Market Rate 13 July 2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 13/07/2026

VarietyLotsQty (Kg)MaxMinAvg
Cross-Breed – ಮಿಶ್ರತಳಿ ರೇಷ್ಮೆ ಗೂಡು46125331742400664
Bi-Voltine – ದ್ವಿತಳಿ ರೇಷ್ಮೆ ಗೂಡು251382₹842₹555₹719

Summary: Sidlaghatta Government Cocoon Market rates for 13/07/2026 — Cross-Breed cocoon averaged ₹664/kg across 461 lots (25,331 kg total, price range ₹400–₹742); Bi-Voltine cocoon averaged ₹719/kg across 25 lots (1,382 kg total, price range ₹555–₹842).

ಹಿಂದಿನ ದಿನದ ದರಕ್ಕಾಗಿ 12/07/2026ರ ಮಾರುಕಟ್ಟೆ ದರ ವೀಕ್ಷಿಸಿ. ಎಲ್ಲಾ ದಿನಗಳ ದರಕ್ಕಾಗಿ ರೇಷ್ಮೆ ಗೂಡು ಮಾರುಕಟ್ಟೆ ವಿಭಾಗ ನೋಡಿ.


For Daily Updates WhatsApp ‘HI’ to 7406303366

ಗಣತಿ ಅರ್ಜಿಗಳ ಡಿಜಿಟಲೀಕರಣ ಚುರುಕುಗೊಳಿಸಲು ಅಪರ ಜಿಲ್ಲಾಧಿಕಾರಿ ಭಾಸ್ಕರ್ ಸೂಚನೆ

0
Sidlaghatta SIR Enumeration Form Digitization

Sidlaghatta : ಶಿಡ್ಲಘಟ್ಟ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ (ಎಸ್.ಐ.ಆರ್) ಅಂಗವಾಗಿ ಬಿ.ಎಲ್‌.ಒಗಳು ಮನೆಮನೆಗೆ ತೆರಳಿ ಗಣತಿ ಅರ್ಜಿಗಳನ್ನು ಹಂಚಿಕೆ ಮಾಡುವ ಕಾರ್ಯವನ್ನು ಯಶಸ್ವಿಯಾಗಿ ನಡೆಸಿದ್ದು, ಈಗ ಮತದಾರರಿಂದ ಭರ್ತಿಯಾದ ಅರ್ಜಿಗಳನ್ನು ಸ್ವೀಕರಿಸಿ ಡಿಜಿಟಲೀಕರಣಗೊಳಿಸುವ ಕಾರ್ಯವನ್ನು ಚುರುಕುಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಭಾಸ್ಕರ್ ತಿಳಿಸಿದರು.

ನಗರದ ಊಲ್ಲೂರು ಪೇಟೆಯ ಅಂಗನವಾಡಿ ಕೇಂದ್ರದಲ್ಲಿ ಶನಿವಾರ ಎಸ್.ಐ.ಆರ್ ಡಿಜಿಟಲೀಕರಣ ಕಾರ್ಯವನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಷಯ ತಿಳಿಸಿದರು.

ಕಡಿಮೆ ಡಿಜಿಟಲೀಕರಣ ಕೇಂದ್ರಗಳಿಗೆ ಭೇಟಿ :

ಕ್ಷೇತ್ರದಲ್ಲಿ ಗಣತಿ ಅರ್ಜಿ ಹಂಚಿಕೆ ಕಾರ್ಯ ಯಶಸ್ವಿಯಾಗಿ ನಡೆದಿದ್ದು, ಜಿಲ್ಲಾ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಅರ್ಜಿಗಳ ಡಿಜಿಟಲೀಕರಣ ಕಾರ್ಯ ಶೇ 10ರಿಂದ 15ರಷ್ಟು ಮಾತ್ರ ಆಗಿರುವ ಮತಗಟ್ಟೆ ಕೇಂದ್ರಗಳಿಗೆ ಭೇಟಿ ನೀಡಿ ವರದಿ ಸಲ್ಲಿಸಲು ಶಿಡ್ಲಘಟ್ಟ ನಗರಕ್ಕೆ ಆಗಮಿಸಿದ್ದಾಗಿ ಅಪರ ಜಿಲ್ಲಾಧಿಕಾರಿ ಹೇಳಿದರು.

ನಗರದ ಮತಗಟ್ಟೆಗಳಲ್ಲಿ ಡಿಜಿಟಲೀಕರಣ ಕಾರ್ಯ ಶೇ 10ರಿಂದ 15ರಷ್ಟು ಮಾತ್ರ ಪೂರ್ಣಗೊಂಡಿದ್ದು, ಇದನ್ನು ನಾಳೆಯೊಳಗೆ ಶೇ 50ಕ್ಕಿಂತ ಹೆಚ್ಚಿನ ಪ್ರಮಾಣಕ್ಕೆ ಹೆಚ್ಚಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಅವರು ತಿಳಿಸಿದರು.

ಈ ಕಾರ್ಯದಲ್ಲಿ ಜಿಲ್ಲಾ ನೋಂದಣಾಧಿಕಾರಿ, ತಹಶೀಲ್ದಾರ್ ಹಾಗೂ ನಗರಸಭೆ ಪೌರಾಯುಕ್ತರು ಸಮನ್ವಯದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿ ಭಾಸ್ಕರ್ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನೋಂದಣಾಧಿಕಾರಿ ಎಸ್.ಎಸ್.ಅಬೀದ್, ತಹಶೀಲ್ದಾರ್ ಗಗನ ಸಿಂಧು, ನಗರಸಭೆ ಪೌರಾಯುಕ್ತೆ ಅಮೃತ ಹಾಜರಿದ್ದರು.

In English: Additional Deputy Commissioner Bhaskar directed officials in Sidlaghatta to speed up digitization of filled voter enumeration forms collected during the SIR (Special Intensive Revision) exercise. He visited an Anganwadi center where digitization was only 10-15% complete and ordered it raised above 50% by the next day.

SIR ಗಣತಿ ಕಾರ್ಯದ ಇತ್ತೀಚಿನ ಪ್ರಗತಿ ಕುರಿತು ಇಲ್ಲಿ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

“ಚಿಗುರು” ಸಾಂಸ್ಕೃತಿಕ ಕಾರ್ಯಕ್ರಮ: ಸಂಸ್ಕೃತಿ ಉಳಿಸಿ ಬೆಳೆಸಲು ಕರೆ

0
Sidlaghatta Chiguru Cultural Program

Sidlaghatta : ಶಿಡ್ಲಘಟ್ಟ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರ ಹೊರ ಹೊರವಲಯದ ಶ್ರೀ ಬಾಲಾಜಿ ಕನ್ವೆನ್ಷನ್ ಹಾಲ್‌ನಲ್ಲಿ “ಚಿಗುರು”’ ಸಾಂಸ್ಕೃತಿಕ ಕಾರ್ಯಕ್ರಮವನ್ನು ಭಾನುವಾರ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಮಾತನಾಡಿ, “ಮೊನ್ನೆಗಳನ್ನು ಮರೆತವರು, ನಿನ್ನೆಗಳನ್ನು ನೆನೆಯದವರು, ಇಂದಿನ ಜೊತೆ ಇಲ್ಲದವರು ನಾಳೆಗಳನ್ನು ನೋಡಲಾರರು” ಎಂದು ಹೇಳುವ ಮೂಲಕ ಸಮಾಜದಲ್ಲಿ ವೈಚಾರಿಕ ಪ್ರಜ್ಞೆ ಬೆಳೆಸಿಕೊಳ್ಳಬೇಕಾದ ಅಗತ್ಯವನ್ನು ಒತ್ತಿ ಹೇಳಿದರು.

ಪ್ರತಿಯೊಬ್ಬರೂ ಸಮಾಜಕ್ಕೆ ತಾವೇನು ಕೊಡಬೇಕು ಎಂಬುದನ್ನು ಆಲೋಚಿಸಿ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು ಎಂದು ಕರೆ ನೀಡಿದ ಅವರು, ಚಿತ್ರರಂಗದ ನಟ-ನಟಿಯರು ಆದರ್ಶವಾಗಬಾರದು; ಬದಲಿಗೆ ನಮ್ಮ ತಾತ, ಮುತ್ತಾತ, ತಂದೆ-ತಾಯಿ ಹಾಗೂ ನೆಲ, ಜಲ, ಪ್ರಕೃತಿಯೇ ಆದರ್ಶವಾಗಬೇಕು ಎಂದು ಪ್ರತಿಪಾದಿಸಿದರು. ಬಸವಣ್ಣ, ವೇಮನ, ಕನಕದಾಸ, ಅಂಬೇಡ್ಕರ್ ಹಾಗೂ ಕುವೆಂಪು ಅವರಂತಹ ಮಹನೀಯರ ಹಾದಿಯನ್ನು ಎಲ್ಲರೂ ಅನುಸರಿಸಬೇಕು ಎಂದು ಸಲಹೆ ನೀಡಿದರು.

ಸಾಂಸ್ಕೃತಿಕ ವೈವಿಧ್ಯದ ರಸದೌತಣ :

ಕಾರ್ಯಕ್ರಮದಲ್ಲಿ ಸಪ್ತಸ್ವರ ಸಂಗೀತ ಶಾಲೆಯ ಧಾತ್ರಿರಾಮ್ ಮತ್ತು ತಂಡದವರಿಂದ ಶಾಸ್ತ್ರೀಯ ಸಂಗೀತ, ಆಶಾಕಿರಣ ಅಂಧ ಮಕ್ಕಳ ವಸತಿಯುತ ಶಾಲೆಯ ವಿದ್ಯಾರ್ಥಿಗಳಿಂದ ಸುಗಮ ಸಂಗೀತ, ವರದನಾಯಕನಹಳ್ಳಿಯ ಜವನಿ ವಿ.ಟಿ ಮತ್ತು ತಂಡದವರಿಂದ ಜನಪದ ಗೀತೆಗಳ ಗಾಯನ ಪ್ರಸ್ತುತಗೊಂಡಿತು.

ನಿರ್ಮಲ್ ತೇಜ್ ಮತ್ತು ತಂಡದವರು ಜಾನಪದ ನೃತ್ಯ ಪ್ರದರ್ಶಿಸಿದರೆ, ಶ್ರೀ ಶಾರದಾ ವಿದ್ಯಾ ಸಂಸ್ಥೆಯ ಮಹಾಲಕ್ಷ್ಮೀ ಮತ್ತು ತಂಡದವರು ಭರತನಾಟ್ಯ ಪ್ರದರ್ಶಿಸಿ ಗಮನ ಸೆಳೆದರು. ವಿಶ್ವತ್ ಮತ್ತು ವಿಶ್ವಜ ಮತ್ತು ತಂಡದವರು ಏಕಪಾತ್ರಾಭಿನಯ ನೀಡಿದರು. ಸಕಲ ರಂಗಹೆಜ್ಜೆ ಟ್ರಸ್ಟ್ ತಂಡದವರು ಚಂದ್ರಶೇಖರ ಕಂಬಾರ ಅವರ ರಚನೆಯ ‘ಕಲ್ಯಾಣದ ಕೂಗು’ ನಾಟಕ ಪ್ರದರ್ಶಿಸಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ಕರ್ನಾಟಕ ಸಂಗೀತ, ನೃತ್ಯ ಅಕಾಡೆಮಿ ಸದಸ್ಯ ಡಿ.ಆರ್.ರಾಜಪ್ಪ, ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಶ್ರೀ ಶಾರದಾ ವಿದ್ಯಾ ಸಂಸ್ಥೆ ಕಾರ್ಯದರ್ಶಿ ಶ್ರೀಕಾಂತ್, ಎಆರ್‌ಎಂ ಪಿಯು ಕಾಲೇಜು ಪ್ರಾಂಶುಪಾಲ ಮೂರ್ತಿ ಸಾಮ್ರಾಟ್, ಕರ್ನಾಟಕ ಜಾನಪದ ಪರಿಷತ್ತು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಪಟೇಲ್ ನಾರಾಯಣಸ್ವಾಮಿ, ಜಿಲ್ಲಾ ಕಾರ್ಯದರ್ಶಿ ಮುನಿನಾರಾಯಣಪ್ಪ, ಕಲಾವಿದ ಸೋ.ಸೊ.ನಾಗೇಂದ್ರ, ‘ಈ ನೆಲ ಈ ಜನ’ ಸಂಸ್ಥೆಯ ವೆಂಕಟಾಚಲಪತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ‘ಚಕೋರ’ ಜಿಲ್ಲಾ ಸಂಚಾಲಕ ಈ ಧರೆ ಪ್ರಕಾಶ್ ಹಾಗೂ ಇಲಾಖೆಯ ಸಿಬ್ಬಂದಿ ಅರುಣಮ್ಮ ಭಾಗವಹಿಸಿದ್ದರು.

In English: The Kannada and Culture Department organized the ‘Chiguru’ cultural program in Sidlaghatta on Sunday, featuring classical and folk music, dance, and a drama performance. Karnataka Janapada Academy chief Gollahalli Shivaprasad urged people to preserve local culture rather than emulate film personalities.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶ್ರೀ ವೀರಾಂಜನೇಯಸ್ವಾಮಿ 15ನೇ ವಾರ್ಷಿಕೋತ್ಸವ ಸಂಭ್ರಮ

0
Sidlaghatta Veeranjaneya Swamy 15th Anniversary Celebration

Sidlaghatta : ಶಿಡ್ಲಘಟ್ಟ ತಾಲ್ಲೂಕಿನ ಸದ್ದಹಳ್ಳಿ ಗ್ರಾಮದ ಶ್ರೀ ವೀರಾಂಜನೇಯಸ್ವಾಮಿ ದೇವಾಲಯದಲ್ಲಿ ಶ್ರೀ ವೀರಾಂಜನೇಯ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ 15ನೇ ವರ್ಷದ ವಾರ್ಷಿಕೋತ್ಸವ ಮಹೋತ್ಸವವನ್ನು ಭಾನುವಾರ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು. ಗುರು ಹಾಗೂ ಗಣಪತಿ ಸಭಾ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ಗಂಗಾ ಪೂಜೆ, ಗಣಪತಿ ಪೂಜೆ, ಸ್ವಸ್ತಿ ಪುಣ್ಯಾಹವಾಚನ, ದೇವನಾಂದಿ, ಪಂಚಗವ್ಯ, ಶುತ್ಕೆ ವರ್ಣ, ಕಲಶ ಸ್ಥಾಪನೆ ಹಾಗೂ ಕಲಶಾರಾಧನೆ, ಫಲ ಪಂಚಾಮೃತ ಅಭಿಷೇಕ ಹಾಗೂ ವಿಶೇಷ ಪುಷ್ಪಾಲಂಕಾರ ಸೇವೆಗಳು ಸಾಂಗವಾಗಿ ನೆರವೇರಿದವು.

ಇದರ ಜೊತೆಗೆ ಗಣಪತಿ ಹೋಮ, ನವಗ್ರಹ ಹೋಮ, ಮೃತ್ಯುಂಜಯ ಹೋಮ, ಶ್ರೀ ರುದ್ರ ಹೋಮ, ತತ್ವನ್ಯಾಸ-ಕಲಾನ್ಯಾಸ ಹೋಮ ಹಾಗೂ ಪೂರ್ಣಾಹುತಿ ಕಾರ್ಯಕ್ರಮಗಳು ವಿಧಿವತ್ತಾಗಿ ನಡೆದವು. ಕುಂಭಾಭಿಷೇಕ, ಮಂಗಳ ನೀರಾಜನ, ಅಷ್ಟಾವಧಾನ ಸೇವೆ ಹಾಗೂ ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳೂ ಜರುಗಿದವು. ವಿಶೇಷ ನಾದಸ್ವರ ಸೇವೆ ಇಡೀ ದೇವಾಲಯ ಆವರಣಕ್ಕೆ ಪೂಜಾ ವಾತಾವರಣ ಮೂಡಿಸಿತು.

ಸುತ್ತಮುತ್ತಲಿನ ಗ್ರಾಮಗಳಿಂದ ಆಗಮಿಸಿದ ಭಕ್ತರು ಕುಟುಂಬ ಸಮೇತರಾಗಿ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಸ್ವಾಮಿಯ ಸೇವೆ ಸಲ್ಲಿಸಿದರು.

ಶ್ರೀ ವೀರಾಂಜನೇಯ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ, ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದು, ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿದರು.

In English: The Sri Veeranjaneya Swamy temple in Saddahalli village celebrated its trust’s 15th annual festival on Sunday with a full slate of religious rituals including Ganga puja, homas, and kumbhabhishekam. Devotees from surrounding villages attended with their families to take part in the celebrations.

Sidlaghatta WhatsApp Channel Group

For Daily Updates WhatsApp ‘HI’ to 7406303366

ಶ್ರೀರಾಘವೇಂದ್ರ ಸ್ವಾಮಿ ಮಠ ನೂತನ ಕಟ್ಟಡ ಉದ್ಘಾಟನೆ, ಸ್ಮರಣ ಗ್ರಂಥ ಬಿಡುಗಡೆ

0
Sidlaghatta Raghavendra Swamy Mutt New Building Inauguration

Sidlaghatta : ಶಿಡ್ಲಘಟ್ಟ ನಗರದ ಮುತ್ತೂರು ಬೀದಿಯಲ್ಲಿರುವ ಶ್ರೀರಾಘವೇಂದ್ರ ಸ್ವಾಮಿ ಮಠದ ನೂತನ ಕಟ್ಟಡ ಉದ್ಘಾಟನೆ ಹಾಗೂ “ಶ್ರೀಕ್ಷೇತ್ರ ಕಿರು ಮಂತ್ರಾಲಯ” ಸ್ಮರಣ ಗ್ರಂಥದ ಬಿಡುಗಡೆ ಕಾರ್ಯಕ್ರಮವನ್ನು ಶ್ರೀರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಭಾನುವಾರ ಹಮ್ಮಿಕೊಳ್ಳಲಾಗಿತ್ತು.

ಶಾಸಕ ಬಿ.ಎನ್.ರವಿಕುಮಾರ್ ನೂತನ ಕಟ್ಟಡವನ್ನು ಉದ್ಘಾಟಿಸಿ, ಮಠದ ಸೇವಾ ಕಾರ್ಯಗಳನ್ನು ಶ್ಲಾಘಿಸಿ, ಇಂತಹ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಸಾಧ್ಯವಿರುವ ಎಲ್ಲ ನೆರವು ನೀಡಲಾಗುವುದು ಎಂದು ಭರವಸೆ ನೀಡಿದರು. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಯೊಂದಿಗೆ ಸಾಮಾಜಿಕ ಸೌಹಾರ್ದತೆಯನ್ನೂ ಬೆಳೆಸುವ ಕಾರ್ಯದಲ್ಲಿ ಮಠಗಳ ಪಾತ್ರ ಮಹತ್ವದ್ದು ಎಂದು ಅಭಿಪ್ರಾಯಪಟ್ಟರು.

ಮಂಡ್ಯದ ಶ್ರೀ ವರಾಹ ಹರಿ ವಿಠಲದಾಸರು “ಶ್ರೀಕ್ಷೇತ್ರ ಕಿರು ಮಂತ್ರಾಲಯ” ಸ್ಮರಣ ಗ್ರಂಥವನ್ನು ಬಿಡುಗಡೆಗೊಳಿಸಿ ಮಾತನಾಡಿ, ಮಠದ ಇತಿಹಾಸ ಹಾಗೂ ದಾನಿಗಳ ಸೇವೆಯನ್ನು ದಾಖಲಿಸುವ ಈ ಗ್ರಂಥ ಮುಂದಿನ ಪೀಳಿಗೆಗೆ ಮಾರ್ಗದರ್ಶಿಯಾಗಲಿದೆ. ಶ್ರೀರಾಘವೇಂದ್ರಸ್ವಾಮಿಗಳ ಆಶಯದಂತೆ ಪರೋಪಕಾರ ಮತ್ತು ಭಕ್ತಿಮಾರ್ಗದಲ್ಲಿ ನಡೆಯುವುದೇ ಈ ಮಠದ ಮೂಲ ಉದ್ದೇಶವಾಗಿದೆ ಎಂದು ತಿಳಿಸಿದರು.

ಶ್ರೀ ವೆಂಕಟೇಶ್ವರ ಚಿತ್ರಮಂದಿರದ ಮಾಲೀಕ ಎಸ್.ಪ್ರಕಾಶ್ ಮಾತನಾಡಿ, ಮಂತ್ರಾಲಯಕ್ಕೆ ತೆರಳಲು ಸಾಧ್ಯವಾಗದ ಭಕ್ತರಿಗೆ ರಾಯರ ಸಾನ್ನಿಧ್ಯವನ್ನು ತಲುಪಿಸುವ ಉದ್ದೇಶದಿಂದ ದೇಶದ ವಿವಿಧೆಡೆ ಮೃತ್ತಿಕಾ ಬೃಂದಾವನಗಳು ಸ್ಥಾಪನೆಯಾಗಿದ್ದು, ಶಿಡ್ಲಘಟ್ಟದ ಶ್ರೀಕ್ಷೇತ್ರ ಕಿರು ಮಂತ್ರಾಲಯ–ಶ್ರೀ ರಾಘವೇಂದ್ರ ಸ್ವಾಮಿ ಮಠ ಅವುಗಳಲ್ಲಿ ಪ್ರಮುಖವಾಗಿದೆ ಎಂದರು.

ಸೇವೆ, ಸಮರ್ಪಣೆ ಮತ್ತು ಸಮಾಜಮುಖಿ ಚಿಂತನೆಯ ಮೂಲಕ ಈ ಮಠ ನಾಲ್ಕು ದಶಕಗಳಿಂದ ಭಕ್ತರ ಬದುಕಿನಲ್ಲಿ ನಂಬಿಕೆಯ ದೀಪ ಬೆಳಗುತ್ತಿದೆ ಎಂದು ಹೇಳಿದರು.

ಶ್ರೀರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ಅಧ್ಯಕ್ಷ ಎಸ್.ವಿ.ನಾಗರಾಜರಾವ್, ಕಾರ್ಯದರ್ಶಿ ಎನ್.ಶ್ರೀಕಾಂತ್, ಆರ್.ಮಧುಸೂದನ್, ವಾಸುದೇವರಾವ್, ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಎ.ಎಸ್.ರವಿ, ವಿ.ನವೀನ್, ಎಸ್.ಎನ್.ವಾಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

In English: The Sri Raghavendra Swamy Mutt in Sidlaghatta inaugurated its new building and released a commemorative volume, “Shri Kshetra Kiru Mantralaya,” on Sunday. MLA B.N. Ravikumar inaugurated the building and praised the mutt’s service activities, and devotees and trust officials attended the event.

ಈ ಮಠ ಹಿಂದೆ ಆಚರಿಸಿದ್ದ ಆರಾಧನಾ ಮಹೋತ್ಸವ ಕಾರ್ಯಕ್ರಮದ ಕುರಿತು ಇಲ್ಲಿ ಓದಿ.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-12/07/2026

0
Sidlaghatta Silk Cocoon Market Rate 12 July 2026

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 12/07/2026

VarietyLotsQty (Kg)MaxMinAvg
Cross-Breed – ಮಿಶ್ರತಳಿ ರೇಷ್ಮೆ ಗೂಡು45224772732355659
Bi-Voltine – ದ್ವಿತಳಿ ರೇಷ್ಮೆ ಗೂಡು241327₹865₹677₹768

ಹಿಂದಿನ ದಿನದ ದರಕ್ಕಾಗಿ 11/07/2026ರ ಮಾರುಕಟ್ಟೆ ದರ ವೀಕ್ಷಿಸಿ. ಎಲ್ಲಾ ದಿನಗಳ ದರಕ್ಕಾಗಿ ರೇಷ್ಮೆ ಗೂಡು ಮಾರುಕಟ್ಟೆ ವಿಭಾಗ ನೋಡಿ.

Summary: Sidlaghatta Government Cocoon Market rates for 12/07/2026 — Cross-Breed cocoon averaged ₹659/kg across 452 lots (24,772 kg total, price range ₹355–₹732); Bi-Voltine cocoon averaged ₹768/kg across 24 lots (1,327 kg total, price range ₹677–₹865).


For Daily Updates WhatsApp ‘HI’ to 7406303366

ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ 1432 ಪ್ರಕರಣಗಳು ಇತ್ಯರ್ಥ

0
Sidlaghatta National Lok Adalat 1432 Cases Settled

Sidlaghatta : ಶಿಡ್ಲಘಟ್ಟದ ನ್ಯಾಯಾಲಯದಲ್ಲಿ ಶನಿವಾರ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಆದೇಶದ ಮೇರೆಗೆ ಶಿಡ್ಲಘಟ್ಟ ತಾಲ್ಲೂಕು ಕಾನೂನು ಸೇವಾ ಸಮಿತಿ ವತಿಯಿಂದ ಆಯೋಜಿಸಿದ್ದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 1432 ಪ್ರಕರಣಗಳು ಇತ್ಯರ್ಥಗೊಂಡು 81ಲಕ್ಷ 26 ಸಾವಿರ 630 ರೂ ಪಾವತಿಸಲಾಗಿದೆ.

ತಾಲ್ಲೂಕು ಕಾನೂನು ಸೇವಾ ಸಮಿತಿ ಅಧ್ಯಕ್ಷರು, ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ರೋಷನ್ ಷಾ, ಪ್ರಧಾನ ಸಿವಿಲ್ ನ್ಯಾಯಾಧೀಶೆ ಸುಕನ್ಯಾ.ಸಿ.ಎಸ್ ಮತ್ತು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಭಾವನಾ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಲೋಕ್ ಅದಾಲತ್ ವಿವಿಧ ರೀತಿ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಲಾಯಿತು

ಸಂಧಾನಕಾರರಾಗಿ ವಕೀಲರಾದ ಗಗನ್ ಕುಮಾರ್, ಆಂಜನೇಯರೆಡ್ಡಿ ಮತ್ತು ಸುನೀತಾ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎ.ನಾರಾಯಣಸ್ವಾಮಿ, ಕಾರ್ಯದರ್ಶಿ ಸಿ.ಜಿ.ಭಾಸ್ಕರ್ ಹಾಜರಿದ್ದರು.

ಜುಲೈ 11ರ ಈ ರಾಷ್ಟ್ರೀಯ ಲೋಕ್ ಅದಾಲತ್ ಬಗ್ಗೆ ಮೊದಲೇ ಪ್ರಕಟವಾಗಿದ್ದ ಪ್ರಕಟಣೆಯ ಸುದ್ದಿಯನ್ನೂ ಇಲ್ಲಿ ವೀಕ್ಷಿಸಿ.

In English: The National Lok Adalat held at Sidlaghatta court on Saturday, organized by the Taluk Legal Services Committee under Karnataka State Legal Services Authority directives, settled 1,432 cases through compromise, with a total of ₹81,26,630 paid in settlements.

Sidlaghatta WhatsApp Channel Group

For Daily Updates WhatsApp ‘HI’ to 7406303366

ಎನ್‌.ಪಿ.ಎಸ್ ರದ್ದು, ಓ.ಪಿ.ಎಸ್ ಜಾರಿಗೆ ಒತ್ತಾಯ: ಸರ್ಕಾರಿ ನೌಕರರ ಬೆಂಗಳೂರು ಚಲೊ

0
Sidlaghatta Government Employees Bengaluru Chalo NPS OPS Pension Protest

Sidlaghatta : ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌.ಪಿ.ಎಸ್) ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ (ಓ.ಪಿ.ಎಸ್) ಜಾರಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯಮಟ್ಟದ ಹಕ್ಕೊತ್ತಾಯ ಕಾರ್ಯಕ್ರಮದಲ್ಲಿ ಶಿಡ್ಲಘಟ್ಟ ತಾಲ್ಲೂಕಿನ ಸರ್ಕಾರಿ ನೌಕರರು ಬೆಂಗಳೂರಿಗೆ ತೆರಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿ ಹಾಗೂ ಶಿಡ್ಲಘಟ್ಟ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಎನ್. ಸುಬ್ಬಾರೆಡ್ಡಿ ಅವರ ನೇತೃತ್ವದಲ್ಲಿ ನೌಕರರು ಬೆಂಗಳೂರಿಗೆ ಪ್ರಯಾಣ ಬೆಳೆಸಿದರು.

ನಗರದ ಕೋಟೆ ವೃತ್ತದಲ್ಲಿ ಬಸ್‌ ಗಳಿಗೆ ಚಾಲನೆ ನೀಡಿ ಮಾತನಾಡಿದ ಕೆ.ಎನ್. ಸುಬ್ಬಾರೆಡ್ಡಿ, ರಾಜ್ಯ ಸರ್ಕಾರಿ ನೌಕರರ ಹಲವು ವರ್ಷಗಳ ಬೇಡಿಕೆಗಳನ್ನು ಸರ್ಕಾರ ಶೀಘ್ರ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಕೇಂದ್ರ ಸರ್ಕಾರದ ಮಾದರಿಯಲ್ಲಿ ರಾಜ್ಯ ಸರ್ಕಾರಿ ನೌಕರರಿಗೂ ಸಮಾನ ವೇತನ ವ್ಯವಸ್ಥೆ ಜಾರಿಗೊಳಿಸಬೇಕು. ಎನ್‌.ಪಿ.ಎಸ್ ರದ್ದುಪಡಿಸಿ ಓ.ಪಿ.ಎಸ್ ಜಾರಿಗೆ ತರಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ನೌಕರರ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಸ್ಪಂದಿಸುವ ವಿಶ್ವಾಸವಿದೆ. ಇದೇ ಉದ್ದೇಶದಿಂದ ರಾಜ್ಯಮಟ್ಟದ ಹಕ್ಕೊತ್ತಾಯ ಕಾರ್ಯಕ್ರಮ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವೂ ವಿತರಿಸಲಾಗುವುದು ಎಂದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಮಂಜುನಾಥ್, ಖಜಾಂಚಿ ವಸಂತ್ ಕುಮಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸುಂದರಾಚಾರಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಸಂಘದ ತನ್ವೀರ್ ಅಹ್ಮದ್, ಮಧುಸೂದನ್, ರಾಜ್ಯ ಪರಿಷತ್ ಸದಸ್ಯ ಟಿ.ಟಿ. ನರಸಿಂಹಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ವಿ. ವೆಂಕಟರೆಡ್ಡಿ, ಎನ್‌.ಪಿ.ಎಸ್ ನೌಕರರ ಸಂಘದ ಅಧ್ಯಕ್ಷ ಗಜೇಂದ್ರ, ಕಾರ್ಯದರ್ಶಿ ನರಸಿಂಹರಾಜು ಹಾಜರಿದ್ದರು.

In English: Government employees from Sidlaghatta taluk travelled to Bengaluru to join a state-level protest by the Karnataka State Government Employees Association, demanding scrapping of the New Pension Scheme (NPS) and restoration of the Old Pension Scheme (OPS), along with pay parity with central government employees.

Sidlaghatta WhatsApp Channel Group

For Daily Updates WhatsApp ‘HI’ to 7406303366