ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ
Date: 7/12/2020
CB Lots: 375
Qty: 17792 Kgs
Max: 453
Min: 200
Avg: 279
BV Lots: 04
Qty: 227 Kgs
Max: 388
Min: 333
Avg: 357
CB Lots: 375
Qty: 17792 Kgs
Max: 453
Min: 200
Avg: 279
BV Lots: 04
Qty: 227 Kgs
Max: 388
Min: 333
Avg: 357
ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ
| ಉತ್ಪನ್ನಗಳು | ಆವಕ | ಕನಿಷ್ಠ | ಗರಿಷ್ಠ |
|---|---|---|---|
| ಹುರುಳಿಕಾಯಿ (ವೋಲ್) | 125 | 1400 | 2200 |
| ಬೀಟ್ರೂಟ್ | 30 | 1000 | 1200 |
| ಹಾಗಲಕಾಯಿ | 5 | 1000 | 1200 |
| ಸೋರೆಕಾಯಿ | 5 | 800 | 1000 |
| ಬದನೆಕಾಯಿ | 28 | 800 | 1000 |
| ಎಲೆಕೋಸು | 250 | 400 | 500 |
| ದಪ್ಪ ಮೆಣಸಿನಕಾಯಿ | 70 | 1200 | 1500 |
| ಕ್ಯಾರೆಟ್ | 80 | 2500 | 3000 |
| ಹೂಕೋಸು | 20 | 600 | 700 |
| ಬಜ್ಜಿ ಮೆಣಸಿನಕಾಯಿ (ದಪ್ಪ ಮೆಣಸಿನಕಾಯಿ) | 75 | 1400 | 1600 |
| ಸೌತೆಕಾಯಿ | 130 | 400 | 700 |
| ಹಸಿರು ಮೆಣಸಿನಕಾಯಿ | 20 | 1500 | 2500 |
| ನವಿಲುಕೋಸು | 15 | 600 | 700 |
| ಮುೂಲಂಗಿ | 30 | 500 | 600 |
| ಹೀರೇಕಾಯಿ | 35 | 1000 | 1500 |
| ಸೀಮೆ ಬದನೆಕಾಯಿ | 90 | 300 | 400 |
| ತೊಗರಿಕಾಯಿ | 40 | 1800 | 2000 |
| ಟೊಮ್ಯಾಟೊ | 547 | 500 | 1500 |
ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ
| ಉತ್ಪನ್ನಗಳು | ಆವಕ | ಕನಿಷ್ಠ | ಗರಿಷ್ಠ |
|---|---|---|---|
| ಧನಿಯಾ (ಸ್ಥಳೀಯ) | 36 | 5000 | 7500 |
| ರಾಗಿ (ಸ್ಥಳೀಯ) | 135 | 1650 | 1900 |
| ಅಕ್ಕಿ (ಹಂಸ) | 55 | 2050 | 2300 |
| ಅಕ್ಕಿ (ಸೋನ) | 150 | 3500 | 5100 |
ತಾಲ್ಲೂಕಿನ ಭಕ್ತರಹಳ್ಳಿಯ ನಾರಾಯಣಸ್ವಾಮಿ ಅವರ ಮಗಳು ಬಿ.ಎನ್.ಪುಷ್ಪ ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ “ಕುಲಾಂತರಿ ರಾಗಿ ಸಸ್ಯದ ಲವಣಾಂಶ ಸಹಿಷ್ಣುತೆಗೆ ಸಂಬಂಧಿಸಿದ ವಂಶವಾಹಿಗಳ ಅಭಿವೃದ್ಧಿ ಮತ್ತು ಗುಣಲಕ್ಷಣ” ಕುರಿತಾಗಿ ಪಿ.ಎಚ್.ಡಿ ಪ್ರಬಂಧವನ್ನು ಮಂಡಿಸಿದ್ದು ಡಾಕ್ಟರೇಟ್ ಪಡೆದಿದ್ದಾರೆ.
ತಾಲ್ಲೂಕಿನ ಭಕ್ತರಹಳ್ಳಿಯ ಬಿ.ಎಂ.ವಿ ಶಾಲೆಯಲ್ಲಿ ಹತ್ತನೇ ತರಗತಿಯವರೆಗೂ ಓದಿದ ಬಿ.ಎನ್.ಪುಷ್ಪ, ಪಿಯುಸಿಯನ್ನು ಮಳ್ಳೂರಿನ ಸ್ವಾಮಿ ವಿವೇಕಾನಂದ ಕಾಲೇಜಿನಲ್ಲಿ ಓದಿದ್ದರು. ಬಿ.ಎಸ್.ಸಿ (ಎ.ಜಿ) ಹಾಸನದಲ್ಲಿ ಓದಿ, ಎಂ.ಎಸ್.ಸಿ ಮತ್ತು ಪಿ.ಎಚ್.ಡಿ ಯನ್ನು ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಲ್ಲಿ ಪೂರೈಸಿದ್ದಾರೆ. ಡಾ.ಎ.ಜಿ.ಶಂಕರ್ ಅವರ ಮಾರ್ಗದರ್ಶನದಲ್ಲಿ ಅವರು ಕುಲಾಂತರಿ ರಾಗಿ ಸಸ್ಯದ ಲವಣಾಂಶ ಸಹಿಷ್ಣುತೆಗೆ ಸಂಬಂಧಿಸಿದಂತೆ ಸಂಶೋಧನೆ ನಡೆಸಿರುವರು.
“ಪ್ರಸ್ತುತ ಕೃಷಿಯಲ್ಲಿ ಲವಣಾಂಶ ಮಣ್ಣು ಹೆಚ್ಚುತ್ತಿರುವುದರಿಂದ ಒಳ್ಳೆಯ ಗುಣಮಟ್ಟದ ಬೆಳೆ ಮತ್ತು ಇಳುವರಿ ಕಡಿಮೆಯಾಗುತ್ತಿದೆ. ಬಹುವಂಶವಾಹಿ ಕುಲಾಂತರಿ ರಾಗಿ ಸಸ್ಯಗಳು ಉತ್ತಮವಾದ ಲವಣಾಂಶ ಸಹಿಷ್ಣತಾ ಗುಣವನ್ನು ಹೊಂದಿರುವುದನ್ನು ಸಂಶೋಧನೆ ಮಾಡಿ, ಅದರ ಮೂಲಕ ರೈತರಿಗೆ ಉತ್ಪಾದನೆ ಹೆಚ್ಚಾಗಲು ಅನುಕೂಲವಾಗುವ ಮಾಹಿತಿಯನ್ನು ಸಂಗ್ರಹ ಮಾಡಿದ್ದೇನೆ” ಎಂದು ಭಕ್ತರಹಳ್ಳಿಯ ಬಿ.ಎನ್.ಪುಷ್ಪ ತಿಳಿಸಿದ್ದಾರೆ.
ದೇಶದ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿರುವ ಎಚ್.ಡಿ.ದೇವೇಗೌಡರ ತತ್ವಾದರ್ಶಗಳನ್ನು ನಂಬಿ ರಾಜಕೀಯ ಮಾಡಲು ಬಂದಿದ್ದೇವೆಯೇ ಹೊರತು ಯಾವುದೇ ಸ್ವಾರ್ಥ ರಾಜಕಾರಣ ಮಾಡಲು ಅಲ್ಲ ಎಂದು ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಹೇಳಿದರು.
ತಾಲ್ಲೂಕಿನ ಕಸಬಾ ಹೋಬಳಿ ಹಾಗೂ ಜಂಗಮಕೋಟೆ ಹೋಬಳಿ ವ್ಯಾಪ್ತಿಯಲ್ಲಿ ಭಾನುವಾರ ಏರ್ಪಡಿಸಲಾಗಿದ್ದ ಗ್ರಾಮ ಪಂಚಾಯಿತಿ ಚುನಾವಣೆಯ ಸಂಘಟನಾ ಪೂರ್ವಸಿದ್ದತೆ ಸಭೆಗಳಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕ್ಷೇತ್ರದಲ್ಲಿ ಕೆಲ ಕಿಡಿಗೇಡಿಗಳು ನಮ್ಮ ಬಗ್ಗೆ ಹರಡಿಸಿರುವ ಸುಳ್ಳು ಸುದ್ದಿಗಳಿಗೆ ಯಾರೂ ಕಿವಿ ಕೊಡಬಾರದು. ಜೆಡಿಎಸ್ ಸಾಮಾನ್ಯ ಕಾರ್ಯಕರ್ತನಾಗಿದ್ದ ನನಗೆ ಕಳೆದ 2018 ರ ವಿಧಾನಸಭೆ ಚುನಾವಣೆಯಲ್ಲಿ ಬಿ ಫಾರಂ ನೀಡಿದ್ದಂತಹ ಮಾಜಿ ಪ್ರಧಾನಿ ದೇವೇಗೌಡರು ಹಾಗೂ ಕ್ಷೇತ್ರದ ಜನತೆ ನನ್ನ ಮೇಲಿಟ್ಟಿರುವ ನಂಬಿಕೆಯನ್ನು ಯಾವುದೇ ಕಾರಣಕ್ಕೂ ಹುಸಿಗೊಳಿಸುವುದಿಲ್ಲ. ಇದೀಗ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆ ಸೇರಿದಂತೆ ಮುಂಬರುವ ಎಲ್ಲಾ ಚುನಾವಣೆಗಳಲ್ಲಿಯೂ ಜೆಡಿಎಸ್ ಪಕ್ಷವನ್ನು ಕ್ಷೇತ್ರದಲ್ಲಿ ಅಧಿಕಾರಕ್ಕೆ ತರುವುದೇ ನನ್ನ ಗುರಿ ಎಂದರು.
ಕ್ಷೇತ್ರದ ಅಭಿವೃದ್ದಿ ಸೇರಿದಂತೆ ಪಾರದರ್ಶಕ ಆಡಳಿತಕ್ಕಾಗಿ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜೆಡಿಎಸ್ ಬೆಂಬಲಿತ ಸದಸ್ಯರನ್ನು ಆಯ್ಕೆ ಮಾಡುವ ಜೊತೆಗೆ ಪಂಚಾಯಿತಿಗಳು ಜೆಡಿಎಸ್ ವಶ ಮಾಡಿಕೊಳ್ಳುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದರು.
ಜಿಲ್ಲಾ ಪಂಚಾಯಿತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಂಕ್ ಮುನಿಯಪ್ಪ ಮಾತನಾಡಿ, ಇದೀಗ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಲ್ಲಾ ಮುಖಂಡರು ಸೇರಿದಂತೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಆಯಾ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಒಮ್ಮತದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಜೊತೆಗೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಯ ಆಯ್ಕೆಗೆ ಶ್ರಮಿಸಬೇಕು ಎಂದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಮಾಜಿ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ, ಎಪಿಎಂಸಿ ಮಾಜಿ ಅಧ್ಯಕ್ಷ ಎಂ.ರಾಮಯ್ಯ, ಪಿಎಲ್ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಸಿ.ಎಂ.ಗೋಪಾಲ್, ಮುಖಂಡರಾದ ಗುಡಿಹಳ್ಳಿ ಮುನಿವೆಂಕಟಸ್ವಾಮಿ, ತಾದೂರು ರಘು, ಮೇಲೂರು ಮಂಜುನಾಥ್, ಶ್ರೀನಿವಾಸಗೌಡ, ಎಚ್.ಜಿ.ಶಶಿಕುಮಾರ್ ಹಾಜರಿದ್ದರು.
CB Lots: 259
Qty: 11859 Kgs
Max: 385
Min: 245
Avg: 320
BV Lots: 09
Qty: 433 Kgs
Max: 420
Min: 333
Avg: 379
ಶಿಡ್ಲಘಟ್ಟ ತಾಲ್ಲೂಕಿನ ಜಂಗಮಕೋಟೆಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಬಡವರಿಗೆ ವಾತ್ಸಲ್ಯ ಕಿಟ್ ವಿತರಿಸಲಾಯಿತು. ಗ್ರಾಮ ಪಂಚಾಯಿತಿ ಸದಸ್ಯೆ ಸುನಂದಮ್ಮ, ನಿರ್ಮಲಮ್ಮ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿಗಳು ಹಾಜರಿದ್ದರು

ಶಿಡ್ಲಘಟ್ಟ ತಾಲ್ಲೂಕಿನ ರಾಜೀವ್ ಗಾಂಧಿ ಲೇಔಟ್ ನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಅಸಹಾಯಕ ವೃದ್ಧ ಮೆಹಬೂಬಿ ಅವರಿಗೆ ದಿನೋಪಯೋಗಿ ವಸ್ತುಗಳನ್ನು ಒಳಗೊಂಡ ವಾತ್ಸಲ್ಯ ಕಿಟ್ ವಿತರಿಸಲಾಯಿತು. ಜಿಲ್ಲಾ ನಿರ್ದೇಶಕ ಬಿ.ವಸಂತ್, ನಗರಸಭಾ ಸದಸ್ಯೆ ವಹೀದಾ, ತಾಲ್ಲೂಕು ಯೋಜನಾಧಿಕಾರಿ ಪ್ರಕಾಶ್ ಕುಮಾರ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಲಕ್ಷ್ಮಿ, ಸೇವಾಪ್ರತಿನಿಧಿ ಅರ್ಷಿಯಾ ಹಾಜರಿದ್ದರು
ಸರ್ಕಾರ ತಮ್ಮ ರಾಜಕೀಯ ಲಾಭಕ್ಕಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಸ್ಥಾಪಿಸಿದ್ದು ಕೂಡಲೇ ಇದನ್ನು ಕೈಬಿಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎ.ನಾಗರಾಜ್ ತಿಳಿಸಿದರು.
ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ವಿರೋಧಿಸಿ ರಾಜ್ಯಾದ್ಯಂತ ಬಂದ್ ಆಚರಿಸುತ್ತಿರುವ ಹಿನ್ನಲೆಯಲ್ಲಿ ತಾಲ್ಲೂಕು ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ತಾಲ್ಲೂಕು ಕಚೇರಿ ಮುಂಭಾಗ ಶನಿವಾರ ಪ್ರತಿಭಟನೆ ನಡೆಸಿ ಅವರು ಮಾತನಾಡಿದರು.
ರಾಜ್ಯದ ಸುಮಾರು ಆರೂವರೆ ಕೋಟಿ ಕನ್ನಡಿಗರ ಭಾವನೆಗಳನ್ನು ಬದಿಗಿಟ್ಟು ಕೇವಲ ತಮ್ಮ ಸ್ವಾರ್ಥ ರಾಜಕೀಯ ಲಾಭಕ್ಕಾಗಿ ಸರ್ಕಾರ ಮರಾಠ ಅಭಿವೃದ್ದಿ ಪ್ರಾಧಿಕಾರ ರಚಿಸಿದೆ. ಸಾಲದ್ದಕ್ಕೆ ತಾವು ಮಾಡಿರುವ ಕೆಲಸವನ್ನು ಸಮರ್ಥಿಸಿಕೊಳ್ಳಲು ತಮ್ಮದೇ ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ರಿಂದ ಕನ್ನಡ ಪರ ಸಂಘಟನೆಗಳು ಹಾಗೂ ಹೋರಾಟಗಾರರನ್ನು ಅವಮಾನಿಸುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ ಎಂದರು.
ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯ ವಿಚಾರವನ್ನು ಕೂಡಲೇ ಸರ್ಕಾರ ಕೈ ಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಉಗ್ರ ಹೋರಾಟಗಳನ್ನು ರೂಪಿಸಲಾಗುವುದು ಎಂದು ಎಚ್ಚರಿಸಿ ತಹಶೀಲ್ದಾರ್ ಕೆ.ಅರುಂದತಿ ಅವರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಕರವೇ ಜಿಲ್ಲಾ ಉಪಾಧ್ಯಕ್ಷ ತಮೀಮ್ ಅನ್ಸಾರಿ, ತಾಲ್ಲೂಕು ಕಾರ್ಯದರ್ಶಿ ನಾಗರಾಜ್, ನಗರಾಧ್ಯಕ್ಷ ಅಕ್ರಂಪಾಷ, ಪದಾಧಿಕಾರಿಗಳಾದ ನ್ಯಾಮತ್ಉಲ್ಲಾ, ಅಖಿಲ್ಖಾನ್, ಇಶ್ರತ್ ಖಾನ್, ಶ್ರೀನಾಥ್ ಹಾಜರಿದ್ದರು.
ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಗೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಕೆ.ಅರುಂಧತಿ ತಿಳಿಸಿದರು.
ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ವಿವಿಧ ಪಕ್ಷಗಳ ಮುಖಂಡರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ತಾಲ್ಲೂಕಿನ 24 ಗ್ರಾಮ ಪಂಚಾಯಿತಿಗಳಲ್ಲಿ 177 ಕ್ಷೇತ್ರಗಳಿದ್ದು 374 ಗ್ರಾಮ ಪಂಚಾಯಿತಿ ಸದಸ್ಯರನ್ನು ಆಯ್ಕೆ ಮಾಡುವ ಚುನಾವಣೆಗೆ ಯಾವುದೇ ರೀತಿಯ ಗೊಂದಲವಿಲ್ಲದೆ ಕಾರ್ಯನಿರ್ವಹಿಸಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಪಂಚಾಯಿತಿಗಳ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ತರೆಬೇತಿ ನೀಡಲಾಗಿದೆ ಎಂದರು. ಚುನಾವಣೆಗೆ 177 ಮತಗಟ್ಟೆಗಳು ಹೆಚ್ಚುವರಿಯಾಗಿ 25 ಮತಗಟ್ಟೆಗಳ ಸಹಿತ 202 ಮತಗಟ್ಟೆ ಕೇಂದ್ರಗಳನ್ನು ತೆರೆಯಲಾಗಿದ್ದು ಈ ಚುನಾವಣೆಯಲ್ಲಿ 59 ಸಾವಿರ 335 ಪುರುಷರು, 58 ಸಾವಿರದ 425 ಮಹಿಳೆಯರು ಸಹಿತ 1 ಲಕ್ಷ 17 ಸಾವಿರ 766 ಮತದಾರರು ಮತ ಚಲಾಯಿಸಲಿದ್ದಾರೆ ಎಂದರು.
ಗ್ರಾಮ ಪಂಚಾಯಿತಿಯ ಚುನಾವಣೆಗೆ ಆಯಾ ಗ್ರಾಮ ಪಂಚಾತಿಯಿಯ ಚುನಾವಣಾಧಿಕಾರಿಗಳು ಡಿಸೆಂಬರ್ 7 ರಿಂದ 11ತನಕ ನಾಮ ಪತ್ರಗಳನ್ನು ಸ್ವೀಕರಿಸಲಿದ್ದು, ಡಿಸೆಂಬರ್ 12ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ಮತ್ತು 14 ರಂದು ಉಮ್ಮೇದುವಾರಿಕೆಯನ್ನು ವಾಪಸ್ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 22ರಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು ಡಿಸೆಂಬರ್ 30ರಂದು ಶಿಡ್ಲಘಟ್ಟ ನಗರದ ಸರ್ಕಾರಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದರು.
ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಚುನಾವಣೆಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಕಂಟ್ರೋಲ್ ರೂಂ ಸ್ಥಾಪಿಸಲಾಗಿದ್ದು ಸಾರ್ವಜನಿಕರು 08158-256763 ಸ್ಥಿರ ದೂರವಾಣಿಗೆ ಕರೆ ಮಾಡಿ ದೂರುಗಳನ್ನು ದಾಖಲಿಸಬಹುದಾಗಿದೆ ಜೊತೆಗೆ ತಾಲೂಕು ಮಟ್ಟದಲ್ಲಿ ಎಂಸಿಸಿ ತಂಡ ಸಹ ಸಕ್ರೀಯವಾಗಿ ಕಾರ್ಯನಿರ್ವಹಿಸಲಿದೆ ಎಂದು ವಿವರ ನೀಡಿದರು.
ಈ ಸಂದರ್ಭದಲ್ಲಿ ಚುನಾವಣೆ ಶಾಖೆಯ ಸಾದಿಕ್ಪಾಷ ಹಾಜರಿದ್ದರು.
CB Lots: 230
Qty: 10754 Kgs
Max: 380
Min: 238
Avg: 322
BV Lots: 01
Qty: 027 Kgs
Max: 358
Min: 358
Avg: 358
ತಾಲ್ಲೂಕಿನ ಎಸ್.ವೆಂಕಟಾಪುರ ಬಳಿಯಿರುವ ಶ್ರೀ ಮುನಿಯಪ್ಪನಕಟ್ಟೆ ದೇವಾಲಯದ ಆವರಣದಲ್ಲಿ ಶುಕ್ರವಾರ ತಾಲ್ಲೂಕು ಜೆಡಿಎಸ್ ವತಿಯಿಂದ ಗ್ರಾಮ ಪಂಚಾಯಿತಿ ಚುನಾವಣೆಯ ಹಿನ್ನಲೆಯಲ್ಲಿ ಆಯೋಜಿಸಲಾಗಿದ್ದ ಬಶೆಟ್ಟಹಳ್ಳಿ ಹಾಗೂ ಸಾದಲಿ ಹೋಬಳಿಯ ಜೆಡಿಎಸ್ ಮುಖಂಡರ ಹಾಗೂ ಕಾರ್ಯಕರ್ತರ ಚುನಾವಣಾ ಪೂರ್ವಸಿದ್ದತೆ ಸಭೆಯಲ್ಲಿ ಭಾಗವಹಿಸಿ ಜೆಡಿಎಸ್ ಮುಖಂಡ ಬಿ.ಎನ್.ರವಿಕುಮಾರ್ ಮಾತನಾಡಿದರು.
ತಾಲ್ಲೂಕಿನ ಸಾದಲಿ ಹಾಗೂ ಬಶೆಟ್ಟಹಳ್ಳಿ ಹೋಬಳಿಯಲ್ಲಿರುವ ನೈಸರ್ಗಿಕ ಸಂಪತ್ತು ಉಳಿಯಬೇಕಾದರೆ ಈ ಭಾಗದ ಎಲ್ಲಾ 9 ಗ್ರಾಮ ಪಂಚಾಯಿತಿಗಳಲ್ಲಿಯೂ ಜೆಡಿಎಸ್ ಅಧಿಕಾರ ಹಿಡಿಯಬೇಕು ಎಂದು ಅವರು ಹೇಳಿದರು.
ಬಶೆಟ್ಟಹಳ್ಳಿ ಹಾಗೂ ಸಾದಲಿ ಹೋಬಳಿಯಲ್ಲಿ ಬಹಳಷ್ಟು ನೈಸರ್ಗಿಕ ಸಂಪತ್ತು ಅಡಗಿದ್ದು ಇದನ್ನು ಉಳಿಸುವ ಕೆಲಸ ಆಗಬೇಕಿದೆ. ಯಾವುದೇ ಜನಪರ ಕಾರ್ಯಗಳನ್ನು ಮಾಡದೇ ಕೇವಲ ದೇಶದ ಜನರ ಮನಸ್ಸಿನಲ್ಲಿ ಧರ್ಮದ ಬಗ್ಗೆ ಪ್ರಚೋದನೆ ಮಾಡಿ ಅಧಿಕಾರ ಹಿಡಿದಿರುವ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ಅರಣ್ಯ ಭೂಮಿಯನ್ನು ಲಪಟಾಯಿಸಲು ಮುಂದಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಮ್ಮ ಅಧಿಕಾರಾವಧಿಯಲ್ಲಿ ಮಾಡಿರುವ ಜನಪರ ಕಾರ್ಯಕ್ರಮಗಳನ್ನು ಕ್ಷೇತ್ರದ ಪ್ರತಿಯೊಬ್ಬ ಮತದಾರನಿಗೂ ಮುಟ್ಟಿಸುವ ಮೂಲಕ ಕಾರ್ಯಕರ್ತರು ಹಾಗೂ ಮುಖಂಡರು ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸಲು ಸಿದ್ದರಾಗಬೇಕು ಎಂದರು.
ಜಿಲ್ಲಾ ಪಂಚಾಯಿತಿಯ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಬಂಕ್ ಮುನಿಯಪ್ಪ ಮಾತನಾಡಿ, ಇದೇ ತಿಂಗಳು 22 ರಂದು ಗ್ರಾಮ ಪಂಚಾಯಿತಿ ಚುನಾವಣೆ ನಡೆಯಲಿದ್ದು ಗ್ರಾಮದ ಎಲ್ಲಾ ಮುಖಂಡರು ಸೇರಿದಂತೆ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಆಯಾ ಪಂಚಾಯಿತಿ ವ್ಯಾಪ್ತಿಯ ಮುಖಂಡರು ಹಾಗೂ ಕಾರ್ಯಕರ್ತರು ಸೇರಿ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜೊತೆಗೆ ಯಾರೇ ಅಭ್ಯರ್ಥಿಯಾಗಲಿ ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಪಂಚಾಯಿತಿಗಳು ಜೆಡಿಎಸ್ ವಶವಾಗುತ್ತವೆ. ಈ ನಿಟ್ಟಿನಲ್ಲಿ ಚುನಾವಣೆ ಸಮಯದಲ್ಲಿ ಯಾವುದೇ ಮನಸ್ಥಾಪವಿಟ್ಟುಕೊಳ್ಳದೇ ಎಲ್ಲರೂ ಪ್ರಾಮಾಣಿಕವಾಗಿ ದುಡಿಯಲು ಮುಂದಾಗಬೇಕು ಎಂದರು.
ಕಳೆದೆರಡು ವರ್ಷಗಳಿಂದ ಪಕ್ಷದಿಂದ ದೂರವುಳಿದುಕೊಂಡಿದ್ದ ಜೆಡಿಎಸ್ ಮಾಜಿ ಅಧ್ಯಕ್ಷ ಡಾ.ಧನಂಜಯರೆಡ್ಡಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಗೊಂಡು ಮಾತನಾಡಿ, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ನಡೆದ ಕೆಟ್ಟ ಘಟನೆಗಳಿಂದ ಜೆಡಿಎಸ್ ಅಭ್ಯರ್ಥಿ ಸೋಲಬೇಕಾಯಿತು. ಜೆಡಿಎಸ್ ಅಭ್ಯರ್ಥಿ ಸೋಲಲು ನಾನು ಸಹ ಪರೋಕ್ಷವಾಗಿ ಕಾರಣವಿರಬಹುದು ಅದಕ್ಕಾಗಿ ಜೆಡಿಎಸ್ ಕಾರ್ಯಕರ್ತರಲ್ಲಿ ಕ್ಷಮೆ ಯಾಚಿಸುತ್ತೇನೆ. ಮುಂದಿನ ದಿನಗಳಲ್ಲಿ ಈ ಹಿಂದೆ ನಡೆದ ಕಹಿ ಘಟನೆಗಳನ್ನು ಎಲ್ಲರೂ ಮರೆತು ಒಗ್ಗಟ್ಟಾಗಿ ಜೆಡಿಎಸ್ ಪಕ್ಷಕ್ಕಾಗಿ ದುಡಿಯೋಣ. ಮುಂಬರುವ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ವಿಧಾನಸಭೆ ಚುನಾವಣೆಗೆ ಇದೀಗ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಚುನಾವಣೆ ಅಡಿಪಾಯವಾಗಿರುವುದರಿಂದ ಕ್ಷೇತ್ರದ ಬಹುತೇಕ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಜೆಡಿಎಸ್ ಅಧಿಕಾರ ಹಿಡಿಯಬೇಕು. ಬಿ.ಎನ್.ರವಿಕುಮಾರ್ರನ್ನು ಮುಂದಿನ ಚುನಾವಣೆಯಲ್ಲಿ ಶಾಸಕರನ್ನಾಗಿ ಆಯ್ಕೆ ಮಾಡುವವರೆಗೂ ಕ್ಷೇತ್ರದಾದ್ಯಂತ ಇರುವ ಹಳ್ಳಿ ಹಳ್ಳಿಗೂ ಭೇಟಿ ನೀಡಿ ಪಕ್ಷ ಸಂಘಟಿಸುವ ಮೂಲಕ ಅವರ ಕೈ ಬಲಪಡಿಸುವ ಕೆಲಸ ಮಾಡುತ್ತೇನೆ ಎಂದರು.
ಇದೇ ಸಂದರ್ಭದಲ್ಲಿ ಬಶೆಟ್ಟಹಳ್ಳಿ ಹಾಗೂ ಸಾದಲಿ ಹೋಬಳಿಯ ನೂರಾರು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಡಿ.ಬಿ.ವೆಂಕಟೆಶಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಂ.ಕೆ.ರಾಜಶೇಖರ್, ಮಾಜಿ ಅಧ್ಯಕ್ಷ ಬಿ.ವಿ.ನಾರಾಯಣಸ್ವಾಮಿ, ಎಪಿಎಂಸಿ ಮಾಜಿ ಅಧ್ಯಕ್ಷ ಹುಜಗೂರು ರಾಮಯ್ಯ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಶಿವಾರೆಡ್ಡಿ, ಮುಖಂಡರಾದ ತಾದೂರು ರಘು, ಪೂಲಕುಂಟ್ಲಹಳ್ಳಿ ರಘುನಾಥರೆಡ್ಡಿ, ಜೆ.ವಿ.ಸದಾಶಿವ, ಮುಗಿಲಡಿಪಿ ನಂಜಪ್ಪ, ಕೆ.ಎಸ್.ಮಂಜುನಾಥ್, ಎನ್.ವಿಜಯೇಂದ್ರ, ಡಿ.ಸಿ ರಾಮಚಂದ್ರ, ಚಿಕ್ಕನರಸಿಂಹಯ್ಯ, ಸೇರಿದಂತೆ ಎರಡೂ ಹೋಬಳಿಗಳ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.
CB Lots: 344
Qty: 16021 Kgs
Max: 380
Min: 185
Avg: 299
BV Lots: 01
Qty: 19 Kgs
Max: 340
Min: 340
Avg: 340
ಕನಕದಾಸರು ನಾಡು ಕಂಡ ಸಂತ ಶ್ರೇಷ್ಠರಲ್ಲೊಬ್ಬರಾಗಿದ್ದು ಅವರ ಆದರ್ಶಗಳು ಎಲ್ಲರಿಗೂ ಅನುಕರಣೀಯ ಎಂದು ತಹಶೀಲ್ದಾರ್ ಕೆ.ಅರುಂಧತಿ ಹೇಳಿದರು.
ಕನಕಜಯಂತಿ ಅಂಗವಾಗಿ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಗುರುವಾರ ದಾಸಶ್ರೇಷ್ಠ ಶ್ರೀ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.
ಕುಲ ಕುಲವೆಂದು ಹೊಡೆದಾಡಬೇಡಿ, ಕುಲಗಳು ಹುಟ್ಟಿದ್ದು ಎಲ್ಲಿ ಎಂಬುದನ್ನು ಅರ್ಥಮಾಡಿಕೊಂಡಿದ್ದಾದರೆ ಜಾತಿ ಸಂಘರ್ಷಗಳಿಗೆ ಅವಕಾಶವಿರುವುದಿಲ್ಲವೆಂದು ಸಾರಿದ ಕನಕದಾಸರು ಸುಮಾರು ಐದು ಶತಮಾನಗಳಿಂದ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ನೆಲೆಸಿದ್ದಾರೆ. ಕನಕದಾಸರು ಕೇವಲ ದಾಸಶ್ರೇಷ್ಠರು ಮಾತ್ರವಲ್ಲದೇ ಅತ್ಯುತ್ತಮ ಸಾಹಿತಿ, ಕವಿ, ಗಾಯಕರಾಗಿದ್ದು ಜಾತಿ ನಿರ್ಮೂಲನೆ ಮಾಡುವಲ್ಲಿ ಶ್ರಮಿಸಿದಂತಹ ಮಹಾಪುರುಷರು, ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕು ಎಂದರು.
ಸಮುದಾಯದವರಿಂದ ನಗರದ ಕೆಂಪಣ್ಣ ವೃತ್ತದಲ್ಲಿರುವ ಕನಕ ಭಜನೆ ಮಂದಿರದಲ್ಲಿ ವಿಶೇಷ ಪೂಜೆ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಶಿರಸ್ತೇದಾರ್ ಕೆ.ಎನ್.ಮಂಜುನಾಥ್, ರಾಜಸ್ವ ನಿರೀಕ್ಷಕ ಪ್ರಶಾಂತ್, ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ಕೆ.ಎನ್.ಸುಬ್ಬರೆಡ್ಡಿ, ಸಮುದಾಯದ ಮುಖಂಡರಾದ ಎ.ನಾಗರಾಜ್, ಎಂ.ಗಣೇಶಪ್ಪ, ಎ.ರಾಮಚಂದ್ರಪ್ಪ, ಎಂ.ರಾಮಾಂಜಿನಪ್ಪ, ಮಂಜುಳಮ್ಮ ಹಾಜರಿದ್ದರು.
ತಾಲ್ಲೂಕಿನಲ್ಲಿ ಗುರುವಾರ 1 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
CB Lots: 292
Qty: 14725 kgs
Max: 380
Min: 198
Avg: 295
BV Lots: 06
Qty: 299 kgs
Max: 393
Min: 270
Avg: 335
ಕೊರೊನಾ ಸೋಂಕು ಖಾಸಗಿ ಶಾಲಾ ಶಿಕ್ಷಕರು ಹಾಗೂ ಸಿಬ್ಬಂದಿಯ ಜೀವ ಮತ್ತು ಜೀವನವನ್ನು ಕಸಿದಿದೆ. ಖಾಸಗಿ ಶಾಲಾ ಶಿಕ್ಷಕರು ಜೀವಂತ ಶವಗಳಾಗಿದ್ದೇವೆ. ನಮ್ಮೆಡೆಗೆ ಸರ್ಕಾರ ಕಣ್ತೆರೆದು ನೋಡಲಿ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ತಾಲ್ಲೂಕು ಒಕ್ಕೂಟದ ಸದಸ್ಯರು ನಗರದ ಕೋಟೆ ವೃತ್ತದಲ್ಲಿ ಬುಧವಾರ ಪ್ರತಿಭಟಿಸಿ ಚಿಕ್ಕಬಳ್ಳಾಪುರದಲ್ಲಿ ಪ್ರತಿಭಟನೆ ನಡೆಸಲು ತೆರಳಿದರು.
ಕ್ರೆಸೆಂಟ್ ಶಾಲೆಯ ತಮೀಮ್ ಅನ್ಸಾರಿ ಮತ್ತು ಎಸ್.ಆರ್.ಇ.ಟಿ ವಿದ್ಯಾಸಂಸ್ಥೆಯ ಶ್ರೀರಾಮರೆಡ್ಡಿ ಮಾತನಾಡಿ, ಸರ್ಕಾರ ಖಾಸಗಿ ಶಾಲಾ ಶಿಕ್ಷಕರ ಬಗ್ಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಶಿಕ್ಷಕರು ಅತಂತ್ರರಾಗಿದ್ದಾರೆ. ಸರ್ಕಾರ ನಮ್ಮ ಪರವಾಗಿ ನಿಲ್ಲಬೇಕು. ಪೋಷಕರು ಶಾಲಾ ಶುಲ್ಕವನ್ನು ಪಾವತಿಸುವುದನ್ನು ಖಡ್ಡಾಯಗೊಳಿಸಿ, ಇಲ್ಲವೇ ಪರಿಹಾರ ಧನ ನೀಡಬೇಕೆಂದು ಘೋಷಿಸಿ. ದ್ವಂದ್ವ ಹೇಳಿಕೆಗಳನ್ನು ಕೊಡದೇ ಮಲತಾಯಿ ಧೋರಣೆ ಮಾಡದೇ ನಮಗೆ ಸರಿಯಾದ ಪರಿಹಾರೋಪಾಯವನ್ನು ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಡಾಲ್ಪಿನ್ ವಿದ್ಯಾಸಂಸ್ಥೆಯ ಎ.ನಾಗರಾಜು, ಮಹದೇವ್, ಗೋಪಿನಾಥ್, ವಿಸ್ಡಮ್ ನಾಗರಾಜು, ಮಂಜುನಾಥ್, ಮಹೇಶ್, ಶಾಂತರಾಜು, ತಾಲ್ಲೂಕಿನ ಖಾಸಗಿ ಶಾಲೆಯ 673 ಶಿಕ್ಷಕರು ಭಾಗಿಯಾಗಿದ್ದರು.
ತಾಲ್ಲೂಕಿನಲ್ಲಿ ಬುಧವಾರ 1 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
CB Lots: 380
Qty: 19413 Kgs
Max: 366
Min: 150
Avg: 270
BV Lots: 13
Qty: 750 Kgs
Max: 388
Min: 222
Avg: 333
ಎಚ್.ಎನ್.ವ್ಯಾಲಿಯ ಸಂಸ್ಕರಿತ ನೀರು ಕೊನೆಗೂ ಶಿಡ್ಲಘಟ್ಟ ತಾಲ್ಲೂಕಿನ ಕೆರೆಗೆ ಹರಿದಿದ್ದು ರೈತ ಸಂಘದ ಮುಖಂಡರು ಹಾಗೂ ಸದಸ್ಯರು ಕೆರೆಗೆ ಪೂಜೆ ಸಲ್ಲಿಸಿ, ಪರಸ್ಪರ ಸಿಹಿ ಹಂಚಿಕೊಂಡು ಸಂಭ್ರಮಿಸಿದರು.
ದಕ್ಷಿಣ ಪೆನ್ನಾರ್ ನದಿ ಕಣಿವೆಯಲ್ಲಿರುವ ಶಿಡ್ಲಘಟ್ಟ ತಾಲ್ಲೂಕಿನ ಅಬ್ಬಲೂಡು ಕೆರೆಗೆ ಮಂಗಳವಾರ ಎಚ್.ಎನ್ ವ್ಯಾಲಿ ನೀರು ಹರಿದು ಬಂದಿದ್ದರಿಂದ ಈ ಭಾಗದ ರೈತರ ಸಂತಸ ಹೆಚ್ಚಿತ್ತು.
ಎಚ್.ಎನ್.ವ್ಯಾಲಿಯ ನೀರು ದಿಬ್ಬೂರು ಕೆರೆ, ಅಂಗರೇಕಹಳ್ಳಿಯನ್ನು ಹಾದು ಸುಮಾರು 51 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವನ್ನು ಹೊಂದಿರುವ ಅಬ್ಬಲೂಡು ಕೆರೆಯನ್ನು ಪ್ರವೇಶಿಸಿದೆ. 2.01 ಹೆಕ್ಟೇರ್ ನೀರು ಶೇಖರಣಾ ಸಾಮರ್ಥ್ಯವನ್ನು ಹೊಂದಿರುವ ಈ ಕೆರೆಯಿಂದ ಮುಂದೆ ಶಿಡ್ಲಘಟ್ಟದ ಹೊರವಲಯದ ಅಮ್ಮನಕೆರೆಗೆ ನೀರು ಬರಲಿದೆ. ಇದೇ ಅಮ್ಮನಕೆರೆಗೆ ಕೇಶವಾರದ ಕೆರೆಯ ಮೂಲಕವೂ ಎಚ್.ಎನ್.ವ್ಯಾಲಿಯ ನೀರು ಹರಿದು ಬರಲಿದೆ. ಮುಂದೆ ಬೆಳ್ಳೂಟಿ ಕೆರೆಯ ಮೂಲಕ ಭದ್ರನ ಕೆರೆಗೆ ನೀರು ಹರಿಯುತ್ತದೆ.
“ಕಳೆದ 25 ವರ್ಷಗಳಿಂದ ನಮ್ಮ ಬಯಲು ಸೀಮೆಗೆ ಕೃಷಿ ಆಧಾರಿತ ನೀರು ತರಲು ಸತತ ಹೋರಾಟ ನಡೆಸಲಾಗಿತ್ತು. ಇಂದು ಚಿಕ್ಕಬಳ್ಳಾಪುರ ತಾಲ್ಲೂಕಿನಿಂದ ಶಿಡ್ಲಘಟ್ಟ ತಾಲ್ಲೂಕಿನ ಕೆರೆಗೆ ನೀರು ಹರಿದು ಬಂದಿರುವುದರಿಂದ ರೈತ ಕುಲ ಸಂಭ್ರಮಿಸುವಂತಾಗಿದೆ. ನೀರಿಗಾಗಿ ಅನೇಕ ಮಂದಿ ಜಾತ್ಯಾತೀತವಾಗಿ, ಪಕ್ಷಾತೀತವಾಗಿ ಹೋರಾಟ ಮಾಡಿದ್ದರು. ಜೆ.ವೆಂಕಟಪ್ಪ, ಮುಳಬಾಗಿಲು ವೆಂಕಟರಾಮಯ್ಯ, ಜಿ.ವಿ.ಶ್ರೀರಾಮರೆಡ್ಡಿ, ಸಾದಲಿ ಜೈಪ್ರಕಾಶ್, ಎಸ್.ಎಂ.ನಾರಾಯಣಸ್ವಾಮಿ, ಮಾಜಿ ಶಾಸಕರಾದ ಸುಧಾಕರ್, ಕೃಷ್ಣಾರೆಡ್ಡಿ, ರಾಜಣ್ಣ, ಶಾಸಕ ವಿ.ಮುನಿಯಪ್ಪ ಮೊದಲಾದವರ ಪರಿಶ್ರಮವನ್ನು ಮರೆಯುವಂತಿಲ್ಲ. ಎತ್ತಿನಹೊಳೆ ಯೋಜನೆ, ಮೇಕೇದಾಟು ಯೋಜನೆ, ಕೃಷ್ಣಾ ಮತ್ತು ತುಂಗಭದ್ರಾ ನೀರಿಗೂ ರೈತಸಂಘದಿಂದ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದೇವೆ” ಎಂದು ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ತಿಳಿಸಿದರು.
ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಗುಡಿಹಳ್ಳಿ ನಾರಾಯಣಸ್ವಾಮಿ, ಕೆಂಪಣ್ಣ, ಮೂರ್ತಿ, ವೇಣು, ರಾಮಕೃಷ್ಣಪ್ಪ, ರಾಮಚಂದ್ರಪ್ಪ, ಮುನಿನಂಜಪ್ಪ ಹಾಜರಿದ್ದರು.
ತಾಲ್ಲೂಕಿನಲ್ಲಿ ಮಂಗಳವಾರ 1 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ