ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ
Date: 1/12/2020
CB Lots: 466
Qty: 22495 Kgs
Max: 370
Min: 100
Avg: 240
BV Lots: 23
Qty: 1258 Kgs
Max: 400
Min: 250
Avg: 314
CB Lots: 466
Qty: 22495 Kgs
Max: 370
Min: 100
Avg: 240
BV Lots: 23
Qty: 1258 Kgs
Max: 400
Min: 250
Avg: 314
ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ
| ಉತ್ಪನ್ನಗಳು | ಆವಕ | ಕನಿಷ್ಠ | ಗರಿಷ್ಠ |
|---|---|---|---|
| ಹುರುಳಿಕಾಯಿ (ವೋಲ್) | 10 | 1000 | 1200 |
| ಬೀಟ್ರೂಟ್ | 2 | 2500 | 3500 |
| ಹಾಗಲಕಾಯಿ | 6 | 1000 | 1500 |
| ಬದನೆಕಾಯಿ | 9 | 1000 | 1500 |
| ಗೋರಿಕಾಯಿ | 2 | 3000 | 3500 |
| ಎಲೆಕೋಸು | 40 | 400 | 450 |
| ದಪ್ಪ ಮೆಣಸಿನಕಾಯಿ | 8 | 1000 | 1500 |
| ಕ್ಯಾರೆಟ್ | 8 | 1500 | 2000 |
| ಗೋಡಂಬಿ – ಲೋಕಲ್ (ರಾ) | 10 | 6800 | 10500 |
| ಹೂಕೋಸು (ಸ್ಥಳೀಯ) | 20 | 200 | 250 |
| ಬಜ್ಜಿ ಮೆಣಸಿನಕಾಯಿ (ದಪ್ಪ ಮೆಣಸಿನಕಾಯಿ) | 10 | 800 | 1000 |
| ಧನಿಯಾ (ಸ್ಥಳೀಯ) | 27 | 5000 | 7500 |
| ಸೌತೆಕಾಯಿ | 30 | 200 | 300 |
| ನುಗ್ಗೆಕಾಯಿ | 2 | 3500 | 4000 |
| ಬೆಳ್ಳುಳ್ಳಿ | 30 | 5000 | 7000 |
| ಹಸಿರು ಮೆಣಸಿನಕಾಯಿ | 10 | 2500 | 2800 |
| ಸೀಬೆಹಣ್ಣು | 2 | 1000 | 2000 |
| ನವಿಲುಕೋಸು | 5 | 800 | 1000 |
| ಬೆಂಡೇಕಾಯಿ | 3 | 2000 | 2500 |
| ಈರುಳ್ಳಿ | 80 | 3000 | 3500 |
| ಮುೂಲಂಗಿ | 6 | 600 | 800 |
| ಅಕ್ಕಿ (ಹಂಸ) | 45 | 2050 | 2300 |
| ಅಕ್ಕಿ (ಸೋನ) | 110 | 3500 | 5100 |
| ಹೀರೇಕಾಯಿ | 3 | 1500 | 2500 |
| ತೊಂಡೆಕಾಯಿ | 1 | 1500 | 2000 |
ತಾಲ್ಲೂಕಿನ ಅಪ್ಪೇಗೌಡನಹಳ್ಳಿಯ ನಿವಾಸಿಗರಾದ ಅಂಗವಿಕಲ ದಂಪತಿಯ ಮನೆಯ ಗೋಡೆಯು ಕುಸಿದಿದ್ದು, ಕನಿಷ್ಟ ಅದರ ದುರಸ್ತಿಗೂ ಹಣವಿಲ್ಲದೆ ಅವರು ಅತಂತ್ರರಾಗಿದ್ದಾರೆ.
ನಿವಾರ್ ಸೈಕ್ಲೋನ್ ಪರಿಣಾಮವಾಗಿ ಸುರಿದ ಮಳೆಯಿಂದ ಅಪ್ಪೇಗೌಡನಹಳ್ಳಿಯ ಅಂಗವಿಕಲ ದಂಪತಿ ದೇವೀರಮ್ಮ ಮತ್ತು ರತ್ನಪ್ಪ ಅವರ ಹಳೆಯ ಜಂತಿಕೆ ಮನೆಯ ಎರಡು ಕಡೆ ಗೋಡೆ ಕುಸಿದಿದೆ. ಮಾಳಿಗೆ ಈಗಲೋ ಆಗಲೋ ಕುಸಿಯುವಂತಿದೆ. ಅವರೀಗ ಜೀವ ಭಯದಿಂದ ವಾಸಿಸುತ್ತಿದ್ದಾರೆ.
ಅಶಕ್ತ ಸ್ಥಿತಿಯಲ್ಲಿರುವ ಅವರು ಸರ್ಕಾರ ಹಾಗೂ ಸಮುದಾಯದ ನೆರವನ್ನು ಯಾಚಿಸುತ್ತಿದ್ದಾರೆ.
CB Lots: 458
Qty: 21701 Kgs
Max: 380
Min: 100
Avg: 252
BV Lots: 17
Qty: 1205 Kgs
Max: 365
Min: 105
Avg: 318
ಪ್ರಮಾಣ: ಕ್ವಿಂಟಲ್, ವರ್ಗ: ಸರಾಸರಿ
| ಉತ್ಪನ್ನಗಳು | ಆವಕ | ಕನಿಷ್ಠ | ಗರಿಷ್ಠ |
|---|---|---|---|
| ಹುರುಳಿಕಾಯಿ (ವೋಲ್) | 10 | 800 | 1000 |
| ಬೀಟ್ರೂಟ್ | 2 | 2500 | 3000 |
| ಬದನೆಕಾಯಿ | 7 | 1000 | 1500 |
| ಗೋರಿಕಾಯಿ | 2 | 3000 | 3200 |
| ಎಲೆಕೋಸು | 40 | 400 | 450 |
| ದಪ್ಪ ಮೆಣಸಿನಕಾಯಿ | 3 | 1000 | 1200 |
| ಕ್ಯಾರೆಟ್ | 8 | 1500 | 2000 |
| ಬಜ್ಜಿ ಮೆಣಸಿನಕಾಯಿ | 5 | 500 | 1000 |
| ಸೌತೆಕಾಯಿ | 30 | 200 | 300 |
| ನುಗ್ಗೆಕಾಯಿ | 3 | 3500 | 4000 |
| ಬೆಳ್ಳುಳ್ಳಿ | 50 | 5000 | 7000 |
| ಹಸಿರು ಮೆಣಸಿನಕಾಯಿ | 4 | 2500 | 2800 |
| ಹಸಿ ಶುಂಠಿ | 20 | 2000 | 2500 |
| ನವಿಲುಕೋಸು | 3 | 500 | 800 |
| ಬೆಂಡೇಕಾಯಿ | 5 | 2000 | 2500 |
| ಈರುಳ್ಳಿ (ಸ್ಥಳೀಯ) | 100 | 3000 | 3500 |
| ಆಲೂಗಡ್ಡೆ (ಸ್ಥಳೀಯ) | 40 | 3000 | 3500 |
| ಮುೂಲಂಗಿ | 5 | 600 | 800 |
| ರಾಗಿ (ಸ್ಥಳೀಯ) | 155 | 1700 | 1900 |
| ಅಕ್ಕಿ (ಹಂಸ) | 70 | 2050 | 2300 |
| ಅಕ್ಕಿ (ಸೋನ) | 200 | 3500 | 5100 |
| ಹೀರೇಕಾಯಿ | 100 | 3000 | 3500 |
| ತೊಂಡೆಕಾಯಿ | 1 | 1500 | 2000 |
| ಟೊಮ್ಯಾಟೊ | 1875 | 500 | 2400 |
ತಾಲ್ಲೂಕಿನ ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿಯ ಯರ್ರಹಳ್ಳಿ ಗ್ರಾಮದ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಆವರಣದಲ್ಲಿ ಭಾನುವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವಾರು ಮುಖಂಡರು ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡ ಕಾರ್ಯಕ್ರಮದಲ್ಲಿ ಜೆಡಿಎಸ್ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ಮಾತನಾಡಿದರು.
ರಾಜಕೀಯದಲ್ಲಿ ಹಣ ಮಾಡುವ ಉದ್ದೇಶ ನನ್ನದಲ್ಲ. ಜೆಡಿಎಸ್ ಕಾರ್ಯಕರ್ತರೇ ನನ್ನ ಸಂಪಾದನೆ, ಬೆನ್ನೆಲುಬು. ಜನರಿಗೆ ಒಳ್ಳೆಯದು ಮಾಡಬೇಕು, ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳ ಮೂಲಕ ಇತಿಹಾಸ ನಿರ್ಮಿಸುವುದು ನನ್ನ ಗುರಿ ಎಂದು ಅವರು ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಗಳು ರಾಜಕೀಯದಲ್ಲಿ ಮತ್ತು ಗ್ರಾಮೀಣಾಭಿವೃದ್ಧಿಯಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತವೆ. ಜನಪರ ಕೆಲಸಗಳು ಮಾಡಲು ಸಾಧ್ಯವಾಗುವುದು ಗ್ರಾಮ ಪಂಚಾಯಿತಿ ಮೂಲಕವೇ. ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗೂಡಲೇಬೇಕಾದ ಸಂದರ್ಭವಿದು. ಒಮ್ಮತದಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಎಲ್ಲಾ 30 ಗ್ರಾಮ ಪಂಚಾಯಿತಿಗಳನ್ನು ಜೆಡಿಎಸ್ ಪರವಾಗಿರುವಂತೆ ನೋಡಿಕೊಳ್ಳಿ. ಆಗಷ್ಟೇ ಕ್ಷೇತ್ರದ ಜನರಿಗೆ ಅನುಕೂಲ ಮಾಡಬಹುದು ಮತ್ತು ಗ್ರಾಮಗಳ ಅಭಿವೃದ್ಧಿಗೆ ಸಹಕಾರಿ ಆಗುತ್ತದೆ ಎಂದರು.
ಜಿಲ್ಲಾ ಪಂಚಾಯಿತಿ ಸದಸ್ಯ ಬಂಕ್ ಮುನಿಯಪ್ಪ ಮಾತನಾಡಿ, ಕಾರಣಾಂತರಗಳಿಂದ ಮುಖಂಡ ಮೇಲೂರು ಬಿ.ಎನ್.ರವಿಕುಮಾರ್ ವಿಧಾನಸಭೆ ಚುನಾವಣೆಯಲ್ಲಿ ಸೋತರೂ, ತಮ್ಮ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಅಧಿಕಾರಕ್ಕೆ ತರಲು ಮತ್ತು ಪಕ್ಷವನ್ನು ಬಲಪಡಿಸಲು ಶ್ರಮಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಅನೇಕ ತೊಂದರೆ, ಅಸಹಕಾರ, ಬ್ರಷ್ಟಾಚಾರಕ್ಕೆ ಬೇಸತ್ತು ತಿಮ್ಮನಾಯಕನಹಳ್ಳಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್ ಅವರೊಂದಿಗೆ ಹಲವಾರು ಮಂದಿ ಜೆಡಿಎಸ್ ಸೇರ್ಪಡೆಗೊಳ್ಳುತ್ತಿದ್ದಾರೆ. ಅಭಿವೃದ್ಧಿ ಮತ್ತು ಪಾರದರ್ಶಕ ಆಡಳಿತಕ್ಕಾಗಿ ಜೆಡಿಎಸ್ ಬೆಂಬಲಿಸಿ ಗ್ರಾಮ ಪಂಚಾಯಿತಿ ಚುನಾವಣೆಗೆ ಒಗ್ಗಟ್ಟಿನಿಂದ ಸಜ್ಜಾಗುವಂತೆ ಹೇಳಿದರು.
ಜೆಡಿಎಸ್ ಮುಖಂಡ ಗಂಜಿಗುಂಟೆ ಮೂರ್ತಿ ಮಾತನಾಡಿ, ನಮ್ಮ ಶಿಡ್ಲಘಟ್ಟ ಕ್ಷೇತ್ರದಲ್ಲಿ ಶಾಸಕರ ಬೆಂಬಲಿಗರಿಂದ ಸಾಕಷ್ಟು ಬ್ರಷ್ಟಾಚಾರ ನಡೆಯುತ್ತಿದೆ. ರಸ್ತೆ, ಕೊಳವೆ ಬಾವಿ, ನಿವೇಶನ ಹಂಚಿಕೆ ಎಲ್ಲೆಡೆ ಪರ್ಸೆಂಟೇಜ್ ವ್ಯವಹಾರವಿದೆ. ಲಂಚ ಕೊಡದೆ ಯಾವುದೇ ಕಚೇರಿಯಲ್ಲೂ ಕೆಲಸ ನಡೆಯದಂತಾಗಿದೆ. ಲಂಚ ಮುಕ್ತ ಆಡಳಿತ ವ್ಯವಸ್ಥೆ ನಿರ್ಮಾಣ ಆಗಬೇಕಾದರೆ ಜೆಡಿಎಸ್ ಕಾರ್ಯಕರ್ತರು ಒಗ್ಗೂಡಬೇಕು ಎಂದು ನುಡಿದರು.
ಯರ್ರಹಳ್ಳಿ ವೈ.ಕೆ.ಮಂಜುನಾಥ್, ವೆಂಕಟೇಶ್, ಶ್ರೀನಿವಾಸ್, ನಾರಾಯಣಸ್ವಾಮಿ, ನಾಗರಾಜ್, ಮುನಿಶಾಮಪ್ಪ, ವೆಂಕಟಪ್ಪ, ನಾಗರಾಜ್, ರಾಮಚಂದ್ರ, ರಘುನಾಥ್, ಅಶ್ವಥ್ ನಾರಾಯಣ, ವಿಜಯಕುಮಾರ್, ಅಶೋಕರೆಡ್ಡಿ, ಸುರೇಶ್, ಎಲ್.ಎನ್.ಹೊಸೂರು ಶಿವರಾಜ್, ಅಮರೇಶ್, ವೆಂಕಟೇಶ್, ಕಿಟ್ಟಣ್ಣ, ಸೀನಪ್ಪ, ದಂಡಂಘಟ್ಟ ವೆಂಕಟೇಶ್, ಲಕ್ಷ್ಮೀನಾರಾಯಣ, ಹರೀಶ್, ಕುದುಪಕುಂಟೆ ವೆಂಕಟರೆಡ್ಡಿ, ಶಿವಣ್ಣ, ಸಾಬ್ ಜಾನ್ ಮತ್ತಿತರರು ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಶೇಖರ್, ಬಶೆಟ್ಟಹಳ್ಳಿ ವೆಂಕಟೇಶ್, ಚೀಮನಹಳ್ಳಿ ಗೋಪಾಲ್, ತಾದೂರು ರಘು, ಪೂಲಕುಂಟಹಳ್ಳಿ ರಘುನಾಥರೆಡ್ಡಿ, ಲಕ್ಷ್ಮೀನಾರಾಯಣರೆಡ್ಡಿ, ನಾರಾಯಣಸ್ವಾಮಿ, ಶಿವಕುಮಾರ್ ಭಾವರೆಡ್ಡಿ, ಶ್ರೀರಾಮರೆಡ್ಡಿ, ವಿಜಯಭಾವರೆಡ್ಡಿ ಹಾಜರಿದ್ದರು.
ತಾಲ್ಲೂಕಿನಲ್ಲಿ ಭಾನುವಾರ 4 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
CB Lots: 459
Qty: 22423 kgs
Max: 385
Min: 105
Avg: 271
BV Lots: 25
Qty: 1031 kgs
Max: 333
Min: 236
Avg: 301
ತಾಲ್ಲೂಕಿನ ಅಪ್ಪೇಗೌಡನಹಳ್ಳಿ ಹಾಗೂ ಕಂಬದಹಳ್ಳಿ ಗ್ರಾಮಗಳಲ್ಲಿ ಬಡವರಿಗೆ ಶ್ರೀಕ್ಷೇತ್ರ ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಕಿಟ್ ವಿತರಿಸಿ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎ.ಎಂ.ತ್ಯಾಗರಾಜ್ ಮಾತನಾಡಿದರು.
ಬಡಕುಟುಂಬಗಳನ್ನು ಬಡತನದಿಂದ ಮುಕ್ತಗೊಳಿಸುವುದೇ ಮಾನವೀಯ ಧರ್ಮ. ಕಠಿಣ ಆರೋಗ್ಯ ಸಮಸ್ಯೆಗೆ ಒಳಪಟ್ಟವರ, ಒಂಟಿಯಾಗಿರುವವರ, ವಯೋವೃದ್ಧರ, ಅಂಗವಿಕಲರ ಸಹಾಯಕ್ಕೆ ನಿಲ್ಲುವ ಕಾರ್ಯಕ್ರಮವೇ ವಾತ್ಸಲ್ಯ ಯೋಜನೆ ಎಂದು ಅವರು ತಿಳಿಸಿದರು.
ಹಿರಿಯರು ಮಾತಿನಲ್ಲಿ ಶಾಪ ಕೊಡಬೇಕಾಗಿಲ್ಲ. ಮನದಲ್ಲಿ ನೊಂದು ಕಣ್ಣೀರು ಹಾಕಿದರೂ, ಅವರ ಕಣ್ಣೀರೇ ಶಾಪವಾಗಿ ಪರಿಣಮಿಸುತ್ತದೆ. ಆಧುನಿಕ ಸಮಾಜದಲ್ಲಿ ನಿರ್ಗತಿಕರನ್ನು, ರೋಗಿಗಳನ್ನು, ವೃದ್ಧರನ್ನು ಕಡೆಗಣಿಸುವುದು ಸಾಮಾನ್ಯವಾಗಿದೆ. ಇಳಿ ವಯಸ್ಸಿನಲ್ಲಿ ಅವರಿಗೆ ಅಭಯ ನೀಡಿ ಪ್ರೀತಿ-ವಿಶ್ವಾಸದಿಂದ ಆರೈಕೆ ಮಾಡಿ ಶಾಂತಿ, ನೆಮ್ಮದಿಯ ಜೀವನ ನಡೆಸುವಂತೆ ಪ್ರೇರಣೆ ನೀಡುವುದೇ “ವಾತ್ಸಲ್ಯ” ಯೋಜನೆಯ ಉದ್ದೇಶವಾಗಿದೆ ಎಂದು ಅವರು ಹೇಳಿದರು.
ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ಮಾತನಾಡಿ, ಶಿಡ್ಲಘಟ್ಟ ತಾಲ್ಲೂಕಿನಲ್ಲಿ 151 ಮಂದಿಗೆ ಮಾಸಾಶನ ನೀಡಲಾಗುತ್ತಿದೆ. ಅವರಲ್ಲಿ ಕಡುಬಡವರಾದ 75 ಮಂದಿಗೆ ಅವರಿಗೆ ಅತ್ಯಗತ್ಯ ವಸ್ತುಗಳನ್ನು ನೀಡಲಾಗುತ್ತಿದೆ ಎಂದರು.
ಮೇಲ್ವಿಚಾರಕಿ ಜ್ಯೋತಿ, ಒಕ್ಕೂಟದ ಪದಾಧಿಕಾರಿ ಗೀತಾ ಹಾಜರಿದ್ದರು.
ತಾಲ್ಲೂಕಿನಲ್ಲಿ ಶನಿವಾರ 2 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
CB Lots: 305
Qty: 14463 Kgs
Max: 400
Min: 133
Avg: 298
BV Lots: 09
Qty: 539kgs
Max: 335
Min: 275
Avg: 316
ನಗರದ ತಾಲ್ಲೂಕು ಕಚೇರಿಯ ಮುಂಭಾಗ ಶುಕ್ರವಾರ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪದಾಧಿಕಾರಿಗಳೊಂದಿಗೆ ಕೆಲ ಕಾಲ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕಚೇರಿಗೆ ಮನವಿಪತ್ರ ಸಲ್ಲಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಬೈರೇಗೌಡ ಮಾತನಾಡಿದರು.
ದೇಶದಲ್ಲಿ ಬಹುಸಂಖ್ಯಾತರಾಗಿರುವ ರೈತರ ಹೋರಾಟಗಳನ್ನು ಹತ್ತಿಕ್ಕುವ ಜೊತೆಗೆ ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಕೇಂದ್ರ ಸರ್ಕಾರ ಪೊಲೀಸರ ಮೂಲಕ ಹರಿಯಾಣ ಹಾಗೂ ಪಂಜಾಬ್ ರೈತರ ಮೇಲೆ ನಡೆಸಿರುವ ದೌರ್ಜನ್ಯ ಖಂಡನೀಯ ಎಂದು ಅವರು ಹೇಳಿದರು.
ಹರಿಯಾಣ ಮತ್ತು ಪಂಜಾಬ್ ರಾಜ್ಯಗಳ ರೈತರು ತಮ್ಮ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಶಾಂತ ರೀತಿಯಿಂದ ದೆಹಲಿ ಚಲೋ ರ್ಯಾಲಿ ನಡೆಸುತ್ತಿದ್ದ ವೇಳೆ ಪೊಲೀಸರ ಮೂಲಕ ರೈತರ ಮೇಲೆ ದೌರ್ಜನ್ಯ ನಡೆಸಿರುವುದು ದೇಶದ ಸಂವಿಧಾನಕ್ಕೆ ಮಾಡಿರುವ ಅಪಮಾನ. ರೈತ ವಿರೋಧಿ ನೀತಿ ಅನುಸರಿಸುವ ಯಾವುದೇ ಸರ್ಕಾರಗಳು ಹೆಚ್ಚಿನ ದಿನ ಅಧಿಕಾರದಲ್ಲಿರುವುದಿಲ್ಲ ಎಂದು ಎಚ್ಚರಿಸಿದರು.
ರೈತ ವಿರೋಧಿ ನೀತಿ ಅನುಸರಿಸುತ್ತಿರುವ ಸರ್ಕಾರಗಳು ಕೂಡಲೇ ಎಪಿಎಂಸಿ, ಭೂ ಸುದಾರಣೆ, ಭೂ ಸ್ವಾಧೀನ ಕಾಯ್ದೆಗಳನ್ನು ಕೈ ಬಿಡಬೇಕು, ವಿದ್ಯುತ್ ಶುಲ್ಕ ಹೆಚ್ಚು ಮಾಡಿರುವುದನ್ನು ವಾಪಸ್ ಪಡೆಯಬೇಕು, ನೀರಾವರಿ ಯೋಜನೆಗಳಿಗೆ ಹೆಚ್ಚಿನ ಆಧ್ಯತೆ ನೀಡುವ ಜೊತೆಗೆ ಹಾಲಿನ ಬೆಲೆಯನ್ನು 50 ಕ್ಕೆ ಏರಿಸಬೇಕು. ಜಾತಿಗಳ ಹೆಸರಲ್ಲಿರುವ ಎಲ್ಲಾ ಅಭಿವೃದ್ದಿ ಪ್ರಾಧಿಕಾರಗಳನ್ನು ರದ್ದು ಮಾಡಬೇಕು. ರೇಷ್ಮೆ ಗೂಡಿನ ಬೆಲೆಯನ್ನು 600 ರೂಗಳಿಗೆ ಏರಿಸುವ ಜೊತೆಗೆ ಈಗಾಗಲೇ ಫಾರಂ ನಂ 50 ಹಾಗು 53 ರ ವಿಲೇವಾರಿ ಮಾಡಲು ಸಮಿತಿ ರಚಿಸಿ ರೈತರಿಗೆ ಸಾಗುವಳಿ ಚೀಟಿ ವಿತರಿಸಬೇಕು ಎಂದು ಒತ್ತಾಯಿಸಿ ತಹಶೀಲ್ದಾರ್ ಅನುಪಸ್ಥಿತಿಯಲ್ಲಿ ಶಿರಸ್ತೇದಾರ್ ಮಂಜುನಾಥ್ರ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಉಪಾಧ್ಯಕ್ಷ ಮುನಿನಂಜಪ್ಪ, ವೇಣುಗೋಪಾಲ್ ಹಾಜರಿದ್ದರು.
ತಾಲ್ಲೂಕಿನಲ್ಲಿ ಶುಕ್ರವಾರ 2 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
CB Lots: 338
Qty: 16,493 Kgs
Max: 506
Min: 155
Avg: 311
BV Lots: 16
Qty: 1045 Kgs
Max: 362
Min: 100
Avg: 262
ತಾಲ್ಲೂಕಿನಲ್ಲಿ ಗುರುವಾರ 1 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
CB Lots: 307
Qty: 14797 Kgs
Max: 432
Min: 210
Avg: 323
BV Lots: 18
Qty: 1105 Kgs
Max: 358
Min: 222
Avg: 268
ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಪ್ರಥಮ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಈಗ ನೂರರ ಸಂಭ್ರಮ. ಸ್ವಾತಂತ್ರ್ಯ ಪೂರ್ವದಲ್ಲಿ ನಡೆದ ಕನ್ನಡ ಸಮ್ಮೇಳನ ಚಾರಿತ್ರಿಕ ಮಹತ್ವದ್ದು ಹಾಗೂ ನಮಗೆಲ್ಲರಿಗೂ ಪ್ರೇರಣಾದಾಯಕವಾದದ್ದು ಎಂದು ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್ ತಿಳಿಸಿದರು.
ತಾಲ್ಲೂಕಿನ ಶಿಲೇಮಾಕನಹಳ್ಳಿಯ ಕಸಾಪ ಕಚೇರಿಯಲ್ಲಿ ಬುಧವಾರ ನಡೆದ “ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ನೂರರ ಸಂಭ್ರಮ” ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
1920ರಲ್ಲಿ ಹೊಸಪೇಟೆಯಲ್ಲಿ ಸಮ್ಮೇಳನ ನಡೆದಿತ್ತು. ಸ್ವಾತಂತ್ರ್ಯ ಸಿಗುವ ಪೂರ್ವದಲ್ಲಿ ಬಳ್ಳಾರಿ ಜಿಲ್ಲೆ ಮದ್ರಾಸ್ ಪ್ರಾಂತ್ಯಕ್ಕೆ ಒಳಪಟ್ಟಿತ್ತು. ತಮಿಳು ಆಡಳಿತ ಭಾಷೆಯಾಗಿತ್ತು. ಶಾಲೆಗಳಲ್ಲಿ ತೆಲುಗು ಕಲಿಕೆಗೆ ಹೆಚ್ಚಿನ ಬೇಡಿಕೆಯಿತ್ತು. ಕನ್ನಡ ಮನೆಯ ಭಾಷೆಯಾಗಿ ಸೀಮಿತವಾಗಿತ್ತು. ಕನ್ನಡ ಭಾಷೆಯ ಅಸ್ತಿತ್ವ ಉಳಿಸಿಕೊಂಡು, ಅದನ್ನು ಬೆಳೆಸುವ ದೃಷ್ಟಿಯಿಂದ ಸಾಹಿತ್ಯ ಸಮ್ಮೇಳನ ಆ ಕಾಲಕ್ಕೆ ಹೆಚ್ಚಿನ ಮಹತ್ವ ಪಡೆದುಕೊಂಡಿತ್ತು. ಸಮ್ಮೇಳನದ ಮೂಲಕ ಅದರ ಅಸ್ತಿತ್ವ ಉಳಿಸಿಕೊಳ್ಳುವ ದೊಡ್ಡ ಪ್ರಯತ್ನ ನಡೆಯಿತು. ಅದರ ಫಲ ಈಗ ನಮ್ಮ ಮುಂದಿದೆ. ತಮಿಳು, ತೆಲುಗು ಭಾಷೆಗಳನ್ನು ಮೀರಿಸಿ ಈಗ ಕನ್ನಡ ಹೆಚ್ಚು ಚಾಲ್ತಿಯಲ್ಲಿದೆ. ಇದು ನಮಗೂ ಅನ್ವಯವಾಗುತ್ತದೆ. ಗಡಿಭಾಗಗಳಲ್ಲಿ ಕನ್ನಡ ಉಳಿಸುವಲ್ಲಿ ನಮ್ಮ ಹಿರಿಯರು ತೋರಿಸಿರುವ ದಾರಿಯನ್ನು ನಾವುಗಳು ಅನುಸರಿಸಬೇಕಿದೆ ಎಂದರು.
ಕಸಾಪ ಪದಾಧಿಕಾರಿಗಳಾದ ಎಂ.ಮಂಜುನಾಥ್, ಮೋಹನ್, ವೆಂಕಟೇಶ್, ಕೃಷ್ಣ, ಎಲ್.ಎನ್.ಮಂಜುನಾಥ್ ಹಾಜರಿದ್ದರು.
ತಾಲ್ಲೂಕಿನಲ್ಲಿ ಬುಧವಾರ 2 ಕೊರೊನ ಪಾಸಿಟಿವ್ ಪ್ರಕರಣ ದಾಖಲಾಗಿದೆ
CB Lots: 245
Qty: 12410 Kgs
Max: 520
Min: 236
Avg: 339
BV Lots: 15
Qty: 1100 Kgs
Max: 369
Min: 220
Avg: 289
ತಾಲ್ಲೂಕಿನ ಹೊಸಪೇಟೆ ಕಂದಾಯ ವೃತ್ತದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಪಿಂಚಣಿ ಹಾಗೂ ಪೌತಿ ಖಾತೆ ಆಂದೋಲನ ಕಾರ್ಯಕ್ರಮದಲ್ಲಿ ಪೌತಿ ಖಾತೆಗೆ 15 ಮತ್ತು ಪಿಂಚಣಿಗಾಗಿ 25 ಅರ್ಜಿಗಳನ್ನು ಸ್ವೀಕರಿಸಿ ತಹಶೀಲ್ದಾರ್ ಕೆ.ಅರುಂಧತಿ ಮಾತನಾಡಿದರು.
ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ತಾಲ್ಲೂಕಿನ ಆಡಳಿತದ ವತಿಯಿಂದ ಪಿಂಚಣಿ ಹಾಗೂ ಪೌತಿ ಖಾತೆ ಆಂದೋಲನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ ಎಂದು ಅವರು ತಿಳಿಸಿದರು.
ಪೌತಿ ಖಾತೆ ಆಂದೋಲನ ಅಂದರೆ, ಪಿತ್ರಾರ್ಜಿತ ಜಮೀನನ್ನು ಮಕ್ಕಳ ಹೆಸರಿಗೆ ಖಾತೆ ಮಾಡಿಸುವ ಪ್ರಕ್ರಿಯೆ. ಪಿತ್ರಾರ್ಜಿತ ಜಮೀನು ಮಕ್ಕಳ ಹೆಸರಿಗೆ ವಿಭಜನೆಗೊಳ್ಳದೆ, ಇನ್ನೂ ಮೃತ ತಾತ, ತಂದೆ, ಪತಿ ಹೆಸರಲ್ಲೇ ಇದೆ. ಇದರಿಂದ ಹಲವು ಯೋಜನೆಗಳ ಲಾಭ ರೈತರಿಗೆ ಸಿಗುತ್ತಿಲ್ಲ. ಮೃತ ತಾತ, ತಂದೆ ಹೆಸರಲ್ಲೇ ಜಮೀನು ನೋಂದಣಿಯಾಗಿರುವುದರಿಂದ ಅವರ ರೈತ ಮಕ್ಕಳಿಗೆ ಸರ್ಕಾರದ ಯೋಜನೆಗಳ ಸಂಪೂರ್ಣ ಲಾಭ ಲಭ್ಯವಾಗುತ್ತಿಲ್ಲ. ಇದಕ್ಕಾಗಿ ಸರ್ಕಾರ ಪೌತಿ ಖಾತೆ ಮಾಡಿಸಲು ಮುಂದಾಗಿದೆ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಪೌತಿ ಖಾತೆ ಆಂದೋಲನ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ಉಪತಹಶೀಲ್ದಾರ್ ಆನಂದಮೂರ್ತಿ, ರಾಜಸ್ವ ನಿರೀಕ್ಷಕ ಶಶಿಧರ್, ಮೋಹನ್ ಕುಮಾರ್, ಕಾರ್ತಿಕ್, ಗ್ರಾಮ ಪಂಚಾಯಿತಿ ಸದಸ್ಯ ಸುರೇಶ್ ಹಾಜರಿದ್ದರು.