Home Blog Page 370

Searching for the forgotten heroes of World War Two

0

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

All you need to know about penalty shootouts

0

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua. Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.  Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Searching for the ‘angel’ who held me on Westminster Bridge

0

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Why local US newspapers are sounding the alarm

0

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua. Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

 

The full story of Thailand’s extraordinary cave rescue

0

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua. Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

Lorem ipsum dolor sit amet,sed diam nonumy eirmod tempor invidunt ut labore et dolore magna aliquyam erat, At vero eos et accusam et justo duo dolores et ea rebum. Lorem ipsum dolor sit amet, no sea takimata sanctus est Lorem ipsum dolor sit amet. Stet clita kasd gubergren, no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. no sea takimata sanctus est Lorem ipsum dolor sit amet. sed diam voluptua.

ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭ

0

ವಿದ್ಯೆ ಸಂಪಾದನೆಗೆ ಹೆಚ್ಚಿನ ಆದ್ಯತೆ ನೀಡಿ. ಪ್ರತಿಭೆಯೆಂಬುದು ವಜ್ರದಂತೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಅದು ಸ್ವಯಂ ಗೋಚರ. ವಜ್ರವನ್ನು ಹೆಕ್ಕುವ ಕೆಲಸ ಬಹಳ ಮುಖ್ಯ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಡಾ.ಎಸ್‌.ಸುಬ್ರಮಣ್ಯ ತಿಳಿಸಿದರು.
ನಗರದ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್‌ ವತಿಯಿಂದ ದಿ.ವಿ.ಸೀತಾಲಕ್ಷ್ಮಿ ವೇದಿಕೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.
ಸಮಾಜದಲ್ಲಿನ ಪ್ರತಿಭಾವಂತರನ್ನು ಅದರಲ್ಲೂ ವಿದ್ಯಾರ್ಥಿ ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ. ಮಕ್ಕಳಿಗೆ ಪ್ರಶಸ್ತಿ ಲಭಿಸುವುದನ್ನು ಕಂಡಾಗ ಪೋಷಕರಿಗೆ ಆಗುವ ಸಂತಸಕ್ಕೆ ಪಾರವೇ ಇಲ್ಲ. ಪ್ರತಿಭಾವಂತರಿಗೆ ಸಮಾಜದಲ್ಲಿ ಅವಕಾಶ ಸಿಗಬೇಕು. ಬುದ್ಧಿಯ ಜೊತೆಯಲ್ಲಿ ಜ್ಞಾನವನ್ನು ಬೆಳೆಸಿಕೊಳ್ಳಿ. ಕಲಿಕೆಗೆ ಕೊನೆಮೊದಲಿಲ್ಲ. ಕಲಿಯಬೇಕೆಂಬ ಅದಮ್ಯ ಆಸೆಯನ್ನು ಸದಾ ಉಳಿಸಿಕೊಂಡಿರಬೇಕು ಎಂದರು.
ವಿಪ್ರ ಸಮಾಜ ವಿದ್ಯೆಯನ್ನು ನೆಚ್ಚಿಕೊಂಡವರು. ವಿದ್ಯಾಬುದ್ಧಿಯೊಂದಿಗೆ ವಿನಯಕ್ಕೆ ಪ್ರಾಶಸ್ತ್ಯ ನೀಡಿದ್ದಾರೆ. ಯಾರೂ ಕಸಿಯಲಾಗದ ಈ ವಿದ್ಯೆಯೆಂಬ ಆಸ್ತಿ ಮೈಗೂಡಿಸಿಕೊಂಡಿದ್ದರಿಂದ ಸಾಧಕರನ್ನು ಕಾಣಬಹುದಾಗಿದೆ ಎಂದು ಹೇಳಿದರು.
ಶಾಸಕ ವಿ.ಮುನಿಯಪ್ಪ ಮಾತನಾಡಿ, ಎಲ್ಲಾ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸಿ ಅವರಿಗೆ ಪ್ರೋತ್ಸಾಹದಾಯಕವಾಗಿ ನಗದು ಸಹ ನೀಡುವ ಮೂಲಕ ವಿಪ್ರ ಜನಾಂಗದವರು ಸಮಾಜದಲ್ಲಿ ಮಾದರಿಯಾಗಿದ್ದಾರೆ. ತಾಲ್ಲೂಕಿನ ಸಾಧಕರನ್ನು ಗುರುತಿಸಿ ಗೌರವಿಸುವ ಉತ್ತಮ ಸಂಪ್ರದಾಯವನ್ನು ಪಾಲಿಸಿಕೊಂಡು ಸಹ ಬರುತ್ತಿದ್ದಾರೆ. ಈ ಕಾರ್ಯ ಅಭಿನಂದನೀಯ ಎಂದು ಹೇಳಿದರು.
ಬೆಳಿಗ್ಗೆ ಲೋಕಕಲ್ಯಾಣಾರ್ಥವಾಗಿ ‘ಶ್ರೀ ಮಹಾಗಣಪತಿ ಸಹಸ್ರನಾಮ (ಗರಿಕೆ) ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ನಲವತ್ತಮೂರು ಮಂದಿ ಎಸ್‌ಎಸ್‌ಎಲ್‌ಸಿ, ಪಿಯುಸಿ ಮತ್ತು ಪದವಿಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಪುರಸ್ಕರಿಸಲಾಯಿತು. ಶಿಡ್ಲಘಟ್ಟ ತಾಲ್ಲೂಕಿನಲ್ಲಿ ಜನಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮೇಜರ್‌ ಎನ್‌.ಕೆ.ಅನಂತಪದ್ಮನಾಭರಾವ್‌, ಡಾ.ಬಿ.ಎನ್‌.ಮುರಳೀಧರ್‌, ಎನ್‌.ಕೆ.ಗುರುರಾಜರಾವ್‌, ವೇ.ಬ್ರ.ಶ್ರೀ ವೈ.ಎ.ಅರುಣ್‌ಕುಮಾರ್‌ ಶರ್ಮ ಮತ್ತು ಪಂಕಜ ನಿರಂಜನ್‌ ಅವರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್‌.ವಿ.ಮಂಜುನಾಥ್‌, ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್‌ ಗೌರವಾಧ್ಯಕ್ಷ ಡಾ.ಡಿ.ಟಿ.ಸತ್ಯನಾರಾಯಣರಾವ್‌, ಅಧ್ಯಕ್ಷ ಬಿ.ಆರ್‌.ಅನಂತಕೃಷ್ಣ, ಬ್ರಾಹ್ಮಣ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಸ್‌.ಅಟ್ಟೂರು ವೆಂಕಟೇಶ್‌, ಎಂ.ವಾಸುದೇವರಾವ್‌, ಎ.ಎಸ್‌.ರವಿ, ರಾಜ್ಯ ಕೌಶಲ ಅಭಿವೃದ್ಧಿ ಬೋರ್ಡ್‌ನ ಮಾಜಿ ಅಧ್ಯಕ್ಷೆ ಪುಷ್ಪಾ ಲಕ್ಷ್ಮೀನಾರಾಯಣಸ್ವಾಮಿ, ಕುಲಕರ್ಣಿ, ವಿ.ಕೃಷ್ಣ, ಎನ್‌.ಶ್ರೀಕಾಂತ್‌, ಎಸ್‌.ಸತೀಶ್‌, ಎಚ್‌.ವಿ.ನಾಗೇಂದ್ರ ಹಾಜರಿದ್ದರು.

ವಿಜ್ಞಾನಿ ಮಹೇಶ್ ಅವರಿಗೆ ಸನ್ಮಾನ ಮತ್ತು ಬೀಳ್ಕೊಡುಗೆ

0

ಕೇಂದ್ರ ರೇಷ್ಮೆ ಮಂಡಳಿಯ ಶಾಖಾ ಕಚೇರಿಗೆ 2003 ರಲ್ಲಿ ವಿಜ್ಞಾನಿ ಮಹೇಶ್ ಅವರು ಬಂದ ಮೇಲೆ ರೇಷ್ಮೆ ನೂಲಿನ ಗುಣಮಟ್ಟವನ್ನು ಪರೀಕ್ಷಿಸಿ ಖಾತ್ರಿ ಪಡಿಸುವ ಕೆಲಸ ವ್ಯವಸ್ಥಿತವಾಗಿ ಪ್ರಾರಂಭವಾಗಿ ನಮ್ಮ ನೂಲಿನ ಗುಣಮಟ್ಟ ತಿಳಿಯುವಂತಾಯಿತು ಎಂದು ರೇಷ್ಮೆ ಬಿಚ್ಚಾಣಿಕೆದಾರ ಅನ್ವರ್‌ ತಿಳಿಸಿದರು.
ನಗರದ ಸರ್ಕಾರಿ ರೇಷ್ಮೆ ಬಿತ್ತನೆ ಮೊಟ್ಟೆ ಕೋಠಿಯಲ್ಲಿನ ಕೇಂದ್ರ ರೇಷ್ಮೆ ಮಂಡಳಿ ಕಚೇರಿಯಲ್ಲಿ ಬುಧವಾರ ವಿಜ್ಞಾನಿ ಮಹೇಶ್ ಅವರಿಗೆ ಹಮ್ಮಿಕೊಂಡಿದ್ದ ಸನ್ಮಾನ ಮತ್ತು ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗುಣಮಟ್ಟದ ಆಧಾರದಲ್ಲಿ ನಮ್ಮ ರೇಷ್ಮೆ ನೂಲಿಗೆ ಉತ್ತಮ ಬೆಲೆ ಸಿಗುವಂತಾಯಿತು. ಇದೆಲ್ಲದರ ಹಿಂದೆ ವಿಜ್ಞಾನಿ ಮಹೇಶ್ ಅವರ ಪರಿಶ್ರಮ ಅಡಗಿದೆ ಎಂದು ಮಹೇಶ್ ಅವರ ಕಾರ್ಯವೈಖರಿಯನ್ನು ಅವರು ಶ್ಲಾಘಿಸಿದರು.
ಡಾ.ಮಹೇಶ್ ಅವರು ಬೆಂಗಳೂರಿನ ಮಡಿವಾಳದಲ್ಲಿರುವ ಕೇಂದ್ರ ರೇಷ್ಮೆ ಸಂಶೋಧನಾ ಮಂಡಳಿಗೆ ಪದೋನ್ನತಿಯೊಂದಿಗೆ ವರ್ಗಾವಣೆ ಆಗಿದ್ದಾರೆ. ಅವರು ಎಲ್ಲಿಗೆ ಹೋದರು ಅವರ ಸೇವೆ ರೇಷ್ಮೆ ಕ್ಷೇತ್ರಕ್ಕೆ ಸಿಗಲಿದೆ, ಹಾಗೆಯೆ ಇದೀಗ ಅವರ ಸ್ಥಾನಕ್ಕೆ ಆಗಮಿಸಿರುವ ತಿಮ್ಮಣ್ಣರೆಡ್ಡಿ ಅವರಿಂದಲೂ ಅಂತಹ ಸೇವೆ ಸಿಗಲಿದೆ ಎಂದು ಆಶಿಸುತ್ತೇವೆ ಎಂದರು.
ಪದೋನ್ನತಿಯೊಂದಿಗೆ ವರ್ಗಾವಣೆಗೊಂಡ ಕೇಂದ್ರ ರೇಷ್ಮೆ ಮಂಡಳಿಯ ವಿಜ್ಞಾನಿ ಡಾ.ಮಹೇಶ್ ಅವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ಅವರ ಸ್ಥಾನಕ್ಕೆ ಆಗಮಿಸಿದ ತಿಮ್ಮಣ್ಣರೆಡ್ಡಿ ಅವರನ್ನು ಬರ ಮಾಡಿಕೊಳ್ಳಲಾಯಿತು.
ರೇಷ್ಮೆ ಉಪನಿರ್ದೇಶಕ ಸುಭಾಷ್‌ ಸಾತೇನಹಳ್ಳಿ, ಸಹಾಯಕ ನಿರ್ದೆಶಕ ಎಸ್.ಭೋಜಣ್ಣ, ವಿಸ್ತರಣಾಧಿಕಾರಿ ರಾಮಕೃಷ್ಣಪ್ಪ, ಕೃಷಿ ಪಂಡಿತ ಪ್ರಶಸ್ತಿ ವಿಜೇತ ಹಿತ್ತಲಹಳ್ಳಿ ಎಚ್‌.ಜಿ.ಗೋಪಾಲಗೌಡ, ರಾಮ್‌ಕುಮಾರ್, ನರಸಿಂಹಮೂರ್ತಿ, ರಮೇಶ್‌ಬಾಬು, ಅನಿಲ್ ಕುಮಾರ್, ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಗುರುರಾಜ್, ರೇಷ್ಮೆ ರೈತರ ಕಂಪನಿಯ ಸಿಇಒ ಜನಾರ್ಧನಮೂರ್ತಿ, ಬಿ.ನಾರಾಯಣಸ್ವಾಮಿ, ವೈ.ರಾಮಕೃಷ್ಣಪ್ಪ, ಅನಂತಪದ್ಮನಾಭ ಹಾಜರಿದ್ದರು.

ದಲಿತ ಸಂಘರ್ಷ ಸಮಿತಿಯಿಂದ ಪೌರ ಕಾರ್ಮಿಕರ ಪರವಾಗಿ ಮನವಿ

0

ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ವೇತನ ಸೇರಿದಂತೆ ಹಾಗೂ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸುವಂತೆ ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳು ಗುರುವಾರ ನಗರಸಭೆ ಅಧ್ಯಕ್ಷ ಅಫ್ಸರ್‌ಪಾಷಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಸಿ.ಎಂ.ಮುನಯ್ಯ ಮಾತನಾಡಿ, ನಗರಸಭೆಯಲ್ಲಿ ಹಲವು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಕಳೆದ ಸುಮಾರು ಆರೇಳು ತಿಂಗಳಿನಿಂದ ವೇತನ ನೀಡದೇ ಇರುವುದರಿಂದ ಪೌರಕಾರ್ಮಿಕರ ಕುಟುಂಬ ಪೋಷಣೆ ಸೇರಿದಂತೆ ಅವರ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಈ ಬಗ್ಗೆ ಹಲವಾರು ಭಾರಿ ನಗರಸಭೆ ಕಾರ್ಯಾಲಯದ ಮುಂದೆ ಪೌರ ಕಾರ್ಮಿಕರು ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಹಾಗಾಗಿ ತಾಲ್ಲೂಕು ದಲಿತ ಸಂಗರ್ಷ ಸಮಿತಿ ಪೌರ ಕಾರ್ಮಿಕರ ಪರವಾಗಿ ಇಂದು ಮನವಿ ಪತ್ರ ಸಲ್ಲಿಸಿದ್ದು ಕೂಡಲೇ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆ ಕಾರ್ಯಾಲಯದ ಮುಂದೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಮನವಿ ಪತ್ರ ಸಲ್ಲಿಸಿದರು.
ಮನವಿ ಪತ್ರ ಸ್ವೀಕರಿಸಿದ ನಗರಸಭೆ ಅಧ್ಯಕ್ಷ ಅಫ್ಸರ್‌ಪಾಷ ಮಾತನಾಡಿ ಕಳೆದ ಆರೇಳು ತಿಂಗಳುಗಳಿಂದ ನಗರಸಭೆಯ ಪೌರ ಕಾರ್ಮಿಕರಿಗೆ ಸಂಬಳ ನೀಡದೇ ಇರುವ ಗಮನಕ್ಕೆ ಬಂದಿದೆ. ಮುಂದಿನ ಹತ್ತು ದಿನಗಳೊಳಗೆ ನಗರಸಭೆ ಸಾಮಾನ್ಯ ಸಭೆ ಕರೆಯಲಾಗಿದ್ದು ಪೌರ ಕಾರ್ಮಿಕರ ವೇತನ ಸೇರಿದಂತೆ ವಿವಿಧ ಬೇಡಿಕೆಗಳನ್ನು ಪೂರೈಸಲು ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಜಿ.ನಾರಾಯಣಸ್ವಾಮಿ, ತಾಲ್ಲೂಕು ಸಂಘಟನಾ ಸಂಚಾಲಕರಾದ ಟಿ.ಎ.ಚಲಪತಿ, ಡಿ.ಎಂ.ವೆಂಕಟೇಶ್, ಸದಸ್ಯರಾದ ದೊಡ್ಡತಿರುಮಳಯ್ಯ, ಮುನಿಕೃಷ್ಣಪ್ಪ ಹಾಜರಿದ್ದರು.

ವಿದ್ಯಾರ್ಥಿಗಳಿಗೆ ನೋಟ್‌ಪುಸ್ತಕಗಳ ವಿತರಣೆ

0

ತಾಲ್ಲೂಕಿನ ವರದನಾಯಕನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ವಿದ್ಯಾರ್ಥಿಗಳಿಗೆ ಬಿ.ಎಂ.ಎಸ್‌.ಐ.ಟಿ ಎಂಜಿನಿಯರಿಂಗ್‌ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಶ್ರೀವಾಣಿ ನೋಟ್‌ಪುಸ್ತಕಗಳನ್ನು ವಿತರಿಸಿ ಮಾತನಾಡಿದರು.
ಚಿಕ್ಕ ವಯಸ್ಸಿನಿಂದಲೇ ಮುಂದೆ ತಾವು ಏನಾಗಬೇಕು ಎಂಬ ಕನಸನ್ನು ಬೆಳೆಸಿಕೊಳ್ಳಬೇಕು. ಗುರಿಯನ್ನು ತಲುಪಬೇಕಾದ ಹಾದಿಯ ಬಗ್ಗೆ ಹಿರಿಯರಿಂದ ಮಾರ್ಗದರ್ಶನ ಪಡೆಯಬೇಕು ಎಂದು ಅವರು ತಿಳಿಸಿದರು.
ನಿಮಗೆ ಖುಷಿಕೊಡುವ ಕ್ಷೇತ್ರವನ್ನು ಆಯ್ಕೆ ಮಾಡಿಕೊಳ್ಳಿ. ಸಾಧಕೋ ವಿದ್ಯೆ ಬಾಧಕೋ ದ್ರವ್ಯ ಎಂಬ ಮಾತಿನಂತೆ ಸಾಧನೆ ಮಾಡಿದರಷ್ಟೆ ಪ್ರತಿಫಲ ದೊರಕುತ್ತದೆ. ಉನ್ನತ ಸಾಧನೆ ಮಾಡಿದ ಅಬ್ದುಲ್‌ ಕಲಾಂ, ಸುನೀತಾ ವಿಲಿಯಮ್ಸ್‌, ಕಲ್ಪನಾ ಚಾವ್ಲಾ ಮುಂತಾದವರು ಮಾದರಿಗಳಾಗಲಿ. ನೀವು ಸಾಧಕರಾಗಿ ಇತರರಿಗೆ ನೆರವಾಗಿ. ಪತ್ರಿಕೆಗಳನ್ನು, ಪುಸ್ತಕಗಳನ್ನು, ವಿಜ್ಞಾನದ ಲೇಖನಗಳನ್ನು ಓದಿ ಎಂದು ಹೇಳಿದರು.
ವಿದ್ಯಾರ್ಥಿಗಳು ವೈದ್ಯರಾಗಲು, ಎಂಜಿನಿಯರಾಗಲು ಏನು ಓದಬೇಕು. ಕೆಲಸ ಸಿಗಲು ಯಾವ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಬೇಕೆಂದು ಕೇಳಿ ತಿಳಿದುಕೊಂಡರು.
ನಿವೃತ್ತ ಶಿಕ್ಷಕ ಸುಂದರನ್‌, ಭಾಷೆಯ ಬಗ್ಗೆ, ಸರ್ಕಾರಿ ಶಾಲೆಯಲ್ಲಿ ಕಲಿತು ಸಾಧಕರಾದವರ ಉದಾಹರಣೆಗಳನ್ನು ಕೊಟ್ಟು ಮಕ್ಕಳನ್ನು ಹುರಿದುಂಬಿಸಿದರು. ನಿವೃತ್ತ ಶಿಕ್ಷಕಿ ರಮಾ ಮಕ್ಕಳಿಗೆ ಶಿಶುಗೀತೆಯನ್ನು ಹೇಳಿಕೊಟ್ಟರು.
ಮುಖ್ಯ ಶಿಕ್ಷಕ ವಿ.ಎನ್‌.ಗೋಪಾಲಕೃಷ್ಣ, ಶಿಕ್ಷಕರಾದ ನಾಗಭೂಷಣ್‌, ಎಂ.ಎ.ರಾಮಕೃಷ್ಣ, ಗಂಗಶಿವಪ್ಪ ಹಾಜರಿದ್ದರು.

ಮೇಲೂರು ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

0

ಚಿಕಿತ್ಸೆಗಾಗಿ ನಾಗರಿಕರು ನಗರಕ್ಕೆ ಬರಬೇಕಾದ ಪರಿಸ್ಥಿತಿ ತಪ್ಪಿಸಿ ತಜ್ಞ ವೈದ್ಯರೇ ಹಳ್ಳಿಗೆ ಬಂದು ಜನರಿಗೆ ಆರೋಗ್ಯ ಸೇವೆ ಮಾಡುವ ಉದ್ದೇಶದಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬೆಂಗಳೂರಿನ ಆಧ್ಯತೆ ಟ್ರಸ್ಟ್ ನ ವ್ಯವಸ್ಥಾಪಕ ಟ್ರಸ್ಟಿ ದೀಪಕ್ ತಿಳಿಸಿದರು.
ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಭಾನುವಾರ ಬೆಂಗಳೂರಿನ ಆಧ್ಯತೆ ಟ್ರಸ್ಟ್, ಆಸ್ಟರ್ ಸಿ.ಎಂ.ಐ ಆಸ್ಪತ್ರೆ, ಮೇಲೂರಿನ ಡಾ.ರಾಜ್‌ಕುಮಾರ್ ಅಬಿಮಾನಿಗಳ ಸಂಘ, ಮೇಲೂರು ಕನ್ನಡ ರೈತ ಯುವಕ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ಉಚಿತ ಆರೊಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದ ಜನರು ಮಧ್ಯಮ ವರ್ಗಕ್ಕೆ ಸೇರಿದ್ದು, ಬೆಂಗಳೂರಿನಂತಹ ದೊಡ್ಡ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಬೇಕಾದರೆ ಲಕ್ಷಾಂತರ ರೂ ವೆಚ್ಚವಾಗುತ್ತಿದ್ದು, ಅವರಿಗೆ ಟ್ರಸ್ಟ್‌ನ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಮ್ಮಿಕೊಂಡಿದ್ದು, ಆಸ್ಟರ್ ಸಿ.ಎಂ.ಐ ಆಸ್ಪತ್ರೆಯ ಕಣ್ಣಿನ ವೈದ್ಯರು, ಸ್ತ್ರೀ ತಜ್ಞ ವೈದ್ಯರು ಇನ್ನೂ ಹಲವಾರು ವೈದ್ಯರು ತಪಾಸಣಾ ಶಬಿರದಲ್ಲಿ ಇದ್ದು, ತಪಾಸಣೆ ಮಾಡಿ ಚಿಕಿತ್ಸೆ ನೀಡುವುದಾಗಿ ತಿಳಿಸಿದರು.
ಗ್ರಾಮದ ಮುಖಂಡರಾದ ಧರ್ಮೇಂದ್ರ, ಸುದರ್ಶನ್, ಆರ್‌.ಎ.ಉಮೇಶ್‌, ರಾಮಾಂಜಿನಪ್ಪ, ಲಕ್ಷಣ್, ಕೃಷ್ಣಮೂರ್ತಿ, ಆನಂದ್, ವೆಂಕಟೇಶ್, ಆಸ್ಟರ್ ಸಿ.ಎಂ.ಐ ಆಸ್ಪತ್ರೆಯ ವೈದ್ಯರಾದ ಡಾ.ಅರ್ಪಿತ್, ಡಾ.ವಿನುತ ಹಾಜರಿದ್ದರು.

ನೂತನ ಸಭಾಂಗಣ ಭವನ ಕಟ್ಟಡವನ್ನು ಉದ್ಘಾಟನೆ

0

ಗುಣಮಟ್ಟದ ಹಾಲು ಉತ್ಪಾದನೆ ಮಾಡಿದಾಗ ಮಾತ್ರ ಹಾಲು ಉತ್ಪಾದಕ ಸಹಕಾರ ಸಂಘಗಗಳು ಲಾಭಗಳಿಸಿ ಅಭಿವೃದ್ಧಿಯಾಗಲು ಸಾಧ್ಯ ಎಂದು ಸಂಸದ ಕೆ.ಎಚ್ ಮುನಿಯಪ್ಪ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆ ಹೋಬಳಿಯ ಹೀರೆಬಲ್ಲ ಗ್ರಾಮದಲ್ಲಿ ಭಾನುವಾರ ಹಾಲು ಉತ್ಪಾದಕರ ಸಹಕಾರ ಸಂಘದಿಂದ ನಿರ್ಮಿಸಿದ ನೂತನ ಸಭಾಂಗಣ ಭವನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆ.ಸಿ ವ್ಯಾಲಿ ಯೋಜನೆಯಲ್ಲಿ ಮುಂದಿನ ೫ ವರ್ಷಗಳಲ್ಲಿ ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ಹಂತ ಹಂತವಾಗಿ ಕೆರೆಗಳಿಗೆ ನೀರು ತುಂಬಿಸುವ ಕೆಲಸ ಆಗಲಿದೆ. ಅದಕ್ಕೂ ಮೊದಲು ಕೆರೆಕಟ್ಟೆಗಳನ್ನು, ರಾಜಕಾಲುವೆಗಳ ಅಬಿವೃದ್ಧಿಗೆ ಸುಮಾರು ೧,೩೦೦ ಕೋಟಿಯಷ್ಟು ಹಣದ ಅವಶ್ಯಕತೆಯಿದ್ದು, ಹಣಕ್ಕಾಗಿ ಸರ್ಕಾರದ ಮುಂದೆ ಬೇಡಿಕೆ ಇಟ್ಟಿರುವುದಾಗಿ ಹೇಳಿದರು.
ಶಾಸಕ ವಿ.ಮುನಿಯಪ್ಪ ಮಾತನಾಡಿ, ತಾಲ್ಲೂಕಿನಲ್ಲಿ ಹಾಲು ತುಂಬಾ ದೊಡ್ಡ ಪ್ರಮಾಣದಲ್ಲಿ ಉತ್ಪಾದನೆಯಾಗುತ್ತಿದ್ದು, ಹಾಲು ಮಾರಾಟ ಮಾಡಲು ಮಾರುಕಟ್ಟೆ ವಿಸ್ತರಣೆ ಮಾಡಬೇಕಾದ ಅವಶ್ಯಕತೆ ಇದೆ. ಗುಣಮಟ್ಟದ ಹಾಲನ್ನು ಉತ್ಪಾದನೆ ಮಾಡಿ ಎಂದು ತಿಳಿಸಿದರು.
ಮಳೆಗಾಲ ಪ್ರಾರಂಭವಾಗಿದೆ. ಸರ್ಕಾರ ರೈತರಿಗೆ ಬೇಕಾದ ಬಿತ್ತನೆ ಬೀಜಗಳ ವ್ಯವಸ್ಥೆ ಮಾಡಿದೆ. ಆಧುನಿಕ ತಂತ್ರಜ್ಞಾನ ಬಳಸಿ ಕಡಿಮೆ ನೀರಿನಲ್ಲಿ ಬೆಳೆಗಳನ್ನು ತೆಗೆದು ಲಾಭಗಳಿಸಿ, ತೋಟಗಾರಿಕೆ ಅಧಿಕಾರಿಗಳಿಂದ ರೈತರಿಗೆ ಮಾಹಿತಿ ಲಭ್ಯವಿದ್ದು, ತಂತ್ರಜ್ಞಾನವನ್ನು ಉಪಯೋಗಿಸಿಕೊಂಡು ಮುಂದೆ ಬನ್ನಿ ಎಂದು ತಿಳಿಸಿದರು.
ಕೋಲಾರ ಹಾಲು ಒಕ್ಕೂಟದ ಮಾಜಿ ಅದ್ಯಕ್ಷ ಕೆ.ಗುಡಿಯಪ್ಪ ಮಾತನಾಡಿ, ಬಜೆಟ್‌ನಲ್ಲಿ ಸರ್ಕಾರ ಕೋಲಾರ ಜಿಲ್ಲೆಗೆ ಅನ್ಯಾಯ ಮಾಡಿದೆ. ಪ್ರತಿಬಾರಿಯಂತೆ ಈ ಬಾರಿಯೂ ಸಹ ಹಾಲು ಉತ್ಪಾದಕ ಸಂಘಗಳಿಗೆ ಅನುದಾನ ನೀಡದೆ ರೈತರಿಗೆ ಮೋಸ ಮಾಡಿದೆ ಎಂದು ಆರೋಪಿಸಿದರು.
ಜಿಲ್ಲಾ ಪಂಚಾಯತ್ ಉಪಾಧ್ಯಕ್ಷೆ ನಿರ್ಮಲ ಮುನಿರಾಜು, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಭೀಮೇಶ್, ಹೀರೆಬಲ್ಲೆ ಎಂ.ಪಿ.ಸಿ.ಎಸ್ ಅದ್ಯಕ್ಷ ಬಿ.ಟಿ ರವಿಕುಮಾರ್, ಚಿಕ್ಕಬಳ್ಳಾಪುರ ಸಹಕಾರ ಸಂಘಗಳ ಸಹಾಯಕ ನಿಭಂದಕ ನಾಗರಾಜ್ ಗೌಡ, ತಾಲ್ಲೂಕು ಪಂಚಾಯತ್ ಸದಸ್ಯೆ ಶೋಭಾ ಶಶಿಕುಮಾರ್ ಕಾರ್ಯಕ್ರಮದಲ್ಲಿ ಹಾಜರಿದ್ದರು.

ಜೆಡಿಎಸ್‌ ಬೆಂಬಲಿತ ಅಭ್ಯರ್ಥಿಗಳು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ

0

ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಪ್ರತಿಷ್ಠೆಯ ಸಂಗತಿಯಾಗಿದ್ದ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮಂಗಳವಾರ ನಡೆದ ಚುನಾವಣೆ ಹಲವು ತಿರುವುಗಳನ್ನು ಪಡೆದು ಕೊನೆಗೆ ಜೆಡಿಎಸ್‌ನ ಬಶೆಟ್ಟಹಳ್ಳಿ ಕ್ಷೇತ್ರದ ಬಿ.ವಿ.ನಾರಾಯಣಸ್ವಾಮಿ ಅಧ್ಯಕ್ಷರಾಗಿ ಮೇಲೂರು ಕ್ಷೇತ್ರದ ಮುನಿಯಪ್ಪ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ತಾಲ್ಲೂಕು ಪಂಚಾಯಿತಿಯ ಹಿಂದಿನ ಅಧ್ಯಕ್ಷ ಕೆ.ಲಕ್ಷ್ಮಿನಾರಾಯಣ, ಉಪಾಧ್ಯಕ್ಷ ಎಚ್.ನರಸಿಂಹಯ್ಯ ತಮ್ಮ ಸ್ಥಾನಗಳಿಗೆ ರಾಜೀನಾಮೆ ಸಲ್ಲಿಸಿದ್ದರಿಂದ ತೆರವಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮಂಗಳವಾರ ಚುನಾವಣೆ ನಡೆಯಿತು. ಜೆಡಿಎಸ್ ನ ಒಮ್ಮತದ ಅಭ್ಯರ್ಥಿಯಾಗಿ ಬಶೆಟ್ಟಹಳ್ಳಿಯ ಬಿ.ವಿ.ನಾರಾಯಣಸ್ವಾಮಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಮೇಲೂರು ಕ್ಷೇತ್ರದ ಮುನಿಯಪ್ಪ ನಾಮಪತ್ರ ಸಲ್ಲಿಸಿದ್ದರು.
ಕಾಂಗ್ರೆಸ್ ಬೆಂಬಲದಿಂದ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಿ ಪಲಿಚೇರ್ಲು ಕ್ಷೇತ್ರದ ಸದಸ್ಯೆ ಮಂಜುಳಮ್ಮ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ದಿಬ್ಬೂರಹಳ್ಳಿ ಕ್ಷೇತ್ರದ ಸದಸ್ಯೆ ಶಂಕರಮ್ಮ ನಾಮಪತ್ರ ಸಲ್ಲಿಸಿದ್ದರು. ಎರಡೂ ಕಡೆಗಳಲ್ಲಿ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣೆ ನಡೆದು, ಕೈ ಎತ್ತುವ ಮೂಲಕ ಸದಸ್ಯರುಗಳು ತಮ್ಮ ಬೆಂಬಲ ನೀಡಿದರು,
ಜೆಡಿಎಸ್ ಬೆಂಬಲಿತ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಬಿ.ವಿ.ನಾರಾಯಣಸ್ವಾಮಿ ಮತ್ತು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಮುನಿಯಪ್ಪ ಅವರಿಗೆ ತಲಾ ೯ ಮತಗಳು ಬರುವ ಮೂಲಕ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಹಾಲಿಶಾಸಕ ವಿ.ಮುನಿಯಪ್ಪ ಅವರಿಗೆ ಮುಖಭಂಗ :
ತಾಲ್ಲೂಕು ಪಂಚಾಯಿತಿ ಆಡಳಿತವನ್ನು ತಮ್ಮ ಹಿಡಿತಕ್ಕೆ ತೆಗೆದುಕೊಳ್ಳಬೇಕು ಎಂದು ನಡೆಸಿದ ಕಾಂಗ್ರೆಸ್‌ನ ಎಲ್ಲಾ ಪ್ರಯತ್ನಗಳೂ ವಿಫಲವಾಗಿ ತಾಲ್ಲೂಕು ಪಂಚಾಯಿತಿ ಆಡಳಿತ ಮತ್ತೊಮ್ಮೆ ಜೆಡಿಎಸ್ ಪಾಲಾಯಿತು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಈ ಭಾರಿ ಕಾಂಗ್ರೆಸ್ ಸದಸ್ಯರನ್ನು ಆಯ್ಕೆ ಮಾಡಬೇಕು ಎಂದು ಕಾಂಗ್ರೆಸ್ ಮುಖಂಡರು ತೆರೆಮರೆಯ ಚಟುವಟಿಕೆಗಳನ್ನು ನಡೆಸಿ ಪಲಿಚೇರ್ಲು ತಾಲ್ಲೂಕು ಪಂಚಾಯಿತಿ ಕ್ಷೇತ್ರದಿಂದ ಜಯಗಳಿಸಿದ್ದ ಜೆಡಿಎಸ್ ಸದಸ್ಯೆ ಮಂಜುಳಮ್ಮ ಅವರನ್ನು ಅಧ್ಯಕ್ಷರನ್ನಾಗಿಸುವ ಆಮಿಷವೊಡ್ಡಿ ಪಕ್ಷಕ್ಕೆ ಸೆಳೆಯುವಲ್ಲಿ ಯಶಸ್ವಿಯಾಗಿದ್ದರು. ಕಾಂಗ್ರೆಸ್ ಮುಖಂಡರ ಆಮಿಷಕ್ಕೆ ಒಳಗಾದ ಮಂಜುಳಮ್ಮ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಹ ಸಲ್ಲಿಸಿದ್ದರು.
ಚುನಾವಣೆ ಪ್ರಕ್ರಿಯೆ ಶುರುವಾದಾಗ ಕಾಂಗ್ರೆಸ್ ಪಕ್ಷದಿಂದ ಗೆದ್ದು ಸದಸ್ಯರಾಗಿದ್ದ ಈ ತಿಮ್ಮಸಂದ್ರ ಕ್ಷೇತ್ರದ ಸದಸ್ಯೆ ವಹೀದಾಬೇಗಂ ಜೆಡಿಎಸ್ ಅಭ್ಯರ್ಥಿಗಳ ಪರ ಕೈಯೆತ್ತಿದಾಗ ಉಳಿದ ಕಾಂಗ್ರೆಸ್ ಸದಸ್ಯರೂ ಸೇರಿದಂತೆ ಅಧ್ಯಕ್ಷರಾಗಲು ನಾಮಪತ್ರ ಸಲ್ಲಿಸಿದ್ದ ಮಂಜುಳಮ್ಮ ಅವರಿಗೆ ಗಾಬರಿ ಆಯಿತು.
ಜೆಡಿಎಸ್‌ ಪಕ್ಷದವರನ್ನು ಸೆಳೆದ ಖುಷಿಯಲ್ಲಿದ್ದ ಕಾಂಗ್ರೆಸಿಗರಿಗೆ, ನೀವು ಚಾಪೆ ಕೆಳಗೆ ನುಸುಳಿದರೆ ನಾವು ರಂಗೋಲಿ ಕೆಳಗೆ ನುಸುಳಬಲ್ಲೆವು ಎಂಬಂತೆ ಕಾಂಗ್ರೆಸಿನ ಒಬ್ಬರನ್ನು ತಮ್ಮ ಪಕ್ಷಕ್ಕೆ ಸದ್ದಿಲ್ಲದೇ ಸೇರಿಸಿಕೊಂಡು ತಾಲ್ಲೂಕು ಪಂಚಾಯಿತಿಯ ಹಿಡಿತವನ್ನು ಜೆಡಿಎಸ್‌ ಸಾಧಿಸಿತು.

ಗ್ರಾಮೀಣ ಜಾಗೃತಿ ಕಾರ್ಯಾನುಭವ ಕಾರ್ಯಕ್ರಮ

0

ಮುತ್ತು ಹುಡುಕಬೇಕಾದರೆ ನೀರಿಗೆ ಇಳಿಯಬೇಕು, ಹಾಗೆಯೇ ಬೆಳೆ ಬೆಳೆಯಲು ಮಣ್ಣಿಗೆ ಇಳಿಯಬೇಕು, ಕೃಷಿಗೆ ಮಣ್ಣೇ ಮುಖ್ಯ’ ಗ್ರಾಮಪಂಚಾಯಿತಿ ಉಪಾಧ್ಯಕ್ಷ ಚಿಕ್ಕನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ದನಮಿಟ್ಟೇನಹಳ್ಳಿಯಲ್ಲಿ ಗ್ರಾಮ ವಾಸ್ತವ್ಯಕ್ಕಾಗಿ ಬಂದಿರುವ ಕೃಷಿ ವಿಶ್ವವಿದ್ಯಾಲಯದ ಅಂತಿಮ ವರ್ಷದ ವಿದ್ಯಾರ್ಥಿಗಳ ಮೂರು ತಿಂಗಳ ಗ್ರಾಮೀಣ ಜಾಗೃತಿ ಕಾರ್ಯಾನುಭವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ಗ್ರಾಮದಲ್ಲಿ ಕಲಿಕೆ ಹಾಗೂ ಕಲಿಸುವ ಕೆಲಸವನ್ನು ಮಾಡಬೇಕಿದೆ. ಸಮಸ್ಯೆಗಳ ಪರಿಹಾರೋಪಾಯಗಳನ್ನು ಕಂಡುಕೊಳ್ಳುತ್ತಾ ಗ್ರಾಮೀಣ ಭಾಗವನ್ನು ಸಶಕ್ತಗೊಳಿಸುವ ಕೆಲಸ ಎಳೆಯ ಮನಸ್ಸುಗಳಿಂದ ಆಗಲಿ ಎಂದು ಹೇಳಿದರು.
ಬೀಜವಿಜ್ಞಾನ ಮತ್ತು ತಂತ್ರಜ್ಞಾನದ ಪ್ರಾಧ್ಯಾಪಕ ಡಾ.ವೆಂಕಪ್ಪ ಮಾತನಾಡಿ, ‘ಬೆಳೆ ಬೀಜ ಕೊಡುವುದರ ಜೊತೆಗೆ ಬಿತ್ತನೆಗೆ ಯೊಗ್ಯವಾಗಿರಬೇಕು. ಅದು ಸದೃಢವಾಗಿ ಬೆಳೆಯಬೇಕು. ಜೊತೆಗೆ ತನ್ನ ಜೀವನದ ಅಂತ್ಯದಲ್ಲಿ ಒಂದು ಹಿಡಿ ಬೀಜವನ್ನು ಕೊಟ್ಟು ಹೋಗಬೇಕು’ ಎಂದರು.
ಕೃಷಿ ವಿಸ್ತರಣಾ ವಿಭಾಗದ ಪ್ರಾಧ್ಯಾಪಕ ಡಾ.ವೈ.ಎನ್.ಶಿವಲಿಂಗಯ್ಯ ಮಾತನಾಡಿ, ‘ರೈತರ ಅನುಭವದ ಮುಂದೆ ವಿದ್ಯಾರ್ಥಿಗಳ ಕೃಷಿ ಜ್ಞಾನ ಸಾಗರದಲ್ಲಿ ಹನಿಯಂತೆ. ಮೂರು ತಿಂಗಳ ವಿದ್ಯಾರ್ಥಿಗಳ ಗ್ರಾಮ ವಾಸ್ತವ್ಯದ ಮುಖ್ಯ ಉದ್ದೇಶ ವಿದ್ಯಾರ್ಥಿಗಳು ಪ್ರಾಯೋಗಿಕವಾಗಿ ಕೃಷಿ ಕಲಿಯುವುದು’ ಎಂದು ತಿಳಿಸಿದರು.
ಗ್ರಾಮಪಂಚಾಯತಿಯ ಸದಸ್ಯ ವೆಂಕಟರೆಡ್ಡಿ ಮಾತನಾಡಿ, ಮೂರು ತಿಂಗಳ ಗ್ರಾಮ ಶಿಬಿರಕ್ಕೆ ತಮ್ಮ ಹಳ್ಳಿಯ ರೈತರ ಸಹಕಾರವಿದೆ ಹಾಗೂ ಹಳ್ಳಿಯಲ್ಲಿ ಏಲ್ಲಾ ಪ್ರಗತಿಪರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವಂತೆ ಕೃಷಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.
ರೈತ ಸಂಪರ್ಕ ಕೇಂದ್ರದ ಗಂಗಾಧರ, ರೈತರಿಗೆ ಮಣ್ಣು ಆರೋಗ್ಯ ಕಾರ್ಡನ್ನು ವಿತರಿಸಿದರು. ಕೃಷಿ ವಿವಿಯ ವಿದ್ಯಾರ್ಥಿನಿ ಕೆ.ವಿ.ಅರ್ಷಿಯಾ ಮೂರು ತಿಂಗಳುಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಗ್ರಾಮಸ್ಥರಿಗೆ ತಿಳಿಸಿದರು, ಮಣ್ಣಿನ ಪರೀಕ್ಷೆ, ಅಣಬೆ ಬೇಸಾಯ, ಜೇನು ಸಾಕಾಣಿಕೆ, ಸಿರಿಧಾನ್ಯ ಮೌಲ್ಯ ವರ್ಧನೆ, ಸಮಗ್ರ ಕೃಷಿ ಪದ್ಧತಿ, ಸಮಗ್ರ ಕೀಟ ಹಾಗೂ ರೋಗ ನಿರ್ವಹಣೆಯ ಬಗ್ಗೆ ರೈತರಿಗೆ ಮಾಹಿತಿ ನೀಡಿದರು.
ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಬಚ್ಚಪ್ಪ ಹಾಜರಿದ್ದರು.

ಕನ್ನಡ ಸಾರಸ್ವತ ಪರಿಚಾರಿಕೆ ವತಿಯಿಂದ ಮೇಜರ್‌ ಸುನಿಲ್‌ಕುಮಾರ್‌ ಅವರಿಗೆ ಸನ್ಮಾನ

0

ತಾಲ್ಲೂಕಿನ ಮುತ್ತೂರು ಗ್ರಾಮದಲ್ಲಿ ಮೇಜರ್‌ ಸುನಿಲ್‌ಕುಮಾರ್‌ ಅವರನ್ನು ಶನಿವಾರ ಕನ್ನಡ ಸಾರಸ್ವತ ಪರಿಚಾರಿಕೆ ವತಿಯಿಂದ ಗೌರವಿಸಿ ಕನ್ನಡ ಸಾರಸ್ವತ ಪರಿಚಾರಿಕೆ ಅಧ್ಯಕ್ಷ ಬಿ.ಆರ್‌.ಅನಂತಕೃಷ್ಣ ಮಾತನಾಡಿದರು.
ಸೈನಿಕರ ಪಾಲಿಗೆ ಭವಿಷ್ಯವೆಂಬುದು ಅನಿಶ್ಚಿತತೆಯಿಂದ ಕೂಡಿರುತ್ತದೆ. ಹತ್ತೊಂಬತ್ತು ವರ್ಷಗಳ ಹಿಂದೆ ನಡೆದ ಕಾರ್ಗಿಲ್‌ ಯುದ್ಧದಲ್ಲಿ ನೂರಾರು ಸೈನಿಕರು ತಮ್ಮ ಜೀವವನ್ನೇ ಬಲಿಕೊಟ್ಟರು. ವೀರ ಯೋಧರನ್ನು ಗೌರವಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ ಎಂದು ಅವರು ತಿಳಿಸಿದರು.
ಪ್ರತಿವರ್ಷ ಜುಲೈ ತಿಂಗಳು ಬಂದಾಗ ಕಾರ್ಗಿಲ್ ಯುದ್ಧ ನೆನಪಾಗುತ್ತದೆ. ಕಾರ್ಗಿಲ್‌ನಲ್ಲಿ ಭಯೋತ್ಪಾದಕರ ಸದ್ದಡಗಿಸುತ್ತಾ ನೆಲಕ್ಕುರುಳಿದ 533 ವೀರಯೋಧರು, ಕೈ ಕಾಲು ಕಣ್ಣು ಕಳೆದುಕೊಂಡ 1363 ಸೈನಿಕರನ್ನು ನಾವು ನೆನೆಯದಿದ್ದರೆ ಆತ್ಮವಂಚನೆಯಾಗುತ್ತದೆ. ನಮ್ಮ ತಾಲ್ಲೂಕಿನ ವೀರ ಯೋಧರನ್ನು ಗೌರವಿಸಿ ಅವರಿಂದ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಮೇಜರ್‌ ಸುನಿಲ್‌ಕುಮಾರ್‌ ಮಾತನಾಡಿ, ಕೇವಲ ಮೂರು ದಿನಗಳ ರಜೆಯಿದ್ದುದರಿಂದ ಹುಟ್ಟಿದ ಊರಿಗೆ ಬಂದಿದ್ದೇನೆ. ಮುಂದಿನ ಬಾರಿ ಬಂದಾಗ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸೇನೆಯ ಅನುಭವವನ್ನು ವಿವರಿಸಿ ಅವರಿಗೆ ಸೇನೆಯ ಮಹತ್ವವನ್ನು ತಿಳಿಸುತ್ತೇನೆ. ನಮ್ಮ ತಾಲ್ಲೂಕಿನ ಮುಂದಿನ ಪೀಳಿಗೆಯ ಮಕ್ಕಳು ಭಾರತೀಯ ಸೇನೆಯನ್ನು ಇಷ್ಟಪಟ್ಟು ಸೇರಲಿ ಎಂಬುದು ನನ್ನ ಆಸೆ. ಯೋಧರನ್ನು ಕಳೆದುಕೊಂಡ ಕುಟುಂಬದವರನ್ನು ಕರೆಸಿ ಶಾಲೆಗಳಲ್ಲಿ ಕಾರ್ಯಕ್ರಮಗಳನ್ನು ಮಾಡಿ. ಆ ಕುಟುಂಬದವರು ಅತ್ಯಂತ ಶ್ರೇಷ್ಠರು. ಅವರಿಗೆ ಸಮಾಜದ ಬೆಂಬಲವಿರಲಿ ಎಂದು ಹೇಳಿದರು.
ತಾಲ್ಲೂಕು ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಗುರುರಾಜರಾವ್‌, ಮಾಜಿ ನಗರಸಭಾ ಸದಸ್ಯ ಲಕ್ಷ್ಮೀನಾರಾಯಣ, ಸಿ.ಪಿ.ಈ.ಕರಗಪ್ಪ, ಅಜಿತ್‌ ಕೌಂಡಿನ್ಯ, ಪ್ರಭು ಹಾಜರಿದ್ದರು.

ಹಾಳು ಬಾವಿಯಿಂದ ಆರು ನಾಯಿಗಳ ರಕ್ಷಣೆ

0

ತಾಲ್ಲೂಕಿನ ಕೊತ್ತನೂರು ಗ್ರಾಮದಲ್ಲಿ ಎರಡು ಹಾಳು ಬಾವಿಗಳಲ್ಲಿ ರಾತ್ರಿ ಬಿದ್ದಿದ್ದ ಆರು ನಾಯಿಗಳನ್ನು ಭಾನುವಾರ ಬೆಳಿಗ್ಗೆ ಸ್ನೇಕ್‌ ನಾಗರಾಜ್‌ ರಕ್ಷಿಸಿದ್ದಾರೆ.
ಕೊತ್ತನೂರು ಗ್ರಾಮದ ಆಂಜಿನಪ್ಪ ಅವರ ಜಮೀನಿನಲ್ಲಿದ್ದ ಹಾಳು ಬಾವಿಯಲ್ಲಿ ಒಂದು ನಾಯಿ ಬಿದ್ದಿದ್ದರೆ, ಚಂದ್ರಾಯಪ್ಪ ಅವರಿಗೆ ಸೇರಿದ ಜಮೀನಿನಲ್ಲಿದ್ದ ಹಾಳು ಬಾವಿಯಲ್ಲಿ ಐದು ನಾಯಿಗಳು ಬಿದ್ದಿವೆ. ನಾಯಿಗಳಿಗೆ ಏನೂ ಗಾಯಗಳಾಗಿರಲಿಲ್ಲ. ನಾಯಿಗಳ ಕೂಗನ್ನು ಕೇಳಿಸಿಕೊಂಡ ಗ್ರಾಮಸ್ಥರು ಸ್ನೇಕ್‌ ನಾಗರಾಜ್‌ ಅವರನ್ನು ಕರೆದುಕೊಂಡು ಬಂದಿದ್ದಾರೆ.
ಗ್ರಾಮಸ್ಥರ ಸಹಾಯದಿಂದ ಹಗ್ಗವನ್ನು ಬಾವಿಯೊಳಗೆ ಬಿಟ್ಟು ಇಳಿದ ಸ್ನೇಕ್‌ ನಾಗರಾಜ್‌, ಒಂದೊಂದೇ ನಾಯಿಗೆ ಹಗ್ಗ ಕಟ್ಟಿದ ಮೇಲೆ, ಮೇಲೆ ನಿಂತಿದ್ದವರು ಅವನ್ನು ಎಳೆದುಕೊಂಡಿದ್ದಾರೆ.
‘ರಾತ್ರಿ ವೇಳೆ ತಿಳಿಯದೆ ಅವು ಹೋಗಿ ಬಿದ್ದಿರಬೇಕು. ಬಾವಿಯೊಳಗೆ ಇಳಿದು ಅಭ್ಯಾಸವಿದೆ. ಆದರೆ, ಗಾಬರಿಯಾಗಿ ನಾಯಿಗಳು ಕಚ್ಚಬಹುದು ಎಂದು ಆನಂದ್‌ ಎಂಬುವರನ್ನು ಜೊತೆಗೆ ಕರೆದುಕೊಂಡು ಬಾವಿಯಲ್ಲಿ ಇಳಿದಿದ್ದೆ. ಒಂದೊಂದಾಗಿ ನಾಯಿಗಳಿಗೆ ಹಗ್ಗ ಕಟ್ಟಿ ಎಳೆಸಿ ರಕ್ಷಿಸಿದೆವು. ಅದರಲ್ಲಿ ಒಂದು ಮರಿಯಿತ್ತು. ಅದನ್ನು ಹಿಡಿದುಕೊಂಡು ಹಗ್ಗದ ಸಹಾಯದಿಂದ ಮೇಲೆ ಬಂದೆ. ಯಾವ ನಾಯಿಗೂ ಏನೂ ಆಗಿರಲಿಲ್ಲ’ ಎಂದು ಸ್ನೇಕ್‌ ನಾಗರಾಜ್‌ ವಿವರಿಸಿದರು.

ನೀರು ತುಂಬಿದ ಹಾದಿ, ದಾಟಲು ತೆಪ್ಪವನ್ನಾಶ್ರಯಿಸಿದ ಗ್ರಾಮಸ್ಥರು

0

ತಾಲ್ಲೂಕಿನ ತಲಕಾಯಲಬೆಟ್ಟ ಗ್ರಾಮ ಪಂಚಾಯಿತಿಯ ದಾಸರ್ಲಹಳ್ಳಿ, ಬುಡಗವಾರಹಳ್ಳಿ, ಮರಳಪ್ಪನಹಳ್ಳಿ ಮತ್ತು ಅಲಗುರ್ಕಿ ಗ್ರಾಮಸ್ಥರು ಪ್ರತಿನಿತ್ಯ ತಾವೇ ರೂಪಿಸಿಕೊಂಡ ತಾತ್ಕಾಲಿಕ ತೆಪ್ಪದ ಮೂಲಕ ದಾಟಿ ಹೋಗಬೇಕಾದ ಪರಿಸ್ಥಿತಿ ಮೂಡಿದೆ.
ತಲಕಾಯಲಬೆಟ್ಟ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಒಂದು ಕಿಮೀ ದೂರದಲ್ಲಿರುವ ದಾಸಾರ್ಲಹಳ್ಳಿಯಿಂದ ಜನರು ಟಿ.ವೆಂಕಟಾಪುರದ ವಾಹನ ನಿಲ್ದಾಣ ತಲುಪಲು ಕೇವಲ ಅರ್ಧ ಫರ್ಲಾಂಗ್‌ ದೂರ ಬರಬೇಕಷ್ಟೆ. ಆದರೆ ಈ ದೂರ ಕ್ರಮಿಸಲು ಅವರಿಗೆ ಅಡ್ಡವಾಗಿ ತಲಕಾಯಲಬೆಟ್ಟ ಕೆರೆಯ ಕಾಲುವೆ ಹರಿಯುತ್ತದೆ. ಮಳೆಗಾಲದಲ್ಲಿ ಈ ಪರಿಸ್ಥಿತಿ ಇರುತ್ತದೆ. ಕೆರೆಯ ನೀರು ಬರಿದಾದಾಗ ಮಾಮೂಲಿನಂತೆಯೇ ನಡೆದು ಹೋಗುವ ಜನ ಕಾಲುವೆಯಲ್ಲಿ ನೀರು ಹರಿದಾಗ ತಾತ್ಕಾಲಿಕವಾಗಿ ತಾವೇ ಡ್ರಮ್‌ಗಳ ಮೂಲಕ ನಿರ್ಮಿಸಿಕೊಂಡಿರೋ ತೆಪ್ಪದಲ್ಲಿ ಹಗ್ಗವನ್ನು ಎರಡೂ ಬದಿಯಲ್ಲಿ ಕಟ್ಟಿಕೊಂಡು ದಾಟುತ್ತಾರೆ.
ಕಳೆದ ಹಲವು ವರ್ಷಗಳಿಂದ ಸಮರ್ಪಕ ಮಳೆಯ ಇಲ್ಲದ ಕಾರಣ ಕೆರೆ ಪೂರ್ಣ ಪ್ರಮಾಣದಲ್ಲಿ ತುಂಬುತ್ತಿರಲಿಲ್ಲ. ಕೆರೆಗೆ ನೀರು ಬಂದರೂ ಬಹುಬೇಗ ಖಾಲಿಯಾಗುತ್ತಿತ್ತು. ಆದ್ರೆ ಕಳೆದ ವರ್ಷ ಸುರಿದ ಮಳೆ ಹಾಗೂ ಕೆರೆಯಲ್ಲಿನ ನೀರು ಹೊರ ಬಿಡಬಾರದು ಅಂತ ಜಿಲ್ಲಾಧಿಕಾರಿಯ ಆದೇಶದಿಂದ ಕೆರೆಯಲ್ಲಿ ನೀರು ಖಾಲಿಯಾಗಲಿಲ್ಲ. ಹೀಗಾಗಿ ಕಳೆದ ವರ್ಷದಿಂದ ಸಹ ತುಂಬಿದ ಕೆರೆಯಲ್ಲಿ ಈಚೆಗೆ ಬಿದ್ದ ನೀರು ಕಾಲುವೆಯ ಮೂಲಕ ಹರಿದು ಗ್ರಾಮಸ್ಥರು ಓಡಾಡುತ್ತಿದ್ದ ದಾರಿಯಲ್ಲಿ ಹರಿಯುತ್ತಿದೆ. ವಿಧಿಯಿಲ್ಲದೇ ಜನರು ತೆಪ್ಪದಿಂದ ದಾಟುವಂತಾಗಿದೆ.
‘ದಾಸಾರ್ಲಹಳ್ಳಿಯಲ್ಲಿ ನೂರು ಮನೆಗಳಿವೆ. ಅಲ್ಲಿ ಶಾಲೆಯಿದೆ. ಆದರೆ ಬುಡಗವಾರಹಳ್ಳಿ, ಮರಳಪ್ಪನಹಳ್ಳಿ ಮತ್ತು ಅಲಗುರ್ಕಿಗಳಿಂದ ಪ್ರೌಢಶಾಲೆಗೆ ಮತ್ತು ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸುಮಾರು 10 ರಿಂದ 12 ಅಡಿ ನೀರಿರುವ ಕಾಲುವೆಯನ್ನು ತಾತ್ಕಾಲಿಕ ತೆಪ್ಪದಿಂದ ದಾಟಬೇಕಿದೆ. ಏನಾದರೂ ಅವಘಡಗಳು ಸಂಭವಿಸಿದರೆ ಯಾರು ಹೊಣೆಯಾಗುತ್ತಾರೆ. ಈ ಜನರಿಗೆ ಪರ್ಯಾಯ ರಸ್ತೆಯಿದೆ. ದಾಸಾರ್ಲಹಳ್ಳಿಯಿಂದ ಮರ್ಲಪ್ಪನಹಳ್ಳಿ, ದಿಂಬಾರ್ಲಹಳ್ಳಿಯಿಂದ ತಲಕಾಯಲಬೆಟ್ಟ ಮುಖ್ಯ ರಸ್ತೆಗೆ ಬರಬೇಕು. ಹೀಗಿ ಸುತ್ತು ಬರಲು ಆರು ಕಿ.ಮೀ ದೂರವಾಗುತ್ತದೆ. ಸದಕ್ಕಾಗಿ ಕೇವಲ ಅರ್ಧ ಫರ್ಲಾಂಗ್‌ ದೂರವನ್ನು ನೀರಿನಲ್ಲಿ ದಾಟುತ್ತಾರೆ. ಸರ್ಕಾರದಿಂದ ಇಲ್ಲಿ ಸೇತುವೆಯನ್ನು ನಿರ್ಮಿಸಬೇಕು. ಅತ್ಯಂತ ಶೀಘ್ರವಾಗಿ ನಿರ್ಮಿಸಬಲ್ಲ ತೂಗುಸೇತುವೆಯನ್ನಾದರೂ ಇಲ್ಲಿ ನಿರ್ಮಿಸಿದರೆ ಜನಕ್ಕೆ ಬಹಳ ಅನುಕೂಲವಾಗುತ್ತದೆ’ ಎಂದು ಶಿಕ್ಷಕ ವೆಂಕಟರೆಡ್ಡಿ ತಿಳಿಸಿದರು.

ಗ್ರಾಮೀಣ ಜಾಗೃತಿ ಕಾರ್ಯಾನುಭವ ಕಾರ್ಯಕ್ರಮ

0

‘ಗ್ರಾಮ ಭಾರತ’ ಅಂದರೆ ಈ ನಾಡ ಪ್ರಾಣ ಹಳ್ಳಿಯಲ್ಲಿದೆ ಎಂದರ್ಥ. ಆದರೆ ನಮ್ಮ ಹಳ್ಳಿಗಳಲ್ಲಿನ ಸಮಸ್ಯೆಗಳು ಹಲವಾರು. ರೇಷ್ಮೆ ಬೆಳೆಯ ಬೆಲೆ ಇಳಿಕೆ, ಕೃಷಿ ಅಧಿಕಾರಿಗಳ ವೈಫಲ್ಯತೆ, ಹೈನುಗಾರಿಕೆಯ ತೊಂದರೆಯ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದು ರೈತ ಸಂಘದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್‌ ತಿಳಿಸಿದರು.
ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದಲ್ಲಿ ಗಾಂಧಿ ಕೃಷಿ ವಿಜ್ಞಾನ ಕೇಂದ್ರ ಕೃಷಿ ಮಹಾವಿದ್ಯಾಲಯದ ವಿದ್ಯಾರ್ಥಿಗಳ ‘ಗ್ರಾಮೀಣ ಜಾಗೃತಿ ಕಾರ್ಯಾನುಭವ’ ಕಾರ್ಯಕ್ರಮವನ್ನು ಗುರುವಾರ ಸಂಜೆ ಉದ್ಘಾಟಿಸಿ ಅವರು ಮಾತನಾಡಿದರು.
ಕೃಷಿ ಪದವಿಯ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮಗಳಿಗೆ ಬಂದಿದ್ದೀರಿ. ಗ್ರಾಮಗಳಲ್ಲಿನ ಸಮಸ್ಯೆಗಳನ್ನು ತೊಡೆದುಹಾಕಿ ಹಳ್ಳಿಗಳನ್ನು ಹಾಗೂ ಹಳ್ಳಿಯ ಜನರನ್ನು ಅಭಿವೃದ್ಧಿಯತ್ತ ಸಾಗಲು ಬೇಕಾದ ಪರಿಹಾರೋಪಾಯಗಳನ್ನು ಕಂಡುಹಿಡಿಯಿರು. ಗ್ರಾಮಸ್ಥರೊಂದಿಗೆ ಮುಕ್ತವಾಗಿ ಚರ್ಚಿಸಿ. ನಾವು ನಿಮಗೆ ಸಂಪೂರ್ಣ ಸಹಕಾರ ನೀಡುತ್ತೇವೆ. ಪದವಿ ಪಡೆದರೆ ಸಾಲದು ನೀವು ಹಳ್ಳಿಗಳಲ್ಲಿರುವ ಮೂರು ತಿಂಗಳಿನಲ್ಲಿ ಸ್ವಲ್ಪವಾದರೂ ಬದಲಾವಣೆಗಳು ಮೂಡಿದಲ್ಲಿ ನಿಮ್ಮ ಕಾರ್ಯಾನುಭವ ಸಾರ್ಥಕವಾಗುತ್ತದೆ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಚಂದ್ರಪ್ಪ ಮಾತನಾಡಿ, ಹಳ್ಳಿಗಳಲ್ಲಿನ ವೈಫಲ್ಯತೆಗಳನ್ನು ತಡೆಯಲು ವಿದ್ಯಾರ್ಥಿಗಳು ಮತ್ತು ಕೃಷಿ ಅಧಿಕಾರಿಗಳ ಪಾತ್ರವನ್ನು ವಿವರಿಸಿದರು.
ಕೃಷಿ ವಿದ್ಯಾರ್ಥಿ ಚಂದ್ರಮನು ಮಾತನಾಡಿ, ಕೃಷಿಯ ತಂತ್ರಜ್ಞಾನಗಳ ಬಗ್ಗೆ, ಮಣ್ಣಿನ ಫಲವತ್ತತೆಯ ಬಗ್ಗೆ, ಮಣ್ಣು ಮತ್ತು ನೀರಿನ ಪರೀಕ್ಷೆಯ ಬಗ್ಗೆ ಹಾಗೂ ರೇಷ್ಮೆಯ ಕುರಿತಂತೆ ಮಾತನಾಡಿ ತಮ್ಮ ಮೂರು ತಿಂಗಳ ಕಾರ್ಯಚಟುವಟಿಕೆಗಳ ಬಗ್ಗೆ ಹೇಳಿದರು.
ಗ್ರಾಮ ಪಂಚಾಯಿತಿ ಸದಸ್ಯರಾದ ಎಸ್‌.ಎ.ದೇವರಾಜ್‌, ಎಸ್‌.ವಿ.ಮಂಜುನಾಥ್‌, ಕನ್ನಡ ಪ್ರಾಧ್ಯಾಪಕ ಕೃಷ್ಣಮೂರ್ತಿ, ರೈತ ಸಂಘದ ಗೋವಿಂದಪ್ಪ, ಎಂ.ಪಿ.ಸಿ.ಎಸ್‌ ಕಾರ್ಯದರ್ಶಿ ನಾರಾಯಣಸ್ವಾಮಿ, ಶ್ರೀರಾಮಪ್ಪ, ನಾರಾಯಣರೆಡ್ಡಿ, ಆಂಜಿನಪ್ಪ, ನಾರಾಯಣಸ್ವಾಮಿ, ನಾಗೇಶ್‌, ಕೃಷಿ ವಿಸ್ತರಣಾ ವಿಭಾಗದ ಪ್ರಾಧ್ಯಾಪಕ ಡಾ. ಶಿವಲಿಂಗಯ್ಯ ಹಾಜರಿದ್ದರು.

ಕಾಮಗಾರಿಗಳ ಪರಿಶೀಲನೆ ಮಾಡಿದ ನಗರಸಭೆ ಅಧ್ಯಕ್ಷ

0

ನಗರಸಭೆ ಸಾಮಾನ್ಯ ಸಭೆ ದಿನಾಂಕ ನಿಗಧಿಗೊಳಿಸಿ ಅತಿ ತ್ವರಿತವಾಗಿ ಕಾಮಗಾರಿಗಳನ್ನು ನಡೆಸಬೇಕಾಗಿರುವುದರಿಂದ ನಗರಸಭೆ ವ್ಯಾಪ್ತಿಯಲ್ಲಿ ಎಸ್‌ಎಫ್‌ಸಿ ಯೋಜನೆಯಡಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷ ಅಫ್ಸರ್‌ಪಾಷ ತಿಳಿಸಿದರು.
ನಗರದ ಬಸ್ ನಿಲ್ದಾಣದ ಸಮೀಪವಿರುವ ಪಂಪ್‌ಹೌಸ್ ಬಳಿ ನಿರ್ಮಿಸಲಾಗುತ್ತಿರುವ ನೀರಿನ ಟ್ಯಾಂಕ್ ಸೇರಿದಂತೆ ೮ ನೇ ವಾರ್ಡಿನಲ್ಲಿ ನಿರ್ಮಾಣವಾಗುತ್ತಿರುವ ಸಮುದಾಯ ಶೌಚಾಲಯ ಕಾಮಗಾರಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಕಾಮಗಾರಿ ಪರಿಶೀಲನೆಯನ್ನು ಶುಕ್ರವಾರ ನಡೆಸಿ ಅವರು ಮಾತನಾಡಿದರು.
ನಗರಸಭೆ ಸಾಮಾನ್ಯಸಭೆ ಕರೆದು ನಾಲ್ಕು ತಿಂಗಳಾಗಿದ್ದು ತ್ವರಿತವಾಗಿ ಸಾಮಾನ್ಯ ಸಭೆ ನಡೆಸುವುದರಿಂದ ಸಭೆಯಲ್ಲಿ ಸದಸ್ಯರು ನಗರಸಭೆ ವ್ಯಾಪ್ತಿಯಲ್ಲಿ ಯಾವ ಯಾವ ಕಾಮಗಾರಿ ನಡೆಯುತ್ತಿದೆ ಎನ್ನುವುದರ ಬಗ್ಗೆ ಮಾಹಿತಿ ಕೇಳಿದರೆ ಉತ್ತರಿಸಬೇಕಾಗಿರುತ್ತದೆ. ಅದಕ್ಕಾಗಿ ನಗರಸಭೆ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳ ಪರಿಶೀಲನೆಯನ್ನು ಅಧಿಕಾರಿಗಳ ಜೊತೆಗೂಡಿ ನಡೆಸಲಾಗುತ್ತಿದೆ ಎಂದರು.
ಈಗಾಗಲೆ ಕೆಲವು ಕಾಮಗಾರಿಗಳು ಪೂರ್ಣಗೊಂಡಿದ್ದು ಇನ್ನು ಕೆಲವು ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಸಂಬಂಧಪಟ್ಟ ಕಾಮಗಾರಿಗಳ ಗುತ್ತಿಗೆದಾರರು ತ್ವರಿತವಾಗಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಪೌರಾಯುಕ್ತ ಜಿ.ಎನ್.ಚಲಪತಿ, ಕಿರಿಯ ಅಭಿಯಂತರರಾದ ಗಂಗಾಧರ್, ಪ್ರಸಾದ್, ಮುಖಂಡ ಎಸ್.ಎಂ.ರಮೇಶ್ ಹಾಜರಿದ್ದರು.

ಕೇಂದ್ರದ ಕೃಷಿ ಮಂತ್ರಾಲಯದ ಅಧಿಕಾರಿಗಳ ಭೇಟಿ

0

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿವಿಧ ಯೋಜನೆಗಳ ಬಗ್ಗೆ ಅಧಿಕಾರಿಗಳು ಚೆನ್ನಾಗಿ ತಿಳಿದುಕೊಂಡರೆ ಸಾಮಾನ್ಯ ಜನರಿಗೆ ತಲುಪಿಸಲು ಅನುಕೂಲವಾಗುತ್ತದೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳು ಕಾಲ ಕಾಲಕ್ಕೆ ಗ್ರಾಮಸಭೆ ನಡೆಸುವುದು ಮತ್ತು ಬ್ಯಾನರ್, ಪೋಸ್ಟರ್‌ಗಳ ಮೂಲಕ ಸರ್ಕಾರದ ಯೋಜನೆಗಳ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಇಓ ಎಂ.ವೆಂಕಟೇಶ್ ತಿಳಿಸಿದರು.
ಕೇಂದ್ರ ಸರ್ಕಾರದ ಪುರಸ್ಕೃತ ಗ್ರಾಮ ಸ್ವರಾಜ್ ಯೋಜನೆಯಡಿ ಆಯ್ಕೆಯಾಗಿರುವ ತಾಲ್ಲೂಕಿನ ಗೊರಮಡುಗು ಗ್ರಾಮಕ್ಕೆ ಶುಕ್ರವಾರ ಅನುಷ್ಠಾನದ ವೀಕ್ಷಣೆಗಾಗಿ ಆಗಮಿಸಿದ್ದ ಕೇಂದ್ರದ ಕೃಷಿ ಮಂತ್ರಾಲಯದ ಅಧೀನ ಕಾರ್ಯದರ್ಶಿ ಟಿ.ಎ.ಕಂದನ್ ಮತ್ತು ತಂಡದವರನ್ನು ಬರಮಾಡಿಕೊಂಡು ಅವರು ಮಾತನಾಡಿದರು.
ತಾಲ್ಲೂಕಿನ ಗೊರಮಡುಗು ಗ್ರಾಮದಲ್ಲಿ ಈಗಾಗಲೇ ಪರಿಶಿಷ್ಠ ಜಾತಿ ಹಾಗು ಪಂಗಡಕ್ಕೆ ಸೇರಿದ ಎಲ್ಲಾ ಕುಟುಂಬಗಳಿಗೂ ಅಡುಗೆ ಅನಿಲದ ಸಂಪರ್ಕವಿದ್ದು ಸಾಮಾನ್ಯ ವರ್ಗದ ಕಲೆ ಮನೆಗಳಲ್ಲಿ ಇಲ್ಲದೇ ಇರುವುದರಿಂದ ಗ್ರಾಮ ಪಂಚಾಯಿತಿಯಿಂದ ಸಹಕಾರ ನೀಡುವಂತೆ ಮನವಿ ಮಾಡಿದರು.
ಈಗಾಗಲೇ ಗ್ರಾಮಸ್ಥರು ಬಹುತೇಕ ಮಂದಿ ಜನಧನ್ ಖಾತೆ ಹೊಂದಿದ್ದಾರೆ. ಗ್ರಾಮದ ಕೆಲವೆಡೆ ಬೀದಿ ದೀಪಗಳ ಅವಶ್ಯಕತೆಯಿರುವುದರಿಂದ ಕೂಡಲೇ ಬೆಸ್ಕಾಂ ಇಲಾಖೆಯವರು ಬೀದಿ ದ್ವೀಪಗಳನ್ನು ಅಳವಡಿಸುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿ ಬೆಸ್ಕಾಂ ಅಧಿಕಾರಿ ಅನ್ಸರ್‌ಬಾಷ, ಗಮ ಪಂಚಾಯಿತಿ ಕಾರ್ಯದರ್ಶಿ ಅಶ್ವತ್ಥಪ್ಪ, ಮುಖಂಡರಾದ ಕೃಷ್ಣಪ್ಪ, ರವಿ, ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ನಗರಸಭಾ ಕಚೇರಿಗೆ ಸದಸ್ಯನಿಂದ ಬೀಗ ಹಾಕಿ ಪ್ರತಿಭಟನೆ

0

ನಗರಸಭೆ ಅಧ್ಯಕ್ಷರು ಹಾಗೂ ಪೌರಾಯುಕ್ತರ ಕಾರ್ಯವೈಖರಿಯನ್ನು ಖಂಡಿಸಿ ನಗರದ ೫ ನೇ ವಾರ್ಡಿನ ಸದಸ್ಯ ಪಿ.ಕೆ.ಕಿಷನ್(ನಂದು) ನಗರಸಭೆ ಕಾರ್ಯಾಲಯಕ್ಕೆ ಗುರುವಾರ ಮದ್ಯಾಹ್ನ ಬೀಗ ಜಡಿದು ಪ್ರತಿಭಟಿಸಿದರು.
ಕಳೆದ ಒಂದು ವರ್ಷದಿಂದ ನಗರಸಭೆ ವ್ಯಾಪ್ತಿಯಲ್ಲಿ ಯಾವುದೇ ಕೆಲಸ ಕಾರ್ಯಗಳಾಗುತ್ತಿಲ್ಲ. ನಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಜನತೆಗೆ ಯಾವೊಂದು ಸಣ್ಣ ಕೆಲಸವನ್ನು ಮಾಡಲಾಗದ ಸ್ಥಿತಿಗೆ ನಗರಸಭೆ ಸದಸ್ಯರು ಬಂದಿಳಿದಿದ್ದೇವೆ.
ನಗರಸಭೆ ವ್ಯಾಪ್ತಿಯ ಬಡ ಜನತೆ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿಯೋ ಅಥವ ಮಕ್ಕಳ ಮದುವೆಗಾಗಿಯೋ ಮನೆ ಮಾರಾಟ ಮಾಡಬೇಕಾದ ಸ್ಥಿತಿ ಬಂದಾಗ ನಮಗೆ ಖಾತೆ ಮಾಡಿಕೊಡಿ ಎಂದು ಬಂದರೆ ಖಾತೆ ಮಾಡಿಕೊಡಲು ಆಗುತ್ತಿಲ್ಲ. ನಗರಸಭೆ ಅಧ್ಯಕ್ಷರು ಮತ್ತು ಪೌರಾಯುಕ್ತರು ಕಚೇರಿಗೆ ಬಂದು ಕಚೇರಿಯಲ್ಲಿ ಕುಳಿತು ಕಾಲ ಹರಣ ಮಾಡುವ ಬದಲಿಗೆ ಈ ಬಗ್ಗೆ ಮೇಲಾಧಿಕಾರಿಗಳ ಗಮನಕ್ಕೆ ತಂದು ಪರಿಹಾರೋಪಾಯ ಕಂಡುಹಿಡಿಯಬೇಕು.
ಸಾರ್ವಜನಿಕ ಕೆಲಸ ಕಾರ್ಯಗಳು ಮಾಡಬೇಕಾದ ಸರ್ಕಾರಿ ಕಚೇರಿಗಳಿಂದ ಜನತೆಗೆ ಏನೂ ಮಾಡಲು ಆಗುವುದಿಲ್ಲ ಎಂದಾದರೆ ನಗರಸಭೆ ಏಕೆ ಬೇಕು. ಜನಪ್ರತಿನಿಧಿಗಳು ಏಕೆ ಬೇಕು. ಈ ಬಗ್ಗೆ ಕೂಡಲೇ ಕ್ರಮ ಜರುಗಿಸಿ ನಗರಸಭೆಯಲ್ಲಿ ನಾಗರಿಕರಿಗೆ ಸುಲಭವಾಗಿ ಕೆಲಸ ಕಾರ್ಯಗಳು ಆಗುವಂತೆ ಆಗಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಗರಸಭೆ ಕಾರ್ಯಾಲಯದ ಮುಂಭಾಗ ಇಡೀ ವಾರ್ಡಿನ ಜನತೆಯನ್ನು ಕರೆತಂದು ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.