Home Blog Page 538

ಎಂ.ಶಶಿಧರ್ ಅವರಿಗೆ ಬ್ಯುಸಿನೆಸ್ ಮ್ಯಾನೇಜ್ಮೆಂಟ್ಗಾಗಿ ಗೌರವ ಡಾಕ್ಟರೇಟ್

0

ವೆಂಕಟೇಶ್ವರ ಎಂಜಿನಿಯರಿಂಗ್ ಕಾಲೇಜಿನ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಶಿಡ್ಲಘಟ್ಟ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಶಶಿಧರ್ ಅವರಿಗೆ ಶ್ರೀಲಂಕಾ ದೇಶದ ಕೊಲಂಬೋ ನಗರದ ದ ಓಪನ್ ಇಂಟರ್ನ್ಯಾಷನಲ್ ಯೂನಿವರ್ಸಿಟಿ ಫಾರ್ ಕಾಂಪ್ಲಿಮೆಂಟರಿ ಮೆಡಿಸಿನ್ಸ್(ಓಐಯುಸಿಎಂ)ನ ಕುಲಪತಿ ಡಾ.ಡೋಮ್ ಥೆರೇಸಾ ಬ್ಯುಸಿನೆಸ್ ಮ್ಯಾನೇಜ್ಮೆಂಟ್ಗಾಗಿ ಗೌರವ ಡಾಕ್ಟರೇಟ್ ನೀಡಿದ್ದಾರೆ.

ಎಚ್ಐವಿ ಎಂಬುದು ಬಯಸಿದರೆ ಮಾತ್ರ ಬರುವ ಕಾಯಿಲೆಯಾಗಿದೆ

0

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಬೆಳವಣಿಗೆಯ ಜೊತೆ ಆರೋಗ್ಯ ಬೆಳವಣಿಗೆ ಅಗತ್ಯವಾಗಿದ್ದು ಎಚ್ಐವಿ ಎಂಬುದು ಬಯಸಿದರೆ ಮಾತ್ರ ಬರುವ ಕಾಯಿಲೆಯಾಗಿದೆ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಅನಿಲ್ಕುಮಾರ್ ತಿಳಿಸಿದರು.
ಪಟ್ಟಣದ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ತಾಲ್ಲೂಕು ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ನೆರವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಗುಣಪಡಿಸಲಾಗದ ಮಾರಕ ರೋಗ ಏಡ್ಸ್ ಭಾರತದಲ್ಲಿ ಶರವೇಗದಲ್ಲಿ ಹರಡುತ್ತಿದೆ. ರೋಗ ಬಾರದಂತೆ ಎಚ್ಚರಿಕೆ ವಹಿಸುವುದೊಂದೇ ಇದಕ್ಕೆ ಮದ್ದಾಗಿದ್ದು, ಜನತೆಯಲ್ಲ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ದೊಡ್ಡಮಟ್ಟದಲ್ಲಾಗಬೇಕು. ಅಜ್ಞಾನ, ಅಜಾಗರೂಕತೆ, ಅರಿವಿನ ಕೊರತೆಯಿಂದಾಗಿ ದಿನದಿಂದ ದಿನಕ್ಕೆ ಏಡ್ಸ್ ರೋಗ ಹೆಮ್ಮರದಂತೆ ಹರಡುತ್ತಿದೆ. ಯುವಜನತೆ ಹೆಚ್ಚಾಗಿ ರೋಗಕ್ಕೆ ತುತ್ತಾಗುತ್ತಿದ್ದು, ಇವರಿಗೆ ಜಾಗೃತಿ ಮೂಡಿಸುವ ಕೆಲಸ ಕೇವಲ ಆರೋಗ್ಯ ಇಲಾಖೆಯದೆಂದು ಸುಮ್ಮನಿರದೇ ಎಲ್ಲರೂ ಈ ಕಾರ್ಯದಲ್ಲಿ ಕೈ ಜೋಡಿಸಬೇಕು ಎಂದರು.
ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ ಮಾತನಾಡಿ, ಏಡ್ಸ್ ಎಂಬ ಮಹಾಮಾರಿಗೆ ಇಂದು ಯುವ ಜನತೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಅದರಲ್ಲೂ ಹಳ್ಳಿಗಳಲ್ಲಿ ಎಚ್ಐವಿ ಪೀಡಿತರ ಸಂಖ್ಯೆ ಹೆಚ್ಚಾಗಿ ಕಂಡು ಬರುತ್ತಿದೆ. ಈ ಬೆಳವಣಿಗೆ ದೇಶದ ಭವಿಷ್ಯಕ್ಕೆ ಮಾರಕವಾಗಿದ್ದು ಯುವಜನತೆಗೆ ಏಡ್ಸ್ ಬಗ್ಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹೇಳಿದರು.
ಡಾ.ಕಿರಣ್ ಕುಮಾರ್ ಏಡ್ಸ್ ರೋಗದ ಕುರಿತಂತೆ ಉಪನ್ಯಾಸ ನೀಡಿದರು. ವಿವಿಧ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳೊಂದಿಗೆ ವಕೀಲರು, ಉಪನ್ಯಾಸಕರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಏಡ್ಸ್ ಜಾಗೃತಿ ಜಾಥಾ ನಡೆಸಿದರು.
ಪ್ರಾಂಶುಪಾಲ ಆನಂದ್, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಎಂ.ಪಾಪಿರೆಡ್ಡಿ, ಸರ್ಕಾರಿ ವಕೀಲ ಶ್ರೀನಿವಾಸ್, ಡಾ.ಕಿರಣ್ ಕುಮಾರ್, ವಕೀಲರಾದ ಬೈರಾರೆಡ್ಡಿ, ಸುಬ್ರಮಣ್ಯಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ರಕ್ತದಾನವೂ ಒಂದು ರೀತಿಯಲ್ಲಿ ದೇಶಸೇವೆಯೇ

0

ದೇಶಸೇವೆಯನ್ನು ಗಡಿಯಲ್ಲಿ ಕಾದಾಡುವ ಯೋಧರ ರೀತಿಯಲ್ಲಿ ಸಾಮಾನ್ಯ ಜನರೂ ಮಾಡಬಹುದು. ರಕ್ತದಾನವೂ ಒಂದು ರೀತಿಯಲ್ಲಿ ದೇಶಸೇವೆಯೇ ಎಂದು ಕ್ಯಾಪ್ಟನ್ ಸುನಿಲ್ಕುಮಾರ್ ತಿಳಿಸಿದರು.
ಪಟ್ಟಣದ ಕ್ರೆಸೆಂಟ್ ವಿದ್ಯಾಸಂಸ್ಥೆಯ ಆವರಣದಲ್ಲಿ ಸೋಮವಾರ ಭಾರತೀಯ ರೆಡ್ಕ್ರಾಸ್ ಸಂಸ್ಥೆ ಹಾಗೂ ಶಾಲಾ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಅವರು ಮಾತನಾಡಿದರು. ಜಗತ್ತಿನ ಎಲ್ಲ ದಾನಗಳಲ್ಲಿ ರಕ್ತದಾನ ಶ್ರೇಷ್ಟವಾದದ್ದು, ಸಕಾಲದಲ್ಲಿ ರೋಗಿಗಳಿಗೆ ಅಗತ್ಯವಿರುವ ರಕ್ತ ದೊರೆತರೆ ಪ್ರಾಣ ಉಳಿಸಲು ಸಹಕಾರಿಯಾಗಲಿದೆ. ಆರೋಗ್ಯ ವಂತರು ಸ್ವಯಂ ಪ್ರೇರಿತರಾಗಿ ರಕ್ತ ದಾನ ಮಾಡಲು ಮುಂದೆ ಬರಬೇಕು ಎಂದು ಹೇಳಿದರು.
ರಕ್ತದಾನ ಶಿಬಿರದಿಂದ ಅನೇಕ ಲಾಭಗಳಿವೆ ಎಂದ ಅವರು, ಬಹಳಷ್ಟು ಕಡೆಗಳಲ್ಲಿ ರಕ್ತ ಸಿಗುವುದಿಲ್ಲ. ಮುಂದೆ ಇಂತಹ ಸಮಸ್ಯೆ ನಮ್ಮ ತಾಲೂಕಿನ ಜನರಿಗೂ ಆಗಬಹುದು. ಆದ್ದರಿಂದ ರಕ್ತದಾನದಂತಹ ಕಾರ್ಯಕ್ರಮವನ್ನು ಆಗಾಗ ಹಮ್ಮಿಕೊಳ್ಳಬೇಕು ಎಂದು ನುಡಿದರು.
ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ಮಾತನಾಡಿ, ರಾಜ್ಯದಲ್ಲೇ ನಮ್ಮ ಜಿಲ್ಲೆಯು ರಕ್ತ ಸಂಗ್ರಹಿಸುವುದರಲ್ಲಿ ಮೊದಲನೇ ಸ್ಥಾನದಲ್ಲಿದೆ. ನಮ್ಮ ಶಿಡ್ಲಘಟ್ಟ ತಾಲ್ಲೂಕು ಜಿಲ್ಲೆಯಲ್ಲೇ ರಕ್ತಸಂಗ್ರಹಿಸುವುದರಲ್ಲಿ ಪ್ರಥಮ ಸ್ಥಾನದಲ್ಲಿದೆ. ಸಾಮಾಜಿಕ ಕಳಕಳಿಯುಳ್ಳ ಮನಸ್ಸುಗಳು ಹಾಗೂ ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ತಾಲ್ಲೂಕು ಪದಾಧಿಕಾರಿಗಳ ಪರಿಶ್ರಮ ಇದರಿಂದ ವ್ಯಕ್ತವಾಗುತ್ತದೆ ಎಂದು ತಿಳಿಸಿದರು.
ಒಟ್ಟು 63 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಕ್ರೆಸೆಂಟ್ ವಿದ್ಯಾಸಂಸ್ಥೆಯ ಕಾರ್ಯದರ್ಶಿ ತಮೀಮ್ಪಾಷ, ರಜಸ್ವ ನಿರೀಕ್ಷಕ ಸುಬ್ರಮಣಿ, ಬೆಸ್ಕಾಂ ಎಂಜಿನಿಯರ್ ಅನ್ಸರ್ಪಾಷ, ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುರುರಾಜರಾವ್, ರೆಡ್ಕ್ರಾಸ್ ಸಂಸ್ಥೆಯ ಡಾ.ರವಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ರಸ್ತೆಯ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ

0

ಕಾಮಗಾರಿಯ ಗುಣಮಟ್ಟದ ಬಗ್ಗೆ ಸ್ಥಳೀಯ ಮುಖಂಡರು ಸೇರಿದಂತೆ ಗ್ರಾಮಸ್ಥರು ನಿಗಾವಹಿಸಬೇಕು ಎಂದು ಶಾಸಕ ಎಂ.ರಾಜಣ್ಣ ಹೇಳಿದರು.
ತಾಲೂಕಿನ ಫಲಿಚೇರ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೋಮನಹಳ್ಳಿ ಗ್ರಾಮದಲ್ಲಿ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯಿಂದ ಸುಮಾರು 50 ಲಕ್ಷ ರೂಗಳ ವೆಚ್ಚದ 05 ಕಿ.ಮೀ ರಸ್ತೆಯ ಮರು ಡಾಂಬರೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶಗಳ ಅಭಿವೃದ್ದಿಗಾಗಿ ಸರಕಾರ ಹೆಚ್ಚಿನ ಆಧ್ಯತೆ ನೀಡುತ್ತಿದ್ದು ಬಿಡುಗಡೆಗೊಳಿಸಿರುವಂತಹ ಅನುಧಾನವನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ಗ್ರಾಮದಲ್ಲಿ ಗುಣಮಟ್ಟದ ಕಾಮಗಾರಿಗಳಾಗುವಂತೆ ನೋಡಿಕೊಳ್ಳುವುದು ಸ್ಥಳೀಯ ಮುಖಂಡರ ಹಾಗು ಗ್ರಾಮಸ್ಥರ ಕರ್ತವ್ಯವಾಗಿರುತ್ತದೆ.
ಹಾಗಾಗಿ ತಮ್ಮ ತಮ್ಮ ಗ್ರಾಮದಲ್ಲಿ ನಡೆಯುವ ಕಾಮಗಾರಿಯ ಗುಣಮಟ್ಟದಲ್ಲಿ ಯಾವುದೇ ರಾಜಿಯಾಗದೇ ಗ್ರಾಮದ ಅಬಿವೃದ್ದಿಗೆ ಎಲ್ಲರೂ ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಕೋಚಿಮುಲ್ ನಿರ್ದೇಶಕ ಬಂಕ್‍ಮುನಿಯಪ್ಪ, ಜೆಡಿಎಸ್ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ರೆಹಮತ್ತುಲ್ಲಾ, ಫಲಿಚೆರ್ಲು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿನ್ನಮಂಗಲ ನರಸಿಂಹಪ್ಪ, ಪಿಡಬ್ಲ್ಯೂಡಿ ಎಇಇ ಜಮೀರ್‍ಪಾಷ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಬೈರಾರೆಡ್ಡಿ, ಮುಖಂಡರಾದ ಜಯರಾಮರೆಡ್ಡಿ, ಮಲ್ಲಪ್ಪ, ಮತ್ತಿತರರು ಹಾಜರಿದ್ದರು.

ತ್ವರಿತಗತಿಯಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವಂತೆ ಒತ್ತಾಯ

0

ಬಯಲುಸೀಮೆ ಪ್ರದೇಶವಾದ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ತ್ವರಿತಗತಿಯಲ್ಲಿ ನೀರಾವರಿ ಯೋಜನೆಗಳನ್ನು ಜಾರಿಗೊಳಿಸುವಂತೆ ವಿಧಾನಸಭಾ ಅಧಿವೇಶನದಲ್ಲಿ ರಾಜ್ಯ ಸರಕಾರದ ಮೇಲೆ ಎರಡೂ ಜಿಲ್ಲೆಗಳ ಶಾಸಕರು ಒಟ್ಟಾಗಿ ಒತ್ತಾಯ ಮಾಡುವುದಾಗಿ ಶಾಸಕ ಎಂ.ರಾಜಣ್ಣ ಹೇಳಿದರು.
ತಾಲ್ಲೂಕಿನ ಅಬ್ಲೂಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಬ್ಲೂಡು, ಚಾಗೆ, ಶೆಟ್ಟಿಹಳ್ಳಿ ಹಾಗು ಜಯಂತಿಗ್ರಾಮಗಳಲ್ಲಿ ಸುಮಾರು 72 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಓವರ್ ಹೆಡ್ ನೀರಿನ ಟ್ಯಾಂಕುಗಳ ನಿರ್ಮಾಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕಳೆದ ಮೂರು ವರ್ಷಗಳಿಂದ ಮಳೆಯಿಲ್ಲದೆ ಬರಗಾಲಕ್ಕೆ ತುತ್ತಾಗಿದ್ದು, ಜನ, ಜಾನುವಾರುಗಳು ಕುಡಿಯುವ ನೀರಿಗೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಹಾಗಾಗಿ ಕೂಡಲೇ ರಾಜ್ಯ ಸರಕಾರ ಎರಡೂ ಜಿಲ್ಲೆಗಳಿಗೆ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಕಲ್ಪಿಸಬೇಕೆಂದರು.
ಸರ್ಕಾರದ ಅನುಧಾನಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಗುಣಮಟ್ಟದ ಕಾಮಗಾರಿಗಳನ್ನು ನಡೆಸಿ ಜನತೆಗೆ ಶುಧ್ದ ಕುಡಿಯುವ ನೀರನ್ನು ಸರಬರಾಜು ಮಾಡುವಲ್ಲಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಆಸಕ್ತಿವಹಿಸಿ ಕೆಲಸ ಮಾಡಬೇಕು ಎಂದರು.
ಸರ್ಕಾರದ ವಿವಿಧ ಜನಪರ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಇದೇ ವೇಳೆಯಲ್ಲಿ ಜಯಂತಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಅಬ್ಲೂಡು ಗ್ರಾಮ ಪಂಚಾಯಿತಿ ವತಿಯಿಂದ ನೂತನವಾಗಿ ಶಾಲೆಯ ವಿಧ್ಯಾರ್ಥಿಗಳಿಗೆ ಕುಡಿಯುವ ನೀರಿಗಾಗಿ ನಿರ್ಮಿಸಲಾಗಿರುವ ನೀರಿನ ಟ್ಯಾಂಕ್ ಉದ್ಘಾಟನೆ ನೆರವೇರಿಸಿದ ಅವರು ಶಾಲೆ ಹಾಗು ಶಾಲೆಯ ಮಕ್ಕಳ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದ ಅವರು ಶಿಕ್ಷಕರನ್ನುದ್ದೇಶಿಸಿ ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಮುಖಾಂತರ ಮುಂದಿನ ಪರೀಕ್ಷೆಯಲ್ಲಿ ಉತ್ತಮವಾದ ಶ್ರೇಣಿಯಲ್ಲಿ ಫಲಿತಾಂಶವನ್ನು ತಂದುಕೊಟ್ಟು ತಾಲ್ಲೂಕಿಗೆ ಹೆಸರುಗಳಿಸಿಕೊಡಬೇಕು ಎಂದರು.
ಸಾರ್ ನಾವು 8ನೇ ತರಗತಿಯಲ್ಲಿ ಓದುತ್ತಿದ್ದು ಈವರೆಗೂ ನಮಗೆ ಉಚಿತ ಸೈಕಲ್ ವಿತರಣೆಯಾಗಿಲ್ಲ ಎಂಬ ವಿದ್ಯಾರ್ಥಿಯ ಪ್ರಶ್ನೆಗೆ ಉತ್ತರಿಸಿದ ಶಾಸಕ ಎಂ.ರಾಜಣ್ಣ ಕೂಡಲೇ ಈ ಬಗ್ಗೆ ಇಆಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಸೈಕಲ್ ನೀಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಇನ್ನು ಶಾಲೆಯ ಸುತ್ತಲೂ ಇರುವ ಮೈಧಾನವನ್ನು ಸಮತಟ್ಟು ಮಾಡಿ ಮಕ್ಕಳಿಗೆ ಆಟವಾಡಲು ಅನುಕೂಲವಾಗುವಂತೆ ಮಾಡಲೂ ಈಗಾಗಲೇ ಈ ಭಾಗದ ಜಿಲ್ಲಾ ಪಂಚಾಯಿತಿ ಸದಸ್ಯರ ಅನುಧಾನದಲ್ಲಿ 4 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಶೀಘ್ರವಾಗಿ ಮೈದಾನದ ಕೆಲಸವನ್ನು ಪ್ರಾರಂಭ ಮಾಡಲಾಗುತ್ತದೆ ಎಂದರು.
ಕೋಚಿಮುಲ್ ನಿರ್ದೇಶಕ ಬಂಕ್‍ಮುನಿಯಪ್ಪ, ಅಬ್ಲೂಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಟಿ.ಕೆ.ನಾರಾಯಣಸ್ವಾಮಿ, ಸದಸ್ಯ ರಮೇಶ್, ಮಾಜಿ ಅಧ್ಯಕ್ಷ ಕೆ.ಎಸ್.ಕನಕಪ್ರಸಾದ್, ಮುಖಂಡರಾದ ಮುನಿವೆಂಕಟಸ್ವಾಮಿ, ಶೆಟ್ಟಿಹಳ್ಳಿಮಂಜುನಾಥ್, ಗುಡಿಹಳ್ಳಿ ಬಚ್ಚರಾಯಪ್ಪ, ಜಯಂತಿಗ್ರಾಮದ ಬೈರೇಗೌಡ, ಕೆಂಪನಹಳ್ಳಿ ಮುನಿರೆಡ್ಡಿ, ಕೆ.ಎಸ್.ದ್ಯಾವಕೃಷ್ಣ, ತಾತಹಳ್ಳಿ ಚಲಪತಿ, ಕೊಂಡಪ್ಪ, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಜಯಶ್ರೀ, ಶಶಿಕುಮಾರ್, ಮತ್ತಿತರರು ಹಾಜರಿದ್ದರು.

ಉಚಿತ ಬರಡು ರಾಸು ಚಿಕಿತ್ಸೆ ಮತ್ತು ಪಶು ಆರೋಗ್ಯ ತಪಾಸಣಾ ಶಿಬಿರ

0

ಶಿಡ್ಲಘಟ್ಟ ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಬುಧವಾರ ಪಶುಸಂಗೋಪನಾ ಇಲಾಖೆ ಮತ್ತು ಕೋಚಿಮುಲ್ ವತಿಯಿಂದ ಪಶು ಚಿಕಿತ್ಸಾಲಯದ ಆವರಣದಲ್ಲಿ ಉಚಿತ ಬರಡು ರಾಸು ಚಿಕಿತ್ಸೆ ಮತ್ತು ಪಶು ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಸಹಾಯಕ ನಿರ್ದೇಶಕ ಡಾ.ಮುನಿನಾರಾಯಣರೆಡ್ಡಿ, ಉಪವ್ಯವಸ್ಥಾಪಕ ಡಾ.ಈಶ್ವರಯ್ಯ ಹಾಜರಿದ್ದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಪ್ರತಿಭಟನೆ

0

ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸುವುದನ್ನು ವಿರೋಧಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಬುಧವಾರ ಪಟ್ಟಣದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ತಾಲ್ಲೂಕು ಈಗಾಗಲೇ ಬರಗಾಲ ಪೀಡಿತವಾಗಿದ್ದು, ರೈತರ ಸಂಕಷ್ಟವನ್ನು ಅರ್ಥ ಮಾಡಿಕೊಳ್ಳದೆ ರೈತರ ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸಲು ಮುಂದಾಗಿದೆ. ಇದರಿಂದಾಗಿ ರೈತರ ಹೊಟ್ಟೆ ಮೇಲೆ ಬರೆ ಎಳೆಯುವಂತಾಗಿದೆ. ಸಮರ್ಪಕ ವಿದ್ಯುತ್ ಇಲ್ಲದಿದ್ದರೂ ಅತ್ಯಲ್ಪ ನೀರಿನಲ್ಲಿ ಬೆಳೆಯನ್ನು ಬೆಳೆಯಲು ರೈತರು ಹರಸಾಹಸ ಪಡುತ್ತಿದ್ದಾರೆ. ಸಾಲದ ಸುಳಿಗೆ ಸಿಲುಕಿರುವ ರೈತರಿಗೆ ತೊಂದರೆ ಕೊಡಬೇಡಿ. ಇಲಾಖೆಯು ಕೃಷಿ ಪಂಪ್ಸೆಟ್ಗಳಿಗೆ ಮೀಟರ್ ಅಳವಡಿಸುವುದನ್ನು ನಿಲ್ಲಿಸದಿದ್ದಲ್ಲಿ ರೈತರು ಬೀದಿಗಿಳಿದು ಉಗ್ರವಾಗಿ ಹೋರಾಡಬೇಕಾಗುತ್ತದೆ ಎಂದು ತಿಳಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದ ರೈತರು ಬೆಸ್ಕಾಂ ಕಚೇರಿಯ ಮುಂದೆ ಧರಣಿ ನಡೆಸಿದರು. ಬೆಸ್ಕಾಂ ಕಾರ್ಯನಿರ್ವಾಹಕ ಸಹಾಯಕ ಎಂಜಿನಿಯರ್ಗೆ ಮನವಿ ಪತ್ರವನ್ನು ನೀಡಿದರು.
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಮುನಿನಂಜಪ್ಪ, ಕೃಷ್ಣಪ್ಪ, ಶ್ರೀರಾಮಪ್ಪ, ನಾಗರಾಜ್, ಅಬ್ಲೂಡು ಆರ್.ದೇವರಾಜ್, ಎಂ.ದೇವರಾಜ್, ಆಂಜನೇಯರೆಡ್ಡಿ, ವೇಣುಗೋಪಾಲ್ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

‘ಕಲಿ–ಕಲಿಸು’ ಮೂಲಕ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಸೃಜನಾತ್ಮಕ ಕಲಿಕೆ

0

ಸೃಜನಾತ್ಮಕವಾಗಿ ಮಕ್ಕಳಿಗೆ ಕಲಿಸುವ ನಿಟ್ಟಿನಲ್ಲಿ ಕಲಿಕಾ ವಿಧಾನಗಳಿಗೆ ಪ್ರೋತ್ಸಾಹ ನೀಡುವ ‘ಕಲಿ–ಕಲಿಸು’ ಎಂಬ ಯೋಜನೆಯ ಉದ್ಘಾಟನೆ ಕನ್ನಮಂಗಲದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ನೆರವೇರಿತು.
ಕಲೆ ಸಂಸ್ಕೃತಿಯ ಬೆಳವಣಿಗೆಗಳಲ್ಲಿ ತೊಡಗಿಸಿಕೊಂಡು ಬಂದಿರುವ ಸಂಸ್ಥೆ ಇಂಡಿಯಾ ಫೌಂಡೇಷನ್ ಫಾರ್ ಆರ್ಟ್ಸ್ (ಐಎಫ್ಎ) ಶಿಕ್ಷಣ ಪದ್ಧತಿಯಲ್ಲಿ ಅಸ್ತಿತ್ವವನ್ನೇ ಕಳೆದುಕೊಳ್ಳುತ್ತಿರುವ ಸೃಜನ ಕಲೆಯನ್ನು ಸಮರ್ಥವಾಗಿ ಬಳಸಿಕೊಳ್ಳುವುದನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಯೋಜನೆಯನ್ನು ರೂಪಿಸಿದೆ.

ಕನ್ನಮಂಗಲ ಸರ್ಕಾರಿ ಶಾಲಾ ಮಕ್ಕಳ ಲೇಖನಗಳು ಹಾಗೂ ಚಿತ್ರಗಳನ್ನು ಒಳಗೊಂಡ ‘ಬೇಲಿಹೂ’ ಎಂಬ ಗೋಡೆ ಪತ್ರಿಕೆ
ಕನ್ನಮಂಗಲ ಸರ್ಕಾರಿ ಶಾಲಾ ಮಕ್ಕಳ ಲೇಖನಗಳು ಹಾಗೂ ಚಿತ್ರಗಳನ್ನು ಒಳಗೊಂಡ ‘ಬೇಲಿಹೂ’ ಎಂಬ ಗೋಡೆ ಪತ್ರಿಕೆ
‘ಸರ್ಕಾರಿ ಶಾಲೆಗಳ ವ್ಯವಸ್ಥೆಯಲ್ಲಿ ಕಲೆಯ ಹಸಿವು ಜಾಸ್ತಿ ಇದೆ. ಒಬ್ಬ ಶಿಕ್ಷಕರ ಅಡಿಯಲ್ಲಿ ಕನಿಷ್ಠ 10 ಪೀಳಿಗೆಯಾದರೂ ಶಿಕ್ಷಣ ಪಡೆದುಕೊಂಡು ಹೋಗುತ್ತದೆ. ಅಲ್ಲದೇ ಅವರಿಗೆ ಸ್ಥಳೀಯ ಸಂಪನ್ಮೂಲಗಳನ್ನು ಶಿಕ್ಷಣದಲ್ಲಿ ಬಳಸಿಕೊಳ್ಳುವ ಬಗ್ಗೆ ಅರಿವು ಮೂಡಿಸಿದರೆ ಮೌಲ್ಯಯುತ ಶಿಕ್ಷಣ ರೂಪುಗೊಳ್ಳುತ್ತದೆ ಎಂಬ ಆಶಯ ನಮ್ಮದು. ಸೃಜನ ಶೀಲ ಬರವಣಿಗೆ ಮತ್ತು ಚಿತ್ರಕಲೆಯ ಮೂಲಕ ಮಕ್ಕಳ ಕಲಿಕೆಯನ್ನು ವೃದ್ಧಿಸುವ ನಿಟ್ಟಿನಲ್ಲಿ ಯೋಜನೆಯನ್ನು ಕನ್ನಮಂಗಲದ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡಿದೆ. ಕಥೆಗಳನ್ನು ಮಕ್ಕಳು ತಮ್ಮದೇ ಆದ ರೀತಿಯಲ್ಲಿ ಮರುರೂಪ ಕೊಡಬಹುದು. ಇಂತಹ ಕಾರ್ಯಗಳಿಂದ ಮಕ್ಕಳ ಕಲ್ಪನಾಶಕ್ತಿಯೂ ಹೆಚ್ಚುತ್ತದೆ’ ಎಂದು ಕಲಿ–ಕಲಿಸು ಯೋಜನೆಯ ಕಾರ್ಯನಿರ್ವಾಹಕಿ ಅನುಪಮಾ ಪ್ರಕಾಶ್ ತಿಳಿಸಿದರು.
ಎರಡನೆಯ ತರಗತಿ ವಿದ್ಯಾರ್ಥಿ ನರಸಿಂಹ ಮೂರ್ತಿ ಚಿತ್ರ ಬರೆಯುವ ಮುಖಾಂತರ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಶಾಲೆಯ ಮಕ್ಕಳು ಗ್ರಂಥಾಲಯದ ಪುಸ್ತಕಗಳನ್ನು ಓದಿ ಅದರ ಬಗ್ಗೆ ಅನಿಸಿಕೆಗಳನ್ನು ಬರೆಯುವ ‘ನಾನು ಓದಿದ ಪುಸ್ತಕ’ ಹಾಗೂ ಶಾಲಾ ಮಕ್ಕಳ ಲೇಖನಗಳು ಹಾಗೂ ಚಿತ್ರಗಳನ್ನು ಒಳಗೊಂಡ ‘ಬೇಲಿಹೂ’ ಎಂಬ ಗೋಡೆ ಪತ್ರಿಕೆಗಳು ಈ ಸಂದರ್ಭದಲ್ಲಿ ಬಿಡುಗಡೆಗೊಂಡವು. ಮಕ್ಕಳೊಂದಿಗೆ ಸಂವಾದ ಮಾಡಿದ ಅತಿಥಿಗಳು ಮಕ್ಕಳು ಕೇಳಿದ ವಿವಿಧ ಪ್ರಶ್ನೆಗಳಿಗೆ ಉತ್ತರ ನೀಡಿದರು.
ಕಡಲು ಪ್ರಕಾಶನದ ಶ್ರೀಧರ್ ಗೌಡ ಮಾತನಾಡಿ, ‘ಅನುವಾದದ ಮುಖಾಂತರ ಬೇರೆ ಭಾಷೆಯ ಪುಸ್ತಕಗಳು ಕನ್ನಡಕ್ಕೆ ಬರುತ್ತಿವೆ ಹಾಗೆಯೇ ಕನ್ನಡದ ಹಲವು ಪುಸ್ತಕಗಳು ಬೇರೆ ಭಾಷೆಗಳಿಗೆ ಅನುವಾದ ಆಗುತಿವೆ. ಕನ್ನಮಂಗಲ ಶಾಲೆಯ ಶಾಮಂತಿ ಕೂಡ ಒಂದು ದಿನ ಇಂಗ್ಲಿಷ್ ಭಾಷೆಗೆ ಅನುವಾದವಾಗಿ ಪ್ರಕಟಣೆಯಾಗಲಿ’ ಎಂದು ಆಶಿಸಿದರು.
ಸ್ನೇಹ ಯುವಕರ ಸಂಘದ ಅಧ್ಯಕ್ಷ ವಸಂತವಲ್ಲಭಕುಮಾರ್, ಐಎಫ್ಎ ಸಂಸ್ಥೆಯ ಕಲಿ-ಕಲಿಸು ಯೋಜನೆಯ ಶಾಲೆಗಳ ಸಂಯೋಜಕ ಬಸವರಾಜು, ನಮ್ಮ ಮೆಟ್ರೊ ರಂಗೋಲಿ ಕಲಾ ಕೇಂದ್ರದ ಕಲಾವಿದೆ ಸುರೇಖಾ, ಯಲಹಂಕದ ಸಮಾಜ ಸೇವಕ ಗೋಪಿನಾಥ್, ಕನ್ನಮಂಗಲ ಸ್ನೇಹ ಯುವಕರ ಸಂಘದ ಕಾರ್ಯದರ್ಶಿ ವಾಸುದೇವ್, ನಾಗರಾಜ್, ಕೇಶವಪ್ಪ, ಶಾಲೆಯ ಮುಖ್ಯ ಶಿಕ್ಷಕ ಎಚ್. ಮುನಿಯಪ್ಪ, ಶಿಕ್ಷಕರಾದ ಕೆ.ಶಿವಶಂಕರ್, ಜೆ.ಶ್ರೀನಿವಾಸ್, ಎಸ್.ಕಲಾಧರ್, ಟಿ.ಜೆ.ಸುನೀತ ಭಾಗವಹಿಸಿದ್ದರು.

ಜನರು ಕುಂಭಕರ್ಣರಾದರೆ ರಾಜ್ಯವು ರಾವಣರಾಜ್ಯವಾಗುತ್ತದೆ

0

ಮೇಲೂರು ಗ್ರಾಮವನ್ನು ವಿವಿಧ ಸಾಹಿತಿ, ಕಲಾವಿದರ ಭಾವಚಿತ್ರಗಳಿಂದ ಸಿಂಗರಿಸಲಾಗಿತ್ತು. ನಾಡಬಾವುಟದ ರಂಗು ಗ್ರಾಮವನ್ನು ಆವರಿಸಿತ್ತು. ಗ್ರಾಮದಲ್ಲಿ ಹಬ್ಬದ ವಾತಾವರಣ ಮೂಡಿತ್ತು. ಶಾಲಾ ವಿದ್ಯಾರ್ಥಿಗಳು ನಾಡ ಬಾವುಟವನ್ನು ಕೈಲಿ ಹಿಡಿದು ತಮ್ಮ ನಾಡಪ್ರೀತಿಯನ್ನು ತೋರುತ್ತಿದ್ದರೆ, ಹಿರಿಯರು ಅರಿಶಿನ ಕುಂಕುಮ ಬಣ್ಣದ ಶಲ್ಯವನ್ನು ಹೊದ್ದು ರಾಜ್ಯೋತ್ಸವದ ಆಚರಣೆಯ ಸಮಭ್ರಮದಲ್ಲಿದ್ದರು.
ತಾಲ್ಲೂಕಿನ ಮೇಲೂರು ಗ್ರಾಮದಲ್ಲಿ ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘ ಮತ್ತು ಕನ್ನಡ ರೈತ ಯುವಕರ ಸಂಘದ ವತಿಯಿಂದ ಮಂಗಳವಾರ 59ನೇ ವರ್ಷದ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಕನ್ನಡ ರಣಧೀರ ಪಡೆಯ ಅಧ್ಯಕ್ಷ ಆರ್.ಎಸ್.ಎನ್.ಗೌಡ ಮೇಲೂರು ಗ್ರಾಮದ ಕೆ.ಚಂಗಲರಾಯರೆಡ್ಡಿ ವೃತ್ತದಲ್ಲಿ ನಾಡಧ್ವಜಾರೋಹಣವನ್ನು ನೆರವೇರಿಸಿದರು.
ಧರ್ಮಪ್ರಕಾಶ್ ವೇದಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಮಾತನಾಡಿ,‘ಜನರು ಕುಂಭಕರ್ಣರಾದರೆ ರಾಜ್ಯವು ರಾವಣರಾಜ್ಯವಾಗುತ್ತದೆ. ಜನರು ನಮ್ಮ ಭೂಮಿ ಕಬಳಿಸುವವರ ವಿರುದ್ಧ ದನಿಎತ್ತಬೇಕು. ಕನ್ನಡ ಉಳಿಸುವುದೆಂದರೆ ನಮ್ಮ ನೆಲಕ್ಕಾಗುವ ಅನ್ಯಾಯವನ್ನು ಖಂಡಿಸುವುದು, ನಮ್ಮ ಜನರಿಗಾಗುವ ತೊಂದರೆಯನ್ನು ಪ್ರತಿಭಟಿಸುವುದು, ಭ್ರಷ್ಟಾಚಾರ ತೊಲಗಿಸುವುದು, ರಾಜ್ಯವನ್ನು ರಾಮರಾಜ್ಯವನ್ನಾಗಿಸುವುದಾಗಿದೆ. ಜನಪ್ತಿನಿಧಿಗಳು ಅನ್ಯಾಯ ಮಾಡಿದರೆ ಪ್ರತಿಭಟಿಸಿ ನಮ್ಮ ಹಕ್ಕನ್ನು ಪಡೆದುಕೊಳ್ಳಬೇಕು’ ಎಂದು ಹೇಳಿದರು.
ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಮಾತನಾಡಿ, ಕನ್ನಡ ಭಾಷೆಗೆ ಅತ್ಯಂತ ಶ್ರೀಮಂತ ಇತಿಹಾಸವಿದ್ದು, ಅದನ್ನು ಇನ್ನಷ್ಟು ಉನ್ನತಕ್ಕೆ ತರಬೇಕಾಗಿದೆ. ಭಾರತ ದೇಶ ಸಮಾನತೆ ಮತ್ತು ಜಾತ್ಯತೀತ ರಾಷ್ಟ್ರವಾಗಿದ್ದು, ಇದರ ಕೀರ್ತಿ ಪತಾಕೆಯನ್ನು ನಮ್ಮ ಮಾತೃಭಾಷೆಯಿಂದ ಎತ್ತಿಹಿಡಿಯಬೇಕು. ನಮ್ಮ ನಡೆ, ನುಡಿ ಎಲ್ಲವೂ ಕನ್ನಡವಾಗಲಿ ಎಂದು ನುಡಿದರು.

ಶಾಲಾ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು
ಶಾಲಾ ವಿದ್ಯಾರ್ಥಿಗಳು ನೃತ್ಯ ಪ್ರದರ್ಶಿಸಿದರು

ರಾಮಕೃಷ್ಣ ಮಠದ ಮಂಗಳಾನಾಥಾನಂದ ಸ್ವಾಮೀಜಿ ಭಕ್ತಿಗೀತೆಗಳನ್ನು ಹಾಡಿ ಕನ್ನಡ ನಾಡು ನುಡಿಯ ಕುರಿತಂತೆ ಆಶೀರ್ವಚನ ನೀಡಿದರು. ಕನ್ನಡ ರಣಧೀರ ಪಡೆಯ ಅಧ್ಯಕ್ಷ ಆರ್.ಎಸ್.ಎನ್.ಗೌಡ, ಸಾಹಿತಿ ಚಟ್ನಳ್ಳಿ ಮಹೇಶ್, ಕೆನರಾ ಬ್ಯಾಂಕ್ ಗ್ರಾಮಾಂತರ ವೃತ್ತದ ಉಪಮಹಾಪ್ರಬಂಧಕ ಎಂ.ಎಂ.ಚಿನಿವಾರ್, ಕನ್ನಡ ಪ್ರಾಧ್ಯಾಪಕ ಎಚ್.ಜಿ.ಶ್ರೀನಿವಾಸ ಪ್ರಸಾದ್ ಮಾತನಾಡಿದರು.
ವಿವಿಧ ಶಾಲಾ ವಿದ್ಯಾರ್ಥಿಗಳು ಕನ್ನಡ ನಾಡಿನ ಕುರಿತ ಗೀತೆಗಳಿಗೆ ನೃತ್ಯವನ್ನು ಹಾಗೂ ಕಿತ್ತೂರು ಚನ್ನಮ್ಮ ನಾಟಕವನ್ನು ಪ್ರದರ್ಶಿಸಿದರು.
ವನ್ಯಜೀವಿ ಛಾಯಾಗ್ರಾಹಕ ಡಿ.ಜಿ.ಮಲ್ಲಿಕಾರ್ಜುನ ಅವರಿಗೆ ಸನ್ಮಾನ
ವನ್ಯಜೀವಿ ಛಾಯಾಗ್ರಾಹಕ ಡಿ.ಜಿ.ಮಲ್ಲಿಕಾರ್ಜುನ ಅವರಿಗೆ ಸನ್ಮಾನ

ಈ ಸಂದರ್ಭದಲ್ಲಿ ಮೇಲೂರಿನ ಹಿರಿಯ ಶ್ರಮ ಜೀವಿ ಚಾಂದ್ಪಾಷ, ಕನ್ನಡದ ಕಟ್ಟಾಳು ಹಾಗೂ ಪ್ರಕಾಶಕ ವೆಂಕಟೇಶಮೂರ್ತಿ ಮತ್ತು ವನ್ಯಜೀವಿ ಛಾಯಾಗ್ರಾಹಕ ಡಿ.ಜಿ.ಮಲ್ಲಿಕಾರ್ಜುನ ಅವರನ್ನು ಸನ್ಮಾನಿಸಲಾಯಿತು.
ಮೇಲೂರು ಸುಧೀರ್, ಸುದರ್ಶನ್, ಧರ್ಮೇಂದ್ರ, ಆರ್.ಎ.ಉಮೇಶ್, ಕೆ.ಮಂಜುನಾಥ್, ಎಚ್.ಟಿ.ನಾರಾಯಣಸ್ವಾಮಿ, ಶ್ರೀನಿವಾಸ್, ಗೋಪಾಲ್, ಆನಂದ್, ಶ್ರೀಧರ್, ಕೆ.ಎಸ್.ಮಂಜುನಾಥ್, ಎಂ.ಮುನಿಕೃಷ್ಣ, ಎಂ.ಜೆ.ಶ್ರೀನಿವಾಸ್, ಶ್ರೀನಿವಾಸ್(ಪುಲಿ) ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಸ್ನೇಹ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ

0

ಅಖಂಡ ಕರ್ನಾಟಕದ ನಾಡು, ನುಡಿ, ಭಾಷೆ, ಕಲೆ, ಸಂಸ್ಕೃತಿಗಳ ಉಳಿವಿಗಾಗಿ ಎಲ್ಲಾ ಸಂಘಟನೆಗಳು ಸೇರಿದಂತೆ ಪ್ರತಿಯೊಬ್ಬ ಕನ್ನಡಿಗನೂ ಶ್ರಮವಹಿಸಬೇಕು ಎಂದು ಕನ್ನಡಪರ ಹೋರಾಟಗಾರ ಖ.ರಾ.ಖಂಡೇರಾವ್ ಹೇಳಿದರು.
ಪಟ್ಟಣದ ಹಳೇ ಅಂಚೆ ಕಚೇರಿ ರಸ್ತೆ ವೃತ್ತದಲ್ಲಿ ಪಟ್ಟಣದ ಸ್ನೇಹ ಯುವಕರ ಸಂಘದ ವತಿಯಿಂದ ಸೋಮವಾರ ಏರ್ಪಡಿಸಲಾಗಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ನಾಡಿನ ನೆಲ, ಜಲ, ಭಾಷೆಯ ವಿಷಯದಲ್ಲಿ ರಾಜ್ಯದ ಎಲ್ಲಾ ಸಂಘಟನೆಗಳು ಒಂದಾಗಿ ದುಡಿಯಬೇಕು ಎಂದ ಅವರು ಕನ್ನಡ ರಾಜ್ಯೋತ್ಸವವನ್ನು ಕೇವಲ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತಗೊಳಿಸದೇ ವರ್ಷದುದ್ದಕ್ಕೂ ಆಚರಿಸುವಂತಾಗಬೇಕು. ಆಂಧ್ರಪ್ರದೇಶದ ಗಡಿ ಬಾಗದಲ್ಲಿರುವ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿನ ಮಕ್ಕಳಲ್ಲಿ ಕನ್ನಡ ಭಾಷೆಯ ಸೊಂಪನ್ನು ಬೆಳಸಲು ಮಕ್ಕಳ ಪೋಷಕರು ಸೇರಿದಂತೆ ಶಿಕ್ಷಕರು ಹೆಚ್ಚಿನ ಶ್ರಮವಹಿಸಬೇಕೆಂದರು.
ಸ್ನೇಹ ಯುವಕರ ಸಂಘದ ಎನ್.ಭರತ್, ಶ್ರೀನಿವಾಸ್, ಡಿ.ವಿ.ವೆಂಕಟೇಶ್, ಮಂಜುನಾಥ್, ಮುನಿರಾಜು, ಜೆ.ವಿ.ವೆಂಕಟಸ್ವಾಮಿ. ಅಪ್ಪೇಗೌಡನಹಳ್ಳಿ ತ್ಯಾಗರಾಜ್, ಸುನಿಲ್, ಗೋಪಿನಾಥ್, ನವೀನ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬೆಳ್ಳೂಟಿಯಲ್ಲಿ ರಾಜ್ಯೋತ್ಸವ, ರಕ್ತದಾನ ಶಿಬಿರ, ಅಂಗವಿಕಲರಿಗೆ ವೀಲ್ ಚೇರ್ ವಿತರಣೆ

0

ಕನ್ನಡ ರಾಜ್ಯೋತ್ಸವವನ್ನು ಕೇವಲ ಸಾಂಕೇತಿಕವಾಗಿ ಆಚರಿಸದೇ ರಕ್ತದಾನ ಮಾಡುತ್ತಾ ಯುವಕರು ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ ಎಂದು ತಹಶಿಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ಬೆಳ್ಳೂಟಿ ಗ್ರಾಮದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ರೆಡ್ಕ್ರಾಸ್ ಸಂಸ್ಥೆಯು ರಕ್ತನಿಧಿಯನ್ನು ಸ್ಥಾಪಿಸಿ ವಿವಿದೆಡೆ ರಕ್ತದಾನ ಶಿಬಿರವನ್ನು ನಡೆಸುತ್ತಿದೆ. ಅದರ ಆಜೀವ ಸದಸ್ಯರಾಗುವ ಮೂಲಕ ಹಾಗೂ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವ ಮೂಲಕ ಸಮಾಜಕ್ಕೆ, ಗಾಯಾಳುಗಳಿಗೆ ಸಹಾಯ ಮಾಡಬೇಕೆಂದು ಹೇಳಿದರು.
ಈ ಸಂದರ್ಭದಲ್ಲಿ ಬೆಳ್ಳೂಟಿಯ ಭಾರತಾಂಬೆ ಕನ್ನಡ ಯುವಕರ ಸಂಘದ ವತಿಯಿಂದ ಅಂಗವಿಕಲೆ ಚೌಡಸಂದ್ರ ರೂಪಾ ಹಾಗೂ ಬೆಳ್ಳೂಟಿ ಗ್ರಾಮದ ಮಹಿಳೆಯೊಬ್ಬರಿಗೆ ವೀಲ್ ಚೇರ್ಗಳನ್ನು ನೀಡಿದರು. ರಕ್ತದಾನ ಶಿಬಿರದಲ್ಲಿ 41 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಬೆಳ್ಳೂಟಿ ಗ್ರಾಮದ ಸರ್ಕಾರಿ ಶಾಲಾ ಆವರಣದಲ್ಲಿ ನಾಡ ಧ್ವಜಾರೋಹಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳಿಂದ ನಾಡ ಗೀತೆ ಹಾಡಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಶಾಸಕ ಎಂ.ರಾಜಣ್ಣ, ಕೋಚಿಮುಲ್ ನಿರ್ದೇಶಕ ಮುನಿಯಪ್ಪ, ಪಿ.ವಿ.ನಾಗರಾಜ್, ಖಂಡೇರಾವ್, ಗುರುರಾಜರಾವ್, ಚಂದ್ರಪ್ಪ, ಮಾರಪ್ಪ, ವೆಂಕಟಸ್ವಾಮಿ, ಮುರಳಿ, ತ್ಯಾಗರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಮಳಮಾಚನಹಳ್ಳಿ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವ

0

ಕನ್ನಡದ ಹೆಸರಿನಲ್ಲಿ ಹಲವಾರು ಸಂಘಟನೆಗಳು ಹುಟ್ಟಿಕೊಳ್ಳುತ್ತಿವೆ. ಆದರೆ ಕನ್ನಡಿಗರ ಆಶೋತ್ತರಗಳನ್ನು ಎಷ್ಟು ಸಂಘಟನೆಗಳು ಈಡೇರಿಸಲು ಸಫಲವಾಗಿವೆ ಎಂದು ಆತ್ಮಾವಲೋಕನೆ ಮಾಡಿಕೊಳ್ಳಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ದಾ.ಪಿ.ಆಂಜಿನಪ್ಪ ತಿಳಿಸಿದರು.
ತಾಲ್ಲೂಕಿನ ಮಳಮಾಚನಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಾಲ್ಕನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳು ಬೆಂಗಳೂರು ಮಹಾನಗರವನ್ನು ಮೂರು ಭಾಗಗಳನ್ನಾಗಿ ಮಾಡಲು ಹೊರಟಿದ್ದಾರೆ. ಒಂದು ಭಾಗ ತಮಿಳರಿಗೆ, ಮತ್ತೊಂದು ತೆಲುಗರಿಗೆ ಹಾಗೂ ಉಳಿದೊಂದು ಭಾಗವನ್ನು ಮರಾಠಿಗರಿಗೆ ಕೊಟ್ಟು ಕೊನೆಗೆ ಕನ್ನಡಿಗರನ್ನು ಹೊರಸಾಗಿಸುವ ಪರಿಸ್ಥಿತಿ ತಂದೊಡ್ಡುತ್ತಿದ್ದಾರೆ. ಭಾಷೆ ಅಳಿದರೆ ನಮ್ಮ ಉಸಿರು ನಿಂತಂತೆ. ಸಂಸ್ಕೃತಿ ಅಳಿದಂತೆ. ನಮ್ಮ ಆಲೋಚನಾ ಕ್ರಮವನ್ನು ಬೇರೆ ಭಾಷೆ ನಿಯಂತ್ರಿಸಬಾರದು. ಕರ್ನಾಟಕ ರಕ್ಷಣಾ ವೇದಿಕೆ ಕನ್ನಡ ಉಳಿವಿಗಾಗಿ ಕಂಕಣಬದ್ಧವಾಗಿದೆ. ಸರ್ಕಾರದ ಕನ್ನಡದ ವಿರೋಧಿನೀತಿಯನ್ನು ಖಂಡಿಸುತ್ತೇವೆ ಎಂದು ಹೇಳಿದರು.
ಶಾಸಕ ಎಂ.ರಾಜಣ್ಣ ಮಾತನಾಡಿ, ಯುವಕರು ಕನ್ನಡಿಗರ ಸಮಸ್ಯೆಗಳನ್ನು ಬಗೆ ಹರಿಸುವ ನಿಟ್ಟಿನಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ಗ್ರಾಮದ ಕನ್ನಡದಲ್ಲಿ ಹೆಚ್ಚು ಅಂಕಗಳಿಸಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ನಗದು ಬಹುಮಾನ ವಿತರಿಸಿದರು. ರಕ್ತದಾನ ಶಿಬಿರವನ್ನು ನಡೆಸಲಾಯಿತು. ರಸಸಂಜೆಯನ್ನು ರಾತ್ರಿ ಆಯೋಜಿಸಲಾಗಿತ್ತು.
ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಆರ್.ಶ್ರೀನಿವಾಸ್, ಕ.ರ.ವೇ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್, ಮಳಮಾಚನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಬಿ.ಬೈರೇಗೌಡ, ಡಿ.ಲಕ್ಷ್ಮಯ್ಯ, ಬಿ.ಎನ್.ಕೃಷ್ಣಯ್ಯ, ಎಂ.ಸಿ.ಜಗದೀಶ್, ಮೇಲೂರು ಉಮೇಶ್, ಎಂ.ಕೆ.ರಾಜಶೇಖರ್, ಎಂ.ಎಲ್.ಮುನೇಗೌಡ, ಎಂ.ದೇವರಾಜು, ಮಳಮಾಚನಹಳ್ಳಿಯ ಕ.ರ.ವೇ ಗೌರವಾಧ್ಯಕ್ಷ ಎಂ.ಜೆ.ಪ್ರವೀಣ್ ಕುಮಾರ್, ಅಧ್ಯಕ್ಷ ಎಂ.ಗಯನ್ಗೌಡ, ಮುನಿರಾಜು ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ತಾಲ್ಲೂಕಿನ ಎನ್.ಶ್ಯಾಮಲ ಅವರಿಗೆ ಯುವ ರೈತ ಮಹಿಳೆ ಪ್ರಶಸ್ತಿ

0

ತಾಲ್ಲೂಕಿನ ಶೀಗೇಹಳ್ಳಿ ಗ್ರಾಮದ ಎನ್.ಶ್ಯಾಮಲ ಅವರಿಗೆ ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ತಾಲ್ಲೂಕು ಮಟ್ಟದ ಪ್ರಗತಿಶೀಲ ಯುವ ರೈತ ಮಹಿಳೆ ಪ್ರಶಸ್ತಿಯನ್ನು ನೀಡಿದ್ದಾರೆ.
ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಕೃಷಿ ಮೇಳದಲ್ಲಿ ಕೇಂದ್ರ ಸಚಿವರಾದ ಡಿ.ವಿ.ಸದಾನಂದಗೌಡ ಮತ್ತು ಅನಂತಕುಮಾರ್, ವಿಧಾನಪರಿಷತ್ ಸದಸ್ಯ ರಾಮಚಂದ್ರಗೌಡ ಪ್ರಶಸ್ತಿ ಮತ್ತು ನಗದು ಬಹುಮಾನ ನೀಡಿ ಗೌರವಿಸಿದ್ದಾರೆ.
ಸಾವಯವ ಕೃಷಿಯಲ್ಲಿ ರೇಷ್ಮೆ , ರಾಗಿ, ಅವರೆ, ಜೋಳ, ತರಕಾರಿ ಬೆಳೆಗಳನ್ನು ಬೆಳೆಯುತ್ತಿರುವ ಶೀಗೇಹಳ್ಳಿ ಗ್ರಾಮದ ಎನ್.ಶ್ಯಾಮಲ, ಹಸು, ಎಮ್ಮೆ, ಕುರಿ, ಕೋಳಿ ಮುಂತಾದ ಪ್ರಾಣಿಗಳನ್ನೂ ಸಾಕಿದ್ದಾರೆ. ತ್ಯಾಜ್ಯದಿಂದ ಎಳೆಹುಳು ಗೊಬ್ಬರವನ್ನು ತಯಾರಿಸುತ್ತಾರೆ. ಗೋಬರ್ ಗ್ಯಾಸ್ನಿಂದ ಅಡುಗೆ ಮಾಡುತ್ತಾರೆ. ಕೃಷಿ ಮೇಳ, ಬೆಳೆ ಕ್ಷೇತ್ರೋತ್ಸವ, ಪ್ರಗತಿಪರ ರೈತರ ತೋಟಗಳಿಗೆ ಭೇಟಿ ನೀಡಿ ಪಡೆದ ಜ್ಞಾನವನ್ನು ಅಳವಡಿಸಿಕೊಂಡು ಆರ್ಥಿಕ ಪ್ರಗತಿಯನ್ನು ಕಂಡುಕೊಂಡಿದ್ದಾರೆ.

ಎಲ್ಲಾ ಜಾತಿ–ಧರ್ಮದಲ್ಲೂ ಪ್ರತಿಭಾವಂತರು

0

ಪ್ರತಿಭಾವಂತರು ಮತ್ತು ಸಾಧಕರು ಪ್ರತಿಯೊಂದು ಜಾತಿ–ಧರ್ಮದಲ್ಲಿದ್ದು, ಪ್ರತಿಭೆ ಎಂಬುದು ಯಾರೊಬ್ಬರ ಅಥವಾ ಜಾತಿಯೊಂದರ ಸ್ವತ್ತಲ್ಲ. ವಿಪ್ರ ಸಮುದಾಯದ ಪ್ರತಿಭಾವಂತರನ್ನು ಮಾತ್ರವನ್ನು ಪರಿಗಣಿಸದೇ ಎಲ್ಲಾ ಜಾತಿ–ಧರ್ಮದಲ್ಲಿನ ಪ್ರತಿಭಾವಂತರು ಮತ್ತು ಸಾಧಕರನ್ನು ಗುರುತಿಸಿ ಪ್ರೋತ್ಸಾಹಿಸಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಬೇಕು ಎಂದು ಇನ್ಫೊಸಿಸ್ ಸಂಸ್ಥಾಪಕ ಎನ್‌.ಆರ್‌.ನಾರಾಯಣಮೂರ್ತಿಯವರ ಪತ್ನಿ ಮತ್ತು ಸಾಹಿತಿ ಸುಧಾಮೂರ್ತಿ ತಿಳಿಸಿದರು.

ಶಿಡ್ಲಘಟ್ಟದಲ್ಲಿ ಭಾನುವಾರ ಇನ್ಫೊಸಿಸ್‌ ಸಂಸ್ಥೆ ಸಂಸ್ಥಾಪಕ ಎನ್‌.ಆರ್‌.ನಾರಾಯಣಮೂರ್ತಿಯವರು ಸನ್ಮಾನಿಸುವ ಮುನ್ನ ಅಂತರ್‌ರಾಷ್ಟ್ರೀಯ ಸಂಬಂಧಗಳ ತಜ್ಞ ಡಾ. ಕೃಷ್ಣಮೂರ್ತಿ ವೆಂಕಟರಾಮ ಅವರಿಗೆ ನಮಸ್ಕರಿಸಿ ಗೌರವ ಸಲ್ಲಿಸಿದರು.
ಶಿಡ್ಲಘಟ್ಟದಲ್ಲಿ ಭಾನುವಾರ ಇನ್ಫೊಸಿಸ್‌ ಸಂಸ್ಥೆ ಸಂಸ್ಥಾಪಕ ಎನ್‌.ಆರ್‌.ನಾರಾಯಣಮೂರ್ತಿಯವರು ಸನ್ಮಾನಿಸುವ ಮುನ್ನ ಅಂತರ್‌ರಾಷ್ಟ್ರೀಯ ಸಂಬಂಧಗಳ ತಜ್ಞ ಡಾ. ಕೃಷ್ಣಮೂರ್ತಿ ವೆಂಕಟರಾಮ ಅವರಿಗೆ ನಮಸ್ಕರಿಸಿ ಗೌರವ ಸಲ್ಲಿಸಿದರು.

ಪಟ್ಟಣದಲ್ಲಿ ಭಾನುವಾರ ನಡೆದ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಿದ ಬಳಿಕ ಮಾತನಾಡಿದ ಅವರು, ಪ್ರತಿಭಾವಂತರನ್ನು ಹೊಂದಿರುವ ವಿಪ್ರ ಸಮುದಾಯವೊಂದೇ ಶ್ರೇಷ್ಠ ಎಂಬ ಭಾವನೆಯಿಂದ ಹೊರಬರಬೇಕು. ಯಾವುದೇ ಜಾತಿ ಅಥವಾ ಸಮುದಾಯದಲ್ಲಿ ಪ್ರತಿಭಾವಂತರಿದ್ದರೂ ಅವರನ್ನು ಸಹ ಕರೆದು ಪ್ರತಿಭಾ ಪುರಸ್ಕಾರ ಪ್ರದಾನ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಶಿಡ್ಲಘಟ್ಟದಲ್ಲಿ ಭಾನುವಾರ ಇನ್ಫೊಸಿಸ್‌ ಸಂಸ್ಥೆ ಸಂಸ್ಥಾಪಕ ಎನ್‌.ಆರ್‌.ನಾರಾಯಣಮೂರ್ತಿಯವರಿಂದ ಸನ್ಮಾನ ಸ್ವೀಕರಿಸಿದ ಬಳಿಕ ವ್ಯಂಗ್ಯಚಿತ್ರಕಾರ ಬಿ.ವಿ.ಪಾಂಡುರಂಗರಾವ್‌ ಅವರು ವ್ಯಂಗ್ಯಚಿತ್ರ ಪ್ರದರ್ಶಿಸಿದರು.
ಶಿಡ್ಲಘಟ್ಟದಲ್ಲಿ ಭಾನುವಾರ ಇನ್ಫೊಸಿಸ್‌ ಸಂಸ್ಥೆ ಸಂಸ್ಥಾಪಕ ಎನ್‌.ಆರ್‌.ನಾರಾಯಣಮೂರ್ತಿಯವರಿಂದ ಸನ್ಮಾನ ಸ್ವೀಕರಿಸಿದ ಬಳಿಕ ವ್ಯಂಗ್ಯಚಿತ್ರಕಾರ ಬಿ.ವಿ.ಪಾಂಡುರಂಗರಾವ್‌ ಅವರು ವ್ಯಂಗ್ಯಚಿತ್ರ ಪ್ರದರ್ಶಿಸಿದರು.

ಎಲ್ಲಾ ಜಾತಿ–ಧರ್ಮದವರನ್ನು ಪ್ರತಿಭಾ ಪುರಸ್ಕಾರ ಮಾಡಲೆಂದೇ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್‌ಗೆ ₨ 10 ಲಕ್ಷ ನೀಡುತ್ತೇವೆ. ಪ್ರತಿಭಾವಂತರನ್ನು ಗುರುತಿಸಿ ಪ್ರೋತ್ಸಾಹಿಸುವಂತಹ ಕಾರ್ಯ ನಿರಾತಂಕವಾಗಿ ಮುಂದುವರೆಯಲಿ ಎಂದು ಅವರು ತಿಳಿಸಿದರು.
ಶಾಲೆಗಳಿಗೆ ಕೊಠಡಿ, ಶೌಚಾಲಯ ಸೌಲಭ್ಯ
ತಾಲ್ಲೂಕಿನ ನಡಿಪಿನಾಯಕನಹಳ್ಳಿಯಲ್ಲಿನ ಅನುದಾನಿತ ಶಾಲೆಗೆ 8 ಕೊಠಡಿಗಳನ್ನು ಇನ್ಫೊಸಿಸ್‌ ಪ್ರತಿಷ್ಠಾನದ ವತಿಯಿಂದ ನಿರ್ಮಿಸಲಾಗುವುದು ಮತ್ತು ಅಗತ್ಯ ಸೌಕರ್ಯ ಕಲ್ಪಿಸಲಾಗುವುದು ಎಂದು ಇನ್ಫೊಸಿಸ್‌ ಸಂಸ್ಥಾಪಕ ಎನ್‌.ಆರ್‌.ನಾರಾಯಣಮೂರ್ತಿ ತಿಳಿಸಿದರು.
ತಮ್ಮ ತಾಯಿಯ ಸ್ವಗ್ರಾಮವಾದ ನಡಿಪಿನಾಯಕನಹಳ್ಳಿಗೆ ಭಾನುವಾರ ಭೇಟಿ ನೀಡಿದ ಸಂದರ್ಭದಲ್ಲಿ ಸಂಬಂಧಿ ಎನ್.ಕೆ.ಗುರುರಾಜರಾವ್‌ಗೆ ಈ ವಿಷಯ ತಿಳಿಸಿದ ಅವರು, ಇನ್ಫೊಸಿಸ್‌ ಪ್ರತಿಷ್ಠಾನದಿಂದ ಹಣ ನೀಡುವುದರ ಬದಲು ಕೊಠಡಿಯನ್ನೇ ನಿರ್ಮಿಸಿಕೊಡುತ್ತೇವೆ ಎಂದರು.
ನಂತರ ಶಾಸಕ ಎಂ.ರಾಜಣ್ಣ ಜೊತೆಗೆ ಮಾತನಾಡಿದ ನಾರಾಯಣಮೂರ್ತಿಯವರು ಶೌಚಾಲಯದ ಕೊರತೆ ಎದುರಿಸುತ್ತಿರುವ ತಾಲ್ಲೂಕಿನ ಸರ್ಕಾರಿ ಶಾಲೆಗಳ ಪಟ್ಟಿ ನೀಡಲು ಹೇಳಿದರು. ಕೊರತೆಯನ್ನು ಪರಿಶೀಸಿಲಿ, ಶೌಚಾಲಯ ಸೌಲಭ್ಯ ಕಲ್ಪಿಸಲು ಪ್ರಯತ್ನಿಸುತ್ತೇನೆ ಎಂದು ಅವರು ತಿಳಿಸಿದರು.

ಶ್ರದ್ಧೆ, ಬದ್ಧತೆ, ಆತ್ಮವಿಶ್ವಾಸ, ಪರಿಶ್ರಮ ಮತ್ತು ನಿಶ್ಚಿತ ಗುರಿಯಿದ್ದಲ್ಲಿ ಯಶಸ್ಸು ಸಾಧ್ಯ

0

ಶ್ರದ್ಧೆ, ಬದ್ಧತೆ, ಆತ್ಮವಿಶ್ವಾಸ, ಪರಿಶ್ರಮ ಮತ್ತು ನಿಶ್ಚಿತ ಗುರಿಯಿದ್ದಲ್ಲಿ ಮಾತ್ರವೇ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯವಾಗಲಿದ್ದು, ಈ ಎಲ್ಲಾ ಅಂಶಗಳನ್ನು ಜೀವನಪರ್ಯಂತ ಯಾವುದೇ ಕಾರಣಕ್ಕೂ ಮರೆಯಬಾರದು ಎಂದು ಇನ್ಫೊಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ತಿಳಿಸಿದರು.
ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ವತಿಯಿಂದ ಭಾನುವಾರ ಪಟ್ಟಣದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಸುಮಾರು 10 ನಿಮಿಷಗಳ ಕಾಲ ಮಕ್ಕಳೊಂದಿಗೆ ಸಂವಾದ ನಡೆಸಿದ ಅವರು, ‘ನನ್ನ ಯಶಸ್ವಿ ಜೀವನಕ್ಕೆ ಈ ಎಲ್ಲಾ ಅಂಶಗಳೇ ಪ್ರಮುಖ ಕಾರಣ’ ಎಂದರು.
ವಿದ್ಯಾರ್ಥಿನಿ ಸ್ನೇಹಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಶಿಡ್ಲಘಟ್ಟದ ಪುಟ್ಟ ಗ್ರಾಮದಿಂದ ಆರಂಭಗೊಂಡ ನನ್ನ ಪಯಣ ಈಗ ಅಂತರ್ರಾಷ್ಟ್ರೀಯ ಮಟ್ಟಕ್ಕೆ ತಲುಪಿದೆ. ಯಾವುದೇ ಪ್ರದೇಶ ಅಥವಾ ಜಾತಿಗೆ ಸೇರಿದ್ದರೂ ಯಾರು ಬೇಕಾದರೂ ವಿಶಿಷ್ಟ ಸಾಧನೆ ಮಾಡಬಹುದು. ದೃಢವಾದ ಗುರಿಯಿರಬೇಕು ಎಂದರು.
ವಿದ್ಯಾರ್ಥಿ ಸ್ವರೂಪ್ ಪ್ರಶ್ನೆಗೆ ಪ್ರತಿಕಿ್ರಯಿಸಿದ ಅವರು, ಇನ್ಫೊಸಿಸ್ ಸಂಸ್ಥೆ ಕಟ್ಟಲು ಅಗತ್ಯವಿದ್ದ ತಂಡವನ್ನು ಕಟ್ಟುವಾಗ ಜಾತಿ, ಧರ್ಮ, ಮತ ಮುಂತಾದವು ಕಡೆ ಗಮನಹರಿಸಲಿಲ್ಲ. ಕೆಲಸ ಮಾಡಲು ಉತ್ಸಾಹಿ ಸಹೋದ್ಯೋಗಿಗಳನ್ನು ಆಯ್ಕೆ ಮಾಡಿಕೊಂಡೆ. ಅವರಲ್ಲಿ ಒಬ್ಬರು ತಂತ್ರಜ್ಞಾನ ಪರಿಣತಿ ಗಳಿಸಿದ್ದರೆ, ಮತ್ತೊಬ್ಬರು ಹಣಕಾಸು ವಿಚಾರದಲ್ಲಿ ತಜ್ಞರಾಗಿದ್ದರು. ವಿಜ್ಞಾನ, ತಂತ್ರಜ್ಞಾನ ಮತ್ತು ಕೌಶಲ್ಯದ ಜ್ಞಾನಕ್ಕೆ ಪ್ರಥಮ ಆದ್ಯತೆ ನೀಡಿದೆ. ಸಂಸ್ಥೆಗೆ ಇವೆಲ್ಲವೂ ಬಲ ತುಂಬಿದವು ಎಂದರು.
ವಿದ್ಯಾರ್ಥಿನಿ ಚಂದನಾ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ಅವರು, ದೇಶದಿಂದ ಭ್ರಷ್ಟಾಚಾರ ತೊಲಗಿಸಲು ಸಾರ್ವಜನಿಕರು ದೃಢವಾದ ನಿಲುವು ತಳೆಯಬೇಕು. ಲಂಚ ತೆಗೆದುಕೊಳ್ಳದೇ ಮತ್ತು ನೀಡದೇ ಕೆಲಸ ಮಾಡಿಸಿಕೊಳ್ಳುವ, ಪ್ರಾಮಾಣಿಕತೆಯಿಂದ ದುಡಿಯುವ ಮನಸ್ಸಿದ್ದಲ್ಲಿ ಭ್ರಷ್ಟಾಚಾರ ನಿವಾರಿಸಬಹುದು ಎಂದರು.
ದೇಶ ಅಭಿವೃದ್ಧಿ ಪಥದಲ್ಲಿ ಮುಂದೆ ಸಾಗಲು ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಬೇಕು. ಉನ್ನತ ಶಿಕ್ಷಣವಿದ್ದಲ್ಲಿ ಮತ್ತು ಹೆಚ್ಚಿನ ಸಂಶೋಧನೆ ಮಾಡಿದ್ದಲ್ಲಿ ಯಶಸ್ಸಿನ ಪಥದಲ್ಲಿ ಖಂಡಿತವಾಗಿಯೂ ನಿರಾತಂಕವಾಗಿ ಮುಂದುವರೆಯಬಹುದು. ಸಂಶಯಪಡುವ ಅಗತ್ಯವೇ ಇಲ್ಲ ಎಂದರು. ಎನ್.ಆರ್.ನಾರಾಯಣಮೂರ್ತಿ ಅವರ ಪತ್ನಿ ಸುಧಾ ಮೂರ್ತಿ ಮತ್ತು ಶಾಸಕ ಎಂ.ರಾಜಣ್ಣ ಉಪಸ್ಥಿತರಿದ್ದರು.

ತಾಲ್ಲೂಕಿನ ಅಭಿವೃದ್ಧಿಗೆ ನಾರಾಯಣಮೂರ್ತಿಗೆ ಮನವಿ

0

ಹಲವು ವರ್ಷಗಳ ಬಳಿಕ ತಾಲ್ಲೂಕಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಇನ್ಫೊಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಅವರಿಗೆ ಭಾನುವಾರ ತಾಲ್ಲೂಕಿನ ಅಭಿವೃದ್ಧಿಗೆ ಸಂಬಂಧಿಸಿದಂತೆ ಮನವಿಪತ್ರ ಸಲ್ಲಿಸಲಾಯಿತು. ಪಟ್ಟಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ತಾಲ್ಲೂಕಿನ ಜನರ ಪರವಾಗಿ ಮನವಿಪತ್ರ ನೀಡಿದ ಶಾಸಕ ಎಂ.ರಾಜಣ್ಣ ಅವರು ಜನರ ಆಶಯ ಈಡೇರಿಸುವಂತೆ ಕೋರಿದರು.
ಹುಟ್ಟೂರು ಎಂಬ ಅಭಿಮಾನದೊಂದಿಗೆ ತಾಲ್ಲೂಕಿನಲ್ಲಿ ಅಂತರ್ರಾಷ್ಟ್ರೀಯ ಮಟ್ಟದ ಬೃಹತ್ ಇನ್ಫೊಸಿಸ್ ಸಭಾಂಗಣ ಇಲ್ಲವೇ ಕಲಾಭವನ ನಿರ್ಮಿಸಬೇಕು. ತಾಲ್ಲೂಕಿನ ಜನರಿಗೆ ಉದ್ಯೋಗಾವಕಾಶ ಮತ್ತು ಮಾರ್ಗದರ್ಶನ ನೀಡಬಲ್ಲ ಉನ್ನತ ಮಟ್ಟದ ಇನ್ಫೊಸಿಸ್ ಕೌಶಲಾ್ಯಾಭಿವೃದ್ಧಿ ತರಬೇತಿ ಸಂಸ್ಥೆ ಸ್ಥಾಪಿಸಬೇಕು. ಇನ್ಫೊಸಿಸ್ ಸಂಸ್ಥೆಯನ್ನು ಇಲ್ಲಿ ಸ್ಥಾಪಿಸುವ ಮೂಲಕ ಸ್ಥಳೀಯರಿಗೆ ಉದ್ಯೋಗಾವಕಾಶ ಮತ್ತು ಆದಾಯ ಗಳಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಲಾಯಿತು.
ತಾಲ್ಲೂಕು, ಪಟ್ಟಣ ಇಲ್ಲವೇ ಪಂಚಾಯಿತಿಯೊಂದನ್ನು ದತ್ತು ತೆಗೆದುಕೊಂಡು ಅಂತರ್ರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ಧಿಪಡಿಸಬೇಕು. ಸ್ಫರ್ಧಾತ್ಮಕ ಜಗತ್ತಿನಲ್ಲಿ ಭವಿಷ್ಯದ ಪೀಳಿಗೆ ತಕ್ಕಮಟ್ಟದ ಪೈಪೋಟಿ ನೀಡುವ ರೀತಿಯಲ್ಲಿ ತರಬೇತಿ ಮತ್ತು ಮಾರ್ಗದರ್ಶನ ನೀಡಬಲ್ಲ ಅಂತರ್ರಾಷ್ಟ್ರೀಯ ಮಟ್ಟದ ಶಾಲೆ ಆರಂಭಿಸಬೇಕು. ಇಲ್ಲಿನ ಜನರಿಗೆ ಆರೋಗ್ಯ ರಕ್ಷಣೆ ಕುರಿತು ಜಾಗೃತಿ ಮೂಡಿಸಬಲ್ಲ ಮತ್ತು ಚಿಕಿತ್ಸೆ ನೀಡಬಲ್ಲ ಅತ್ಯಾಧುನಿಕ ಮಾದರಿಯ ಆಸ್ಪತ್ರೆ ಸ್ಥಾಪಿಸಬೇಕು ಎಂದು ಅವರು ಮನವಿ ಮಾಡಿದರು.
ಮನವಿಪತ್ರ ಸ್ವೀಕರಿಸಿದ ಎನ್.ಆರ್.ನಾರಾಯಣಮೂರ್ತಿ ಮಾತನಾಡಿ, ಬಾಯಿಯಿಂದ ಹೇಳುವುದಕ್ಕಿಂತ ಅದನ್ನು ಕಾರ್ಯಗತಗೊಳಿಸುವಲ್ಲಿ ನಂಬಿಕೆ ಇಟ್ಟಿದ್ದೇನೆ. ಎಲ್ಲಾ ಮನವಿಗಳನ್ನು ಈಡೇರಿಸುತ್ತೇನೆಂದು ಈಗಲೇ ಭರವಸೆ ನೀಡುವುದಿಲ್ಲ. ಸುಳ್ಳು ಭರವಸೆ ನೀಡಲು ಇಚ್ಛಿಸುವುದಿಲ್ಲ. ನಿಮ್ಮ ಎಲ್ಲಾ ಮನವಿಗಳನ್ನು ಇನ್ಫೊಸಿಸ್ ಸಂಸ್ಥೆ ಮುಂದಿಡುತ್ತೇನೆ. ಸ್ಥಳೀಯ ಮಟ್ಟದಲ್ಲಿ ಯಾವುದೆಲ್ಲ ಸೌಕರ್ಯಗಳು ಲಭ್ಯ ಇವೆ ಎಂಬುದನ್ನು ಪರಿಶೀಲಿಸಿ ಅವರು ಕ್ರಮ ಕೈಗೊಳ್ಳುತ್ತರೆ ಎಂದರು. ಈ ಸಂದರ್ಭದಲ್ಲಿ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ನ ಗೌರವಾಧ್ಯಕ್ಷ ಡಾ. ಡಿ.ಟಿ.ಸತ್ಯನಾರಾಯಣರಾವ್, ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ಕಾರ್ಯದರ್ಶಿ ವಿ.ಕೃಷ್ಣ ಉಪಸ್ಥಿತರಿದ್ದರು.

ಸಾಧಕರಿಗೆ, ವಿದ್ಯಾರ್ಥಿಗಳಿಗೆ ಆತ್ಮೀಯ ಸನ್ಮಾನ

0

ಪಟ್ಟಣ ವಾಸವಿ ಕಲ್ಯಾಣ ಮಂಟಪದಲ್ಲಿ ಭಾನುವಾರ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ವತಿಯಿಂದ ನಡೆದ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು. ತಾಲ್ಲೂಕಿನಲ್ಲಿ ಜನಿಸಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ತೋರಿದ ಐವರು ಸಾಧಕರನ್ನು ಕೂಡ ಅಭಿನಂದಿಸಲಾಯತು. ಇನ್ಫೊಸಿಸ್ ಸಂಸ್ಥೆಯ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಮತ್ತು ಪತ್ನಿ ಸುಧಾಮೂರ್ತಿ ಸಾಧಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಿದರು.
ಅಂತರ್ರಾಷ್ಟ್ರೀಯ ಸಂಬಂಧಗಳ ತಜ್ಞ ಡಾ. ಕೃಷ್ಣಮೂರ್ತಿ ವೆಂಕಟರಾಮ್, ವ್ಯಂಗ್ಯಚಿತ್ರಕಾರ ಬಿ.ವಿ.ಪಾಂಡುರಂಗರಾವ್, ವಿಜ್ಞಾನಿ ಎನ್.ಆರ್.ಸಮರ್ಥರಾಮ್, ಇಂಡಿಯಾ ಇನ್ಫೊಲೈನ್ ಸಂಸ್ಥೆಯ ಹಿರಿಯ ಉಪಾಧ್ಯಕ್ಷ ಕ್ರಮಧಾತಿ ಶ್ರೀಧರ್ ಮತ್ತು ಭಾರತೀಯ ಸೇನೆಯ ಎಲೆಕ್ಟ್ರಾನಿಕ್ ಎಂಜಿನಿಯರ್ ಕ್ಯಾಪ್ಟನ್ ಎಂ.ವಿ.ಸುನೀಲ್ ಕುಮಾರ್ ಅವರನ್ನು ಅಭಿನಂದಿಸಲಾಯಿತು. ಹಣ್ಣುಹಂಪಲು, ಸ್ಮರಣಿಕೆ ಮತ್ತು ಪ್ರಮಾಣಪತ್ರ ನೀಡಿ ಸತ್ಕರಿಸಲಾಯಿತು.
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಾದ ಎಸ್.ಆದಿತ್ಯಾ, ಎನ್.ಎಸ್.ರೇವತಿ, ಎ.ಯು.ವರ್ಷಾ, ಅಭಯ್ ಇನಾಮದಾರ್, ಚಂದನಾ, ಎನ್.ಮೇಘನಾ, ಎಂ.ಅನೂಪ್ ಕೃಷ್ಣನ್ ಮತ್ತು ಎಸ್.ಆರ್.ಲಕ್ಷ್ಮಿ. ಪಿಯುಸಿ ವಿದ್ಯಾರ್ಥಿಗಳಾದ ಕೆ.ಅನ್ನಪೂರ್ಣಾ, ಎ.ಎಸ್.ಸ್ನೇಹಾ, ಬಿ.ಕೆ.ಪ್ರಕೃತಿ, ಎಚ್.ವಿ.ಅಕ್ಷತಾ, ಸಿ.ಎಸ್.ಭಾರ್ಗವ ಕಸ್ತೂರಿ ಮತ್ತು ಎಸ್.ದೀಪ್ತಿ. ಬೆಂಗಳೂರು ವಿಶ್ವವಿದ್ಯಾಲಯದ ಗಣಿತ ಎಂ.ಎಸ್ಸಿ ವಿದ್ಯಾರ್ಥಿನಿ ಎಚ್.ಆರ್.ಶ್ವೇತಾ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಶಾಸಕ ಎಂ.ರಾಜಣ್ಣ, ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಸೇವಾ ಟ್ರಸ್ಟ್ ಗೌರವಾಧ್ಯಕ್ಷ ಡಾ. ಡಿ.ಟಿ.ಸತ್ಯನಾರಾಯಣ ರಾವ್, ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ವಿ.ಕೃಷ್ಣ, ಖಜಾಂಚಿ ಎನ್.ಶ್ರೀಕಾಂತ್, ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿ ಎಸ್.ಪಿ.ಕುಲಕರ್ಣಿ, ಹಿರಿಯ ವಕೀಲ ಬಿ.ಸಿ.ಸೀತಾರಾಮರಾವ್, ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಕೆ.ಗುರುರಾಜ್ರಾವ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬೆಂಗಳೂರು ಹೊರತುಪಡಿಸಿ ಬೇರೆ ಯಾವ ನಗರದಲ್ಲೂ ನಿರೀಕ್ಷಿತ ಮಟ್ಟದಲ್ಲಿ ಸೌಕರ್ಯಗಳಿಲ್ಲ

0

ಇನ್ಫೊಸಿಸ್ ಸಂಸ್ಥೆಯನ್ನು ಸ್ಥಾಪಿಸುವ ಮತ್ತು ಮಾಹಿತಿ ತಂತ್ರಜ್ಞಾನದ ವ್ಯಾಪ್ತಿಯನ್ನು ಎಲ್ಲೆಡೆ ವಿಸ್ತರಿಸುವ ಉದ್ದೇಶವಿದ್ದರೂ ಬೆಂಗಳೂರು ಹೊರತುಪಡಿಸಿ ಬೇರೆ ಯಾವ ನಗರದಲ್ಲೂ ನಿರೀಕ್ಷಿತ ಮಟ್ಟದಲ್ಲಿ ಸೌಕರ್ಯಗಳಿಲ್ಲ ಎಂದು ಇನ್ಫೊಸಿಸ್ ಸಂಸ್ಥೆ ಸಂಸ್ಥಾಪಕ ಎನ್.ಆರ್.ನಾರಾಯಣಮೂರ್ತಿ ಬೇಸರ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಭಾನುವಾರ ನಡೆದ ವಿಪ್ರ ಪ್ರತಿಭಾ ಪುರಸ್ಕಾರ ಮತ್ತು ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಮೈಸೂರು ಮತ್ತು ಮಂಗಳೂರಿನಲ್ಲಿ ಇನ್ಫೊಸಿಸ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದ್ದು ಹುಬ್ಬಳ್ಳಿಯಲ್ಲೂ ಕೂಡ ಆರಂಭವಾಗಲಿದೆ. ಆದರೆ ಬೆಂಗಳೂರು ಹೊರತುಪಡಿಸಿ ಅಲ್ಲಿ ಎಲ್ಲಿಯೂ ನಿರೀಕ್ಷಿತ ಮಟ್ಟದ ಸೌಕರ್ಯಗಳಿಲ್ಲ. ಸಂಸ್ಥೆಯ ಕಾರ್ಯನಿರ್ವಹಣೆ ಮತ್ತು ಉದ್ಯೋಗಿಗಳ ಇರುವಿಕೆಗೆ ಪೂರಕವಾದ ವಾತಾವರಣವಿಲ್ಲ ಎಂದರು.
ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣ, ಪಂಚತಾರಾ ಹೋಟೆಲ್ ಮತ್ತು ಇನ್ನಿತರ ಅತ್ಯಾಧುನಿಕ ಸೌಕರ್ಯಗಳು ಇರದಿದ್ದರೆ ಇನ್ಫೊಸಿಸ್ನಂತಹ ಸಂಸ್ಥೆಯ ಕಾರ್ಯ ನಿರ್ವಹಣೆ ಕಷ್ಟವಾಗುತ್ತದೆ. ತಿರುವನಂತಪುರಂ, ಭುವನೇಶ್ವರದಲ್ಲೂ ಇಂತಹದ್ದೇ ಸಮಸ್ಯೆಗಳಿವೆ. ವಿದೇಶದಿಂದ ಬಂದು ಹೋಗುವ ಜನರಿಗೆ ಇಲ್ಲಿ ತಂಗಲು ಅಚ್ಚುಕಟ್ಟಾದ ವ್ಯವಸ್ಥೆಯಿರಬೇಕು ಮತ್ತು ಇತರೆ ಸೌಕರ್ಯಗಳು ದೊರೆಯುವಂತಿರಬೇಕು ಎಂದು ಅವರು ತಿಳಿಸಿದರು.

ಔಷಧಿ ವ್ಯಾಪಾರಿಗಳ ಸಂಘದಿಂದ ವೈದ್ಯ ಡಾ.ಡಿ.ಟಿ.ಸತ್ಯನಾರಾಯಣರಾವ್ ರಿಗೆ ಬೀಳ್ಕೊಡುಗೆ ಗೌರವ

0

ಶಿಡ್ಲಘಟ್ಟದ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಅಮೆರಿಕಾಗೆ ಹೊರಟಿರುವ ವೈದ್ಯ ಡಾ.ಡಿ.ಟಿ.ಸತ್ಯನಾರಾಯಣರಾವ್ ಅವರಿಗೆ ಶನಿವಾರ ಬೀಳ್ಕೊಡುಗೆಯನ್ನು ಏರ್ಪಡಿಸಿ ಗೌರವಿಸಿದರು. ಸಂಘದ ಅಧ್ಯಕ್ಷ ವಿ.ಎಸ್.ವಿ.ಗುಪ್ತ, ಕಾರ್ಯದರ್ಶಿ ರಮೇಶ್ ಬಾಬು, ಖಜಾಂಚಿ ಮಂಜುನಾಥ್, ಸಿ.ಆರ್.ಜಗದೀಶ್, ಸತೀಶ್ಕುಮಾರ್, ಶಂಕರನಾರಾಯಣ್, ಚಂದ್ರಶೇಖರ್ ಹಾಜರಿದ್ದರು.

ಶಿಡ್ಲಘಟ್ಟದ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಅಮೆರಿಕಾಗೆ ಹೊರಟಿರುವ ವೈದ್ಯ ಡಾ.ಡಿ.ಟಿ.ಸತ್ಯನಾರಾಯಣರಾವ್ ಅವರಿಗೆ ಶನಿವಾರ ಬೀಳ್ಕೊಡುಗೆಯನ್ನು ಏರ್ಪಡಿಸಿ ಗೌರವಿಸಿದರು.
ಶಿಡ್ಲಘಟ್ಟದ ಔಷಧಿ ವ್ಯಾಪಾರಿಗಳ ಸಂಘದ ವತಿಯಿಂದ ಅಮೆರಿಕಾಗೆ ಹೊರಟಿರುವ ವೈದ್ಯ ಡಾ.ಡಿ.ಟಿ.ಸತ್ಯನಾರಾಯಣರಾವ್ ಅವರಿಗೆ ಶನಿವಾರ ಬೀಳ್ಕೊಡುಗೆಯನ್ನು ಏರ್ಪಡಿಸಿ ಗೌರವಿಸಿದರು.

ಶಿಕ್ಷಕ ವೃತ್ತಿಯನ್ನು ಆರಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಪ್ರೇರಕ

0

ಉತ್ತಮ ಶಿಕ್ಷಕರನ್ನು ಗುರುತಿಸಿ ಗೌರವಿಸುವುದರಿಂದ ಶಿಕ್ಷಕರಿಗೆ ಪ್ರೋತ್ಸಾಹ ಮತ್ತು ಶಿಕ್ಷಕ ವೃತ್ತಿಯನ್ನು ಆರಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಪ್ರೇರಕವಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ರಘುನಾಥರೆಡ್ಡಿ ತಿಳಿಸಿದರು.
ಪಟ್ಟಣದ ನಗರೇಶ್ವರಸ್ವಾಮಿ ಕಲ್ಯಾಣ ಮಂಟಪದಲ್ಲಿ ತಾಲ್ಲೂಕಿನ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶನಿವಾರ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಸನ್ಮಾನ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಕನ್ನಡ ನಾಡಗೀತೆಗಳ ಗಾಯನ ಸ್ಪರ್ಧೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶಾಲೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಪಾಠ ಪ್ರವಚನ ಮಾಡುವುದರ ಜೊತೆಗೆ ವಿದ್ಯಾರ್ಥಿಗಳಿಗೆ ಅವಶ್ಯಕವಾಗಿರುವ ಎಲ್ಲಾ ಸಲಹೆ, ಸೂಚನೆ ನೀಡುತ್ತಾ ಅವರನ್ನು ಪ್ರೋತ್ಸಾಹಿಸುವ ಕೆಲಸ ಮಾಡಿದಾಗ ವಿದ್ಯಾರ್ಥಿಗಳ ವಿದ್ಯಾರ್ಥಿ ಜೀವನ ಉಜ್ವಲವಾಗುತ್ತದೆ. ಈ ದಿಸೆಯಲ್ಲಿ ಸರಕಾರ ಉತ್ತಮ ಶಿಕ್ಷಕರನ್ನು ಗುರುತಿಸಿ ಅವರನ್ನು ಗೌರವಿಸುವ ಕೆಲಸ ಮಾಡುತ್ತಿರುವುದರಿಂದ ಶಿಕ್ಷಕರಿಗೆ ಇನ್ನಷ್ಟು ಪ್ರೇರೆಪಣೆ ದೊರೆಯುತ್ತಿದೆ ಎಂದು ಹೇಳಿದರು.
ತಹಶಿಲ್ದಾರ್ ಜಿ.ಎ.ನಾರಾಯಣಸ್ವಾಮಿ ಮಾತನಾಡಿ, ಈಗ ತುರ್ತಾಗಿ ಆಗಬೇಕಿರುವುದು ಕನ್ನಡ ಭಾಷೆಯನ್ನು ರಕ್ಷಿಸುವ ಕೆಲಸ. ನಮ್ಮ ಮಕ್ಕಳನ್ನು ಸಲಹಿದಂತೆ ಕನ್ನಡವನ್ನು ಸಲಹುವ ಜವಾಬ್ದಾರಿ ನಮ್ಮ ಮೇಲೆ ಇದೆ. ನಿಜವಾದ ಅರ್ಥದಲ್ಲಿ ಕನ್ನಡ ಭಾಷೆಯನ್ನು ಮುಂದಿನ ಪೀಳಿಗೆಗೆ ಪರಿಣಾಮಕಾರಿಯಾಗಿ ತಲುಪಿಸಲು ಸಾಧ್ಯವಾಗುವುದು ವಿದ್ಯಾರ್ಥಿಯ ಶಿಕ್ಷಣ ಹಂತದಲ್ಲಿ. ಕನ್ನಡವನ್ನು ಉಳಿಸಿ, ಬೆಳೆಸುವ ಭಾವನೆಗಳನ್ನು ಪರಿಣಾಮಕಾರಿಯಾಗಿ ತುಂಬುವುದು ಶಾಲಾ ಕಾಲೇಜುಗಳಲ್ಲಿ ಹೆಚ್ಚು ಸಾಧ್ಯ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕಿ ಮಧುರಾ ಅವರನ್ನು ಸನ್ಮಾನಿಸಲಾಯಿತು. ಕನ್ನಡ ನಾಡಗೀತೆಗಳ ಗಾಯನ ಸ್ಪರ್ಧೆಯಲ್ಲಿ ನಾಡಗೀತೆಗಳನ್ನು ಸ್ಪರ್ಧಿಗಳು ಹಾಡಿದರು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಅಧ್ಯಕ್ಷ ಕೃ.ನಾ.ಶ್ರೀನಿವಾಸಮೂರ್ತಿ, ಎಸ್.ವಿ.ನಾಗರಾಜರಾವ್, ಮುತ್ತೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ಆಂಜಿನಪ್ಪ, ಮಂಜುನಾಥ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.