14.1 C
Sidlaghatta
Thursday, December 25, 2025
Home Blog Page 7

Sidlaghatta Silk Cocoon Market-05/12/2025

1
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 05/12/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 338
Qty: 17485 Kg
Mx : 758
Mn: 450
Avg: 607

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 11
Qty: 640 Kg
Mx : ₹ 857
Mn: ₹ 600
Avg: ₹ 776


For Daily Updates WhatsApp ‘HI’ to 7406303366

ಚಿಕ್ಕತೇಕಹಳ್ಳಿ ಹಾಲಿನ ಡೈರಿ ಚುನಾವಣೆ ಫಲಿತಾಂಶ ಪ್ರಕಟ; ನ್ಯಾಯಾಲಯ ಆದೇಶದ ಮೇರೆಗೆ ಮತ ಎಣಿಕೆ

0
sidlaghatta chikkatekahalli Dairy election results

Sidlaghatta, chikkaballapur : ಶಿಡ್ಲಘಟ್ಟ ತಾಲ್ಲೂಕಿನ ಚಿಕ್ಕತೇಕಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (ಡೈರಿ) ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯು ನ್ಯಾಯಾಲಯದ ಆದೇಶದಿಂದಾಗಿ ತೀವ್ರ ಕುತೂಹಲ ಕೆರಳಿಸಿತ್ತು. ನ್ಯಾಯಾಲಯದ ನಿರ್ದೇಶನದ ಮೇರೆಗೆ ಮತ ಎಣಿಕೆ ಪ್ರಕ್ರಿಯೆ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಯಿತು ಎಂದು ಚುನಾವಣಾಧಿಕಾರಿ ಎಂ. ಮಂಜುನಾಥ್ ಅವರು ಘೋಷಿಸಿದರು.

ಸಂಘದ ಐದು ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ನಡೆದ ಈ ಚುನಾವಣೆಯಲ್ಲಿ, ಅರ್ಹತೆ ಪಡೆಯದ ಕಾರಣ ಅನರ್ಹಗೊಂಡಿದ್ದ 25 ಮಂದಿ ಸದಸ್ಯರು ನ್ಯಾಯಾಲಯದ ಆದೇಶದೊಂದಿಗೆ ಮತದಾನ ಮಾಡಿದ್ದರು. ಈ 25 ಮಂದಿ ಸದಸ್ಯರ ಮತಪತ್ರಗಳನ್ನು ಪ್ರತ್ಯೇಕವಾಗಿ ಇಡಲು ನ್ಯಾಯಾಲಯ ಸೂಚಿಸಿತ್ತು. ಅನಂತರ, ನ್ಯಾಯಾಲಯವು ಈ 25 ಮತಗಳನ್ನು ರದ್ದುಗೊಳಿಸಿ, ಅರ್ಹ ಮತದಾನದ ಹಕ್ಕು ಹೊಂದಿದ್ದ 26 ಮಂದಿ ಸದಸ್ಯರ ಮತಗಳನ್ನು ಮಾತ್ರ ಎಣಿಕೆ ಮಾಡಿ ಫಲಿತಾಂಶ ಘೋಷಿಸುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ, ಇಂದು (ದಿನಾಂಕ) ಮತ ಎಣಿಕೆ ನಡೆಸಿ ಫಲಿತಾಂಶವನ್ನು ಪ್ರಕಟಿಸಲಾಯಿತು.

ವಿಜೇತ ಅಭ್ಯರ್ಥಿಗಳು:

  • ಸಾಮಾನ್ಯ ಸ್ಥಾನ: ಪ್ರದೀಪ್ ಕುಮಾರ್, ಚೌಡರೆಡ್ಡಿ, ದ್ಯಾವಪ್ಪ, ನಾಗೇಶ್, ವೆಂಕಟರೆಡ್ಡಿ, ಸೊಣ್ಣಪ್ಪರೆಡ್ಡಿ, ವಿ. ವೆಂಕಟರೆಡ್ಡಿ.
  • ಹಿಂದುಳಿದ ವರ್ಗ ಎ (ಮೀಸಲು): ಕೆ. ಮಂಜುನಾಥ್.
  • ಹಿಂದುಳಿದ ವರ್ಗ ಬಿ (ಮೀಸಲು): ಎಲ್. ಮಂಜುನಾಥ್.
  • ಮಹಿಳಾ ಮೀಸಲು ಸ್ಥಾನ: ಮಮತ ಮತ್ತು ನಿರ್ಮಲ.

ವಿಜೇತ ನಿರ್ದೇಶಕರು ಪಟಾಕಿ ಸಿಡಿಸಿ, ಸಿಹಿ ಹಂಚುವ ಮೂಲಕ ಸಂಭ್ರಮಾಚರಿಸಿದರು. ಈ ಸಂದರ್ಭದಲ್ಲಿ ದೊಡ್ಡತೇಕಹಳ್ಳಿ ಗೋಪಾಲರೆಡ್ಡಿ, ಡಿ.ಸಿ. ಮಂಜುನಾಥ್, ಟಿ.ವಿ. ಶ್ರೀನಿವಾಸರೆಡ್ಡಿ, ಶಿವಣ್ಣ, ನಾರಾಯಣಸ್ವಾಮಿ (ಪಿಎನ್‌ಎಸ್) ಸೇರಿದಂತೆ ಹಲವು ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

CM-DCM ‘ಖುರ್ಚಿ ಕಿತ್ತಾಟ’ದಿಂದ ರಾಜ್ಯ ಸರ್ಕಾರ ವಿಫಲ: ಸೀಕಲ್ ರಾಮಚಂದ್ರಗೌಡ

0
Sidlaghatta BJP Protest cm-dcm power tussle

Sidlaghatta, Chikkaballapur : ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ‘ಖುರ್ಚಿ ಕಿತ್ತಾಟ’ದಿಂದ ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಹಿತ ಕಾಯುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರು ಗಂಭೀರವಾಗಿ ಆರೋಪಿಸಿದರು.

ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಮತ್ತು ಆಡಳಿತ ವೈಫಲ್ಯವನ್ನು ಖಂಡಿಸಿ, ಬಿಜೆಪಿ ರೈತ ಮೋರ್ಚಾ ಹಾಗೂ ವಿವಿಧ ಘಟಕಗಳು ಜಂಟಿಯಾಗಿ ಹಮ್ಮಿಕೊಂಡಿದ್ದ ಬೃಹತ್ ಪ್ರತಿಭಟನೆ ಮತ್ತು ಮನವಿ ಸಲ್ಲಿಕೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.

“ಸಿಎಂ ಮತ್ತು ಡಿಸಿಎಂ ತಮ್ಮ ಅಧಿಕಾರವನ್ನು ಉಳಿಸಿಕೊಳ್ಳುವುದರಲ್ಲೇ ಮಗ್ನರಾಗಿದ್ದಾರೆ. ಇದರಿಂದಾಗಿ ರಾಜ್ಯದ ರೈತರ ಮತ್ತು ಸಾಮಾನ್ಯ ಜನರ ಕಷ್ಟಗಳಿಗೆ ಸ್ಪಂದಿಸಲು ಸರ್ಕಾರಕ್ಕೆ ಪುರಸೊತ್ತೂ ಇಲ್ಲ, ವ್ಯವಧಾನವೂ ಇಲ್ಲದಂತಾಗಿದೆ” ಎಂದು ರಾಮಚಂದ್ರಗೌಡ ದೂರಿದರು. ಮುಖ್ಯಮಂತ್ರಿಗಳ ನಿವಾಸದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಂಡಿ ಮತ್ತು ಡಿಸಿಎಂ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೋಳಿ ಮಾಂಸ ಸೇವಿಸುವುದರಲ್ಲಿ ತಲ್ಲೀನರಾಗಿದ್ದು, ರಾಜ್ಯದ ಜನಸಾಮಾನ್ಯರ ಹೊಟ್ಟೆ ಮೇಲೆ ಹೊಡೆಯುವಂತಹ ಈ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಅವರು ಎಚ್ಚರಿಸಿದರು.

ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರವು ಇದೀಗ ರೈತರನ್ನು ಸಂಪೂರ್ಣವಾಗಿ ಮರೆತಿದೆ. ಕೇಂದ್ರ ಸರ್ಕಾರವು ಬೆಂಬಲ ಬೆಲೆ ಘೋಷಿಸಿದ್ದರೂ, ರಾಜ್ಯ ಸರ್ಕಾರವು ಮೆಕ್ಕೆ ಜೋಳದ ಖರೀದಿ ಕೇಂದ್ರಗಳನ್ನು ಈವರೆಗೂ ಆರಂಭಿಸಿಲ್ಲ. ರಾಜ್ಯ ಸರ್ಕಾರವು “ಕಿವಿ ಕೇಳಿಸದ, ಮಾತನಾಡಲು ಬಾರದ” ಸರ್ಕಾರದಂತೆ ವರ್ತಿಸುತ್ತಿದೆ ಎಂದು ಅವರು ತೀವ್ರ ಬೇಸರ ವ್ಯಕ್ತಪಡಿಸಿದರು.

ನೆರೆ ಸಂತ್ರಸ್ತರ ಪರಿಹಾರ ಮೊತ್ತವನ್ನು 5 ಲಕ್ಷದಿಂದ 1 ಲಕ್ಷಕ್ಕೆ ಕಡಿತಗೊಳಿಸಿರುವುದನ್ನು ಮತ್ತು ಜಂಗಮಕೋಟೆ ಹೋಬಳಿಯ ರೈತರ ಕೃಷಿ ಜಮೀನುಗಳನ್ನು ಕೆಐಡಿಬಿಗೆ ಹಸ್ತಾಂತರಿಸುವ ಪ್ರಕ್ರಿಯೆಯನ್ನು ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ಒತ್ತಾಯಿಸಿತು. ಈ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ತಹಶೀಲ್ದಾರ್ ಎನ್. ಗಗನ ಸಿಂಧು ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಇದಕ್ಕೂ ಮುನ್ನ, ಬಿಜೆಪಿ ಸೇವಾ ಸೌಧ ಕಚೇರಿಯಿಂದ ತಾಲ್ಲೂಕು ಕಚೇರಿಯವರೆಗೆ ಎತ್ತಿನ ಬಂಡಿಯಲ್ಲಿ ಆಗಮಿಸಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಬೃಹತ್ ಪ್ರತಿಭಟನೆ ನಡೆಸಿದರು. ಮಾಜಿ ಶಾಸಕ ಎಂ. ರಾಜಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುರಳೀಧರ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಜಿ.ವಿ. ರಾಜಶೇಖರ ಸೇರಿದಂತೆ ಹಲವು ಪದಾಧಿಕಾರಿಗಳು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಏಡ್ಸ್‌ಗೆ ಚಿಕಿತ್ಸೆ ಇದ್ದು, ಸಾಮಾನ್ಯ ಜೀವನ ಸಾಧ್ಯ

0
Sidlaghatta AIDS Day Awareness Programme

Sidlaghatta, chikkaballapur : ಏಡ್ಸ್ (AIDS) ಒಂದು ಗಂಭೀರ ಕಾಯಿಲೆಯಾಗಿದ್ದರೂ, ಸಕಾಲಕ್ಕೆ ಮತ್ತು ಸೂಕ್ತ ವೈದ್ಯಕೀಯ ಚಿಕಿತ್ಸೆಯನ್ನು ಪಡೆದುಕೊಂಡರೆ ಸಾಮಾನ್ಯ ಜನರಂತೆ ಸಹಜ ಜೀವನವನ್ನು ನಡೆಸಲು ಸಾಧ್ಯವಿದೆ ಎಂದು ಜೆ.ಎಂ.ಎಫ್.ಸಿ. ಹಿರಿಯ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ರೋಷನ್ ಷಾ ಅವರು ತಿಳಿಸಿದರು.

ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ವಿಶ್ವ ಏಡ್ಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇತ್ತೀಚಿನ ವೈದ್ಯಕೀಯ ಪ್ರಗತಿಯಿಂದಾಗಿ ಏಡ್ಸ್ ರೋಗವನ್ನು ನಿಯಂತ್ರಣದಲ್ಲಿ ಇಡಬಹುದಾಗಿದೆ. ಆದಾಗ್ಯೂ, ರೋಗ ಬಾರದಂತೆ ಮುನ್ನೆಚ್ಚರಿಕೆ ವಹಿಸುವುದು ಅತ್ಯಂತ ಸೂಕ್ತ. ಏಡ್ಸ್ ಪೀಡಿತ ವ್ಯಕ್ತಿಗಳನ್ನು ನಾವು ಸಮಾಜದ ಅವಿಭಾಜ್ಯ ಅಂಗವಾಗಿ ನೋಡಬೇಕು ಮತ್ತು ಅವರನ್ನು ಯಾವುದೇ ಕಾರಣಕ್ಕೂ ಪ್ರತ್ಯೇಕಿಸಬಾರದು ಎಂದು ಅವರು ಹೇಳಿದರು.

ಈ ಕಾರ್ಯಕ್ರಮವನ್ನು ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ, ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲ್ಲೂಕು ಆಡಳಿತ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಐಸಿಟಿಸಿ ಘಟಕ, ಸಾರ್ವಜನಿಕ ಆಸ್ಪತ್ರೆ, ಸೌಖ್ಯ ಸಂಜೀವಿನಿ ಸಂಸ್ಥೆ, ನಿಸರ್ಗ ಸೊಸೈಟಿ ಮತ್ತು ಶೂರ್ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸಲು ತಾಲ್ಲೂಕು ಮಟ್ಟದಲ್ಲಿ ಬೀದಿ ನಾಟಕದಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರಗಳನ್ನು ನೀಡಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಎನ್. ಗಗನ ಸಿಂಧು, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ವೆಂಕಟೇಶಮೂರ್ತಿ, ಸಿಡಿಪಿಒ ವಿದ್ಯಾ ವಸ್ತ್ರದ್, ವಕೀಲರ ಸಂಘದ ಅಧ್ಯಕ್ಷ ಎ. ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಸಿ.ಜಿ. ಭಾಸ್ಕರ್ ಮತ್ತು ಸರ್ಕಾರಿ ಸಹಾಯಕ ಅಭಿಯೋಜಕ ಮೊಹಮ್ಮದ್ ಖಾಜಾ ಸೇರಿದಂತೆ ಹಲವು ಅಧಿಕಾರಿಗಳು ಮತ್ತು ಗಣ್ಯರು ಉಪಸ್ಥಿತರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ದೇವರಮಳ್ಳೂರು ಗ್ರಾಮದಲ್ಲಿ ಮಳ್ಳೂರಾಂಭ ದೇವಿಯ ರಥೋತ್ಸವ

0
Sidlaghatta Devaramallur Mallurambha Rathotsava

Devaramallur, Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನ ದೇವರಮಳ್ಳೂರು ಗ್ರಾಮದಲ್ಲಿ ಗುರುವಾರ ಮಳ್ಳೂರಾಂಭ ದೇವಿಯ ರಥೋತ್ಸವವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

ಅತ್ಯಂತ ಪುರಾತನ ದೇವಾಲಯವಾದ ಮಳ್ಳೂರಾಂಭ ದೇವಾಲಯದ ರಥೋತ್ಸವವು ಜಿಲ್ಲೆಯಾದ್ಯಂತ ಪ್ರಸಿದ್ಧವಾಗಿದ್ದು, ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ಜನರು ದೇವಿಯ ದರ್ಶನ ಪಡೆದು ಪೂಜೆಯಲ್ಲಿ ಪಾಲ್ಗೊಂಡು ರಥವನ್ನು ಎಳೆದರು. ದೇವರನ್ನು ವಿಶೇಷವಾಗಿ ಅಲಂಕರಿಸಿದ್ದರು. ಬ್ರಹ್ಮರಥೋತ್ಸವಕ್ಕೆ ರಥವನ್ನು ವಿಶೇಷವಾಗಿ ಅಲಂಕರಿಸಿ ದಾರಿಯುದ್ದಕ್ಕೂ ತಳಿರು ತೋರಣಗಳಿಂದ ಸಿಂಗರಿಸಿದ್ದರು. ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.

ಗಾರುಡಿಬೊಂಬೆ, ಕೀಲುಕುದುರೆ, ವೀರಗಾಸೆ, ತಮಟೆ ವಾದನ ಆಕರ್ಷಕವಾಗಿತ್ತು. ತಿಂಡಿ ತಿನಿಸುಗಳು, ಆಟಿಕೆಗಳು, ಅಚ್ಚೆ ಹಾಕುವವರು, ದಿನೋಪಯೋಗಿ ವಸ್ತುಗಳು ಸೇರಿದಂತೆ ಬಹುತೇಕ ಅಂಗಡಿಗಳು ತೆರೆದಿದ್ದು ಜನಾಕರ್ಷಕವಾಗಿದ್ದವು.

ತಹಶೀಲ್ದಾರ್ ಗಗನಸಿಂಧು ಮತ್ತು ಶಾಸಕ ಬಿ.ಎನ್.ರವಿಕುಮಾರ್ ರಥೋತ್ಸವಕ್ಕೆ ಚಾಲನೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಬಂಕ್ ಮುನಿಯಪ್ಪ, ಕಾಂಗ್ರೆಸ್ ಮುಖಂಡ ಕೆ.ಪಿ.ಸಿ.ಸಿ ಕೋ ಆರ್ಡಿನೇಟರ್ ರಾಜೀವ್ ಗೌಡ, ದೇವಾಲಯ ಸೇವಾ ಸಮಿತಿ ಅಧ್ಯಕ್ಷ ಮುನಿರಾಜುಗೌಡ, ಕಾರ್ಯದರ್ಶಿ ವಿ.ವೇಣುಗೋಪಾಲ, ವಿ.ಸುಬ್ರಮಣಿಯಪ್ಪ, ಬಿ.ಎಲ್.ಮುನಿರಾಜು, ಶಾಂತಮ್ಮ ಕೆಂಪಣ್ಣ, ಎಂ.ವೆಂಕಟೇಶ್, ಟಿ.ಎಂ.ವೆಂಕಟೇಶಪ್ಪ, ಎನ್.ರಾಕೇಶ್, ದೇವರ ಮಳ್ಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪವಿತ್ರ ದೇವರಾಜ್, ಸದಸ್ಯರಾದ ಎನ್, ವೆಂಕಟೇಶ್, ಕೆಂಪೇಗೌಡ, ಅರ್ಚಕ ಹರೀಶ್ ಸ್ವಾಮಿ, ವೆಂಕೋಬರಾವ್, ಕೆ.ನಾಗರಾಜು, ಸೊಣ್ಣೇನಹಳ್ಳಿ ಮೂರ್ತಿ, ಜಿ.ಚಂದ್ರಪ್ರಸಾದ್ ಸೇರಿದಂತೆ ಗ್ರಾಮಸ್ಥರು ಪೂಜಾಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-04/12/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 04/12/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 320
Qty: 15905 Kg
Mx : 763
Mn: 500
Avg: 637

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 18
Qty: 1178 Kg
Mx : ₹ 885
Mn: ₹ 672
Avg: ₹ 795


For Daily Updates WhatsApp ‘HI’ to 7406303366

ಆನೂರು ಗ್ರಾಮ ಪಂಚಾಯಿತಿಗೆ ಗಾಂಧಿ ಗ್ರಾಮ ಪುರಸ್ಕಾರ

0
Sidlaghatta Anur Gram Panchayat Gandhi Grama Award

Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನ ಆನೂರು ಗ್ರಾಮ ಪಂಚಾಯಿತಿ 2023-24 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾಗಿದೆ.

ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ ಅವರಿಗೆ ₹5 ಲಕ್ಷರೂ ಚೆಕ್, ಪಾರಿತೋಷಕ ಮತ್ತು ಅಭಿನಂದನಾ ಪತ್ರ ನೀಡಿ, ಪ್ರಶಸ್ತಿ ಪ್ರದಾನ ಮಾಡಿದರು.

ಪಂಚಾಯಿತಿ ಕಾರ್ಯಕ್ರಮಗಳು ಅರ್ಹರಿಗೆ ತಲುಪಬೇಕು ಎಂಬುದು ನಮ್ಮ ಮುಖ್ಯ ಗುರಿಯಾಗಿದೆ. ಗ್ರಂಥಾಲಯ, ವೈಜ್ಞಾನಿಕವಾಗಿ ಘನತ್ಯಾಜ್ಯ ವಿಲೇವಾರಿ, ಕಂದಾಯ ವಸೂಲಿ, ಸರ್ಕಾರದ ವಿವಿಧ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದ್ದರಿಂದ ಗಾಂಧಿ ಗ್ರಾಮ ಪುರಸ್ಕಾರ ದೊರೆತಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಾತ್ಯಾಯಿನಿ ತಿಳಿಸಿದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

0
Sidlaghatta First Grade College Blood Donation Camp

Sidlaghatta, Chikkaballapur : ಶಿಡ್ಲಘಟ್ಟ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಪ್ರಾಂಶುಪಾಲ ಡಾ. ಜಿ. ಮುರಳಿ ಆನಂದ್ ಮಾತನಾಡಿ, ಕಾಲೇಜಿನಲ್ಲಿ ರಕ್ತದಾನ ಶಿಬಿರ ಆಯೋಜಿಸುವುದರ ಉದ್ದೇಶ ವಿದ್ಯಾರ್ಥಿಗಳಲ್ಲಿ ರಕ್ತದಾನದ ಕುರಿತು ಅರಿವು ಮೂಡಿಸುವುದು. ರಕ್ತದಾನದ ಮಹತ್ವ, ಅದರ ಪ್ರಯೋಜನಗಳು ಮತ್ತು ಅಗತ್ಯತೆಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟ ಕಲ್ಪನೆ ನೀಡುವುದಾಗಿದೆ ಎಂದರು.

ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಜವಾಬ್ದಾರಿ, ರಕ್ತದಾನದ ಕುರಿತ ಜ್ಞಾನ, ಭಯ ನಿವಾರಣೆ, ಆರೋಗ್ಯದ ಬಗ್ಗೆ ಕಾಳಜಿ ಮೂಡಿಸುವುದಲ್ಲದೆ ರಕ್ತದ ಕೊರತೆ ನೀಗಿಸುವಲ್ಲಿ ನೆರವಾಗುವುದಾಗಿದೆ. ಭವಿಷ್ಯದ ನಾಗರಿಕರಲ್ಲಿ ಸಮಾಜಸೇವೆ, ಮಾನವೀಯತೆ ಮತ್ತು ವೈದ್ಯಕೀಯ ಅಗತ್ಯಗಳ ಬಗ್ಗೆ ಕಾಳಜಿಯನ್ನು ಬೆಳೆಸಲು ಈ ಶಿಬಿರ ನೆರವಾಗಿದೆ ಎಂದು ಹೇಳಿದರು.

ಶಿಬಿರದಲ್ಲಿ 40 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು. ರಕ್ತದಾನ ಶಿಬಿರದ ಸಂಘಟನಾ ಸಂಚಾಲಕ ಡಾ. ಷಫಿ ಅಹಮದ್, ಸಂಚಾಲಕಿ ಡಾ.ಸುನಿತಾ.ಎಂ., ಎನ್.ಎಸ್.ಎಸ್ ಕಾರ್ಯಕ್ರಮ ಅಧಿಕಾರಿ, ಡಾ. ಎನ್. ವಿ. ಆದಿನಾರಾಯಣಪ್ಪ, ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಕಾರ್ಯಾಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ಜಿಲ್ಲಾ ಉಪಾಧ್ಯಕ್ಷ ಮುನಿ ನಂಜಪ್ಪ, ತಾಲ್ಲೂಕು ಅಧ್ಯಕ್ಷ ತಾದೂರು ಮಂಜುನಾಥ್, ಸಾಮೂಹಿಕ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭಕ್ತರಹಳ್ಳಿ ಪ್ರತೀಶ್, ಕರವೇ ತಾಲ್ಲೂಕು ಅಧ್ಯಕ್ಷ ಸುನಿಲ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ತಾಲ್ಲೂಕು ಅಧ್ಯಕ್ಷ ರಾಮಾಂಜನೇಯ, ಎನ್.ಎಸ್.ಎಸ್ ಮತ್ತು ಭಾರತ್ ಸ್ಕೌಟ್ಸ್ ಗೈಡ್ಸ್ ಘಟದ ವಿದ್ಯಾರ್ಥಿಗಳು ಹಾಜರಿದ್ದರು.

Sidlaghatta WhatsApp Channel Group

For Daily Updates WhatsApp ‘HI’ to 7406303366

Sidlaghatta Silk Cocoon Market-03/12/2025

0
Sidlaghatta Silk Cocoon Market Price Rate ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Sidlaghatta Govt Silk Cocoon Market

ಶಿಡ್ಲಘಟ್ಟ ರೇಷ್ಮೆ ಗೂಡು ಮಾರುಕಟ್ಟೆ ಧಾರಣೆ

Date: 03/12/2025

Cross-Breed Silk Cocoon – ಮಿಶ್ರತಳಿ ರೇಷ್ಮೆ ಗೂಡು

Lots: 255
Qty: 12801 Kg
Mx : 810
Mn: 333
Avg: 689

Bi-Voltine Silk Cocoon – ದ್ವಿತಳಿ ರೇಷ್ಮೆ ಗೂಡು

Lots: 15
Qty: 851 Kg
Mx : ₹ 880
Mn: ₹ 722
Avg: ₹ 822


For Daily Updates WhatsApp ‘HI’ to 7406303366

ಅಕಾಲಿಕ ಮಳೆಯ ಹಾವಳಿ: ರಾಗಿ ಬೆಳೆ ನೆಲಕ್ಕೊರಗಿ ರೈತ ಸಂಕಷ್ಟದಲ್ಲಿ

0
sidlaghatta Cyclone Ditwah ragi crop loss

Sidlaghatta, Chikkaballapur : ಶಿಡ್ಲಘಟ್ಟ ತಾಲ್ಲೂಕಿನಲ್ಲಿ ದಿತ್ವಾ ಚಂಡಮಾರುತದ ಪರಿಣಾಮವಾಗಿ ಕಳೆದ ಎರಡು ದಿನಗಳಿಂದ ಅಕಾಲಿಕ ಮಳೆಯಾಗುತ್ತಿದ್ದು, ರೈತರ ಜೀವನಕ್ಕೆ ತೀವ್ರ ಸಂಕಷ್ಟ ತಂದಿದೆ. ಕೊಯ್ಲಿಗೆ ಬಂದಿದ್ದ ರಾಗಿ ಬೆಳೆ ಮಣ್ಣಿಗೆ ಒರಗಿ ಹಾಳಾಗುತ್ತಿರುವುದನ್ನು ಕಂಡು ರೈತರು ನಿರಾಶೆಯಲ್ಲಿ ಮುಳುಗಿದ್ದಾರೆ.

ದಿತ್ವಾ ಚಂಡಮಾರುತದ ಪರಿಣಾಮ ವಿಪರೀತ ಚಳಿ ಹಾಗೂ ತುಂತುರು ಮಳೆಯ ವಾತಾವರಣ ನಿರ್ಮಾಣವಾಗಿದೆ. ಮಳೆಯ ನೀರು ತೆನೆಗಳಲ್ಲೇ ತುಂಬಿಕೊಂಡಿರುವುದರಿಂದ ಈಗಾಗಲೇ ನಿಂತಿದ್ದ ಪೈರುಗಳು ನೆಲಕ್ಕೊರಗಿವೆ. ಹಲವು ರೈತರ ಹೊಲಗಳಲ್ಲಿ ಇಳುವರಿ ಬರದೇ, ಕೊಯ್ಲು ಮಾಡಲಾಗದೆ ತೊಂದರೆ ಹೆಚ್ಚಾಗುತ್ತಿದೆ.

ತಾಲ್ಲೂಕಿನಾದ್ಯಂತ ಇದುವರೆಗೆ 12,256 ಹೆಕ್ಟೇರ್‌ಗಳಲ್ಲಿ ರಾಗಿ ಬಿತ್ತನೆ ನಡೆದಿದ್ದು, ಕೊಯ್ಲಿಗೆ ಬರದಿದ್ದ ಪ್ರದೇಶಗಳು ಹೆಚ್ಚಿನ ಹಾನಿ ಅನುಭವಿಸುತ್ತಿವೆ. ಇನ್ನೂ ಐದು–ಆರು ದಿನ ಮಳೆ ಮುಂದುವರಿದರೆ ತೆನೆಗಳಲ್ಲೇ ರಾಗಿ ಮೊಳೆಯುವ ಅಪಾಯ ಎದುರಿದೆ ಎಂದು ಕೃಷಿ ಇಲಾಖೆ ಎಚ್ಚರಿಸಿದೆ.

ಅಂತಿಮ ಹಂತದಲ್ಲಿರುವ ಬೆಳೆ ಹಾಳಾಗುತ್ತಿದ್ದಂತೆ ರೈತರ ಪರಿಶ್ರಮ ಮಣ್ಣಾಗುತ್ತಿದೆ. ಮಳೆ ನೀರು ಸೇರ್ಪಡೆಯಾಗಿ ನೆಲ ಜಾರಿ, ಮಣ್ಣು ಮೆತ್ತಾಗಿ, ಕೊಯ್ಲು ಯಂತ್ರಗಳು ಹೊಲಕ್ಕೆ ಪ್ರವೇಶಿಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಕೆಲ ಕಡೆಗಳಲ್ಲಿ ಮಣ್ಣಿನ ವಾಸನೆಯಿಂದ ಹುಲ್ಲು ಕೂಡ ಮೇವಿಗೆ ಅಸಾಧ್ಯವಾಗುವ ಸ್ಥಿತಿ ಬಂದಿದೆ.

ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ರೈತರು ಇದೇ ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿದ್ದು, ತುರ್ತು ಪರಿಹಾರ, ಹಾನಿ ಮೌಲ್ಯಮಾಪನ ಮತ್ತು ಪರಿಹಾರ ಧನಕ್ಕಾಗಿ ಸರ್ಕಾರದ ಹಸ್ತಕ್ಷೇಪದ ನಿರೀಕ್ಷೆಯಲ್ಲಿದ್ದಾರೆ.

Sidlaghatta WhatsApp Channel Group

For Daily Updates WhatsApp ‘HI’ to 7406303366

error: Content is protected !!