24.1 C
Sidlaghatta
Monday, December 29, 2025
Home Blog Page 988

ಜಂಗಮಕೋಟೆಯಲ್ಲಿ ಹೊಸಕೋಟೆ ಸರಹದ್ದಿನ ರಸ್ತೆಯ ಅಗಲೀಕರಣ ಮತ್ತು ಡಾಂಬರೀಕರಣ

0

ಸಾರ್ವಜನಿಕ ವಿಶ್ವಾಸಗಳಿಸುವಂತಹ ಗುಣಮಟ್ಟದ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ಜಂಗಮಕೋಟೆಯಲ್ಲಿ ಹೊಸಕೋಟೆ ಸರಹದ್ದಿನ ತನಕ ಸುಮಾರು 62 ಲಕ್ಷ ರೂಪಾಯಿಗಳ ಒಂದೂವರೆ ಕಿ.ಮೀ ರಸ್ತೆಯ ಅಗಲೀಕರಣ ಮತ್ತು ಡಾಂಬರೀಕರಣದ ಕಾಮಗಾರಿಗೆ ಶನಿವಾರ ಗುದ್ದಲಿ ಪೂಜೆಯನ್ನು ನೆರವೇರಿಸಿ ಅವರು ಮಾತನಾಡಿದರು.
ತಾಲ್ಲೂಕಿನಲ್ಲಿ ಹಲವಾರು ರಸ್ತೆಗಳ ಅಗಲೀಕರಣ ಕಾರ್ಯ ನಡೆಯುತ್ತಿದೆ. ಎಲ್ಲೆಡೆ ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚಿಸಿದ್ದೇವೆ. ಗ್ರಾಮಸ್ಥರೂ ಅದನ್ನು ಗಮನಿಸಿಕೊಳ್ಳಬೇಕು ಎಂದು ಹೇಳಿದರು.
ಸೂರ್ಯನಾರಾಯಣಗೌಡ, ನಜೀರ್ ಸಾಬ್, ರಮೇಶ್, ದೇವರಾಜ್, ಬಾಬು, ಎ.ಇ.ಇ ಜಮೀರ್ ಅಹ್ಮದ್, ರವಿ, ಮಳ್ಳೂರಯ್ಯ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ಯಾರೆಗಾನ್ ಇಂಗ್ಲೀಷ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ

0

ಮಕ್ಕಳ ಚಟುವಟಿಕೆಗಳ ಆಧಾರದ ಮೇಲೆ ಅವರ ಪ್ರತಿಭೆಯನ್ನು ಗುರುತಿಸಿ ಅದರಲ್ಲಿ ಪ್ರೋತ್ಸಾಹಿಸುವುದರಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ರಘುನಾಥರೆಡ್ಡಿ ತಿಳಿಸಿದರು.
ನಗರದ ಕಾಂಗ್ರೆಸ್ ಭವನದಲ್ಲಿ ಶನಿವಾರ ನಡೆದ ಪ್ಯಾರೆಗಾನ್ ಇಂಗ್ಲೀಷ್ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಮಕ್ಕಳ ಮನಸ್ಸು ಸೂಕ್ಷ್ಮವಾದದ್ದು. ಒತ್ತಡದಿಂದ ಏನನ್ನೇ ಆಗಲಿ ಕಲಿಸಲಾಗದು. ಆಡುತ್ತಾ, ನಲಿಯುತ್ತಾ ಕಲಿಯುವ ವಾತಾವರಣ ಬಹು ಮುಖ್ಯವಾದದ್ದು. ಉಲ್ಲಾಸ ದಾಯಕ ಹಾಗೂ ಜ್ಞಾನ ಹೆಚ್ಚಿಸುವ ವಿವಿಧ ಪಠ್ಯೇತರ ಚಟುವಟಿಕೆಗಳನ್ನು ಮಕ್ಕಳಿಗೆ ಕಲಿಸಿ. ಬಾಲ ಕಾರ್ಮಿಕರು ನಗರದಲ್ಲಿ ಹೆಚ್ಚಿದ್ದು, ಎಲ್ಲಾ ಮಕ್ಕಳಿಗೂ ಶಿಕ್ಷಣ ಸಿಕ್ಕಾಗ ಮಾತ್ರ ಪ್ರಗತಿ ಸಾಧ್ಯ ಎಂಬುದನ್ನು ಮನಗಂಡು ಮಕ್ಕಳ ಶಿಕ್ಷಣಕ್ಕೆ ಆಧ್ಯತೆ ನೀಡಬೇಕು ಎಂದು ಹೇಳಿದರು.
ವಿಜಯಪುರ ವಿಜಯಾ ಕಾಲೇಜಿನ ಉಪನ್ಯಾಸಕ ಪ್ರದೀಪ್ ಮಕ್ಕಳಿಗೆ ಪ್ರೇರಕದಾಯಕವಾದ ಉಪನ್ಯಾಸವನ್ನು ನೀಡಿದರು. ದೇಶಭಕ್ತಿ, ತಂದೆ ತಾಯಿ ಗುರು ಹಿರಿಯರ ಬಗ್ಗೆ ಗೌರವ, ಚಿಂತಕರ ನುಡಿಗಳು ಮುಂತಾದವುಗಳೊಂದಿಗೆ ಹಲವು ಸಾಧಕರನ್ನು ಉದಾಹರಿಸಿದರು.
ಪ್ಯಾರೆಗಾನ್ ಇಂಗ್ಲೀಷ್ ಶಾಲೆಯ ಕಾರ್ಯದರ್ಶಿ ಸಯ್ಯದ್ ಅನ್ಸರ್ ಅಹ್ಮದ್, ವಿಜಯಪುರ ವಿಜಯಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಆರ್.ಸಿ.ಮಂಜುನಾಥ್, ಪ್ರಾಂಶುಪಾಲರಾದ ಮಮತಾ, ಮಾಜಿ ಪುರಸಭಾ ಸದಸ್ಯ ಸಯ್ಯದ್ ಸಲಾಂ, ಮುಖ್ಯ ಶಿಕ್ಷಕ ಗಂಗಾಧರಪ್ಪ, ದೇವಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ನಿಜಗುಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ

0

ಶರಣರು ಅಂದು ಸಮಾಜವನ್ನು ಒಂದು­ಗೂಡಿಸುವ ಕೆಲಸ ಮಾಡಿದ್ದರು. ಅದರಿಂದಾ­ಗಿಯೇ ಸಮಾನತೆ ಸಾಧಿಸಲು ಸಾಧ್ಯವಾಯಿತು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ನಗರದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ಆಚರಿಸಲಾದ ನಿಜಗುಣ ಅಂಬಿಗರ ಚೌಡಯ್ಯ ಜಯಂತ್ಯುತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹನ್ನೆರಡನೇ ಶತಮಾ­ನದಲ್ಲಿದ್ದ ನಿಜಶರಣ ಅಂಬಿಗರ ಚೌಡಯ್ಯ­ನವರು ಶ್ರೇಷ್ಠ ವಚನಕಾರರು. ಅವರ ವಚನದಲ್ಲಿ ಅಗಾಧವಾದ ಸಾರವಿದೆ. ಅದನ್ನು ಮುಂದಿನ ಜನಾಂಗಕ್ಕೆ ತಲುಪಿಸುವ ಅಗತ್ಯವಿದೆ. ಇಂಥಹ ಮಹಾನ್ ವ್ಯಕ್ತಿಗಳ ಆದರ್ಶವನ್ನು ಯುವಪೀಳಿಗೆ ಮೈಗೂಡಿಸಿಕೊಳ್ಳಬೇಕಿದೆ ಎಂದು ಹೇಳಿದರು.
ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ, ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ ನಿಜಗುಣ ಅಂಬಿಗರ ಚೌಡಯ್ಯ ಅವರ ಬಗ್ಗೆ ಮಾತನಾಡಿದರು.
ಈ ಸಂದರ್ಭದಲ್ಲಿ ಬೆಸ್ತ ಜನಾಂಗದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಮಾಡಲಾಯಿತು. ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಣಾಧಿಕಾರಿ ಗಣಪತಿ ಸಾಕರೆ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ಆಂಜಿನಮ್ಮ, ಉಪಾಧ್ಯಕ್ಷ ಡಿ.ಎಸ್.ಎನ್.ರಾಜು, ಪಿ.ಎಲ್.ಡಿ.ಬ್ಯಾಂಕ್ ಅಧ್ಯಕ್ಷ ಎ.ರಾಮಚಂದ್ರಪ್ಪ, ಬೆಸ್ತರ ಸಂಘದ ಜಿಲ್ಲಾ ಅಧ್ಯಕ್ಷ ಕೆ.ಜಯರಾಮ್, ತಾಲ್ಲೂಕು ಕಾರ್ಯದರ್ಶಿ ವೆಂಕಟಾದ್ರಿ, ನ್ಯಾತಪ್ಪ, ಎಸ್.ಎನ್.ಕೃಷ್ಣಮೂರ್ತಿ, ಎನ್.ವೆಂಕಟೇಶ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

0

ಮಾನಸ ಮೆಡಿಕಲ್ ಟ್ರಸ್ಟ್ ಹಾಗೂ ಪ್ರಜೆಕ್ಟ್ ದೃಷ್ಠಿ್ಟಿ ಸಹಯೋಗದೊಂದಿಗೆ ನಗರದ ಓ.ತಿಮ್ಮಯ್ಯ ರಸ್ತೆಯಲ್ಲಿರುವ ಮಾನಸ ಆಸ್ಪತ್ರೆಯ ಆವರಣದಲ್ಲಿ ಗುರುವಾರ ಉಚಿತ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರವನ್ನು ಆಯೋಜಿಸಲಾಗಿತ್ತು.
‘ಗ್ರಾಮೀಣ ಪ್ರದೇಶದ ಜನರು ಚಿಕಿತ್ಸಾ ಶಿಬಿರದಲ್ಲಿ ಚಿಕಿತ್ಸೆ ಪಡೆಯುವಂತಾಗಬೇಕು. ಕೂಲಿ ಕಾರ್ಮಿಕರು, ಬಡಜನರು, ಗ್ರಾಮೀಣ ಪ್ರದೇಶದ ಜನರು ಹಲವು ಕಣ್ಣಿನ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಕಣ್ಣಿನ ಆಪರೇಶನ್ ಮಾಡಿಸಲು ಸುಮಾರು ೧೦ ರಿಂದ ೧೫ ಸಾವಿರ ರೂ ವೆಚ್ಚವಾಗುತ್ತಿದ್ದು, ಆಸ್ಪತ್ರೆಯಲ್ಲಿ ದುಬಾರಿ ವೆಚ್ಚ ಮಾಡಲು ಕಷ್ಟವಾಗಿದ್ದು, ಇಂತಹ ಆರೋಗ್ಯ ಶಿಬಿರಗಳ ಪ್ರಯೋಜನವನ್ನು ಪಡೆದು ತಮ್ಮ ಆರೋಗ್ಯ ಸುಧಾರಿಸಿಕೊಳ್ಳಬೇಕು’ ಎಂದು ಶಿಬಿರವನ್ನು ಉದ್ಘಾಟಿಸಿದ ಶಾಸಕ ಎಂ.ರಾಜಣ್ಣ ತಿಳಿಸಿದರು.
ಡಾ. ಮಧುಕರ್ ಮಾತನಾಡಿ, ಪ್ರತಿ ತಿಂಗಳ ಕೊನೆಯ ಗುರುವಾರ ಮಾನಸ ಮೆಡಿಕಲ್ಸ್ ಹಾಗೂ ಪ್ರಾಜೆಕ್ಟ್ ದೃಷ್ಠಿ ವತಿಯಿಂದ ಉಚಿತ ಕಣ್ಣಿನ ಶಸ್ತ್ರ ಶಿಬಿರವನ್ನು ಏರ್ಪಡಿಲಾಗಿದೆ. ಗೌರಿಬಿದನೂರಿನಲ್ಲಿ ಮಾನಸ ಮೆಡಿಕಲ್ಸ್ನಿಂದ ಕಣ್ಣಿನ ಆಸ್ಪತ್ರೆಯ ಶಾಖೆಯನ್ನು ಪ್ರಾರಂಭಮಾಡಿದ್ದು, ರೋಗಿಗಳನ್ನು ಆಸ್ಪತ್ರೆಯ ವಾಹನದಲ್ಲೇ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿ, ಔಷಧಿಗಳನ್ನು ಉಚಿತವಾಗಿ ನೀಡಿ ಅವರ ಮನೆಗೆ ಬಿಡಲಾಗುವುದು, ಸಾರ್ವಜನಿಕರು ವಯಸ್ಸಿನ ಅಂತರವಿಲ್ಲದೆ ಕಣ್ಣಿನ ತೊಂದರೆಯಿದ್ದಲ್ಲಿ ಬಂದು ಶಿಬಿರದ ಪ್ರಯೋಜನವನ್ನು ಪಡೆಯಬಹುದು’ ಎಂದು ಹೇಳಿದರು.
ಡಾ.ಶಬರಿ, ನಗರಸಭಾ ಸದಸ್ಯರಾದ ಅಫ್ಸರ್ ಪಾಷ, ಮಹಮ್ಮದ್ ಅಲಿ, ಬಿ.ಜೆ.ಪಿ ಚಿಕ್ಕಬಳ್ಳಾಪುರ ಉಪಾದ್ಯಕ್ಷ ದಾಮೋದರ್, ರಮೇಶ್, ಮಾನಸ ಆಸ್ಪತ್ರೆಯ ಶಿವಕುಮಾರ್, ಸಿಬ್ಬಂದಿ, ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಲೋಕಾಯುಕ್ತರಿಂದ ಸರ್ವಜನಿಕ ಅಹವಾಲು ಸ್ವೀಕಾರ ಸಭೆ

0

ಜಮೀನಿನ ಸರ್ವೆ ಮಾಡಿಸುವ ಪ್ರಕರಣವೊಂದು ಕಳೆದ ನಾಲ್ಕು ವರ್ಷಗಳಿಂದಲೂ ನೆನೆಗುದಿಗೆ ಬಿದ್ದಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಲೋಕಾಯುಕ್ತ ಎಸ್ಪಿ ಡಿ.ಎಸ್.ಸಿದ್ದೇಗೌಡರವರು ಭೂಮಾಪನ ಇಲಾಖೆಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಲೋಕಾಯುಕ್ತರಿಂದ ಸರ್ವಜನಿಕ ಅಹವಾಲು ಸ್ವೀಕಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ನಾಲ್ಕು ವರ್ಷಗಳ ಹಿಂದಿನ ಕಡತವೂ ಬಾಕಿ ಇರುವುದಕ್ಕೆ ಕಳವಳ ವ್ಯಕ್ತಪಡಿಸಿದರು.
ಚೀಮನಹಳ್ಳಿಯ ಮುನಿರಾಜು ತಮಗೆ ಸೇರಿದ ಸರ್ವೆ ನಂಬರ್ ೫೭ ಪಿ ೧ರ ಪೈಕಿ ೧.೨೦ಎಕರೆಯನ್ನು ದುರಸ್ಥಿ ಮಾಡುವಂತೆ ಕೋರಿ ಅರ್ಜಿ ಸಲ್ಲಿಸಲಾಗಿದೆ. ಈ ಬಗ್ಗೆ ನ್ಯಾಯಾಲಯದಿಂದಲೂ ಆದೇಶವಾಗಿದೆ. ಆದರೆ ಅದಕ್ಕೆ ಸಂಬಂಧಿಸಿದ ಕಡತವನ್ನು ತಾಲ್ಲೂಕು ಕಚೇರಿಯಲ್ಲಿ ಉದ್ದೇಶಪೂರ್ವಕವಾಗಿಯೆ ಕಳವು ಮಾಡಿ ಕಡತ ನಾಪತ್ತೆ ಎಂದು ಕಚೇರಿಗೆ ವೃತಾ ಅಲೆದಾಡಿಸುತ್ತಿದ್ದಾರೆ ಎಂದು ದೂರಿದರು.
ಹೊಸಪೇಟೆಯ ಎಚ್.ಎಂ.ಮುನಿಕೃಷ್ಣಪ್ಪ ತಮ್ಮ ಹಿರಿಯರಿಗೆ ನೀರಗಂಟಿ ಇನಾಮ್ತಿಯಾಗಿ ೧೯.೩೩ ಎಕರೆ ಜಮೀನು ಮಂಜೂರಾಗಿದ್ದು ಅದು ೧೩ ಮಂದಿಗೆ ಸೇರಬೇಕು. ಸದರಿ ಜಮೀನಿನ ಎಲ್ಲ ದಾಖಲೆಗಳು ಲಭ್ಯವಿದ್ದರೂ ಪಹಣಿಯನ್ನು ಯಾರ್ಯಾರಿಗೆ ಎಷ್ಟೆಷ್ಟು ಜಮೀನು ಎಂಬುದನ್ನು ನಮೂದಿಸಬೇಕೆಂದು ಕೋರ್ಟು ಕಚೇರಿ, ತಹಸೀಲ್ದಾರ್ ಕಚೇರಿ ಅಂತ ಓಡಾಡುತ್ತಿದ್ದರೂ ತಹಸೀಲ್ದಾರ್ ಕಚೇರಿಯಲ್ಲಿ ಕೆಲಸ ಆಗುತ್ತಿಲ್ಲ ಎಂದು ದೂರಿದರು.
ಲೋಕಾಯುಕ್ತ ಎಸ್ಪಿ ಡಿ.ಎಸ್.ಸಿದ್ದೇಗೌಡ, ಸಿಪಿಐ ಮಂಜೇಗೌಡರವರು ಅಹವಾಲುಗಳನ್ನು ವಿಲೇವಾರಿ ಮಾಡಿದರು. ಗ್ರೇಡ್-೨ ತಹಸೀಲ್ದಾರ್ ನಾಯಕ್, ಪುರಠಾಣೆಯ ಎಸ್ಐ ಪುರುಷೋತ್ತಮ್, ಕೃಷಿ ಸಹಾಯಕ ನಿರ್ದೆಶಕ ದೇವೇಗೌಡ, ಬಿಸಿಎಂ ಇಲಾಖೆಯ ಶಂಕರ್ ಇನ್ನಿತರರು ಭಾಗವಹಿಸಿದ್ದರು.

ನಂದಿನಿ ವಿವಿದೋದ್ಧೇಶ ಸಹಕಾರ ಸಂಘದ ಮಳಿಗೆಗಳ ಉದ್ಘಾಟನೆ

0

ನಗರದ ಕಾಂಗ್ರೆಸ್ ಭವನದ ಹಿಂಭಾಗದಲ್ಲಿರುವ ನಂದಿನಿ ವಿವಿದೋದ್ಧೇಶ ಸಹಕಾರ ಸಂಘದ ವತಿಯಿಂದ ಶುಕ್ರವಾರ ಬಿತ್ತನೆ ಬೀಜ, ಕ್ರಿಮಿನಾಶಕ ಔಷಧಿಗಳು, ದಿನಸಿ, ನಿತ್ಯೋಪಯೋಗಿ ವಸ್ತುಗಳು ಹಾಗೂ ನಂದಿನಿ ಹಾಲು ಮತ್ತು ಹಾಲು ಉತ್ಪನ್ನಗಳ ಮಾರಾಟ ಮಳಿಗೆಗಳನ್ನು ಉದ್ಘಾಟಿಸಲಾಯಿತು.
‘ರೈತರ ಹಿತದೃಷ್ಠಿಯಿಂದ ಈಗಾಗಲೇ ರಸಗೊಬ್ಬರ ಹಾಗೂ ಬೂಸಾಹಿಂಡಿ ಮಾರಾಟವನ್ನು ಪ್ರಾರಂಭಿಸಿದ್ದು, ಹೈನುಗಾರಿಕೆಯನ್ನು ನಂಬಿರುವ ರೈತರಿಗೆ ಅನುಕೂಲವಾಗಲೆಂದು ಈ ದಿನ ಹಲವಾರು ಮಳಿಗೆಗಳನ್ನು ನಂದಿನಿ ವಿವಿದೋದ್ಧೇಶ ಸಹಕಾರ ಸಂಘದ ವತಿಯಿಂದ ಪ್ರಾರಂಭಿಸಲಾಗುತ್ತಿದೆ. ಹಾಲಿನ ಗುಣಮಟ್ಟ ಹೆಚ್ಚಿಸಲು ಬೂಸಾಹಿಂಡಿ, ಗುಣಮಟ್ಟದ ದಿನಬಳಕೆ ವಸ್ತುಗಳು ಹಾಗೂ ಮರಳಿ ಮನೆಗೆ ಎಂಬ ಪರಿಕಲ್ಪನೆಯ ರೈತರಿಂದ ಪಡೆದ ಹಾಲನ್ನು ವಿವಿಧ ಉತ್ಪನ್ನಗಳನ್ನಾಗಿಸಿ ಪುನಃ ಅವರ ಬಳಿಗೆ ತರುವ ಕೆಲಸವೂ ನಡೆದಿದೆ. ಇದರಿಂದ ರೈತರಿಗೆ ಸಾಕಷ್ಟು ಹಣ, ಸಮಯ ಉಳಿತಾಯವಾಗಲಿದ್ದು, ಆರ್ಥಿಕ ಚೇತರಿಕೆಯ ಕ್ರಮವಾಗಿದೆ’ ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ಕೋಚಿಮುಲ್ ಅಧ್ಯಕ್ಷ ಕಾಂತರಾಜ್, ನಿರ್ದೇಶಕ ಬಂಕ್ ಮುನಿಯಪ್ಪ, ಗುಡಿಯಪ್ಪ, ನಾಗರತ್ನಮ್ಮ, ರತ್ನಮ್ಮ, ಉಮೇಶ್, ಮುನಿಕೃಷ್ಣಪ್ಪ, ಸೂರ್ಯನಾರಾಯಣಗೌಡ, ದೊಣ್ಣಹಳ್ಳಿ ರಾಮಣ್ಣ, ಅಶ್ವತ್ಥರೆಡ್ಡಿ, ಡಾ.ಈಶ್ವರಯ್ಯ, ಮುನಾಂಜಿನಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಬಸಲೆಸೊಪ್ಪಿನ ಚಟ್ನಿ

0

ಬೇಕಾಗುವ ಸಾಮಗ್ರಿ
15 ಬಸಲೆಸೊಪ್ಪು
8-10 ಒಣಮೆಣಸು
15-20 ಬೆಳ್ಳುಳ್ಳಿ ಎಸಳು
1 ಕಪ್ಪು ತೆಂಗಿನ ತುರಿ
ಉಪ್ಪು
ಒಂದು ಚೂರು ಹುಣಸೆಹಣ್ಣು
ಕೊಬ್ಬರಿ ಎಣ್ಣೆ
ಮಾಡುವ ವಿಧಾನ
ಬಾಣಲೆಗೆ ಕೊಬ್ಬರಿ ಎಣ್ಣೆ ಹಾಕಿ ಬಸಲೆಸೊಪ್ಪನ್ನು ಚೆನ್ನಾಗಿ ಬಾಡಿಸಿಕೊಳ್ಳಿ ನಂತರ ಅದಕ್ಕೆ ಒಣಮೆಣಸು ಹಾಕಿ ಹುರಿಯಿರಿ. ಹುರಿದ ಮಿಶ್ರಣ, ತೆಂಗಿನ ತುರಿ, 2 ಬೆಳ್ಳುಳ್ಳಿ, ಉಪ್ಪು, ಹುಣಸೆಹಣ್ಣನ್ನು ಹಾಕಿ ಚೆನ್ನಾಗಿ ರುಬ್ಬಿ. ಇದಕ್ಕೆ ಕೊಬ್ಬರಿ ಎಣ್ಣೆಯಲ್ಲಿ 15 ಎಸಳು ಬೆಳ್ಳಳ್ಳಿ ಹಾಕಿ ಒಗ್ಗರಣೆ ಕೊಡಿ. ಇದನ್ನು ಅನ್ನಕ್ಕೆ ಹಾಕಿ ಕಲಸಿ ಊಟಮಾಡಿ.

ಸಿಗರೇಟ್ ಅಥವಾ ತಂಬಾಕು ಪದಾರ್ಥಗಳ ನಿಷೇಧದ ಬಗ್ಗೆ ಅರಿವು ಕಾರ್ಯಕ್ರಮ

0

ಕೊಟ್ಪಾ ಕಾಯಿದೆ ಜಾರಿಯಾದ ನಂತರ ತಾಲ್ಲೂಕಿನಾದ್ಯಂತ ಧೂಮಪಾನ, ಗುಟ್ಕಾ ಮತ್ತು ತಂಬಾಕು ಪದಾರ್ಥಗಳ ನಿಷೇಧ ವನ್ನು ಸಮರ್ಪಕವಾಗಿ ಜಾರಿಗೆ ತರುವ ಉದ್ದೇಶದಿಂದ ಜನಜಾಗೃತಿ ಸಭೆಗಳ ಮೂಲಕ ಅರಿವು ಮೂಡಿಸ ಲಾಗುತ್ತಿದೆ ಎಂದು ತಹಶೀಲ್ದಾರ್ ಜಿ.ಎ.ನಾರಾಯಣಸ್ವಾಮಿ ತಿಳಿಸಿದರು.
ನಗರದ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಗುರುವಾರ ಪೊಲೀಸ್ ಇಲಾಖೆ ಆಯೋಜಿಸಿದ್ದ ಸಿಗರೇಟ್ ಅಥವಾ ತಂಬಾಕು ಪದಾರ್ಥಗಳ ನಿಷೇಧದ ಬಗ್ಗೆ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬಸ್ ನಿಲ್ದಾಣ, ರಸ್ತೆಗಳು, ಹೋಟೆಲ್, ಉದ್ಯಾನವನ, ಶಾಲಾ ಕಾಲೇಜುಗಳು ಮತ್ತಿತರ ಪ್ರದೇಶಗಳಲ್ಲಿ ಬೀಡಿ, ಸಿಗ ರೇಟ್, ತಂಬಾಕು ಪದಾರ್ಥಗಳ ಬಳಕೆ ಕಡಿಮೆಯಾಗಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕಾಯಿದೆ ಇನ್ನೂ ಸಮರ್ಪಕವಾಗಿ ಜಾರಿಗೆ ಬಂದಿಲ್ಲ. ತಂಬಾಕು ಉತ್ಪನ್ನಗಳ ಮಾರಾಟಗಾರರು ಗೋದಾಮುಗಳಲ್ಲಿ ಬಾಕಿ ಇರುವ ಉತ್ಪನ್ನಗಳನ್ನು ಮಾರಾಟ ಮಾಡಲು ಗ್ರಾಮೀಣ ಪ್ರದೇಶದ ಅಂಗಡಿಗಳನ್ನು ಆಶ್ರಯಿಸಿದ್ದಾರೆ. ಹಿಂದೆ ಗುಟ್ಕಾ, ತಂಬಾಕು ಉತ್ಪನ್ನಗಳು, ಸಿಗರೇಟುಗಳನ್ನು ಪೂರೈಕೆ ಮಾಡುತ್ತಿದ್ದ ಬ್ಯಾಗ್ಗಳ ಒಳಮೈ ಯನ್ನು ಹೊರಗೆ ಮಾಡಿಕೊಂಡು ಉತ್ಪನ್ನಗಳ ಹೆಸರು ಹೊರಗೆ ಕಾಣಿಸದಂತೆ ಅವುಗಳಲ್ಲೇ ಉತ್ಪನ್ನಗಳನ್ನು ಸಾಗಿಸುತ್ತಿದ್ದಾರೆ. ಮಾರಾಟಗಾರರು ಈ ಉತ್ಪನ್ನಗಳನ್ನು ಮಾರಬಾರದು. ಸಿಕ್ಕಿಬಿದ್ದಲ್ಲಿ ದಂಡ ತೆರಬೇಕಾಗುತ್ತದೆ ಎಂಬ ಎಚ್ಚರವಿರಲಿ ಎಂದು ಹೇಳಿದರು.
ಸಂಪನ್ಮೂಲ ವ್ಯಕ್ತಿ ಡಾ. ಚಂದ್ರಶೇಖರ್ ಮಾತನಾಡಿ, ತಂಬಾಕು ಉತ್ಪನ್ನಗಳ ಸೇವನೆ ದುಶ್ಚಟವಾಗಿದೆ. ಆರೋಗ್ಯಕ್ಕೂ ಹಾನಿಕಾರಕ. ಸಾರ್ವಜನಿಕ ಸ್ಥಳಗಳಲ್ಲಿ ಸೇವನೆ ಮಾಡುವುದರಿಂದ ಅಕ್ಕಪಕ್ಕದವರ ಆರೋಗ್ಯಕ್ಕೂ ಹಾನಿಯಾಗುತ್ತದೆ. ದೇಶದಲ್ಲಿ 10 ಲಕ್ಷ, ರಾಜ್ಯದಲ್ಲಿ 60 ಸಾವಿರ ಜನ ತಂಬಾಕು ಉತ್ಪನ್ನಗಳ ಚಟದಿಂದಲೇ ವರ್ಷಕ್ಕೆ ಮರಣ ಹೊಂದುತ್ತಾರೆ. ಮಕ್ಕಳು, ಗರ್ಭಿಣಿಯರ ಮೇಲೆ ತಂಬಾಕು ಉತ್ಪನ್ನಗಳ ದುಷ್ಪರಿಣಾಮ ಹೆಚ್ಚು. ಸಾರ್ವಜನಿಕರ ಹಿತರಕ್ಷಣೆಗಾಗಿಯೇ ಕೊಟ್ಪಾ ಕಾಯಿದೆ ಜಾರಿಗೆ ಬಂದಿದೆ ಎಂದು ನುಡಿದರು.
ಸರ್ಕಲ್ ಇನ್ಸ್ಪೆಕ್ಟರ್ ಶ್ರೀನಿವಾಸಮೂರ್ತಿ, ಸಬ್ಇನ್ಸ್ಪೆಕ್ಟರುಗಳಾದ ಪುರುಷೋತ್ತಮ್, ರಾಘವೇಂದ್ರ, ಸಿ.ಡಿ.ಪಿ.ಒ ಅಧಿಕಾರಿ ಲಕ್ಷ್ಮೀದೇವಮ್ಮ, ಕೃಷಿ ಇಲಾಖೆಯ ಅಧಿಕಾರಿ ದೇವೇಗೌಡ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಖಾಸಗೀಕರಣ ವಿರೋಧಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಜಾಗೃತಿ ಜಾಥಾ

0

ಅಂಗನವಾಡಿ ಕೇಂದ್ರಗಳನ್ನು ಮತ್ತು ಐ.ಸಿ.ಡಿ.ಎಸ್ ಯೋಜನೆಯನ್ನು ಖಾಸಗೀಕರಿಸಲು ಯೋಜಿಸಿರುವ ಸರ್ಕಾರಿ ಯೋಜನೆಯನ್ನು ವಿರೋಧಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲ್ಲೂಕು ಘಟಕದ ಸದಸ್ಯರು ಗುರುವಾರ ತಾಲ್ಲೂಕಿನ ಎಲ್ಲಾ ಪಂಚಾಯತಿಗಳಿಗೆ ಜಾಗೃತಿ ಜಾಥಾ ಪ್ರಾರಂಭಿಸಿದರು.
ಸರ್ಕಾರದ ಖಾಸಗೀಕರಣ ನೀತಿಯನ್ನು ವಿರೋಧಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯ ಮುಂದೆ ಫೆಬ್ರುವರಿ 2 ರಂದು ಅನಿರ್ಧಿಷ್ಠಾವಧಿ ಪ್ರತಿಭಟನೆಯನ್ನು ನಡೆಸುತ್ತಿದ್ದು, ತಾಲ್ಲೂಕು ಘಟಕದ ಸದಸ್ಯರು ಗುರುವಾರ ತಾಲ್ಲೂಕಿನ ಎಲ್ಲಾ ಪಂಚಾಯತಿಗಳಿಗೆ ಬೆಂಬಲ ಕೋರಿ ಜಾಥಾ ನಡೆಸಿದರು.
ಅನೇಕ ಬಡ ಕುಟುಂಬಗಳಿಗೆ ಆಶಾ ಕಿರಣವಾಗಿದ್ದ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಇಂದು ಇಲಾಖೆಯನ್ನಾಗಿ ಮಾರ್ಪಡಿಸಿ ಖಾಯಂ ಮಾಡುವ ಬದಲು ಬಲಹೀನಗೊಳಿಸಲಾಗುತ್ತಿದೆ. ಅಂಗನವಾಡಿ ಕೇಂದ್ರದ ಯಜಮಾನಿಕೆ ಮತ್ತು ನಿರ್ವಹಣೆಯನ್ನು ಸ್ವಯಂ ಸೇವಾ ಸಂಸ್ಥೆಗಳಿಗೆ ಹಾಗೂ ಶ್ರೀಮಂತ ಹಿತಾಸಕ್ತಿಗಳಿಗೆ ನೀಡಲಾಗುತ್ತಿದೆ. ಪೂರ್ವ ಪ್ರಾಥಮಿಕ ಶಿಕ್ಷಣವನ್ನು ನೀಡುವ ನೆಪದಲ್ಲಿ ಖಾಸಗಿ ಕಾನ್ವೆಂಟ್ಗಳಿಗೆ ಐಸಿಡಿಎಸ್ ಹಣವನ್ನು ವರ್ಗಾಯಿಸಲು ಪ್ರಸ್ತಾಪಿಸಲಾಗಿದೆ. ಸರ್ಕಾರ ತನ್ನ ನೀತಿಗಳನ್ನು ಬದಲಿಸಬೇಕು. ಅಂಗನವಾಡಿ ನೌಕರರಿಗೆ ಕನಿಷ್ಠ ಕೂಲಿಯನ್ನು ನೀಡಬೇಕೆಂದು ಈ ಸಂದರ್ಭದಲ್ಲಿ ಸಿ.ಐ.ಟಿ.ಯು ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀದೇವಮ್ಮ ಒತ್ತಾಯಿಸಿದರು.
ಸಿ.ಐ.ಟಿ.ಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಂಜುಳಮ್ಮ, ಕರ್ನಾಟಕ ಪ್ರಾಂತ್ಯ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಬಿ.ಎನ್.ಮುನಿಕೃಷ್ಣಪ್ಪ, ಎನ್.ಪಾಪಣ್ಣ, ಮುನೀಂದ್ರ, ಸುಬ್ರಮಣಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಚಾಗೆ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ

0

ಶಿಡ್ಲಘಟ್ಟ ತಾಲ್ಲೂಕಿನ ಚಾಗೆ ಗ್ರಾಮದಲ್ಲಿ ಗುರುವಾರ ಬೆಳಗಿನ ಜಾವ ದೇವರಾಜ್ ಎಂಬುವವರಿಗೆ ಸೇರಿದ ಗುಡಿಸಲು ಆಕಸ್ಮಿಕ ಬೆಂಕಿಗೆ ತುತ್ತಾಗಿ ಸಂಪೂರ್ಣ ಭಸ್ಮವಾಗಿದೆ.

error: Content is protected !!