31.1 C
Sidlaghatta
Friday, June 2, 2023

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

- Advertisement -
- Advertisement -

ಅಂಗನವಾಡಿ ಕಾರ್ಯಕರ್ತೆಯರ ವಿವಿಧ ಬೇಡಿಕೆಗಳನ್ನು ಈಡೆರೀಸಬೇಕೆಂದು ಒತ್ತಾಯಿಸಿ ಸಿ.ಐ.ಟಿ.ಯು ವತಿಯಿಂದ ಸೋಮವಾರ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
ಹಲವು ವರ್ಷಗಳಿಂದಲೂ ಅಂಗನವಾಡಿ ಕಾರ್ಯರ್ತೆಯರ ಬೇಡಿಕೆಗಳ ಈಡೆರಿಕೆ ಒತ್ತಾಯಿಸುತ್ತಿದ್ದರೂ ಸಹ ಸರ್ಕಾರಗಳು ಸಕಾರತ್ಮಕವಾಗಿ ಸ್ವಂದಿಸುತ್ತಿಲ್ಲ. ಅಂಗನವಾಡಿ ಕಾರ್ಯಕರ್ತರ ಪ್ರಮುಖ ಬೇಡಿಕೆಗಳಾದ, ಅಂಗನವಾಡಿ ಕೇಂದ್ರಗಳನ್ನು ಶಿಶು ಪಾಲನ ಕೇಂದ್ರಗಳನ್ನಾಗಿ ಪರಿರ್ವತಿಸಬೇಕು. ಐಸಿಡಿಎಸ್ನ್ನು ಪ್ರತ್ಯೇಕ ನಿರ್ದೇಶನಾಲಯವನ್ನಾಗಿ ಮಾಡಬೇಕು. ಕನಿಷ್ಠ ಮಾಸಿಕ ವೇತನ, ಸರ್ಕಾರಿ ಪಿಂಚಣಿ, ಪರಿಹಾರ ಮೊತ್ತವನ್ನು ಪರಿಷ್ಕರಿಸಬೇಕು, ದಿನಭತ್ಯೆ ಹೆಚ್ಚಳ ಮೊದಲಾದ ಬೇಡಿಕೆಗಳನ್ನು ಈಡೆರಿಸಬೇಕೆಂದು ಒತ್ತಾಯಿಸಿದರು.
ಬೇರೆ ರಾಜ್ಯಗಳಲ್ಲಿ ಈ ಬೇಡಿಕೆಗಳನ್ನು ಈಡೇರಿಸಿದ್ದಾರೆ, ಆದರೆ ನಮ್ಮ ರಾಜ್ಯದಲ್ಲಿ ಮಿಷನ್ ಮೋಡನ್ನು ಸರ್ಕಾರ ಜಾರಿ ಮಾಡಲು ಹೊರಟಿದೆ. ಈ ಕ್ರಮವನ್ನು ಖಂಡಿಸಿ ಅಂಗನವಾಡಿ ನೌಕರರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.
ಸಿ.ಐ.ಟಿ.ಯು ಕಾರ್ಯಕರ್ತೆಯರು ನಗರದ ಪ್ರಮಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ, ಬಸ್ ನಿಲ್ದಾಣದ ಬಳಿ ಮಾನವ ಸರಪಳಿ ನಿರ್ಮಿಸಿದರು. ಕೇಂದ್ರ ಸಚಿವೆ ಮೇನಕಾಗಾಂಧಿ ಮತ್ತು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.
ನಂತರ ಪ್ರತಿಭಟನಾಕಾರರು ಬೇಡಿಕೆಗಳನ್ನು ಈಡೆರಿಸಲು ತಹಶೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಪ್ರತಿಭಟನೆಯಲ್ಲಿ ಅಂಗನವಾಡಿ ಕಾರ್ಯರ್ತೆಯರು, ಬಿಸಿಯೂಟ ನೌಕರರು, ಅಕ್ಷರ ದಾಸೋಹ ಕಾರ್ಯರ್ತೆಯರು ಪಾಲ್ಗೊಂಡಿದ್ದರು.

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.
Captcha verification failed!
CAPTCHA user score failed. Please contact us!
error: Content is protected !!