ಗುಡಿಬಂಡೆ ತಾಲ್ಲೂಕಿನ ತಿರುಮಣಿ ಗ್ರಾಮದಲ್ಲಿ ಅಂಗವಿಕಲ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಅಂಗವಿಕಲರು ಮತ್ತು ರೈತ ಮುಖಂಡರು ಶನಿವಾರ ಪಟ್ಟಣದ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟಿಸಿದರು.
ಸ್ವಾಮಿ ವಿವೇಕಾನಂದ ಅಂಗವಿಕಲ ಕ್ಷೇಮಾಭಿವೃದ್ಧಿ ಸಂಸ್ಥೆ ಹಾಗೂ ರೈತ ಸಂಘದ ಸದಸ್ಯರು ಜೊತೆಗೊಡಿ ತಾಲ್ಲೂಕು ಕಚೇರಿಯ ಮುಂದೆ ಪ್ರತಿಭಟನೆ ನಡೆಸಿ, ಅಪ್ರಾಪ್ತ ಮಕ್ಕಳ ಹಾಗೂ ಮಹಿಳೆಯರ ಮೇಲೆ ನಿರಂತರವಾಗಿ ಅತ್ಯಾಚಾರ ದೌರ್ಜನ್ಯಗಳು ನಡೆಯುತ್ತಿದ್ದು ಅಂಗವಿಕಲ ಮಕ್ಕಳ ಮತ್ತು ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ, ಆದ್ದರಿಂದ ಅಧಿಕಾರಿಗಳು ಅತ್ಯಾಚಾರಕ್ಕೆ ಯತ್ನಿಸಿರುವ ಅಪರಾಧಿಯ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಅತ್ಯಾಚಾರಕ್ಕೆ ಒಳಗಾದವರಿಗೆ ಸರ್ಕಾರದಿಂದ ಅರ್ಥಿಕ ಸಹಾಯ ಮಾಡಬೇಕು. ಮುಂದೆ ಇಂತಹ ಅಹಿತಕರ ಘಟನೆಗಳು ನಡೆಯದಂತೆ ಕಟ್ಟೆಚರ ವಹಿಸಬೇಕು ಎಂದು ಒತ್ತಾಯಿಸಿ ಶಿರಸ್ತೆದಾರರಿಗೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸ್ವಾಮಿ ವಿವೇಕಾನಂದ ಅಂಗವಿಕಲ ಕ್ಷೇಮಾಭಿವೃದ್ಧಿ ಸಂಘದ ಶಾಂತಮ್ಮ, ಮಾರಪ್ಪ, ಭಾಸ್ಕರ್, ಸುಬ್ರಮಣಿ, ಮೂರ್ತಿ, ಮಂಜುನಾಥ್, ರೂಪ, ಮುನಿರಾಜು, ರೈತ ಸಂಘದ ಮಂಜುನಾಥ್, ಅಂಬರೀಷ್, ತ್ಯಾಗರಾಜ್, ನರಸಿಂಹರೆಡ್ಡಿ, ವೆಂಕಟರೆಡ್ಡಿ, ಮುನಿನಂಜಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -