ಪಟ್ಟಣದ ಕಾಂಗ್ರೆಸ್ ಭವನದಲ್ಲಿ ಅಂಧಮಕ್ಕಳಿಗೆ ಊಟ ಮತ್ತು ಬಟ್ಟೆಗಳನ್ನು ನೀಡುವ ಮೂಲಕ ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಹೊಸವರ್ಷಾಚರಣೆಯ ಕಾರ್ಯಕ್ರಮವನ್ನು ಆಯೋಜಿಸಿದ್ದರು.
ಈ ಸಂದರ್ಭದಲ್ಲಿ ಅಂಧಮಕ್ಕಳಿಗೆ ಬಟ್ಟೆಗಳನ್ನು ವಿತರಿಸಿ ಮಾತನಾಡಿದ ಕೆಪಿಸಿಸಿ ಉಪಾಧ್ಯಕ್ಷ ವಿ.ಮುನಿಯಪ್ಪ, ‘ಅಂಗವಿಕಲತೆ ಶಾಪವಲ್ಲ. ಅದೊಂದು ಆಕಸ್ಮಿಕವಷ್ಟೆ. ಜೀವನದಲ್ಲಿ ಉತ್ತಮ ಸಾಧನೆ ಮಾಡಲು ಹಲವು ದಾರಿಗಳಿವೆ. ಅಂಗವಿಕಲರಿಗೆ ಎಲ್ಲಾ ಕ್ಷೇತ್ರದಲ್ಲೂ ಅವಕಾಶ ಸಿಗಬೇಕು. ಸರ್ಕಾರದ ಯೋಜನೆಗಳು ಅವರನ್ನು ತಲುಪಬೇಕು. ಹೊಸವರ್ಷವನ್ನು ಉತ್ತಮ ರೀತಿಯಲ್ಲಿ ಪ್ರಾರಂಭಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರು ಪಕ್ಷವನ್ನು ಇದೇ ಉತ್ತಮ ಆದರ್ಶಗಳೊಂದಿಗೆ ಬಲಪಡಿಸುವತ್ತ ಶ್ರಮಿಸಬೇಕು. ರಾಜ್ಯ ಸರ್ಕಾರದ ಹಲವಾರು ಯೋಜನೆಗಳನ್ನು ಕಟ್ಟ ಕಡೆಯ ವ್ಯಕ್ತಿಯವರೆಗೂ ತಲುಪಿಸುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ. ಒಳ್ಳೆಯ ಕೆಲಸಗಳು ಉತ್ತಮ ಫಲಗಳನ್ನೇ ನೀಡುತ್ತವೆ’ ಎಂದು ಹೇಳಿದರು. ಆಶಾಕಿರಣ ಅಂಧಮಕ್ಕಳ ಶಾಲೆಯ ವಿದ್ಯಾರ್ಥಿಗಳು ಭಕ್ತಿಗೀತೆಗಳನ್ನು ಹಾಡಿದರು.
ಜಿಲ್ಲಾ ಪಂಚಾಯತಿ ಸದಸ್ಯ ಎಸ್.ಎಂ.ನಾರಾಯಣಸ್ವಾಮಿ, ಚಿಕ್ಕಮುನಿಯಪ್ಪ, ಲಕ್ಷ್ಮೀನಾರಾಯಣ, ಗುಡಿಯಪ್ಪ, ಎಚ್.ಎಂ.ಮುನಿಯಪ್ಪ, ರಾಮಕೃಷ್ಣಪ್ಪ, ಬಾಲಕೃಷ್ಣ, ಎನ್.ಮುನಿಯಪ್ಪ, ನಾಗರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -