ಅಂಬೇಡ್ಕರ್‍ರ 126 ನೇ ಜನ್ಮ ದಿನಾಚರಣೆ

- Advertisement -
- Advertisement -

ವಿದ್ಯೆಗೆ ಸರಿಸಮಾನವಾದದ್ದು ಪ್ರಪಂಚದಲ್ಲಿ ಬೇರಾವುದು ಇಲ್ಲ ಎಂದು ಸಮಾಜ ಸೇವಕ ಅರಕೆರೆ ಮುನಿರಾಜು ಅಭಿಪ್ರಾಯಪಟ್ಟರು.
ತಾಲೂಕಿನ ನಾರಾಯಣದಾಸರಹಳ್ಳಿ ಗ್ರಾಮದಲ್ಲಿ ದಲಿತ ಸಂಘರ್ಷ ಸಮಿತಿ ವತಿಯಿಂದ ಸೋಮವಾರ ಆಯೋಜಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರ 126 ನೇ ಜನ್ಮ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ವಿಶ್ವಸಂಸ್ಥೆಯಲ್ಲಿ ಅಂಬೇಡ್ಕರ್‍ರ ಹುಟ್ಟಿದ ದಿನವನ್ನು ವಿಶ್ವದ ಜ್ಞಾನ ದಿನವನ್ನಾಗಿ ಆಚರಿಸುತ್ತಿದ್ದರೂ ನಮ್ಮ ದೇಶದಲ್ಲಿ ಅಂಬೇಡ್ಕರ್‍ರನ್ನು ಕೇವಲ ಒಂದು ಸಮುದಾಯಕ್ಕೆ ಸೀಮಿತಗೊಳಿಸಿರುವುದು ಸರಿಯಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು ಸುಮಾರು 70 ವರ್ಷಗಳಾದರೂ ಇಂದಿಗೂ ದೇಶದಲ್ಲಿ ತಾಂಡವವಾಡುತ್ತಿರುವ ಅಸ್ಪøಶ್ಯತೆ, ಅಸಮಾನತೆ ಹೋಗಲಾಡಿಸಬೇಕಾದರೆ ಪ್ರತಿಯೊಬ್ಬರೂ ಉತ್ತಮ ಶಿಕ್ಷಣ ಪಡೆದು ವಿದ್ಯಾವಂತರಾದಾಗ ಮಾತ್ರ ಸಾಧ್ಯ ಎಂದರು.
ಬುದ್ದ, ಬಸವ, ಅಂಬೇಡ್ಕರ್‍ರ ಪ್ರಜೆಗಳೇ ಪಭುಗಳು ಎಂಬ ಸಂವಿಧಾನವನ್ನು ಗಾಳಿಗೆ ತೂರಿ ಅರಾಜಕತೆ ಸೃಷ್ಠಿಸಿರುವ ಇಂದಿನ ರಾಜಕೀಯ ವ್ಯವಸ್ಥೆ ನಾಶಪಡಿಸಿ ಉತ್ತಮ ರಾಜಕೀಯ ವ್ಯವಸ್ಥೆ ನಿರ್ಮಾಣ ಮಾಡಬೇಕಾದ ಅನಿವಾರ್ಯತೆ ಇಂದಿನ ಯುವಕರ ಮೇಲಿದ್ದು ಆ ನಿಟ್ಟಿನಲ್ಲಿ ಡಾ.ಬಿ.ಆರ್.ಅಂಬೇಡ್ಕರ್‍ರ ತತ್ವ ಸಿದ್ದಾಂತಗಳನ್ನು ಪ್ರತಿಯೊಬ್ಬರೂ ರೂಡಿಸಿಕೊಳ್ಳುವುದಷ್ಟೇ ಅಲ್ಲದೇ ಪ್ರತಿಯೊಬ್ಬರಿಗೂ ಮನವರಿಕೆ ಮಾಡಿಕೊಡುವ ಕೆಲಸವನ್ನು ಮಾಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ದಸಂಸ ರಾಜ್ಯ ಸಂಚಾಲಕ ಎನ್.ವೆಂಕಟೇಶಣ್ಣ, ಜಿಲ್ಲಾ ಸಂಚಾಲಕ ಬಿ.ವಿ.ಆನಂದ್, ಸಂಘಟನಾ ಸಂಚಾಲಕ ಜಿ.ನಾರಾಯಣಸ್ವಾಮಿ, ತಾ,ಸಂಚಾಲಕರಾದ ಲಕ್ಕೇನಹಳ್ಳಿ ವೆಂಕಟೇಶ್, ಹುಜಗೂರು ದೇವರಾಜ್, ಎನ್.ವೆಂಕಟೇಶ್, ತಾತಹಳ್ಳಿ ಚಲಪತಿ, ಮಾಜಿ ಸಂಚಾಲಕರಾದ ಜಿ.ನರಸಿಂಹಮೂರ್ತಿ, ದ್ಯಾವಕೃಷ್ಣಪ್ಪ, ಗ್ರಾಮಾಂತರ ಠಾಣೆ ಪಿಎಸ್ಸೈ ಪ್ರದೀಪ್‍ಪೂಜಾರಿ, ಸತೀಶ್, ಶ್ರೀನಿವಾಸ್, ಚೌಡಪ್ಪ, ಶಿವಪ್ಪ, ಓಬಳೇಶ್ ಮತ್ತಿತರರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!