ಅಂಬೇಡ್ಕರ್ ಭವನಕ್ಕೆ ಒತ್ತಾಯ

- Advertisement -
- Advertisement -

ರಾಷ್ಟ್ರಾದ್ಯಂತ ಎಲ್ಲಾ ಆಡಳಿತಾತ್ಮಕ ಕಛೇರಿಗಳು ಸೇರಿದಂತೆ ಗ್ರಾಮೀಣ ಪ್ರದೇಶಗಳಲ್ಲಿಯೂ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ರ ಪ್ರತಿಮೆ, ಭಾವಚಿತ್ರಗಳನ್ನಿಟ್ಟು ಪೂಜಿಸುವುದರೊಂದಿಗೆ ಸ್ಮಾರಕ ನಿರ್ಮಾಣ ಮಾಡಿ ಗೌರವಿಸಲಅಗುತ್ತಿದೆ. ಆದರೆ ನಗರದಲ್ಲಿ ಒಂದು ಅಂಬೇಡ್ಕರ್ ಭವನ ನಿರ್ಮಾಣ ಮಾಡಲಾಗದಿರುವುದು ದಲಿತ ಸಮುದಾಯದ ದುರದೃಷ್ಟ ಎಂದು ದ.ಸಂ.ಸ ತಾಲ್ಲೂಕು ಅಧ್ಯಕ್ಷ ಎನ್.ಎ.ವೆಂಕಟೇಶ್ ಹೇಳಿದರು.
ನಗರದ ತಾಲ್ಲೂಕು ಕಚೇರಿಯ ಪಕ್ಕದಲ್ಲಿರುವ ಹಳೆಯ ನ್ಯಾಯಾಲಯ ಕಟ್ಟಡದ ಜಾಗವನ್ನು ಅಂಬೇಡ್ಕರ್ ಭವನ ನಿರ್ಮಿಸಲು ಮೀಸಲಿಡಬೇಕೆಂದು ಒತ್ತಾಯಿಸಿ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪದಾಧಿಕಾರಿಗಳು ತಹಸೀಲ್ದಾರ್ ಕೆ.ಎಂ.ಮನೋರಮಾ ಅವರಿಗೆ ಮಂಗಳವಾರ ಮನವಿ ಪತ್ರ ಸಲ್ಲಿಸಿ ಅವರು ಮಾತನಾಡಿದರು.
ತಾಲ್ಲೂಕು ಕೇಂದ್ರ ಸ್ಥಾನಕ್ಕೆ ಪ್ರತಿನಿತ್ಯ ಸಾವಿರಾರು ಜನರು ಅನ್ಯ ಕೆಲಸಗಳ ನಿಮಿತ್ತ ಬರುವುದರಿಂದ ತಾಲ್ಲೂಕು ಕಛೇರಿ ಸಮೀಪದಲ್ಲಿಯೇ ಇರುವ ಹಳೆಯ ನ್ಯಾಯಾಲಯ ಕಟ್ಟಡದ ಜಾಗವನ್ನು ಅಂಬೇಡ್ಕರ್ ಭವನ ನಿರ್ಮಾಣ ಮಾಡಲು ಮೀಸಲಿಡಬೇಕು ಎಂದು ಒತ್ತಾಯಿಸಿದರು.
ದ.ಸಂ.ಸ ಪ್ರಧಾನ ಕಾರ್ಯದರ್ಶಿ ಎನ್.ನರಸಿಂಹಮೂರ್ತಿ, ಗುರುಮೂರ್ತಿ, ನಾರಾಯಣಪ್ಪ, ಅರುಣ್ ದೊಡ್ಡತಿರುಮಲಪ್ಪ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!