ಅಬಕಾರಿ ಇನ್ಸ್ ಪೆಕ್ಟರ್ ಮಹೇಶ್ ಮತ್ತು ಸಿಬ್ಬಂದಿ ನಗರದ ಚಿಂತಾಮಣಿ ರಸ್ತೆಯಲ್ಲಿರುವ ಉಲ್ಲೂರುಪೇಟೆ ಸರ್ಕಾರಿ ಶಾಲೆಯ ಬಳಿ ಗುರುವಾರ ರಾತ್ರಿ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ೨೫.೯೨ ಲೀಟರ್ ಮದ್ಯವನ್ನು ಸಾಗಾಣಿಕೆ ಮಾಡುತ್ತಿರುವುದನ್ನು ಪತ್ತೆಹಚ್ಚಿ ವಶಪಡಿಸಿಕೊಂಡಿದ್ದಾರೆ.
ಮದ್ಯ ಸಾಗಿಸುತ್ತಿದ್ದ ವೀರಾಪುರದ ಮಂಜುನಾಥ್ ಎನ್ನುವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿರುತ್ತದೆ. ದ್ವಿಚಕ್ರ ವಾಹನ ಹಾಗೂ ಮದ್ಯವನ್ನು ವಶಪಡಿಸಿಕೊಂಡಿದ್ದೇವೆ ಎಂದು ಅಬಕಾರಿ ಇನ್ಸ್ ಪೆಕ್ಟರ್ ಮಹೇಶ್ ತಿಳಿಸಿದ್ದಾರೆ.
ಸಬ್ ಇನ್ಸ್ ಪೆಕ್ಟರ್ ನಾಗರಾಜ್, ಸಿಬ್ಬಂದಿ ನಿತಿನ್ ಹಾಜರಿದ್ದರು.
- Advertisement -
- Advertisement -
- Advertisement -