ತಹಸೀಲ್ದಾರ್ ಕೆ.ಎಂ. ಮನೋರಮಾ ನೇತೃತ್ವದ ಅಧಿಕಾರಿಗಳು ಗುರುವಾರ ರಾತ್ರಿ ನಡೆಸಿದ ಕಾರ್ಯಾಚರಣೆಯಿಂದ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಒಂದು ಲಾರಿ ಸೇರಿದಂತೆ ಎಂಟು ಟ್ರಾಕ್ಟರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ತಾಲ್ಲೂಕಿನ ತಾದೂರು ಬಳಿ ಒಂದು ಲಾರಿ ಹಾಗು ನಾಲ್ಕು ಟ್ರಾಕ್ಟರ್ ಮತ್ತು ದಡಂಘಟ್ಟ ಸಮೀಪ ನಾಲ್ಕು ಟ್ರಾಕ್ಟರ್ಗಳನ್ನು ವಶಪಡಿಸಿಕೊಂಡಿದ್ದಾರೆ.
ತಹಸೀಲ್ದಾರ್ ಕೆ.ಎಂ.ಮನೋರಮಾ, ಗ್ರಾಮ ಲೆಕ್ಕಿಗರಾದ ಲಾರೆನ್ಸ್, ಆನಂದ್ ಮತ್ತಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.