ಅಕ್ರಮ ಮರಳು ಸಾಗಾಣಿಕೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಿಷೇಧವಿದ್ದರೂ ಕೂಡಾ ಎಗ್ಗಿಲ್ಲದೆ ಸಾಗಾಣಿಕೆಯಾಗುತ್ತಿರುವ ಮರಳನ್ನು ತಡೆಗಟ್ಟಲು ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಟ್ಟೆಚ್ಚರ ವಹಿಸಿದರೂ ಕೂಡಾ ಅಧಿಕಾರಿಗಳ ಕಣ್ಣಿಗೆ ಮರಳು ಎರಚುತ್ತಿರುವ ಮರಳು ಮಾಫಿಯಾ ಕುಳಗಳು ರಾತ್ರೋ ರಾತ್ರಿ ಮರಳು ಸಾಗಾಣಿಕೆಯಲ್ಲಿ ತೊಡಗಿರುವುದು ಬೆಳಕಿಗೆ ಬಂದಿದೆ.
ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲ್ಲೂಕಿನ ಗಂಜಿಗುಂಟೆ, ಪಲಿಚೇರ್ಲು, ದಿಬ್ಬೂರಹಳ್ಳಿಯ ಕಡೆಯಿಂದ ಮಳಮಾಚನಹಳ್ಳಿ ಮೂಲಕ ಜಂಗಮಕೋಟೆ ಮೂಲಕ ಬೆಂಗಳೂರಿನ ಕಡೆಗೆ ಸಾಗಾಣಿಕೆ ಮಾಡಿಕೊಂಡು ಲಕ್ಷಾಂತರ ರೂಪಾಯಿಗಳ ಹಣವನ್ನು ಲೂಟಿ ಮಾಡುತ್ತಿದ್ದಾರೆ.
ಮರಳು ಸಾಗಾಣಿಕೆಯ ಆರೋಪದಡಿಯಲ್ಲಿ ಇದುವರೆಗೂ ಗ್ರಾಮಾಂತರ ಠಾಣೆಯಲ್ಲಿ ಒಟ್ಟು 98 ದೂರುಗಳು ದಾಖಲಾಗಿವೆ, 30 ಲಕ್ಷಕ್ಕೂ ಹೆಚ್ಚು ಹಣವನ್ನು ಸರ್ಕಾರಕ್ಕೆ ದಂಡದ ರೂಪದಲ್ಲಿ ಸಲ್ಲಿಕೆ ಮಾಡಲಾಗಿದೆ, ಕಂದಾಯ ಇಲಾಖೆಯ ಅಧಿಕಾರಿಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಅಕ್ರಮವಾಗಿ ಮರಳು ಸಾಗಾಣಿಕೆಗೆ ಕಡಿವಾಣ ಹಾಕುವಲ್ಲಿ ವಿಫಲವಾಗಿದ್ದಾರೆ ಎಂದು ಸ್ಥಳೀಯ ನಾಗರೀಕರು ಆರೋಪಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಮರಳು ಸಾಗಾಣಿಕೆ ಮಾಡುತ್ತಿದ್ದ 10 ಟ್ರ್ಯಾಕ್ಟರ್ ಹಾಗೂ 03 ಲಾರಿಗಳನ್ನು ಗ್ರಾಮಾಂತರ ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -
- Advertisement -
- Advertisement -
- Advertisement -