20.8 C
Sidlaghatta
Friday, June 13, 2025

ಅಕ್ಷರ ಜ್ಞಾನದ ಅಗತ್ಯವಿದೆ

- Advertisement -
- Advertisement -

ಪ್ರತಿಯೊಬ್ಬರಿಗೂ ಅಕ್ಷರ ಜ್ಞಾನದ ಅಗತ್ಯವಿದೆ. ಸಂಪೂರ್ಣ ಸಾಕ್ಷರ ಸಮಾಜ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಹೊಣೆಗಾರಿಕೆ ತೆಗೆದುಕೊಳ್ಳಬೇಕು ಎಂದು ಗ್ರಾಮ ಪಂಚಾಯತಿ ಅಧ್ಯಕ್ಷ ಸುಬ್ಬಣ್ಣ ತಿಳಿಸಿದರು.
ತಾಲ್ಲೂಕಿನ ದಿಬ್ಬೂರಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಾಕ್ಷರ ಭಾರತ್ ಕಾರ್ಯಕ್ರಮದಡಿಯಲ್ಲಿ ಸುಮಾರು 40 ಮಂದಿ ಸ್ವಯಂ ಸೇವಕರಿಗೆ 3 ದಿನಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬರೂ ಅಕ್ಷರ ಜ್ಞಾನ ಹೊಂದಿ ಸಮಾಜದಲ್ಲಿ ನಡೆಯುತ್ತಿರುವ ಬಾಲ್ಯವಿವಾಹ, ಮೂಢನಂಬಿಕೆ, ದೌರ್ಜನ್ಯಗಳನ್ನು ತಡೆಗಟ್ಟಿ, ಸಂಪೂರ್ಣ ಸಾಕ್ಷರತಾ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ಸ್ವಯಂ ಸೇವಕರು ಹೆಚ್ಚಿನ ಆಸಕ್ತಿವಹಿಸಿ ಅನಕ್ಷರಸ್ಥರನ್ನು ಗುರುತಿಸಿ, ಅವರಲ್ಲಿ ಅಕ್ಷರ ಜ್ಞಾನ ಮೂಡಿಸಲು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು ಎಂದರು.
ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಮಮತಾ ಮಂಜುನಾಥ್, ಸಾಕ್ಷರ ಭಾರತ್ ಜಿಲ್ಲಾ ಸಂಯೋಜಕ ಆನಂದಕುಮಾರ್, ತಾಲ್ಲೂಕು ಸಂಯೋಜಕ ಟಿ.ವಿ.ಶ್ರೀನಿವಾಸ್, ಗ್ರಾಮ ಪಂಚಾಯತಿ ಸದಸ್ಯರಾದ ಶ್ರೀರಂಗಪ್ಪ, ಪ್ರಸನ್ನ, ನಾರಾಯಣಮ್ಮ, ಮೂರ್ತಿಯಮ್ಮ, ಪ್ರೇರಕರಾದ ಮುನಿವೆಂಕಟರೋಣ, ಅನಿತಾ, ಶಿಕ್ಷಕರಾದ ರಮೇಶ್, ಪ್ರಭಾಕರ್, ವೆಂಕಟರೆಡ್ಡಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!
error: Content is protected !!