ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷರಾಗಿ ಕೆ.ಎನ್.ವೆಂಕಟನಾರಾಯಣ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ ಜಿಲ್ಲಾ ಕೇಂದ್ರಗಳಲ್ಲಿ ನಡೆಯ ಬೇಕಿದ್ದ ಚುನಾವಣೆಯು ನಡೆಯುವುದಿಲ್ಲ ಎಂದು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಎಂ.ವಾಸುದೇವರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್ 13 ರಂದು ಮಹಾಸಭೆಯ ಅಧ್ಯಕ್ಷರ ಚುನಾವಣೆ ವಿವಿಧ ಜಿಲ್ಲಾ ಕೇಂದ್ರಗಳಲ್ಲಿ ಹಾಗೂ ಮಾರ್ಚ್ 20 ರಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದುದು ಈಗ ಇರುವುದಿಲ್ಲ. ಆದರೆ ಮಹಾಸಭೆಯ ಸರ್ವಸದಸ್ಯರ ಸಭೆ ಮಾತ್ರ ಈಗಾಗಲೇ ನಿಗದಿಪಡಿಸಿರುವಂತೆ ಮಾರ್ಚ್ 20 ರಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಕೆ.ಆರ್.ರಸ್ತೆಯಲ್ಲಿರುವ ಗಾಯನ ಸಮಾಜದಲ್ಲಿ ನಡೆಯಲಿದೆ ಎಂದು ತಿಳಿಸಿದ್ದಾರೆ.
- Advertisement -
- Advertisement -
- Advertisement -
- Advertisement -