ವಿವಿಧ ಸಂಘಟನೆಗಳ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸೆಪ್ಟೆಂಬರ್ ೨ ರಂದು ನಡೆಯುತ್ತಿರುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ನೀಡಲು ಸಿಐಟಿಯು ಸಂಯೋಜಿತ ನಾನಾ ಸಂಘಟನೆಗಳ ಮುಖಂಡರು ನಿರ್ಧರಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಈಚೆಗೆ ಸಭೆ ಸೇರಿದ್ದ ಸಿಯಟಿಯು ಸಂಯೋಜಿತ ಅಂಗನವಾಡಿ, ಬಿಸಿಯೂಟ, ಗ್ರಾಮ ಪಂಚಾಯತಿ ನೌಕರರ ಸಂಘ ಹಾಗೂ ಡಿವೈಎಫ್ಐ ಮುಂತಾದ ಸಂಘಟನೆಗಳ ಮುಖಂಡರು ಸಭೆ ಸೇರಿ ಸೆಪ್ಟೆಂಬರ್ ೨ ರಂದು ನಡೆಯುವ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಭಾಗವಹಿಸಲು ನಿರ್ಣಯವನ್ನು ತೆಗೆದುಕೊಳ್ಳಲಾಯಿತು.
ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಮದ್ಯಾಹ್ನ ಬಿಸಿಯೂಟ ತಯಾರಿಸುವ ಅಡುಗೆ ನೌಕರರ ಹಲವು ಸಮಸ್ಯೆಗಳನ್ನು ಕಳೆದ ಹಲವಾರು ವರ್ಷಗಳಿಂದಲೂ ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನವಾಗುತ್ತಿಲ್ಲ.
ಎಲ್ಲ ಗ್ರಾಮ ಪಂಚಾಯಿತಿ ನೌಕರರನ್ನು ಷರತ್ತು ಇಲ್ಲದೆ ನೇಮಕಾತಿಗೆ ಅನುಮೋದನೆ ನೀಡುವುದು ಹಾಗೂ ಈಗಾಗಲೆ ಕೆಲವು ನೌಕರರನ್ನು ಕೈಬಿಟ್ಟಿದ್ದು ಅವರನ್ನು ಪುನಃ ಸೇರಿಸಿಕೊಳ್ಳುವುದು, ನ್ಯಾಯಾಲಯದ ತೀರ್ಪಿನಂತೆ ಕನಿಷ್ಠ ವೇತನ ೧೫ ಸಾವಿರ ರೂಪಾಯಿಗಳನ್ನು ಕೊಡುವುದು.
ಗ್ರಾಮ ಪಂಚಾಯತಿ ನೌಕರರಿಗೆ ಬಡ್ತಿ ನೀಡುವುದು, ಕಾರ್ಯದರ್ಶಿ ಗ್ರೇಡ್-೧೧ನಿಂದ ಗ್ರೇಡ್-೧ಗೆ ಬಡ್ತಿ ನೀಡುವುದು. ಗ್ರಾಮ ಪಂಚಾಯತಿ ನೌಕರರನ್ನು ವಿನಾಕಾರಣ ಯಾವುದೆ ಮುನ್ಸೂಚನೆ ಇಲ್ಲದೆ ಕೆಲಸದಿಂದ ತೆಗೆದು ಹಾಕುವ ಪದ್ದತಿಯನ್ನು ಕೈ ಬಿಡಬೇಕು. ಈಗಾಗಲೆ ತೆಗೆದಿರುವವರನ್ನು ಮತ್ತೆ ಕೆಲಸಕ್ಕೆ ತೆಗೆದುಕೊಳ್ಳಬೇಕು.
ಸಾಕಷ್ಟು ನೌಕರರಿಗೆ ವರ್ಷಗಳಿಂದಲೂ ಬಾಕಿ ವೇತನ ನೀಡಬೇಕಿದ್ದು ಕೂಡಲೆ ಬಾಕಿ ವೇತನವನ್ನು ಬಿಡುಗಡೆ ಮಾಡಬೇಕು, ದಿಬ್ಬೂರಹಳ್ಳಿ ಗ್ರಾಮ ಪಂಚಾಯಿತಿ ನೌಕರ ಕಾರ್ಯ ನಿರ್ವಸುತ್ತಿದ್ದಾಗಲೆ ಹೃದಯಾಘಾತದಿಂದ ಮೃತಪಟ್ಟಿದ್ದು ಅವರಿಗೆ ಸರ್ಕಾರದಿಂದ ಪರಿಹಾರ ನೀಡಬೇಕು.
ಗಂಜಿಗುಂಟೆ ಗ್ರಾಮ ಪಂಚಾಯಿತಿ ನೌಕರರ ಹೃದಯಾಘಾತದಿಂದ ಕರ್ತವ್ಯದ ವೇಳೆಯಲ್ಲಿ ನಿಧನರಾಗಿದ್ದು ಅವರಿಗೆ ಪರಿಹಾರ ನೀಡಬೇಕೆಂಬುದು ಸೇರಿದಂತೆ ಎಲ್ಲ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸೆಪ್ಟೆಂಬರ್ ೨ ರಂದು ಅಖಿಲ ಭಾರತ ಸಾರ್ವತ್ರಿಕ ಮುಷ್ಕರದಲ್ಲಿ ಭಾಗವಹಿಸಲು ತೀರ್ಮಾನಿಸಲಾಯಿತು.
ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿದೇವಮ್ಮ, ಬಿಸಿಯೂಟ ನೌಕರರ ಸಂಘದ ಮುನಿಲಕ್ಷ್ಮಮ್ಮ, ಡಿವೈಎಫ್ಐನ ಮುನೀಂದ್ರ, ಗ್ರಾಮ ಪಂಚಾಯತಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಸುದರ್ಶನ್, ಉಪಾಧ್ಯಕ್ಷ ಶಂಕರಪ್ಪ, ಪ್ರಧಾನ ಕಾರ್ಯದರ್ಶಿ ಕೆ.ಎನ್.ಪಾಪಣ್ಣ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -