Home News ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಹಣ್ಣು ಮತ್ತು ಬ್ರೆಡ್ ವಿತರಣೆ

ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಹಣ್ಣು ಮತ್ತು ಬ್ರೆಡ್ ವಿತರಣೆ

0

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಬಿಜೆಪಿಯ ತಾಲ್ಲೂಕು ಘಟಕ ಮತ್ತು ರೈತ ಮೋರ್ಚಾದ ವತಿಯಿಂದ ಗುರುವಾರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್ ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಸುರೇಂದ್ರಗೌಡ, ‘ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಈ ದೇಶ ಕಂಡ ಅಪ್ರತಿಮ ನಾಯಕರು. ಅವರು ಪ್ರಧಾನಿಯಾಗಿದ್ದಾಗ ದೇಶದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಕ್ರಮಗಳು ಇಂದಿಗೂ ಜನಪ್ರಿಯವಾಗಿವೆ. ವಾಜಪೇಯಿ ಅವರ ಕನಸಾಗಿರುವ ನದಿಗಳ ಜೋಡಣೆ ಕಾರ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಅವರಿಗೆ ಭಾರತರತ್ನ ಪ್ರಶಸ್ತಿ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ’ ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರು ಜಿಲ್ಲಾ ಪಂಚಾಯತಿ ಕಟ್ಟಡದ ಅಕ್ಕಪಕ್ಕ ಸ್ವಚ್ಛತಾ ಕಾರ್ಯವನ್ನು ನಡೆಸಿದರು.
ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಿ.ಮಂಜುಳಾ ಸುರೇಶ್, ರಮೇಶ್ ಬಾಯಿರಿ, ಶ್ರೀರಾಮರೆಡ್ಡಿ, ದಾಮೋದರ್, ಶಿವಕುಮಾರಗೌಡ, ನಂದೀಶ್, ರಾಘವೇಂದ್ರ, ಶ್ರೀಧರ್, ಸುಜಾತಮ್ಮ, ಮುನಿರತ್ನಮ್ಮ, ರತ್ನಮ್ಮ, ಶಿವಮ್ಮ, ಸುಶೀಲಮ್ಮ, ತ್ಯಾಗರಾಜ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.