Home News ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಹೊನಲು ಬೆಳಕಿನ ಕಬಡ್ಡಿ ಕ್ರೀಡಾಕೂಟ

ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಹೊನಲು ಬೆಳಕಿನ ಕಬಡ್ಡಿ ಕ್ರೀಡಾಕೂಟ

0

ಪಟ್ಟಣದ ನೆಹರೂ ಕ್ರೀಡಾಂಗಣದಲ್ಲಿ ಶನಿವಾರ ರಾತ್ರಿ ಕರ್ಣಶ್ರೀ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನದ ಪ್ರಯುಕ್ತ ಹೊನಲು ಬೆಳಕಿನ ಕಬಡ್ಡಿ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.
29dec2ಕರ್ಣಶ್ರೀ ಚಾರಿಟೆಬಲ್ ಟ್ರಸ್ಟ್ ಅಧ್ಯಕ್ಷ ಶಿವಕುಮಾರಗೌಡ ಮಾತನಾಡಿ,‘ಗ್ರಾಮೀಣ ಭಾಗದ ಜಾನಪದ ಸೊಗಡನ್ನು ಹೊಂದಿರುವ ಕಬಡ್ಡಿ ಪಂದ್ಯವು ಈಗ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆಯುತ್ತಿದೆ. ಯುವಕರ ಆತ್ಮಸ್ಥೈರ್ಯ, ಸಂಘಟನಾ ಚತುರತೆ, ಒಗ್ಗಟ್ಟು, ದೇಹಧಾಡ್ಯವನ್ನು ಹೆಚ್ಚಿಸುವ ಈ ಕ್ರೀಡೆಗೆ ಪ್ರೋತ್ಸಾಹ ಅತ್ಯಗತ್ಯ. ತಾಲ್ಲೂಕು ಮಟ್ಟದ ಈ ಕ್ರೀಡಾಕೂಟದಿಂದಾಗಿ ಹಲವಾರು ಪ್ರತಿಭಾವಂತರು ಬೆಳಕಿಗೆ ಬರಲಿದ್ದಾರೆ. ‘ವಾಜಪೇಯಿ ಕರ್ಣಶ್ರೀ ಕಪ್’ ವಿಜೇತರಿಗೆ ನೀಡಲಿದ್ದೇವೆ. ಭಾಗವಹಿಸಿದವರೆಲ್ಲರಿಗೂ ಪ್ರೋತ್ಸಾಹ ದಾಯಕವಾಗಿ ನೆನಪಿನ ಕಾಣಿಕೆ ನೀಡಲಾಗುವುದು’ ಎಂದು ಹೇಳಿದರು.
ಚೀಮನಹಳ್ಳಿ, ಶೆಟ್ಟಹಳ್ಳಿ, ದೊಡ್ಡತೇಕಹಳ್ಳಿ, ದೊಡ್ಡಚೊಕ್ಕಂಡಹಳ್ಳಿ, ದೇವರಮಳ್ಳೂರು, ನಾಗಮಂಗಲ, ಭಕ್ತರಹಳ್ಳಿ ಮುಂತಾದ ತಾಲ್ಲೂಕಿನ ವಿವಿಧ ಗ್ರಾಮಗಳ 40ಕ್ಕೂ ಹೆಚ್ಚು ತಂಡಗಳು ಕಬಡ್ಡಿ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದವು.
ಪ್ರಥಮ ಬಹುಮಾನ 25 ಸಾವಿರ ರೂಗಳು, ದ್ವಿತೀಯ ಬಹುಮಾನ 15 ಸಾವಿರ ರೂಗಳು, ತೃತೀಯ ಬಹುಮಾನ 10 ಸಾವಿರ ರೂಗಳನ್ನು, ನಾಲ್ಕನೆಯ ಬಹುಮಾನವಾಗಿ 5 ಸಾವಿರ ರೂಗಳನ್ನು ನೀಡಲಾಯಿತು.
ಸಬ್ಇನ್ಸ್ಪೆಕ್ಟರ್ ಪುರುಷೋತ್ತಮ್, ದೇವರಾಜ್, ಸೋಮನಾಥ್, ಮಂಜುನಾಥ್, ನಂದೀಶ್, ನಾರಾಯಣಸ್ವಾಮಿ, ನಾಗನರಸಿಂಹ, ಮುನಿನರಸಿಂಹ, ರವಿ, ಮುನಿಯಪ್ಪ, ಛಲಪತಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.