ರಾಜ್ಯಾದ್ಯಂತ ಇರುವ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿನಿತ್ಯ ಪೌಷ್ಟಿಕ ಆಹಾರ ತಯಾರಿಸಿ, ಬಿಸಿಯೂಟ ನೀಡುವ ಅಕ್ಷರ ದಾಸೋಹ ಕಾರ್ಯಕ್ರಮ, ಸಾರ್ವಜನಿಕ ಶಿಕ್ಷಣ ಇಲಾಖೆಯ ಸಾರ್ಥಕ ಕಾರ್ಯಕ್ರಮವಾಗಿದೆ ಎಂದು ಅಕ್ಷರದಾಸೋಹ ಸಹಾಯಕ ನಿರ್ದೇಶಕ ವೆಂಕಟೇಶ್ ಹೇಳಿದರು.
ನಗರದ ಉಲ್ಲೂರುಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಭಾನುವಾರ ಅಕ್ಷರದಾಸೋಹ ಬಿಸಿಯೂಟ ಯೋಜನೆಯಡಿ ಅಡುಗೆ ಸಿಬ್ಬಂದಿಗಾಗಿ ಏರ್ಪಡಿಸಲಾಗಿದ್ದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರಿ ಶಾಲೆಗಳ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ನಿವಾರಿಸುವುದು, ಮಕ್ಕಳ ಭೌತಿಕ ಮತ್ತು ಮಾನಸಿಕ ಬೆಳವಣಿಗೆಗೆ ಬಿಸಿಯೂಟ ಯೋಜನೆ ಸಹಕಾರಿಯಾಗಿದೆ. ಇಂತಹ ಉತ್ತಮ ಯೋಜನೆ ಸದುಪಯೋಗವಾಗುವಂತೆ ನೋಡಿಕೊಳ್ಳುವುದು ಪ್ರತಿಯೊಬ್ಬ ಸಿಬ್ಬಂದಿಯ ಆದ್ಯ ಕರ್ತವ್ಯವಾಗಿದೆ. ಇನ್ನು ಅಡುಗೆ ಸಿಬ್ಬಂದಿ ತಯಾರಿಸಿದ ಅಡುಗೆಯನ್ನು ಕಡ್ಡಾಯವಾಗಿ ಶಾಲಾ ಶಿಕ್ಷಕರು ಮೊದಲು ಸೇವಿಸಿ ನಂತರ ಮಕ್ಕಳಿಗೆ ನೀಡಬೇಕು. ಪ್ರಮುಖವಾಗಿ ಅಡುಗೆಯವರು ಅಡುಗೆ ಮನೆಯ ಸ್ವಚ್ಚತೆ ಕಾಪಾಡಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಅಡುಗೆ ಅನಿಲದ ಬಳಕೆಯ ಬಗ್ಗೆ ಬಿಸಿಯೂಟ ಅಡುಗೆ ಸಿಬ್ಬಂದಿ ಯಾವ ಯಾವ ಸುರಕ್ಷತೆ ಕ್ರಮಗಳನ್ನು ಅನುಸರಿಸಬೇಕು ಎನ್ನುವುದನ್ನು ನಗರದ ಇಂಡೇನ್ ಗ್ಯಾಸ್ ಏಜೆನ್ಸಿಯ ಅಣ್ಣಪ್ಪ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಸಿಆರ್ಪಿ ಗಳಾದ ಚಂದ್ರಶೇಖರ್, ರಮೇಶ್, ಉಲ್ಲೂರುಪೇಟೆ ಶಾಲೆಯ ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ಇಂಡೇನ್ ಗ್ಯಾಸ್ ಏಜೆನ್ಸಿಯ ಮೇಲ್ವಿಚಾರಕ ಪ್ರಕಾಶ್, ಸಿಬ್ಬಂದಿ ಕುಮಾರ್, ಭರತ್, ರೂಪಸಿ ರಮೇಶ್ ಹಾಜರಿದ್ದರು.
- Advertisement -
- Advertisement -
- Advertisement -
- Advertisement -