ಮಧ್ಯಪ್ರದೇಶದಲ್ಲಿ ಏಳು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕತ್ತು ಸೀಳಿ ಬೀಕರವಾಗಿ ಕೊಲೆಯ ಯತ್ನ ನಡೆಸಿದ ಇರ್ಫಾನ್ಗೆ ಮರಣ ದಂಢನೆ ವಿಧಿಸುವ ಮೂಲಕ ಎಲ್ಲ ಅತ್ಯಾಚಾರಿಗಳಿಗೂ ಎಚ್ಚರಿಕೆ ನೀಡಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ ಆರೋಪಿಗೆ ಮರಣ ದಂಡನೆ ವಿಧಿಸಬೇಕೆಂದು ಆಗ್ರಹಿಸಿ ನಗರದಲ್ಲಿ ಮಂಗಳವಾರ ರಾತ್ರಿ ವಿವಿಧ ಹಿಂದೂಪರ ಸಂಘಟನೆಗಳ ಪದಾಧಿಕಾರಿಗಳು ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟಿಸಿದರು.
ನಗರದ ಸಾರಿಗೆ ಬಸ್ ನಿಲ್ದಾಣದಿಂದ ಓಟಿ ವೃತ್ತದವರೆಗೂ ಪಂಜಿನ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಬಸ್ ನಿಲ್ದಾಣ, ಕೋಟೆ ವೃತ್ತ, ಓಟಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು.
ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕತ್ತನ್ನು ಸೀಳಿ ಕೊಲೆಗೆ ಯತ್ನಿಸಿದ್ದಲ್ಲದೆ ನಮ್ಮ ಧರ್ಮದ ಬಾಲಕಿಯ ಮೇಲೆ ನಡೆದ ಅತ್ಯಾಚಾರಕ್ಕೆ ಪ್ರತೀಕವಾಗಿ ಈ ಅತ್ಯಾಚಾರವನ್ನು ನಡೆಸಿದ ಎಂದು ಸಮರ್ಥನೆ ಮಾಡಿಕೊಂಡ ಇರ್ಫಾನ್ ಎಂತಹ ಕ್ರೂರಿ ಎಂಬುದು ಇದರಿಂದ ಅರ್ಥವಾಗುತ್ತದೆ. ಅಂತಹ ಅಮಾನುಷ ಕೃತ್ಯ ಎಸಗಿದ ಪಾಪಿಗೆ ಈ ಭೂಮಿ ಮೇಲೆ ಬದುಕುವ ಹಕ್ಕು ಇಲ್ಲ ಬದುಕಲೂ ಬಿಡಬಾರದು, ಆದ್ದರಿಂದದ ಇವನನ್ನು ಮರಣ ದಂಡನೆಯಂತ ಘೋರ ಶಿಕ್ಷೆಗೆ ಒಳಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಬಿಜೆಪಿ, ಆರ್ಎಸ್ಎಸ್, ಎಬಿವಿಪಿ ಇನ್ನಿತರೆ ಸಂಘಟನೆಗಳ ಪದಾಧಿಕಾರಿಗಳು ಪಂಜಿನ ಮೆರವಣಿಗೆಯಲ್ಲಿ ಭಾಗವಹಿಸಿ ಅತ್ಯಾಚಾರ ಘಟನೆಯನ್ನು ಖಂಡಿಸಿದರು.
ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕೆ.ಪುರುಷೋತ್ತಮ, ನಾಗರಾಜ್, ಅಶ್ವತ್ಥ, ನರೇಶ್, ಮಂಜುಳಮ್ಮ ಹಾಜರಿದ್ದರು.
- Advertisement -
- Advertisement -
- Advertisement -
- Advertisement -