13.1 C
Sidlaghatta
Sunday, December 14, 2025

ಅದ್ದೂರಿ ಸ್ವಾತಂತ್ರ್ಯ ದಿನಾಚರಣೆ

- Advertisement -
- Advertisement -

ತಾಲ್ಲೂಕು ಆಡಳಿತದಿಂದ ಈ ಭಾರಿಯೂ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲು ಉದ್ದೇಶಿಸಲಾಗಿದ್ದು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ತಹಸೀಲ್ದಾರ್ ಕೆ.ಎಂ.ಮನೋರಮಾ ಹೇಳಿದರು.
ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಏರ್ಪಡಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ತಾಲ್ಲೂಕಿನ ವಿವಿಧ ಇಲಾಖೆಗಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಹಲವು ಜವಾಬ್ದಾರಿಗಳನ್ನು ವಹಿಸಿದ ಅವರು ಅಕ್ಟೋಬರ್೧೪ ರ ರಾತ್ರಿ ಎಲ್ಲಾ ಸರ್ಕಾರಿ ಕಚೇರಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುವುದರೊಂದಿಗೆ ಬೆಳಗ್ಗೆ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿಯೂ ಧ್ವಜಾರೋಹಣ ನೆರವೇರಿಸಿ ನಂತರ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯುವ ನಗರದ ನೆಹರೂ ಕ್ರೀಡಾಂಗಣಕ್ಕೆ ಎಲ್ಲರೂ ಹಾಜರಾಗುವಂತೆ ಮನವಿ ಮಾಡಿದರು.
ಆಗಸ್ಟ್ ೧೫ ರಂದು ಬೆಳಗ್ಗೆ 9 ಗಂಟೆಗೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಧ್ವಜಾರೋಹಣ ನೆರವೇರಿಸುವುದರೊಂದಿಗೆ ವಿವಿಧ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೆರವೇರಿಸಲು ನಿರ್ಧರಿಸಲಾಯಿತು.
ಎಂದಿನಂತೆ ಕಾರ್ಯಕ್ರಮದಲ್ಲಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ನೆರವೇರಿಸಲಿದ್ದು ಈ ಭಾರಿ ತಾಲ್ಲೂಕಿನ ಮಾಜಿ ಯೋಧರೊಬ್ಬರನ್ನು ಗುರುತಿಸಿ ಸನ್ಮಾನಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಗ್ರೇಡ್ ೨ ತಹಸೀಲ್ದಾರ್ ವಾಸುದೇವಮೂರ್ತಿ, ಸಮಾಜ ಕಲ್ಯಾಣ ಇಲಾಖಾಧಿಕಾರಿ ಪುರುಷೋತ್ತಮ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೇವೇಗೌಡ, ತೋಟಗಾರಿಕೆ ಇಲಾಖೆಯ ಆನಂದ್, ಶಿಕ್ಷಣ ಇಲಾಖೆಯ ಶ್ರೀನಿವಾಸ್, ಕಸಾಪ ತಾಲ್ಲೂಕು ಅಧ್ಯಕ್ಷ ಬಿ.ಆರ್.ಅನಂತಕೃಷ್ಣ, ರಾಜಸ್ವ ನಿರೀಕ್ಷಕ ಸುಬ್ರಮಣಿ, ಲಾರೆನ್ಸ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!