18.8 C
Sidlaghatta
Saturday, February 21, 2026

ಅಧಿಕಾರಿಗಳಿಲ್ಲದ ಆಹಾರ ಶಾಖೆಯ ಕಚೇರಿ – ರೈತರ ಆಕ್ರೋಷ

- Advertisement -
- Advertisement -

ತಾಲ್ಲೂಕಿನಾದ್ಯಂತ ಮೂರು ಸಾವಿರಕ್ಕೂ ಹೆಚ್ಚು ಪಡಿತರ ಚೀಟಿಗಳನ್ನು ನವೀಕರಣದ ಹೆಸರಿನಲ್ಲಿ ರದ್ದುಪಡಿಸಲಾಗಿರುವುದರಿಂದ ನೂರಾರು ಸಂಖ್ಯೆಯಲ್ಲಿ ನಾಗರಿಕರು, ತಾಲ್ಲೂಕು ಕಚೇರಿಯಲ್ಲಿ ಸಾಲುಗಟ್ಟಿ ನಿಲ್ಲುವಂತಾಗಿದೆ ಎಂದು ತಾಲ್ಲೂಕು ರೈತ ಸಂಘದ ಅಧ್ಯಕ್ಷ ಎಸ್.ಎಂ.ರವಿಪ್ರಕಾಶ್ ಆರೋಪಿಸಿದ್ದಾರೆ.
ನಗರದ ತಾಲ್ಲೂಕು ಕಚೇರಿಯಲ್ಲಿರುವ ಆಹಾರ ಶಾಖೆಯ ಬಾಗಿಲು ಸೋಮವಾರ ಬೀಗ ತೆರೆದಿದ್ದರೂ ಕೂಡಾ ಇಲಾಖೆಯ ಯಾವೊಬ್ಬ ಅಧಿಕಾರಿಗಳು ಹಾಜರಿಲ್ಲದೆ, ಇಲಾಖೆಗೆ ಸಂಬಂಧಪಟ್ಟ ಕಡತಗಳು ಎಲ್ಲೆಂದರಲ್ಲಿ ಬಿಸಾಡಿದ್ದು, ಅಮೂಲ್ಯವಾದ ಕಡತಗಳಿಗೆ ಭದ್ರತೆಯಿಲ್ಲದಂತಾಗಿದೆ. ನೂರಾರು ಮಂದಿ ನಾಗರಿಕರು ತಾಲ್ಲೂಕು ಕಚೇರಿಗೆ ಬಂದು ತಮ್ಮ ಪಡಿತರ ಚೀಟಿಗಳಿಗಾಗಿ ಸಾಲುಗಟ್ಟಿ ನಿಲ್ಲುವಂತಾಗಿದೆ. ಅಧಿಕಾರಿಗಳು ನಾಗರಿಕರಿಂದ ಒಂದೊಂದು ಪಡಿತರ ಚೀಟಿಗೆ ಒಂದು ಸಾವಿರ ರೂಪಾಯಿಗಳಂತೆ ಹಣವನ್ನು ವಸೂಲಿ ಮಾಡಿಕೊಂಡು ಪಡಿತರ ಚೀಟಿಗಳನ್ನು ವಿತರಣೆ ಮಾಡುತ್ತಿದ್ದಾರೆ. ಈ ಬಗ್ಗೆ ತಹಶೀಲ್ದಾರರು ಸೇರಿದಂತೆ ಆಹಾರ ಇಲಾಖೆಯ ಜಿಲ್ಲಾ ಉಪನಿರ್ದೇಶಕರಿಗೆ ಅನೇಕ ಬಾರಿ ದೂರು ನೀಡಿದ್ದರೂ ಕೂಡಾ ಯಾವುದೇ ಕ್ರಮ ಕೈಗೊಂಡಿಲ್ಲ, ಇದೇ ಪರಿಸ್ಥಿತಿ ಮುಂದುವರೆದರೆ, ಮುಂದಿನ ದಿನಗಳಲ್ಲಿ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಅಕ್ರಂಪಾಷ, ಹುಸೇನ್ಸಾಬ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!