ಅನುದಾನಿತ ಪ್ರೌಢಶಾಲೆಗಳಿಗೆ ಶಿಕ್ಷಕರನ್ನು ತುಂಬಿ ವಿದ್ಯಾರ್ಥಿಗಳ ಗುಣಾತ್ಮಕ ಶಿಕ್ಷಣ ಹಾಗೂ ಎಸ್ಎಸ್ಎಲ್ಸಿ ಫಲಿತಾಂಶದ ಪ್ರಗತಿಗೆ ಸಹಕರಿಸಬೇಕೆಂದು ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಉಪಾಧ್ಯಕ್ಷ ಎಂ.ಕೆಂಪಣ್ಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಹಲವು ಸೌಲಭ್ಯಗಳನ್ನು ಕಲ್ಪಿಸಿದೆ. ಆದರೆ ಅನುದಾನಿತ ಪ್ರೌಢಶಾಲೆಗಳಲ್ಲಿ 2012 ರಿಂದ ವಯೋನಿವೃತ್ತಿಯಿಂದ ತೆರವಾಗಿರುವ ಹಲವಾರು ಶಿಕ್ಷಕ ಹುದ್ದೆಗಳಿ ಖಾಲಿಯಿವೆ. ಇದರಿಂದ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಎದುರಿಸಲಿರುವ ಹಾಗೂ 8.9 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.
ಸರ್ಕಾರವು ಮಕ್ಕಳ ಹಿತದೃಷ್ಟಿಯಿಂದ ಕೂಡಲೇ ಶಿಕ್ಷಕರನ್ನು ನಿಯೋಜಿಸಬೇಕು. ಅಥವಾ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಗಳಿಗೆ ಹೊಸ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಅನುಮತಿ ನೀಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಫಲಿತಾಂಶ ಉತ್ತಮ ಪಡಿಸಲು ಅನುಕೂಲ ಮಾಡಿಕೊಡಬೇಕೆಂದು ಜಿಲ್ಲಾ ಪ್ರೌಢಶಾಲಾ ಸಹಶಿಕ್ಷಕರ ಸಂಘದ ಸದಸ್ಯರ ಪರವಾಗಿ ಕೋರಿದ್ದಾರೆ.
- Advertisement -
- Advertisement -
- Advertisement -
- Advertisement -