ಕೃಷಿ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲ ವರ್ಷಗಳಿಂದ ಕೆಲಸ ಮಾಡುತ್ತಿರುವ ಅನುವುಗಾರರನ್ನು ಯಥಾವತ್ತಾಗಿ ಕೆಲಸದಲ್ಲಿ ಮುಂದುವರೆಸಬೇಕು ಎಂದು ಒತ್ತಾಯಿಸಿ ಶಾಸಕ ಎಂ.ರಾಜಣ್ಣ ಅವರಿಗೆ ಶುಕ್ರವಾರ ಅನುವುಗಾರರು ಮನವಿ ಪತ್ರವನ್ನು ಸಲ್ಲಿಸಿದರು.
ನಗರದ ಪ್ರವಾಸಿಮಂದಿರದ ಆವರಣದಲ್ಲಿ ಮನವಿ ಪತ್ರವನ್ನು ಸಲ್ಲಿಸಿದ ಅವರು, ಕೃಷಿ ಇಲಾಖೆಯಲ್ಲಿ ಸತತವಾಗಿ ಹತ್ತು ವರ್ಷಗಳಿಂದ ನಿರಂತವಾಗಿ ಕೆಲಸ ಮಾಡಿಕೊಂಡು ಬಂದಿದ್ದು, ಪ್ರತಿಯೊಬ್ಬ ಅನುವುಗಾರರು ರೈತರ ಮನೆಬಾಗಿಲಿಗೆ ತೆರಳಿ ಕ್ಷೇತ್ರ ಪಾಠಶಾಲೆಗಳ ಮೂಲಕ ರೈತರಿಗೆ ಅಗತ್ಯವಾಗಿರುವ ಮಾಹಿತಿಗಳನ್ನು ನೀಡುವ ಮೂಲಕ ನೆರವಾಗಿದ್ದೇವೆ. ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದಂತಹ ನಮ್ಮನ್ನು ಏಕಾಏಕಿ ಕೆಲಸದಿಂದ ತೆಗೆದುಹಾಕಿರುವುದರಿಂದ ನಮ್ಮ ಕುಟುಂಬಗಳ ನಿರ್ವಹಣೆ ಹಾಗೂ ಮಕ್ಕಳ ವಿದ್ಯಾಭ್ಯಾಸಕ್ಕೆ ತೀವ್ರ ತೊಂದರೆಯಾಗಿದೆ, ಆದ್ದರಿಂದ ಜಿಲ್ಲೆಯಲ್ಲಿನ ೧೮೩ ಮಂದಿ ರೈತ ಅನುವುಗಾರರನ್ನು ಯಥಾವತ್ತಾಗಿ ಮುಂದುವರೆಸಬೇಕು, ಈ ಬಗ್ಗೆ ಕೃಷಿ ಸಚಿವರೊಂದಿಗೆ ಚರ್ಚೆ ನಡೆಸಬೇಕು, ಎನ್.ಜಿ.ಓ.ರದ್ದುಪಡಿಸಿ ರೈತ ಅನುವುಗಾರರನ್ನು ಮುಂದುವರೆಸಿ. ಹಿಂಗಾರು ಮುಂಗಾರು ಹೊರತುಪಡಿಸಿ ವರ್ಷವಿಡೀ ೫೦೦ ಹೆಕ್ಟೇರ್ಗೆ ಒಬ್ಬ ಅನುವುಗಾರರನ್ನು ನೇಮಿಸುವುದು, ರೈತ ಅನುವುಗಾರರಿಗೆ ಸೇವಾ ಭದ್ರತೆಯನ್ನು ನೀಡಬೇಕು ಎಂದು ಮನವಿ ಮಾಡಿದರು.
ಆಂಜನೇಯರೆಡ್ಡಿ, ವೆಂಕಟರಾಯಪ್ಪ, ಕೋನಪ್ಪರೆಡ್ಡಿ, ಲಕ್ಷ್ಮಣರೆಡ್ಡಿ, ಬಿ.ಎಂ.ರಾಮಾಂಜಿ, ರಮೇಶ್, ವೆಂಕಟೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -