21.1 C
Sidlaghatta
Sunday, November 23, 2025

ಮಳಮಾಚನಹಳ್ಳಿಯ ಬಿ.ಕೆ.ಶಂಕರ್ ನಿಧನ

- Advertisement -
- Advertisement -

ಅವರು ಪತ್ನಿ, ಪುತ್ರ ಹಾಗೂ ಪುತ್ರಿ ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಮಳಮಾಚನಹಳ್ಳಿ ಗ್ರಾಮದ ಹಿರಿಯ ಮುಖಂಡ ಮಾಜಿ ಸಿಂಡಿಕೇಟ್ ಸದಸ್ಯ ಬಿ.ಎನ್.ಕೃಷ್ಣಯ್ಯ ಅವರ ಹಿರಿಯ ಪುತ್ರ ಬಿ.ಕೆ.ಶಂಕರ್ ಅವಿಭಜಿತ ಕೋಲಾರ ಜಿಲ್ಲೆಗೆ ಶಾಶ್ವತ ನೀರಾವರಿ ಯೋಜನೆಯನ್ನು ಜಾರಿಗೊಳಿಸಲು ನಡೆಯುತ್ತಿದ್ದ ಹೋರಾಟಗಳಲ್ಲಿ ಸಕ್ರೀಯವಾಗಿ ಭಾಗವಹಿಸುತ್ತಿದ್ದರು. ಅವರ ನಿಧನಕ್ಕೆ ಶಾಶ್ವತ ನೀರಾವರಿ ಹೋರಾಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.
ರಸ್ತೆ ಅಪಘಾತದಲ್ಲಿ ಗಾಯಗೊಂಡು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಬುಧವಾರ ಕೊನೆಯುಸಿರೆಳೆದಿದ್ದು, ಮೃತರ ಅಂತ್ಯಕ್ರಿಯೆ ಸ್ವಗ್ರಾಮದಲ್ಲಿ ನೆರವೇರಿಸಲಾಯಿತು.
ನೀರಾವರಿ ಹೋರಾಟ ಸಮಿತಿಯ ಅಧ್ಯಕ್ಷ ಆಂಜಿನೇಯರೆಡ್ಡಿ, ರೈತ ಸಂಘದ ಜಿಲ್ಲಾ ಅಧ್ಯಕ್ಷ ಭಕ್ತರಹಳ್ಳಿ ಬೈರೇಗೌಡ, ತಾಲ್ಲೂಕು ಸಂಘದ ಅಧ್ಯಕ್ಷ ತಾದೂರು ಮಂಜುನಾಥ್, ಜಿಲ್ಲಾ ಪಂಚಾಯತಿ ಸದಸ್ಯ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ವಿ.ಸುಭ್ರಮಣಿ ಮತ್ತಿತರರು ಮೃತರ ಅಂತಿಮ ದರ್ಶನ ಪಡೆದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!