ಪಟ್ಟಣದ ಸ್ತ್ರೀ ಶಕ್ತಿ ಭವನದಲ್ಲಿ ಶುಕ್ರವಾರ ಅಪೌಷ್ಠಿಕ ಮಕ್ಕಳಿಗೆ ‘ಪೌಷ್ಠಿಕ ಆಹಾರವನ್ನು ತಿನಬಡಿಸುವ ಹಬ್ಬ’ ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಆಯೋಜಿಸಲಾಗಿತ್ತು.
ಮಕ್ಕಳ ವೈದ್ಯರಾದ ಡಾ.ಗಿರೀಶ್ ಮಕ್ಕಳ ಆರೋಗ್ಯವನ್ನು ತಪಾಸಣೆ ನಡೆಸಿದರು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ 49 ಮಕ್ಕಳಿಗೆ ವಿವಿಧ ಬಗೆಯ ಪೌಷ್ಠಿಕ ಆಹಾರಗಳನ್ನು ತಯಾರಿಸಿ ಬಡಿಸಿ ತಿನಿಸಲಾಯಿತು. ಅಪೌಷ್ಠಿಕ ಮಕ್ಕಳ ತಾಯಂದಿರಿಗೆ ಮಕ್ಕಳ ಪೋಷಣೆ, ಶುಚಿತ್ವ,ಔಷಧೋಪಚಾರ ಮತ್ತು ಆಹಾರ ಪದ್ಧತಿಯ ಬಗ್ಗೆ ತಿಳಿಸಿಕೊಡಲಾಯಿತು.
ಸಿ.ಡಿ.ಪಿ.ಒ ಲಕ್ಷ್ಮೀದೇವಮ್ಮ, ಮೇಲ್ವಿಚಾರಕರಾದ ಗಿರಿಜಾಂಬಿಕೆ, ಶಾಂತಾಜಿಂದಾಳೆ, ಸರೋಜಮ್ಮ, ಸಂದೀಪ್, ಅಂಗನವಾಡಿ ಕಾರ್ಯಕರ್ತೆಯರು ಈ ಸಂದರ್ಭದಲ್ಲಿ ಹಾಜರಿದ್ದರು.