21.5 C
Sidlaghatta
Wednesday, July 30, 2025

ಅಪ್ಪೇಗೌಡನಹಳ್ಳಿಯಲ್ಲಿ “ಗಾನಸಿರಿ” ಕಾರ್ಯಕ್ರಮ

- Advertisement -
- Advertisement -

ತಾಲ್ಲೂಕಿನ ಅಪ್ಪೇಗೌಡನಹಳ್ಳಿಯಲ್ಲಿ ಮಂಗಳವಾರ ಸಂಜೆ ತಾಲ್ಲೂಕು ಕಸಾಪ ಹಮ್ಮಿಕೊಂಡಿದ್ದ “ಗಾನಸಿರಿ” ಕಾರ್ಯಕ್ರಮದಲ್ಲಿ ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂತ್ಯಾಗರಾಜ್ ಮಾತನಾಡಿದರು.
ನಾಟಕ, ಭಜನೆ, ಹರಿಕಥೆ, ಜಾನಪದ ಕಲೆಗಳು ಹಳ್ಳಿಗಳಲ್ಲಿ ಹಿಂದೆ ಜನಜೀವನದಲ್ಲಿ ಬೆರೆತುಹೋಗಿದ್ದವು. ಈಗಿನ ಯುವ ಪೀಳಿಗೆ ಈ ಕಲೆಗಳತ್ತ ಆಕರ್ಷಿತರಾಗುತ್ತಿಲ್ಲ. ಯುವಪೀಳಿಗೆಗೆ ಗ್ರಾಮೀಣ ಕಲೆಗಳನ್ನು ಪರಿಚಯಿಸುವ ಅಗತ್ಯವಿದೆ ಎಂದು ಅವರು ತಿಳಿಸಿದರು.
ಜನಪದರ ಕಲೆಯನ್ನು ಉಳಿಸಿ, ಬೆಳೆಸುವ ನಿಟ್ಟಿನಲ್ಲಿ ಹಾಗೂ ಹಳ್ಳಿಗಳಲ್ಲಿ ಎಲೆಮರೆ ಕಾಯಿಗಳಂತಿರುವ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಿಸಲು “ಗಾನಸಿರಿ” ಕಾರ್ಯಕ್ರಮವನ್ನು ಹಳ್ಳಿಗಳಲ್ಲಿ ನಡೆಸುತ್ತಿದ್ದೇವೆ. ನಮ್ಮ ಸ್ಥಳೀಯ ಕಲಾವಿದರು ನಮ್ಮ ಹೆಮ್ಮೆಯ ಸಾಂಸ್ಕೃತಿಕ ಪ್ರತಿನಿಧಿಗಳು ಎಂದರು.
ಶ್ರೀ ದುರ್ಗಾಮಹೇಶ್ವರಿ ಮಿತ್ರ ವೃಂದದ ಎಂ.ಕೆ.ವೆಂಕಟೇಶಮೂರ್ತಿ(ಹಾರ್ಮೋನಿಯಮ್), ಎಚ್.ಎಂ.ಸುರೇಶ್(ತಬಲ), ಎಂ.ಕೆ.ನಾಗರಾಜ್(ಕೀಬೋರ್ಡ್), ಮುನಿರಾಜು(ಘಟಂ), ಹರೀಶ್(ತಾಳವಾದ್ಯ), ನವೀನ್ ಕುಮಾರ್, ವೈ.ಎನ್.ಪಿಳ್ಳೇಗೌಡ, ಎಂ.ವಿ.ಅನಿಲ್ ಕುಮಾರ್ ಜಾನಪದ ಗೀತೆಗಳನ್ನು ಹಾಡಿ ಜನರನ್ನು ರಂಜಿಸಿದರು.
ಕಸಾಪ ತಾಲ್ಲೂಕು ಅಧ್ಯಕ್ಷ ಎ.ಎಂ.ತ್ಯಾಗರಾಜ್, ಕಾರ್ಯದರ್ಶಿ ಚಾಂದ್ ಪಾಷ, ಸದಸ್ಯರು, ಗ್ರಾಮಸ್ಥರು ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!