ಶಾಶ್ವತ ನೀರಾವರಿ ಹೋರಾಟಕ್ಕೆ ಬೆಂಬಲಿಸಿ ಗ್ರಾಮ ಪಂಚಾಯತಿ ಚುನಾವಣೆಯನ್ನು ಬಹಿಷ್ಕರಿಸಿದ್ದ ಅಬ್ಲೂಡು ಪಂಚಾಯತಿಯ ಚುನಾವಣೆ ತಡವಾಗಿ ನಡೆದಿತ್ತು. ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆಯು ಬುಧವಾರ ನಡೆದು, ಎರಡೂ ಸ್ಥಾನಗಳು ಜೆ.ಡಿ.ಎಸ್ ಬೆಂಬಲಿತರ ಪಾಲಾಗಿದೆ.
ಅಧ್ಯಕ್ಷರಾಗಿ ಅಬ್ಲೂಡು ಲಕ್ಷ್ಮಮ್ಮ, ಉಪಾಧ್ಯಕ್ಷರಾಗಿ ಗುಡಿಹಳ್ಳಿ ನಾಗವೇಣಿ ಅವಿರೋಧವಾಗಿ ಆಯ್ಕೆಯಾದರು.
ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು, ಅಬ್ಲೂಡು ಲಕ್ಷ್ಮಮ್ಮ ಹತ್ತು ಮತಗಳನ್ನು ಪಡೆದು ಆಯ್ಕೆಯಾದರು.
ಈ ಸಂದರ್ಭದಲ್ಲಿ ಹಾಜರಿದ್ದ ಶಾಸಕ ಎಂ.ರಾಜಣ್ಣ ಮಾತನಾಡಿ, ‘ಸೇವಾ ಮನೋಭಾವದಿಂದ ಪಕ್ಷಾತೀತವಾಗಿ ಗ್ರಾಮೀಣ ಅಭಿವೃದ್ಧಿಗೆ ಎಲ್ಲಾ ಸದಸ್ಯರೂ ಶ್ರಮಿಸಬೇಕು. ಅನುದಾನಗಳನ್ನು ಅಗತ್ಯವಿರುವೆಡೆ ಸಮರ್ಪಕವಾಗಿ ಬಳಸಿಕೊಂಡು ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕಾರ್ಯನಿರ್ವಹಿಸಬೇಕು. ಸ್ವಚ್ಛತೆಗೆ ಆದ್ಯತೆ ನೀಡಿ, ಶೌಚಾಲಯಗಳನ್ನು ನಿರ್ಮಿಸಿ ಗ್ರಾಮಗಳನ್ನು ಮಾದರಿಯನ್ನಾಗಿಸಿ’ ಎಂದು ಹೇಳಿದರು.
ಚುನಾವಣಾಧಿಕಾರಿಯಾಗಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ರಾಮಾಂಜಿನಪ್ಪ, ಕೋಚಿಮುಲ್ ನಿರ್ದೇಶಕ ಬಂಕ್ ಮುನಿಯಪ್ಪ, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಮುನಿವೆಂಕಟಸ್ವಾಮಿ, ಕನಕಪ್ರಸಾದ್, ನಾರಾಯಣಸ್ವಾಮಿ, ರಮೇಶ್, ರವಿಕುಮಾರ್, ಮುನಿರೆಡ್ಡಿ, ಸೊಣ್ಣೇಗೌಡ, ಗ್ರಾಮ ಪಂಚಾಯತಿ ಸದಸ್ಯರಾದ ಎಸ್.ವಿ.ಮಂಜುನಾಥ್, ದೇವರಾಜ್, ವೆಂಕಟಲಕ್ಷ್ಮಮ್ಮ, ನೇತ್ರಾವತಿ ಮುನಿರೆಡ್ಡಿ, ಚಿಕ್ಕವೆಂಕಟರೆಡ್ಡಿ, ಜ್ಯೋತಿ ಗಂಗಾಧರ್, ಕೃಷ್ಣಮ್ಮ, ದೊಡ್ಡಮುನಿಶಾಮಪ್ಪ, ಪಿ.ಡಿ.ಒ ಜಯಶ್ರೀ, ಗ್ರಾಮಾಂತರ ಠಾಣೆ ಸಬ್ಇನ್ಸ್ಪೆಕ್ಟರ್ ಪ್ರದೀಪ್ ಪೂಜಾರ್ ಮತ್ತಿತರರು ಹಾಜರಿದ್ದರು.
- Advertisement -
- Advertisement -
For Daily Updates
WhatsApp 'HI' to 7406303366
- Advertisement -
- Advertisement -







