ಗ್ರಾಮದಲ್ಲಿ ನಡೆಯುವ ಅಭಿವೃದ್ಧಿ ಕಾಮಗಾರಿಗಳಿಗೆ ರಾಜಕೀಯ ಬೆರೆಸಬಾರದು ಎಂದು ಶಾಸಕ ಎಂ.ರಾಜಣ್ಣ ತಿಳಿಸಿದರು.
ತಾಲ್ಲೂಕಿನ ವೈ.ಹುಣಸೇನಹಳ್ಳಿ ಗ್ರಾಮದಲ್ಲಿ ಸೋಮವಾರ ಸಮಾಜ ಕಲ್ಯಾಣ ಇಲಾಖೆಯಿಂದ 6 ಲಕ್ಷ ರೂಪಾಯಿಗಳ 130 ಮೀಟರ್ ಉದ್ದದ ಸಿ.ಸಿ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಗ್ರಾಮದಲ್ಲಿ ಕೆಲವು ಕಾಮಗಾರಿಗಳು ಕಾರಣಾಂತರಗಳಿಂದ ಸ್ಥಗಿತಗೊಂಡಿತ್ತು. ಈ ಬಗ್ಗೆ ಅಧಿಕಾರಿಗಳು ಮತ್ತು ಗುತ್ತಿಗೆದಾರರನ್ನು ಕರೆಸಿ, ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚಿಸಲಾಗಿದೆ. ಗುಣಮಟ್ಟವನ್ನು ಕಾಯ್ದುಕೊಳ್ಳಲು ಸಹ ತಿಳಿಸಲಾಗಿದೆ. ಹೆಚ್ಚುವರಿಯಾಗಿ ಎರಡೂವರೆ ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಸಿ.ಸಿ ಚರಂಡಿಯನ್ನು ಗ್ರಾಮಸ್ಥರ ಒತ್ತಾಯದಿಂದಾಗಿ ಕಾಮಗಾರಿಯನ್ನು ನಡೆಸುವಂತೆ ತಿಳಿಸಿದ್ದೇವೆ. ಒಟ್ಟಾರೆ ಗ್ರಾಮದಲ್ಲಿ ಅಭಿವೃದ್ಧಿ, ನೈರ್ಮಲ್ಯೀಕರಣ, ಗುಣಮಟ್ಟ ಕಾಯ್ದುಕೊಳ್ಳುವಲ್ಲಿ ಎಲ್ಲರೂ ಪಕ್ಷಾತೀತವಾಗಿ ಶ್ರಮಿಸಬೇಕು ಎಂದು ಹೇಳಿದರು.
ವೈ.ಹುಣಸೇನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಹರಿಪ್ರಸಾದ್, ಉಪಾಧ್ಯಕ್ಷ ದೇವರಾಜ್, ಕುಂದಲಗುರ್ಕಿ ಪಂಚಾಯತಿ ಅಧ್ಯಕ್ಷ ಆಂಜಿನಪ್ಪ, ಶ್ರೀನಿವಾಸಪ್ಪ, ರವಿಕುಮಾರ್, ಬೇಕರಿ ಗೌಡ, ಎಸ್.ಸಿ.ನಾರಾಯಣಸ್ವಾಮಿ, ನರಸಿಂಹಗೌಡ, ವೆಂಕಟರೆಡ್ಡಿ, ಎಸ್.ನಾರಾಯಣಸ್ವಾಮಿ, ಮುನಿಕೃಷ್ಣ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -
- Advertisement -