16.1 C
Sidlaghatta
Thursday, December 11, 2025

ಅಭಿವೃದ್ಧಿ ಶೂನ್ಯ ಕ್ಷೇತ್ರವನ್ನಾಗಿ ಮಾಡಿದ ಕೆ.ಎಚ್.ಮುನಿಯಪ್ಪನಿಗೆ ಪಾಠ ಕಲಿಸಿ – ಎನ್.ಮುನಿಸ್ವಾಮಿ

- Advertisement -
- Advertisement -

ಕ್ಷೇತ್ರಕ್ಕೆ ನೀರನ್ನು ತರಲು ಪ್ರಯತ್ನಿಸದೇ, ನೂರಾರು ಎಕರೆಗಳ ಜಮೀನಿನ ಒಡೆತನ ಮಾಡಿಕೊಂಡು ಕೋಲಾರವನ್ನು ಅಭಿವೃದ್ಧಿ ಶೂನ್ಯ ಕ್ಷೇತ್ರವನ್ನಾಗಿ ಮಾಡಿದ ಕೀರ್ತಿ ೭ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಿಂದ ಸತತವಾಗಿ ಆಯ್ಕೆಯಾದ ಸಂಸದ ಕೆ.ಎಚ್.ಮುನಿಯಪ್ಪ ಅವರಿಗೆ ಸಲ್ಲುತ್ತದೆ. ಜನರೇ ಈ ಬಾರಿ ಈ ವ್ಯಕ್ತಿಗೆ ತಕ್ಕ ಪಾಠ ಕಲಿಸಿ ಎಂದು ಬಿಜೆಪಿ ಅಭ್ಯರ್ಥಿ ಎನ್.ಮುನಿಸ್ವಾಮಿ ವಾಗ್ದಾಳಿ ನಡೆಸಿದರು.
ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಕಡೆಗಳಲ್ಲಿ ರೋಡ್ ಶೋ ಮೂಲಕ ಶುಕ್ರವಾರ ಮತಯಾಚನೆ ಮಾಡಿದ ಅವರು, ಈ ಬಾರಿ ಬಿಜೆಪಿ ಬೆಂಬಲಿಸುವಂತೆ ಮನವಿ ಮಾಡಿದರು.
ಲೋಕಸಭಾ ಚುನಾವಣೆಗೆ ಪ್ರಥಮ ಬಾರಿಗೆ ಸ್ಪರ್ಧಿಸುವ ಮುನ್ನಾ ಭೂ ಮಂಜೂರಾತಿಗಾಗಿ ಅರ್ಜಿ ಹಾಕಿಕೊಂಡಿದ್ದ ಮೈತ್ರಿ ಅಭ್ಯರ್ಥಿ ಕೆ.ಎಚ್.ಮುನಿಯಪ್ಪ ಅವರು ಇಂದು ನೂರಾರು ಎಕರೆ ಜಮೀನುಗಳ ಒಡೆಯನಾಗಿದ್ದಾರೆ. ಇಷ್ಟೊಂದು ಭೂಮಿ ಎಲ್ಲಿಂದ ಬಂತು. ಕೋಲಾರ ಕ್ಷೇತ್ರದಲ್ಲಿ ಒಂದು ಕರೆಯಲ್ಲಿಯೂ ಒಂದು ಹನಿ ನೀರಿಲ್ಲ. ಇಂತಹ ಪರಿಸ್ಥಿತಿಗೆ ಕಾರಣ ಯಾರು? ಕೇಂದ್ರ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರಗಳಿದ್ದಾಗಲೇ ಕ್ಷೇತ್ರದ ಅಭಿವೃದ್ಧಿಗಾಗಿ ಅವರು ಏನೂ ಮಾಡಲಿಲ್ಲ. ಇಲ್ಲಿಂದ ಯುವಕರು ಉದ್ಯೋಗಕ್ಕಾಗಿ ವಲಸೆ ಹೋಗುತ್ತಿದ್ದಾರೆ. ೮ ನೇ ಬಾರಿಗೆ ಗೆಲ್ಲಿಸಿಕಳುಹಿಸಿದರೆ ಏನು ಮಾಡುತ್ತಾರೆ. ಅವರು ೨೮ ವರ್ಷಗಳಿಂದ ಮಾಡದಿರುವ ಅಭಿವೃದ್ಧಿ ಕೆಲಸಗಳನ್ನು ನಾನು ೫ ವರ್ಷಗಳಲ್ಲಿ ಪೂರ್ಣಗೊಳಿಸುತ್ತೇನೆ. ೭ ಬಾರಿ ಚುನಾವಣೆಗಳಲ್ಲಿ ಗೆದ್ದು, ತನ್ನ ಮಗಳನ್ನು ಶಾಸಕಿ ಮಾಡಿದ್ದು, ತನ್ನ ಅಣ್ಣನ ಮಗನನ್ನು ಜಿಲ್ಲಾ ಪಂಚಾಯಿತಿ ಸದಸ್ಯನನ್ನಾಗಿ ಮಾಡಿದ್ದು ಅವರ ಅಮೋಘ ಸಾಧನೆ.
ಈ ಬಾರಿಯೂ ಮೋದಿ ಪ್ರಧಾನಿಯಾಗಲಿದ್ದಾರೆ. ಅದನ್ನು ತಪ್ಪಿಸಲಿಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಪುಲ್ವಾಮಾ ದಾಳಿಗೆ ಕೊಟ್ಟಿರುವ ಪ್ರತ್ಯುತ್ತರವನ್ನು ನೋಡಿದರೆ ಮೋದಿ ತಾಕತ್ತು ಎಂತಹದ್ದು ಎಂದು ಗೊತ್ತಾಗುತ್ತದೆ ಎಂದರು.
ಚಿಂತಾಮಣಿ ಮಾಜಿ ಶಾಸಕ ಡಾ.ಸುಧಾಕರ್ ಮಾತನಾಡಿ, ಕೇಂದ್ರದಲ್ಲಿ ಪ್ರಧಾನಿ ನರೇಂದ್ರಮೋದಿ ನೇತೃತ್ವದ ಸರ್ಕಾರ ಸಾಕಷ್ಟು ಅಭಿವೃದ್ಧಿಪರವಾದ ಯೋಜನೆಗಳನ್ನು ಜಾರಿಗೆ ತಂದಿದೆ. ನಿರಂತರವಾಗಿ ಗೆಲುವು ಸಾಧಿಸುತ್ತಿರುವ ಕೆ.ಎಚ್.ಮುನಿಯಪ್ಪ ಅವರಿಗೆ ಈ ಬಾರಿ ಸೋಲು ಕಟ್ಟಿಟ್ಟ ಬುತ್ತಿಯಾಗಿದೆ. ಹೋದ ಕಡೆಯಲ್ಲೆಲ್ಲಾ ಬಿಜೆಪಿ ಅಭ್ಯರ್ಥಿಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಕೆ.ಎಚ್.ಮುನಿಯಪ್ಪ ಕ್ಷೇತ್ರದಲ್ಲಿ ಸರ್ವಾಧಿಕಾರಿಯಂತೆ ವರ್ತನೆ ಮಾಡುತ್ತಿದ್ದಾರೆ. ಅವರಿಗೆ ರಾಜಕೀಯವಾಗಿ ಅವಕಾಶ ಮಾಡಿಕೊಟ್ಟವರನ್ನೆ ತುಳಿದುಬಿಟ್ಟಿದ್ದಾರೆ. ಇಂದು ಬೃಹದಾಕಾರವಾಗಿ ಬೆಳೆದು ನಿಂತಿದ್ದಾರೆ. ಈ ಬಾರಿ ಸರಿಯಾಗಿ ಬುದ್ದಿ ಕಲಿಸಿ ಎಂದರು.
ತೆರೆದ ವಾಹನದಲ್ಲಿ ತಮಟೆ ವಾದನಗಳೊಂದಿಗೆ ರೋಡ್ ಶೋ ನಡೆಸಿದರು. ಅಪಾರ ಸಂಖ್ಯೆಯಲ್ಲಿ ಜನರು ಭಾಗಿಯಾಗಿದ್ದರು. ನಗರದ ಹೂವಿನ ಸರ್ಕಲ್‌ನಲ್ಲಿರುವ ನಗರೇಶ್ವರಸ್ವಾಮಿ ದೇವಾಲಯದಲ್ಲಿ ಮುಖಂಡರು ಪೂಜೆ ಸಲ್ಲಿಸಿದರು.
ಬಿಜೆಪಿ ತಾಲ್ಲೂಕು ಮಂಡಲ ಅಧ್ಯಕ್ಷ ಬಿ.ಸಿ.ನಂದೀಶ್, ಮುಖಂಡರಾದ ಡಿ.ಆರ್.ಶಿವಕುಮಾರಗೌಡ, ಶ್ರೀಧರ್, ಸುಜಾತಮ್ಮ, ಮಂಜುಳಮ್ಮ, ನರೇಶ್, ರವಿಕುಮಾರ್, ಡಾ.ಡಿ.ಟಿ.ಸತ್ಯನಾರಾಯಣರಾವ್ ಹಾಜರಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!