27.1 C
Sidlaghatta
Monday, July 14, 2025

ಅರಣ್ಯ ಇಲಾಖೆಯಿಂದ ರಿಯಾಯಿತಿ ದರದಲ್ಲಿ ಗಿಡ ಮಾರಾಟ

- Advertisement -
- Advertisement -

ಮರಗಿಡಗಳನ್ನು ಬೆಳೆಸುವುದರಿಂದ ಸಮಾಜಕ್ಕೆ ಪ್ರತ್ಯಕ್ಷ ಹಾಗೂ ಪರೋಕ್ಷ ಪ್ರಯೋಜನಗಳಿವೆ. ಅರಣ್ಯ ಬೆಳೆಸುವಲ್ಲಿ ಸಾರ್ವಜನಿಕರ ಪಾತ್ರವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸಂತೆಯಲ್ಲಿ ಹತ್ತಾರು ಬಗೆಯ ಗಿಡಗಳನ್ನು ರಿಯಾಯ್ತಿ ದರದಲ್ಲಿ ಮಾರಾಟ ಮಾಡುತ್ತಿರುವುದಾಗಿ ವಲಯ ಅರಣ್ಯಾಧಿಕಾರಿ ತಿಮ್ಮರಾಯಪ್ಪ ತಿಳಿಸಿದರು.
ನಗರದಲ್ಲಿ ಸೋಮವಾರ ಸಂತೆಯಲ್ಲಿ ಅರಣ್ಯ ಇಲಾಖೆಯಿಂದ ಮಳಿಗೆಯನ್ನು ನಿರ್ಮಿಸಿ ಕೇವಲ ಮೂರು ರೂಗಳಿಗೆ ವಿವಿಧ ಗಿಡಗಳನ್ನು ಮಾರಾಟ ಮಾಡಿ ಅವರು ಮಾತನಾಡಿದರು.
ಹೆಬ್ಬೇವು, ಜಂಬುನೇರಳೆ, ಸಿಲ್ವರ್‌ ಓಕ್‌ ಸೇರಿದಂತೆ ಬಗೆಬಗೆಯ ಗಿಡಗಳನ್ನು ಮಾರಾಟ ಮಾಡುತ್ತಿದ್ದೇವೆ. ಈ ಯೋಜನೆಯಡಿ ಸಸಿ ಖರೀದಿಸಿ ಅದನ್ನು ಮೂರು ವರ್ಷಗಳ ಕಾಲ ಪೋಷಿಸಿ ಬೆಳೆಸುವ ಫಲಾನುಭವಿಗೆ ಒಂದು ಗಿಡಕ್ಕೆ ವಾರ್ಷಿಕವಾಗಿ 30 ರೂಗಳನ್ನು ಸರ್ಕಾರ ಮೂರು ವರ್ಷಗಳ ಕಾಲ ನೀಡಲಿದೆ. ಈ ಯೋಜನೆಯ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವ ಮೂಲಕ ಅರಣ್ಯ ಬೆಳೆಸಲು ನೆರವಾಗುವುದಲ್ಲದೆ, ವೈಯಕ್ತಿಕವಾಗಿ ಇಂಥ ಮರಗಳಿಂದ ಆರ್ಥಿಕ ಲಾಭವನ್ನೂ ಪಡೆಯಬಹುದಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ವೆಂಕಟರೆಡ್ಡಿ, ಉಪವಲಯ ಅರಣ್ಯಾಧಿಕಾರಿ ರಾಮಾಂಜನೇಯುಲು, ಅರಣ್ಯ ವೀಕ್ಷಕ ಯಲ್ಲಪ್ಪ ಹಾಗೂ ಸಿಬ್ಬಂದಿ ಹಾಜರಿದ್ದರು.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!