ಅಶಕ್ತ ವೃದ್ಧೆಯರಿಗೆ ಮಾಸಾಶನ

- Advertisement -
- Advertisement -

ಅಶಕ್ತರು ಮತ್ತು ಬಡವರಿಗೆ ನೆರವು ನೀಡುವ ಮೂಲಕ ಅವರಿಗೆ ಆಸರೆಯಾಗುವುದು ನಮ್ಮ ಯೋಜನೆಯ ಮೂಲ ಉದ್ದೇಶ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲ್ಲೂಕು ಯೋಜನಾಧಿಕಾರಿ ಬಿ.ಆರ್.ಯೋಗೀಶ್ ಕನ್ಯಾಡಿ ತಿಳಿಸಿದರು.
ತಾಲ್ಲೂಕಿನ ದೇವರಮಳ್ಳೂರು ಗ್ರಾಮದ ವೃದ್ಧೆಯರಾದ ಪಾರ್ವತಮ್ಮ ಮತ್ತು ನಾರಾಯಣಮ್ಮ ಅವರಿಗೆ ಐದು ನೂರುಗಳ ಮಾಸಾಶನ ಮಂಜೂರಾತಿ ಪತ್ರವನ್ನು ನೀಡಿ ಅವರು ಮಾತನಾಡಿದರು.
ಪ್ರತಿಯೊಂದು ಗ್ರಾಮದಲ್ಲೂ ನಮ್ಮ ಕಾರ್ಯಕರ್ತರು ಸರ್ವೇಕ್ಷಣೆ ನಡೆಸುತ್ತಿರುವಾಗ ಈ ಹಳ್ಳಿಯಲ್ಲಿ ಯಾವುದೇ ಆಸರೆಯಿಲ್ಲದೆ, ದುಡಿಯಲು ಶಕ್ತಿಯಿಲ್ಲದ ಪರಿಸ್ಥಿತಿಯಲ್ಲಿ ಗುಡಿಸಲಲ್ಲಿ ನೆಲೆಸಿರುವ ವೃದ್ಧೆಯರನ್ನು ಗುರುತಿಸಿದರು. ಅವರಿಗೆ ಬದುಕಲು ಆಸರೆ ಹಾಗೂ ಶಕ್ತಿಯನ್ನು ತುಂಬುವ ನಿಟ್ಟಿನಲ್ಲಿ ಈಗ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಸಾಶನ ಮಂಜೂರಾತಿ ಪತ್ರವನ್ನು ನೀಡಲಾಗಿದೆ. ಮುಂದೆ ಅದನ್ನು ಒಂದು ಸಾವಿರ ರೂಪಾಯಿಗಳಿಗೆ ಹೆಚ್ಚಿಸಲಾಗುವುದು ಎಂದು ತಿಳಿಸಿದರು.
ಮಳ್ಳೂರಾಂಭ ಸ್ವಸಹಾಯ ಸಂಘದ ಲಕ್ಷ್ಮಮ್ಮ, ಪುಟ್ಟಮ್ಮ, ಪ್ರಿಯದರ್ಶಿನಿ ಸ್ವಸಹಾಯ ಸಂಘದ ಉಮ, ಮಂಜುಳಮ್ಮ, ನವೋದಯ ಸ್ವಸಹಾಯ ಸಂಘದ ವರಲಕ್ಷ್ಮಿ, ಲಕ್ಷ್ಮಮ್ಮ, ಮೇಲ್ವಿಚಾರಕಿ ಮಮತಾ, ಸೇವಾಪ್ರತಿನಿಧಿ ನಂದಿನಿ, ಗ್ರಾಮ ಪಂಚಾಯತಿ ಸದಸಯ ಸೊಣ್ಣಪ್ಪ, ಕೆ.ಆರ್.ನಾರಾಯಣಸ್ವಾಮಿ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

Sidlaghatta News Desk
Sidlaghatta News Deskhttp://www.sidlaghatta.com
The editorial desk of Sidlaghatta.com (Namma Shidlaghatta), covering civic affairs, agriculture, silk trade, and local government news for Sidlaghatta taluk, Karnataka.

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!