ಶಿಕ್ಷಣದೊಂದಿಗೆ ವಿದ್ಯಾರ್ಥಿಗಳಿಗೆ ಸಾಹಸ ಮನೋಭಾವ, ಆತ್ಮಸ್ಥೈರ್ಯ ಮತ್ತು ಜೀವನ ಕೌಶಲ್ಯಗಳನ್ನು ಕಲಿಸವ ಉತ್ಸಾಹ ತುಂಬುವ ಶಿಬಿರವನ್ನು ಆಯೋಜಿಸಿದ್ದಾಗಿ ಎಸ್.ಎನ್.ಕ್ರಿಯಾ ಟ್ರಸ್ಟ್ ಅಧ್ಯಕ್ಷ ಆಂಜಿನಪ್ಪ ತಿಳಿಸಿದರು.
ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬುಧವಾರ ಎಸ್.ಎನ್.ಕ್ರಿಯಾ ಟ್ರಸ್ಟ್ ವತಿಯಿಂದ ನಡೆಸಿದ ಜೀವನ ಕೌಶಲ್ಯ ಶಿಬಿರದ ಮುಕ್ತಾಯ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮುಂದಿನ ದಿನಗಳಲ್ಲಿ ವಿವಿಧ ವೃತ್ತಿಪರ ಕೋರ್ಸುಗಳಿಗೆ ಹೋದಾಗ ಹಾಗೂ ಜೀವನೋತ್ಸಾಹಕ್ಕೆ ಅಗತ್ಯವಿರುವ ಕೌಶಲ್ಯ ಮತ್ತು ಸಾಹಸ ತರಬೇತಿ ಶಿಬಿರವನ್ನು ಎರಡು ದಿನಗಳ ಕಾಲ ನಡೆಸಲಾಗಿದೆ. ವಿದ್ಯಾರ್ಥಿಗಳಲ್ಲಿ ಅಂತರ್ಗತವಾಗಿರುವ ಶಕ್ತಿಯನ್ನು ಉದ್ದೀಪನಗೊಳಿಸುವುದು, ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿಸುವುದು ಈ ಶಿಬಿರದ ಉದ್ದೇಶ ಎಂದು ಹೇಳಿದರು.
ಪ್ರಾಂಶುಪಾಲ ಡಿ.ಲಕ್ಷ್ಮೀನಾರಾಯಣ, ಪ್ರಾಧ್ಯಾಪಕರಾದ ಮುನಿರಾಜು, ಮಂಗಳಗೌರಿ, ಎಸ್.ಎನ್.ಕ್ರಿಯಾ ಟ್ರಸ್ಟ್ನ ದೇವರಾಜ್, ರಾಜಶೇಖರ್, ದೀಪಕ್, ಅಬ್ಲೂಡು ದೇವರಾಜ್, ಸುಂದರೇಶ್ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.
- Advertisement -
- Advertisement -
- Advertisement -