ಆಪ್ ಕಾರ್ಯಕರ್ತರ ಉಪವಾಸ ಸತ್ಯಾಗ್ರಹ

- Advertisement -
- Advertisement -

ಶಕ್ತಶಾಲಿಯಾಗಿದ್ದ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿ ಭ್ರಷ್ಟಾಚಾರ ನಿಗ್ರಹ ದಳವನ್ನು ಸ್ಥಾಪಿಸುವ ಮೂಲಕ ರಾಜ್ಯ ಸರ್ಕಾರ ಭ್ರಷ್ಟಾಚಾರಿಗಳಿಗೆ ಬೆಂಗಾವಲಾಗಿ ನಿಂತಿದೆ ಎಂದು ಆಮ್ ಆದ್ಮಿ ಪಕ್ಷದ ತಾಲ್ಲೂಕು ಸಂಚಾಲಕ ನಾಗರಾಜ್ ಆರೋಪಿಸಿದರು.
ನಗರದ ತಾಲ್ಲೂಕು ಕಛೇರಿಯ ಮುಂಭಾಗದಲ್ಲಿ ರಾಜ್ಯ ಸರ್ಕಾರದ ಜನವಿರೋಧಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ)ವನ್ನು ಹಿಂಪಡೆಯುವಂತೆ ಒತ್ತಾಯಿಸಿ ಆಪ್ ಕಾರ್ಯಕರ್ತರು ಗುರುವಾರ ಕೈಗೊಂಡಿದ್ದ ‘24 ಗಂಟೆಗಳ ಉಪವಾಸ’ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಬೇಕು. ಜನಪ್ರತಿನಿಧಿಗಳು ಪಾರದರ್ಶಕವಾಗಿದ್ದಾಗ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯವಿದೆ. ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಭ್ರಷ್ಟಾಚಾರ ನಿಗ್ರಹ ದಳವನ್ನು ರಾಜ್ಯ ಸರ್ಕಾರ ಸ್ಥಾಪನೆ ಮಾಡಬಾರದು ಎಂದು ಆಗ್ರಹಿಸಿದರು.
ಬೆಂಗಳೂರಿನಲ್ಲಿ ಆಪ್ ಅನಿರ್ದಿಷ್ಟ ಅವಧಿ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿರುವುದರ ಬೆಂಬಲವಾಗಿ ನಾವು ಉಪವಾಸವನ್ನು ಕೈಗೊಳ್ಳುತ್ತಿದ್ದೇವೆ. ಮುಂದಿನ ದಿನಗಳಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯಕರ್ತರು ಬೆಂಗಳೂರಿನ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದು ಹೇಳಿದರು.
ಆಮ್ ಆದ್ಮಿ ಪಕ್ಷದ ಜಿಲ್ಲಾ ಸಂಚಾಲಕ ಮಂಜುನಾಥ್, ದ್ಯಾವಪ್ಪ, ರಾಕೇಶ್ಬಾಬು, ಪ್ರವೀಣ್, ಶಂಶುದ್ದೀನ್, ಇದಾಯತ್, ಷಫೀವುಲ್ಲಾ, ವೆಂಕಟಪ್ಪ, ಶಾವಿದ್, ನವೀದ್, ರೈತ ಸಂಘದ ತಾಲ್ಲೂಕು ಅಧ್ಯಕ್ಷ ರವಿಪ್ರಕಾಶ್, ಕಾರ್ಯದರ್ಶಿ ಪ್ರತೀಶ್ ಮತ್ತಿತರರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here

Captcha verification failed!
CAPTCHA user score failed. Please contact us!