17.1 C
Sidlaghatta
Thursday, December 25, 2025

ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳ ಪ್ರತಿಭಟನೆ

- Advertisement -
- Advertisement -

ನಗರದಲ್ಲಿ ಸ್ವಚ್ಚತೆ ಕಾಪಾಡುವಲ್ಲಿ ವಿಫಲವಾಗಿರುವ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳು ನಗರಸಭೆ ಕಾರ್ಯಾಲಯದ ಮುಂದೆ ಮಂಗಳವಾರ ಕೆಲ ಕಾಲ ಪ್ರತಿಭಟನೆ ನಡೆಸಿದರು.
ಈ ಬಗ್ಗೆ ಆಮ್ ಆದ್ಮಿ ಪಕ್ಷದ ಅಧ್ಯಕ್ಷ ಬಿ.ಆರ್.ರಾಮಚಂದ್ರ ಮಾತನಾಡಿ, ನಗರದ ೨೦ ನೇ ವಾರ್ಡಿನಲ್ಲಿ ಮುಚ್ಚಿಹೋಗಿರುವ ಚರಂಡಿ ತೆರವುಗೊಳಿಸುವಂತೆ ನಗರಸಭೆಗೆ ಮನವಿ ಸಲ್ಲಿಸಿದ್ದರೂ ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಮಳೆ ಬಂದರೆ ಮನೆಗಳೊಳಗೆ ಮಳೆ ನೀರು ಸೇರಿದಂತೆ ರಸ್ತೆಯಲ್ಲಿರುವ ಕಸ ಕಡ್ಡಿ ಎಲ್ಲಾ ತುಂಬುತ್ತದೆ. ಸಾಲದೆಂಬಂತೆ ಮನೆಗಳ ಸುತ್ತಮುತ್ತಲೂ ಕಸದ ರಾಶಿಗಳಿದ್ದು ಇದರಿಂದ ಬೀರುವ ದುರ್ವಾಸನೆಯಿಂದ ಮನೆಯಲ್ಲಿ ಊಟ ಮಾಡಲು ಆಗುವುದಿಲ್ಲ. ಈ ಬಗ್ಗೆ ಪ್ರತಿನಿತ್ಯ ನಗರಸಭೆ ಕಾರ್ಯಾಲಯಕ್ಕೆ ಅಲೆಯುತ್ತಿದ್ದೇವಾದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದರು.
ಪ್ರತಿಭಟನಾಕಾರರು ನಗರಸಭೆ ಕಾರ್ಯಾಲಯಕ್ಕೆ ಬೀಗ ಜಡಿಯಲು ಮುಂದಾದಾಗ ನಗರಸಭೆ ಪೌರಾಯುಕ್ತ ಚಲಪತಿ ಹಾಗು ಆಮ್ ಆದ್ಮಿ ಪಕ್ಷದ ಪದಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು.
‘ತಮ್ಮ ಸಮಸ್ಯೆ ಏನಾದರೂ ಇದ್ದಲ್ಲಿ ನಮ್ಮ ಬಳಿ ಬಂದು ಚರ್ಚಿಸಿ, ಅದು ಬಿಟ್ಟು ಸರ್ಕಾರಿ ಕಚೇರಿಗಳಿಗೆ ಬೀಗ ಹಾಕಲು ಮುಂದಾಗುವುದು ಸರಿಯಲ್ಲ ಎಂದ ಆಯುಕ್ತರು, ಅಧ್ಯಕ್ಷರೂ ಸೇರಿದಂತೆ ಅಧಿಕಾರಿಗಳು ಈಗಾಗಲೇ ಸ್ಥಳ ಪರಿಶೀಲನೆ ನಡೆಸಿದ್ದು ಮುಚ್ಚಿಹೋಗಿರುವ ಚರಂಡಿಗಳನ್ನು ತೆರವುಗೊಳಿಸಲು ಸಿಬ್ಬಂದಿಗೆ ಸೂಚನೆ ನೀಡಲಾಗಿದೆ ಎಂದರು.
ಆಮ್ ಆದ್ಮಿ ಪಕ್ಷದ ನಗರ ಘಟಕದ ಅಧ್ಯಕ್ಷ ಅಪ್ಸರ್ಪಾಷ, ಆಸೀಫ್, ಷಫೀ, ಪರಮೇಶ್, ಸುಹೇಲ್, ಸಾದಿಕ್ ಮತ್ತಿತರರು ಹಾಜರಿದ್ದರು.
 

For Daily Updates

WhatsApp 'HI' to 7406303366

Subscribe to ನಮ್ಮ ಶಿಡ್ಲಘಟ್ಟ Newspaper

Launching Soon! Register for your Free Newspaper Copy Today.

- Advertisement -

Just Published

Latest news

- Advertisement -

Covid-19

Silk

Related news

- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!
error: Content is protected !!